Author: editor.udayarashmi@gmail.com

ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಪುಣೆ ಇದರ ಅಧ್ಯಕ್ಷರು ಡಾ ಶಶಿಕಾಂತ ಪಟ್ಟಣ ರಾಮದುರ್ಗ-ಪುಣೆ ಕರೆ ಉದಯರಶ್ಮಿ ದಿನಪತ್ರಿಕೆ ಬೆಳಗಾವಿ: ಬೀದರಿನ ಶ್ರೀ ವಿಷ್ಣುಕಾಂತ ಅವರ ನಿರ್ದೇಶನ ನಿರ್ಮಾಣದಡಿ ಚಿತ್ರೀಕರಣ ಮಾಡಲಾದ ಜಗನ್ಮಾತೆ ಅಕ್ಕ ಮಹಾದೇವಿ ಚಲನಚಿತ್ರಕ್ಕೆ ಬಹಿಷ್ಕಾರ ಹಾಕಲು ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಪುಣೆ ಇದರ ಅಧ್ಯಕ್ಷರು ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ ಇವರು ಕರೆ ಕೊಟ್ಟಿದ್ದಾರೆ.ಬಹಿಷ್ಕಾರಕ್ಕೆ ಮುಖ್ಯ ಕಾರಣಚಲನ ಚಿತ್ರವನ್ನು ಪೌರಾಣಿಕ ಶಿವ ಪಾರ್ವತಿ ಕಥೆಗಳನ್ನು ಆಧರಿಸಿ ಇದು ಸನಾತನ ಧರ್ಮದ ಮೂಲ ಸ್ವರೂಪ ಎಂದು ಹೇಳುವ ಕಾರ್ಯ ಕುತಂತ್ರ ನಡೆದಿದೆ.ಅಕ್ಕ ಮಹಾದೇವಿ ಬೆತ್ತಲೆ ಬಂದಿಲ್ಲಅಕ್ಕ ಮಹಾದೇವಿ ಅವರು ಬೆತ್ತಲೆ ಬಂದಿಲ್ಲ. ಅವರನ್ನು ಕೇಶಧಾರಿ ಅಕ್ಕ ಮಹಾದೇವಿಯನ್ನಾಗಿ ತೋರಿಸಿ ಅಕ್ಕ ಮಹಾದೇವಿ ಅವರಿಗೆ ಹಾಗೂ ಸಮಸ್ತ ಮಹಿಳೆಯರ ಕುಲಕ್ಕೆ ಶ್ರೀ ವಿಷ್ಣುಕಾಂತ ಅಪಮಾನ ಮಾಡಿದ್ದಾರೆ.ವೈಚಾರಿಕ ನೆಲೆಯಲ್ಲಿ ರೂಪಗೊಂಡ ಅಕ್ಕ ಮಹಾದೇವಿ ಕಲ್ಯಾಣದ ಮೇರು ಲಿಂಗಸಾಧಕಿ. ಇಂತಹ ಪವಿತ್ರ ಐತಿಹಾಸಿಕ ವಚನಕಾರ್ತೆಯನ್ನು ಹೀಗೆ ಅವಮಾನಗೊಳಿಸಿ…

Read More

ಜ.೯ ರಂದು ವಿಜಯಪುರ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ | ಸಿಎಂ ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆ | ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರಕ್ಕೆ ಇದೇ ದಿ.೯ ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗಮಿಸಿ ರಾಣಿ ಚೆನ್ಮಮ್ಮ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದು, ಈ ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ತಿಳಿಸಿದರು.ಬುಧವಾರ ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು,ಅನೇಕ ದಶಕಗಳ ಕಾಲ ವೀರ ರಾಣಿ ಕಿತ್ತೂರ ಚೆನ್ನಮ್ಮ ಅವರ ಪ್ರತಿಮೆ ಸ್ಥಾಪನೆಯಾಗಬೇಕು ಎಂಬ ಬೇಡಿಕೆ ಇತ್ತು, ಶಂಕರಗೌಡ ಪಾಟೀಲ ಸವನಹಳ್ಳಿ ಸೇರಿದಂತೆ ಅನೇಕ ಸಮಾಜ ಮುಖಂಡರು ಈ ಬಗ್ಗೆ ಮನವಿ ನೀಡುತ್ತಲೇ ಇದ್ದರು, ಕೇಂದ್ರ ಬಸ್ ನಿಲ್ದಾಣದ ಎದುರು ವೃತ್ತ ನಿರ್ಮಾಣ ಸಾಧ್ಯವಾಗದ ಕಾರಣ ಕೇಂದ್ರ ಬಸ್ ನಿಲ್ದಾಣದ…

Read More

ಸಿಂದಗಿಯಲ್ಲಿ ಉನ್ನತೀಕರಿಸಿದ ಪ್ರೌಢಶಾಲೆಗಳ ಉದ್ಘಾಟನೆ ನೆರವೇರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನ್ನಡಶಾಲೆಗಳನ್ನು ಸರ್ಕಾರ ಯಾವುದೇ ಕಾಲಕ್ಕೂ ಮುಚ್ಚುವದಿಲ್ಲ. ಸರ್ಕಾರ ನಿರಂತರ ಹೊಸ ಹೊಸ ಯೋಜನೆಗಳನ್ನು ರೂಪಿಸುವ ಮೂಲಕ ಕನ್ನಡ ಶಾಲೆಗಳ ಉಳಿವಿಗಾಗಿ ಸದಾ ಸಿದ್ದವಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.ಅವರು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಸಮನ್ವಯ ಅಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ೨೦೨೫-೨೬ ನೇ ಸಾಲಿನ ಉನ್ನತೀಕರಿಸಿ ಪ್ರೌಢಶಾಲೆಗಳ ಉದ್ಘಾಟನೆ ಹಾಗೂ ಮುಖ್ಯಮಂತ್ರಿಗಳ ಅಮೃತ ನಗರೋತ್ತಾನ ಯೋಜನೆ(ಹಂತ೦೪) ವಿವೇಚನಾ ಅನುದಾನದಡಿ ರೂ ೫೦ ಲಕ್ಷ ಅನುದಾನದಲ್ಲಿ ಗುರುಭವನ ಕಟ್ಟಡದ ಪ್ರಥಮ ಹಂತದ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.ಬರುವ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಯ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಲಾಗಿದೆ. ಶಿಕ್ಷಕರು ಮಕ್ಕಳ ಏಳಿಗ್ಗೆಗಾಗಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ರಾಜ್ಯದಲ್ಲಿ ಶಿಕ್ಷಕರ ಸಮಸ್ಯೆಗಳು…

Read More

ಸಿಂದಗಿಯಲ್ಲಿ ನಡೆದ ಎಂ.ಸಿ.ಮನಗೂಳಿ ಪ್ರತಿಷ್ಠಾನದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನನ್ನ ನಿಲುವು ಸ್ಪಷ್ಟ. ನನ್ನ ಪಾಲಿಗೆ ದೇವರು ಎರಡನೇ ಸ್ಥಾನ, ಶಾಲಾ ಮಕ್ಕಳೇ ಪ್ರಥಮ. ಮಕ್ಕಳನ್ನು ದೇವರ ಸ್ಥಾನದಲ್ಲಿಟ್ಟು ಅವರ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸುವುದೇ ನನ್ನ ಗುರಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಸಿಂದಗಿ ಪಟ್ಟಣದ ಬಸವ ನಗರದಲ್ಲಿರುವ ಸರಕಾರಿ ಕನ್ಯಾ ಪ್ರೌಢಶಾಲಾ ಆವರಣದಲ್ಲಿ ಎಂ.ಸಿ.ಮನಗೂಳಿ ಪ್ರತಿಷ್ಠಾನ ವತಿಯಿಂದ ಹಮ್ಮಿಕೊಂಡ ಸಿಂದಗಿ ಮತಕ್ಷೇತ್ರದ ಪ್ರಥಮ ಹಂತದ ೫೨ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಉದ್ಘಾಟನಾ ಮತ್ತು ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ರಾಜ್ಯದಲ್ಲಿ ಈ ಮೊದಲು ೨೦೦ ಕೆಪಿಎಸ್‌ಸಿ ಶಾಲೆಗಳಿದ್ದವು ಪ್ರಸ್ತುತ ೩೦೯ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ ಆದರೆ ನಮ್ಮ ಗುರಿ ೯೦೦ ಶಾಲೆಗಳನ್ನು ಏಕ ಕಾಲದಲ್ಲಿ ಪ್ರಾರಂಭಿಸುವ ಗುರಿಯನ್ನು ಹೊಂದಿದ್ದೇವೆ. ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ ಹಂತದ ಮಕ್ಕಳಿಗೆ ಪಠ್ಯ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಆಲಮಟ್ಟಿ-ಮುದ್ದೇಬಿಹಾಳ ರಾಜ್ಯ ಹೆದ್ದಾರಿ ರಸ್ತೆ ಮಧ್ಯೆ ಆಲಮಟ್ಟಿ ಬಳಿ ನಿರ್ಮಿಸುತ್ತಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗಾಗಿ, ಬಂದ್ ಮಾಡಲಾಗಿರುವ ರಸ್ತೆಯನ್ನು ಆರಂಭಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.ಕಳೆದ ಒಂದು ತಿಂಗಳಿAದ ರಸ್ತೆ ಸಂಪೂರ್ಣ ಬಂದ್ ಆದ ಕಾರಣ, ಸಾರ್ವಜನಿಕರು ಸುಮಾರು ನಾಲ್ಕು ಕಿ.ಮೀ ಸುತ್ತಿ ಬಳಿಸಿ ಹೋಗಬೇಕಿದೆ. ಇದರಿಂದ ಸುಮಾರು ೨೦ ಕ್ಕೂ ಹೆಚ್ಚು ಗ್ರಾಮಗಳ ಜನರಿಗೆ, ಆಲಮಟ್ಟಿಗೆ ಆಗಮಿಸುವ ಸಾರ್ವಜನಿಕರಿಗೆ ತೊಂದರೆಯಾಗಿದೆ.ಶಾಲೆ, ಕಾಲೇಜು, ಕಚೇರಿಗಳಿಗೆ ಹೋಗಲು ವಿದ್ಯಾರ್ಥಿಗಳು ಜನರು ಪರದಾಡುತ್ತಿದ್ದಾರೆ.ಸೇತುವೆ ಕಾಮಗಾರಿ ನಿಧಾನವಾಗಿ ನಡೆಯುತ್ತಿದೆ. ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸಾರ್ವಜನಿಕರು ಆಗ್ರಹಿಸಿದ್ದಾರೆ. ಅಲ್ಲಿಯವರೆಗೆ ದ್ವಿಚಕ್ರ ವಾಹನ ಸವಾರರಿಗಾದರೂ ಹಳೇ ಸೇತುವೆಯ ಮೇಲೆ ಹೋಗಲು ಅನುಕೂಲ ಕಲ್ಪಿಸಬೇಕು ಎಂದು ಬೇನಾಳದ ಮಹೇಶ ಗಾಳಪ್ಪಗೋಳ, ಆಲಮಟ್ಟಿಯ ವಿನಾಯಕ ಮಡಿವಾಳರ ಮತ್ತೀತರರು ಆಗ್ರಹಿಸಿದ್ದಾರೆ.ರಸ್ತೆಗೆ ಅಡ್ಡಲಾಗಿ ದೊಡ್ಡ ದೊಡ್ಡ ಕಲ್ಲು ಮಣ್ಣಿನ ಒಡ್ಡು ಹಾಕಿದ್ದು, ದ್ವಿಚಕ್ರ ವಾಹನ ಸವಾರರು ಇದರ ಮೇಲೆಯೇ ಹತ್ತಿ ಆ ಬದಿ ಸಾಗುವ ಹರಸಾಹಸ ಮಾಡುತ್ತಿದ್ದಾರೆ.ವಾರದೊಳಗೆ ದ್ವಿಚಕ್ರ ವಾಹನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಪ್ರತಿಮೆ ಅನಾವರಣ ಕಾರ್ಯಕ್ರಮವು ಇದೇ ಜ.೯ರಂದು ಜರುಗಲಿದ್ದು, ಈ ಹಿನ್ನೆಲೆಯಲ್ಲಿ ಅಂದು ಸಂಚಾರ ದಟ್ಟಣೆ ನಿಯಂತ್ರಿಸಲು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೪ ಗಂಟೆಯವರೆಗೆ ಕೇಂದ್ರ ಬಸ್ ನಿಲ್ದಾಣದಿಂದ ಸಾರಿಗೆ ಬಸ್ಸುಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು.ಅಂದು ವಿವಿಧ ಮಾರ್ಗಗಳ ಸಾರಿಗೆ ಬಸ್ಸುಗಳನ್ನು ಹೊರವಲಯಗಳಿಂದ ಕಾರ್ಯಾಚರಣೆ ಮಾಡಲಾಗುವುದು. ಸೆಟ್‌ಲೈಟ್ ಬಸ್ ನಿಲ್ದಾಣದಿಂದ ಕಾರ್ಯಾಚರಣೆಯಾಗುವ ಸಾರಿಗೆ ಬಸ್ಸುಗಳು ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಅಂದು ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣ ಮಾರ್ಗದ ನಗರ ಸಾರಿಗೆಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ, ವಿಜಯಪುರ ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಹಾಗೂ ಹಾಪ್‌ಕಾಮ್ಸ್ ಇವರ ಸಹಯೋಗದಲ್ಲಿ ಜನವರಿ ೧೩ ರಿಂದ ೧೫ರ ವರೆಗೆ ಮೂರು ದಿನಗಳ ಕಾಲ ನಗರದ ತೋಟಗಾರಿಕೆಯ ಜಂಟಿ ನಿರ್ದೇಶಕರ ಕಛೇರಿ, ಬಸವ ವನ, ಅವರಣದಲ್ಲಿ ಫಲ-ಪುಷ್ಪ ಪ್ರದರ್ಶನ-ಹಣ್ಣುಗಳ ಮೇಳ ಹಾಗೂ ತೋಟಗಾರಿಕೆ ಅಭಿಯಾನ ಕಾರ್ಯಕ್ರಮ ಏರ್ಪಡಿಲಾಗಿದೆ.ಮೇಳದಲ್ಲಿ ರೈತರು ಬೆಳೆದಿರುವ ವಿವಿಧ ಹಾಗೂ ಅತ್ಯುತ್ತಮ ತೋಟಗಾರಿಕೆ ಬೆಳೆಗಳ ಪ್ರದರ್ಶನ, ಇಲಾಖಾ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ, ಹಣ್ಣುಹೂ ತರಕಾರಿಗಳಲ್ಲಿ ವಿವಿಧ ಕಲಾಕೃತಿಗಳ ಪ್ರದರ್ಶನ, ತೋಟಗಾರಿಕೆಯಲ್ಲಿ ಯಾಂತ್ರೀಕರಣ,ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ, ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ ಮತ್ತು ಲಿಂಬೆ ಕುರಿತ ಒಂದು ದಿನದ ವಿಚಾರ ಸಂಕೀರ್ಣ ಹಾಗೂ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ರೈತರು, ಸಾರ್ವಜನಿಕರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತೋಟಗಾರಿಕೆ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೋ:೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ವಾಟ್ಸಪ್ ನಲ್ಲಿ ಹತ್ತಾರು ಗುಂಪುಗಳು ಫೇಸ್ ಬುಕ್‌ನಲ್ಲಿ ಸಾವಿರಾರು ಸ್ನೇಹಿತರು, ಸಿನಿಮಾ, ಪಾರ್ಕ್ ಸುತ್ತಾಟಗಳ ನಡುವೆ ಮಾಡುವ ಕೆಲಸಕ್ಕೆ ಸಮಯವೇ ಸಿಗುತ್ತಿಲ್ಲ. ಒಂದು ವೇಳೆ ಮಾಡಲು ಆರಂಭಿಸಿದರೂ ಎಲ್ಲವೂ ಅರ್ಧಂಬರ್ಧ. ಇತ್ತೀಚಿಗೆ ಸಾಮಾಜಿಕ ಜಾಲತಾಣಗಳ ಜಾಲದಲ್ಲಿ ಸಿಕ್ಕಿ ಹಾಕಿಕೊಂಡು ಹೊರ ಬರಲಾಗದೇ ಒದ್ದಾಡುವ ಬಹುತೇಕ ಯುವ ಜನತೆಯ ಪರದಾಟವಿದು. ಅವರಿಗೆ ಸಮಯ ನೋಡಲೂ ಸಮಯವಿಲ್ಲ. ಉಜ್ವಲ ಭವಿಷ್ಯ ರೂಪಿಸುವಂಥ ಕೆಲಸದಲ್ಲಿ ತೊಡುಗುವಂತೆ ಹಿರಿಯರು ಸಲಹೆ ನೀಡಿದರೆ ನನ್ನ ಒತ್ತಡವೇ ನನಗೆ ಸಾಕಾಗಿದೆ. ಅದಕ್ಕೆಲ್ಲ ಈಗ ಸಮಯವಿಲ್ಲ ಎಂದು ಒರಟಾಗಿ ನುಡಿಯುವ ಯುವ ಜನತೆಯ ಸಂಖ್ಯೆ ಹೆಚ್ಚುತ್ತಿದೆ. ಯಾವುದಕ್ಕೂ ಸಮಯ ಸಾಲುತ್ತಿಲ್ಲ ಎಂದು ನಾವೆಲ್ಲ ಗೊಣುಗುತ್ತಿರುವಾಗ ನೀವೇನು ಸಾಕಷ್ಟು ಸಮಯವಿದೆ ಬಳಸಿಕೊಳ್ಳಬೇಕಷ್ಟೆ ಅಂತಿದಿರಲ್ಲ ಎಂಬ ಅಚ್ಚರಿಯೇ? ಸಾಕಷ್ಟು ಸಮಯವಿಲ್ಲವೆಂದು ಹೇಳಬೇಡಿ, ಏಕೆಂದರೆ ಸ್ವಾಮಿ ವಿವೇಕಾನಂದ ಅಲ್ಬರ್ಟ್ ಐನ್‌ಸ್ಟೀನ್ ಮೇಡಮ್ ಕ್ಯೂರಿ ಸಿ ವಿ ರಾಮನ್ ಸರ್ ಎಮ್ ವಿಶ್ವೇಶ್ವರಯ್ಯನವರಿಗೆ ಸಮಯ ಎಷ್ಟಿತ್ತೋ ನಿಮಗೂ ಅಷ್ಟೇ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜ.೯ ರಂದು ರಂದು ಮುಖ್ಯಮಂತ್ರಿಗಳು ನಗರಕ್ಕೆ ಆಗಮಿಸಿ, ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಕಿತ್ತೂರ ರಾಣಿ ಚೆನ್ನಮ್ಮನ ಪ್ರತಿಮೆ ಅನಾವರಣ, ಬಸ್ ನಿಲ್ದಾಣ ನಾಮಕರಣ ಹಾಗೂ ಭೂತನಾಳ ತಾಂಡಾದ ಹತ್ತಿರವಿರುವ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ ಹಾಗೂ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ನಡೆಯುವ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿಸಾರ್ವಜನಿಕ ರಸ್ತೆ ಸಂಚಾರಕ್ಕೆ ಯಾವುದೇ ಅಡೆತಡೆ ಆಗದಂತೆ ಸಂಚಾರ ಮಾರ್ಗ ಬದಲಾಯಿಸಿ ಪರ್ಯಾಯ ಮಾರ್ಗ ಹಾಗೂ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.ಕೆ.ಎಸ್.ಆರ್.ಟಿ.ಸಿ ವಾಹನಗಳ ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳುವಿಜಯಪುರ ತಾಲೂಕಿನ ಗ್ರಾಮಗಳ ಹಾಗೂ ಬೇರೆ-ಬೇರೆ ಜಿಲ್ಲೆಗಳಿಂದ ವಿಜಯಪುರಕ್ಕೆ ಬರುವ ಬಸ್‌ಗಳನ್ನು ಸೋಲಾಪೂರ ನಾಕಾ, ಸಿಂದಗಿ ನಾಕಾ, ಮನಗೂಳಿ ನಾಕಾ, ಜಮಖಂಡಿ ನಾಕಾ ಹಾಗೂ ಇಟಗಿ ಪೆಟ್ರೋಲ್ ಪಂಪ್ ಹತ್ತಿರ ನಿಲ್ಲಿಸಲಾಗುವುದು. ಸಾರ್ವಜನಿಕರು ಬೇರೆ ವಾಹನ ಬಳಸಿಕೊಂಡು ನಗರಕ್ಕೆ ಆಗಮಿಸಬಹುದಾಗಿದೆ.ಸೋಲಾಪೂರ, ಸಿಂದಗಿ ಮತ್ತು ಇಂಡಿ ಕಡೆಯಿಂದ ಬಂದು ವಿಜಯಪುರದಿಂದ ಬೇರೆ ಜಿಲ್ಲೆ-ರಾಜ್ಯಗಳಿಗೆ ನಿರ್ಗಮಿಸುವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರು ೯ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಬೆಳಿಗ್ಗೆ ೧೦ಗಂಟೆಗೆ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು, ತೋರಣಗಲ್ ಜಿಂದಾಲ್ ಏರಸ್ಕ್ರಿಪ್ಟ್ ಆಗಮಿಸಿ, ಅಲ್ಲಿಂದ ೧೧ ಗಂಟೆಗೆ ಹೊರಟು, ಬೆಳಿಗ್ಗೆ ೧೧:೪೫ ಕ್ಕೆ ನಗರದ ಸೈನಿಕ ಶಾಲೆಯ ಆವರಣದ ಹೆಲಿಪ್ಯಾಡಿಗೆ ಆಗಮಿಸಲಿದ್ದಾರೆ.ಅಂದು ಮಧ್ಯಾಹ್ನ ೧೨ಕ್ಕೆ ನಗರದ ಬಸ್ ನಿಲ್ದಾಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿ ಅನಾವರಣಗೊಳಿಸುವರು. ಮಧ್ಯಾಹ್ನ ೧೨-೩೦ಕ್ಕೆ ಬೂತನಾಳ ಗ್ರಾಮದ ಹತ್ತಿರವಿರುವ ನೂತನವಾಗಿ ನಿರ್ಮಿಸಲಾದ ಸೈಕ್ಲಿಂಗ್ ವೇಲೋಡ್ರೋಮ್ ಉದ್ಘಾಟಿಸಿ, ನಂತರ ಮಧ್ಯಾಹ್ನ ೧ ಗಂಟೆಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ವತಿಯಿಂದ ನಗರದ ವ್ಹಿ.ಬಿ. ದರ್ಬಾರ ಶಾಲೆಯ ಆವರಣದಲ್ಲಿ ಆಯೋಜಿಸಿದ ಜಿಲ್ಲೆಯ ವಿವಿಧ ಯೋಜನೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಸಂಜೆ ೪ ಗಂಟೆಗೆ ಸೈನಿಕ ಸ್ಕೂಲ್ ಆವರಣದ ಹೆಲಿಪ್ಯಾಡ್‌ನಿಂದ ಹೆಲಿಕ್ಯಾಪ್ಟರ್ ಮೂಲಕ ಬಳ್ಳಾರಿ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More