Author: editor.udayarashmi@gmail.com

ಸಂಸದ ರಮೇಶ ಜಿಗಜಿಣಗಿ ಅವರಿಂದ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗದಗದಿಂದ ಮುಂಬಯಿಗೆ ಸಂಚರಿಸುವ ರೈಲ್ವೆಗೆ ಇಂಡಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಸೌಲಭ್ಯ ಕಲ್ಪಿಸಬೇಕು ಎಂದು ಸಂಸದರಾದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.‌ನಿಂಬೆ ಬೆಳೆಯ ಜಾಗತಿಕ ಟ್ಯಾಗ್ ಪಡೆದಿರುವ ದೇಶದ ಎಲ್ಲ ಕಡೆ ನಿಂಬೆ ಹಣ್ಣು ಸರಬರಾಜು ಮಾಡುವ ಕರ್ನಾಟಕ ಮಹಾರಾಷ್ಟ್ರದ ಗಡಿ ಭಾಗವಾಗಿರುವ‌ ಇಂಡಿ ಸಾಕಷ್ಟು ವ್ಯಾಪಾರ ವಹಿವಾಟಿನಲ್ಲಿ ಮುಂಚೂಣಿಯಲ್ಲಿದೆ. ಜೊತೆಗೆ ಅತ್ಯುತ್ತಮ ಗುಣಮಟ್ಟದ ದ್ರಾಕ್ಷಿ, ದಾಳಿಂಬೆ ಹಾಗೂ ಇತರೆ ವಾಣಿಜ್ಯ ಬೆಳೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡುತ್ತಿದ್ದು, ಜವಳಿ ವ್ಯಾಪಾರದ ಕೇಂದ್ರವಾಗಿರುವ ಇಂಡಿ ತಾಲೂಕು, ಪ್ರಸ್ತುತ ಪುರಸಭೆಯಿಂದ ನಗರಸಭೆ ಉನ್ನತೀಕರಣಗೊಂಡಿದೆ. ಇದರಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ರೆವೆನ್ಯೂ ಸಂಗ್ರಹಿಸುತ್ತಿರುವ ತಾಲೂಕಾಗಿದೆ ಎಂದವರು ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.ವಿಜಯಪುರ ಜಿಲ್ಲೆಯಲ್ಲಿಯೇ ಅತೀ ಹೆಚ್ಚಿನ ಜನಸಂಖ್ಯೆ ಹೊಂದಿರುವ ತಾಲೂಕಾಗಿರುವ ಇಂಡಿ ನಗರದಿಂದ ಕಡಿಮೆ ದೂರದಲ್ಲಿ ಭೀಮಾನದಿಯಿದೆ.‌ ಹೆಚ್ಚಿನ ರೈತರು ಕಬ್ಬು ಬೆಳೆಯುತ್ತಿದ್ದಾರೆ. ಈ ಎಲ್ಲ…

Read More

ವಿಜಯಪುರ ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಗರ್ಭಿಣಿಯರ ಆರೈಕೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗರ್ಭಿಣಿಯರ ಆರೋಗ್ಯ ತಪಾಸಣೆಯನ್ನು ೧೨ ರಿಂದ ೧೪ ಬಾರಿ ನಿಯಮಿತವಾಗಿ ಕೈಗೊಳ್ಳಬೇಕು. ಅನಿಮಿಯಾ, ಅಧಿಕ ರಕ್ತದೊತ್ತಡ, ಮಾನಸಿಕ ಆರೋಗ್ಯ ಮತ್ತು ವಿವಿಧ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿ ಗುರುತಿಸಿ ಉಚಿತ ಆರೋಗ್ಯ ಚಿಕಿತ್ಸೆಯನ್ನು ಒದಗಿಸಬೇಕು ಎಂದರು. ಜಿಲ್ಲೆಯಲ್ಲಿ ತಾಯಿ-ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಆರ್.ಸಿ.ಹೆಚ್ ತಂತ್ರಾಂಶದಲ್ಲಿ ಗರ್ಭಿಣಿಯರಿಗೆ ಕಾಲ-ಕಾಲಕ್ಕೆ ಆರೋಗ್ಯದ ಕುರಿತು ತಿಳಿವಳಿಕೆ ನೀಡುವಂತೆ ಸೂಚನೆ ನೀಡಿದರು.ಹೆರಿಗೆಯ ನಂತರ ಮಗುವಿಗೆ ಒಂದು…

Read More

ವಿಜಯಪುರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣ ಬಡಜನರಿಗೆ ಉದ್ಯೋಗ ಭದ್ರತೆ ಒದಗಿಸುವ ಮಹಾತ್ಮಾ ಗಾಂಧಿ ನರೇಗಾ ಮಹತ್ವದ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ) ತಾಂತ್ರಿಕ ಸಂಯೋಜಕರು, ತಾಲೂಕು ಎಮ್.ಐ.ಎಸ್ ಸಂಯೋಜಕರು, ಐ.ಇ.ಸಿ ಸಂಯೋಜಕರು, ಆಡಳಿತ ಸಹಾಯಕರು ಹಾಗೂ ತಾಂತ್ರಿಕ ಸಹಾಯಕರೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿವಿಧ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕೆಲಸದ ಬೇಡಿಕೆ ಸಲ್ಲಿಸಿದ ಪ್ರತಿಯೊಬ್ಬ ಅರ್ಹ ಕುಟುಂಬಗಳಿಗೆ ಕಾಲಮಿತಿಯೊಳಗೆ ಉದ್ಯೋಗ ಒದಗಿಸಬೇಕು ಹಾಗೂ ಕಾಮಗಾರಿಗಳನ್ನು ನಿಗದಿತ ಸಮಯದೊಳಗಾಗಿ ಪೂರ್ಣಗೊಳಿಸುವತ್ತ ವಿಶೇಷ ಗಮನ ಹರಿಸಬೇಕು ಎಂದು ಸೂಚಿಸಿದರು. ಉದ್ಯೋಗ ಮಾಡಿದ ಕೂಲಿಕಾರರ ವೇತನ ಪಾವತಿಯಲ್ಲಿ ಯಾವುದೇ…

Read More

ಆಲಮಟ್ಟಿ ಸಿಇ ಕಚೇರಿಗೆ ರೈತರ ಮುತ್ತಿಗೆ | ಕ್ಲೋಸರ್ ಕಾಮಗಾರಿ ವಿಳಂಬಕ್ಕೆ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಈ ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಜಿಲ್ಲೆಯ ಎಲ್ಲ ಕೆರೆಗಳನ್ನು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಲು ಕೂಡಲೇ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು ಹಾಗೂ ಕ್ಲೋಸರ್ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಅಖಂಡ ಕರ್ನಾಟಕ ರೈತ ಸಂಘ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಂಟಿಯಾಗಿ ಬೃಹತ್ ಪ್ರತಿಭಟನೆ ನಡೆಸಿದವು.ಆಲಮಟ್ಟಿಯ ರಾಮಲಿಂಗೇಶ್ವರ ದೇವಸ್ಥಾನದಿಂದ ನೂರಾರು ರೈತರು ಪ್ರತಿಭಟನಾ ಮೆರವಣಿಗೆ ನಡೆಸಿ ಸಿಇ ಕಚೇರಿಗೆ ತೆರಳಿ ಮುಖ್ಯ ಅಭಿಯಂತರ ಡಿ. ಬಸವರಾಜ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ತಾಲ್ಲೂಕಾಧ್ಯಕ್ಷ ಸೀತಪ್ಪ ಗಣಿ, “ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ವ್ಯಾಪ್ತಿಗೆ ಬರುವ ಮುಳವಾಡ ಮತ್ತು…

Read More

ವಿಜಯಪುರದ ಬಿ.ಎಲ್.ಡಿ.ಇ ಸ್ವಾಯತ್ತ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ವಾಯ್.ಎಂ.ಜಯರಾಜ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಂದಿನ ಮಕ್ಕಳ ಸ್ಥಿತಿ ಏನಾಗಿದೆ ಎಂದರೆ ಮನೆಗೆ ಬಂದ ಅತಿಥಿಗಳಿಗಿಂತ, ಪಾಲಕರಿಗಿಂತ ಮೋಬೈಲ್ ಮೇಲೆಯೇ ಹೆಚ್ಚು ಪ್ರೀತಿ. ಇದರಿಂದ ರಕ್ತ ಸಂಬಂಧಗಳು ನಶಿಸಿ ಹೋಗುತ್ತಿವೆ ಎಂದು ವಿಜಯಪುರದ ಬಿ.ಎಲ್.ಡಿ.ಇ ಸ್ವಾಯತ್ತ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ವಾಯ್.ಎಂ.ಜಯರಾಜ ವಿಷಾದ ವ್ಯಕ್ತಪಡಿಸಿದರು.ಸಿಂದಗಿ ನಗರದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ, ಸಾರಂಗಮಠದ ಜಿ.ಪಿ.ಪೋರವಾಲ ಕಲಾ ವಾಣಿಜ್ಯ ಮತ್ತು ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾವುದೇ ಕ್ಷೇತ್ರವಿರಲಿ ಅಲ್ಲಿ ಶ್ರದ್ದೆ ಮತ್ತು ಗಣನೀಯವಾಗಿ ಸೇವೆ ಮಾಡಿ ಸಾಧನೆ ಮಾಡಬೇಕು. ಇಂದು ಹೃದಯವಂತಿಕೆ ಮಾತುಗಳಿಗಿಂತ ಒಣ ಮಾತುಗಳೇ ಹೆಚ್ಚಾಗುತ್ತಿವೆ. ಇದರ ಬಗ್ಗೆ ವಿದ್ಯಾರ್ಥಿಗಳು ತೆಲೆಕೆಡಿಸಿಕೊಳ್ಳದೆ ಮುನ್ನುಗ್ಗಬೇಕು ಎಂದರು.ಈ ವೇಳೆ ಸ್ಥಳೀಯ ಸಾರಂಗಮಠದ ಪೀಠಾಧಿಪತಿ, ಸಂಸ್ಥೆಯ ಅಧ್ಯಕ್ಷರಾದ ಪೂಜ್ಯಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸಿ ಮಾತನಾಡಿ, ಇಂದಿನ ಯುವ ಜನಾಂಗ ಎಷ್ಟೇ ಓದಿದರು ದೊಡ್ಡ ಸ್ಥಾನಕ್ಕೆ ಏರಿದರು ವಿದ್ಯೆಯ…

Read More

ಶೃಂಗೇರಿ ಕ್ಷೇತ್ರದ ಮರು ಎಣಿಕೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ | ತನಿಖೆಯಿಂದ ಸತ್ಯ ಹೊರಬರಬೇಕೆಂದು ಆಗ್ರಹ ಬೆಂಗಳೂರು: ಶೃಂಗೇರಿಯಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯವರು ಕ್ರಿಮಿನಲ್‌ ಪಿತೂರಿ ಮಾಡಿ ವೋಟ್‌ ಚೋರಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದರು.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಇದು ಓಟ್ ಚೋರಿ ಅಲ್ಲ. ಓಟ್ ಡಕಾಯಿತಿ’ ಎಂದು ಆರೋಪಿಸಿದರು. ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರಿಗೆ ಬಂದಿದ್ದ ಮತಗಳು ಅಮಾನ್ಯ ಆಗಿವೆ. ಇಡೀ ದೇಶದಲ್ಲೇ ಇಂತಹ ಕ್ರಿಮಿನಲ್ ಚಟುವಟಿಕೆ ಎಲ್ಲೂ ನಡೆದಿಲ್ಲ.‌ ಈ ಬಗ್ಗೆ ತನಿಖೆ ನಡೆದು ಸತ್ಯ ಹೊರಬರಬೇಕು’ ಎಂದು ಅವರು ಆಗ್ರಹಿಸಿದರು.ಅಂಚೆ ಮತಗಳನ್ನು ಅಮಾನ್ಯ ಮಾಡುವಂತೆ ಜಿಲ್ಲಾಧಿಕಾರಿ, ಚುನಾವಣಾಧಿಕಾರಿಯ ಮೇಲೆ ಕೇಂದ್ರದಿಂದ ಒತ್ತಡ ಇರಬಹುದು. ಯಾರೇ ಅಧಿಕಾರಿಗಳು ಇರಲಿ, ತಪ್ಪು ಮಾಡಿದ್ದರೆ ಶಿಕ್ಷೆ ಆಗಬೇಕು ಎಂದರು.ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ನ್ಯಾಯಾಲಯದ ಆದೇಶದಂತೆ ನಡೆದಿದೆ. ಕಳೆದ…

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ಹಾವೇರಿಯ ಹುಕ್ಕೇರಿ ಮಠದ ಲಿಂ.ಶಿವಬಸವ ಮಹಾ ಶಿವಯೋಗಿಗಳ ಜನ್ಮಸ್ಥಳ ಸಪ್ತಸಾಗರದಲ್ಲಿ ಶ್ರೀ ಶಿವಬಸವ ಗುರು ಮಂದಿರದ ಪ್ರಥಮ ವರ್ಷಾಚರಣೆ ಸಮಾರಂಭ ಜರುಗಿತು.ತಾಲೂಕಿನ ಸಪ್ತಸಾಗರ ಶಾರದಾ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಯ, ಸಪ್ತಸಾಗರ ಪ್ರೌಢಶಾಲೆಯ ಎಸ್.ಎಸ್.ಎಲ್ .ಸಿ ಪರೀಕ್ಷಾ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸನ್ಮಾನಿಸಲಾಯಿತು.ಶೇಗುಣಸಿ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಪ್ರಜ್ವಲ ರಾವಸಾಬ ಬಮ್ಮಣ್ಣವರ 98.88% ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಹಾಗೂ ವರ್ಷಿತಾ ಭರಮಗೌಡ ಪಾಟೀಲ 97.92% ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಮತ್ತು ಅಶ್ವಥ ಮಲ್ಲಪ್ಪ ತೇಲಿ 96.16% ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಹಾವೇರಿಯ ಶ್ರೀ.ಮ.ನಿ.ಪ್ರ. ಸದಾಶಿವ ಮಹಾಸ್ವಾಮಿಗಳು ಹಾಗೂ ಹಲ್ಯಾಳದ ಶ್ರೀ.ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ಹಾಗೂ ಗಣ್ಯ-ಮಾನ್ಯರು ಸೇರಿ ಸತ್ಕಾರ ಮಾಡಿದರು.ಡಿಸ್ಟಿಂಕ್ಷನ್ ದಲ್ಲಿ 14 ಮಕ್ಕಳು, ಪ್ರಥಮ ಶ್ರೇಣಿಯಲ್ಲಿ 16 ಮಕ್ಕಳು ಉತ್ತೀರ್ಣ ಹೊಂದಿ, ಸಪ್ತಸಾಗರ ಗ್ರಾಮಕ್ಕೆ ಹಾಗೂ ಪ್ರೌಢಶಾಲೆಗೆ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ರಾಜಕೀಯ ಜೀವನದಲ್ಲಿ 50 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಗೌರವಾರ್ಥವಾಗಿ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ವಿಜಯಪುರ ಜಿಲ್ಲೆ ಹಾಗೂ ಬಸವನಬಾಗೇವಾಡಿ ಮಂಡಲದಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಅಭಿಮಾನಿಗಳು ಪಕ್ಷಾತೀತವಾಗಿ ಪಾಲ್ಗೊಳ್ಳುವಂತೆ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮನವಿ ಮಾಡಿದ್ದಾರೆ.ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ದೀರ್ಘ ರಾಜಕೀಯ ಪಯಣ ರಾಜ್ಯ ರಾಜಕೀಯದಲ್ಲಿ ಮಹತ್ವದ ಮೈಲುಗಲ್ಲಾಗಿದ್ದು, ರೈತರು, ಬಡವರು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ಅವರು ನೀಡಿದ ಕೊಡುಗೆ ಅಪಾರವಾಗಿದೆ.ರೈತಪರ ನೀತಿಗಳು, ಗ್ರಾಮೀಣಾಭಿವೃದ್ಧಿಗೆ ನೀಡಿದ ಕೊಡುಗೆಗಳು ಹಾಗೂ ಸಾಮಾನ್ಯ ಜನರೊಂದಿಗೆ ಹೊಂದಿರುವ ನಂಟು ಯಡಿಯೂರಪ್ಪರನ್ನು ಜನಪ್ರಿಯ ನಾಯಕರನ್ನಾಗಿ ಮಾಡಿವೆ ಎಂದು ಹೇಳಿದರು.ವಿಜಯಪುರ ಜಿಲ್ಲೆ ಹಾಗೂ ಬಸವನಬಾಗೇವಾಡಿ ಮತಕ್ಷೇತ್ರಕ್ಕೆ ಅವರು ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ಇಂತಹ ಮಹತ್ವದ ಕ್ಷಣವನ್ನು ಆಚರಿಸುವ ಅಭಿಮಾನೋತ್ಸವಕ್ಕೆ ವಿಜಯಪುರ ಜಿಲ್ಲೆ ಹಾಗೂ ಬಸವನಬಾಗೇವಾಡಿ ಮತಕ್ಷೇತ್ರದ ಪ್ರತಿ ಗ್ರಾಮದಿಂದ ಕಾರ್ಯಕರ್ತರು,…

Read More

ಲೇಖನ.- ಡಾ. ಶಶಿಕಾಂತ ಪಟ್ಟಣರಾಮದುರ್ಗ – ಪುಣೆಮೊ: 9552002338 ಉದಯರಶ್ಮಿ ದಿನಪತ್ರಿಕೆ ಕನ್ನಡ ಸಾರಸ್ವತ ಲೋಕದ ಒಂಟಿ ಸಲಗ ವಿಮರ್ಶಕ ಕವಿ ನಾಟಕಕಾರ ಅನುವಾದಕರು ಅಪರೂಪದ ಕ್ರಾಂತಿಕಾರಕ ಕವಿ ಸಾಹಿತಿ ಡಾ ಬುದ್ದಣ್ಣ ಹಿಂಗಮಿರೆ.ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ರಾಜಾಪುರ ದಲ್ಲಿ ಸೆಪ್ಟೆಂಬರ್ 4 1933 ರಂದು ಜನಿಸಿದರು. ಅವರ ಈ ಗ್ರಾಮವು ಈಗ ಮಹಾರಾಷ್ಟ್ರದಲ್ಲಿದೆ.ಅಥಣಿಯ ಕೆಎಲ್‌ಇ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ ಮಾಡಿದ್ದರು. ಬಳಿಕ ಹುಬ್ಬಳ್ಳಿಯ ಕಾಡಸಿದ್ದೇಶ್ವರ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಧಾರವಾಡ ಕರ್ನಾಟಕ ಕಾಲೇಜಿನ ಉಪನ್ಯಾಸಕರಾಗಿ ಬಳಿಕ ಕರ್ನಾಟಕ ವಿ.ವಿ.ಯ ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ಪ್ರಾಧ್ಯಾಪಕರಾಗಿ ವಿಭಾಗ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ್ದರು. ಬುದ್ಧಣ್ಣ ಹಿಂಗಮಿರೆ ಒಬ್ಬ ಕನ್ನಡದ ಕವಿ, ನಾಟಕಕಾರ, ವಿಮರ್ಶಕ ಮತ್ತು ಅನುವಾದಕರಾಗಿದ್ದು, ಇವರು ತಮ್ಮ ಶೋಕ ಕಾವ್ಯ ಕುರಿತ ಪ್ರಬಂಧಕ್ಕಾಗಿ ಪಿ ಎಚ್ ಡಿ ಪಡೆದಿದ್ದು, ರಷ್ಯನ್ ಭಾಷೆಯಲ್ಲೂ ಪರಿಣತಿ ಹೊಂದಿದ್ದರು. ಇವರ ಪ್ರಮುಖ ಕೃತಿಗಳಲ್ಲಿ ‘ಹುಲ್ಲುಗೆಜ್ಜೆ’, ‘ಶಬ್ದ’, ‘ರಕ್ತ’ ಮತ್ತು ‘ತೀರ್ಪು’, ‘ಸಂಗೊಳ್ಳಿ ರಾಯಣ್ಣ’…

Read More

ಸಮಾಜದ ಮುಖಂಡರು ಒಟ್ಟಾಗಿ ಹೋರಾಡಲು ನಿರ್ಧಾರ | ಶಾಸಕ ಅನಿಲ್ ಚಿಕ್ಕಮಾದು ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿಕೋಟೆ: ಪರಿಶಿಷ್ಟ ಪಂಗಡ ಮೀಸಲಾತಿ ಶೇ.7ರಷ್ಟು ಇದ್ದಿದ್ದರೆ ಇವತ್ತು ಸರ್ಕಾರ ಭರ್ತಿ ಮಾಡಲು ಮುಂದಾಗಿರುವ 56,432 ಹುದ್ದೆಗಳ ನೇಮಕಾತಿಯಲ್ಲಿ ನಮ್ಮ ಸಮುದಾಯದ 15 ರಿಂದ 20 ಸಾವಿರ ಜನರಿಗೆ ಉದ್ಯೋಗ ಸಿಗುತ್ತಿತ್ತು. ಆದರೆ ಈ ಅವಕಾಶ ಮತ್ತೆ ಸಿಗುತ್ತೋ ಇಲ್ಲವೋ ಗೊತ್ತಿಲ್ಲ. ಮಳೆಗಾಲ ಅಧಿವೇಶನದೊಳಗೆ ಸಮಾಜದ ಮುಖಂಡರು , ಸಂಸದರು ಒಟ್ಟಾಗಿ, ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಿ, ಮೀಸಲಾತಿ ಪ್ರಮಾಣ ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಳ ಮಾಡುವಂತೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.ಪಟ್ಟಣದ ಖಾಸಗಿ ಪಂಕ್ಷನ್ ಹಾಲ್ ನಲ್ಲಿ ನಡೆದ ಹೆಚ್ ಡಿ ಕೋಟೆ ಮತ್ತು ತಾಲೂಕು ಎಸ್ಟಿ ಸಮುದಾಯದ ನಾಯಕರ ಸಭೆಯಲ್ಲಿ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು , ಸಮಾಜದ ಮುಖಂಡರು ಸಭೆ ಕರೆದಾಗ, ಪಕ್ಷಾತೀತವಾಗಿ ಎಲ್ಲರೂ ಭಾಗಿಯಾಗಬೇಕು. ಸಮಾಜ…

Read More