Author: editor.udayarashmi@gmail.com

ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರ ಆರೋಪ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜ್ಯದಲ್ಲಿ ಯುರಿಯಾ ಹಾಗೂ ರಸಗೊಬ್ಬರ ಅಭಾವಕ್ಕೆ ರಾಜ್ಯ ಸರ್ಕಾರದ ಅಸಹಕಾರ ಹಾಗೂ ನಿರ್ಲಕ್ಷ್ಯವೇ ಕಾರಣ. ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ತಾಲ್ಲೂಕು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರ ಸರ್ಕಾರದ ಮೇಲೆ ಕಿಡಿಕಾರಿದರುಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಸರ್ಕಾರದ ಅಸಹಕಾರ ಮತ್ತು ನಿರ್ಲಕ್ಷ್ಯದಿಂದ ಯುರಿಯಾ ಗೊಬ್ಬರ ಅಭಾವ ಉಂಟಾಗಿದ್ದು, ಇದರಿಂದ ಕೆಲವು ಕಡೆಗಳಲ್ಲಿ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಸಮಸ್ಯೆಯಾಗುತ್ತಿದೆ. ಇನ್ನೂ ಅನೇಕ ಕಡೆಗಳಲ್ಲಿ ಯುರಿಯಾ ಗೊಬ್ಬರಕ್ಕಾಗಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಮುಂಗಾರು ಪ್ರಾರಂಭದಲ್ಲೇ ಮಳೆಯ ಹವಾಮಾನ ವೈಪರೀತ್ಯವನ್ನು ತಜ್ಞರಿಂದ ಮಾಹಿತಿ ಪಡೆದು ಹೆಚ್ಚಿನ ದಾಸ್ತಾನು ತರಿಸಲು ಮುತುವರ್ಜಿ ವಹಿಸಬೇಕಾಗಿತ್ತು, ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ, ಈಗಲೂ ಈ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಒಂದು ವಾರದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಮಳೆ ನಿಮಿತ್ತ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಮತ್ತು ವಿವಿಧ ಪ್ರದೇಶಗಳಲ್ಲಿ ನೀರು ಸಂಗ್ರಹಗೊಂಡು ಆಗಿರುವ ತೊಂದರೆಗಳ ಕುರಿತು ಸಂಪೂರ್ಣ ಮಾಹಿತಿ ಪಡೆದಿರುವ ಸಚಿವರು ದಿ.9 ಶನಿವಾರ ರಂದು ಜಿಲ್ಲೆಯ ಪ್ರಮುಖ ಅಧಿಕಾರಿಗಳೊಂದಿಗೆ ಈ ಕುರಿತು ವಿಸ್ತೃತವಾಗಿ ಚರ್ಚಿಸಲಿದ್ದಾರೆ.ಮಳೆಯಿಂದ ಸೋರಿಕೆಯಾಗಿರುವ ಅಂಗವಾಡಿ ಮತ್ತು ಶಾಲಾ ಕಟ್ಟಡಗಳ ಕುರಿತು ಮಾಹಿತಿ ಪಡೆದು ಕೂಡಲೇ ಆ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಸಚಿವರು ಸೂಚನೆ ನೀಡಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Read More

ರಸ್ತೆ ಡಾಂಬರೀಕರಣಕ್ಕೆ ಗ್ರಾಮಸ್ಥರ ಆಗ್ರಹ | ವಾಹನ ಸವಾರರಿಗೆ ಸಂಚಾರಕ್ಕೆ ಸಂಚಕಾರ B ಉದಯರಶ್ಮಿ ದಿನಪತ್ರಿಕೆ ಚಡಚಣ: ಸಮೀಪದ ಜೀರಂಕಲಗಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದ ಜೀರಂಕಲಗಿ ಗ್ರಾಮದಿಂದ ಮಹಾರಾಷ್ಟ್ರದ ಗಡಿಗ್ರಾಮ ಸೊನ್ನಲಗಿ ಗ್ರಾಮಕ್ಕೆ ಹೋಗುವ ಮುಖ್ಯ ರಸ್ತೆ ಸಂಪೂರ್ಣ ಜಲಾವೃತಗೊಂಡು ವಾಹನ ಸವಾರರಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.೧೨ ವರ್ಷಗಳ ಹಿಂದೆ ಈ ರಸ್ತೆಯನ್ನು ನಿರ್ಮಾಣ ಮಾಡಲಾಗಿದ್ದು, ಸಧ್ಯ ಈ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಈಗಿನ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಅವರೇ ನಿರ್ಮಾಣ ಮಾಡಿದ ರಸ್ತೆ ಇದಾಗಿದೆ. ಆದರೆ ಮತ್ತೆ ಶಾಸಕರಾದ ನಂತರ ಈ ರಸ್ತೆಯನ್ನು ಪುನಃ ಡಾಂಬರೀಕರಣ ಮಾಡುತ್ತೇನೆ ಎಂದು ಹೇಳಿದ ಶಾಸಕರು ಈವರೆಗೂ ಇತ್ತ ಕಡೆ ಗಮನ ಹರಿಸಿಲ್ಲ.ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಈ ರಸ್ತೆ ಸಂಪೂರ್ಣ ಜಲಾವೃತವಾಗಿ ಇದು ರಸ್ತೆಯೋ ಅಥವಾ ನದಿಯೋ ಎಂಬಂತಾಗಿದೆ. ಇನ್ನಾದರೂ ಶಾಸಕ ವಿಠ್ಠಲ ಕಟಕಧೋಂಡ ಅವರು ಚಡಚಣ ತಾಲೂಕಿನ ಕಡೆ ಗಮನ ಹರಿಸಿ ರಸ್ತೆಗಳ ಡಾಂಬರೀಕರಣ…

Read More

ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಪರಾಕಿ ಬೆಂಗಳೂರು: ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ. ಅಧಿಕಾರ ಇದ್ದಾಗ ಹಗಲುವೇಷ, ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ. ಸನ್ಮಾನ್ಯ ಅಶೋಕ ಅವರೇ, ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಾರಿಗೆ ನೌಕರರು ಮೊದಲ ಬಾರಿ ವೇತನ‌ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ‌ ಸುದೀರ್ಘ ಮುಷ್ಕರ ನಡೆದಾಗಲೂ ಸಾರಿಗೆ ಸಚಿವರಾಗಿ ಕೈಕಟ್ಟಿ ಕೂತು ತಮ್ಮ ಅಸಾಮರ್ಥ್ಯ ಪ್ರದರ್ಶಿಸಿದ್ದೂ ನೀವೇ ಅಲ್ಲವೇ? ತಮ್ಮ ಪಕ್ಷದ ಅಧಿಕಾರದ ಅವಧಿಯಲ್ಲಿ ಸಾರಿಗೆ ನೌಕರರ ತಿಂಗಳ ವೇತನ ಹೇಗೆ ಪಾವತಿಯಾಗುತ್ತಿತ್ತು ಎಂದು ಮಾಹಿತಿ ಪಡೆದು ತಿಳಿಸುವಿರಾ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿ ಸಾರಿಗೆ ನೌಕರರಿಗೆ ಅರ್ಧ ಸಂಬಳ, ಈ ತಿಂಗಳ ಸಂಬಳ…

Read More

ತಿಕೋಟಾ ತಾಲ್ಲೂಕಿನೆಲ್ಲೆಡೆ ಸುರಿದ ಭಾರಿ ಮಳೆ | ತುಂಬಿ ಹರಿದ ಹಳ್ಳ ಕೊಳ್ಳ | ದೇವಸ್ಥಾನ ಜಲಾವೃತ | ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲ್ಲೂಕಿನೆಲ್ಲೆಡೆ ಮಂಗಳವಾರ ರಾತ್ರಿ ಸುರಿದ ಮಳೆದ ಹಳ್ಳಕೊಳ್ಳಗಳು, ಬಾಂದಾರಗಳು ತುಂಬಿ ಹರಿಯುತ್ತಿದ್ದು ಹಲವೆಡೆ ಅಪಾಯಮಟ್ಟ ಮೀರಿ ಸೇತುವೆ ಮೇಲೆ ನೀರು ಹರಿಯುತ್ತಿದೆ.ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ಹಳ್ಳ ಬರಪೂರ ತುಂಬಿ ಹರಿಯುತ್ತಿದ್ದು, ದೇವಸ್ಥಾನ ಸಂಪೂರ್ಣ ನೀರಿನಲ್ಲಿ ಮುಳುಗಿದೆ. ಗರ್ಭಗುಡಿಯಲ್ಲಿ ಆರೇಳು ಅಡಿ ನೀರು ನಿಂತಿದ್ದು ಪೂಜಾ ಕೈಂಕರ್ಯ ಸ್ಥಗಿತಗೊಂಡಿದೆ. ಸೇತುವೆ ಮೇಲೆ ಅಪಾಯ ಮಟ್ಟ ಮೀರಿ ನೀರು ಹರಿಯುತ್ತಿದ್ದು, ನೀರಿನ ಜೊತೆ ಚೆಲ್ಲಾಟ ಆಡುತ್ತಾ ಬೈಕ್ ಮೇಲೆ ಯುವಕರು ಸೇತುವೆ ದಾಟುವಾಗ ಬೈಕ್ ನೀರಿನಲ್ಲಿ ಕೊಚ್ಚಿ ಹೋಗಿದೆ. ಬೈಕ್ ಸವಾರ ಜಸ್ಟ ಮಿಸ್ ಆಗಿ ದಡ ಸೇರಿದ್ದಾನೆ. ತಾಜಪುರ ರಸ್ತೆ ಸೇತುವೆ ಮೇಲೆ ನೀರು ಇರುವದರಿಂದ ಶಾಲಾ ಮಕ್ಕಳಿಗೆ ತೊಂದರೆಯಾಯಿತು. ಸ್ಥಳಿಯರು ಮಕ್ಕಳಿಗೆ ಸಹಾಯ ಮಾಡಿ ಸೇತುವೆ ದಾಟಿಸಿದರು.ಅಧಿಕಾರಿ ಭೇಟಿ: ಕೆಜಿಎಸ್ ಶಾಲೆಗೆ ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಡಿ‌.ಮೋಸಲಗಿ,…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕು ಆಡಳಿತದ ವತಿಯಿಂದ ಆ.೧೫ರಂದು ಆಯೋಜಿಸುವ ೭೯ನೇ ಸ್ವಾತಂತ್ಯೋತ್ಸವದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಹಿನ್ನೆಲೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಚಡಚಣ ತಹಶೀಲ್ದಾರ ಸಂಜಯ ಇಂಗಳೆ ಅವರು ಕರೆ ನೀಡಿದರು.ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಸ್ವಾತಂತ್ರೋತ್ಸವದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ವಾತಂತ್ರೋತ್ಸವದ ದಿನಾಚರಣೆ ಪ್ರಯುಕ್ತ ಆ.೧೫ರಂದು ಬೆಳಿಗ್ಗೆ ೮:೩೦ ಕ್ಕೆ ಪಟ್ಟಣದ ಶ್ರೀ ಸಂಗಮೇಶ್ವರ ಶಾಲಾ ಕಾಲೇಜ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಪಟ್ಟಣದ ಪ್ರಮುಖ ಬೀದಿ ಹಾಗೂ ವೃತ್ತಗಳ ಸ್ವಚ್ಛತೆ ಕುರಿತು ಪ.ಪಂ.ಮುಖ್ಯಾಧಿಕಾರಿಗಳು ನಿಗಾ ವಹಿಸಬೇಕು. ಸ್ವಾತಂತ್ರೋತ್ಸವದ ದಿನಾಚರಣೆ ಸಮಾರಂಭದಲ್ಲಿ ಯಾವುದೇ ಗೊಂದಲಗಳಾದಂತೆ ಅಚ್ಚುಕಟ್ಟಾಗಿ ನಿರ್ವಹಿಸಲು ವಿವಿಧ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.ಪ.ಪಂ.ಮುಖ್ಯಾಧೀಕಾರಿ ಬಾಬಾಸಾಹೇಬ ತಾವಸೆ, ತಾ.ಪಂ.ಅಧಿಕಾರಿ ಸಂಜಯ ಖಡಗೇಕರ, ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ವಿಜಯಕುಮಾರ ಹವಾಲ್ದಾರ, ಪ.ಪಂ.ಸದಸ್ಯ ಶ್ರೀಕಾಂತ ಗಂಟಗಲಿ, ಚೇತನ ನೀರಾಳೆ ಸೇರಿದಂತೆ ಪ.ಪಂ.ಸದಸ್ಯರು, ಶಿರಸ್ತೆದಾರ ರವಿ ಹಡಪದ, ಕಂದಾಯ ನೀರಿಕ್ಷಕ ವಿಠ್ಠಲ ಕೋಳಿ, ಆಹಾರ…

Read More

ರೂ.೫ಕೋಟಿ ವೆಚ್ಚದ ಮೌಲಾನ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಅಶೋಕ ಮನಗೂಳಿ ಮಾಹಿತಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜ್ಯ ಸರಕಾರ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡುವುದರ ಜೊತಗೆ ಪ್ರಾಥಮಿಕ, ಪ್ರೌಢ ಶಾಲೆ-ಕಾಲೇಜುಗಳ ಮೂಲಭೂತ ಸೌಕರ್ಯಕ್ಕಾಗಿ ವಿಶೇಷ ಅನುದಾನ ನೀಡುತ್ತಿದೆ. ಹಿಕ್ಕನಗುತ್ತಿ ಗ್ರಾಮದಲ್ಲಿ ಅಲ್ಪ ಸಂಖ್ಯಾತರಿಗಾಗಿಯೇ ರೂ.೧೬ಕೋಟಿ ಅಲ್ಪ ಸಂಖ್ಯಾತರ ಮೂರಾರ್ಜಿ ವಸತಿ ಶಾಲೆ ಮತ್ತು ರೂ.೮ಕೋಟಿಯ ವಸತಿ ಗೃಹಗಳಿಗಾಗಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಜಯಪುರ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ರೂ.೫ಕೋಟಿ ವೆಚ್ಚದ ಮೌಲಾನ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮತಕ್ಷೇತ್ರಕ್ಕೆ ೨ ಮೌಲಾನ ಆಜಾದ್ ಶಾಲೆಯನ್ನು ನೀಡುವ ಜೊತೆಗೆ ಸಿಂದಗಿ ನಗರದ ೩೨ಕೋಣೆಯ ರೂ.೫ಕೋಟಿ ವೆಚ್ಚದ ಅನುದಾನವನ್ನು ರಾಜ್ಯ…

Read More

ರೈತರಿಗೆ ಸಮರ್ಪಕ ರಸಗೊಬ್ಬರ ಪೂರೈಸಲು ಆಗ್ರಹಿಸಿ ಕರವೇ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರಕಾರದಲ್ಲಿ ಸಾಕಷ್ಟು ಗೊಬ್ಬರವಿದ್ದರೂ ಅದರ ಅಭಾವವನ್ನು ಸೃಷ್ಟಿ ಮಾಡಿ ರಸಗೊಬ್ಬರಕ್ಕಾಗಿ ರಾಜ್ಯದಲ್ಲಿ ರೈತರು ಪರದಾಡುವಂತೆ ರಾಜ್ಯ ಸರಕಾರ ಮಾಡಿದೆ ಎಂದು ಕರವೇ ಮುಖಂಡ ಸಿದ್ದು ಬುಳ್ಳಾ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ರೈತರಿಗಾಗಿ ಸಮರ್ಪಕವಾಗಿ ರಸಗೊಬ್ಬರ ಪೂರೈಸುವಂತೆ ಪ್ರತಿಭಟಿಸಿ, ತಾಲೂಕು ದಂಡಾಧಿಕಾರಿ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ರಸಗೊಬ್ಬರ ಅಭಾವವನ್ನು ಸೃಷ್ಟಿ ಮಾಡಿ ಅದರ ಬೆಲೆಯನ್ನು ಹೆಚ್ಚಿಗೆ ಮಾಡಿ ದ್ವಿಗುಣಗೊಳಿಸಿ ಸರಕಾರ ದುಪ್ಪಟ್ಟು ಬೆಲೆಯನ್ನು ರೈತರ ಮೇಲೆ ಹಾಕುವ ಹುನ್ನಾರ ತಾಲೂಕು ಮತ್ತು ಇಡೀ ರಾಜ್ಯದಲ್ಲಿ ಅಧಿಕಾರಿಗಳು ಮತ್ತು ವರ್ತಕರು ಮಾಡುತ್ತಿದ್ದಾರೆ. ಇದು ಮೊದಲು ನಿಲ್ಲಬೇಕು. ಕೃಷಿ ಅಧಿಕಾರಿಗಳು ಎಲ್ಲ ಗೋದಾಮುಗಳನ್ನು ಪರಿಶೀಲನೆ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಕರವೇ ಗೋದಾಮುಗಳಿಗೆ ಮುತ್ತಿಗೆ ಹಾಕಿಲಾಗುವುದು ಎಂದು ಎಚ್ಚರಿಕೆ ನೀಡಿದರು.ಈ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಯೋಗದೊಡನೆ ಸ್ವಾತಂತ್ರೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸೋಣ ಎಂದು ತಹಶೀಲ್ದಾರ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಜರುಗಿದ ಸ್ವಾತಂತ್ರೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಾತಂತ್ರೋತ್ಸವದ ಸಂಭ್ರಮದ ಆಚರಣೆಗೆ ಎಲ್ಲ ಇಲಾಖೆ, ಸಂಘ ಸಂಸ್ಥೆಗಳ ಸಹಕಾರ ಅಗತ್ಯ ಆದ್ದರಿಂದ ಸರ್ಕಾರದ ನಿರ್ದೇಶನ ಜೊತೆಗೆ ನಿಮ್ಮ ಸಲಹೆಗಳನ್ನು ಅನುಸರಿಸಿ ಆಚರಣೆ ಮಾಡೋಣ ಎಂದರು.ಸಭೆಯಲ್ಲಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ, ಡಾ:ಆರ್.ಆರ್.ನಾಯಿಕ್, ಪ್ರಕಾಶ ಗುಡಿಮನಿ, ಕಾಶೀನಾಥ ತಳಕೇರಿ, ಸಿದ್ದು ಮೇಲಿಮನಿ, ಪ್ರಕಾಶ ಮಲ್ಲಾರಿ, ರಾಜು ಸಿಂದಗೇರಿ, ಅಜೀಜ್ ಯಲಗಾರ ಮಾತನಾಡಿದರು.ಸಭೆಯಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನ, ಶಾಲಾ ಮಕ್ಕಳಿಗೆ ಉಪಹಾರದ ವ್ಯವಸ್ಥೆ, ಕಾರ್ಯಕ್ರಮಪೂರ್ಣ ಶಾಸಕರ ಉಪಸ್ಥಿತಿ, ಸರ್ಕಾರದ ನಡಾವಳಿ ಅನುಸಾರ ವೇದಿಕೆಯಲ್ಲಿ ಗಣ್ಯರ ಹಾಜರಾತಿ ಕುರಿತು ಚರ್ಚೆಗಳಾದವು.ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಸಿಂದಗಿ ಬಿಇಓ ಎಂ.ಬಿ.ಯಡ್ರಾಮಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ, ಪಿಎಸ್‌ಐ ಸಚೀನ್ ಆಲಮೇಲಕರ, ಉಪತಹಶೀಲ್ದಾರ ಸುರೇಶ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಚರಂಡಿ ಕಾಮಗಾರಿ ಹಿನ್ನೆಲೆಯಲ್ಲಿ ಮಳೆ ನೀರು ಮನೆ ಬಾಗಿಲಿನವರೆಗೆ ಬಂದು ಭಯಗೊಳಿಸಿದ ಘಟನೆ ಬುಧವಾರ ದೇವೂರ ತಾಂಡಾ-೨ರಲ್ಲಿ ಜರುಗಿತು.ತಾಲ್ಲೂಕಿನ ದೇವೂರ ತಾಂಡಾ-೨ರಲ್ಲಿ ಬುಧವಾರ ಬೆಳಿಗ್ಗೆ ಸುರಿದ ಮಳೆ ಭಾರಿ ಅವಾಂತರಕ್ಕೆ ಕಾರಣವಾಯಿತು. ತಾಂಡಾದಲ್ಲಿ ಜರುಗುತ್ತಿರುವ ಚರಂಡಿ ಕಾಮಗಾರಿ ಕಾರಣದಿಂದ ಮಳೆಯ ನೀರು ಮನೆಯ ಬಾಗಿಲಿನವರೆಗೆ ನುಗ್ಗಿ ಬರಲು ಆರಂಭಿಸಿದ್ದು, ಗ್ರಾಮಸ್ಥರನ್ನು ಭಯಗೊಳಿಸಿತು. ನಂತರ ಮಳೆಯ ವೇಗ ಕಡಿಮೆಯಾಗುತ್ತಿದ್ದಂತೆಯೇ ನೀರಿನ ಹರಿಯುವಿಕೆಯು ಸಹ ಕಡಿಮೆಯಾಗಿ ನಿಟ್ಟುಸಿರು ಬಿಡುವಂತಾಯಿತು. ಅದಾಗ್ಯೂ ಮಳೆ ನೀರು ಮನೆಗಳಿಗೆ ನುಗ್ಗಿದೆ, ದಿನಬಳಕೆ ವಸ್ತುಗಳು ಹಾನಿಗೊಳಗಾಗಿವೆ ಎಂಬ ವದಂತಿ ತಾಲ್ಲೂಕು ಆಡಳಿತಕ್ಕೆ ತಲುಪಿದ ಕಾರಣ ತಹಶೀಲ್ದಾರ ಹಾಗೂ ಇಓ ಖುದ್ದಾಗಿ ತಾಂಡಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಅಧಿಕಾರಿಗಳು ಭೇಟಿ ನೀಡುತ್ತಿದ್ದಂತೆಯೇ, ಮಳೆ ನೀರು ತಾಂಡಾದಲ್ಲಿ ಮನೆ ಬಾಗಿಲಿನವರೆಗೆ ಬಂದು ಹೋಗಿದ್ದು ನಿಜ. ಆದರೆ ಮನೆಯೊಳಗೆ ನುಗ್ಗಿಲ್ಲ ಹಾಗೂ ಯಾವುದೇ ದಿನಬಳಕೆಯ ವಸ್ತುಗಳು ಹಾಳಾಗಿಲ್ಲ ಎಂದು ನಿವಾಸಿಗಳು ತಿಳಿಸಿದರು.ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಮಣೂರ ಗ್ರಾಮ ಪಂಚಾಯಿತಿ ಅಧ್ಯಕ್ಷ…

Read More