Author: editor.udayarashmi@gmail.com

ಇಂದು (ಆ.೦೩ ರವಿವಾರ) ’ಸ್ನೇಹಿತರ ದಿನ’ ನಿಮಿತ್ತ ಈ ವಿಶೇಷ ಲೇಖನ ಲೇಖನ- ಡಾ.ಮಲ್ಲಿಕಾರ್ಜುನ ಎಸ್ ಆಲಮೇಲಯಡ್ರಾಮಿಕಲಬುರಗಿ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಸ್ನೇಹ, ಗೆಳೆತನ, ಫ್ರೆಂಡ್ಶಿಪ್, ದೋಸ್ತಿ ಇದು ಇಂದು ನಿನ್ನೆಯದಲ್ಲ, ಯುಗ, ಯುಗಾಂತರದಿಂದಲೂ ಚಿರಂಜೀವಿಯಾಗಿ ಉಳಿದು ಕೊಂಡಿದೆ. ಆದ್ರೂಎಲ್ಲದಕ್ಕೂ ಒಂದು ದಿನಾಚರಣೆ ಇರುವಾಗ, ಸ್ನೇಹಿತರಿಗೂ ಒಂದು ದಿನಾಚರಣೆ ಇರಬೇಕೆಂದು 1930ರಲ್ಲಿ ಒಂದು ಪಾರ್ಟಿಯಲ್ಲಿ,ಹಾಲ್ಮಾರ್ಕ್ ಕಾರ್ಡಗಳ ಸಂಸ್ಥಾಪಕರಾಗಿದ್ದ ಚಾಯ್ಸ್ ಹಾಲ್ ವ್ಯವಹಾರಿಕ ತಂತ್ರವಾಗಿ ಪ್ರಸ್ತಾಪಿಸಿ ಕಾರ್ಯರೂಪಕ್ಕೆ ತರುವಲ್ಲಿ ಸಫಲರಾದರು.1935ರಲ್ಲಿ ಯು ಎಸ್ ಕಾಂಗ್ರೆಸ್ ಅಧಿಕೃತ ರಜಾ ದಿನವಾಗಿ ರೂಪಿಸುವಲ್ಲಿ ಯಶಸ್ವಿಯಾಯಿತು. ತದನಂತರ 1958ರ ಜುಲೈ 30ರಂದು ‘ಪರಾಗ್ವೆ’ಯಲ್ಲಿ ಅಂತಾರಾಷ್ಟ್ರೀಯ ಸ್ನೇಹಿತರ ದಿನವನ್ನು ಮೊದಲ ಬಾರಿಗೆ ಆಚರಿಸಲಾಯಿತು. ಮುಂದೆ 2011ರಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಜುಲೈ 30 ನ್ನು ಅಂತಾರಾಷ್ಟ್ರೀಯ ಸ್ನೇಹ ದಿನವೆಂದು ಘೋಷಣೆ ಮಾಡಿತು. ವಿಶ್ವಸಂಸ್ಥೆ ಜುಲೈ ಮೂವತ್ತೆಂದು ಘೋಷಣೆ ಮಾಡಿದ್ದರು; ಕೆಲ ದೇಶಗಳು ಬೇರೆ ಬೇರೆ ತಿಂಗಳು, ಬೇರೆ ದಿನಾಂಕದಂದು ಆಚರಿಸಲು ಆರಂಭಿಸಿದವು ನಮ್ಮ ಭಾರತ ದೇಶವು ಆಗಸ್ಟ ತಿಂಗಳ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಶ್ರಾವಣ ಮಾಸದ ಪ್ರಯುಕ್ತ, ತಮ್ಮ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಲು ಸಾಧ್ಯವಾಗದ ಬಡವರಿಗೆ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆಯನ್ನು ಹಮ್ಮಿಕೊಂಡಿದ್ದೇನೆ. ಆಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಮಾಜ ಸೇವಕ ಅಯೂಬ ಮನಿಯಾರ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ತಂದೆ ತಾಯಿಗಳ ಸ್ಮರಣಾರ್ಥ ನಾನು ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ಕಳೆದ ೧೦ ವರ್ಷಗಳಿಂದ ಬಡವರ ಸೇವೆ ಮಾಡುತ್ತ ಬಂದಿದ್ದೇನೆ. ಪ್ರತೀ ವರ್ಷ ರಂಜಾನ ಹಬ್ಬದಲ್ಲಿ ಈ ಸೇವೆಯನ್ನು ಹಮ್ಮಿಕೊಳ್ಳುತ್ತಿದ್ದೆ, ಈ ಬಾರಿ ಶ್ರಾವಣ ಮಾಸದಲ್ಲಿ ಹಮ್ಮಿಕೊಳ್ಳುವ ಇಚ್ಛೆಯಾಗಿದ್ದರಿಂದ ಈ ಸೇವೆಯನ್ನು ಅ೯ ರಿಂದ ಆಯೋಜಿಸಿದ್ದೇನೆ. ಅ೯ ರಂದು ತಾಳಿಕೋಟೆ ಪಟ್ಟಣದ ಅನುಗ್ರಹ ಆಸ್ಪತ್ರೆಯಲ್ಲಿ ತಪಾಸಣೆ ಹಮ್ಮಿಕೊಂಡಿದ್ದು ತಾಳಿಕೋಟೆ ಭಾಗದ ಜನತೆ ಅಲ್ಲಿ ತಪಾಸಣೆ ಮಾಡಿಸಬಹುದು. ಅ೧೦ ರಂದು ಮುದ್ದೇಬಿಹಾಳ ಪಟ್ಟಣದಲ್ಲಿ ತಪಾಸಣೆ ಕಾರ್ಯ ನಡೆಯಲಿದ್ದು, ನಾಲತವಾಡ ಮತ್ತು ಮುದ್ದೇಬಿಹಾಳ ಭಾಗದವರು ಇಲ್ಲಿ ತಪಾಸಣೆ ಮಾಡಿಸಿಕೊಳ್ಳಬಹುದು. ತಪಾಸಣೆಯ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಬಸವಣ್ಣನವರ ನಡೆ ನುಡಿಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಡಾ.ಮಹಾಂತ ಶಿವಯೋಗಿ ಶ್ರೀಗಳು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜೋಳಿಗೆ ಹಾಕಿಕೊಂಡು ಊರುರು ಸುತ್ತಿ ನಿಮ್ಮ ಚಟಗಳನ್ನು ನನ್ನ ಜೋಳಿಗೆಗೆ ಹಾಕಿ ಎಂದು ವ್ಯಸನಿಗಳ ಮನ‌ ಪರಿವರ್ತನೆ ಮಾಡುವುದುಕ್ಕೆ ತಮ್ಮ ಜೀವನವನ್ನು ಉತ್ತಮ ಸಮಾಜದ ನಿರ್ಮಾಣಕ್ಕೆ ಮೀಸಲಿರಿಸಿದ್ದು ನಮಗೆ ಮಾದರಿ ಮತ್ತು ಮತ್ತು ಸಮಾಜಕ್ಕೆ ಶ್ರೇಷ್ಠ ಕೊಡುಗೆ ಎಂದು ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಹೇಳಿದರು.ತಾಲೂಕು ಆಡಳಿತದಿಂದ ಪಟ್ಟಣದ ಪಾಲಿಟೆಕ್ನಿಕ್ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಡಾ.ಮಹಾಂತ ಶಿವಯೋಗಿಗಳ ಜನ್ಮದಿನ ವ್ಯಸನ ಮುಕ್ತ ದಿನಾಚರಣೆಯ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮಕ್ಕಳು, ವಿದ್ಯಾರ್ಥಿಗಳು, ಯುವ ಜನಾಂಗ ಚಟಗಳಿಗೆ ಬಲಿಯಾದಂತೆ ಅರಿವು ಮೂಡಿಸುತ್ತಿದ್ದರು. ಇದರಿಂದಾಗಿ ಲಕ್ಷಾಂತರ ಜನರು ವ್ಯಸನಗಳಿಂದ ಮುಕ್ತರಾಗಿ ಅವರ ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸುತ್ತಿವೆ.ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನ ಆಗಸ್ಟ್ 1. ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ನಿರ್ಧರಿಸಿ ಆದೇಶಿಸಿದ್ದು, ಕರ್ನಾಟಕ ರಾಜ್ಯವನ್ನು…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕೇಂದ್ರ ಸರ್ಕಾರದ ಜವಾಹರ ನವೋದಯ ವಿದ್ಯಾಲಯದಲ್ಲಿ೨೦೨೬-೨೭ ನೇ ಸಾಲಿನಲ್ಲಿ ೯ ಮತ್ತು ೧೧ ನೇ ತರಗತಿಯ ಖಾಲಿ ಉಳಿಯುವ ಸ್ಥಾನಗಳಿಗೆ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಪ್ರವೇಶ ಪರೀಕ್ಷೆಯ ಮೂಲಕ ಈ ಆಯ್ಕೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸಲು ಸೆ ೨೩ ಕೊನೆಯ ದಿನವಾಗಿದೆ. ೨೦೨೬ ರ ಫೆಬ್ರುವರಿ ೭ ರಂದು ಪ್ರವೇಶ ಪರೀಕ್ಷೆ ಜರುಗಲಿದೆ. ಅರ್ಜಿ ಸಲ್ಲಿಸಲು ಹಾಗೂ ಮತ್ತೀತರ ಹೆಚ್ಚಿನ ವಿವರಗಳಿಗಾಗಿ ಜವಾಹರ ನವೋದಯ ವೆಬ್ ಸೈಟ್ ಇಲ್ಲವೇ ಪ್ರಾಚಾರ್ಯರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಜಾತಿ, ಮತ, ಪಂಗಡ, ಧರ್ಮ, ಭಾಷೆ, ದೇಶವೆನ್ನದೇ ಇಡೀ 42 ವರ್ಷಗಳ ಕಾಲ ದೇಶದಲ್ಲಿ ಮಾತ್ರವಲ್ಲದೇ ಇಂಗ್ಲೆಂಡ್ ಸೇರಿದಂತೆ ವಿದೇಶದಲ್ಲೂ ತಮ್ಮ ಮಹಾಂತ ಜೋಳಿಗೆ ಹಿಡಿದು ಜನರಲ್ಲಿನ ದುಶ್ಚಟಗಳ ಭಿಕ್ಷೆ ಬೇಡಿದ ಡಾ. ಮಹಾಂತ ಶಿವಯೋಗಿಗಳ ಜೀವನವೇ ನಮಗೆಲ್ಲ ಪ್ರೇರಣೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶುಕ್ರವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನದ ನಿಮಿತ್ತ ಹಮ್ಮಿಕೊಂಡ ‘ವ್ಯಸನಮುಕ್ತ ದಿನಾಚರಣೆ’ಯನ್ನು ಉದ್ಧೇಶಿಸಿ ಮಾತನಾಡಿದರು.ಕ್ಷಣಿಕ ಸುಖಕ್ಕೆ ಬದುಕನ್ನು ಬಲಿಕೊಡದೆ ದುಶ್ಚಟಗಳ ದುಷ್ಪರಿಣಾಮ ಅರಿತು ಎಚ್ಚರದಿಂದಿದ್ದು ದೇಶದ ಸತ್ಪ್ರಜೆಗಳಾಗಿ ಬದುಕು ನಡೆಸಬೇಕು. ವ್ಯಸನ ಮುಕ್ತ ಸಮಾಜಕ್ಕಾಗಿ ಎಲ್ಲರೂ ಸಂಘಟಿತರಾಗಿ ಕೈ ಜೋಡಿಸಲು ಕಂಕಣಬದ್ಧರಾಗಬೇಕು ಎಂದರು.ದುರ್ವ್ಯಸನಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು ಎಂದರು.ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಅಧ್ಯಕ್ಷತೆ ವಹಿಸಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಚಿವ ಜಮಿರ್ ಅಹ್ಮದಖಾನ್ ಅವರ ಹುಟ್ಟು ಹಬ್ಬವನ್ನು ಸಾಮಾಜಿಕ ಸೇವೆಯ ಮೂಲಕ ಆಚರಣೆ ಮಾಡಲಾಗುತ್ತಿದೆ ಎಂದು ಕನ್ನಡಪಡ ಹೋರಾಟಗಾರ ಸದ್ದಾಂ ಆಲಗೂರ ಹೇಳಿದರು.ಸಿಂದಗಿ ತಾಲೂಕಿನ ಗೊಲಗೇರಿ ಗ್ರಾಮದ ಪರಮಾನಂದ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ಸಚಿವ ಜಮೀರ್ ಅಹಮ್ಮದ್‌ಖಾನ್ ಅವರ ಹುಟ್ಟು ಹಬ್ಬದ ನಿಮಿತ್ತ ಅವರ ಅಭಿಮಾನಿ ಬಳಗದ ವತಿಯಿಂದ ವಿಕಲಚೇತನ ಮಕ್ಕಳಿಗೆ ನೋಟ್‌ಬುಕ್ ಪೆನ್ನುಗಳನ್ನು ವಿತರಿಸಿ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳು ಪ್ರೇರಣೆಯಾಗಬೇಕು.ಅವರ ಅಭಿಮಾನಿ ಬಳಗವು ಇಂತಹ ಸಮಾಜಮುಖಿ ಕಾರ್ಯಗಳಿಗೆ ಸದಾ ಸಿದ್ಧ ಎಂದರು.ಈ ವೇಳೆ ಪತ್ರಕರ್ತ ಇಸ್ಮಾಯಿಲ್ ಶೇಖ್ ಪ್ರಾಸ್ತಾವಿಕ ಮಾತನಾಡಿದರು.ಮುಖಂಡ ಮಡಿವಾಳ ನಾಯ್ಕೋಡಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಪೈಗಂಬರ್ ಬುಕ್ಕದ್, ರಹೀಮ್ ಬೆನಕನಹಳ್ಳಿ, ಶ್ರೀಶೈಲ ಹಿಪ್ಪರಗಿ, ರಫೀಕ್ ಮುಲ್ಲಾ, ಅಪ್ಪು ದೇಸಾಯಿ, ರಸೀಧ್ ಕುಮಸಗಿ, ರಜಾಕ್ ಪಟೇಲ್, ಇಸ್ಮಾಯಿಲ್ ಹಳ್ಳಿಮನಿ,ದತ್ತಾತ್ರೇಯ ಕಲಕೇರಿ, ಸಲಿಂ ಅಸಂತಾಪುರ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಎಚ್.ಜಿ.ಕಾಲೇಜ ಸಭಾಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿರುವ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ ಕರೆಪ್ಪ ಬೆಳ್ಳಿ ಉದ್ಘಾಟಿಸಿದರು.ಸಿಂದಗಿ: ರಾಷ್ಟ್ರದ ಭವಿಷ್ಯ ರೂಪಿಸಬೇಕಾಗಿರುವ ಯುವ ಸಮೂಹ ವ್ಯಸನಿಗಳ ಸಹವಾಸ ಹಾಗೂ ಮೋಜು ಮಸ್ತಿಗಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಎಂದು ತಹಶೀಲ್ದಾರ ಕರೆಪ್ಪ ಬೆಳ್ಳಿ ಹೇಳಿದರು.ಸಿಂದಗಿ ಪಟ್ಟಣದ ಎಚ್‌ಜಿ ಕಾಲೇಜ ಸಭಾಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿರುವ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದುರ್ವ್ಯಸನ ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು. ಇಂದಿನ ಯುವ ಪೀಳಿಗೆ ಮಾದಕ ಪದಾರ್ಥಗಳ ಗೀಳು ಅಂಟಿಸಿಕೊಂಡು ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಮಾದಕ ವ್ಯಸನದ ಸುಳಿಗೆ ಸಿಲುಕಿದರೆ ಹೊರಬರಲು ಸಾಧ್ಯವಿಲ್ಲ. ವ್ಯಸನಿಗಳಿಂದ ಆತನ ಕುಟುಂಬ ಹಾಗೂ ಸಮಾಜ ಕೂಡ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು.ಈ ವೇಳೆ…

Read More

ಮಾದಿಗ ಸಂಘಟನೆಗಳ ಒಕ್ಕೂಟದಿಂದ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ | ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಶೀಘ್ರವೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ತಮ್ಮ ಹಕ್ಕೊತ್ತಾಯ ಮಂಡಿಸಿದರು.ಶುಕ್ರವಾರ ನಗರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ರ‍್ಯಾಲಿ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿತು. ಒಕ್ಕೂಟದ ನೂರಾರು ಮುಖಂಡರು, ಯುವಕರು ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಬೇಡಿಕೆ ಈಡೇರಿಕೆಗೆ ಹಕ್ಕೊತ್ತಾಯ ಮಂಡಿಸಿದರು.ನೇತೃತ್ವ ವಹಿಸಿದ್ದ ಯುವ ಮುಖಂಡ ಉಮೇಶ ಕಾರಜೋಳ ಮಾತನಾಡಿ, ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಸಹ ಅನುಮತಿ ನೀಡಿದೆ, ಆದರೆ ರಾಜ್ಯದಲ್ಲಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಾತ್ರ ಇದಕ್ಕೆ ಬೆಲೆ ನೀಡುತ್ತಿಲ್ಲ, ಆ ಮೂಲಕ ಒಳಮೀಸಲಾತಿ ಕಲ್ಪಿಸದೇ ಮಾದಿಗ ಸಮುದಾಯಕ್ಕೆ ದೊಡ್ಡ ಮಟ್ಟದ ಅನ್ಯಾಯ ಮಾಡುತ್ತಿದೆ, ಒಳಮೀಸಲಾತಿ ಎನ್ನುವುದು ಸಂವಿಧಾನ ಕರುಣಿಸಿರುವ ಹಕ್ಕು, ಶೋಷಿತ…

Read More

ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವ್ಯಸನ ಮುಕ್ತ ಹಾಗೂ ಆರೋಗ್ಯಯುತ ಸುಂದರ ಸಮಾಜ ನಿರ್ಮಾಣ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಈ ಕಾರ್ಯಕ್ಕಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಹೇಳಿದರು.ನಗರದ ಕಂದಗಲ್ ಶ್ರೀ ಹಣುಮಂತ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಿದ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ನಮ್ಮ ಆರೋಗ್ಯವೂ ಒಳಗೊಂಡಂತೆ ಸಮಾಜದ ಆರೋಗ್ಯಕ್ಕೆ ಹಾನಿಕಾರಕವಾದ ಯಾವುದೇ ತರಹದ ವ್ಯಸನಕ್ಕೆ ಒಳಗಾಗದೇ, ಉತ್ತಮ ಹವ್ಯಾಸ ರೂಢಿಸಿಕೊಂಡು, ಸದೃಢ ಸಮಾಜ ನಿರ್ಮಾಣ ಮಾಡಿ ಅದನ್ನು ಗಟ್ಟಿಗೊಳಿಸುವ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ ಆದೇಶದ ಮೇರೆಗೆ ಶಿಕ್ಷಕರನ್ನು ಬಿ.ಎಲ್.ಒ. ಕರ್ತವ್ಯದಿಂದ ಮುಕ್ತಗೊಳಿಸಬೇಕೆಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಚಡಚಣ ತಹಶೀಲ್ದಾರ ಸಂಜಯ ಇಂಗಳೆ ಅವರಿಗೆ ಮನವಿ ಸಲ್ಲಿಸಿದರು.ಚಡಚಣ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಮಜ್ಜಗಿ ಹಾಗೂ ಪ್ರಧಾನ ಕಾರ್ಯದರ್ಶಿ ವಿಠ್ಠಲ ಕಾಂಬಳೆ ಮಾತನಾಡಿ, ಕಂದಾಯ ಇಲಾಖೆ ನೀಡುವ ಚುನಾವಣೆ ಮತ್ತು ಇತರೆ ಕಾರ್ಯಗಳನ್ನು ಶಿಕ್ಷಕರು ಚಾಚು ತಪ್ಪದೇ ಮಾಡುತ್ತಿದ್ದಾರೆ. ಆದರೆ ಈಗ ಶಿಕ್ಷಕರಿಗೆ ಶಿಕ್ಷಣ ಇಲಾಖೆಯ ಕೆಲಸದ ಒತ್ತಡ ಹೆಚ್ಚಾಗಿದೆ. ಶಾಲೆಗಳು ಆರಂಭಗೊಂಡಿದ್ದು ಶಿಕ್ಷಕರು ಇದರಲ್ಲಿ ಪರಿಣಾಮಕಾರಿಯಾಗಿ ತೊಡಗಿಕೊಳ್ಳಬೇಕಿದೆ. ಇತರೆ ಇಲಾಖೆಯ ಕೆಲಸಗಳಿಂದ ಬೋಧನೆಗೆ ಸಮಯವೇ ಸಿಗುತ್ತಿಲ್ಲ. ಇದು ಮಕ್ಕಳ ಪಾಠದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಕಾರಣ ಶಿಕ್ಷಕರನ್ನು ಈ ಕೆಲಸದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ ಎಸ್ ಸೋನಗಿ ಹಾಗೂ…

Read More