Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಕ್ತದಾನ ಶ್ರೇಷ್ಠದಾನ. ಅದ್ದರಿಂದ ಯುವಕರು ರಕ್ತದಾನ ಮಾಡುವ ಮೂಲಕ ಜೀವಗಳನ್ನು ಉಳಿಸಲು ಸಹಕರಿಸಿ ಎಂದು ಚಾಂದಕವಟೆ ಗ್ರಾಮದ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಗುರುರಾಜಗೌಡ ಪಾಟೀಲ ಹೇಳಿದರು.ಸಿಂದಗಿ ತಾಲೂಕಿನ ಚಾಂದಕವಟೆ ಗ್ರಾಮದ ಆರಾಧ್ಯ ದೈವ ಶ್ರೀ ಬಸವೇಶ್ವರ ಜಾತ್ರಾ ಪ್ರಯುಕ್ತ ಬಸವೇಶ್ವರ ಜಾತ್ರಾ ಕಮೀಟಿ, ಪ್ರಾಥಮಿಕ ಆರೋಗ್ಯ ಕೇಂದ್ರ ಚಾಂದಕವಟೆ, ತಾಲೂಕಾ ಆರೋಗ್ಯ ಇಲಾಖೆ, ಜಿಲ್ಲಾ ರಕ್ತನಿಧಿ ಕೇಂದ್ರದ ವತಿಯಿಂದ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲದ ಕಾರಣ ಅಗತ್ಯದ ಮತ್ತು ತುರ್ತುಚಿಕಿತ್ಸೆಯ ಸಮಯದಲ್ಲಿ ರಕ್ತದಾನಿಗಳ ರಕ್ತವನ್ನೇ ರೋಗಿಗಳು ಅವಲಂಬಿಸಿರುತ್ತಾರೆ. ಆದ ಕಾರಣ ಯುವಕರ ರಕ್ತದಾನ ಮಾಡಿ ಜೀವ ಉಳಿಸಿ ಎಂದು ಕರೆ ನೀಡಿದರು.ಈ ವೇಳೆ ಡಾ.ಎ.ಎ.ಮಾಗಿ ಮಾತನಾಡಿ, ಅನಿರೀಕ್ಷಿತ ಅಪಘಾತಗಳು, ತುರ್ತುಶಸ್ತ್ರ ಚಿಕಿತ್ಸೆಗಳ ಸಮಯದಲ್ಲಿ, ಕ್ಯಾನ್ಸರ್ ರೋಗಿಗಳಿಗೆ, ಗರ್ಭಿಣಿ ಸ್ತ್ರೀಯರಿಗೆ ಹೆರಿಗೆ ಸಮಯದಲ್ಲಿ ರಕ್ತದ ಆವಶ್ಯಕತೆ ಹೆಚ್ಚಾಗಿ ಇರುತ್ತದೆ. ಇದಲ್ಲದೆ ತಲಸ್ಸೇಮಿಯಾ (ಆನುವಂಶಿಕ ನ್ಯೂನತೆ) ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನ್ನಡ ಸಾಹಿತ್ಯ ಸಮ್ಮೇಳನವೆಂದರೆ ಅದು ಕನ್ನಡಿಗರ ಹಬ್ಬ. ಇಲ್ಲಿ ಹಲವಾರು ವಿಚಾರಧಾರೆಗಳು ಅನಾವರಣಗೊಳ್ಳುವುದರಿಂದ ಇದು ಜ್ಞಾನದ ಹಬ್ಬವೂ ಹೌದು. ಇಂತಹ ಕನ್ನಡದ ಅಸ್ಮಿತೆಯ, ಕನ್ನಡಾಂಬೆಯ ನುಡಿ ಜಾತ್ರೆಗೆ ಅಖಂಡ ಸಿಂದಗಿ ತಾಲೂಕಿನ ವೈದ್ಯರೆಲ್ಲರೂ ತನು-ಮನ, ಧನದಿಂದ ಸಂಪೂರ್ಣ ಸಹಾಯ ಸಹಕಾರ ನೀಡುವ ಭರವಸೆಯನ್ನು ತಾಲೂಕು ವೈದ್ಯರ ಸಂಘದ ಅಧ್ಯಕ್ಷ ಡಾ.ಸಂದೀಪ್ ಪಾಟೀಲ ವ್ಯಕ್ತಪಡಿಸಿದರು.ಸಿಂದಗಿ ನಗರದ ತಾಲೂಕು ಪಂಚಾಯತ್ ಸಭಾಭವನದಲ್ಲಿ ೨೧ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಹಮ್ಮಿಕೊಂಡ ವೈದ್ಯರುಗಳ ಸಭೆಯಲ್ಲಿ ಮಾತನಾಡಿದ ಅವರು, ಸಿಂದಗಿ ತಾಲೂಕಿನಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಹೆಮ್ಮೆಯ ವಿಷಯ. ಎರಡು ದಿನಗಳವರೆಗೆ ಜರುಗುವ ಅಕ್ಷರ ಜಾತ್ರೆಯ ಹಬ್ಬದಲ್ಲಿ ಎಲ್ಲರೂ ಪಾಲ್ಗೊಂಡು ಸಮ್ಮೇಳನದ ಯಶಸ್ಸಿಗೆ ಕೈಜೋಡಿಸುವುದಾಗಿ ಹೇಳಿದರು.ಈ ವೇಳೆ ಕಾರ್ಯಕ್ರಮದ ರೂಪರೇಷೆಯ ಕುರಿತು ವಿವರಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಸಮ್ಮೇಳನದ ಉದ್ಘಾಟನೆಯ ಪ್ರಥಮ ದಿನ ಸಾರೋಟಿನಲ್ಲಿ ಸರ್ವಾಧ್ಯಕ್ಷರ ಮೆರವಣಿಗೆ, ಜೊತೆ ಜೊತೆಗೆ ಸಾವಿರಾರು ಮಕ್ಕಳು,…

Read More

ಲೇಖನ- ಶಿಲ್ಪಾ ಮೃತ್ಯುಂಜಯ. ಮಿಣಜಿಗಿಸಹ ಶಿಕ್ಷಕಿಕೆ.ಇ.ಬೋರ್ಡ್ ಸೆಂಟ್ರಲ್ ಸ್ಕೂಲ್ಧಾರವಾಡ ಉದಯರಶ್ಮಿ ದಿನಪತ್ರಿಕೆ ಬಸವಾದಿ ಪ್ರಮಥರ ತಪೋಭೂಮಿ, ಮುದ್ರಣ ಕಾಶಿ ಎಂದೇ ಹೆಸರುವಾಸಿಯಾದಂತಹಗದಗದ ಜಗದ್ಗುರು ತೋಂಟದಾರ್ಯ ಸಿದ್ಧಲಿಂಗೇಶ್ವರ ಮಹಾಸ್ವಾಮಿಗಳ ಜಾತ್ರೆಯು ಉತ್ತರ ಕರ್ನಾಟಕದ ಅತ್ಯಂತ ದೊಡ್ಡ ಮತ್ತು ಪ್ರಸಿದ್ಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಉತ್ಸವಗಳಲ್ಲಿ ಒಂದಾಗಿದೆ. ಎಪ್ರಿಲ್ ೦೨ ರಂದು ಗದಗದಲ್ಲಿ ನಡೆಯಲಿರುವ ಈ ಜಾತ್ರೆಯು ಅತ್ಯಂತ ಸಡಗರ-ಸಂಭ್ರಮದಿಂದ ಜರುಗುತ್ತದೆ.ಈ ಜಾತ್ರೆಯ ಪ್ರಮುಖ ವೈಶಿಷ್ಟ್ಯಗಳು ಹೀಗಿವೆ.ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವಈ ಜಾತ್ರೆಯು ೧೫ನೇ ಶತಮಾನದ ಶ್ರೇಷ್ಠ ಶಿವಶರಣರಾದ ಶ್ರೀ ತೋಂಟದ ಸಿದ್ಧಲಿಂಗ ಶಿವಯೋಗಿಗಳ ಸ್ಮರಣಾರ್ಥವಾಗಿ ನಡೆಯುತ್ತದೆ.ಗದುಗಿನ ಶ್ರೀ ತೋಂಟದಾರ್ಯ ಮಠವು ಕೇವಲ ಧಾರ್ಮಿಕ ಕೇಂದ್ರವಾಗಿರದೆ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ರಾಂತಿಯ ಕೇಂದ್ರವಾಗಿಯೂ ಹೆಸರುವಾಸಿಯಾಗಿದೆ.ಜಾತ್ರೆಯ ಪ್ರಮುಖ ಆಕರ್ಷಣೆಗಳುರಥೋತ್ಸವ: ಜಾತ್ರೆಯ ಮುಖ್ಯ ಆಕರ್ಷಣೆಯೇ ಭವ್ಯವಾದ ರಥೋತ್ಸವ. ಸಾವಿರಾರು ಭಕ್ತರು ಸೇರಿ ಸಿದ್ಧಲಿಂಗೇಶ್ವರನಿಗೆ ಹರ ಹರ ಮಹದೇವ ಎಂಬ ಘೋಷಣೆಗಳೊಂದಿಗೆ ರಥವನ್ನು ಎಳೆಯುತ್ತಾರೆ.ಕೃಷಿ ಮೇಳ ಮತ್ತು ಪ್ರದರ್ಶನಇಲ್ಲಿ ರೈತರಿಗಾಗಿ ವಿಶೇಷ ಕೃಷಿ ಮೇಳಗಳು ಮತ್ತು ಜಾನುವಾರು ಪ್ರದರ್ಶನಗಳು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎರಡು ಬೈಕ್ ಗಳ ಮದ್ಯ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಬಸವನಬಾಗೇವಾಡಿಯ ತಾಲೂಕಿನ ಮಸಬಿನಾಳ ಬಳಿ ಸಂಭವಿಸಿದೆ.ಇಂಗಳೇಶ್ವರ ತಾಂಡಾದ ಸಂತೋಷ ಲಾಲು ಚವಾಣ್ (32) ಮತ್ತುದೇಗಿನಾಳ ಗ್ರಾಮದ ಭೀಮನಗೌಡ ಪಾಟೀಲ (45) ಮೃತ ದುರ್ದೈವಿಗಳು.ಇನ್ನು ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದು ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಸವನಬಾಗೇವಾಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ‌ ಪರಿಶೀಲನೆ ನಡೆಸಿದ್ದಾರೆ.ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Read More

ಸಿಂದಗಿ ಬಳಿಯ ಕನ್ನೊಳ್ಳಿ ಟೋಲ್‌ಗೇಟ್ ಬಳಿ ಘೋರ ದುರಂತ | ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು | ಮೃತ ಯುವಕನ ಸೆಲ್ಫಿ ವಿಡಿಯೋದಿಂದ ಆ್ಯಕ್ಸಿಡೆಂಟ್ ಕೇಸ್‌ಗೆ ಮೇಜರ್ ಟ್ವಿಸ್ಟ್ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಸಿಂದಗಿ ಬಳಿ ಮಂಗಳವಾರ ಮಧ್ಯಾಹ್ನ ಮೈ ಜುಂ ಎನ್ನುವಂತಹ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಿಂದಾಗಿ ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿದ್ದು, ಇಡೀ ಬಸ್ ಅಗ್ನಿಗಾಹುತಿಯಾಗಿದೆ.ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮದ ನಿವಾಸಿ ಅಭಿಷೇಕ್ ಸಾಹೇಬಗೌಡ ನಾಗರಾಳ (22)ಎಂಬುವವರೇ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಜೀವದಹನವಾದ ದುರ್ದೈವಿ.ಡಿಕ್ಕಿಯ ರಭಸಕ್ಕೆ ಬೈಕ್‌ನ ಪೆಟ್ರೋಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದ್ದರಿಂದ ಬೈಕ್ ಸವಾರನಿಗೆ ಚೇತರಿಸಿಕೊಳ್ಳಲು ಕಾಲಾವಕಾಶವೇ ಸಿಗಲಿಲ್ಲ. ಘಟನೆಯ ತೀವ್ರತೆಗೆ ಇಡೀ ಬಸ್ ಕ್ಷಣಾರ್ಧದಲ್ಲಿ ಬೆಂಕಿಯ ಉಂಡೆಯಾಗಿ…

Read More

ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಗರ್ಭಿಣಿ ಬಾಣಂತಿಯರೊಂದಿಗೆ ಡಾ.ನಾಗಲಕ್ಷ್ಮಿ ಚೌಧರಿ ಸಂವಾದ ಉದಯ ರಶ್ಮಿ ದಿನಪತ್ರಿಕೆ ಅಥಣಿ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌಧರಿ ಅವರು ಅಥಣಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಿದರು.ಈ ವೇಳೆ ರೋಗಿಗಳು, ಗರ್ಭಿಣಿಯರು ಹಾಗೂ ಬಾಣಂತಿಯರೊಂದಿಗೆ ಸಂವಾದ ನಡೆಸಿ ಆಸ್ಪತ್ರೆಯ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದರು.ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಅಥಣಿ ಸರ್ಕಾರಿ ಆಸ್ಪತ್ರೆಯು ಅತ್ಯಂತ ಸ್ವಚ್ಛವಾಗಿದ್ದು, ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ ಇಲ್ಲಿ ತಿಂಗಳಿಗೆ 300 ರಿಂದ 400 ಹೆರಿಗೆಗಳು ನಡೆಯುತ್ತಿರುವುದು ಹೆಮ್ಮೆಯ ವಿಷಯ. ರೋಗಿಗಳು ಹಾಗೂ ಸಾರ್ವಜನಿಕರು ಇಲ್ಲಿನ ವೈದ್ಯರ ಸೇವೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕುಡಿಯುವ ನೀರು ಹಾಗೂ ಬಿಸಿನೀರಿನ ವ್ಯವಸ್ಥೆ ಸಮರ್ಪಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.ಅಲ್ಲದೆ, ನೂತನವಾಗಿ ನಿರ್ಮಾಣವಾಗುತ್ತಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಾಮಗಾರಿಯನ್ನು ಶ್ಲಾಘಿಸಿದರು.ಶೌಚಾಲಯ ದುರಸ್ತಿ: ಆಸ್ಪತ್ರೆಯ ಶೌಚಾಲಯಗಳಲ್ಲಿನ ಸಿಂಕ್‌ಗಳು ಬಂದ್ ಆಗಿದ್ದು, ಅವುಗಳನ್ನು ಕೂಡಲೇ ಸರಿಪಡಿಸುವಂತೆ ಸೂಚಿಸಿದರು.ಔಷಧಿಗಳಲಭ್ಯತೆ: ಕೆಲವರು ಹೊರಗಿನ ಔಷಧಿ ಬರೆಯುತ್ತಿದ್ದಾರೆ ಎಂದು…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ದಲಿತ ಸಮುದಾಯವನ್ನು ಮತ್ತು ಅಲ್ಪ ಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ವೋಟ್ ಬ್ಯಾಂಕ್‌ ಆಗಿ ಬಳಸಿಕೊಂಡಿರುವದನ್ನು ಬಿಟ್ಟರೆ ಆ ಸಮುದಾಯದ ಯಾರನ್ನೂ ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನವನ್ನು ಕಲ್ಪಿಸಿಕೊಟ್ಟ ಉದಾಹರಣೆಗಳೇ ಇಲ್ಲ ಆದ್ದರಿಂದ ರಾಜ್ಯದಲ್ಲಿ ವಾಸಿಸುವ ಎರಡೂ ಸಮುದಾಯದ ನಾಗರಿಕರು ಎಚ್ಚೆತ್ತುಕೊಂಡು ರಾಷ್ಟ್ರದ ಹಿತದೃಷ್ಟಿಯಿಂದ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಬೇಕು ಎಂದು ವಿಧಾನ ಪರಿಷತನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಹೇಳಿದರು.ಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಪ್ರ.ಶಿಕ್ಷಣ ಅಭಿಯಾಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದಾಗ ಅವಳಿ ಜಿಲ್ಲಾ ಕೆಎಂಎಫ್ ಮಾಜಿ ನಿರ್ದೇಶಕ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಾಗಿದ್ದ ಗುರು ಚಲವಾದಿ ಅವರನ್ನು ಮತ್ತು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ಬಂದಾಗ ಸ್ವಾಗತಿಸಿ ಮಾತನಾಡಿದರು.ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾವಣೆ ಮಾಡುತ್ತಾರೆ ದಲಿತ ಮತ್ತು ಮುಸ್ಲೀಂ ಸಮುದಾಯವನ್ನು ರಾಜಕೀಯವಾಗಿ ಬಳಸುವದಿಲ್ಲ ಆರ್ಥಿಕವಾಗಿ ಸಬಲರನ್ನಾಗಿ ಮಾಡುವದಿಲ್ಲ ಹಲವಾರು ವಿಷಯಗಳ ಕುರಿತು ಕಪೋಲ ಕಲ್ಪಿತ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಗರದ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕೃಷ್ಣಾ ತೀರ ಹೋರಾಟ ಸಮಿತಿ ವತಿಯಿಂದ 2025-26ನೇ ಸಾಲಿನ ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ.ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡ ಚೂನ್ನಪ್ಪ ಪೂಜಾರಿ ಮಾತನಾಡಿ, ಕಬ್ಬು ಬೆಳೆಗಾರರಿಗೆ ಕಾನೂನು ಪ್ರಕಾರ 14 ದಿನಗಳಲ್ಲಿ ಬಾಕಿ ಹಣ ಪಾವತಿಸಬೇಕಿದ್ದರೂ 3 ರಿಂದ 4 ತಿಂಗಳು ಕಳೆದರೂ ಹಣ ನೀಡದೇ ರೈತರನ್ನು ಸಂಕಷ್ಟಕ್ಕೆ ತಳ್ಳಲಾಗಿದೆ ಎಂದು ಆರೋಪಿಸಿದರು.ರಾಜ್ಯದಲ್ಲಿ ಸುಮಾರು 3,500 ಕೋಟಿ ಕಬ್ಬಿನ ಬಿಲ್ಲು ಬಾಕಿ ಉಳಿದಿದ್ದು ಬಾಗಲಕೋಟೆ, ವಿಜಯಪುರ, ಬೆಳಗಾವಿ ಜಿಲ್ಲೆಗಳ ರೈತರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದರು. ಸರ್ಕಾರ ಹಾಗೂ ಅಧಿಕಾರಿಗಳು ರೈತರ ಸಮಸ್ಯೆ ಕಡೆ ನಿರ್ಲಕ್ಷ್ಯ ವಹಿಸಿರುವುದನ್ನು ಟೀಕಿಸಿದ ಅವರು, ಚುನಾವಣೆ ಸಮಯದಲ್ಲಿ ಮಾತ್ರ ರಾಜಕೀಯ ನಾಯಕರು ರೈತರ ಬಳಿ ಬರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಾಕಿ ಹಣವನ್ನು ತಕ್ಷಣ ಪಾವತಿಸದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಖಾಸಗಿ ಕಂಪನಿಗಳು ಪೀಠೋಪಕರಣಗಳಂತ ದೇಣಿಗೆ ನೀಡಿದರೆ ಶಾಲೆಗಳು ಪ್ರಗತಿ ಹೊಂದುತ್ತವೆ ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು.ಅವರು ಕೋರಮಂಡಲ್ ಇಂಟರ್ನ್ಯಾಷನಲ್ ಲಿಮಿಟೆಡ್ ಕಂಪನಿಯು ಸಿ ಎಸ್ ಆರ್ ಯೋಜನೆಯಡಿಯಲ್ಲಿ ತಾಲೂಕಿನ ಹೂವಿನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಸುಮಾರು 10 ಲಕ್ಷ ವೆಚ್ಚದ ಪೀಠೋಪಕರಣಗಳ ವಿತರಣೆ ಹಾಗೂ ಕಬ್ಬು ಬೆಳೆಗಾರರ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ಹೇಳಿದರು.ಖಾಸಗಿ ಕಂಪನಿಗಳು ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿ ಜೊತೆಗೆ ರೈತರ ಬೆಳೆಗಳ ಮಾಹಿತಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅತ್ಯಂತ ಉಪಯುಕ್ತವಾಗಿದೆ ಎಂದರು.ಯಾವುದೇ ಖಾಸಗಿ ಕಂಪನಿಗಳು ರೈತರಿಗೋಸ್ಕರ ಹಮ್ಮಿಕೊಂಡ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ತಾರಾಪುರ ಹಿರೇಮಠದ ಗುರುಲಿಂಗ ಶಿವಾಚಾರ್ಯರು, ಸಂಗಯ್ಯ ಸ್ವಾಮಿ ಹಿರೇಮಠ, ಮಾಜಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಸಿದ್ದರಾಮ ಪಾಟೀಲ, ಕೋರಮಂಡಲ್ ಕಂಪನಿಯ ರಾಜ್ಯ ಮುಖ್ಯ ವ್ಯವಸ್ಥಾಪಕ ಶಿವನಗೌಡ ಪಾಟೀಲ್, ಬೆಂಗಳೂರು ಹಿರಿಯ ವಲಯ…

Read More