Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಾರಿಗೆ ನೌಕರರ ಮುಷ್ಕರ | ಬಸ್ಗಳಿಲ್ಲದೇ ಬಿಕೋ ಎಂದ ದೇವರಹಿಪ್ಪರಗಿ ಬಸ್ ನಿಲ್ದಾಣ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಕಾರಣವಾಗಿ ದೇವರಹಿಪ್ಪರಗಿ ಬಸ್ ನಿಲ್ದಾಣ ಬಸ್ಗಳಿಲ್ಲದೇ ಬಿಕೋ ಎನ್ನುತ್ತಿದ್ದು, ಬಸ್ಗಳ ಜಾಗದಲ್ಲಿ ಖಾಸಗಿ ವಾಹನಗಳು ಪ್ರಯಾಣಿಕರಿಗೆ ಆಸರೆಯಾದವು.ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ ಕೆಲವು ಗ್ರಾಮದಿಂದ ಬಸ್ಗಳು ಆಗಮಿಸಿದವು, ಮುಂದೆ ಕೆಲವು ಡಿಪೋಗಳಿಗೆ ತೆರಳಿದರೆ ಬೆರಳೆಣಿಕೆಯ ಬಸ್ಗಳು ನಿಲ್ದಾಣದಲ್ಲಿ ನಿಂತವು.ಸ್ಥಳೀಯ ಪಿಎಸ್ಐ ಸಚೀನ ಆಲಮೇಲಕರ ಹಾಗೂ ತಹಶೀಲ್ದಾರ ಪ್ರಕಾಶ ಸಿಂದಗಿ ಪೊಲೀಸ್ ಸಿಬ್ಬಂದಿಯೊಂದಿಗೆ ಸುಮಾರು ಗಂಟೆಗಳ ಕಾಲ ಬಸ್ ನಿಲ್ದಾಣದ ಆವರಣದಲ್ಲಿ ನಿಂತು ಯಾವುದೇ ಘಟನೆ ಜರುಗದಂತೆ ಕ್ರಮ ವಹಿಸಿದರು.ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಸ್ಥಳೀಯ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾದರೆ, ವಿಜಯಪುರ, ಸಿಂದಗಿಗೆ ತೆರಳುವ ವಿದ್ಯಾರ್ಥಿಗಳು ಬಸ್ಗಳಿಲ್ಲದೇ ಅನಿವಾರ್ಯವಾಗಿ ಮನೆಗೆ ತೆರಳಿದರೆ, ಕೆಲವರು ಹಣ ನೀಡಿ ಖಾಸಗಿ ವಾಹನಗಳಲ್ಲಿ ತೆರಳಿದರು.ಮಹಿಳಾ ಪ್ರಯಾಣಿಕರು ಮಾತ್ರ ಬಂದ ದಾರಿಗೆ ಸುಂಕವಿಲ್ಲದAತೆ ಮನೆಗೆ ಮರಳಿದರೆ, ಕೋರ್ಟ,…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೨೦೨೩-೨೪ ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಯೋಜನೆಯಡಿಯಲ್ಲಿ ರೂ ೨೫ ರೂ ಲಕ್ಷ ಮೊತ್ತದಲ್ಲಿ ಸಿಂದಗಿ ಪಟ್ಟಣದ ೧೪ನೇ ವಾರ್ಡಿನ ಬೊಮ್ಮಲಿಂಗೇಶ್ವರ ದೇವಸ್ಥಾನದ ಹತ್ತಿರವಿರುವ ಪುರಾತನ ಬಾವಿಯನ್ನು ಸ್ವಚ್ಛಗೊಳಿಸಿ ನೂತನವಾಗಿ ನಿರ್ಮಾಣವಾದ ನೀರಿನ ಬಾವಿಯನ್ನು ಶಾಸಕ ಅಶೋಕ ಮನಗೂಳಿ ಉದ್ಘಾಟಿಸಿದರು.ಇದೆ ಸಂದರ್ಭದಲ್ಲಿ ಸಾರಂಗಮಠದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯ, ಪುರಸಭೆ ಅಧ್ಯಕ್ಷ ಡಾ|| ಶಾಂತವಿರ ಮನಗೂಳಿ, ಉಪಾಧ್ಯಕ್ಷ ಸಂದೀಪ ಚೌರ, ಗೊಲ್ಲಾಳ ಬಂಕಲಗಿ, ಬ್ಲಾಕ್ ಅಧ್ಯಕ್ಷ ಸುರೇಶ ಪೂಜಾರಿ, ಜಿಲ್ಲಾ ಕೆಡಿಪಿ ಸದಸ್ಯ ಶಿವಣ್ಣ ಕೊಟರಗಸ್ತಿ, ಮಲ್ಲು ಸದುಗೋಳ, ಸುನಂದಾ ಯಂಪುರೆ, ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ರವೀಂದ್ರ ಬಂಥನಾಳ, ಕೆಆರ್ಐಡಿಎಲ್ ಅಧಿಕಾರಿ ರಾಜಶೇಖರ್, ಅಳ್ಳೊಳ್ಳಿ ಬುಡ್ಡಾ, ಪ್ರಕಾಶ ಪೂಜಾರಿ, ಸೇರಿದಂತೆ ಇನ್ನಿತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವೇತನ, ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ಇಲಾಖೆ ನೌಕರರು ನಡೆಸುತ್ತಿರುವ ಮುಷ್ಕರದಿಂದಾಗಿ ಬಹುತೇಕ ಸಾರಿಗೆ ಇಲಾಖೆಯ ವಾಹನಗಳು ಬೀದಿಗಿಳಿಯದ ಪರಿಣಾಮ, ಖಾಸಗಿ ವಾಹನಗಳಿಗೆ ಮಂಗಳವಾರ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸಿಂದಗಿ ಕೇಂದ್ರ ಬಸ್ ನಿಲ್ದಾಣಕ್ಕೆ ನೇರವಾಗಿ ನುಗ್ಗಿದ ಖಾಸಗಿ ವಾಹನಗಳು, ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.ಸಹಜವಾಗಿ ಸಾರಿಗೆ ಇಲಾಖೆಯ ಬಸ್ ನಿಲ್ದಾಣದಿಂದ ನೂರು ಮೀಟರ್ ಅಂತರದಲ್ಲಿ ಯಾವುದೇ ಖಾಸಗಿ ವಾಹನಗಳು ಓಡಾಟ ಮಾಡದಂತೆ ನಿಷೇಧವಿದೆ. ಆದರೆ, ಸಾರಿಗೆ ಇಲಾಖೆಯ ನೌಕರರ ಮುಷ್ಕರದಿಂದಾಗಿ ಖಾಸಗಿ ವಾಹನಗಳು ನೇರವಾಗಿ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರವೇಶಿಸಿ, ಅಲ್ಲಿದ್ದ ಪ್ರಯಾಣಿಕರನ್ನು ಸಾಗಿಸುತ್ತಿದ್ದವು. ದುಪ್ಪಟ್ಟು ಹಣ ವಸೂಲಿ ಸಾರಿಗೆ ಇಲಾಖೆಯ ವಾಹನಗಳ ಓಡಾಟವಿಲ್ಲದ್ದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ವಾಹನಗಳು ಜನರನ್ನು ನಿಗದಿತ ಸ್ಥಳಕ್ಕೆ ಕರೆದೊಯ್ಯಲು ದುಪ್ಪಟ್ಟು ಹಣ ವಸೂಲಿ ಮಾಡಿದ ಆರೋಪ ಪ್ರಯಾಣಿಕರಿಂದ ಅಲ್ಲಲ್ಲಿ ಕೇಳಿ ಬಂದಿವೆ. “ಸಾರಿಗೆ ಇಲಾಖೆಯ ಮುಷ್ಕರದಿಂದ ಬಸ್ ಸಂಚರಿಸದ ಕಾರಣ ಬಸ್ ನಿಲ್ದಾಣದಲ್ಲಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಯಿಯ ಎದೆ ಹಾಲು ಮಗುವಿಗೆ ಸೂಕ್ತವಾದ ಆಹಾರ. ಇದು ಸುರಕ್ಷಿತ, ಸ್ವಚ್ಚ ಮತ್ತು ಪ್ರತಿಕಾಯಗಳನ್ನು ಹೊಂದಿದ್ದು, ಬಾಲ್ಯದ ಅನೇಕ ಸಾಮಾನ್ಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಭಾರತೀಯ ಮಕ್ಕಳ ತಜ್ಞರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಎಸ್.ವ್ಹಿ.ಪಾಟೀಲ ಹೇಳಿದರು.ಅವರು ಪಟ್ಟಣದ ಮೊಗಲಾಯಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಭಾರತೀಯ ಮಕ್ಕಳ ತಜ್ಞರ ಸಂಘ, ತಾಲೂಕಾ ಆರೋಗ್ಯ ಇಲಾಖೆ ಮತ್ತು ಮೋಗಲಾಯಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವುಗಳ ಸಹಯೋಗದಲ್ಲಿ ವಿಶ್ವಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಎದೆ ಹಾಲು ಶಿಶುವಿಗೆ ಜೀವನದ ಮೊದಲ ತಿಂಗಳುಗಳಿಗೆ ಅಗತ್ಯವಿರುವ ಎಲ್ಲಾ ಶಕ್ತಿ ಮತ್ತು ಪೋಷಕಾಂಶಗಳನ್ನು ಒದಗಿಸುತ್ತದೆ. ಮಕ್ಕಳ ಬುದ್ದಿಮತ್ತೆ ಇದರಿಂದ ಜಾಸ್ತಿಯಾಗಿ ಮಕ್ಕಳು ಕ್ರಿಯಾಶೀಲರಾಗುತ್ತಾರೆ. ಎದೆಹಾಲು ಉಣಿಸುವ ಮಹಿಳೆಯರಿಗೆ ಸ್ತನ ಮತ್ತು ಅಂಡಾಶಯದ ಕ್ಯಾನ್ಸರ್ ಬರುವ ಅಪಾಯವೂ ಕಡಿಮೆ ಎಂದರು.ಈ ವೇಳೆ ವಿಜಯಪುರದ ಮಕ್ಕಳ ತಜ್ಞ ಡಾ.ಎಸ್.ಎಸ್.ಕಲ್ಯಾಣಶೆಟ್ಟಿ ಮತ್ತು ಸ್ತ್ರೀ ರೋಗ ತಜ್ಞೆ ಡಾ.ಶಾರದಾ ನಾಡಗೌಡ ಮಾತನಾಡಿ, ಸ್ತನ್ಯಪಾನದ ಬಗ್ಗೆ ಅನೇಕ ತಾಯಂದಿರಲ್ಲಿ ತಪ್ಪು ಕಲ್ಪನೆಗಳಿಗೆ…
ಬೇನಾಳ ಶಾಲೆಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿS* ಆಲಮಟ್ಟಿರಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ B* ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕ್ರೀಡಾಕೂಟಗಳು ಕಾಟಾಚಾರಕ್ಕೆ ನಡೆಯದೇ, ಪ್ರತಿ ಶಾಲೆಯ ಮಕ್ಕಳು ಪ್ರತಿ ಕ್ರೀಡೆಗಳಲ್ಲಿಯೂ ಧನಾತ್ಮಕವಾಗಿ ಭಾಗವಹಿಸಬೇಕು, ಆ ನಿಟ್ಟಿನಲ್ಲಿ ಶಾಲೆಯ ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಬಸವನಬಾಗೇವಾಡಿ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಎಸ್.ಎಸ್. ಅವಟಿ ಹೇಳಿದರು.ಇಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಂಗಳವಾರ ಜರುಗಿದ ಆಲಮಟ್ಟಿ ವಲಯದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಶಿಕ್ಷಕ ಬಸವರಾಜ ಯರವಿನತೆಲಿಮಠ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಂಯೋಜಕ ಯು.ವೈ.ಬಶೆಟ್ಟಿ , ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಮುಕಾರ್ತಿಹಾಳ, ಪ್ರಧಾನ ಕಾರ್ಯದರ್ಶಿ ಸಲೀಂ ದಡೆದಸಲೀಂ ದಡೆದ, ಎಸ್.ಎಂ. ಪಾಟೀಲ, ಎಸ್.ಬಿ. ತಿಮ್ಮಾಪುರ, ಪಿ.ಎಲ್. ಕುಲಕರ್ಣಿ, ಬಿ.ಡಿ. ಚಲವಾದಿ, ಡಿ.ಕೆ. ಪಾಟೀಲ, ಸಿ.ಬಿ. ಚಿಮ್ಮಲಗಿ, ಡಿ.ವೈ. ವಾಲೀಕಾರ, ಎನ್.ಬಿ.ದಾಸರ, ಕೆ.ಎಸ್. ಮಾಳಗೊಂಡ, ಸಿಆರ್ ಪಿಗಳಾದ ಸುರೇಶ ಹುರಕಡ್ಲಿ, ಭಾಷಾಸಾಬ್ ಮನಗೂಳಿ, ಪ್ರಕಾಶ ದೋರನಳ್ಳಿ ಇದ್ದರು.ಜಿ.ಸಿ.ದ್ಯಾವಣ್ಣವರ ಕ್ರೀಡಾಪಟುಗಳಿಗೆ ಪ್ರತಿಜ್ಞಾ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಹಾಲುಮತ ಬಾಂಧವರ ಹೃದಯಾಂತರಾಳ ನೊರೆ ಹಾಲಿನಷ್ಟೇ ಪವಿತ್ರವಾದುದು, ಪ್ರತಿಯೊಂದು ಶುಭಕಾರ್ಯಕ್ಕೂ ನೀವೇ ಆರಂಭಿಕರು. ಆದರೂ ಮೌಢ್ಯ ಕಂದಾಚಾರದಲ್ಲಿ ನಿಮ್ಮ ಬದುಕಿನ ದೋಣಿ ಮುಳುಗೇಳುತ್ತಿರುವುದು ದುರಾದೃಷ್ಟಕರ ಸಂಗತಿಯಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ವಿಷಾದ ವ್ಯಕ್ತಪಡಿಸಿದರು.ಸಮೀಪದ ಹುಣಶಾಳ-ಪಿಸಿ ಗ್ರಾಮದಲ್ಲಿ ಭಾನುವಾರ ಚಾಲನೆ ಪಡೆದ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಹಾಲುಮತ ಬಾಂಧವರಿಂದ ಕುರಿಮರಿ ಮತ್ತು ಕಂಬಳಿಯ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ನಾನು ಹುಟ್ಟಿದಾಗ ಉಸಿರು, ಬೆಳೆಯುತ್ತಿರುವಾಗ ಉಸಿರು ನೀಡಿ ಬೆಳೆಸಿದ ಕುರುಬ ಜನಾಂಗ ಕುಲ ಕಸುಬಾದ ಕುರಿ ಕಾಯುವ ಜತೆಗೆ ರಾಜ್ಯದ ಮುಖ್ಯಮಂತ್ರಿ ಗಾದಿಯವರೆಗೂ ತಮ್ಮ ಕಾರ್ಯವೈಖರಿ ಖಚಿತಪಡಿಸಿದ್ದರೂ ಹೆಚ್ಚಿನ ಶಿಕ್ಷಣ ಪಡೆಯುವುದರಲ್ಲಿ ಹಿಂದುಳಿದಿದೆ. ಜಗತ್ತು ಮುಂದುವರೆದಂತೆ ನಾವೂ ಕೂಡ ಭವಿಷ್ಯದ ನಮ್ಮ ಕುಡಿಗಳಿಗೆ ಉನ್ನತ ಶಿಕ್ಷಣ ನೀಡಲು ಮುಂದಾಗಬೇಕಿದೆ. ಕುರಿಮರಿಯಂತಿದ್ದ ನನ್ನನ್ನು ಸಾಕಿ ಬೆಳೆಸಿ ಇಂದು ರಾಜ್ಯದ ಶಿಕ್ಷಕರ ಸಂಘದ ಅಧ್ಯಕ್ಷ ಸ್ಥಾನದವರೆಗೆ ತಂದು ನಿಲ್ಲಿಸಿದ್ದೀರಿ. ನಿಮ್ಮ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಸಾರ್ವಜನಿಕರ ತೆರಿಗೆ ಹಣದಲ್ಲಿಯೇ ನಿರ್ಮಾಣಗೊಂಡಿರುವ ಸಾರ್ವಜನಿಕ ಸ್ವತ್ತುಗಳನ್ನು ಹಾಳಾಗದಂತೆ ಸಂರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರದ್ದಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಉಮಾಶ್ರೀ ಹೇಳಿದರು.ಗ್ರಾಮದ ಯಮನೂರಪ್ಪನ ದೇವಸ್ಥಾನದ ಹತ್ತಿರ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನಿರ್ಮಾಣವಾಗಲಿರುವ ಸಮುದಾಯ ನೈರ್ಮಲ್ಯ ಸಂಕೀರ್ಣ ಘಟಕ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಶೋಷಿತ ಸಮುದಾಯ ಬಯಲು ಬಹಿರ್ದೆಸೆಗೆ ಹೋಗಬಾರದೆಂಬ ಕಾಳಜಿಯಿಂದ ನಿರ್ಮಿಸಲಾಗುತ್ತಿರುವ ಈ ನೈರ್ಮಲ್ಯ ಘಟಕವನ್ನು ಗುತ್ತಿಗೆದಾರರು ವ್ಯವಸ್ಥಿತವಾಗಿ ನಿರ್ಮಿಸಬೇಕು, ಗ್ರಾಮಸ್ಥರು ಸ್ವಚ್ಚತೆಯೊಂದಿಗೆ ಉಪಯೋಗಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.ಗ್ರಾ.ಪಂ. ಅಧ್ಯಕ್ಷೆ ಬಂಗಾರೆವ್ವ ಜಾಲಿಕಟ್ಟಿ, ತಾ.ಪಂ. ಕಾರ್ಯನಿರ್ವಾಹಕ ಅಭಿಯಂತರ ಸಿದ್ದಪ್ಪ ಪಟ್ಟಿಹಾಳ, ಕಾಂಗ್ರೆಸ್ ತೇರದಾಳ ಮತಕ್ಷೇತ್ರದ ಅಧ್ಯಕ್ಷ ಲಕ್ಮಣ ದೇಸಾರಟ್ಟಿ, ರಾಜಶೇಖರ ಭದ್ರಣ್ಣವರ, ಪ್ರವೀಣ ಪೂಜೇರಿ, ಗ್ರಾ.ಪಂ. ಸದಸ್ಯ ಬಾಳಪ್ಪ ಗಡೆಪ್ಪನವರ, ನಾಗಪ್ಪ ಆಲಕನೂರ, ತುಕಾರಾಮ ದೊಡಮನಿ, ಸದಸ್ಯೆ ಮಂಜುಳಾ ರವಿಂದ್ರ ದೊಡವಾಡ, ಶಿವಪ್ಪ ನಾಗನೂರ, ಅರುಣ ಗಾಣಿಗೇರ, ಮಹಾಲಿಂಗ ಬಳಗಾರ, ಅಶೋಕ ಧಡೂತಿ, ರವಿ ದೊಡವಾಡ,…
ವಿಜಯಪುರದಲ್ಲಿ ನಡೆದ ವಿವಿಧ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಓ ರಿಷಿ ಆನಂದ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರಗತಿಯನ್ನು ಗುರಿಯಾಗಿಟ್ಟುಕೊಳ್ಳದೇ ಎಲ್ಲರೂ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಸಮನ್ವಯದಿಂದ ಹಾಗೂ ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ನಗರದ ಜಿಲ್ಲಾ ಪಂಚಾಯತಿಯಲ್ಲಿ ಮಂಗಳವಾರ ನಡೆದ ವಿವಿಧ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ವಿಡಿಯೋ ಸಂವಾದದ ಮೂಲಕ ಆಯೋಜಿಸಲಾದ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಮನರೇಗಾ, ಸ್ವಚ್ಚ ಭಾರತ ಮಿಷನ್ ಮತ್ತು ವಸತಿ ಯೋಜನೆ ಸೇರಿದಂತೆ ಎಲ್ಲಾ ಯೋಜನೆಗಳಲ್ಲಿ ನಿಯಮಾನುಸಾರ ಪ್ರಗತಿ ಸಾಧಿಸಬೇಕು ಎಂದರು.ತಾಲೂಕಾ ಪಂಚಾಯತಿಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಸಂಬಂಧಿಸಿದ ವಿಭಾಗದ ಸಹಾಯಕ ನಿರ್ದೇಶಕರು ಸತತ ಕ್ಷೇತ್ರ ಭೇಟಿ ನೀಡಿ ಸಮರ್ಪಕ ಹಾಗೂ ನಿಗದಿತ ಕಾಲಾವಧಿಯಲ್ಲಿ ಯೋಜನೆಗಳು ಅನುಷ್ಠಾನಗೊಳ್ಳುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಧರ್ತಿ ಆಬಾ ಜನಜಾತಿಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಗುರುತಿಸಿರುವ ಜಿಲ್ಲೆಯ ಬುಡಕಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ದೃಷ್ಟಿಯಿಂದ ಹೋಂ ಸ್ಟೇ ನಿರ್ಮಿಸಲು ಹಾಗೂ ನವೀಕರಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲಕೇರಿ, ಅಸ್ಕಿ ಗ್ರಾಪಂ ವ್ಯಾಪ್ತಿಯ ಅಸ್ಕಿ, ಸಾಸನೂರ ಗ್ರಾಪಂ ವ್ಯಾಪ್ತಿಯ ಸೋಮನಾಳ, ಕೊಣ್ಣೂರ ಗ್ರಾಪಂನ ಕೊಣ್ಣೂರ ಹಾಗೂ ಪಡೇಕನೂರ ಗ್ರಾಮಗಳನ್ನು, ಬಾವೂರ ಗ್ರಾಪಂ ವ್ಯಾಪ್ತಿಯ ವನಹಳ್ಳಿ, ತುಂಬಗಿ ಗ್ರಾಪಂನ ತುಂಬಗಿ ಹಾಗೂ ಹೊಸಳ್ಳಿ ಗ್ರಾಮವನ್ನು, ಭಂಟನೂರ ಗ್ರಾಪಂ ವ್ಯಾಪ್ತಿಯ ಭಂಟನೂರು ಗ್ರಾಮವನ್ನು, ಹಿರೂರ ಗ್ರಾಪಂನ ತಮದಡ್ಡಿ ಗ್ರಾಮವನ್ನು, ಮಿಣಜಗಿ ಗ್ರಾಪಂ ಮಿಣಜಗಿಯ ಗ್ರಾಮವನ್ನು, ಕೊಡಗಾನೂರ ಗ್ರಾಪಂ ವ್ಯಾಪ್ತಿಯ ಕೊಡಗಾನೂರ, ಕಾರಗನೂರ, ಬೇಳೂರು ಹಾಗೂ ನಾವದಗಿ ಗ್ರಾಮವನ್ನು, ಬ.ಸಾಲವಾಡಗಿಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾಲವಾಡಗಿ ಹಾಗೂ ಗುಂಡಕನಾಳ ಗ್ರಾಮವನ್ನು, ಮೂಕಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗೂರು ಗ್ರಾಮಗಳನ್ನು ಗುರುತಿಸಲಾಗಿದ್ದು,…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಶತಮಾನ ಕಂಡ ಉರ್ದು ಶಾಲೆಯನ್ನು, ಶಿಕ್ಷಣ ಇಲಾಖೆ ಸಾರ್ವಜನಿಕರಿಗೆ ಮಾಹಿತಿ ನೀಡದೇ ಏಕಾಏಕಿ ಸ್ಥಳಾಂತರಿಸಿರುವದನ್ನು ವಿರೋಧಿಸಿ ಆ.೬ ರಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುಕೊಳ್ಳುತ್ತಿರುವದಾಗಿ ರಾಜ್ಯ ಮುಸ್ಲಿಂ ಕೌನ್ಸಿಲ್ ಮತ್ತು ಶಾಲೆಯಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ನಗರದ ಮಧ್ಯ ಭಾಗದಲ್ಲಿ ಶತಮಾನದಿಂದ ನಡೆದುಕೊಂಡ ಬಂದಿರುವ ಉರ್ದು ಶಾಲೆ ಸುಮಾರು ೧೨೫ ವರ್ಷಕ್ಕಿಂತ ಮೇಲ್ಪಟ್ಟಿರುವ ಶಾಲೆಯಾಗಿದೆ. ಈ ಹಿಂದೆ ಶಾಲೆ ಆರಂಭಿಸಿ ಶಿಕ್ಷಕರು ನಿವೃತ್ತಿ ಆದ ನಂತರ ಎಲ್ಪಿಎಸ್ ಶಾಲೆ ಡೈಸ್ ಕೋಡ್ ನೆಪದಲ್ಲಿ ಬಂದು ಮಾಡಲಾಗಿದೆ. ಈಗ ಶಾಲೆ ಪುರಸಭೆಗೆ ಹಸ್ತಾಂತರಿಸುವ ಕುತಂತ್ರ ತೆರೆಯ ಮರೆಯಲ್ಲಿ ನಡೆಯುತ್ತಿದೆ. ಇದು ನಮ್ಮ ಆಕ್ರೋಷಕ್ಕೆ ಕಾರಣವಾಗಿದೆ ಎಂದು ಹಳೆಯ ವಿದ್ಯಾರ್ಥಿಗಳ ಸಂಘಟನೆ ತಿಳಿಸಿದೆ. ಸಾರ್ವಜನಿಕರಿಗೆ ಮಾಹಿತಿ ನೀಡದೇ ಈ ಶಾಲೆಯನ್ನು ಬೇರೆ ಕಡೆಗೆ ಸ್ಥಳಾಂತರಿಸಿದ್ದು ಶಿಕ್ಷಣ ಇಲಾಖೆಯ ಬೇಜವಾಬ್ದಾರಿಯ ಕಾರ್ಯ ಆಗಿದೆ. ಮುಂಚೆ ಅನೇಕ ಬಾರಿ ಸಂಬAದಪಟ್ಟ…
