Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವಿಜಯಪುರ ವತಿಯಿಂದ ಮಾಜಿ ಸೈನಿಕರಿಗೆ ಸ್ವ-ಉದ್ಯೋಗ ನಡೆಸಲು ಸೈನಿಕ ವಿಶ್ರಾಂತಿಗೃಹದಲ್ಲಿರುವ ಒಂದು ಮಳಿಗೆಯನ್ನು ಬಾಡಿಗೆ ಆಧಾರದ ಮೇಲೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮಾಜಿ ಸೈನಿಕರು ಆಗಸ್ಟ್ ೨೦ರೊಳಗಾಗಿ ಮಾರಾಟ ಮಳಿಗೆಗಳ ಹಂಚಿಕೆಗಾಗಿ ಗುರುತಿನ ಚೀಟಿ ಲಗತ್ತಿಸಿರುವ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಹಾಗೂ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸಲು ದಿನಾಂಕ:೦೪-೦೮-೨೦೨೫ರ ಸೋಮವಾರ ಮಧ್ಯಾಹ್ನ ೩.೩೦ ರಿಂದ ೪.೩೦ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ದೂರವಾಣಿ ೬೩೬೬೪೨೩೮೮೭ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಾಜಿ ಸಂಸದ ಪ್ರಜ್ವಲ್ ರಾಸಲೀಲೆ | ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ | ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ 11 ಲಕ್ಷ 60 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಜೀವನಪರ್ಯಂತ ಜೈಲು ಶಿಕ್ಷೆ ಹಾಗೂ 11 ಲಕ್ಷ 60 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಕೆಲಸದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಶುಕ್ರವಾರ ಮಾಜಿ ಸಂಸದ ದೋಷಿ ಎಂದು ತೀರ್ಪು ನೀಡಿದ್ದರು. ಆದರೆ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿದ್ದರು.ಶನಿವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು, ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು 10 ಲಕ್ಷ ರೂಪಾಯಿ…

Read More

ಕನ್ನೂರ ಬಾಗದ ಗ್ರಾಮಗಳಿಗೆ ಸಮಗ್ರ ನೀರಾವರಿ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲೂಕಿನ ವ್ಯಾಪ್ತಿಯಲ್ಲಿರುವ ಕನ್ನೂರ ಹಾಗೂ ಮಡಸನಾಳ, ಕನ್ನೂರ ದರ್ಗಾ, ಕನ್ನೂರ ತಾಂಡಾ, ಕನ್ನಾಳ, ಗುಣಕಿ ಬೊಮ್ಮನಹಳ್ಳಿ, ಮಿಂಚನಾಳ ಮತ್ತು ಮಿಂಚನಾಳ ತಾಂಡಾ, ಶಿರನಾಳ, ಮಖಣಾಪೂರ ಮತ್ತು ಮಖಣಾಪೂರ ತಾಂಡಾ, ತಿಡಗುಂದಿ, ಹಾಗೂ ಡೊಮನಾಳ ಈ ಎಲ್ಲ ಗ್ರಾಮಗಳಿಗೂ ಕುಡಿಯುವ ನೀರಿನ ಸಲುವಾಗಿ ಕೆರೆಗಳನ್ನು ನೀರು ತುಂಬಿಸುವದು ಹಾಗೂ ರೇವಣಸಿದ್ದೇಶ್ವರ ಏತ ನೀರಾವರಿಯ, ಪೈಪಲೈನಿಗೆ ಜಾಕವೆಲ್ ಬಿಡುವ ಸಲುವಾಗಿ ಸಾಕಷ್ಟು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಸಮಸ್ಯೆ ಹೇಳಿಕೊಂಡರೂ ಇಲ್ಲಿಯವರೆಗೆ ಯಾವುದೇ ಸ್ಪಂದನೆ ಸಿಕ್ಕಿರುವದಿಲ್ಲ ಆದ್ದರಿಂದ ಎಲ್ಲ ಗ್ರಾಮಗಳಿಗೂ ಸಮಗ್ರ ನೀರಾವರಿ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಗೆ ಮನವಿ ಸಲ್ಲಿಸಿದರು.ಇದಕ್ಕೂ ಮುನ್ನ ಆಮರಣಾ ಉಪವಾಸ ಬೃಹತ್ ಪ್ರತಿಭಟನಾ ಮೆರವಣಿಗೆಯು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಆರಂಭಗೊಂಡು ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ…

Read More

ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಆಯಾ ಪ್ರದೇಶದ ಸರ್ವಾoಗೀಣ ಬೆಳವಣಿಗೆ, ಪ್ರಾದೇಶಿಕ ಭಾಷೆ ಕಾಪಾಡುವುದು, ಸಾಂಸ್ಕೃತಿಕ ಸೌರಭವನ್ನು ಕಾಪಾಡುವುದು ಅತ್ಯಂತ ಅವಶ್ಯವಾಗಿತ್ತು. ಕರ್ನಾಟಕ ಭಾಗದ ಜನರಿಗೆ ತಮ್ಮ ಆಡಳಿತ ಭಾಷೆ ಕನ್ನಡವಿದ್ದರೆ ಮಾತ್ರ ಎಲ್ಲ ವ್ಯವಹಾರಕ್ಕೂ ಒಳ್ಳೆಯದು ಎಂದು ಮನಗಂಡು, ಭಾವನಾತ್ಮಕವಾಗಿ ಎಲ್ಲರೂ ಒಗ್ಗೂಡಿ ಕರ್ನಾಟಕ ರಾಜ್ಯ ನಿರ್ಮಾಣಕ್ಕೆ ಕಾರಣರಾದರು.ಬೆಳಗಾವಿಯ ಕಾಂಗ್ರೆಸ್ ಅಧಿವೇಶನದಿಂದ ಹಿಡಿದು ಕಲ್ಯಾಣ ಕರ್ನಾಟಕದ ಹಲವಾರು ಹೋರಾಟಗಳಾದ ಭಾಷಾವಾರು ತತ್ವ ಚಳುವಳಿ, ನಿಜಾಮ ಕರ್ನಾಟಕ ಪರಿಷತ್ – ಹೈದ್ರಾಬಾದ್ ಗೊತ್ತುವಳಿ, ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಭಾಲ್ಕಿ ಪಟ್ಟದದೇವರು, ಶರಣ ಬಸವೇಶ್ವರ ಸಂಸ್ಥಾನದ ದೊಡ್ಡಪ್ಪ ಅಪ್ಪ, ಉತ್ತಂಗಿ ಚೆನ್ನಪ್ಪ ಅವರು ಭಾಗವಹಿಸಿ, ಪ್ರತ್ಯೇಕ ರಾಜ್ಯ ನಿರ್ಮಾಣಕ್ಕೆ ಕಾರಣೀಕರ್ತರಾಗಿದ್ದು,ಬಾಂಬೆ ಕರ್ನಾಟಕದಲ್ಲಿ ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಆಲೂರು ವೆಂಕಟರಾಯರು ವಿ.ಕೆ ಗೋಕಾಕ್ ಅವರನ್ನೂ ಸಹ ಉಲ್ಲೇಖಿಸುತ್ತಾ, ಕರ್ನಾಟಕ ಸಾಹಿತ್ಯ ಪರಿಷತ್, ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಗಳು,…

Read More

ಇಂದು (ಆ.೦೩ ರವಿವಾರ) ’ಸ್ನೇಹಿತರ ದಿನ’ ನಿಮಿತ್ತ ಈ ವಿಶೇಷ ಲೇಖನ ಲೇಖನ- ಡಾ.ಮಲ್ಲಿಕಾರ್ಜುನ ಎಸ್ ಆಲಮೇಲಯಡ್ರಾಮಿಕಲಬುರಗಿ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಸ್ನೇಹ, ಗೆಳೆತನ, ಫ್ರೆಂಡ್ಶಿಪ್, ದೋಸ್ತಿ ಇದು ಇಂದು ನಿನ್ನೆಯದಲ್ಲ, ಯುಗ, ಯುಗಾಂತರದಿಂದಲೂ ಚಿರಂಜೀವಿಯಾಗಿ ಉಳಿದು ಕೊಂಡಿದೆ. ಆದ್ರೂಎಲ್ಲದಕ್ಕೂ ಒಂದು ದಿನಾಚರಣೆ ಇರುವಾಗ, ಸ್ನೇಹಿತರಿಗೂ ಒಂದು ದಿನಾಚರಣೆ ಇರಬೇಕೆಂದು 1930ರಲ್ಲಿ ಒಂದು ಪಾರ್ಟಿಯಲ್ಲಿ,ಹಾಲ್ಮಾರ್ಕ್ ಕಾರ್ಡಗಳ ಸಂಸ್ಥಾಪಕರಾಗಿದ್ದ ಚಾಯ್ಸ್ ಹಾಲ್ ವ್ಯವಹಾರಿಕ ತಂತ್ರವಾಗಿ ಪ್ರಸ್ತಾಪಿಸಿ ಕಾರ್ಯರೂಪಕ್ಕೆ ತರುವಲ್ಲಿ ಸಫಲರಾದರು.1935ರಲ್ಲಿ ಯು ಎಸ್ ಕಾಂಗ್ರೆಸ್ ಅಧಿಕೃತ ರಜಾ ದಿನವಾಗಿ ರೂಪಿಸುವಲ್ಲಿ ಯಶಸ್ವಿಯಾಯಿತು. ತದನಂತರ 1958ರ ಜುಲೈ 30ರಂದು ‘ಪರಾಗ್ವೆ’ಯಲ್ಲಿ ಅಂತಾರಾಷ್ಟ್ರೀಯ ಸ್ನೇಹಿತರ ದಿನವನ್ನು ಮೊದಲ ಬಾರಿಗೆ ಆಚರಿಸಲಾಯಿತು. ಮುಂದೆ 2011ರಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಜುಲೈ 30 ನ್ನು ಅಂತಾರಾಷ್ಟ್ರೀಯ ಸ್ನೇಹ ದಿನವೆಂದು ಘೋಷಣೆ ಮಾಡಿತು. ವಿಶ್ವಸಂಸ್ಥೆ ಜುಲೈ ಮೂವತ್ತೆಂದು ಘೋಷಣೆ ಮಾಡಿದ್ದರು; ಕೆಲ ದೇಶಗಳು ಬೇರೆ ಬೇರೆ ತಿಂಗಳು, ಬೇರೆ ದಿನಾಂಕದಂದು ಆಚರಿಸಲು ಆರಂಭಿಸಿದವು ನಮ್ಮ ಭಾರತ ದೇಶವು ಆಗಸ್ಟ ತಿಂಗಳ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಶ್ರಾವಣ ಮಾಸದ ಪ್ರಯುಕ್ತ, ತಮ್ಮ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಲು ಸಾಧ್ಯವಾಗದ ಬಡವರಿಗೆ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆಯನ್ನು ಹಮ್ಮಿಕೊಂಡಿದ್ದೇನೆ. ಆಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಮಾಜ ಸೇವಕ ಅಯೂಬ ಮನಿಯಾರ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ತಂದೆ ತಾಯಿಗಳ ಸ್ಮರಣಾರ್ಥ ನಾನು ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ಕಳೆದ ೧೦ ವರ್ಷಗಳಿಂದ ಬಡವರ ಸೇವೆ ಮಾಡುತ್ತ ಬಂದಿದ್ದೇನೆ. ಪ್ರತೀ ವರ್ಷ ರಂಜಾನ ಹಬ್ಬದಲ್ಲಿ ಈ ಸೇವೆಯನ್ನು ಹಮ್ಮಿಕೊಳ್ಳುತ್ತಿದ್ದೆ, ಈ ಬಾರಿ ಶ್ರಾವಣ ಮಾಸದಲ್ಲಿ ಹಮ್ಮಿಕೊಳ್ಳುವ ಇಚ್ಛೆಯಾಗಿದ್ದರಿಂದ ಈ ಸೇವೆಯನ್ನು ಅ೯ ರಿಂದ ಆಯೋಜಿಸಿದ್ದೇನೆ. ಅ೯ ರಂದು ತಾಳಿಕೋಟೆ ಪಟ್ಟಣದ ಅನುಗ್ರಹ ಆಸ್ಪತ್ರೆಯಲ್ಲಿ ತಪಾಸಣೆ ಹಮ್ಮಿಕೊಂಡಿದ್ದು ತಾಳಿಕೋಟೆ ಭಾಗದ ಜನತೆ ಅಲ್ಲಿ ತಪಾಸಣೆ ಮಾಡಿಸಬಹುದು. ಅ೧೦ ರಂದು ಮುದ್ದೇಬಿಹಾಳ ಪಟ್ಟಣದಲ್ಲಿ ತಪಾಸಣೆ ಕಾರ್ಯ ನಡೆಯಲಿದ್ದು, ನಾಲತವಾಡ ಮತ್ತು ಮುದ್ದೇಬಿಹಾಳ ಭಾಗದವರು ಇಲ್ಲಿ ತಪಾಸಣೆ ಮಾಡಿಸಿಕೊಳ್ಳಬಹುದು. ತಪಾಸಣೆಯ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಬಸವಣ್ಣನವರ ನಡೆ ನುಡಿಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಡಾ.ಮಹಾಂತ ಶಿವಯೋಗಿ ಶ್ರೀಗಳು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜೋಳಿಗೆ ಹಾಕಿಕೊಂಡು ಊರುರು ಸುತ್ತಿ ನಿಮ್ಮ ಚಟಗಳನ್ನು ನನ್ನ ಜೋಳಿಗೆಗೆ ಹಾಕಿ ಎಂದು ವ್ಯಸನಿಗಳ ಮನ‌ ಪರಿವರ್ತನೆ ಮಾಡುವುದುಕ್ಕೆ ತಮ್ಮ ಜೀವನವನ್ನು ಉತ್ತಮ ಸಮಾಜದ ನಿರ್ಮಾಣಕ್ಕೆ ಮೀಸಲಿರಿಸಿದ್ದು ನಮಗೆ ಮಾದರಿ ಮತ್ತು ಮತ್ತು ಸಮಾಜಕ್ಕೆ ಶ್ರೇಷ್ಠ ಕೊಡುಗೆ ಎಂದು ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಹೇಳಿದರು.ತಾಲೂಕು ಆಡಳಿತದಿಂದ ಪಟ್ಟಣದ ಪಾಲಿಟೆಕ್ನಿಕ್ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಡಾ.ಮಹಾಂತ ಶಿವಯೋಗಿಗಳ ಜನ್ಮದಿನ ವ್ಯಸನ ಮುಕ್ತ ದಿನಾಚರಣೆಯ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮಕ್ಕಳು, ವಿದ್ಯಾರ್ಥಿಗಳು, ಯುವ ಜನಾಂಗ ಚಟಗಳಿಗೆ ಬಲಿಯಾದಂತೆ ಅರಿವು ಮೂಡಿಸುತ್ತಿದ್ದರು. ಇದರಿಂದಾಗಿ ಲಕ್ಷಾಂತರ ಜನರು ವ್ಯಸನಗಳಿಂದ ಮುಕ್ತರಾಗಿ ಅವರ ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸುತ್ತಿವೆ.ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನ ಆಗಸ್ಟ್ 1. ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ನಿರ್ಧರಿಸಿ ಆದೇಶಿಸಿದ್ದು, ಕರ್ನಾಟಕ ರಾಜ್ಯವನ್ನು…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕೇಂದ್ರ ಸರ್ಕಾರದ ಜವಾಹರ ನವೋದಯ ವಿದ್ಯಾಲಯದಲ್ಲಿ೨೦೨೬-೨೭ ನೇ ಸಾಲಿನಲ್ಲಿ ೯ ಮತ್ತು ೧೧ ನೇ ತರಗತಿಯ ಖಾಲಿ ಉಳಿಯುವ ಸ್ಥಾನಗಳಿಗೆ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಪ್ರವೇಶ ಪರೀಕ್ಷೆಯ ಮೂಲಕ ಈ ಆಯ್ಕೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸಲು ಸೆ ೨೩ ಕೊನೆಯ ದಿನವಾಗಿದೆ. ೨೦೨೬ ರ ಫೆಬ್ರುವರಿ ೭ ರಂದು ಪ್ರವೇಶ ಪರೀಕ್ಷೆ ಜರುಗಲಿದೆ. ಅರ್ಜಿ ಸಲ್ಲಿಸಲು ಹಾಗೂ ಮತ್ತೀತರ ಹೆಚ್ಚಿನ ವಿವರಗಳಿಗಾಗಿ ಜವಾಹರ ನವೋದಯ ವೆಬ್ ಸೈಟ್ ಇಲ್ಲವೇ ಪ್ರಾಚಾರ್ಯರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಜಾತಿ, ಮತ, ಪಂಗಡ, ಧರ್ಮ, ಭಾಷೆ, ದೇಶವೆನ್ನದೇ ಇಡೀ 42 ವರ್ಷಗಳ ಕಾಲ ದೇಶದಲ್ಲಿ ಮಾತ್ರವಲ್ಲದೇ ಇಂಗ್ಲೆಂಡ್ ಸೇರಿದಂತೆ ವಿದೇಶದಲ್ಲೂ ತಮ್ಮ ಮಹಾಂತ ಜೋಳಿಗೆ ಹಿಡಿದು ಜನರಲ್ಲಿನ ದುಶ್ಚಟಗಳ ಭಿಕ್ಷೆ ಬೇಡಿದ ಡಾ. ಮಹಾಂತ ಶಿವಯೋಗಿಗಳ ಜೀವನವೇ ನಮಗೆಲ್ಲ ಪ್ರೇರಣೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶುಕ್ರವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನದ ನಿಮಿತ್ತ ಹಮ್ಮಿಕೊಂಡ ‘ವ್ಯಸನಮುಕ್ತ ದಿನಾಚರಣೆ’ಯನ್ನು ಉದ್ಧೇಶಿಸಿ ಮಾತನಾಡಿದರು.ಕ್ಷಣಿಕ ಸುಖಕ್ಕೆ ಬದುಕನ್ನು ಬಲಿಕೊಡದೆ ದುಶ್ಚಟಗಳ ದುಷ್ಪರಿಣಾಮ ಅರಿತು ಎಚ್ಚರದಿಂದಿದ್ದು ದೇಶದ ಸತ್ಪ್ರಜೆಗಳಾಗಿ ಬದುಕು ನಡೆಸಬೇಕು. ವ್ಯಸನ ಮುಕ್ತ ಸಮಾಜಕ್ಕಾಗಿ ಎಲ್ಲರೂ ಸಂಘಟಿತರಾಗಿ ಕೈ ಜೋಡಿಸಲು ಕಂಕಣಬದ್ಧರಾಗಬೇಕು ಎಂದರು.ದುರ್ವ್ಯಸನಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು ಎಂದರು.ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಅಧ್ಯಕ್ಷತೆ ವಹಿಸಿ…

Read More