Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ವೃತ್ತಿಯಿಂದ ನಿವೃತ್ತಿ ಅನಿವಾರ್ಯ/ ವೃತ್ತಿ ಸಮಯದಲ್ಲಿ ಸುಮಿತ್ರಾ ಸಾನೆ ಅವರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಸೇವೆ ನಮಗೆ ಮಾದರಿಯಾಗಿದೆ ಎಂದು ಸಮಾಜ ಕಲ್ಯಾಣಾಧಿಕಾರಿ ಜಗದೀಶ್ ಪಾಸೋಡಿ ಹೇಳಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಪದವಿಪೂರ್ವ ಬಾಲಕರ ವಸತಿ ನಿಲಯದಲ್ಲಿ ಜರುಗಿದ ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದ ಸುಮಿತ್ರಾ ಸಾನೆ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಮಿತ್ರಾ ಸಾನೆ ಅವರ ಸೇವೆಯನ್ನು ನಾವೆಲ್ಲರೂ ಸ್ಮರಿಸಿಬೇಕು ಸರ್ಕಾರಿ ಸೇವಗೆ ಸೇರಿದ ಪ್ರತಿಯೊಬ್ಬರಿಗೂ ನಿವೃತ್ತಿ ಸಹಜ ತಮ್ಮ ಸೇವೆಯ ಅವದಿಯಲ್ಲಿ ಮಾಡಿದ ಕಾರ್ಯ ಉತ್ತಮವಾಗಿದ್ದರೆ ಇಂತಹ ಕಾರ್ಯಕ್ರಮ ನಡೆಯಲು ಸಾಧ್ಯ ಎಂದರು.ಪತ್ರಕರ್ತರ ಅಪ್ಪು ಪೋತರಾಜ, ಅಧಿಕಾರಿ ಎಸ್.ಎನ್.ಗೊಲಾಯಿ, ಶ್ವೇತಾಕಲ್ಲೂರು ಮಾತನಾಡಿದರು.ವಸತಿ ನಿಲಯ ಮೇಲ್ವಿಚಾರಕರಾದ ಮಂಜುನಾಥ ಆಲಗೂರ ವಸಂತ ಹಿರೇಮಠ, ಅಜಿತ ಪಡಸಲಗಿ, ಯುಲಗುರೇಶ ಒಂಟಿ, ತುಕಾರಾಮ ಉಪ್ಪಾರ, ಈರಯ್ಯ ಮಠಪತಿ, ಪತ್ತಾರ, ಮಗದುಮ, ಬಜಂತ್ರಿ ಯಲ್ಲವ್ವ ಪೋತರಾಜ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಂಗ್ರಹ- ಸುಧಾ ಪಾಟೀಲಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಶರಣಮಾಸದ ಅನುಭವ ಮಾಲಿಕೆಯ 11ನೇ ದಿವಸ ಶರಣ ಶ್ರೀ ಶಿವಾನಂದ ಕಲಕೇರಿ, ಆಯುಕ್ತರು ಆದಾಯ ತೆರಿಗೆ ಇಲಾಖೆ ಬೆಂಗಳೂರು ಇವರ ತಂದೆ ಲಿಂ. ಹಣಮಂತರಾಯ ಕಲಕೇರಿ ಮತ್ತು ತಾಯಿ ಗಿರಿಜಮ್ಮ ಕಲಕೇರಿ ಇವರ ಹೆಸರಿನ ದತ್ತಿ ಉಪನ್ಯಾಸದಲ್ಲಿ ಡಾ. ಸಂಗಮೇಶ ಕಲಹಾಳ, ನಿವೃತ್ತ ಜಿಲ್ಲಾ ಆಯುಷ್ ಅಧಿಕಾರಿಗಳು ಎಡೆಯೂರು ಶ್ರೀ ಸಿದ್ದಲಿಂಗೇಶ್ವರರ ಬಗೆಗೆ ಅತ್ಯಂತ ಪ್ರಭುದ್ಧವಾಗಿ ನಮ್ಮ ಜೊತೆಗೆ ಹಂಚಿಕೊಂಡರು.ಬಸವಕ್ರಾಂತಿಯ ನಂತರ 12ನೆಯ ಶತಮಾನದ ಶೂನ್ಯ ಪೀಠ 300 ವರ್ಷಗಳ ಕಾಲ ಅನಾಥ ಪ್ರಜ್ಞೆಯನ್ನು ಅನುಭವಿಸಿತು. ಈ ಶೂನ್ಯ ಪೀಠವನ್ನು 15ನೇ ಶತಮಾನದಲ್ಲಿ ಮತ್ತೆ ಪುನರುಜ್ಜೀವನಗೊಳಿಸಿದ ಕೀರ್ತಿ ಅನಾದಿ ನಿರಂಜನ ಜಗದ್ಗುರು ತೋಟದ ಸಿದ್ದಲಿಂಗ ಶಿವಯೋಗಿ ಅವರಿಗೆ ಸಲ್ಲುತ್ತದೆ ಶ್ರೀಗಳು 12ನೇ ಶತಮಾನದ ಅನುಭವ ಮಂಟಪ ಸಂಸ್ಕೃತಿಯನ್ನು 15ನೇ ಶತಮಾನದಲ್ಲಿ ಪುನರ್ ಸ್ಥಾಪಿಸಿದ ಮಹಾಪುರುಷರಾಗಿದ್ದಾರೆ. ಸಿದ್ದಲಿಂಗೇಶ್ವರರ ಜೀವನ ಸಾಧನೆ ಸಿದ್ದಿಗಳು ವಚನ ಕಾವ್ಯ ಶಾಸನಗಳಲ್ಲಿ ಎರಕಗೊಂಡಿವೆ ನಾಡಿನ ಉದ್ದಗಲಕ್ಕೂ…
ಲೇಖನ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಡಾ. ವೀಣಾ ಎಲಿಗಾರ ಅವರು ನಮ್ಮ ಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರದ ಆಜೀವ ಸದಸ್ಯರು, ದತ್ತಿ ದಾಸೋಹಿಗಳು, ಪ್ರಬುದ್ದ ಉಪನ್ಯಾಸಕರು, ವೇದಿಕೆಯ ಬಗೆಗೆ ಅಪಾರ ಕಾಳಜಿ, ಶ್ರದ್ದೆ ಹೊಂದಿದ, ಅಪ್ಪಟ ಬಸವ ಅನುಯಾಯಿಗಳು ಮತ್ತುಸರಳ ಸಜ್ಜನಿಕೆಯ ವ್ಯಕ್ತಿತ್ವ ವಿರುವ ಅಪರೂಪದ ಸಾಹಿತಿ ಎಂದರೆ ತಪ್ಪಾಗಲಾರದು.ಡಾ.ವೀಣಾ ಅವರು ಲಿಂ. ಚನ್ನಬಸಪ್ಪ ಎಲಿಗಾರ ಮತ್ತು ಲಿಂ. ಗಂಗಮ್ಮ ಚನ್ನಬಸಪ್ಪ ಎಲಿಗಾರ ದತ್ತಿ,ಲಿಂ. ಹನುಮಂತಪ್ಪ ಲಿಂಗಪ್ಪ ಹೂಗಾರ ಮತ್ತು ಲಿಂ.ಶಾಂತಮ್ಮ ಹನುಮಂತಪ್ಪ ಹೂಗಾರ ದತ್ತಿ,ಲಿಂ. ಡಾ. ಚನ್ನಕ್ಕ ಎಲಿಗಾರ ದತ್ತಿ ಹೀಗೆ ತಮ್ಮ ತಂದೆ-ತಾಯಿಅತ್ತೆ-ಮಾವ ಮತ್ತು ನಾದಿನಿ ಹೆಸರಿನಲ್ಲಿ ಮೂರು ದತ್ತಿ ದಾಸೋಹಗಳನ್ನು ನೀಡಿದ್ದಾರೆ.ಡಾ. ವೀಣಾ ಎಲಿಗಾರ ಅವರು 13 -3- 1966 ರಲ್ಲಿ ರಡ್ಡೇರ ಹಟ್ಟಿ ತಾ- ಅಥಣಿ, ಬೆಳಗಾವಿ ಜಿಲ್ಲೆಯಲ್ಲಿ ಜನಿಸಿದರು. ಇವರ ತಂದೆ ಲಿಂ. ಹನುಮಂತಪ್ಪ ಲಿಂಗಪ್ಪ ಹೂಗಾರ ಅವರು ತಾಯಿ ಲಿಂ. ಶಾಂತಮ್ಮ ಹೂಗಾರ ಅವರು.ಇವರು…
ಜಮಖಂಡಿಯಲ್ಲಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ ಅಭಿಮತ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರ ಅಭಿವೃದ್ಧಿಗಾಗಿ ಹಲವಾರು ಯೋಜನೆ ನೀಡಿದ್ದಾರೆ. ಅವುಗಳ ಪ್ರಯೋಜನವನ್ನು ಎಲ್ಲ ಮಹಿಳೆಯರು ಪಡೆದುಕೊಳ್ಳಬೇಕು ಎಂದು ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ. ಮಂಜುಳಾ ಹೇಳಿದರು.ಶಾಸಕ ಜಗದೀಶ ಗುಡಗುಂಟಿ ಅವರ ಗೃಹ ಕಚೇರಿಯ ಸಾಕ್ಷಾತ್ಕಾರ ಭವನದಲ್ಲಿ ಭಾನುವಾರ ನಡೆದ ಬಿಜೆಪಿ ಮಹಿಳಾ ಮೋರ್ಚಾದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳಾ ಸುರಕ್ಷತೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ, ಉತ್ತರ ಕರ್ನಾಟಕ ಭಾಗದಲ್ಲಿ ಮಹಿಳೆಯರ ಸುರಕ್ಷತೆ, ಭದ್ರತೆ ಕುರಿತು ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ನಗರಸಭೆ, ಮಹಾನಗರ ಪಾಲಿಕೆ ಸದಸ್ಯೆಯರ ಜೊತೆ ಈಗಾಗಲೇ ಸಭೆ ನಡೆಸಿ, ಹೋರಾಟದ ಕುರಿತು ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ವಿಷಯದಲ್ಲಿ ರಾಜಕಿಯೇತರ ಸಂಘಟನೆಗಳಿಂದಲೂ ಹೋರಾಟ ನಡೆಯಬೇಕು ಎಂದರು.ಅತ್ಯಾಚಾರ ಪ್ರಕರಣಗಳು ನಡೆದರೆ ದೊಡ್ಡ ನಗರಗಳಲ್ಲಿ ಇದು ಸಾಮಾನ್ಯ ಎಂದು ಗೃಹ ಸಚಿವರು ಹೇಳುತ್ತಾರೆ. ಹಾಗಾದರೆ ಮಹಿಳಾ ಸುರಕ್ಷತೆಗೆ ಯಾರು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಹಿರಿದಾದದು. ಶಿಕ್ಷಕ, ರೈತ, ಸೈನಿಕ ಈ ದೇಶದ ಬೆನ್ನೆಲುಬಗಳು. ತಂದೆ, ತಾಯಿ ಮಾತುಗಳನ್ನು ಕೇಳದ ಕೆಲವೊಂದಿಷ್ಟು ಮಕ್ಕಳು ಶಿಕ್ಷಕರ ಮಾತುಗಳಿಗೆ ಗೌರವ ಕೊಡುತ್ತಾರೆಂದು ಪ್ರಾಧ್ಯಾಪಕ ಹಾಗೂ ಸಾಹಿತಿ ಡಾ. ಪ್ರಕಾಶ ನರಗುಂದ ಹೇಳಿದರು.ಬಿದರಕುಂದಿ ಗ್ರಾಮದ ಶಿವಕುಮಾರ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಎಡ್ ಪ್ರಶಿಕ್ಷಣಾರ್ಥಿಗಳ ನಿಕಟ ಸೇವಾ ಪೂರ್ವ ತರಬೇತಿ ಮುಕ್ತಾಯ ಹಾಗೂ ಲಿಂಗೈಕ್ಯ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮತ್ತು ಯುವಕರು ಮುಂದಾಗಬೇಕು. ಕುತೂಹಲಕ್ಕಾಗಿ ಯಾರೊಬ್ಬರೂ ಮಾದಕ ದ್ರವ್ಯ ಬಳಸಬಾರದು. ಮಾನಸಿಕ ಅಸ್ವಸ್ಥರನ್ನು ಗುರುತಿಸಿ ಚಿಕಿತ್ಸೆ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವಂತೆ ಮಾಡುವುದು ಗುರುತರ ನಾಗರಿಕ ಸಮಾಜದ ಕರ್ತವ್ಯ. ಖಿನ್ನತೆಯಿಂದ ಮಾನಸಿಕ ದುಃಖ ಉಂಟಾಗಿ ವ್ಯಕ್ತಿಯ ಸಾಮರ್ಥ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಲಿಂಗೈಕ್ಯ ಮಹಾಂತ ಶಿವಯೋಗಿಗಳು ಬಸವ ತತ್ವದ ಪರಿಪಾಲಕರಾಗಿ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕು ಬಣಜಿಗ ಸಮಾಜವನ್ನು ಸಂಘಟನಾತ್ಮಕವಾಗಿ ಬಲಿಷ್ಠಗೊಳಿಸಲು ಪೂರ್ಣಪ್ರಮಾಣದ ಸಮಾಜದ ಪದಾಧಿಕಾರಿಗಳನ್ನು ರಚಿಸಲಾಗಿದೆ.ಗೌರವಾಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಎಂ.ಎಸ್.ನಾವದಗಿ, ಅಧ್ಯಕ್ಷರಾಗಿ ಗಣ್ಯ ವರ್ತಕ ಅಶೋಕ ಚಟ್ಟೇರ, ಉಪಾಧ್ಯಕ್ಷರಾಗಿ ಬಿ.ಆರ್.ಚಿನಿವಾರ, ಬಸವರಾಜ ಬೆಲ್ಲದ, ಸೋಮಶೇಖರ ಅಣೆಪ್ಪನವರ್, ಸಿದ್ದು ಹೆಬ್ಬಾಳ, ಸಂಗಮೇಶ ಕಡಿ, ಕಾರ್ಯದರ್ಶಿಯಾಗಿ ಪುರಸಭೆ ಮಾಜಿ ಸದಸ್ಯ ರಾಜು ಬಳ್ಳೊಳ್ಳಿ, ಸಂಘಟನಾ ಕಾರ್ಯದರ್ಶಿಗಳಾಗಿ ಜಗದೀಶ ಕಂಠಿ, ಸಂಗಣ್ಣ ನಾಶಿ, ಪ್ರವೀಣ ನಾಗಠಾಣ, ದುಂಡಪ್ಪ ಅಕ್ಕಿ, ಶಿವಾನಂದ ಹುರಕಡ್ಲಿ, ಮುರುಗೇಶ ಹುಂಡೇಕಾರ, ಖಜಾಂಚಿಯಾಗಿ ಸಂತೋಷ ನಾಯನೇಗಲಿ, ಸಹ ಖಜಾಂಚಿಯಾಗಿ ರಮೇಶ ಕಿತ್ತೂರ, ವಕ್ತಾರರಾಗಿ ರುದ್ರೇಶ ಕಿತ್ತೂರ, ಪತ್ರಿಕಾ ಪ್ರತಿನಿಧಿಗಳಾಗಿ ಗುರುನಾಥ ಕತ್ತಿ ಮತ್ತು ಡಿ.ಬಿ.ವಡವಡಗಿ, ಕಾರ್ಯಕಾರಿಣಿ ಸದಸ್ಯರಾಗಿ ತೆರಿಗೆ ಸಲಹೆಗಾರರಾಗಿರುವ ನಾಗಭೂಷಣ ನಾವದಗಿ ವಕೀಲರು, ಶಿವಾನಂದ ಕಿಣಗಿ ವಕೀಲರು, ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕ ಡಿ.ಎಸ್.ಚಳಗೇರಿ, ಎಸ್.ಎಸ್.ಹುನಗುಂದ, ಮುರುಗೇಶ ಹೊಕ್ರಾಣಿ, ಅಶೋಕ ಚಿನಿವಾರ, ಸುನೀಲ ನಾಗಮೋತಿ, ಆನಂದ ಕಂಠಿ, ಸಿದ್ದಲಿಂಗ ಚಿನಿವಾರ, ರಾಜೇಶ ಹುನಗುಂದ, ಜಗದೀಶ ಲಕ್ಷಟ್ಟಿ ಆಯ್ಕೆಯಾಗಿದ್ದಾರೆ. ಯುವ ಘಟಕ ಅಧ್ಯಕ್ಷರಾಗಿ ಪುರಸಭೆ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ‘ಕಸ ಕಂಡರೆ ಕ್ಯೂಆರ್ ಕೋಡ್ಗೆ ಫೋಟೋ ಕಳಿಸಿ’ ನೂತನ ಅಭಿಯಾನಕ್ಕೆ ಎಲ್ಲರೂ ಸ್ಪಂದಿಸಿ ಪಟ್ಟಣದ ಸ್ವಚ್ಛತೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ ಹೇಳಿದರು.ಪಟ್ಟಣದ ಪಂಚಾಯಿತಿ ಆವರಣದಲ್ಲಿ ಶನಿವಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಸ್ವಚ್ಛತೆಗಾಗಿ ಪೌರಕಾರ್ಮಿಕರು ಈಗಾಗಲೇ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ. ಅದಾಗ್ಯೂ ಕಸ ವಿಲೇವಾರಿ ಕುರಿತು ಆಗಾಗ ದೂರುಗಳು ಬರುವ ಹಿನ್ನೆಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದಂತೆ ಈ ವಿನೂತನ ಅಭಿಯಾನ ಆರಂಭಗೊಂಡಿದೆ.ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.ಪಟ್ಟಣ ಪಂಚಾಯತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಮಾತನಾಡಿ, ಪಟ್ಟಣದಲ್ಲಿ ಕಸ ವಿಲೇವಾರಿ ಸರಿಯಾಗಿ ಕಾರ್ಯಗತಗೊಳಿಸಿ ಸ್ವಚ್ಛ ಪರಿಸರ ನಿರ್ಮಿಬೇಕಾಗಿದೆ. ಕಸ ವಿಲೇವಾರಿ ವಾಹನ ಮನೆ ಬಾಗಿಲಿಗೆ ಬಂದಾಗ ಕಸವನ್ನು ಪೌರ ಕಾರ್ಮಿಕರ ಸಹಾಯದೊಂದಿಗೆ ವಿಲೇವಾರಿ ವಾಹನಕ್ಕೆ ರವಾನಿಸಲು ಸಾರ್ವಜನಿಕರು ಮುಂದಾಗಬೇಕು ಇದರಿಂದ ನಿಮ್ಮ ಸುತ್ತಲಿನ ವಾತಾವರಣವೂ ಶುದ್ಧವಾಗಿರುತ್ತದೆ. ಯಾವುದೇ ಕಾರಣಕ್ಕೂ ಕಸವನ್ನು ರಸ್ತೆ ಬದಿ ಎಸೆಯುವುದು ಬೇಡ ಎಂದರು.ಅಭಿಯಾನ ಪಟ್ಟಣ ಪಂಚಾಯಿತಿಯಿಂದ ಆರಂಭಗೊಂಡು ಡಾ. ಅಂಬೇಡ್ಕರ್ ವೃತ್ತದವರೆಗೆ ತೆರಳಿ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಸಿಂದಗಿ ರಸ್ತೆಯಲ್ಲಿನ ಮೋಹನ ಬುದ್ನಿ ಎಂಬುವವರಿಗೆ ಸೇರಿದ ಜಮೀನಿನ ಭಾವಿಯಲ್ಲಿ ಅನಾಮಧೇಯ ಪುರುಷನ ಶವ ಪತ್ತೆಯಾಗಿದೆ.ಮೃತ ವ್ಯಕ್ತಿ ಅಂದಾಜು ೨೫ ರಿಂದ ೩೦ ವರ್ಷದವನಾಗಿದ್ದು, ಕರಿ ಕೂದಲು, ೫.೫ ಎತ್ತರ ಹೊಂದಿ ಸಾಧಾರಣ ಮೈಕಟ್ಟು ಹೊಂದಿರುತ್ತಾನೆ. ಮೃತನ ಮೈಮೇಲೆ ಕೆಂಪು ಬಣ್ಣದ ಬನಿಯನ್, ಚಾಕಲೆಟ್ ಬಣ್ಣದ ನೈಟ್ ಪ್ಯಾಂಟ್, ಚಾಕಲೇಟ್ ಬಣ್ಣದ ಅಂಡರ್ವೇರ್, ಕೊರಳಲ್ಲಿ ಕರಿದಾರವಿರುತ್ತದೆ.ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ದೇವರಹಿಪ್ಪರಗಿ ಪೊಲೀಸ್ ಠಾಣೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮುಳಸಾವಳಗಿ ಗ್ರಾಮದಲ್ಲಿ ಮಹಾಶಿವಶರಣೆ ಅಕ್ಕಮಹಾದೇವಿ ಪ್ರತಿಮೆ ಪ್ರಾಣ ಪ್ರತಿಷ್ಠಾಪನೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಭಕ್ತಿಭಾವದೊಂದಿಗೆ ವಿಜೃಂಭಣೆಯಿಂದ ಜರುಗಿತು.ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಮಲ್ಲಯ್ಯನ ದೇವಸ್ಥಾನದಲ್ಲಿ ಶುಕ್ರವಾರ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಮಕ್ಕಳು ಬಸವಣ್ಣ ಅಕ್ಕಮಹಾದೇವಿ, ಹಾಗೂ ಶ್ರೀಶೈಲ ಮಲ್ಲಿಕಾರ್ಜುನರ ವೇಷಭೂಷಣ ಧರಿಸಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಿದರು. ಜೊತೆಗೆ ಅಕ್ಕಮಹಾದೇವಿಯವರ ವಚನ, ಹಾಡುಗಳಿಂದ ಕೂಡಿದ ಮಕ್ಕಳ ಕೋಲಾಟ ಎಲ್ಲರ ಗಮನ ಸೆಳೆಯಿತು.ಗ್ರಾಮದ ನೂರಾರು ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಆರತಿ ಸಮೇತವಾಗಿ ಪಾಲ್ಗೊಂಡು ಭಕ್ತಿ ಭಾವ ತೋರಿದರು.ಗ್ರಾಮದ ಭಜನಾಮೇಳ ಕಾರ್ಯಕ್ರಮಕ್ಕೆ ಹೆಚ್ಚಿನ ಮೆರಗು ತಂದಿತು.ನಂತರ ನಡೆದ ಕಾರ್ಯಕ್ರಮದಲ್ಲಿ ಅಕ್ಕಮಹಾದೇವಿಯವರ ಚರಿತ್ರೆಯ ಕುರಿತು ಸವಿಸ್ತಾರವಾಗಿ ತಿಳಿಸಿಕೊಟ್ಟರು.ಗ್ರಾಮದ ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಬಿರಾದಾರ, ಹಣಮಂತ್ರಾಯ ಹಿರೂರ ಮಾತನಾಡಿದರು.ಅಂದಾನಯ್ಯ ಹಿರೇಮಠ, ಶರಣಗೌಡ ಪಾಟೀಲ, ಮಲಕು ಸುರಗಿಹಳ್ಳಿ, ಶಿವಾನಂದ ಹೊನ್ನಳ್ಳಿ, ಮಲ್ಲನಗೌಡ ಬಿರಾದಾರ, ಸಾಹೇಬಗೌಡ ಬಿರಾದಾರ, ಭೀಮರಾಯ ಪೊಲೇಶಿ, ಸಿದ್ದು ಹದರಿ, ಭಾಗೀರಥಿ ನಾಗರಳ್ಳಿ, ಶಾಂತಾಬಾಯಿ ಗಬ್ಬೂರ, ಭಾರತಿ ಗಬ್ಬೂರ, ಸರೂಬಾಯಿ ಉಕುಮನಾಳ,…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ವಿದ್ಯಾರ್ಥಿಗಳು ದುಶ್ಚಟಗಳ ದುಷ್ಪರಿಣಾಮಗಳನ್ನು ಅರಿತು ಅವುಗಳಿಂದ ದೂರವಿರಬೇಕು ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಎ.ಬಿ.ಸಾಲಕ್ಕಿ ಕಾಲೇಜಿನಲ್ಲಿ ಶುಕ್ರವಾರ ಜರುಗಿದ ವ್ಯಸನ ಮುಕ್ತ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಡಾ.ಮಹಾಂತ ಶಿವಯೋಗಿಗಳ ಜನ್ಮದಿನವನ್ನು ಕರ್ನಾಟಕದಲ್ಲಿ ವ್ಯಸನ ಮುಕ್ತದಿನವನ್ನಾಗಿ ಆಚರಿಸಲಾಗುತ್ತಿದೆ. ಅಂತೆಯೇ ಪ್ರತಿಯೊಬ್ಬ ವಿದ್ಯಾರ್ಥಿ ಮಾದಕ ಪದಾರ್ಥ ಹಾಗೂ ಪಾನೀಯಗಳ ಕುರಿತು ಎಚ್ಚರವಹಿಸಿ ಅವುಗಳಿಂದ ದೂರವಿರಬೇಕು. ಮಹಾಂತ ಶಿವಯೋಗಿ ಸ್ವಾಮೀಜಿ ‘ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ೧೯೭೫ ರಿಂದ ಕೈಗೊಂಡ ಮಹಾಂತ ಜೋಳಿಗೆ ಕಾರ್ಯಕ್ರಮದ ಮಹತ್ವ ಅರಿತು ತಾವು ಸಹ ದುಶ್ಚಟಗಳಿಗೆ ಅಂಟಿದವರನ್ನು ಎಚ್ಚರಿಸಲು ಮುಂದಾಗಿ ಎಂದು ಹೇಳುತ್ತಾ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಿದರು.ಕಾಲೇಜಿನ ರಾಜ್ಯಶಾಸ್ತç ಉಪನ್ಯಾಸಕಿ ವಿಜಯಲಕ್ಷ್ಮಿ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಪ್ರಾಚಾರ್ಯ ವ್ಹಿ.ಜಿ.ಹೂನಳ್ಳಿ, ತಹಶೀಲ್ದಾರ ಕಾರ್ಯಾಲಯ ಸಿಬ್ಬಂದಿಗಳಾದ ಚನ್ನಬಸು ಹೊಸಮನಿ, ಸಂತೋಷ ತಳವಾರ, ವಿನೋದಕುಮಾರ ಸೇರಿದಂತೆ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಇದ್ದರು.
