Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎಂ.ಎ., ಬಿ.ಲಿಬ್ಎಸ್.ಸಿ, ಎಂ.ಲಿಬ್ಎಸ್.ಸಿ, ಎಂಎಸ್ಡಬ್ಲುö್ಯ, ಎಂ.ಕಾಂ, ಎಂ.ಎಸ್.ಸಿ, ಎಂಸಿಎ, ಎಂಬಿಎ ಸೇರಿದಂತೆ ವಿವಿಧ ಸ್ನಾತಕೋತ್ತರ, ಪಿಜಿ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಆಸಕ್ತ ವಿದ್ಯಾರ್ಥಿನಿಯರು ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ ೨೫ ಕೊನೆಯ ದಿನವಾಗಿದೆ.ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್www.kswu.ac.in ಅಥವಾ ಯುಯುಸಿಎಂಎಸ್ ಮೂಲಕ ಆನ್ಲೈನ್ನಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ಮುದ್ರಿತ ಪ್ರತಿಯನ್ನು ವಿಶ್ವವಿದ್ಯಾನಿಲಯದ ಆಯಾ ವಿಭಾಗಗಳ ಮುಖ್ಯಸ್ಥರ ಕಚೇರಿಗೆ ತಲುಪಿಸಬೇಕು ಎಂದು ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಹಿಳಾ ವಿಶ್ವವಿದ್ಯಾಲಯದಲ್ಲಿ ಸದ್ಯ ಈ ಕೆಳಗಿನ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದ್ದು ಆಸಕ್ತ ವಿದ್ಯಾರ್ಥಿನಿಯರು ಪ್ರವೇಶ ಪಡೆದುಕೊಳ್ಳಬಹುದು:ಲಭ್ಯವಿರುವ ಕೋರ್ಸ್ಗಳು: ಕಲಾ ನಿಕಾಯ: ಎಂ.ಎ- ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಪ್ರದರ್ಶಕ ಕಲೆಗಳ ವಿಭಾಗ (ಎಂ.ಮ್ಯೂಜಿಕ್-ಹಿಂದೂಸ್ತಾನಿ ಮ್ಯೂಜಿಕ್), ಸಮಾಜ ವಿಜ್ಞಾನ ನಿಕಾಯ: ಎಂ.ಎ.: ಸಮಾಜಶಾಸ್ತ್ರ, ರಾಜ್ಯಶಾಸ್ತ್ರ, ಅರ್ಥಶಾಸ್ತç, ಇತಿಹಾಸ, ಮಹಿಳಾ ಅಧ್ಯಯನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ. ಗ್ರ್ರಂಥಾಲಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ನಗರದ ಹೊರವಲಯದ ಬುರಣಾಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಟರ್ಮಿನಲ್ ಕಟ್ಟಡ, ಎಟಿಸಿ ಕಟ್ಟಡ, ಏಪ್ರೋನ್, ಐಸೋಲೇಶನ್ ಬೇ, ರನ್ವೇ ಮಾರ್ಗ ಹಾಗೂ ಇತರೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಅವರು ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಬಾಕಿ ಇರುವ ಅಡೆ-ತಡೆಗಳನ್ನು ನಿವಾರಿಸಿಕೊಂಡು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.ಈ ಸಂದರ್ಭದಲ್ಲಿ ಅಧಿಕಾರಿಗಳು ಮಾಹಿತಿ ನೀಡಿ, ವಿಮಾನ ನಿಲ್ದಾಣದ ಕಾರ್ಯಾಚರಣೆಗಾಗಿ ಬಾಕಿ ಇರುವ ಪರಿಸರ ನಿರಾಕ್ಷೇಪಣಾ ಪತ್ರ ಹಾಗೂ ಅಗ್ನಿಶಾಮಕ ವ್ಯವಸ್ಥೆ ಪ್ರಕ್ರಿಯೆ ಅನುಮತಿ ಬಾಕಿ ಇದ್ದು, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರವೇ ಡಿಜಿಸಿಎ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿವೀಕ್ಷಣೆ ಮಾಡಲಿದೆ ಎಂದು ಅವರು ಮಾಹಿತಿ ನೀಡಿದರು.ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಸಿ.ಎಸ್.ಪೊಲೀಸ್ಪಾಟೀಲ, ಜಲಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದ ಬಳಿಯ ಲೋಣ ಕ್ರಾಸ್ದಿಂದ ಬರಗೂಡಿ ಹೋಗುವ ಮಾರ್ಗ ಒತ್ತುವರಿ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಲಚ್ಯಾಣ ಗ್ರಾಮದ ರೈತರು ಇಂಡಿ ಪಟ್ಟಣದಲ್ಲಿನ ಮಿನಿ ವಿಧಾನ ಸೌಧದಲ್ಲಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತçದ ಅವರಿಗೆ ಮಂಗಳವಾರದಂದು ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ದಲಿತ ಮುಖಂಡ ಕಲ್ಲಪ್ಪ ದೊಡಮನಿ ಮಾತನಾಡಿ, ಲಚ್ಯಾಣ ಗ್ರಾಮದಲ್ಲಿ ದಲಿತ ಸಮಾಜದ ಹಲವು ಜನರು ಜಮೀನಿಗೆ ದಾರಿ ಇಲ್ಲದೆ ಪರದಾಡುತ್ತಿದ್ದಾರೆ. ಈ ಹಿಂದೆ ಇದ್ದ ಹಳೆಯ ಕಾಲದ ಬರಗೂಡಿ ರಸ್ತೆ ಹಲವು ವರ್ಷಗಳಿಂದ ಸಂಪೂರ್ಣ ಬಂದ್ ಆಗಿದೆ. ಇದರಿಂದ ಬಡ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ ವಿವರಿಸಿದರು.ಇನ್ನೋರ್ವ ದಲಿತ ಮುಖಂಡ ಪಂಡಿತ ಹತ್ತಳ್ಳಿ ಮಾತನಾಡಿ, ಮಳೆಗಾಲದ ಈ ಸಂದರ್ಭದಲ್ಲಿ ಮುಂಗಾರು ಬೇಸಾಯ ಮಾಡಲೆಂದು ಜಮೀನಿಗೆ ಸಾಗಲು ಮಾರ್ಗವೇ ಇಲ್ಲ. ಲೋಣ ಕ್ರಾಸ್ನಿಂದ ೧ ಕಿ.ಮೀ. ದಾರಿ ಬಂದ್ ಆಗಿದೆ. ಈ ಕುರಿತು ಕಳೆದ ೫ ವರ್ಷಗಳ ಹಿಂದೆ ತಹಶೀಲ್ದಾರರಿಗೆ ಈ ಹಿಂದಿನ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ…
ಉದಯರಶ್ಮಿ ದಿನಪತ್ರಿಕೆ ಇಂಡಿ: ‘ವಿದ್ಯಾರ್ಥಿಗಳು ಓದುವ-ಬರೆಯುವ-ಜ್ಞಾನ ಬೆಳೆಸಿಕೊಳ್ಳುವ ಜೊತೆಗೆ ಬದುಕಿಗೆ ಅಗತ್ಯವಾದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು’ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಪಟ್ಟಣದ ಅಂಜುಮನ್ ಪ್ರೌಢಶಾಲೆಯಲ್ಲಿ ಬುಧವಾರದಂದು ಸಮಾಜ ಸೇವಕ ಹಸನ ಮುಜಾವರ ಇವರ ವತಿಯಿಂದ ‘ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್, ಪೆನ್ನು ವಿತರಣೆ’ ಕಾರ್ಯಕ್ರಮದ ಉಪನ್ಯಾಸಕರಾಗಿ ಅವರು ಮಾತನಾಡಿದರು.’ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದುವ ಜೊತೆಗೆ ಗುರುಭಕ್ತಿ, ಶ್ರದ್ಧೆ, ಆಸಕ್ತಿ, ಸ್ವಯಂ ಶಿಸ್ತನ್ನು ಮೈಗೂಡಿಸಿಕೊಂಡು ಸಾಧನೆಯ ಮಾರ್ಗದಲ್ಲಿ ಸಾಗಬೇಕು. ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು’ಎಂದು ಹೇಳಿದರು.ಅಂಜುಮನ್ ಇಸ್ಲಾಂ ಕಮೀಟಿ ನಿರ್ದೇಶಕ ಹಾಗೂ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಜಾವೇದ್ ಮೊಮಿನ್ ಮಾತನಾಡಿ, ಮಕ್ಕಳಿಗೆ ಉಚಿತ ನೋಟ್ ಬುಕ್,ಪೆನ್ನುಗಳನ್ನು ವಿತರಿಸುವುದು ಸಮಾಜಮುಖಿ ಕಾರ್ಯವಾಗಿದೆ. ಹಸನ್ ಮುಜಾವರ ಅವರ ಈ ಸಮಾಜ ಸೇವೆ ನಿಜಕ್ಕೂ ಮಾದರಿಯಾಗಿದೆ. ಇಂದಿನ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಿದರೆ ಅವರು ಸುಂದರ ಬದುಕನ್ನು ಕಟ್ಟಿಕೊಳ್ಳಬಲ್ಲರು ಎಂದು ಹೇಳಿದರು.ಧರ್ಮ ಗುರು ಮುಫ್ತಿ ಅಬ್ದುಲ್ ರೆಹಮಾನ್ ಅರಬ ಸಾನಿಧ್ಯ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲ್ಲೂಕಿನ ಢವಳಗಿ ಗ್ರಾಮದ ಸರಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು.ಕ್ರೀಡಾ ಧ್ವಜಾರೋಹಣವನ್ನು ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಮಾಂತೇಶ ದೊಡಮನಿ ನೆರವೇರಿಸಿದರು. ಕ್ರೀಡಾಜೋತಿಯನ್ನು ಗ್ರಾಮದ ಹಿರಿಯರಾದ ಮಾದೇವಪ್ಪ ಕೊಣ್ಣೂರ ಸ್ವೀಕರಿಸಿದರು. ಶಾಲೆಯ ದೈಹಿಕ ಶಿಕ್ಷಕ ಮಹೇಶ ಕೊಣ್ಣೂರ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಮತಿ ಮಲ್ಲಮ್ಮ ನಾಗರಾಳ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಗ್ರಾಮ ಪಂಚಾಯತ ದ್ವೀತಿಯ ದರ್ಜೆಯ ಲೆಕ್ಕ ಸಹಾಯಕ ಎಮ್.ಕೆ.ಗುಡಿಮನಿ ಕ್ರೀಡಾಕೂಟವನ್ನು ಗುಂಡು ಎಸೆದು ಕ್ರೀಡಾಕೂಟಕ್ಕೆೆ ಚಾಲನೆ ನೀಡಿದರು. ಈ ವೇಳೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಆನಂದ ಹೀರೆಮಠ, ಉಪಾಧ್ಯಕ್ಷರಾದ ಸುರೇಶಗೌಡ ಪಾಟೀಲ ಸೇರಿದಂತೆ ಕ್ಲಸ್ಟರ್ ಮಟ್ಟದ ಎಲ್ಲಾ ಶಾಲೆಯ ಮುಖ್ಯೋಪಾಧ್ಯಾಯರು,ದೈಹಿಕ ಶಿಕ್ಷಕರು ಹಾಗೂ ಗ್ರಾಮಸ್ಥರು ಇದ್ದರು. ಸಮಯ ಪ್ರಜ್ಞೆ ಮರೆತ ಅಧಿಕಾರಿಗಳು ಕಾರ್ಯಕ್ರಮ ಚಾಲನೆಗೊಂಡು ಇನ್ನೇನು ಮುಗಿಯುವ ಹಂತಕ್ಕೆ ಬಂದು ತಲುಪಿದಾಗ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ವೈ.ಕವಡಿ, ಅಕ್ಷರ…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಇಂಗ್ಲೀಷ್ನಲ್ಲಿ ಒಂದು ಮಾತಿದೆ. ‘ಲೈಫ್ ಈಸ್ ಶಾರ್ಟ್ ಮೇಕ್ ಇಟ್ ಸ್ವೀಟ್.’ ಬದುಕು ಚಿಕ್ಕದು ಅದನ್ನು ಸವಿಸವಿಯಾಗಿ ಸಂತಸದಿಂದ ಕಳೆಯಬೇಕೆನ್ನುವುದು ಇದರರ್ಥ. ನಮ್ಮ ಹಿರಿಯರು ಬದುಕು ಮೂರು ದಿನದ ಸಂತೆ ಎಂದಿದ್ದಾರೆ. ಬದುಕಿನ ಕ್ಷಣ ಭಂಗುರತೆಯನ್ನು ಸಾರಿದ್ದಾರೆ. ಬದುಕು ನಮ್ಮ ಕೈಯಲಿಲ್ಲ ಅದು ಹೇಗೆ ಬರುತ್ತದೆಯೋ ಹಾಗೆಯೇ ಅದನ್ನು ಸ್ವೀಕರಿಸಬೇಕು ಎನ್ನುವ ಮಾತು ಕಿವಿಗೆ ಬೀಳುತ್ತಲೇ ಇರುತ್ತದೆ. ಏನೇ ಆಗಲಿ ನಾವೇನಾಗಿದ್ದಾವೇಯೋ ಅದೇ ನಮ್ಮ ಮಕ್ಕಳು ಆಗಿದ್ದಾರೆ. ಅಂದರೆ ಮಕ್ಕಳು ನಮ್ಮ ಪ್ರತಿಬಿಂಬಗಳು. ಮಕ್ಕಳ ನಡೆ ನುಡಿಗಳಲ್ಲಿ ಹಿತಮಿತವಾದ ಹಿಡಿತ, ಎಂದಿಗೂ ಬತ್ತದ ಉತ್ಸಾಹ, ಜೀವನೋತ್ಸಾಹದ ನೀರಬುಗ್ಗೆ ಮಕ್ಕಳಲ್ಲಿ ಟಿಸಿಲೊಡೆಯುವಂತೆ ಹೇಗೆ ಮಾಡುವುದು? ಭವಿಷ್ಯದ ನಾಗರಿಕರ ಬದುಕು ಆನಂದದತ್ತ ಪಯಣ ಮಾಡುವುದು ಹೇಗೆ ನೋಡೋಣ ಬನ್ನಿ.ಬಾಲ್ಯ ಅಂದು-ಇಂದುಸಾಮಾನ್ಯವಾಗಿ ಬಾಲ್ಯದಲ್ಲಿ ಆಟಿಕೆ ಸಾಮಗ್ರಿ ಇಲ್ಲವೇ ಕಂಡ ಕಂಡ ವಸ್ತುಗಳ ಮೇಲೆ ವ್ಯಾಮೋಹ ಇರುತ್ತದೆ. ಎಷ್ಟೋ ಸಲ ಬಡತನದ ಬದುಕಿನಲ್ಲಿ ತಂದೆ ತಾಯಿಗಳು ಬೇಕಾದ…
ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ 13 ನೆಯ ದಿವಸದ ಶರಣ ಮಾಸದ ಅನುಭಾವ ಮಾಲಿಕೆಯಲ್ಲಿ ಪ್ರೊ.ಶಾರದಾ ಪಾಟೀಲ ಅವರು ಬಹುರೂಪಿ ಚೌಡಯ್ಯನವರ ಬಗೆಗೆ ಅತ್ಯಂತ ಅದ್ಭುತವಾಗಿ ತಮ್ಮ ಉಪನ್ಯಾಸವನ್ನು ನೀಡಿದರು.ಬಹುರೂಪಿ ಚೌಡಯ್ಯನವರು ಒಬ್ಬ ದಿಟ್ಟ ಶರಣ, ಬಸವ ಪ್ರೇಮಿ.ಇವರು ಬಹುರೂಪಿಯ ಕಾಯಕದ ಶ್ರೇಷ್ಠ ಕಲಾವಿದ ಅತ್ಯಂತ ಸುಂದರ ಅನುಭಾವದಿಂದ ಶರಣರ ಮನವನ್ನು ಗೆದ್ದ ಧೀಮಂತ. ಬಹುರೂಪಿ ಚೌಡಯ್ಯನವರ ಹುಟ್ಟೂರು ರೇಕಳಿಕೆ. ಬಾಲ್ಯದಿಂದಲೇ ಆಧ್ಯಾತ್ಮಿಕ ಮಾರ್ಗಕ್ಕೆ ಮನಸೋತ ಇವರು ವಿಭಿನ್ನ ವೇಷಭೂಷಣ ಮತ್ತು ಬಹುಪಾತ್ರಾಭಿನಯದ ಮೂಲಕ ಜನರನ್ನು ರಂಜಿಸುವ ಕಾಯಕ ಮಾಡುತ್ತಿದ್ದರು. ಇದರ ಜೊತೆಗೆ ಜನರ ಆಪ್ತ ಮಾರ್ಗದರ್ಶಕರಾಗಿಯೂ ತಮ್ಮ ಸೇವೆಯನ್ನು ವಿಸ್ತರಿಸಿಕೊಂಡಿದ್ದರು. ಕಲ್ಯಾಣದ ಶರಣರಲ್ಲಿ ಬಹುಮುಖ್ಯ ಪಾತ್ರ ವಹಿಸಿದ ಬಹುರೂಪಿ ಚೌಡಯ್ಯನವರು ” ರೇಕಣ್ಣಪ್ರಿಯ ನಾಗಿನಾಥ ” ಎಂಬ ಅಂಕಿತವನ್ನು ಇಟ್ಟುಕೊಂಡಿದ್ದರು. ಚೌಡಯ್ಯನವರು ಪೂರ್ವಾಶ್ರಮದಲ್ಲಿ ನಾಥ ಪರಂಪರೆಯಿಂದ ಪ್ರಭಾವಿತರಾಗಿ ನಂತರದಲ್ಲಿ ಕಲ್ಯಾಣವನ್ನೇ ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡಿದ್ದರು. ಗಣ ಸಹಸ್ರ ನಾಮ,ಗುರುರಾಜ ಚರಿತ್ರೆ, ವೀರಶೈವಾಮೃತ ಮಹಾಪುರಾಣ,…
ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ 12 ನೆಯ ದಿವಸದ ಶರಣ ಮಾಸದ ಅನುಭಾವ ಮಾಲಿಕೆ – ದಿನಾಂಕ 4 ಆಗಸ್ಟ್ 2025 ರಂದು ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಪುಣೆ ಇದರ ಅಧ್ಯಕ್ಷರಾದ ಡಾ ಶಶಿಕಾಂತ ಪಟ್ಟಣ ಇವರು ಕಲ್ಯಾಣ ಅರಸರ ಚಾಲುಕ್ಯರ ಜೊತೆಗಿನ ಇತರ ರಾಜಮನೆತನಗಳ ಸಂಬಂಧದ ವಿಷಯವಾಗಿ ಮಾತನಾಡುತ್ತ ಕಲ್ಯಾಣ ಚಾಲುಕ್ಯರು ಮತ್ತು ಚಾಲುಕ್ಯ ಸಾಮ್ರಾಜ್ಯ ಮತ್ತೆ ಕ್ರಿ.ಶ. ೬೫೫ ರಲ್ಲಿಮೊದಲನೆಯ ವಿಕ್ರಮಾದಿತ್ಯನ ಮೂಲಕ ಮೇಲೆದ್ದಿತು. ಪಲ್ಲವರೊಂದಿಗಿನ ಸರಣಿ ಯುದ್ಧಗಳು ಕ್ರಿ.ಶ. ೭೪೦ ರಲ್ಲಿ ಚಾಲುಕ್ಯ ದೊರೆ ಎರಡನೇ ವಿಕ್ರಮಾದಿತ್ಯನ ವಿಜಯದೊಂದಿಗೆ ಕೊನೆಗೊಂಡವು. ಆದರೆ ಮತ್ತೆ ೭೫೦ ರಲ್ಲಿ ರಾಷ್ಟ್ರಕೂಟರ ದೊರೆ ದಂತಿದುರ್ಗ ಇವನ ಮೇಲೆ ಯುದ್ಧದಲ್ಲಿ ಸೋತ ನಂತರ ಆ ಕಾಲಕ್ಕೆ ಚಾಲುಕ್ಯ ಸಾಮ್ರಾಜ್ಯ ಪತನವಾಯಿತು.೯೭೦ ರ ದಶಕದಲ್ಲಿ ಚಾಲುಕ್ಯರ ವಂಶಜರಲ್ಲಿ ಒಬ್ಬನಾದ ಎರಡನೇ ತೈಲಪ ರಾಷ್ಟ್ರಕೂಟರನ್ನು ಸೋಲಿಸಿ ಗುಜರಾತ್ ಪ್ರದೇಶವನ್ನು ಬಿಟ್ಟು ಚಾಲುಕ್ಯ ಸಾಮ್ರಾಜ್ಯದ ಉಳಿದ ಭಾಗಗಳನ್ನೆಲ್ಲ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ವಾರ್ಡ ನಂ.9 ರಲ್ಲಿ ಬರುವ ರಾಮ ಮಂದಿರ ಮುಖ್ಯ ರಸ್ತೆಯಿಂದ ಎಸ್.ಎಸ್.ಕಾಂಪ್ಲೆಕ್ಸ್ ಮೂಲಕ ಸಂಗೀತ ಮೊಬೈಲ್ ಸೆಂಟರ್ ವರೆಗೆ ರೂ.30 ಲಕ್ಷ ಅನುದಾನದಲ್ಲಿ ಒಳಚರಂಡಿ ಹಾಗೂ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಸೋಮವಾರ ಭೂಮಿಪೂಜೆ ನೆರವೇರಿಸಿದರು.ಭೂಮಿಪೂಜೆ ಬಳಿಕ ಶಾಸಕರು ನೆರೆದ ಸಾರ್ವಜನಿಕರ ಅಹವಾಲು ಆಲಿಸಿದರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ವಿಠ್ಠಲ ಹೊಸಪೇಟ, ಮುಖಂಡರಾದ ಸದಾಶಿವ ಗುಡ್ಡೋಡಗಿ, ಡಿ.ಎಸ್.ಪಾಟೀಲ, ಪ್ರವೀಣ ಕರಡಿ, ಈರಪ್ಪ ಇಲಕಲ್ಲ ಸೇರಿದಂತೆ ಮತ್ತಿತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲೂಕಿನ ಬಾಬಾನಗರ ಗ್ರಾಮದ ಬಸವರಾಜ ಮಸಳಿ ಹಾಗೂ ಕಳ್ಳಕವಟಗಿ ಗ್ರಾಮದ ಸಚಿನ ಗದ್ಯಾಳ ಯುವಕರಿಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಡಹಟ್ಟಿ ಗ್ರಾಮದಲ್ಲಿ ಬ್ರೋಡಾಕಾಸ್ಟ ಪ್ರೈವೇಟ್ ಲಿಮಿಟೆಡ್ ಅವರ ಸಹಯೋಗದಲ್ಲಿ ಪುನೀತ್ ರಾಜಕುಮಾರ್ ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.ಕಳೆದ ಹಲವಾರು ವರ್ಷಗಳಿಂದ ಸಮಾಜ ಸೇವೆ, ಶಿಕ್ಷಣ ಪ್ರೇಮಿಗಳಾಗಿದ್ದು ಕನ್ನಡ ನಾಡಿನ ನೆಲ, ಜಲ, ಭಾಷೆಯ ಹಿತಕ್ಕಾಹಿ ಮತ್ತು ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿದ ಇವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಇವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
