Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಾ. ಪಂಡಿತ ಪುಟ್ಟರಾಜ ಗವಾಯಿಗಳು ಸಂಗೀತ ಲೋಕದ ದಿಗ್ಗಜರು. ಸಾವಿರಾರು ಅಂಧ ಮಕ್ಕಳ ಬಾಳಿಗೆ ನಂದಾದೀಪವಾಗಿ ಸಂಗೀತ ಕ್ಷೇತ್ರಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ. ಗುರು ಕುಮಾರೇಶ್ವರ ಎಂಬ ಕೃಪಾ ಪೋಷಿತ ನಾಟ್ಯ ಸಂಘವನ್ನು ಕಟ್ಟಿ, ಅಂಗವಿಕಲ, ಅನಾಥ, ಬಡ ಮತ್ತು ಅಂಧ ಮಕ್ಕಳಿಗೆ ಉಚಿತ ಆಹಾರ, ಆಶ್ರಯ, ಶಿಕ್ಷಣವನ್ನು ಒದಗಿಸುವಲ್ಲಿ ಶ್ರಮಿಸಿದವರು ಎಂದು ನಿವೃತ್ತ ಸೇನಾನಿ ಭರಮಣ್ಣ ಕಡಕೋಳ ಅವರು ಅಭಿಪ್ರಾಯಪಟ್ಟರು.ಅವರು ನಗರದ ಸೇನಾ ನಗರದ ಶಿವಾಲಯ ದೇವಸ್ಥಾನದಲ್ಲಿ ಗಾನ ತರಂಗ ಸಂಗೀತ ಶಾಲೆಯ ಸಹಯೋಗದಲ್ಲಿ ಜರುಗಿದ ಪಂಡಿತ ಪುಟ್ಟರಾಜ ಗವಾಯಿಗಳ ೧೫ ನೇಯ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಗಾನ ತರಂಗ ಸಂಗೀತ ಶಾಲೆಯ ಶಿಕ್ಷಕ ಶ್ರೀಶೈಲ ಬೀಳೂರ ಮಾತನಾಡುತ್ತಾ, ಗದುಗಿನ ವೀರೇಶ್ವರ ಪುಣ್ಯಾಶ್ರಮವು ಸಂಗೀತ ಲೋಕಕ್ಕೆ ಕೊಡುಗೆ ನೀಡಿದ ನಮ್ಮ ನಾಡಿನ ಶ್ರೇಷ್ಠ ಆಶ್ರಮವಾಗಿದೆ. ಪುಟ್ಟರಾಜ ಗವಾಯಿಗಳು ವಿಕಲಚೇತನ ಮಕ್ಕಳಿಗೆ ಸ್ವತಂತ್ರವಾಗಿ ಬದುಕು ಸಾಗಿಸಲು ಆತ್ವವಿಶ್ವಾಸ ಮೂಡಿಸುತ್ತಾ, ಸಂಗೀತ ಮತ್ತು ಪ್ರವಚನದ ಕಲೆಯನ್ನು ಕಲಿಸುತ್ತಿದ್ದರು ಎಂದು ಹೇಳಿದರು.ಅಧ್ಯಕ್ಷತೆಯನ್ನು…

Read More

ಉದಯರಶ್ಮಿ ದಿನಪತ್ರಿಕೆ ವರದಿ: ಗುರು ಆರ್ ಹಿರೇಮಠಆಲಮೇಲ: ಮಳೆಗಾಲ ಪ್ರಾರಂಭವಾದ ಮೇಲೆ ಭೀಮಾ ನದಿಗೆ ಈಗಾಗಲೇ 2-3 ಬಾರಿ ಅಪಾರ ಪ್ರಮಾಣದ ನೀರು ಹರಿದು ಕಡಿಮೆಯಾಗಿದೆ ಎನ್ನುವಷ್ಟರಲ್ಲಿ ಮತ್ತೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆಮಹಾರಾಷ್ಟ್ರದ ಭೀಮಾ ನದಿ ಪಾತ್ರದ ಪ್ರದೇಶದಲ್ಲಿ ಬೀಳುತ್ತಿರುವ ಅಪಾರ ಪ್ರಮಾಣದ ಮಳೆಯಿಂದಾಗಿ ಉಜನಿ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ನದಿ ಪಾತ್ರಕ್ಕೆ ಹರಿದು ಬಿಡಲಾಗಿದ್ದು, ಭೀಮಾ ನದಿಯ ಉಪನದಿಯಾದ ಸೀನಾ ನದಿಯು ಕೂಡ ತುಂಬಿ ಹರಿಯುತ್ತಿದ್ದು, ಅಫ್ಜಲಪುರ ತಾಲ್ಲೂಕಿನಲ್ಲಿ ಭೀಮಾ ನದಿಗೆ ಸೇರುವ ಬೋರಿ ಹಳ್ಳಕ್ಕೂ ಕೂಡ ಅಪಾರ ಪ್ರಮಾಣದಲ್ಲಿ ನೀರು ಬಂದಿರುವುದರಿಂದ ಮಂಗಳವಾರ ಸಂಜೆ ಅಥವಾ ಬುಧವಾರ ದಿವಸ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ ಸಮೀಪ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೊನ್ನ ಬ್ಯಾರೇಜ್ ಗೆ ಒಟ್ಟು 1 ಲಕ್ಷ 50 ಸಾವಿರ ಒಳ ಹರಿವು ಹಾಗೂ ಹೊರಹರಿವಿನ ಪ್ರಮಾಣ ಇರುವ ಅಂದಾಜು ಇರುವುದರಿಂದ ಭೀಮಾ ನದಿ ಪಾತ್ರದ ವಿಜಯಪುರ ,…

Read More

ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪನೆಗೆ ಈ ದೇಣಿಗೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪಿಸಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಸಿದ್ದಸಿರಿ ಸೌಹಾರ್ದ್ ಸಹಕಾರಿ ಸಂಘ ನಿಯಮಿತದಿಂದ ರೂ.25 ಲಕ್ಷ ದೇಣಿಗೆ ಚೆಕ್ ನ್ನು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಹಸ್ತಾಂತರಿಸಲಾಯಿತು.ಕರ್ನಾಟಕ ರಾಜ್ಯ ಸೌಹಾರ್ದ್ ಸಂಯುಕ್ತ ಸಹಕಾರಿ ನಿ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ನಿ. ನಿರ್ದೇಶಕರಾದ ರಾಮನಗೌಡ ಪಾಟೀಲ ಯತ್ನಾಳ ರವರು, ವಿಜಯಪುರ ನಗರವು ಬೃಹತ್ತಾಗಿ ಬೆಳೆದಿದೆ ಮತ್ತು ವರ್ಷದಿಂದ ವರ್ಷಕ್ಕೆ ಎಲ್ಲ ದಿಕ್ಕಿನಲ್ಲಿಯೂ ಬೆಳೆಯುತ್ತಿದೆ. ಅದಕ್ಕೆ ಅನುಗುಣವಾಗಿ ವಾಹನಗಳ ಸಂಖ್ಯೆಯೂ ಹೆಚ್ಚಾಗುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಸಾರ್ವಜನಿಕರ ಸುರಕ್ಷತೆಯಿಂದ ಈ ಸಂಚಾರ ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸಲು, ಅಪಘಾತಗಳನ್ನು ತಡೆಯಲು, ಸುಧಾರಿತ ಸಂಚಾರ ಕಣ್ಗಾವಲು ವ್ಯವಸ್ಥೆಗಳು, ಪ್ರಮುಖ ವೃತ್ತಗಳ ಮೇಲ್ವಿಚಾರಣೆ, ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಮಹಾರಾಷ್ಟçದ ಭೀಮಾನದಿಯ ತಟದಲ್ಲಿ ಈ ವರ್ಷ ವಿಪರೀತ ಮಳೆಯಿಂದಾಗಿ ಕರ್ನಾಟಕದ ಬಹುತೇಕ ಭೀಮಾನದಿಗೆ ಹೊಂದಿಕೊಂಡಿರುವ ಜಮೀನುಗಳು ಜಲಾವೃತವಾಗಿ ಮುಂಗಾರು ಬೇಳೆಹಾನಿ ಕುರಿತುಸೋಮವಾರ ಇಂಡಿ ಉಪವಿಭಾಗಾಧಿಕಾರಿ ಅನುರಾಧ ವಸ್ತ್ರದ ಪುನರ್ ಪರಿಶೀಲಿಸಿದರು.ರೈತರಿಗೆ ಬೆಳೆ ಹಾನಿಯ ಪರಿಹಾರ ಸರಕಾರದಿಂದ ಕೊಡಿಸುವ ಸಲುವಾಗಿ ಈ ಮೊದಲು ಚಡಚಣ ತಹಶೀಲ್ದಾರರ ಸಿಬ್ಬಂದಿ ಕೃಷಿ ಹಾಗೂ ತೊಟಗಾರಿಕೆ ಅಧಿಕಾರಿಗಳು ಬೆಳೆ ಹಾನಿ ಕುರಿತು ಸಮಗ್ರವಾಗಿ ಪರಿಶೀಲಿಸಿ ಫಸಲು(ಬೇಳೆ)ಹಾನಿಗೊಳಗಾದ ರೈತರ ಜಮೀನಿನ ಜಿಪಿಎಸ್ ಪೋಟೊ ದೊಂದಿಗೆ ಯಾವ ಬೆಳೆ ಹಾನಿಯಾಗಿದೆ ಎಷ್ಟು ಹೆಕ್ಟೇರ್ ಹಾನಿಯಾಗಿದೆ, ರೈತನ ಹೆಸರು ಹೀಗೆ ಹಲವಾರು ವಿಷಯ ಕುರಿತು ಅಧಿಕಾರಿಗಳು ಸಮೀಕ್ಷೆ ಮಾಡಿದ್ದರು. ತಾಲೂಕಿನ ೧೩ ಗ್ರಾ.ಪಂ.ಗಳಲ್ಲಿ ಈ ಎಲ್ಲ ಸಮೀಕ್ಷೆಯ ವರದಿ ಲಗತ್ತಿಸಿ ರೈತರಿಗೆ ಒಂದು ವಾರ ಆಕ್ಷೇಪಣೆಗೆ ಅವಕಾಶ ಕಲ್ಪಿಸಿದ್ದರು. ಸೋಮವಾರ ಆಕ್ಷೇಪಣೆಯ ಅವಧಿ ಮುಗಿದಿದ್ದರಿಂದ ಎಲ್ಲ ಸಮೀಕ್ಷಾ ವರದಿಗಳು ಸರಿಯಾಗಿದೆಯೊ ಅಥವಾ ಇಲ್ಲವೋ ಎಂದು ಪುನರ್‌ಪರಿಶೀಲನೆ ಮಾಡಿ ಸರಕಾರಕ್ಕೆ ಅಂತಿಮ ವರದಿ ಸಲ್ಲಿಸಬೇಕಾಗಿರುವದರಿಂದ ಪುನರ್ ಪರಿಶೀಲಿಸಲಾಯಿತು.ಈ ಸಂದರ್ಭದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶ್ರೀ ಅಭಿನವ ವಿದ್ಯಾ ಸಂಸ್ಥೆಯಲ್ಲಿ ಸೆ.೧೪ ರಂದು ಪ್ರಥಮ ರಾಜ್ಯ ಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ ಸಸಿಗೆ ನೀರೆರೆಯುವುದರ ಮೂಲಕ ಉದ್ಘಾಟನೆ ಕಾರ್ಯಕ್ರಮ ಜರುಗಿತು.ಉದ್ಘಾಟಕರಾಗಿ ಕೆ ಜಿ, ಎಸ್ ಎಸ್ ಸಂಸ್ಥೆ, ಮಾನಸ ಗಂಗೋತ್ರಿ ವಸತಿ ಶಾಲೆ ತಿಡಗುಂದಿಯ ಸಂಸ್ಥಾಪಕ, ಅಧ್ಯಕ್ಷ ಬಸನಗೌಡ ಬಿ ಹರನಾಳ, ಅಧ್ಯಕ್ಷರಾಗಿ ಮೋಹನ ದಳವಾಯಿ, ಅಧ್ಯಕ್ಷರು ಶ್ರೀ ಅಭಿನವ ವಿದ್ಯಾ ಸಂಸ್ಥೆ, ವಿಜಯಪುರ, ಮುಖ್ಯ ಅತಿಥಿಯಾಗಿ ತಮ್ಮಾರಾಯ ಪೋದ್ದಾರ, ಅಮೃತ ಕೌಲಗಿ, ಹಾಗು ಅಖಿಲ ಕರ್ನಾಟಕ ಸೂರ್ಯನಮಸ್ಕಾರ ಸಂಸ್ಥೆಯ, ಸಂಸ್ಥಾಪಕ ಪ್ರದಾನ ಕಾರ್ಯದರ್ಶಿ ಬಸವರಾಜ ನಂ ಬಾಗೇವಾಡಿ, ನಿರೂಪಕರಗಿ ಜ್ಯೋತಿ ನಿ ಪುಜಾರಿ, ಸಂಜೆಯಸ್ವಾಮಿ ತೋನಶ್ಯಾಳಮಠ ಉಪಸ್ಥಿತರಿದ್ದರು.

Read More

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಜಾಪ್ರಭುತ್ವದ ಯಶಸ್ಸಿಗೆ ಮುಖ್ಯವಾಗಿ ಚುನಾವಣೆಗಳಲ್ಲಿ ಸಕಾರಾತ್ಮಕವಾಗಿ ಭಾಗವಹಿಸಬೇಕು ಹಾಗೂ ತಮ್ಮ ತಮ್ಮ ಮತಗಳನ್ನು ಹಣ ಮತ್ತು ಇತರೆ ಪ್ರಲೋಭನೆಗಳಿಗೆ ಮಾರಿಕೊಳ್ಳದೆ ವಿವೇಚನೆಯಿಂದ ಚಲಾಯಿಸಬೇಕು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಸಲಹೆ ನೀಡಿದರು.ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಘಟಕದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಪರಿಕಲ್ಪನೆ, ಅದರ ಹುಟ್ಟು ಹಾಗೂ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಅದು ಬೆಳೆದುಬಂದ ದಾರಿಗಳನ್ನು ವಿದ್ಯಾರ್ಥಿನಿಯರಿಗೆ ತಿಳಿಸಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕದ ನಿರ್ದೇಶಕ ಪ್ರೊ.ಮಲ್ಲಿಕಾರ್ಜುನ.ಎನ್.ಎಲ್. ಅವರು, ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಯುವಜನಾಂಗಕ್ಕೆ ಸರಿಯಾದ ಮಾರ್ಗದರ್ಶನ ಅಗತ್ಯ. ಒಂದೊಮ್ಮೆ ಪ್ರಜಾಪ್ರಭುತ್ವ ಸಡಿಲಗೊಂಡರೆ ಅರಾಜಕತೆ ಉಂಟಾಗುವ ಅಪಾಯಗಳಿವೆ ಎಂದರು.ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ, ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಾಮಾನ್ಯ…

Read More

ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸಲಹೆ ಉದಯರಶ್ಮಿ ದಿನಪತ್ರಿಕೆ ಗೊಳಸಂಗಿ: ಕೆಲವೇ ಕೆಲವು ಶಿಕ್ಷಕರಿಂದಾಗಿ ಶಿಕ್ಷಣ ಕ್ಷೇತ್ರಕ್ಕೆ ಕಳಂಕ ಬರುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಶಿಕ್ಷಕರು ಆದರ್ಶಮಯ ಜೀವನದ ಮೂಲಕ ಆದರ್ಶ ಸಮಾಜ ರೂಪಿಸುವ ಶಿಲ್ಪಿಗಳಾಗಬೇಕು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಶಿಕ್ಷಕರಿಗೆ ಕಿವಿ ಮಾತು ಹೇಳಿದರು.ಸೋಮವಾರ ಗೊಳಸಂಗಿ ಗ್ರಾಮದ ಅಪ್ಪಣ್ಣ ದಳವಾಯಿ ಪ್ರೌಢ ಶಾಲಾ ಸಭಾಭವನದಲ್ಲಿ ಬಸವವನಬಾಗೇವಾಡಿ ತಾಲೂಕು ಆಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೊಲ್ಹಾರ, ನಿಡಗುಂದಿ ಹಾಗೂ ಬಸವವನಬಾಗೇವಾಡಿ ತಾಲೂಕ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಅಭಿನಂದನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸರ್ಕಾರ ತನ್ನ ಆದಾಯದಲ್ಲಿ ಅತಿಹೆಚ್ಚು ಅನುದಾನವನ್ನು ಶಿಕ್ಷಣ ಹಾಗೂ ವೈದ್ಯಕೀಯ ಇಲಾಖೆಗಳಿಗೆ ಆರ್ಥಿಕ ವೆಚ್ಚ ಮಾಡುತ್ತಿದೆ. ಹೀಗಾಗಿ ಶಿಕ್ಷಕರು ಗುಣಮಟ್ಟ ಹಾಗೂ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಸಮಾಜ ತಮ್ಮ ಮೇಲೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ.ಎಲ್.ಡಿ.ಇ. ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಎಂಜಿನಿಯರ್ ದಿನಾಚರಣೆ ಅಂಗವಾಗಿ ಬಿ.ಎಲ್‌.ಡಿಇ ವೈದ್ಯಕೀಯ ಆಸ್ಪತ್ರೆಯ ಸಹಯೋಗದಲ್ಲಿ ಸೋಮವಾರ ರಕ್ತದಾನ ಶಿಬಿರ ನಡೆಯಿತು.ಈ ಸಂದರ್ಭದಲ್ಲಿ ಮತನಾಡಿದ ಕಾಲೇಜಿನ ಪ್ರಾಚಾರ್ಯ ಪಿ. ಬಿ. ಕಳಸಗೊಂಡ, ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರು ಕನ್ನಡಿಗರಾಗಿದ್ದು, ಅವರ ಜನ್ಮದಿನದಂದು ಎಂಜಿನಿಯರ್ಸ್ ದಿನ ಆಚರಿಸುವುದು ಹೆಮ್ಮೆಯ ವಿಷಯವಾಗಿದೆ. ಬಡತನವನ್ನು ಮೆಟ್ಟಿನಿಂತು ಕಷ್ಟಪಟ್ಟು ಅಂದು ಎಂಜಿನಿಯರಿಂಗ್ ಪದವಿ ಪಡೆದು ತಮ್ಮ ಕಾಯಕದ ಮೂಲಕ ದೇಶದ ಅಭಿವೃದ್ಧಿಗೆ ಅವರದೇ ಆದ ಕೊಡುಗೆ ನೀಡಿದ್ದಾರೆ. ತಮ್ಮ ಜನ್ಮದಿನವನ್ನು ರಾಷ್ಟ್ರೀಯ ಎಂಜಿನಿಯರ್ ದಿನವನ್ನಾಗಿ ಆಚರಿಸುವಂತೆ ಕರೆ ನೀಡಿದ್ದು, ಅವರು ತಮ್ಮ ವೃತ್ತಿ ಮತ್ತು ವೃತ್ತಿ ಬಾಂಧವರ ಬಗ್ಗೆ ಹೊಂದಿರುವ ಪ್ರೀತಿ, ವಿಶ್ವಾಸ, ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ ಸಂಯೋಜನಾಧಿಕಾರಿ ಆನಂದ ಚವ್ಹಾಣ, ಎಂ. ಎಸ್. ಹಿರೇಮಠ, ಕಾಲೇಜಿನ ಎಲ್ಲ ವಿಭಾಗಗಳ ಮುಖ್ಯಸ್ಥರು, ಬೋಧಕ ಬೋಧಕರ ಹೊರತಾದ ಸಿಬ್ಬಂದಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿನಿಂದ ವಿಜಯಪುರ ನಗರದಿಂದ-‌ಚಿಕ್ಕಲಕಿ ಕ್ರಾಸ್ ವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸದಾಗಿ ಎರಡು ಗ್ರಾಮೀಣ ಸಾರಿಗೆ ಬಸ್ ಸಂಚಾರ ಪ್ರಾರಂಭಿಸಲಿದೆ.ವಿದ್ಯಾರ್ಥಿಗಳು, ರೈತರು‌ ಕಾರ್ಮಿಕರು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲು‌ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಹೊಸ ಬಸ್ ಸೇವೆ ಪ್ರಾರಂಭಿಸಲು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಈ ಬಸ್ ಸೇವೆ ಪ್ರಾರಂಭಿಸಲಾಗುತ್ತಿದೆ.ಪ್ರತಿ‌ದಿನ‌ ಎರಡು ಬಸ್ಸುಗಳು ವಿಜಯಪುರದಿಂದ ಖತಿಜಾಪುರ, ಸಾರವಾಡ, ಬಬಲೇಶ್ವರ, ಯಕ್ಕುಂಡಿ, ಅರ್ಜುಣಗಿ ಮಾರ್ಗವಾಗಿ‌ ಚಿಕ್ಕಲಕಿ ಕ್ರಾಸ್ ವರೆಗೆ ಸಂಚರಿಸಲಿವೆ ಎಂದು ಸಚಿವರ ಕಚೇರಿಯ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಜಾಪ್ರಭುತ್ವದ ಆಶಯಗಳ ರಕ್ಷಣೆ, ಆದರ್ಶಗಳನ್ನು ಪಾಲನೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಪ್ರಾಚಾರ್ಯೆ ಡಾ. ರಾಬಿಯಾ. ಎಂ. ಮಿರ್ಧೆ ಹೇಳಿದರು.ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ. ಸಿ. ಪಿ. ವಿಜ್ಞಾನ ಕಾಲೇಜಿನಲ್ಲಿ ಐಕ್ಯೂಎಸಿ, ರಾಜ್ಯಶಾಸ್ತ್ರ ವಿಭಾಗ, ಮಾನವ ಹಕ್ಕುಗಳ ರಕ್ಷಣಾ ಕೋಶ ಹಾಗೂ ಸಮಾನ ಅವಕಾಶ ಕೋಶಗಳ ಸಹಯೋಗದಲ್ಲಿ ಸೋಮವಾರ ಅಯೋಜಿಸಲಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅವರು ಮಾತನಾಡಿದರು.ವಿಶ್ವದ ಗಣತಂತ್ರದ ದೇಶಗಳಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲು,ಪ್ರಜಾಪ್ರಭುತ್ವದ ಆಶಯಗಳನ್ನು ಗೌರವಿಸುವ ಸಲುವಾಗಿ ಜಾಗತಿಕವಾಗಿ ಪ್ರತಿ ವರ್ಷ ಸೆ.೧೫ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.ಈ ವೇಳೆಯಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ತರನ್ನುಮ್ ಜಬೀನ್ ಖಾನ್ ಮಾತನಾಡಿ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಆಶಯ ಮತ್ತು ಮಹತ್ವದ ಬಗ್ಗೆ ಹೇಳಿ, ಪ್ರತಿಜ್ಞಾ ವಿಧಿ ಬೋಧಿಸಿದರು.ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಮಾನವ ಹಕ್ಕುಗಳ ರಕ್ಷಣಾ ಕೋಶದ ಅಧ್ಯಕ್ಷ ಡಾ.ಧರ್ಮಗುರು ಪ್ರಸಾದ್, ಸಮಾನ…

Read More