Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾವರ್ಧಕ ಸಂಘದ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಶ್ರಾವಣ ಕಾವ್ಯ ಸಂಭ್ರಮ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಮಕ್ಕಳೆ ರಚಿಸಿದ ಭಾವಚಿತ್ರವನ್ನು ಉದ್ಘಾಟಿಸಿ ಮಾತನಾಡಿದ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಜಿ ಎಚ್ ಮಣ್ಣೂರ ಮಾತನಾಡಿ, ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಸಾಹಿತ್ಯದ ಸಂಸ್ಕಾರ ನೀಡುವುದು ಅವಶ್ಯವಾಗಿದೆ ಕವಿಗಳ ಕಾವ್ಯ ಕಥೆ ವಿವಿಧ ಸಾಹಿತ್ಯದ ಪ್ರಕಾರಗಳನ್ನು ಮಕ್ಕಳಿಂದಲೇ ಓದಿಸಿ ಚಿತ್ರ ತೆಗೆಸುವುದರ ಮೂಲಕ ಮಕ್ಕಳ ಮೇಲೆ ಕವಿಗಳ ಪ್ರಭಾವ ಬೀರಿ ಭವಿಷ್ಯದಲ್ಲಿ ಖ್ಯಾತ ಕವಿ ಸಾಹಿತಿಗಳಾಗ ಬಲ್ಲರು ವರಕವಿ ಬೇಂದ್ರೆ ಅವರ ಶ್ರಾವಣ ಬಂತು ಕಾಡಿಗೆ ಬಂತು ನಾಡಿಗೆ ಬಂತು ಬೀಡಿಗೆ ಬಂತು ಶ್ರಾವಣ ಮಾಸವನ್ನು ಸಂಭ್ರಮಿಸುವ ಹಾಡು ಸುಂದರವಾಗಿ ಮೂಡಿಬಂದಿದೆ ಎಂದು ನುಡಿದರು.ಇದೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಖ್ಯಾತ ಕವಿಗಳ ಕವನ ವಾಚನ ಮಾಡಿದರು ಮಕ್ಕಳಿಗೆ ನಿರಂತರವಾಗಿ ಸೃಜನಶೀಲ ಹಾಗೂ ರಚನಾತ್ಮಕ ಚಟುವಟಿಕೆ ಮಾಡಿಸುತ್ತಿರುವುದು ಶ್ಲಾಘನೀಯ ವಾದದ್ದು ಎಂದು ನುಡಿದರು ವೇದಿಕೆಯ ಮೇಲೆ ಮುಖ್ಯೋಪಾಧ್ಯಯ ರಮೇಶ ಕೊಟ್ಯಾಳ…

Read More

ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ವಿವಿಧ ಇಲಾಖೆಯಡಿ ಒದಗಿಸುವ ಯೋಜನೆಗಳ ಲಾಭವನ್ನು ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮಗಳ ಪರಿಶೀಲನಾ ಸಮಿತಿಯ ಪ್ರಥಮ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳಬೇಕು. ಅಲ್ಪಸಂಖ್ಯಾತ ಮಕ್ಕಳ ಶೈಕ್ಷಣಿಕ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ, ಮನೆ-ಮನೆಗೆ ಹೋಗಿ ನೊಂದಣಿ ಮಾಡುವ ಮೂಲಕ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.ಸಮಗ್ರ ಮಕ್ಕಳ ಅಭಿವೃದ್ದಿ ಯೋಜನೆಯಡಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಸಮೀಪದ ಜೀರಂಕಲಗಿ ಗ್ರಾಮದ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಆಗಸ್ಟ್ ೧೦, ೧೧, ೧೨ರಂದು ಗುರು ಶ್ರೀ ರಾಘವೇಂದ್ರ ಸ್ವಾಮಿಗಳವರ ೩೫೪ನೇ ಆರಾಧನಾ ಮಹೋತ್ಸವ ಏರ್ಪಡಿಸಲಾಗಿದೆ.ಮಹೋತ್ಸವದ ಅಂಗವಾಗಿ ಆ.೧೦ರಂದು ಪೂರ್ವಾರಾಧನೆ ಅಂಗವಾಗಿ ಬೆಳಗ್ಗೆ ೭ಗಂಟೆಗೆ ಗೋಪೂಜಾ, ಧ್ವಜಾರೋಹಣ, ೮ ಗಂಟೆಗೆ ಪಂ. ಸಮೀರಾಚಾರ್ಯ ಇವರಿಂದ ಪವಮಾನ ಹೋಮ, ೧೦ ಗಂಟೆಗೆ ಕಲಶ ಸ್ಥಾಪನೆ, ಶ್ರೀ ಹರಿವಾಯು ಸ್ತುತಿ, ಅಷ್ಟೋತ್ತರ, ಕ್ಷೀರಾಭಿಷೇಕ ಪಂಚಾಮೃತ, ಅಲಂಕಾರ, ೧೨ ಗಂಟೆಗೆ ಪೂಜಾ, ನೈವೇದ್ಯ, ಹಸ್ತೋದಕ, ಸಾಯಂಕಾಲ ೭ ಗಂಟೆಗೆ ವಿಜಯಪುರದ ಸರ್ವಜ್ಞ ವಿಹಾರ ವಿದ್ಯಾಪೀಠದ ಪಂಡಿತ ಸಮೀರಾಚಾರ್ಯ ಕುಲಕರ್ಣಿ ಇವರಿಂದ ನವಮ ಸ್ಕಂದ ಭಾಗವತ ಪುರಾಣ, ಶ್ರೀ ವೇದೇಶತೀರ್ಥ ವಿದ್ಯಾಪೀಠ ಮಣೂರದ ಪಂಡಿತ ಸತ್ಯವರಾಚಾರ್ಯ ಇವರಿಂದ ಪ್ರವಚನ, ರಾತ್ರಿ ೮ ಗಂಟೆಗೆ ಸ್ಥಳೀಯ ಭಜನಾ ಮಂಡಳಿಗಳಿಂದ ತಾರತಮ್ಯೋಕ್ತ ಭಜನೆ.೧೧ರಂದು ಮಧ್ಯಾರಾಧನೆ ಪ್ರಯುಕ್ತ ಬೆಳಗ್ಗೆ ೭ ಗಂಟೆಗೆ ಪಂಚಾಮೃತ, ಅಷ್ಟೋತ್ತರ, ಅಲಂಕಾರ, ೧೦ ಗಂಟೆಗೆ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿಜಯಪುರ ಶಾಖಾಧಿಕಾರಿ ಸತೀಶ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಶಾಲಾ ಮಕ್ಕಳಲ್ಲಿ ಚುನಾವಣೆ ಮತ್ತು ಸಂಸತ್ತು ರಚನೆಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಮೀಪದ ಬರಡೋಲ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ (ಪ್ರೌಢ ವಿಭಾಗ) ದಲ್ಲಿ ೨೦೨೫-೨೬ ನೇ ಸಾಲಿನ ಶಾಲಾ ಸಂಸತ್ತ ಚುನಾವಣೆ ಇ.ಎಲ್.ಸಿ. ಕ್ಲಬ್ ಅಡಿಯಲ್ಲಿ ನಡೆಯಿತು.ಶಾಲಾ ಸಂಸತ್ತ ಚುನಾವಣೆ ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿಯೇ ನಡೆಯಿತು, ನಾಮಪತ್ರ ಸಲ್ಲಿಕೆ ಹಿಡಿದು, ಚುನಾವಣಾ ಪ್ರಚಾರ, ನಾಮ ಪತ್ರ ಹಿಂಪಡೆಯುವಿಕೆ, ಮತದಾನ, ಫಲಿತಾಂಶ ಪ್ರಕಟಣೆ, ಶಾಲಾ ಸಂಸತ್ತ ರಚನೆ, ಮಂತ್ರಿಗಳ ಪದಗ್ರಹಣ ಹೀಗೆ ಎಲ್ಲವೂ ಚುನಾವಣೆ ಪ್ರಕ್ರಿಯೆಯನ್ನು ಒಳಗೊಂಡಿತ್ತು.ಇ.ವ್ಹಿ.ಎಮ್. ಮತಯಂತ್ರದ ಮಾದರಿಯಲ್ಲಿಯೇ ಮೊಬೈಲ್ ಫೋನ್ ಬಳಕೆ ಮಾಡಿ ಮತದಾನ ಫಲಿತಾಂಶ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಯಿತು. ಚುಣಾವಣೆ ನೋಡಲ್ ಅಧಿಕಾರಿಯಾಗಿ ಶಿಕ್ಷಕಿ ಎಮ್.ಎಸ್. ಲುಗಡೆ ಕಾರ್ಯನಿರ್ವಹಿಸಿದರು. ಶಾಲೆಯ ಎಲ್ಲ ಶಿಕ್ಷಕರು, ಶಿಕ್ಷಕಿಯರು ಚುನಾವಣಾ ಕಾರ್ಯದಲ್ಲಿ ಸಹಕಾರ ನೀಡಿದರು.ನಂತರ ಮಂತ್ರಿಗಳ ಪದಗ್ರಹಣ ಸಮಾರಂಭ ನಡೆಯಿತು.ಉಪ ಪ್ರಾಂಶುಪಾಲ ಎಸ್.ಆಯ್. ಚನಗೊಂಡ ಅಧ್ಯಕ್ಷತೆ ವಹಿಸಿದ್ದರು, ಶಾಲಾ ಸಂಸತ್ತ ಮಂತ್ರಿ ಮಂಡಳದಲ್ಲಿ ಪ್ರಧಾನಮಂತ್ರಿ, ವಾರ್ತಾ ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಮಕ್ಕಳ ಆರೋಗ್ಯ ಸುಧಾರಣೆಗೆ ಪ್ರಾಥಮಿಕ ಹಾಗೂ ಪ್ರೌಢ ಹಂತದಲ್ಲಿ ಶಿಕ್ಷಣ ಇಲಾಖೆಯಿಂದ ಏರ್ಪಡಿಸುವ ಕ್ರೀಡಾಕೂಟಗಳು ಅನುಕೂಲವಾಗುತ್ತವೆ ಎಂದು ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ರಮೇಶ ಬಜಂತ್ರಿ ಹೇಳಿದರು.ತಾಲ್ಲೂಕಿನ ಘೋಣಸಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ವಿಜಯಪುರ ಸಹಯೋಗದಲ್ಲಿ ಶುಕ್ರವಾರ ನಡೆದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮಕ್ಕಳ ಆರೋಗ್ಯ ಸರಿಯಿದ್ದಾಗ ಮಾತ್ರ ಮಕ್ಕಳ ಬೌದ್ದಿಕ ಮಟ್ಟ ಸುಧಾರಣೆಯಾಗುತ್ತದೆ. ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ದಿಗೆ ಕ್ರೀಡಾಕೂಟ ಅನೂಕೂಲವಾಗತ್ತವೆ. ಸ್ಪರ್ಧೆಗಳಲ್ಲಿ ಸೋಲು ಗೆಲುವು ಸಾಮಾನ್ಯ, ಅವುಗಳನ್ನು ಸಮಾನವಾಗಿ ಸ್ವೀಕಾರ ಮಾಡಬೇಕು ಎಂದರು.ಎಂ.ಬಿ‌.ಪಾಟೀಲ ಪೌಂಡೇಶನ್ ಕಾರ್ಯದರ್ಶಿ ಯಾಕುಬ ಜತ್ತಿ ಮಾತನಾಡಿ ಕ್ರೀಡಾಕೂಟ ಏರ್ಪಡಿಸುವದರಿಂದ ಮಕ್ಕಳಲ್ಲಿ ಕ್ರೀಡಾ ಮನೋಭಾವ ಬೆಳೆಯುತ್ತದೆ. ಪ್ರತಿಭೆ ಇರುವ ಮಕ್ಕಳನ್ನು ಗುರ್ತಿಸಿ ಅರ್ಹ ಮಕ್ಕಳನ್ನು ಆಯ್ಕೆ ಮಾಡಬೇಕು ಎಂದರು.ಈ ಸಂದರ್ಭದಲ್ಲಿ ಸಿಆರ್ಪಿ ಜಿ.ಜಿ.ದೊಡ್ಡಿಹಾಳ, ಗ್ರಾಮ ಪಂಚಾಯತಿ ಅಧ್ಯಕ್ಷೆ ಅಂಜನಾ…

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿಗಳ ಸಮ್ಮೇಳನ ವಿಜಯಪುರ: ನೆನಪುಗಳ ಬುತ್ತಿ ಅಜರಾಮರ ನನ್ನ ಮೊದಲ ಗುರು ಕಲಿಸಿದ ಅಕ್ಷರ ರಠ ಇಂದಿಗೂ ನನಲ್ಲಿ ಅಚ್ಚಾಗಿದೆ ಅಂತಹ ಗುರುಗಳನ್ನು ಎಂದೆಂದಿಗೂ ಮರೆಯಲಾಗದು ಎಂದು ನಿವೃತ್ತ ಪ್ರಾಚಾರ್ಯ ಪ್ರೊ.ವಿ ಎಂ. ಸುರಪುರ ತಮ್ಮ ಪ್ರಾಥಮಿಕ ಶಿಕ್ಷಣದಿಂದ ಪ್ರಾಚಾರ್ಯ ಹಂತದ ಸವಿ ನೆನಪುಗಳನ್ನು ಬಿಚ್ಚಿಟ್ಟರು.ನಗರದ ಬಿ ಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ ಮತ್ತು ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ದಿನಾಂಕ ೦೧-೦೮-೨೦೨೫ ರಂದು ಅಯೋಜಿಸಲಾದ ಹಳೆ ವಿದ್ಯಾರ್ಥಿಗಳ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ತಮ್ಮ ಬಾಲ್ಯದ ಸವಿನೆನಪುಗಳು ಮತ್ತು ಬಾಲ್ಯದ ಗುರುಗಳನ್ನು ಸ್ಮರಿಸಿದರಲ್ಲಗೆ, ತಮ್ಮ ವೃತ್ತಿ ಜೀವನದ ಮಾರ್ಗದರ್ಶನದ ಸವಿ ನೆನಪುಗಳನ್ನು ಮೆಲಕು ಹಾಕಿದರು.ನಮ್ಮ ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಸಾಧಿಸಲು ಗುರುಗಳ ಪಾತ್ರ ಅನನ್ಯ ಗುರುಗಳ ಅದರಂತೆ ಇಂದು ಅತಿ ದೊಡ್ಡ ಮಟ್ಟದಲ್ಲಿ…

Read More

ಬಂಜಾರಾ ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಕಲರವ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವ್ಯಾಸಾಂಗ ಮಾಡಿ ಗುರಿ ಸಾಧನೆ ಮಾಡಬೇಕು. ಉತ್ತಮ ಗುಣ ಮತ್ತು ನಡವಳಿಕೆಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಒಳ್ಳೆಯ ಹೆಸರು ಗಳಿಸಬೇಕು ಎಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಎಲ್.ಚವ್ಹಾಣ್‌ ಹೇಳಿದರು.ಶನಿವಾರದಂದು ನಗರದ ಬಂಜಾರಾ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ೮ ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ವಾಗತ, ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ, ಶಾಲಾ ಸಂಸತ್ತಿನ ಚುನಾಯಿತ ವಿದ್ಯಾರ್ಥಿಗಳ ಪ್ರಮಾಣ ವಚನ ಬೋಧನೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೋಷಕರು ತಮ್ಮ ಮಕ್ಕಳ ಅಂಕ, ರ‍್ಯಾಂಕ್, ಸ್ಥಾನಮಾನ, ಬಿರುದು ಸನ್ಮಾನಗಳ ಕಡೆಗೆ ತಮ್ಮ ಶ್ರದ್ಧೆಯನ್ನು ಕೇಂದ್ರೀಕರಿಸಿ ಒತ್ತಡದ ಬದುಕಿಗೆ ಅವರನ್ನು ತಳ್ಳಿ ಬಿಡುತ್ತಾರೆ. ಶಿಕ್ಷಣ ಸ್ಥಾನಮಾನಗಳ ಜತೆಯಲ್ಲೇ ಮೌಲ್ಯಯುತ ಸಂಸ್ಕಾರಗಳನ್ನು ರೂಢಿಸಲು ಕಲಿಸಿದಲ್ಲಿ ಮಕ್ಕಳಲ್ಲಿ ವ್ಯಕ್ತಿತ್ವದ ಹೊಳಪು ಕಾಣಬಹುದು ಎಂದರು.ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸುವ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಯಾರಾದರೂ ದುಶ್ಚಟಗಳಿಗೆ ಬಲಿಯಾದರೆ ಅವರ ವೈಯಕ್ತಿಕ ಬದುಕು, ಅವರ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಹಂಗರಗಿ ಚನ್ನಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಹೇಳಿದರು.ಪಟ್ಟಣದ ಲಕ್ಷ್ಮೀ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಸವ ಸಂಸ್ಕ್ರತಿ ಆಭಿಯಾನ ಪಾದಯಾತ್ರೆಯಲ್ಲಿ ಜರುಗಿದವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಲಕಲ್ಲದ ಮಹಾಂತ ಸ್ವಾಮಿಗಳು ಸಮಾಜ ಮುಖಿಯಾಗಿ ಕೆಲಸ ಮಾಡುವದರ ಜೊತೆಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಬೇಕೆನ್ನುವುದು ಉದ್ದೇಶವಾಗಿತ್ತು. ಅವರ ಮಹಾಂತ ಜೋಳಿಗೆ ಕಾರ್ಯಕ್ರಮ ರಾಜ್ಯದಲ್ಲಿ ವಿನೂತನವಾದ ಕಾರ್ಯಕ್ರಮವಾಗಿತ್ತು. ತಂಬಾಕು, ಮಧ್ಯವ್ಯಸನ ಜೂಜಾಟದಂಥ ಚಟಗಳು ಅದೆಷ್ಟೋ ಕುಟುಂಬಗಳನ್ನು ನಾಶ ಮಾಡಿದ ಉದಾಹರಣೆ ನಮ್ಮ ಮುಂದೆ ಇರುವುದರಿಂದ ಹಿರಿಯರು ಈ ನಿಟ್ಟಿನಲ್ಲಿ ಗಂಭೀರವಾಗಿ ಆಲೋಚನೆ ಮಾಡುವ ಮೂಲಕ ನೈತಿಕ ಸಮಾಜವನ್ನು ನಿರ್ಮಿಸುವುದು ಅವಶ್ಯಕತೆ ಇದೆ ಎಂದು ಹೇಳಿದರು.ಸಾನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಬಸವಣ್ಣನವರ ವಿಚಾರಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡರೆ ಸುಂದರ ಸಮಾಜವನ್ನು ನಿರ್ಮಿಸಬಹುದು.…

Read More

ಇಂದು ಬಸವನಬಾಗೇವಾಡಿಯಲ್ಲಿ ಬಸವ ಸಂಸ್ಕ್ರತಿಯ ಪೂರ್ವಭಾವಿ ಸಭೆ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಲಿಂಗಾಯತ ಮಠಾಧೀಶರರ ಒಕ್ಕೂಟದ ಮುಂದಾಳತ್ವ ಹಾಗೂ ನಾಡಿನ ಎಲ್ಲ ಬಸವಪರ ಸಂಘಟನೆಗಳ ಸಹಯೋಗದಲ್ಲಿ ಸೆ. ೧ ರಿಂದ ಅ.೩೧ ರವರೆಗೆ ರಾಜ್ಯದಾದ್ಯಂತ ಬಸವ ಸಂಸ್ಕ್ರತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸೆ.೧ ರಂದು ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯಿಂದ ಈ ಅಭಿಯಾನ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ಆ.೩ ರಂದು ಸಂಜೆ ೪ ಗಂಟೆಗೆ ಬಸವೇಶ್ವರ ದೇವಾಲಯದ ಸಿಬಿಎಸ್ಇ ಶಾಲಾ ಆವರಣದಲ್ಲಿರುವ ನಂದೀಶ್ವರ ರಂಗಮಂದಿರದಲ್ಲಿ ನಾಡಿನ ವಿವಿಧ ಶ್ರೀಗಳ ಸಾನಿಧ್ಯದಲ್ಲಿ ಹಾಗೂ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆಯಲ್ಲಿ ಅಭಿಯಾನದ ಯಶಸ್ವಿಗೆ ಸಮಾಲೋಚನೆ ಮಾಡುವ ಸಲುವಾಗಿ ವಿವಿಧ ಬಸವಪರ ಸಂಘಟನೆಗಳ, ಕನ್ನಡಪರ ಸಂಘಟನೆಗಳ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳ, ಸದಸ್ಯರ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.ಪಟ್ಟಣದ ನಂದೀಶ್ವರ ರಂಗಮಂದಿರದಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪೂರ್ವಭಾವಿ ಸಭೆಗೆ ನಾಗನೂರಿನ ಅಲ್ಲಮಪ್ರಭು ಸ್ವಾಮೀಜಿ, ಶೇಗುಣಸಿಯ ಮಹಾಂತಪ್ರಭು ಸ್ವಾಮೀಜಿ, ಯರನಾಳದ ಗುರುಸಂಗನಬಸವ…

Read More

ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜಕೀಯದಲ್ಲಿ ಸಚ್ಚಾರಿತ್ಯ ಕಾಪಾಡುವಲ್ಲಿ ನಾರಿಶಕ್ತಿ ಪಾತ್ರ ಅನನ್ಯವಾಗಿದ್ದು, ಎಲ್ಲ ನಾರಿಯರು ಒಗ್ಗೂಡಿ ಕಾಪಾಡಬೇಕಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ ಪ್ರತಿಪಾದಿಸಿದರು.ಶನಿವಾರ ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಹಿಳಾ ಮೋರ್ಚಾ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಜಗತ್ತಿನಲ್ಲಿ ನಾರಿ ಶಕ್ತಿ ಸಮಾಜದ ಏಳ್ಗೆಗೆ ದುಡಿಯಬೇಕೆಂದು ಅವರು ಕರೆ ನೀಡಿದರು.ವಿಜಯಪುರ ಜಿಲ್ಲೆಯ ಮಹಿಳೆಯರ ಯಾವುದೇ ಸಮಸ್ಯೆಗಳಿಗೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಧ್ವನಿಯಾಬೇಕು. ಅಲ್ಲದೇ ಮಹಿಳೆಯರ ಸುರಕ್ಷತೆ ಬಗ್ಗೆ ರಾಜ್ಯ ಸರ್ಕಾರ ಮಾಡಿದ ತಪ್ಪುಗಳನ್ನು ಎತ್ತಿ ತೋರಿಸಬೇಕು ಎಂದು ಅವರು ಹೇಳಿದರು.ಜಿಲ್ಲೆಯ ವಿವಿಧೆಡೆ ಬೀದಿ-ದೀಪಗಳ ನಿರ್ವಹಣೆಯ ಕೊರತೆ ಎದ್ದು ಕಾಣುತ್ತಿದೆ ಇದರಿಂದ ಮಹಿಳೆಯರ ಸರಗಳ್ಳತನ ನಡೆದಿವೆ. ಕಾಂಗ್ರೆಸ್ ಸರ್ಕಾರ ಮಹಿಳೆಯರ ಸುರಕ್ಷತೆಗೆ ಬೇಕಾದ ಕಾನೂನು ಸುವ್ಯಸ್ಥೆ ಬಿಗಿಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸ್ವಪ್ನಾ ಕಣಮುಚನಾಳ ಪ್ರಾಸ್ತವಾಗಿಕವಾಗಿ ಮಾತನಾಡಿದರು.ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ರಾಜ್ಯ…

Read More