Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನಲ್ಲಿ ಅನಧಿಕೃತ ಶಾಲೆಗಳ ಹಾವಳಿ ಹೆಚ್ಚಾಗಿದ್ದು ಅವುಗಳ ಕುರಿತು ಕ್ರಮ ಕೈಗೊಳ್ಳಲು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ಸಿದ್ಧೇಶ್ವರ ಶಾಲೆಯ ಆವರಣದಲ್ಲಿ ಶನಿವಾರ ಕರ್ನಾಟಕ ಸೇನೆಯ ಸದಸ್ಯರು ಶಾಸಕರನ್ನು ಕಂಡು ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಹಸನ್ ನದಾಫ್ ಮಾತನಾಡಿ, ಅನಧಿಕೃತ ಶಾಲೆಗಳು, ಕೋಚಿಂಗ ಸೆಂಟರಗಳ ಹಾವಳಿ ತಾಲ್ಲೂಕಿನಾದ್ಯಂತ ಮಿತಿಮೀರಿದೆ.ಇಂತಹ ಶಾಲೆಗಳಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಗಣನೀಯವಾಗಿ ಕುಸಿದಿದೆ. ಈ ಅನಧಿಕೃತ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಅಂತಹ ವಿದ್ಯಾರ್ಹತೆಗಳನ್ನು ಪಡೆದವರು ಮಾತ್ರ ಶಿಕ್ಷಕರಾಗಿದ್ದಾರೆ. ಇದೊಂದು ವ್ಯಾಪಕ ದಂಧೆಯಾಗಿದ್ದು ಈ ಕೂಡಲೇ ಇಂತಹ ಶಾಲೆಗಳನ್ನು ಬಂದ್ ಮಾಡಿ, ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಲವು ಬಾರಿ ನಾವು ಈಗಾಗಲೇ ಈ ಕುರಿತು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದರು.ಮನವಿ ಸ್ವೀಕರಿಸಿದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಆರಾಧ್ಯದೈವ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ನಿತ್ಯ ನಡೆಯಲಿರುವ ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಸೋಮವಾರ ಪೂಜೆ ಸಲ್ಲಿಸಿ, ಚಾಲನೆ ನೀಡಿದರು.ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಪರ ಸ್ಥಳದಿಂದ ಬಂದಂತ ಭಕ್ತಾಧಿಗಳಿಗೆ, ಪ್ರವಾಸಿಗರಿಗೆ, ರುದ್ರಾಭಿಷೇಕ ಮಾಡಿಸುವ ಭಕ್ತಾಧಿಗಳಿಗೆ ನಿತ್ಯ ದಾಸೋಹ ಸೇವೆ ಕಲ್ಪಿಸಲಾಗುತ್ತದೆ. ಪ್ರಾರಂಭೋತ್ಸವ ದಿನದ ದಾಸೋಹ ಸೇವೆಯನ್ನು ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ಕುಟುಂಬದಿಂದ ನೆರವೇರಿಸಿದರು.ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರಮನ್ ಬಸಯ್ಯ ಹಿರೇಮಠ, ನಿರ್ದೇಶಕರಾದ ಬಸವರಾಜ ಸೂಗೂರ, ಸದಾಶಿವ ಗುಡ್ಡೋಡಗಿ, ಎನ್.ಎಂ.ಗೊಲಾಯಿ, ಮಲ್ಲಿಕಾರ್ಜುನ ಹಕ್ಕಾಪಕ್ಕಿ, ಮಲಕಪ್ಪ ಗಾಣಿಗೇರ, ಸಾಯಿಬಣ್ಣ ಭೋವಿ, ವಿಜಯಕುಮಾರ ಡೋಣಿ, ಎಸ್.ಎಸ್.ನಾಡಗೌಡ, ಸುದೀರ ಚಿಂಚಲಿ, ಮುಖಂಡರಾದ ಸಿದ್ರಾಮಪ್ಪ ಉಪ್ಪಿನ ಸೇರಿದಂತೆ ಧಾರ್ಮಿಕ ಸಮಿತಿ ಸದಸ್ಯರುಗಳು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ‘ಜೀವನದಲ್ಲಿ ತಿರುವುಗಳು ಯಾವಾಗಲಾದರೂ ಬರಬಹುದು ಮಹಿಪತಿ ದಾಸರಿಸಿಗೆ ನಂಗಾಶಾಹಿ ಸೂಫಿಯ ಮೂಲಕವಾಗಿ ಅವರು ಆಧ್ಯಾತ್ಮದತ್ತ ಹೊರಳಿದರು’ ಡಾ. ಕೃಷ್ಣ ಕೊಲ್ಹಾರಕುಲಕರ್ಣಿ ಹೇಳಿದರು.ನಗರದ ಶ್ರೀಕೃಷ್ಣ ವಾದಿರಾಜ ಮಠದಲ್ಲಿ ನಡೆದ, ‘ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ)’ ಆಯೋಜನೆ ‘ಮಹಿಪತಿದಾಸರ ಜೀವನ, ಸಾಹಿತ್ಯ ಹಾಗೂ ಸಮಕಾಲೀನ ಇತಿಹಾಸ’ ವಿಷಯ ಮೇಲೆ ಮಾತಾಡಿದ ಅವರು ‘ಮಲ್ಲಿಕ್ ಕಾಫೂರ್, ಮಹಮ್ಮದ್ ಬಿನ್ ತುಘಲಕ್ ದಾಳಿಯ ನಂತರ ದಕ್ಷಿಣದ ತುಂಗಭದ್ರಾ ನದಿಯ ಕೆಳಗಿನ ಭಾಗದಲ್ಲಿ ‘ವಿಜಯನಗರ” ಸಾಮ್ರಾಜ್ಯ ; ನದಿಯ ಮೇಲ್ಬಾಗ ಬಹುಮನಿ ಸಾಮ್ರಾಜ್ಯಗಳು ಉದಯಿಸಿದವು. ಬಹುಮನಿ ಸಾಮ್ರಾಜ್ಯದಲ್ಲಿ ವಿಜಯಪುರ ಒಂದು ಸುಬೆಯಾಗಿದ್ದು ‘ಯೂಸುಫ್’ ಈ ಸುಬೆಯ ಸರ್ದಾರನಾಗಿದ್ದನು. ಅವನೇ ಮುಂದೇ ಆದಿಲ್ ಶಾಹಿ ಸಾಮ್ರಾಜ್ಯ ಸ್ಥಾಪನೆ ಮಾಡುತ್ತಾನೆ. ಈ ಆದಿಲ್ ಶಾಹಿ ಮನೆತನದ ಎರಡನೇ ಅಲಿ ಆದಿಲ್ ಶಾಹಿ ಕಾಲದಲ್ಲಿ ಮಹಿಪತಿದಾಸರು ಹಣಕಾಸು ಇಲಾಖೆಯಲ್ಲಿದ್ದರು. ಅವರಿಗೆ ನಂಗಾಶಾಹಿ ಸೂಫಿಯ ಮೂಲಕ ಪರಿವರ್ತನೆಗೊಂಡು ಭಾಸ್ಕರಸ್ವಾಮಿಗಳ ಶಿಷ್ಯರಾಗುತ್ತಾರೆ. ಮಹಿಪತಿದಾಸರು ಯೋಗ ಸಾಧನ ಮೂಲಕ ದಿವ್ಯತೆಯನ್ನು ಪಡೆದರು. ಅದನ್ನು…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಸಮೀಪದ ಬರಡೋಲ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಚಡಚಣ ವಲಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುಜಾತಾ ಹೂನೂರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಶಿಕ್ಷಣ ಸಂಯೋಜಕ ಎನ್.ಎಸ್. ಸಿನಖೇಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು, ಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಇಲಾಖೆ ನೀಡಿರುವ ೨೯ ಅಂಶಗಳ ಅನುಷ್ಠಾನ ಮತ್ತು ದಾಖಲಿಕರಣದ ಕುರಿತು, ಎಸ್.ಟಿ.ಎಸ್. ನಲ್ಲಿ ಹಾಜರಾತಿ ಕೇಂದ್ರಿಕರಣ, ಎಲ್.ಬಿ.ಎ. ಆಧಾರಿತ ಘಟಕ ಪರೀಕ್ಷೆಗಳ ಕುರಿತು, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಪ್ರಗತಿಗಾಗಿ ಕೈಗೊಳ್ಳಬೇಕಾದ ಅಂಶಗಳ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುಜಾತಾ ಹೂನೂರ ಮಾಹಿತಿ ನೀಡಿದರು,ಸಭೆಯಲ್ಲಿ ಉಪ ಪ್ರಾಂಶುಪಾಲ ಎಸ್.ಆಯ್.ಚನಗೊಂಡ, ಮುಖ್ಯ ಶಿಕ್ಷಕರಾದ ಎ.ಬಿ. ಪಾವಲೆ, ಜಿ.ಎಸ್. ಕಾಂಬಳೆ, ಆರ್.ಡಿ. ಬಿರಾದಾರ ಸೇರಿದಂತೆ ಚಡಚಣ ವಲಯದ ಎಲ್ಲ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ವರ್ಷದ ೧೨ ತಿಂಗಳಲ್ಲಿ ಶ್ರಾವಣ ಮಾಸದ ಒಂದು ತಿಂಗಳು ಭಕ್ತಿ ಭಾವೈಕ್ಯತೆಯಿಂದ ಕೂಡಿರುತ್ತದೆ. ಭಗವಂತನಲ್ಲಿ ಪ್ರಾರ್ಥಿಸಲು ಒಳ್ಳೆಯ ಸಂದರ್ಭ ಇದಾಗಿದೆ ಎಂದು ಚಿಮ್ಮಡ ವಿರಕ್ತಮಠದ ಪ್ರಭು ಮಹಾಸ್ವಾಮಿಗಳು ಹೇಳಿದರು.ಗ್ರಾಮದ ಪ್ರಭುಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಎರಡನೇ ಸೋಮವಾರ ಹಮ್ಮಿಕೊಂಡ ಭಕ್ತಗಣ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಾನವ ಕುಲಕ್ಕೆ ಬರುವ ಕಂಟಕಗಳು ತೊಲಗಿ ಎಲ್ಲೆಡೆ ಸುಖಶಾಂತಿ ನೆಲೆಸಲಿ ಎಂದು ಪ್ರಭುಲಿಂಗೇಶ್ವರನಲ್ಲಿ ಎಲ್ಲರೂ ಭಕ್ತಿಯಿಂದ ಪ್ರಾರ್ಥಿಸೋಣ. ಶ್ರಾವಣ ಮಾಸದ ನಿಮಿತ್ಯ ಎಲ್ಲ ದೇವಸ್ಥಾನಗಳಲ್ಲಿ ಪೂಜಾದಿ ಕಾರ್ಯಕ್ರಮಗಳು ನಡೆಯುತ್ತವೆ. ಒಳ್ಳೆಯ ಮನಸ್ಸು, ಒಳ್ಳೆಯ ಭಾವನೆಯನ್ನು ಇಟ್ಟುಕೊಂಡು ಮುನ್ನಡೆಯೋಣ. ಅಲ್ಲಮಪ್ರಭು ದೇವರನ್ನು ಸ್ಮರಿಸಿಕೊಳ್ಳುವ ಈ ಪಾದಯಾತ್ರೆಯಲ್ಲಿ ಪ್ರತಿ ಸೋಮವಾರ ಎಲ್ಲ ಭಕ್ತಾದಿಗಳು ನಿರಂತರವಾಗಿ ಪಾಲ್ಗೊಳ್ಳುವ ಮೂಲಕ ಭಕ್ತಿಭಾವ ಪಸರಿಸೋಣ ಎಂದರು.ಪ್ರತೀ ವರ್ಷದಂತೆ ಈ ಬಾರಿಯೂ ಬಂಡಿಗಣಿ ಬಸವಗೋಪಾಲ ಮಠದ ಶ್ರೀ ಅನ್ನದಾನೇಶ್ವರ ಶ್ರೀಗಳಿಂದ ದೇವಸ್ಥಾನ ಆವರಣದಲ್ಲಿ ಭಕ್ತರಿಗೆ ಪ್ರಸಾದ ವಿತರಣಾ ಕಾರ್ಯಕ್ರಮ ನಡೆಯಿತು.ಗ್ರಾ. ಪಂ. ಮಾಜಿ ಉಪಾಧ್ಯಕ್ಷ ಪ್ರಕಾಶ ಪಾಟೀಲ, ಅವ್ವನಪ್ಪಾ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ನೂತನ ಸುಶೀಲವರ್ದಿನಿ ಮಹಿಳಾ ಕೋ- ಆಪರೇಟಿವ್ ಸೊಸೈಟಿ ಉದ್ಘಾಟನಾ ಕಾರ್ಯಕ್ರಮಕ್ಕೆ ಖ್ಯಾತ ಚಿತ್ರನಟಿ ಶೃತಿ ಆಗಮಿಸಲಿದ್ದಾರೆ ಎಂದು ಸೊಸೈಟಿಯ ಅಧ್ಯಕ್ಷ ಲಕ್ಷ್ಮೀಬಾಯಿ(ಸವಿತಾ) ಚಂದ್ರಶೇಖರ್ ಬೆಳ್ಳುಬ್ಬಿ ಹೇಳಿದರು.ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 6 ರಂದು ಬೆಳಗ್ಗೆ 11.00 ಗಂಟೆಗೆ ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದ ಸಂಕೀರ್ಣದಲ್ಲಿ ಸುಶೀಲವರ್ದಿನಿ ಮಹಿಳಾ ಕೋ ಆಪರೇಟಿವ್ ಸೊಸೈಟಿ ಉದ್ಘಾಟನೆಯನ್ನು ಚಿತ್ರನಟಿ ಶೃತಿಯವರು ನೆರವೇರಿಸಲಿದ್ದಾರೆ. ಸಾನಿಧ್ಯವನ್ನು ದಿಗಂಬರೇಶ್ವರ ಮಠದ ಯೋಗಿ ಕಲ್ಲಿನಾಥ ದೇವರು ಹಾಗೂ ಶೀಲವಂತ ಮಠದ ಕೈಲಾಸನಾಥ ಮಹಾಸ್ವಾಮಿಗಳು ವಹಿಸುವರು, ಅಧ್ಯಕ್ಷತೆಯನ್ನು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ವಿಧಾನಪರಿಷತ್ ಸದಸ್ಯ ಎಚ್.ಆರ್. ನಿರಾಣಿ ಜ್ಯೋತಿ ಬೆಳಗಿಸುವವರು, ಮಾಜಿ ಸಚಿವ ಎಸ್.ಆರ್. ಪಾಟೀಲ್ ಶೇಅರ್ ಪತ್ರಗಳನ್ನು ವಿತರಿಸುವರು.ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ರಾಜಶೇಖರ್ ಶೀಲವಂತ, ವಿಜಯಪುರ ಬಿಜೆಪಿ ಜಿಲ್ಲಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಬಾಗಲಕೋಟ ಬಿಜೆಪಿ ಜಿಲ್ಲಾ ಅಧ್ಯಕ್ಷ ಶಾಂತಗೌಡ ಪಾಟೀಲ್, ವಯನಾಡು ಓವರಸಿಸ್ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ವಿಜಯಲಕ್ಷ್ಮಿ ವಿಜಯ್…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಮನುಷ್ಯ ಜನ್ಮ ಹುಟ್ಟಿ ಬಂದ ಮೇಲೆ ಪರೋಪಕಾರಿಯಾಗಿ, ತನ್ನ ಸುತ್ತಲಿನ ಜನರೊಂದಿಗೆ ಸಾಮರಸ್ಯದಿಂದ ಬದುಕಿ ತನ್ನ ಕರ್ತವ್ಯ ಪಾಲನೆ ಮಾಡಿದ್ದೆ ಆದರೆ ಅದುವೇ ಧರ್ಮ ಪರಿಪಾಲನೆ ಆಗುತ್ತದೆ ಎಂದು ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರು ಹೇಳಿದರು.ಪಟ್ಟಣದ ವೀರಭಾರತಿ ವಿದ್ಯಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ಹಾಗೂ ಧರ್ಮಸಭೆಯನ್ನು ಉದ್ದೇಶಿಸಿ ಭಟ್ಟಾರಕ ಸ್ವಾಮೀಜಿಯವರು ಮಾತನಾಡಿದರು.ಸಂಸ್ಥೆಯ ಅಧ್ಯಕ್ಷ ಅಭಿನಂದನ ಕಿರಣಗಿ ಮಾತನಾಡಿ 1990 ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ಸ್ಥಾಪಿತವಾದ ವೀರ ಭಾರತಿ ಸಂಸ್ಥೆ ಇಂದು ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನ ದಾಸೋಹವನ್ನು ನಡೆಸುತ್ತಿದೆ. ಇದಕ್ಕೆ ಸಮಾಜದ ಹಿರಿಯರ ಆಶೀರ್ವಾದ ಹಾಗೂ ತಮ್ಮೆಲ್ಲರ ಸಹಕಾರದಿಂದ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ ಎಂದರು.ಪ್ರಾರಂಭದಲ್ಲಿ ಜೈನ ಸಮಾಜದ ಹಿರಿಯರಾದ ಶನತ ಕುಮಾರ ಹಳ್ಳಿ, ಅಜಿತ ಧನಶೆಟ್ಟಿ, ಅಜಿತ ದೋಶಿ, ಕುಲಭೂಷಣ ಕೋಟಿ, ಶ್ರೀಮತಿ ಶೀಲಾ ದುರ್ಗಿ ಮಾತನಾಡಿದರು.ಪಟ್ಟಣದಲ್ಲಿರುವ ದೊಡ್ಡ ಬಸ್ತಿ ಕಟ್ಟಡಕ್ಕೆ ವೀರಭಾರತಿ ವಿದ್ಯಾ ಕೇಂದ್ರದ ಅಧ್ಯಕ್ಷ ಅಭಿನಂದನ ಕಿರಣಗಿ ಒಂದು ಲಕ್ಷ ಹನ್ನೊಂದು ಸಾವಿರ ರೂ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪರಿಶ್ರಮ ಜೀವಿಗಳಾದ ಬಂಜಾರಾ ಸಮಾಜ ಬಾಂಧವರದಲ್ಲಿ ದೈವ ಭಕ್ತಿಗೆ ಕೊರತೆ ಇಲ್ಲ. ಆದರೆ ಉಕ್ಕಲಿ ತಾಂಡಾದ ಬಂಜಾರಾ ಜನರು ದೇವರ ಮೇಲಿನ ಭಕ್ತಿಯ ಜೊತೆಗೆ ಯುಕ್ತಿಗೂ ಆದ್ಯತೆ ನೀಡಬೇಕಿದೆ. ದೇವಸ್ಥಾನ ಕಟ್ಟಲು ತೋರುವ ಆಸಕ್ತಿ ಜೊತೆಗೆ ನಿಮ್ಮ ಮಕ್ಕಳ ಉನ್ನತ ಭವಿಷ್ಯಕ್ಕಾಗಿ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಬೇಕೆಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರು ಕಿವಿಮಾತು ಹೇಳಿದರು.ತಾಲೂಕಿನ ಉಕ್ಕಲಿ ತಾಂಡಾದಲ್ಲಿ ಸೋಮವಾರ ಸಂತ ಸೇವಾಲಾಲ ಮೂರ್ತಿ ಅನಾವರಣ ಹಾಗೂ ಅಂಗನವಾಡಿ ನೂತನ ಕಟ್ಟಡ ಲೋಕಾರ್ಪಣೆ ಮಾಡಿ ನಂತರ ಜರುಗಿದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣಕ್ಕೆ ಆದ್ಯತೆ ನೀಡಿದರೆ ನಿಮ್ಮ ಮಕ್ಕಳು ಸರ್ಕಾರದ ಉನ್ನತ ಹುದ್ದೆಗಳನ್ನು ಅಲಂಕರಿಸಿ, ಸಮಾಜದಲ್ಲಿ ವಿವಿಧ ಸೇವೆ ಮಾಡಲು ಸಾಧ್ಯವಾಗಲಿದೆ ಎಂದರು.ಬಂಜಾರಾ ಸಮಾಜದವರು ದುರ್ಗಾದೇವಿ ಹಾಗೂ ಸಂತ ಸೇವಾಲಾಲ ಅವರ ದೇವಸ್ಥಾನ ಕಟ್ಟುವಲ್ಲಿ ವಿಶೇಷ ಆದ್ಯತೆ ನೀಡುತ್ತೀರಿ. ಈ ಎರಡು ದೇವಸ್ಥಾನಗಳ ಹೊರತಾಗಿ ಅನ್ಯ…

Read More

ಸಿಎಂ ಜತೆ ಮಾತುಕತೆ ವಿಫಲ | ಲಕ್ಷಾಂತರ ಪ್ರಯಾಣಿಕರಿಗೆ ಅನಾನುಕೂಲತೆ ಸಾಧ್ಯತೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ನಡೆದ ಮಾತುಕತೆ ವಿಫಲವಾದ ಕಾರಣ, ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಮಂಗಳವಾರದಿಂದ ಅನಿರ್ದಿಷ್ಟ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.ಸಾರಿಗೆ ನೌಕರರ ಮುಷ್ಕರವು ಕರ್ನಾಟಕ ಮತ್ತು ಹೊರಗಿನ ಬಸ್‌ಗಳ ಕಾರ್ಯಾಚರಣೆಯ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ)ಯನ್ನು ತಮ್ಮ ಪ್ರಯಾಣಕ್ಕಾಗಿ ಅವಲಂಬಿಸಿರುವ ಲಕ್ಷಾಂತರ ಪ್ರಯಾಣಿಕರಿಗೆ ಅನಾನುಕೂಲತೆ ಉಂಟು ಮಾಡುವ ಸಾಧ್ಯತೆಯಿದೆ.ಏತನ್ಮಧ್ಯೆ, ಕರ್ನಾಟಕ ಹೈಕೋರ್ಟ್ ಸೋಮವಾರ, ನೌಕರರ ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ(ಜೆಎಸಿ)ಗೆ ಸೂಚನೆ ನೀಡಿದೆ.ಹೈಕೋರ್ಟ್ ನಿರ್ದೇಶನಕ್ಕೆ ಪ್ರತಿಕ್ರಿಯಿಸಿದ ಜೆಎಸಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರು, ಹೈಕೋರ್ಟ್ ಆದೇಶದ ಪ್ರತಿ ಇನ್ನೂ ನಮ್ಮ ಕೈಗೆ ತಲುಪಿಲ್ಲ. ಆದೇಶ ಪ್ರತಿ ಕೈತಲುಪಿದ ಬಳಿಕ ಬಂದ್‌ ಬಗ್ಗೆ ನಿರ್ಧಾರ ಮಾಡುತ್ತೇವೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕರ್ನಾಟಕ ಜಾನಪದ ಅಕಾಡೆಮಿ ಬೆಂಗಳೂರು, ಭೀಮಾoತರಂಗ ಸಾಹಿತ್ಯಿಕ, ಸಾಂಸ್ಕೃತಿಕ ಜಗಲಿ ಕೇಂದ್ರ, ಇಂಡಿ, ಕರ್ನಾಟಕ ವಿದ್ಯಾವರ್ಧಕ ಸಂಸ್ಥೆ ಇಂಡಿ ಅವರ ಸಹಯೋಗದಲ್ಲಿ ಪಟ್ಟಣದ ಕರ್ನಾಟಕ ಬಿಎಡ್ ಕಾಲೇಜಿನಲ್ಲಿ ದಿ:07-08-2025 ರಂದು ಬೆಳಿಗ್ಗೆ 10 ಗಂಟೆಗೆ ಗೀಗಿ ಸಂಭ್ರಮ, ಸನ್ಮಾನ ಸಮಾರಂಭ, ಹರದೇಶಿ-ನಾಗೇಶಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಉದ್ಘಾಟಿಸುವರು. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೊದ್ದಾರ, ಕರ್ನಾಟಕ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಬಸವರಾಜ ಕುಮಸಗಿ ಆಗಮಿಸುವರು. ಬಾಗಲಕೋಟದ ಗೊಂದಲಿ ಪದ ಕಲಾವಿದರು, ಪದ್ಮಶ್ರೀ ಪ್ರಶಸ್ತಿ ವಿಜೇತ ಡಾ ವೆಂಕಪ್ಪ ಅಂಬಾಜಿ ಸುಗತೇಕರ ಸನ್ಮಾನಿತರಾಗಿ ಆಗಮಿಸುವರು.ಗುಳೇದಗುಡ್ಡದ ವಿಶ್ರಾಂತ ಪ್ರಾಚಾರ್ಯ ಸಿ ಎಂ ಜೋಶಿ ಅಭಿನಂದನಾ ನುಡಿಗಳನ್ನಾಡುವರು.ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ರಾಘವೇಂದ್ರ ಕುಲಕರ್ಣಿ, ಬಿಎಡ್ ಕಾಲೇಜಿನ ಪ್ರಾಚಾರ್ಯೆ ಸುಧಾ ಸುಣಗಾರ ಉಪಸ್ಥಿತರಿರುವರು.ಮಧ್ಯಾನ್ಹ 12 ಗಂಟೆಗೆ ಹರದೇಶಿ-ನಾಗೇಶಿ ಸ್ವರೂಪ ಕುರಿತು ಜರುಗಲಿರುವ…

Read More