Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಡಚಣ: ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ. ಮಾದಕ ವಸ್ತು ಸೇವನೆ ವ್ಯಕ್ತಿಯ ಮೆದುಳು, ದೈಹಿಕ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಬದುಕಿಗೂ ಮಾರಕವಾಗಿದೆ ಎಂದು ದೈಹೀಕ ನೀರ್ದೆಶಕರಾದ ಪ್ರೋ.ಎಸ್.ಎಸ.ಅವಟಿ ವ್ಯಸನ ಮುಕ್ತ ದಿನಾಚರಣೆ ನಿಮಿತ್ತವಾಗಿ ವ್ಯಸನ ಮುಕ್ತ ಸಮಾಜ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಆರಂಭದಲ್ಲಿ ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ತೊಡಗುವ ಮದ್ಯ ಅಥವಾ ಕಡಿಮೆ ಬೆಲೆಗೆ ಸಿಗುವ ಪಾನ್ ವಸ್ತುಗಳ ಸೇವನೆ ಕೊನೆಗೆ ಮಾರಕ ಗಾಂಜಾ, ಅಫೀಮು, ಕೊಕೇನ್ ಹಾಗೂ ಅನೇಕ ಮಾದಕ ವಸ್ತುಗಳ ದಾಸರನ್ನಾಗಿಸುತ್ತದೆ ಅದು ಮಿದುಳಿನಲ್ಲಿ ಬದಲಾವಣೆ ತಂದು ಇನ್ನಷ್ಟು ಸೇವಿಸುವಂತೆ ಪ್ರೇರೇಪಿಸಿ ಕೊನೆಗೆ ವ್ಯಸನಿಗಳನ್ನಾಗಿಸುತ್ತದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಾ.ಎಸ್.ಬಿ.ರಾಠೋಡ ಮಾತನಾಡಿದರು.ಈ ಸಂದರ್ಭದಲ್ಲಿ ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ.ಎಸ.ಎಸ.ದೇಸಾಯಿ, ಯುತ್ ರೆಡ್ ಕ್ರಾಸ್ ಸಮಿತಿಯ ಸಂಯೋಜಕರಾದ ಪ್ರೋ. ಎಂ.ಕೆ.ಬಿರಾದಾರ, ವಿದ್ಯಾರ್ಥಿ ಕಲ್ಯಾಣ ಸಮಿತಿಯ ಸಂಯೋಜಕರಾದ ಡಾ.ಮಯೂರ ಕುದರಿ, ಎನ್.ಸಿ.ಸಿ ಅಧಿಕಾರಿ ಡಾ.ಎಮ್.ಎಸ್.ಮಾಗಣಗೇರಿ, ಎನ್.ಎಸ್.ಎಸ್…

Read More

ಚುನಾವಣಾ ಅಕ್ರಮ ಆರೋಪ | ಆ.5 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ | ಬೆಂಗಳೂರಿನಲ್ಲಿ ಬಿಜೆಪಿ ಮುಖಂಡರ ವಾಗ್ದಾಳಿ ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಪಕ್ಷದ ಈ ನಡೆಯನ್ನು ಬಿಜೆಪಿ ಟೀಕಿಸಿದೆ.ಬಿಜೆಪಿ ಸಂಸದ ಪಿಸಿ.ಮೋಹನ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿನ ಹೀನಾಯ ಸೋಲನ್ನು ಮರೆಮಾಚಲು ಹತಾಶ ಯತ್ನ ನಡೆಸತ್ತಿದ್ದಾರೆಂದು ಟೀಕಿಸಿದ್ದಾರೆ.ವಂಶಪಾರಂಪರ್ಯದ ಪರವಲ್ಲದೆ, ಮಹದೇವಪುರ ಮತ್ತು ರಾಜಾಜಿನಗರದ ಜನರು ಅಭಿವೃದ್ಧಿಗೆ ಮತ ಹಾಕಿದ್ದಾರೆ. ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕರ ಬಳಿ ಶೇ.100ರಷ್ಟು ಪುರಾವೆ ಇರುವುದೇ ಆದರೆ, ಬೆಂಗಳೂರಿನಲ್ಲಿ ಬೀದಿ ನಾಟಕ ಮಾಡುವ ಬದಲು ನ್ಯಾಯಾಲಯಕ್ಕೆ ಸಲ್ಲಿಸಲಿ ಎಂದು ಸವಾಲು ಹಾಕಿದ್ದಾರೆ.ಜನರ ನಂಬಿಕೆಯನ್ನು ಕಳೆದುಕೊಂಡ ನಂತರ ಸುಳ್ಳುಗಳನ್ನು ಹರಡುವುದು ಪ್ರಜಾಪ್ರಭುತ್ವವಲ್ಲ. ಈ ಪ್ರತಿಭಟನೆ ಹತಾಶ ಪ್ರಯತ್ನವಾಗಿದೆ. ಮಹಾದೇವಪುರ ಮತ್ತು ರಾಜಾಜಿನಗರದ ಜನಾದೇಶವನ್ನು ಯಾವುದೇ ನಕಲಿ ನಿರೂಪಣೆಯು…

Read More

ಲೇಖನ- ಡಾ.ಶಶಿಕಾಂತ ಪಟ್ಟಣ ರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಮಹಾತ್ಮಾ ಗೌತುಮ ಬುದ್ಧ ಭಾರತವು ಕಂಡ ಮೊಟ್ಟ ಮೊದಲಿನ ವೈಚಾರಿಕ ಕಾರಣಿ ಪುರುಷ. ಈ ದೇಶದಲ್ಲಿ ವರ್ಗ ವರ್ಣ ಅಂಡಾಕಾರದ ವಿರುದ್ಧ ಸಿಡಿದೆದ್ದ ಸಮತೆಯ ಸೇನಾನಿ ಬುದ್ಧ.ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.ಬುದ್ಧರ ಸಂದೇಶಗಳುಸಂಶೋಧನೆ, ತಿಳುವಳಿಕೆ, ಅನುಭವಿಸುವಿಕೆ ಮತ್ತು ಅದನ್ನು ಮತ್ತೆ ಮನನ ಮಾಡಿಕೊಳ್ಳುವುದು – ಇದುವೇ ಬೌದ್ಧ ಧರ್ಮ. ಅವನು ಬೋಧಿಸಿದ್ದು ದುಃಖದಿಂದ ಹೊರಬರುವ ಮಾರ್ಗವನ್ನು ಮಾತ್ರ. ಇದನ್ನೆ ಅವನು ಪಾಳಿ ಭಾಷೆಯಲ್ಲಿ “ಧಮ್ಮ” ಎಂದು ಕರೆದನು. ತಾನು ಬೋಧಿಸುತ್ತಿರುವುದರಲ್ಲಿ ಹೊಸದೇನೂ ಇಲ್ಲವೆಂದೂ ಹಾಗೂ ಈ ಸತ್ಯವನ್ನು ಕಂಡುಕೊಂಡವರಲ್ಲಿ…

Read More

ಲೇಖನ- ರೇವಣಸಿದ್ದ ಬಗಲಿವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಬೆಂಗಳೂರು ಗ್ರಾಮಾಂತರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ 01 ಅಗಸ್ಟ್ 1930 ರಲ್ಲಿ ಜನಿಸಿದ ಡಾ. ಮಹಾಂತ ಶಿವಯೋಗಿಗಳು. ತಮ್ಮ 10 ನೇ ವಯಸ್ಸಿನಲ್ಲೇ ಸನ್ಯಾಸಿ ಜೀವನವನ್ನು ಸ್ವೀಕರಿಸಿ, ಸವದಿಯ ವಿರಕ್ತ ಮಠದ ಚಿಕ್ಕ ಸ್ವಾಮಿಜಿಗಳಾದರು.ಇವರು ಕಾಶಿಯಲ್ಲಿ ಸಂಸ್ಕೃತ, ಹಿಂದಿ, ಯೋಗ, ಶಾಸ್ತ್ರೀಯ ಸಂಗೀತ, ಆಧ್ಯಾತ್ಮಿಕ ಪ್ರವಚನ ಹೀಗೆ ನಾನಾ ವಿಷಯಗಳಲ್ಲಿ ಪರಿಣಿತಿಯನ್ನು ಪಡೆದಿದ್ದರು.ವ್ಯಸನ ಮುಕ್ತ ಸಮಾಜಕ್ಕೆ ಶ್ರೀಗಳ ಕೊಡುಗೆ1970 ರಲ್ಲಿ ಇಳಕಲ್ (ಚಿತ್ತರಗಿ) ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ 19 ನೇ ಪೀಠಾಧಿಕಾರಿಯಾದ ಡಾ. ಮಹಾಂತ ಶಿವಯೋಗಿ ಅಜ್ಜನವರು, ಬಳಿಕ ಉತ್ತರ ಕರ್ನಾಟಕದಿಂದ ‘ವ್ಯಸನ ಮುಕ್ತ’ಕ್ಕಾಗಿ ದೃಢ ಸಂಕಲ್ಪ ತೊಟ್ಟು, 1975ಕ್ಕೆ ಆರಂಭಿಸಿದ ‘ಮಹಾಂತ ಜೋಳಿಗೆ ಕಾರ್ಯಕ್ರಮ’ದಡಿ ದೇಶಾದ್ಯಂತ ಅಷ್ಟೇ ಅಲ್ಲದೇ ಇಂಗ್ಲೆಂಡ್ ಸೇರಿದಂತೆ ವಿದೇಶದಲ್ಲೂ ಸಂಚರಿಸಿದ ಶ್ರೀಗಳು 42 ವರ್ಷಗಳ ಕಾಲ ಮಾದಕ ಸೇವನೆ ಹಾಗೂ ದುಷ್ಚಟಗಳಿಂದ ಆರೋಗ್ಯದ…

Read More

ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಶರಣ ಮಾಸದ ಎಂಟನೆಯ ದಿನದ ಅನುಭಾವ ಮಾಲಿಕೆಯಲ್ಲಿ ಡಾ. ರಾಜಶೇಖರ ಬಿರಾದಾರ ಅವರು “ಅರಿವಿನ ಬೆಳಕು ಅಲ್ಲಮ” ವಿಷಯ ಕುರಿತು ಹೇಳುತ್ತಾ ಕವಿ ಕುವೆಂಪು ಅವರ ಕವಿತೆಯ ಆಶಯದಂತೆ ಮತವೆಂಬ ಮೋಹದ ಜಾಲಕ್ಕೆ ಸಿಲುಕದೆ ಅವುಗಳ ಹೊಟ್ಟನ್ನು ತೂರಿ ಯಾವ ಸಂಕುಚಿತ ತತ್ವಗಳಿಗೂಅಂಟಿಕೊಳ್ಳದೆ,ನಿರ್ದಿಗಂತವಾಗಿ ಬೆಳೆದು ಎಲ್ಲಿಯೂ ನಿಲ್ಲದೆ, ನಿಜ ಜಂಗಮರಾಗಿ ಈ ಅನಂತ ಆಗಸದಲಿ ಬಯಲನೇ ಬಿತ್ತಿ ಬೆಳೆದು ಬಯಲಾದ ಅರಿವಿನ ನಿಜಬೆಳಕು ಅಲ್ಲಮಪ್ರಭುಗಳುಎಂದು ಅರಿವಿನ ಬೆಳಕಿನ ಪ್ರಭೆ ಯನ್ನು ಅತ್ಯಂತ ಪ್ರಬುದ್ಧವಾಗಿ ಹಂಚಿಕೊಂಡರುಅಲ್ಲಮ ಎಂದರೆ ಜ್ಞಾನ, ಅನುಭಾವ, ಅಲೆಮಾರಿ, ನಿಜ ಜಂಗಮ, ನ್ಯಾಯ ನಿಷ್ಠುರಿ, ಬಯಲು, ಶೂನ್ಯ, ಎಂದು ಹೇಳುತ್ತಾ, ಬಸವಾದಿ ಶರಣರನ್ನು ಬೆಳಗಿದ ಬಗೆ ಮತ್ತು ಆಧುನಿಕ ಜಗದ ಕತ್ತಲೆಯ ಅರಿವಿನ ಬೆಳಕು ಎನ್ನುವ ಬಹುರೂಪಿ ಅಲ್ಲಮಪ್ರಭುಗಳ ಅರಿವಿನ ಬೆಳಕಿನ ಎರಡು ಧಾರೆಗಳನ್ನು ಅವರು ಹಲವಾರು ವಚನಗಳ ಅರ್ಥಗಳ ಜೊತೆಗೆ ನಮ್ಮ ಮುಂದಿಡುವ ಪ್ರಯತ್ನ ಮಾಡಿದರು.ಸೊನ್ನಲಿಗೆಗೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಲಾಯನ್ಸ್ ಇಂಟರ್‌ನ್ಯಾಶನಲ್ ಕ್ಲಬ್ ೩೧೭-ಬಿ (ಗೋವಾ-ಕರ್ನಾಟಕ) ಮಡಗಾಂವ-ಗೋವಾದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಕೋರ್ ಕಮೀಟಿ ಸದಸ್ಯರನ್ನಾಗಿ ಸಿಂದಗಿಯ ಎಂ.ಜೆ.ಎಫ್.ಲಾಯನ್ ಕೆ.ಎಚ್.ಸೋಮಾಪೂರ ಅವರನ್ನು ಜಿಲ್ಲಾ ಗವರ್ನರ್ ಜೈಅಮೋಲ್ ನಾಯಕ್ ಆಯ್ಕೆ ಮಾಡಿ ಆದೇಶಿಸಿದ್ದಾರೆ.ಲಾಯನ್ಸ್ ಇಂಟರ್‌ನ್ಯಾಶನಲ್ ಕ್ಲಬಿನ್ ೩೧೭-ಬಿ ಕೋರ್ ಕಮೀಟಿ ಸದಸ್ಯರಾಗಿ ಆಯ್ಕೆಯಾಗಿದ್ದಕ್ಕಾಗಿ ಸಿಂದಗಿ ಲಾಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಎಸ್.ಪಾಟೀಲ, ಕಾರ್ಯದರ್ಶಿ ಆಯ್.ಬಿ.ಬಿರಾದಾರ ಹಾಗೂ ಲಾಯನ್ಸ್ ಸದಸ್ಯ ಬಿ.ಪಿ.ಕರ್ಜಗಿ, ಡಾ.ಅಂಬರೀಶ ಬಿರಾದಾರ, ಶಾಂತೇಶ ದುರ್ಗಿ, ಪಿ.ಎಂ.ಮಡಿವಾಳರ್, ಭೀಮನಗೌಡ ಸಿಂಗನಳ್ಳಿ, ಎಸ್.ಎಚ್.ಜಾಧವ, ಶಿವಶರಣ ಬೂದಿಹಾಳ ಅಭಿನಂದಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಜಯಪುರ ಜಿಲ್ಲೆಯ ೧೧೦ಕೆವ್ಹಿ ಬಸವನಬಾಗೇವಾಡಿ-ಮೋರಟಗಿ ಮಾರ್ಗದ ಕಾಮಗಾರಿಯ ೧೧೦ಕೆವ್ಹಿ ಸಿಂದಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಟರ್ಮಿನಲ್ ಬೇ ಬಸ್ ಜಂಪಗಳ ಜೋಡಣೆಯ ಕಾಮಗಾರಿ ಕೈಗೊಳ್ಳುವುದರಿಂದ ಕಾರ್ಯನಿರ್ವಾಹಕ ಅಭಿಯಂತರರು ಯೋಜನೆ ವಿಭಾಗ ಕೆಪಿಟಿಸಿಎಲ್, ವಿಜಯಪುರ ಅವರು ನೀಡಿದ ಆದೇಶದಂತೆ ೧೧೦/೩೩/೧೧ಕೆವ್ಹಿ ಸಿಂದಗಿ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಎಲ್ಲಾ ೧೧ಕೆವ್ಹಿ ಮಾರ್ಗಗಳಲ್ಲಿ ಆ.೨ರಂದು ಬೆಳಿಗ್ಗೆ ೧೦ಗಂಟೆಯಿಂದ ಸಾಯಂಕಾಲ ೫ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸದರಿ ಮಾರ್ಗಗಳ ಮೇಲೆ ಬರುವ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಿಂದಗಿ ಹೆಸ್ಕಾಂ ಉಪವಿಭಾಗದ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಿಕ್ಷಕರು ಕಾಟಾಚಾರಕ್ಕಾಗಿ ತಮ್ಮ ಕಾರ್ಯ ಚಟುವಟಿಕೆ ಮಾಡಬಾರದು. ಒಂದು ವೇಳೆ ಹಾಗೆ ಮಾಡಿದ್ದಲ್ಲಿ ಅದು ನಮಗೆ ಬದುಕಿನಲ್ಲಿ ನೆಮ್ಮದಿಯನ್ನ ತರಲಾರದು. ವೃತ್ತಿಯನ್ನ ಪ್ರೀತಿಸಿ ಆನಂದಿಸಿ ಸೇವೆ ಮಾಡಬೇಕು ಎಂದು ಸಿ.ಎಂ.ಮನಗೂಳಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಸಿ.ಎಂ.ಮನಗೂಳಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಕಾಲೇಜಿನಲ್ಲಿ ಸು೩೫ ವರ್ಷಗಳ ಕಾಲ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಗುರುವಾರ ಸೇವಾ ನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ಡಾ.ಅರವಿಂದ ಮನಗೂಳಿ ಅವರಿಗೆ ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿಯ ವಿವಿಧ ಅಂಗ ಸಂಸ್ಥೆಗಳು ಹಮ್ಮಿಕೊಂಡ ಅಭಿನಂದನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಯಾವುದೇ ಶೈಕ್ಷಣಿಕ ಸಂಸ್ಥೆಯ ಯಶಸ್ಸು ಶಿಕ್ಷಕರ ಪರಿಣಾಮಕಾರಿತ್ವವನ್ನು ಹೆಚ್ಚಾಗಿ ಅವಲಂಬಿಸಿರುತ್ತದೆ. ಅವರು ಜ್ಞಾನವನ್ನು ವರ್ಗಾಯಿಸುವುದು, ವಿದ್ಯಾರ್ಥಿಗಳನ್ನು ಮೇಲ್ವಿಚಾರಣೆ ಮಾಡುವುದು ಮತ್ತು ಬೋಧನಾ ಗುಣಮಟ್ಟವನ್ನು ಹೆಚ್ಚಿಸುವ ಕಾರ್ಯ ಶಿಕ್ಷಕರದ್ದಾಗಿರುತ್ತದೆ. ಜಗತ್ತಿನ ಎಲ್ಲ ವೃತ್ತಿಗಳಿಗಿಂತ ಅತ್ಯಂತ ಪವಿತ್ರವಾಗಿರುವ ಕಾರ್ಯವಾಗಿದೆ ಎಂದರು.ಈ ವೇಳೆ…

Read More

ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿಜಮಖಂಡಿ: ಕೃಷ್ಣೆ ಮುನಿಸಿಕೊಂಡಿದ್ದು, ತನ್ನೊಡಲನ್ನು ತುಂಬಿಕೊಂಡು ಉಕ್ಕಿ ಹರಿಯುತ್ತಿದ್ದಾಳೆ. ಮಹಾರಾಷ್ಟ್ರದ ಮಹಾಬಳೇಶ್ವರ, ಕೊಂಕಣ ಹಾಗೂ ಸಹ್ಯಾದ್ರಿ ಶ್ರೇಣಿಯ ಘಟ್ಟ ಪ್ರದೇಶದಲ್ಲಿ ಕಳೆದ 4-5 ದಿನಗಳಿಂದ ಕುಂಭದ್ರೋಣ ಮಳೆ ಸುರಿಯುತ್ತಿರುವುದರಿಂದ ಮಹಾರಾಷ್ಟ್ರದ ಕೊಯ್ತಾ ಜಲಾಶಯ ಭರ್ತಿಗೆ ಕೆಲವೇ ಅಡಿ ಬಾಕಿ ಉಳಿದಿರುವುದರಿಂದ ಕೃಷ್ಣಾ ನದಿಗೆ ಪ್ರವಾಹ ಬಂದು ಈಗಾಗಲೇ ಉಗಾರ-ಕುಡಚಿ ಮಾರ್ಗದ ಸೇತುವೆ ಮೇಲೆ ನೀರು ಬಂದು ಸಾರಿಗೆ ಸಂಚಾರ ಸಂಪೂರ್ಣ ಕಡಿತಗೊಂಡಿದೆ. ಈ ಭಾಗದಲ್ಲಿ ಮೇ ತಿಂಗಳಲ್ಲಿ ಅವಧಿಗೆ ಮುನ್ನ ಮಳೆ ಸುರಿದಿರುವುದರಿಂದ ರೈತಾಪಿ ವರ್ಗದಲ್ಲಿ ಖುಷಿ ಮುಗಿಲ ಮುಟ್ಟಿತ್ತು. ಆದರೆ, ಈಗ ಕಳೆದ ಒಂದು ತಿಂಗಳಿನಿಂದ ಕೇವಲ ತುಂತುರು ಮಳೆ ಬರುತ್ತಿದೆಯಾದರೂ ಕೂಡ ಮಹಾರಾಷ್ಟ್ರದಲ್ಲಿ ಕಳೆದು ಮೂರ್ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದೆ. ಇದರಿಂದ ಈ ಭಾಗದಲ್ಲಿ ಕೃತಕ ಪ್ರವಾಹ ಬಂದು ನದಿತೀರದ ತಗ್ಗು ಪ್ರದೇಶ ಜಲಾವೃತಗೊಂಡು ಬೆಳೆಗಳಲ್ಲಿ ನೀರು ಹೊಕ್ಕುತ್ತಿದೆ. ಕೄಷ್ಣಾ ನದಿಗೆ ಮತ್ತೆ ಜೀವಕಳೆ ಬಂದಿದೆ. ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಂಘದ ಸರ್ವೋತೋಮುಖ ಅಭಿವೃದ್ಧಿಯಲ್ಲಿ ಸದಸ್ಯರು, ಠೇವುದಾರರು, ನಿರ್ದೇಶಕ ಮಂಡಳಿ ಸೇರಿದಂತೆ ಗ್ರಾಹಕರ ಪಾತ್ರ ಬಹು ಮುಖ್ಯವಾಗಿದೆ ಎಂದು ಸಮೃದ್ಧಿ ಸಹಕಾರ ಸಂಘದ ಅಧ್ಯಕ್ಷೆ ಸಂಗೀತಾ ನಾಯಿಕ್ ಹೇಳಿದರು.ಪಟ್ಟಣದ ಕಲ್ಮೇಶ್ವರ ಮಂಗಲ ಭವನದಲ್ಲಿ ಗುರುವಾರ ಜರುಗಿದ ಸಮೃದ್ಧಿ ಸಹಕಾರ ಸಂಘದ ೪ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘದ ಪ್ರಗತಿಗೆ ಕಳೆದ ೩ ವರ್ಷಗಳಿಂದ ನೀಡುತ್ತಿರುವ ಸದಸ್ಯರ ಸಹಕಾರ ಶ್ಲಾಘನೀಯ ಎಂದರು.ಸಂಘದ ಉಪಾಧ್ಯಕ್ಷ ರಿಯಾಜ್ ಯಲಗಾರ ಮಾತನಾಡಿ, ಒಟ್ಟು ೯೦೨ ಸದಸ್ಯ ಬಲದ ಸಂಘವು ೧೦.೨೪ ಲಕ್ಷ ಶೇರು ಬಂಡವಾಳದೊಂದಿಗೆ ಕಾರ್ಯಾರಂಭ ಮಾಡಿ ಈಗ ೯೩.೪೬ ಲಕ್ಷ ಶೇರು ಬಂಡವಾಳದೊಂದಿಗೆ ಸುಮಾರು ೭.೮೦ ಕೋಟಿ ದುಡಿಯುವ ಬಂಡವಾಳ ಹೊಂದಿದೆ. ೨೦೨೪-೨೫ನೇ ಸಾಲಿನಲ್ಲಿ ೩೬.೧೬ ಕೋಟಿ ವ್ಯವಹಾರ ನಡೆಸಿ ೩೦.೧೭ ಲಕ್ಷ ರೂ.ಗಳ ನಿವ್ವಳ ಆದಾಯ ಗಳಿಸಿದೆ. ಮುಂಬರುವ ವರ್ಷಗಳಲ್ಲಿ ಠೇವುಗಳನ್ನು ರೂ. ೧೦ ಕೋಟಿಗೆ ಹೆಚ್ಚಿಸಿಕೊಳ್ಳುವುದು. ಶೇರು ಬಂಡವಾಳವನ್ನು ರೂ. ೧.೫೦ ಕೋಟಿಗಳಿಗೆ ಹೆಚ್ಚಿಸಿಕೊಳ್ಳುವುದು. ಹಾಗೂ…

Read More