Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೂರುದಾರರು ತೋರಿಸಿದ ಸ್ಥಳಗಳಲ್ಲಿ ಮಹಿಳೆ ಸೇರಿ ಮೂವರ ಅಸ್ಥಿಪಂಜರ ಪತ್ತೆ ಎಂದು ಹೇಳಿದ ವಕೀಲ ಮಂಜುನಾಥ್ ಮಂಗಳೂರು: ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ದಿನಗಳಿಂದ ಅನಾಮಿಕ ತೋರಿಸಿದ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.7ನೇ ದಿನವಾದ ಮಂಗಳವಾರವೂ ಉತ್ಕನನ ಕಾರ್ಯ ಪುನರಾರಂಭಿಸಿದ ವಿಶೇಷ ತನಿಖಾ ತಂಡ(SIT)ಕ್ಕೆ ಯಾವುದೇ ಮಾನವ ಅಸ್ಥಿಪಂಜರದ ಅವಶೇಷಗಳು ಕಂಡುಬಂದಿಲ್ಲ ಎನ್ನಲಾಗಿದೆ.ಭಾರೀ ಮಳೆಯ ನಡುವೆ ಸಾಕ್ಷಿ-ದೂರುದಾರ ತೋರಿಸಿರುವ 11 ಮತ್ತು 12ನೇ ಸ್ಥಳಗಳಲ್ಲಿ SITಯ ತನಿಖಾಧಿಕಾರಿ ಮತ್ತು ಪುತ್ತೂರು ವಿಭಾಗದ ಸಹಾಯಕ ಆಯುಕ್ತ(AC) ಸ್ಟೆಲ್ಲಾ ವರ್ಗೀಸ್ ಅವರ ಮೇಲ್ವಿಚಾರಣೆಯಲ್ಲಿ ಮಂಗಳವಾರ ಸಹ ಸಮಾಧಿ ಅಗೆಯುವ ಕಾರ್ಯ ನಡೆಸಲಾಯಿತು. ಆದರೆ ಯಾವುದೇ ಅವಶೇಷಗಳ ಕುರುಹು ಇಲ್ಲದ ಕಾರಣ SIT ಯ ಪ್ರಯತ್ನಗಳು ಯಾವುದೇ ಫಲಿತಾಂಶ ನೀಡಿಲ್ಲ. ಇಲ್ಲಿಯವರೆಗೆ SIT ಅಗೆದ 12 ಸ್ಥಳಗಳಲ್ಲಿ, ಕೇವಲ ಒಂದು ಸ್ಥಳದಲ್ಲಿ ಮಾತ್ರ ಮಾನವ ಅಸ್ಥಿಪಂಜರ ಪತ್ತೆಯಾಗಿದೆ ಎನ್ನಲಾಗಿದೆ.ಏತನ್ಮಧ್ಯೆ, ಧರ್ಮಸ್ಥಳದಲ್ಲಿ ದಶಕದ ಹಿಂದೆ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಸಾರಿಗೆ ನೌಕರರ ಮುಸ್ಕರದಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸಿದ ಘಟನೆ ಚಡಚಣ ಬಸ್ ನಿಲ್ದಾಣದಲ್ಲಿ ಕಂಡು ಬಂತು. ಅನಾಹುತ ತಡೆಗಟ್ಟಲು ಚಡಚಣ ಪೋಲಿಸರು ಮುಂಜಾಗ್ರತೆ ಕ್ರಮ ಕೈಗೊಂಡಿದ್ದರು.ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಹಳ್ಳಿಗಳಿಂದ ಮುಕ್ಕಾಮ ಬಸ್ ಇದ್ದುದರಿಂದ ಪಟ್ಟಣಕ್ಕೆ ಬಂದರು ಆದರೆ ಮರಳಿ ತಮ್ಮ ಊರಿಗೆ ಹೋಗಲು ಬಸ್ ಬರಲೆಇಲ್ಲ ಖಾಸಗಿ ವಾಹನಗಳಿಗಾಗಿ ವಿದ್ಯಾರ್ಥಿಗಳ ಪರದಾಟ ಕಂಡುಬಂತು.ಸಾರಿಗೆ ಸಂಘಟನೆಗಳ ಜತೆ ಮುಖ್ಯಮಂತ್ರಿ ನಡೆಸಿದ ಮನವೊಲಿಕೆ ಪ್ರಯತ್ನ ವಿಫಲ, ಒಂದು ದಿನ ಮಟ್ಟಿಗೆ ಸಾರಿಗೆ ನೌಕರರ ಮುಸ್ಕರ. ಅವರ ವಿವಿಧ ಬೇಡಿಕೆಗಳಾದ ಹಿಂದಿನ ೨೦೨೪ರ ಜ ೧ರಿಂದ ಅನ್ವಯ ಆಗುವಂತೆ ವೇತನ ಪರಿಷ್ಕರಣೆ, ಸಾರಿಗೆ ನೌಕರರ ೩೮ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು. ಹಿಂದಿನ ೨೦೨೪ರ ಜ ೧ರಿಂದ ಅನ್ವಯ ಆಗುವಂತೆ ವೇತನ ಪರಿಷ್ಕರಣೆ, ಖಾಸಗಿಕರಣ ನಿಲ್ಲಬೇಕು. ವಿದ್ಯುತ್ ಚಾಲಿತ ಬಸ್ನಲ್ಲೂ ಸಾರಿಗೆ ಸಂಸ್ಥೆಯ ಚಾಲಕರನ್ನೇ ನಿಯೋಜಸಬೇಕು ಇನ್ನು ಹಲವಾರು ಬೇಡಿಕೆಗಳನ್ನಿಟ್ಟು ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಇಳಿದಿದ್ದಾರೆ.ಚಡಚಣ ಬಸ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇವರ ಸ್ಮರಣೆಯಿಂದ ಪ್ರತಿಯೊಬ್ಬರ ಬದುಕಿನಲ್ಲಿ ನೆಮ್ಮದಿ ಮೂಡಿ, ಧನಾತ್ಮಕ ಶಕ್ತಿಯ ಅನುಭವವಾಗುತ್ತದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಸೋಮವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣ ಕಾರ್ಯಕ್ರಮದಲ್ಲಿ ‘ಉದಯಲಿಂಗೇಶ್ವರ ಚರಿತಾಮೃತ’ ಧ್ವನಿಸುರುಳಿ ಬಿಡುಗಡೆ ಮಾಡಿ ಅವರು ಮಾತನಾಡಿದರು.ದೇವರ ನಾಮ ಸ್ಮರಣೆಯು ಸರಳ ಆದರೆ ಪರಿಣಾಮಕಾರಿಯಾಗಿದೆ. ಇದು ಎಲ್ಲರ ಜೀವನದಲ್ಲಿ ಶಾಂತಿ, ಸಂತೋಷ ಮತ್ತು ಯಶಸ್ಸನ್ನು ತರುತ್ತದೆ ಎಂದು ಹೇಳಿದರು.ಧ್ವನಿಸುರುಳಿ ರಚಿಸಿದ ಕರ್ಜಗಿಯ ಶಿವಾನಂದ ಶಾಸ್ತ್ರಿ ಮಾತನಾಡಿ, ಉದಯಲಿಂಗರ ಸ್ಮರಣೆ ನಮಗೆಲ್ಲ ಶ್ರೀರಕ್ಷೆ. ದೇವರ ಸ್ಮರಣೆಯು ನಮ್ಮಲ್ಲಿ ವಿಶ್ವ ಭ್ರಾತೃತ್ವದ ಭಾವವನ್ನು ಮೂಡಿಸುತ್ತದೆ ಎಂದರು.ಶಿಕ್ಷಕ ಸಾಹಿತಿ ಸಂತೋಷ ಬಂಡೆ ಮಾತನಾಡಿ, ಉತ್ಸಾಹ ಮತ್ತು ಭಕ್ತಿಯಿಂದ ದೇವರ ಸ್ಮರಣೆಯನ್ನು ಜೀವನದ ಎಲ್ಲಾ ಕಾರ್ಯಗಳಲ್ಲಿ ಅಳವಡಿಸಿಕೊಂಡು, ನಮ್ಮ ಇಷ್ಟ ದೇವರು-ಗುರುವನ್ನು ಸದಾ ಸ್ಮರಿಸುತ್ತಿರಬೇಕು. ನಮ್ಮಲ್ಲಿ ವಿಶ್ವ ಪ್ರೀತಿಯ ಭಾವ ಮೂಡಿಸುವಲ್ಲಿ ದೇವರ ಸ್ಮರಣೆ ಮುಖ್ಯವಾಗಿದೆ ಎಂದು ಹೇಳಿದರು.ಉಮರಾಣಿಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದಿಂದ ಜಿಲ್ಲೆಯ ಛಾಯಾಗ್ರಾಹಕರ ಮಕ್ಕಳಿಗೆ ೨೦೨೪-೨೦೨೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.೮೦ ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣಗೊಂಡ ಛಾಯಾಗ್ರಾಹಕರ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಸಂಘದಿಂದ ಪ್ರತಿಭಾ ಪುರಸ್ಕಾರ ನೀಡಲು ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲೆಯ ಎಲ್ಲ ತಾಲೂಕಿನ ಛಾಯಾಗ್ರಾಹಕರು ತಮ್ಮ ಮಕ್ಕಳ ಪ್ರಸಕ್ತ ಸಾಲಿನ ಶಾಲೆಯ ಧೃಡೀಕೃತ ಎಸ್.ಎಸ್.ಎಲ್.ಸಿ. ಮತ್ತು ಧೃಡೀಕೃತ ಕಾಲೇಜಿನ ದ್ವಿತೀಯ ಪಿ.ಯು.ಸಿ ಅಂಕಪಟ್ಟಿ, ಆಧಾರ ಕಾರ್ಡ, ವಿದ್ಯಾರ್ಥಿಯ ಬ್ಯಾಂಕ್ ವಿವರ, ಇತ್ತಿಚ್ಚಿನ ಎರಡು ಪಾಸಪೋರ್ಟ ಅಳತೆಯ ಭಾವಚಿತ್ರ ಗಳೊಂದಿಗೆ ದಿನಾಂಕ ೧೫-೦೮-೨೦೨೫ರ ಒಳಗಡೆ ಸಂಘದ ಕಛೇರಿ, ಅಧ್ಯಕ್ಷರು, ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಅಂಗಡಿ ನಂ. ೨೦೧, ಮೊದಲನೆ ಮಹಡಿ, ಎಸ್.ಎಸ್. ಕಾಂಪ್ಲೇಕ್ಸ, ಸಿದ್ದೇಶ್ವರ ದೇವಸ್ಥಾನದ ಹತ್ತಿರ, ಬಿ.ಎಲ್.ಡಿ.ಇ. ರಸ್ತೆ, ವಿಜಯಪುರ-೫೮೬೧೦೧ ಇಲ್ಲಿಗೆ ತಲುಪಿಸಲು ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ದ ಅಧ್ಯಕ್ಷ ರಮೇಶ ಚವ್ಹಾಣ ಕೋರಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿಅಧ್ಯಕ್ಷರು, ರಮೇಶ ಚವ್ಹಾಣ…
ರಾಯಚೂರಿನಲ್ಲಿ ನಡೆದ ಕಲಬುರಗಿ ವಲಯ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಕಾಲೇಜಿನ ಮಹಿಳಾ ತಂಡ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಯೋಜಿಸಿದ್ದ ಕಲಬುರಗಿ ವಲಯ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದಿದೆ.ರಾಯಚೂರಿನ ನವೋದಯ ಡೆಂಟಲ್ ಕಾಲೇಜಿನಲ್ಲಿ ಆಗಷ್ಟ 1 ಮತ್ತು 2 ರಂದು ನಡೆದ ಈ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ದೀಪ್ತಿ ಮಂಗಲಗಿ, ಗೀತಾಂಜಲಿ ಮುದ್ನೂರ, ಸಾನಿಕಾ ದೇಶಪಾಂಡೆ, ಅನುರಾಧಾ ರೆಡ್ಡಿ ಮತ್ತು ಪೂಜಾ ಬಿರಾಜದಾರ ಅವರನ್ನೊಳಗೊಂಡ ತಂಡ ಪ್ರಥಮ ಸ್ಥಾನ ಪಡೆಯಿತು.ಮಹಿಳಾ ಚೆಸ್ ತಂಡದ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ, ಸಂಸ್ಥೆಯ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.ಈ ಮಧ್ಯೆ ಮಂಗಳವಾರ ಕಾಲೇಜಿಗೆ ಆಗಮಿಸಿದ ಚೆಸ್ ತಂಡದ ಸದಸ್ಯರನ್ನು ಪ್ರಾಚಾರ್ಯ ಡಾ. ಅಶೋಕ ಪಾಟೀಲ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗದ ವತಿಯಿಂದ ಸಂಪಾದಿಸಲಾದ ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)* ಪುಸ್ತಕದ ಎರಡನೇ ಆವೃತ್ತಿಯನ್ನು ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಸೋಮವಾರ ಬಿಡುಗಡೆ ಮಾಡಿದರು.ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ಪುಸ್ತಕವು ವೈದ್ಯಕೀಯ, ನರ್ಸಿಂಗ್, ಫಾರ್ಮಾ ಮತ್ತು ಭೌತಚಿಕಿತ್ಸೆ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿದೆ ಎಂದು ತಿಳಿಸಿದರು.ಈ ಪುಸ್ತಕವನ್ನು ನಾಡೋಜ ಡಾ. ಪಿ. ಎಸ್. ಶಂಕರ ಮತ್ತು ಡಾ. ಎ. ಪಿ. ಅಂಬಲಿ ಸಂಪಾದಿಸಿದ್ದು, ಬಿ.ಎಲ್.ಡಿ.ಇ. ಡೀಮ್ಡ್ ವಿವಿಯಿಂದ ಪ್ರಕಟಿಸಲಾಗಿದೆ.ಈ ಸಂದರ್ಭದಲ್ಲಿ ವಿವಿ ಕುಲಪತಿ, ಡಾ. ಅರುಣ ಚಂ.ಇನಾಮದಾರ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ವೈದ್ಯಕೀಯ ವಿಭಾಗದ ಡೀನ ಡಾ. ತೇಜಸ್ವಿನಿ ವಲ್ಲಭ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ ಅಧೀಕ್ಷಕ,…
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಒಂದು ಊರಿನ ಜಾತ್ರೆಯು ವಿಜೃಂಭಣೆಯಿಂದ ನಡೆದಿತ್ತು. ಜಾತ್ರೆಯಲ್ಲಿ ಇಡೀ ಊರಿಗೆ ಊರೇ ಸೇರಿತ್ತು. ವೈವಿಧ್ಯಮಯ ಅಂಗಡಿಗಳು, ಹೋಟೆಲ್ಗಳ ಹಬ್ಬವೇ ಅಲ್ಲಿತ್ತು. ಜಾತ್ರೆಗೆ ಒಬ್ಬ ರೈತ ತನ್ನ ಮಗಳನ್ನು ಕರೆದುಕೊಂಡು ಬಂದಿದ್ದ. ಜಾತ್ರೆಯಲ್ಲಿ ಮಗಳಿಗೆ ತಿಂಡಿ ತಿನಿಸು, ಬಟ್ಟೆಬರೆ, ಪುಸ್ತಕಗಳನ್ನು ಕೊಡಿಸಿ ಮನೆಗೆ ಹೊರಡುತ್ತಾನೆ. ಹೀಗೆ ಮನೆಗೆ ಹೋಗುತ್ತಿರಬೇಕಾದರೆ ಅಲ್ಲಿನ ಗೊಂಬೆಗಳ ಮಳಿಗೆಯ ಮುಂಭಾಗಕ್ಕೆ ಮಗಳೊಂದಿಗೆ ಬರುತ್ತಾನೆ. ಗೊಂಬೆಯ ಅಂಗಡಿಯಲ್ಲಿದ್ದ ಸುಂದರವಾದ ಗೊಂಬೆಗಳನ್ನು ನೋಡಿ ರೈತನ ಮಗಳು ತನಗೆ ಗೊಂಬೆ ಬೇಕು ಎಂದು ಹಠ ಹಿಡಿಯುತ್ತಾಳೆ. ಮಗಳ ಹಠಕ್ಕೆ ಸೋತ ತಂದೆಯು ಗೊಂಬೆ ಖರೀದಿಸಲು ಗೊಂಬೆಯ ಅಂಗಡಿಯೊಳಕ್ಕೆ ಮಗಳನ್ನು ಕರೆದೊಯ್ಯುತ್ತಾನೆ. ವಿವಿಧ ಗಾತ್ರದ, ವಿವಿಧ ರೂಪದ ಹಲವಾರು ಗೊಂಬೆಗಳನ್ನು ಅಲ್ಲಿ ನೇತು ಹಾಕಲಾಗಿತ್ತು. ಗೊಂಬೆಗಳನ್ನು ನೋಡಿ ಗೊಂದಲಕ್ಕೊಳಗಾಗಿ ಯಾವುದನ್ನು ಖರೀದಿಸಲಿ ಎಂದು ಯೋಚಿಸುತ್ತಾನೆ.ತಂದೆಯು ಅಂಗಡಿಯವನಲ್ಲಿ ಅಂಗಡಿಯಲ್ಲಿ ಜೋಡಿಸಿಟ್ಟಿದ್ದ ವಿವಿಧ ಗೊಂಬೆಗಳ ದರವನ್ನು ವಿಚಾರಿಸುತ್ತಾನೆ. ಮೊದಲನೆಯ…
ಲೇಖನ- ವೀಣಾ ಹೇಮಂತಗೌಡ ಪಾಟೀಲ್ಮುಂಡರಗಿಗದಗ ಉದಯರಶ್ಮಿ ದಿನಪತ್ರಿಕೆ ಪಂಚಮಹಾಭೂತಗಳಿಂದ ಕೂಡಿರುವ ಈ ಬ್ರಹ್ಮಾಂಡದಲ್ಲಿ ನಾವು ಭೂಮಿಯ ಮೇಲೆ ನಡೆದಾಡುವ, ಗಾಳಿಯನ್ನು ಸೇವಿಸುವ, ನೀರನ್ನು ಕುಡಿಯುವ, ಬೆಂಕಿಯನ್ನು ಬಳಸಿ ಅಡುಗೆ ಮಾಡುವ ಮತ್ತು ಆಕಾಶ ತತ್ವವನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವ ಮೂಲಕ ಎಲ್ಲ ನೈಸರ್ಗಿಕ ವಸ್ತುಗಳನ್ನು ನಮ್ಮದಾಗಿಸಿಕೊಂಡಿದ್ದೇವೆ, ಬಳಸುತ್ತೇವೆ ಎಲ್ಲವೂ ನಿಜ ಆದರೆ ಈ ನಿಸರ್ಗ ಸಹಜ ಸಂಪತ್ತುಗಳನ್ನು ಕೆಲವೊಮ್ಮೆ ನಾವು ದುರ್ಬಳಕೆ ಮಾಡಿಕೊಳ್ಳುವುದು ಕೂಡ ಉಂಟು.ಇದರಲ್ಲಿ ಮುಖ್ಯವಾಗಿ ವಿದ್ಯುತ್. ಅವಶ್ಯಕತೆ ಇದ್ದಾಗ ಲೈಟ್ ಅನ್ನು ಫ್ಯಾನುಗಳನ್ನು ಹಾಕಿಕೊಂಡು ಅವಶ್ಯಕತೆ ಇಲ್ಲದಾಗ ಅವುಗಳನ್ನು ಬಂದ್ ಮಾಡುವ ಜರೂರತ್ತು ನಮಗಿದೆ. ಯಾವುದನ್ನು ನಮಗೆ ಉತ್ಪಾದಿಸಲು ಸಾಧ್ಯವಿಲ್ಲವೂ ಅದನ್ನು ಅನವಶ್ಯಕವಾಗಿ ಬಳಸುವ ಹಕ್ಕು ನಮಗಿಲ್ಲ. ಅದು ಅಲ್ಲದೆ ಅನವಶ್ಯಕವಾಗಿ ವಿದ್ಯುತ್ ಬಳಕೆಯನ್ನು ಮಾಡುವ ಮೂಲಕ ನಾವು ಹೆಚ್ಚಿನ ವಿದ್ಯುತ್ ದರವನ್ನು ನೀಡಬೇಕಾಗುತ್ತದೆ ಎಂಬುದು ನಮಗೆ ಗೊತ್ತಿರಬೇಕು. ನಮಗೆ ಎಲ್ಲವನ್ನೂ ನೀಡುವ ಭೂಮಿ ತಾಯಿಯ ಮೇಲೆ ನಾವು ಉಗುಳುತ್ತೇವೆ. ಬಹಳಷ್ಟು ಬಾರಿ ಸಂಬಂಧಿಸದ ಸ್ಥಳಗಳಲ್ಲಿ ಕೂಡ ಸಾರ್ವಜನಿಕವಾಗಿ ರಸ್ತೆಗಳ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಮುಂದೆ ವೈದ್ಯ, ಇಂಜನೀಯರ್ಗಳಾಗಿ ವೇದಿಕೆಯಲ್ಲಿ ಕುಳಿತು ಸನ್ಮಾನ ಸ್ವೀಕರಿಸುವಂತಾಗಲಿ ಎಂದು ಪದವಿಪೂರ್ವ ಉಪನಿರ್ದೇಶಕರ ಕಾರ್ಯಾಲಯದ ಶಾಖಾಧಿಕಾರಿ ಪ್ರಕಾಶ ಗೊಂಗಡಿ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಎ.ಬಿ.ಸಾಲಕ್ಕಿ ಕಾಲೇಜಿನಲ್ಲಿ ಶನಿವಾರ ಜರುಗಿದ ೨೦೨೫-೨೬ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್, ಇ.ಎಲ್ಸಿ ಹಾಗೂ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.ನಮ್ಮ ಸಾಧನೆ ಪಾಲಕರು, ಶಿಕ್ಷಕರು ಸೇರಿದಂತೆ ನಾವು ಕಲಿತ ಶಿಕ್ಷಣ ಸಂಸ್ಥೆಗೆ ಗೌರವ ದೊರಕಿಸುವಂತಾಗಬೇಕು. ಆಗ ಮಾತ್ರ ಆತ್ಮತೃಪ್ತಿ, ಸಮ್ಮಾನ ದೊರೆಯಲು ಸಾಧ್ಯ ಎಂದರು.ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಜಿ.ಪಿ.ಸಾಲಕ್ಕಿ ಮಾತನಾಡಿ, ಪಟ್ಟಣದಲ್ಲಿ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಬಿಎಲ್ಡಿಇ ಸಂಸ್ಥೆಯ ಕೈಗೊಂಡ ಕಾರ್ಯಗಳ ಕುರಿತು ಮಾತನಾಡಿದರು.ಕ್ರೀಡಾ ಚಟುವಟಿಕೆಗಳಿಗೆ ವ್ಹಾಲಿಬಾಲ್ ಸರ್ವಿಸ್ ಮಾಡುವ ಮೂಲಕ ವಿಜಯಪುರದ ಗೆಜ್ಜೆ ಕರಿಯರ್ ಅಕಾಡಮಿ ಅಧ್ಯಕ್ಷ ಸುರೇಶ ಗೆಜ್ಜೆ ಚಾಲನೆ ನೀಡಿದರು. ಬಸನಗೌಡ ಲಿಂಗದಳ್ಳಿ (ಚಬನೂರ) ೫೦ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ಬಿಡುಗಡೆಗೊಳಿಸುವುದರ ಜೊತೆಗೆ…
ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕು ಶಿಕ್ಷಕರ ಸಭೆ, ಸಮಾರಂಭಗಳಿಗೆ ಅಗತ್ಯವಾದ ಸಭಾಭವನ ನಿರ್ಮಾಣಕ್ಕೆ ತುರ್ತಾಗಿ ಹತ್ತು ಲಕ್ಷ ರೂ.ಗಳ ಅನುದಾನವನ್ನು ನೀಡಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶನಿವಾರ ಜರುಗಿದ ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿಂದಗಿ ಹಾಗೂ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಡಿ ಜರುಗಿದ ತಾಲ್ಲೂಕು ಹಾಗೂ ಕಲಕೇರಿ ವಲಯದ ಶಿಕ್ಷಕರ ಗುರುಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಬಿ.ಯಡ್ರಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ತಮ್ಮ ಸೇವಾಪುಸ್ತಕಗಳನ್ನು ಶಿಕ್ಷಕರೆಲ್ಲರೂ ಖುದ್ದಾಗಿ ಪರಿಶೀಲಿಸಿಕೊಳ್ಳಲು ಶಿಕ್ಷಣ ಇಲಾಖೆ ಅವಕಾಶವನ್ನು ಕಲ್ಪಿಸಿದೆ. ತಮ್ಮೆಲ್ಲ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಗುವುದು ಎಂದರು.ಶಿಕ್ಷಕರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಜಿ.ಎಸ್.ಬೇವನೂರ ಮಾತನಾಡಿ, ಚುನಾವಣೆಯನ್ನು ಹೊರತುಪಡಿಸಿ ಉಳಿದೆಲ್ಲಾ ಕಾರ್ಯಗಳಿಂದ ಶಿಕ್ಷಕರೆಲ್ಲರಿಗೂ ಮುಕ್ತಿ ನೀಡಬೇಕು. ಶೀಘ್ರದಲ್ಲೇ ಪಿ ಎಸ್ ಟಿ ಶಿಕ್ಷಕರ ಸಮಸ್ಯೆ ಶೀಘ್ರದಲ್ಲೇ ಇತ್ಯರ್ಥಗೊಳ್ಳಲಿದೆ…
