Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಹೆಣ್ಣು ಮಕ್ಕಳು ಉಳಿಸುವ ಹಣದಿಂದ ಮದುವೆಗೆ, ಮಕ್ಕಳ ಶಿಕ್ಷಣಕ್ಕೆ ಅಥವಾ ಮನೆಯನ್ನ ಮುನ್ನಡೆಸಲು ತುಂಬಾ ಸಹಕಾರಿ ಆಗುತ್ತದೆ ಉಳಿತಾಯದ ಬಗ್ಗೆ ಅರಿವು ಹೊಂದಿದರೆ, ಅವರು ಅವರ ಜೀವನದಲ್ಲಿ ಆರ್ಥಿಕವಾಗಿ ಸ್ವಾವಲಂಬಿ ಆಗಬಹುದು ಎಂದು ಚಿತ್ರನಟಿ ಶೃತಿ ಹೇಳಿದರು.ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದ ಹತ್ತಿರ ನೂತನ ಸುಶೀಲವರ್ದಿನಿ ಮಹಿಳಾ ಕೋ- ಆಪರೇಟಿವ್ ಸೊಸೈಟಿ ಉದ್ಘಾಟಸಿ ಮಾತನಾಡಿದ ಅವರು, ಇಂದಿನ ಈ ಸೊಸೈಟಿಯು ಮಹಿಳೆಯರ ಸಬಲೀಕರಣ ಮತ್ತು ಅಭ್ಯುದಯಕ್ಕೆ ಕಾರಣವಾಗುತ್ತದೆ ಈ ಕನಸು ನಮ್ಮ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರದಾಗಿತ್ತು ಎಲ್ಲ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು. ಪ್ರತಿಯೊಬ್ಬ ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗಳನ್ನ ತಗೆದು ಹಣವನ್ನ ಉಳಿಸಬೇಕು. ಹಾಗೆ ಉಳಿಸಿದ ಹಣ ನಿಮ್ಮ ಇಡೀ ಕುಟುಂಬವನ್ನೇ ಸಲಹುತ್ತದೆ ಎಂದು ಹೇಳಿದರು.ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ ಸಮಾಜಕ್ಕೆ ಕೊಡುಗೆ ನೀಡಿದ ಮಹನಿಯರನ್ನು ಗೌರವಿಸುವುದು, ಸನ್ಮಾನಿಸುವುದು ಸಮಾಜದ ಕರ್ತವ್ಯ ಎಂದು ತಿಳಿಸಿದರು.ಜ್ಯೋತಿ ಬೆಳಗಿಸಿ ವಿಧಾನ ಪರಿಷತ್ ಸದಸ್ಯ ಎಚ್.ಆರ್. ನಿರಾಣಿ ಮಾತನಾಡಿ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಆಲಮಟ್ಟಿಯ ರಾಕ್ ಉದ್ಯಾನದಲ್ಲಿ ಒಂದು, ಪಾರ್ಕಿಂಗ್ ಲಾಟ್ ಬಳಿ ಒಂದು ಸೇರಿ ಒಟ್ಟಾರೇ ಎರಡು ಶ್ರೀಗಂಧ ಗಿಡಗಳನ್ನು ಕತ್ತರಿಸಿ ಕಳ್ಳತನ ಮಾಡಿದ ಘಟನೆ ಬುಧವಾರ ರಾತ್ರಿ ಜರುಗಿದೆ.ಎರಡು ಮರಗಳನ್ನು ಕತ್ತರಿಸಿ, ಅವುಗಳನ್ನು ಒಯ್ಯಲು ಸಾಧ್ಯವಾಗದೇ ಅಲ್ಲಿಯೇ ಎಸೆದು ಕಳ್ಳರು ಪಾರಾಗಿದ್ದಾರೆ.ಎರಡು ಗಿಡಗಳು ಅಂದಾಜು ೧೦ ವರ್ಷ ವಯಸ್ಸಿನದ್ದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.ಉಪ ವಲಯ ಅರಣ್ಯಾಧಿಕಾರಿ ಸತೀಶ ಗಲಗಲಿ, ಘಟನೆಯ ಕುರಿತು ಆಲಮಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಆಲಮಟ್ಟಿ ಜಲಾಶಯ ಭದ್ರತೆಗೆಂದು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ನಿಯೋಜಿಸಲಾಗಿದೆ. ಜತೆಗೆ ಪೆuಟಿಜeಜಿiಟಿeಜಲೀಸ್ ಇಲಾಖೆ ಕೂಡ ಶ್ರಮ ವಹಿಸುತ್ತಿದೆ. ಇಷ್ಟೊಂದು ಭದ್ರತೆ ನಡುವೆಯೂ ಆಗಾಗ ಶ್ರೀಗಂಧದ ಮರಗಳು ಕಳ್ಳತನವಾಗುತ್ತಿರುವುದು ಮಾತ್ರ ಭದ್ರತೆಯ ಲೋಪ ಎತ್ತಿ ತೋರಿಸುತ್ತಿದೆ.ಆಲಮಟ್ಟಿಯ ನಾನಾ ಅಧಿಕಾರಿ ಕಚೇರಿ ಹಾಗೂ ಆಕರ್ಷಕ ಉದ್ಯಾನಗಳಲ್ಲಿ ಶ್ರೀಗಂಧದ ಮರಗಳನ್ನು ಬೆಳೆಸಲಾಗಿದೆ. ಕೆಲ ಮರಗಳು ಬೃಹದಾಕಾರವಾಗಿ ಬೆಳೆದಿದ್ದು, ಲಕ್ಷಾಂತರ ರೂ.ಗಳ ಮೌಲ್ಯ ಹೊಂದಿವೆ. ಇದು ಮರಗಳ್ಳರ ಪಾಲಿಗೆ ವರವಾಗಿದ್ದು, ಆಗಾಗ ಇಲ್ಲಿನ…

Read More

ತಿಕೋಟಾ & ಬಬಲೇಶ್ವರ ತಾಲೂಕುಗಳಲ್ಲಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಪಂ ಸಿಇಓ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಗುರುವಾರ ತಿಕೋಟಾ & ಬಬಲೇಶ್ವರ ತಾಲೂಕಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.ತಿಕೋಟಾ ಪಟ್ಟಣದ ಕೆ.ಜಿ.ಎಸ್ ಶಾಲೆಗೆ ಭೇಟಿ ನೀಡಿ, ಶಾಲೆಯ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿದ ಅವರು, ಶಿಥಿಲಾವಸ್ಥೆಗೊಂಡಿರುವ ಶಾಲಾ ಕೊಠಡಿಗಳಲ್ಲಿ ಮಕ್ಕಳಿಗೆ ಪಾಠ ಭೋಧನೆ ಮಾಡದೇ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಪಾಠ ಭೋಧನೆ ಮಾಡಲು ಉಸ್ತುವಾರಿ ಸಚಿವರ ನಿರ್ದೇಶನದಂತೆ ಕ್ರಮ ವಹಿಸಬೇಕು. ಶಾಲೆಯಲ್ಲಿನ ಕಂಪ್ಯೂಟರಗಳನ್ನು ವಿದ್ಯಾರ್ಥಿಗಳು ಜ್ಞಾನ ಅಭಿವೃದ್ಧಿಗೆ ಉಪಯೋಗಿಸುವಂತೆ ಪ್ರೇರಣೆ ನೀಡಬೇಕು ಎಂದು ಅವರು ಹೇಳಿದರು.ಮಳೆ ಬಂದ ಸಂದರ್ಭದಲ್ಲಿ ಯಾವುದೇ ಶಾಲಾ ಆವರಣದಲ್ಲಿ ಮಳೆ ನೀರು ನೀಲದಂತೆ ಅಗತ್ಯ ಮುಂಜಾಗೃತೆ ವಹಿಸಬೇಕು. ದುರಸ್ತಿಗೊಳಿಸುವುದು ಅವಶ್ಯಕವಿದ್ದಲ್ಲಿ ಕ್ರಿಯಾಯೋಜನೆ ತಯಾರಿಸಿ, ಇಲಾಖೆಯ ಮೇಲಾಧಿಕಾರಿಗಳಿಗೆ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.ನಂತರ ಕೋಟ್ಯಾಳ ಗ್ರಾ.ಪಂ. ವ್ಯಾಪ್ತಿಯ ಹರನಾಳ…

Read More

ಸಾತಿಹಾಳ ಗ್ರಾಮದ ಡೋಣಿ ನದಿಯ ಸೇತುವೆ ಮೇಲಿನ ಸಂಪರ್ಕ ನಿಷೇಧಿಸಿದ ಗ್ರಾಮಸ್ಥರು ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬಸವನಬಾಗೇವಾಡಿ-ಮುದ್ದೇಬಿಹಾಳ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಸಾತಿಹಾಳ ಗ್ರಾಮದ ಹತ್ತಿರದಲ್ಲಿರುವ ಡೋಣಿ ನದಿಯ ಸೇತುವೆ ಗುರುವಾರ ಪ್ರವಾಹಕ್ಕೆ ಒಳಗಾಗಿ ಮುಳುಗಿದ್ದು ಸುಮಾರು ೪ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.ತಾಲ್ಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಡೋಣಿ ನದಿ ಗುರುವಾರ ತುಂಬಿ ಹರಿಯುತ್ತಿದ್ದು, ಸಾತಿಹಾಳ ಸೇತುವೆ ನೀರಿನಿಂದ ಆವೃತ್ತವಾಗಿ ಮುಳುಗಿತು. ಬೆಳಿಗ್ಗೆ ಸಾರಿಗೆ ಬಸ್ ಸೇರಿದಂತೆ ಭಾರಿ ವಾಹನಗಳು ಮಾತ್ರ ಪ್ರವಾಹದ ನೀರಿನಲ್ಲಿಯೇ ಸಂಚರಿಸಿದವು. ಆದರೆ ಮಧ್ಯಾನ ೧೨.೩೦ ಗಂಟೆಯ ನಂತರ ಪ್ರವಾಹದ ಮಟ್ಟ ಹೆಚ್ಚಾಗಿ ಯಾವುದೇ ವಾಹನಗಳಿಗೆ ಆಸ್ಪದವಿಲ್ಲದಂತಾಯಿತು. ಇದರಿಂದ ಸಂಚಾರ ಸ್ತಬ್ಧಗೊಂಡು ಅಸ್ತವ್ಯಸ್ತವಾಯಿತು. ಸಾಯಂಕಾಲ ೪ ಗಂಟೆಯವರೆಗೆ ಪ್ರವಾಹದ ಮಟ್ಟ ಹೆಚ್ಚಾಗಿಯೇ ಇದ್ದು ಎರಡು ಕಡೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು.ಸೇತುವೆ ಮೇಲೆ ಪ್ರವಾಹ ಹೆಚ್ಚಾಗುತ್ತಿದ್ದಂತೆಯೇ ಮಾರ್ಕಬ್ಬಿನಹಳ್ಳಿ ಕ್ರಾಸ್ ಹತ್ತಿರ ದೇವರಹಿಪ್ಪರಗಿ ತಹಶೀಲ್ದಾರ ಪ್ರಕಾಶ ಸಿಂದಗಿ ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಕಂದಾಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ನಗರದ ಶಿವಾಜಿ ಸರ್ಕಲ್ ಹತ್ತಿರ, ರಾಮನಗರ ರಸ್ತೆ, ನವಬಾಗ ರಸ್ತೆ, ಮನಗೂಳಿ ಅಗಸಿ, ಜುಮ್ಮಾ ಮಸೀದಿ, ಕಸ್ತೂರಿ ಕಾಲನಿ, ರೇಲ್ವೆ ಸ್ಟೇಶನ್ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗುರುವಾರ ಬೆಳಿಗ್ಗೆ ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಗರದಾದ್ಯಂತ ಇರುವ ಕೋಟೆಗೋಡೆ ಆವರಣಗಳಲ್ಲಿ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡಬೇಕು. ಮುಳ್ಳುಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೋಟೆಗೋಡೆಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಸೌಂದರ್ಯಿಕರಣಕ್ಕೆ ಒತ್ತು ನೀಡುವಂತೆ ಸೂಚಿಸಿದ ಅವರು, ಐತಿಹಾಸಿಕ ವಿಜಯಪುರ ನಗರಕ್ಕೆ ಪ್ರವಾಸಿಗರು ಆಗಮಿಸುತ್ತಿರುವುದರಿಂದ ನಗರದಾದ್ಯಂತೆ ಸ್ವಚ್ಛತೆಗೆ ಆದ್ಯತೆ ನೀಡಿ, ಅವಶ್ಯಕತೆ ಇದ್ದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ಮಳೆ ನೀರು ಒಂದೆಡೆ ನಿಂತು ಪ್ರವಾಹ ಪರಿಸ್ಥಿತಿಯಾಗದಂತೆ ನೋಡಿಕೊಳ್ಳಲು ಅವಶ್ಯಕವಿದ್ದೆಡೆ ಮಳೆ ನೀರು ಚರಂಡಿ ನಿರ್ಮಿಸಲು ಯೋಜನೆ ರೂಪಿಸಿ ಶಾಶ್ವತ ಪರಿಹಾರ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಜಾನಪದ ಕಲೆಯು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಅದು ನಮ್ಮ ಪರಂಪರೆಯ ಪ್ರತೀಕವಾಗಿದ್ದು, ಮುಂದಿನ ಪೀಳಿಗೆಗೆ ಈ ಕಲೆಯನ್ನು ಉಳಿಸುವುದು ಬಹಳ ಮುಖ್ಯವಾಗಿದೆ ಎಂದು ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಹೇಳಿದರು.ಗುರುವಾರದಂದು ಪಟ್ಟಣದ ಕರ್ನಾಟಕ ಬಿಎಡ್ ಕಾಲೇಜಿನಲ್ಲಿ ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡೆಮಿ, ಭೀಮಾoತರಂಗ ಸಾಹಿತ್ಯಿಕ, ಸಾಂಸ್ಕೃತಿಕ ಜಗಲಿ ಕೇಂದ್ರ ಇಂಡಿ, ಕರ್ನಾಟಕ ವಿದ್ಯಾವರ್ಧಕ ಸಂಸ್ಥೆ ಇಂಡಿ ಅವರ ಸಹಯೋಗದಲ್ಲಿ ಹಮ್ಮಿಕೊಂಡ ಗೀಗಿ ಸಂಭ್ರಮ, ಸನ್ಮಾನ ಸಮಾರಂಭ, ಹರದೇಶಿ-ನಾಗೇಶಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಜಾನಪದ ಕಲೆಗಳು ಕಲಾವಿದರಿಗೆ ಸ್ಫೂರ್ತಿ ನೀಡಿ, ಸೃಜನಶೀಲತೆಯನ್ನು ಉತ್ತೇಜಿಸುತ್ತವೆ. ಜತೆಗೆ ಜಾನಪದ ಕಲೆಗಳು ಸಮುದಾಯಗಳನ್ನು ಒಂದುಗೂಡಿಸಿ ಪರಸ್ಪರ ಸಂಬಂಧಗಳನ್ನು ಬಲಪಡಿಸುತ್ತವೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಡಾ ಎಂ ಎಂ ಪಡಶೆಟ್ಟಿ ಮಾತನಾಡಿ, ಜಾನಪದ ಕಲೆಗಳು ಇತಿಹಾಸ, ನಂಬಿಕೆಗಳು ಮತ್ತು ಮೌಲ್ಯಗಳನ್ನು ಕಲಿಸುವ ಮಾರ್ಗವಾಗಿದ್ದು, ಈ ಜಾನಪದ ಕಲೆಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.ಬಾಗಲಕೋಟದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅನಾಮಧೇಯ ಅಂದಾಜು ೪೦ ರಿಂದ ೪೫ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿರುವ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನಾಮಧೇಯ ವ್ಯಕ್ತಿಯ ವಾರಸುದಾರರ ಪತ್ತೆಗೆ ಠಾಣಾಧಿಕಾರಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ಪತ್ತೆಯಾದ ವ್ಯಕ್ತಿಯು ೫.೧ ಪೂಟ್ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಬಣ್ಣ, ಕಪ್ಪು ತಲೆಗೂದಲು, ಬಿಳಿ ಹಾಗೂ ಕೆಂಪು ಪಟ್ಟಿ ಬಣ್ಣದ ಫುಲ್ ತೋಳಿನ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು, ಈ ಚಹರೆಪಟ್ಟಿಯುಳ್ಳ ವ್ಯಕ್ತಿಯ ವಾರಸುದಾರರು ಪತ್ತೆಯಾದಲ್ಲಿ ಸಾರ್ವಜನಕರು ವಿಜಯಪುರ ಪೊಲೀಸ್ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ ೦೮೩೫೨-೨೫೦೮೪೪ ಹಾಗೂ ಗ್ರಾಮೀಣ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ ೦೮೩೫೨-೨೫೦೯೨೩ಗೆ ಸಂಪರ್ಕಿಸಬಹುದಾಗಿದೆ ಎಂದು ಗ್ರಾಮೀಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಧುನಿಕ ತಾಂತ್ರಿಕ ತರಬೇತಿ ಕಾರ್ಯಕ್ರಮದಡಿ ೨೦೨೫-೨೬ನೇ ಸಾಲಿಗೆ ವಿವಿಧ ವೃತ್ತಿಗಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಗ್ರಾಮೀಣ ಪ್ರದೇಶದ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ೩೫, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ೪೫ ವರ್ಷ ವಯೋಮಿತಿಯುಳ್ಳ ಅರ್ಹ ಅಭ್ಯರ್ಥಿಗಳು ಜಿಲ್ಲಾ ಕೈಗಾರಿಕಾ ಕೇಂದ್ರದ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ ೫ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮೋರಟಗಿಯ ಹೆಸ್ಕಾಂ ಕಚೇರಿಯಲ್ಲಿ ಗ್ರಾಹಕರ ಕುಂದು ಕೊರತೆ ಸಭೆ ಉದಯರಶ್ಮಿ ದಿನಪತ್ರಿಕೆ ಮೋರಟಗಿ: ರೈತರಿಗೆ ಹಾಗೂ ಕುಡಿಯುವ ನೀರಿಗೆ ವಿದ್ಯುತ್ ಅಭಾವ ಆಗದಂತೆ ನಿಗಾ ವಹಿಸಿ ಗ್ರಾಹಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು ಎಂದು ಎಇಇ ಚಂದ್ರಕಾಂತ ನಾಯಕ್ ಸೂಚಿಸಿದರು.ಗುರುವಾರ ಗ್ರಾಮದ ಹೆಸ್ಕಾಂ ಕಚೇರಿಯಲ್ಲಿ ಹಮ್ಮಿಕೊಂಡ ಗ್ರಾಹಕರ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಗ್ರಾಮೀಣ ಭಾಗದಲ್ಲಿ ಸಾಮಾನ್ಯವಾಗಿ ರೈತಾಪಿ ವರ್ಗ ಹೆಚ್ಚಿಗೆ ಇರುವುದರಿಂದ ನಮ್ಮ ಇಲಾಖೆಯ ಕೆಲವು ನಿಯಮಾವಳಿ ಗೊತ್ತಿರುವುದಿಲ್ಲ ರೈತರೊಂದಿಗೆ ಹೊಂದಿಕೊಂಡು ಇಲಾಖೆಯ ಮಾರ್ಗ ಸೂಚಿಗಳನ್ನು ವಿವರಿಸಬೇಕು ಮೋರಟಗಿ ಗ್ರಾಮವು ಕೆಲವೇ ದಿನಗಳಲ್ಲಿ ಹೂಬಳಿ ಆಗುವ ಎಲ್ಲ ಲಕ್ಷಣಗಳು ಎದ್ದು ಕಾಣುತ್ತಿವೆ. ಹೀಗಾಗಿ ಈ ಗ್ರಾಮವನ್ನು ಸೋಲಾರ ಗ್ರಾಮವೆಂದು ಪರಿಗಣಿಸಿ ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳೊಂದಿಗೆ ಮಾತನಾಡಿ ಕಮರ್ಶಿಯಲ್ ಗಳಿಗೆ ಸೋಲಾರ್ ಅಳವಡಿಸುವ ವ್ಯವಸ್ಥೆ ಮಾಡುತ್ತೇವೆ ಗ್ರಾಹಕರೂ ಕೂಡಾ ಸಿಬ್ಬಂದಿಗಳ ಜೊತೆಗೆ ಸೌಜನ್ಯದಿಂದ ಇದ್ದು ತಮ್ಮ ವಿದ್ಯುತ್ ಬಿಲ್ಲನ್ನು ನಿಗದಿ ಪಡಿಸಿದ ದಿನಾಂಕದಂದು ಭರಣಾ ಮಾಡಬೇಕು ವಿದ್ಯುತ್ ಸಮಸ್ಯೆ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಆ.೦೬ ರಂದು ಬುಧವಾರ ಬೆಂಗಳೂರಿನಲ್ಲಿ ಆಯೋಜಿಸಲಾದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಅಲ್ಪಸಂಖ್ಯಾತರ ವಸತಿ ಶಾಲೆ, ಚಡಚಣ ತಾಲೂಕಿನ ಹಾಲಹಳ್ಳಿಯ ನಿಲಯ ಪಾಲಕರಾಗಿ ಸೇವೆ ಸಲ್ಲಿಸುತ್ತಿರುವ ಮಲ್ಲಿಕಾರ್ಜುನ ಹುಬ್ಬಳ್ಳಿ ಅವರಿಗೆ `’ಅತ್ಯುತ್ತಮ ನಿಲಯ ಪಾಲಕ ಪ್ರಶಸ್ತಿ” ನೀಡಿ ಗೌರವಿಸಲಾಯಿತು.ಈ ಪ್ರಶಸ್ತಿಯನ್ನು ರಾಜ್ಯದ ವಸತಿ ಮತ್ತು ವಕ್ಫ್ ಇಲಾಖೆಯ ಸಚಿವರಾದ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಮಲ್ಲಿಕಾರ್ಜುನ ಹುಬ್ಬಳ್ಳಿ ಅವರು ನೈತಿಕತೆ, ಶಿಸ್ತು, ವಿದ್ಯಾರ್ಥಿ ಹಿತಪಾಲನೆ ಹಾಗೂ ನೈಜ ಸೇವಾಭಾವದಿಂದ ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದು, ಇದೇ ನಿಷ್ಠವಂತ ಕೆಲಸಗಳು ಅವರು ಈ ಗೌರವಕ್ಕೆ ಪಾತ್ರರಾಗಲು ಕಾರಣವಾಗಿದೆ.ಈ ಸಾಧನೆಗೆ ಹಾಲಹಳ್ಳಿ ವಸತಿ ಶಾಲೆಯ ಪ್ರಾಂಶುಪಾಲರಾದ ರವಿಕುಮಾರ ಕಾಂಬಳೆ,ಮೋಹನಕುಮಾರ ದಿಬ್ಬದಳ್ಳಿ, ಜಿ.ಎಸ್. ಬನಸೋಡೆ, ಅಪ್ಪಾಸಾಹೇಬ ಅಂಕುಶ, ಸುನೀಲ ಅಗಸರ, ಸಂಗಮೇಶ ಹಿಟ್ನಳ್ಳಿ, ಗಿರೀಶ ಕಾಂಬಳೆ, ಹಾಗೂ ಇತರೆ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹೃದಯಪೂರ್ವಕವಾಗಿ ಪ್ರಶಸ್ತಿ ವೀಜೆತ ಮಲ್ಲಿಕಾರ್ಜುನ ಹುಬ್ಬಳ್ಳಿ ಅವರಿಗೆ ಗುರುವಾರ…

Read More