Author: editor.udayarashmi@gmail.com

ವಿಜಯಪುರ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನ ಮಂತ್ರಿಗಳ ಸ್ವನಿಧಿ, ಮಾತೃವಂಧನ, ಡೇನಲ್ಮ್ ಹಾಗೂ ಸರ್ಕಾರದ ಇತರೆ ಯೋಜನೆಗಳ ಲಾಭ ಪಡೆದ ಫಲಾನುಭವಿಗಳ ಸಮಗ್ರವಾದ ನಿಖರ ಮಾಹಿತಿಯನ್ನು ಮುಂದಿನ ಸಭೆಯೊಳಗಾಗಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಯುವನಿಧಿ ಯೊಜನೆಯಡಿ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಅಂತಿಮ ವರ್ಷದಲ್ಲಿ ಪಧವಿ ಹಾಗೂ ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳ ಪಟ್ಟಿಯನ್ನು ಪಡೆದು ಎಲ್ಲ ಅರ್ಹ ಫಲಾನುಭವಿಗಳಿಗೆ ಯುವನಿಧಿ ಯೋಜನೆ ಲಾಭ ದೊರಕಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ಯೋಜನೆಗಳ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಅಮೃತ್ ಯೋಜನೆಯಡಿ ಮಹಿಳಾ ಸ್ವ ಸಹಾಯ ಸಂಘಗಳು ವಿವಿಧ ವೃತ್ತಿಪರ ಚಟುವಟಿಕೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪ್ರತಿಯೊಂದು ಗುಂಪಿಗೆ ಒಂದು…

Read More

ವಿಜಯಪುರ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಸಿಇಓ ಭೇಟಿ | ಜಲಜೀವನ ಮಿಷನ್ ಕಾಮಗಾರಿಗಳ ಪರಿಶೀಲಿಸಿದ ಸಿಇಓ ರಿಷಿ ಆನಂದ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಪೂರ್ವದಲ್ಲಿ ಓವರ್ ಹೆಡ್ ಟ್ಯಾಂಕ್ ನ್ನು ಸ್ವಚ್ಛಗೊಳಿಸಿ, ಕ್ಲೋರಿನೇಷನ್ ಮಾಡಿ, ನೀರಿನ ಗುಣಮಟ್ಟವನ್ನು ಪರೀಕ್ಷಿಸಬೇಕು. ಗ್ರಾಮಗಳಲ್ಲಿರುವ ಹಳೆಯ ಸಂಪರ್ಕಗಳನ್ನು ಕಡ್ಡಾಯವಾಗಿ ತೆರವುಗೊಳಿಸಿ ಜಲ ಜೀವನ್ ಮಿಷನ್ ಯೋಜನೆಯಡಿ ನೀಡಲಾದ ಹೊಸ ನಳ ಸಂಪರ್ಕಗಳ ಮೂಲಕ ನೀರನ್ನು ಪೂರೈಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ ಅವರು ಸೂಚಿಸಿದರು.ವಿಜಯಪುರ ತಾಲೂಕಿನ ಐನಾಪುರ, ಐನಾಪುರ ಎಲ್ ಟಿ, ಬುರಣಾಪುರ, ಮದಭಾವಿ, ಕುಮಟಗಿ, ಕಗ್ಗೋಡ, ಕಗ್ಗೋಡ ಎಲ್‌ಟಿ, ದೇವರ ಹಿಪ್ಪರಗಿ ತಾಲೂಕಿನಪಡಗಾನೂರ, ಪಡಗಾನೂರ ಎಲ್ ಟಿ, ಕೊಂಡಗೂಳಿ, ಹಂಚಲಿ ಮತ್ತು ಕೋರವಾರ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಂಡ ಪ್ರತಿ ಮನೆಗಳ ಕಾಮಗಾರಿಗಳ ಕುರಿತು ಸ್ಥಳ ಪರಿಶೀಲನೆ ನಡೆಸಿದ ಅವರು ಜಲಮಿಷನ್ ಯೋಜನೆಯಡಿ…

Read More

ಭೀಮೆಯ ಒಡಲಿಗೆ ಮತ್ತೆ ಒಂದು ಲಕ್ಷ ಕ್ಯೂಸೆಕ್ಸ್ ನೀರು ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ ಮಾಳಿರೇವತಗಾಂವ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಉಜನಿ ಜಲಾಶಯದಿಂದ ಮಂಗಳವಾರದಂದು ಮಧ್ಯಾಹ್ನ ಒಂದು ಲಕ್ಷ ಕ್ಯೂಸೆಕ್ಸ್ ನೀರನ್ನು ಭೀಮಾ ನದಿಗೆ ನೀರು ಹರಿಬಿಟ್ಟಿರುವುದರಿಂದ ಚಡಚಣ ತಾಲೂಕಿನಲ್ಲಿ ಭೀಮಾ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ.ಇದರಿಂದಾಗಿ ಉಮರಜ, ಉಮರಾಣಿ, ಶಿರನಾಳ, ಹಿಂಗಣಿ, ಧೂಳಖೇಡ ಮುಂತಾದ ಗ್ರಾಮಗಳ ಬಳಿ ಇರುವ ಬ್ರಿಜ್ ಕಮ್ ಬಾಂದಾರಗಳು ಜಲಾವೃತಗೊಂಡಿವೆ. ಇದರಿಂದಾಗಿ ಕರ್ನಾಟಕ ಮಹಾರಾಷ್ಟ್ರ ಸಂಪರ್ಕ ಕಲ್ಪಿಸುವ ಉಮರಜ, ಉಮರಾಣಿ, ಹಿಂಗಣಿ, ಶಿರನಾಳ ಕೆಲವು ಹಳ್ಳಿಗಳ ಸಂಪರ್ಕ ಕಳೆದುಕೊಂಡಿವೆ.ಭೀಮಾ ನದಿಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ನದಿ ತೀರದಲ್ಲಿ ವಾಸವಾಗಿರುವ ಜನರಿಗೆ ಸುರಕ್ಷಿತ ತಾಣಗಳತ್ತ ತೆರಳಲು ಈಗಾಗಲೇ ಸೂಚಿಸಲಾಗಿದೆ. ಭೀಮಾ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಮುಂಜಾಗೃತಾ ಕ್ರಮವಾಗಿ ನದಿ ತೀರದ ಗ್ರಾಮಗಳಲ್ಲಿ ಡಂಗುರ ಸಾರಿ, ಸುರಕ್ಷಿತ ತಾಣಗಳಿಗೆ ಜನರು ತಮ್ಮ ಸಾಮಾನು ಹಾಗೂ ಜಾನುವಾರಗಳೊಂದಿಗೆ ತೆರಳಲು ಸೂಚಿಸಲಾಗಿದೆ ಎಂದು ಚಡಚಣ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಹೊಸಮಠದಲ್ಲಿ ಬುಧವಾರ ಸಂಜೆ ಬಣಜಿಗ ಸಮಾಜದ ಪೂರ್ವಭಾವಿ ಸಭೆ ಜರುಗಿತು.ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ದಿ ಸಂಘದ ಮುದ್ದೇಬಿಹಾಳ ತಾಲೂಕು ಘಟಕದ ನೂತನ ಅಧ್ಯಕ್ಷ, ವರ್ತಕ ಅಶೋಕ ಚಟ್ಟೇರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಹಲವು ಸಮಾಜ ಚಿಂತಕರು ಸಮಾಜ ಸಂಘಟನೆ ಕುರಿತು ತಮ್ಮ ಅಭಿಪ್ರಾಯ ಮಂಡಿಸಿ, ತಾಲೂಕಿನಾದ್ಯಂತ ಬಣಜಿಗ ಸಮಾಜವನ್ನು ಬಲಿಷ್ಠವಾಗಿ ಸಂಘಟಿಸಲು ಹಲವು ಚಟುವಟಿಕೆ, ಕಾರ್ಯಕ್ರಮ ಹಮ್ಮಿಕೊಂಡು ಸಮಾಜವನ್ನು ಒಗ್ಗೂಡಿಸಲು, ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು, ಸಮಾಜದ ನಿವೃತ್ತ ನೌಕರರನ್ನು ಸನ್ಮಾನಿಸಲು ಸಲಹೆ ಸೂಚನೆ ನೀಡಿದರು.ಈ ವೇಳೆ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಮತ್ತು ನೇಮಕಗೊಂಡ ಪದಾಧಿಕಾರಿಗಳ ಪರಿಚಯ ಮಾಡಿಕೊಟ್ಟು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಶೀಘ್ರವಾಗಿ ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಯಿತು. ರುದ್ರೇಶ ಕಿತ್ತೂರ, ನಾಲತವಾಡದ ಬಿ.ಎ.ಚಿನಿವಾಲರ ಅವರು ಸಮಾಜ ಸಂಘಟನೆ ಕುರಿತು ಮಾತನಾಡಿದರು. ಸಂಘಟನೆಯ ಜವಾಬ್ಧಾರಿಯುತ ಸ್ಥಾನದಲ್ಲಿರುವವರು ಯಾವ್ಯಾವ ಕರ್ತವ್ಯಗಳನ್ನು ನಿಭಾಯಿಸಬೇಕು, ಸಂಘಟನೆಯನ್ನು ಮುನ್ನಡೆಸುವಲ್ಲಿ ಅವರ…

Read More

ಲೋಕಸಭಾ ಚುನಾವಣೆಯಲ್ಲಿ ‘ಮತಗಳ್ಳತನ’ ಆರೋಪ |ದಾಖಲೆ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಸಲ್ಲಿಸಲು ನಿರ್ಧಾರ | ಸಿಎಂ ಸಿದ್ದರಾಮಯ್ಯ ಹೇಳಿಕೆ ಬೆಂಗಳೂರು: ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜ್ಯದಲ್ಲಿನ ‘ಮತಗಳ್ಳತನ’ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳಿ ದಾಖಲೆಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ.ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿವಾದದ ನಡುವೆ ದೇಶದಲ್ಲಿ ಚುನಾವಣೆಯಲ್ಲಿ ಮತಗಳ್ಳತನ ನಡೆಯುತ್ತಿದೆ. ಕಳೆದ ಲೋಕಸಭಾ ಚುನಾವಣೆ ಅವಧಿಯಲ್ಲಿ ಕರ್ನಾಟಕದ ಕ್ಷೇತ್ರವೊಂದರಲ್ಲಿ ಭಾರಿ ಮತಗಳ್ಳತನ ಬಗ್ಗೆ ಕಾಂಗ್ರೆಸ್ ಅಧ್ಯಯನ ನಡೆಸಿರುವುದಾಗಿ ಜುಲೈ 23 ರಂದು ರಾಹುಲ್ ಗಾಂಧಿ ಆರೋಪಿಸಿದ್ದರು.ಈ ಸಂಬಂಧ ಆಗಸ್ಟ್ 5 ರಂದು ನಡೆಯಲಿರುವ ಚುನಾವಣೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿ ದಾಖಲೆ ಹೊಂದಿದ್ದು, ಚುನಾವಣಾ ಆಯೋಗದ ಅಧಿಕಾರಿಗಳಿಗೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.ರಾಹುಲ್ ಗಾಂಧಿ ಪ್ರತಿಭಟನೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಪ್ರತಿಭಟನಾ ಸ್ಥಳ ಹಾಗೂ ಯಾವ ರೀತಿ ಪ್ರತಿಭಟನೆ ನಡೆಸಬೇಕು ಎಂಬುದರ ಕುರಿತು…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ನೂತನ ಎಸ್.ಡಿ.ಎಂ.ಸಿ.ಯ ಮೊದಲ ಸಭೆ ಜರುಗಿತು.ಸಭೆಯಲ್ಲಿ ಶಾಲೆಗೆ ಸಿ.ಬಿ.ಝಡ್ ಇಂಗ್ಲೀಷ ವಿಷಯದ ಇಬ್ಬರು ಶಿಕ್ಷಕರು ಮತ್ತು ಪಿ.ಸಿ.ಎಂ. ಇಂಗ್ಲೀಷ್ ಮಾದ್ಯಮದ ಒಂದು ಹುದ್ದೆಯ ಅವಶ್ಯಕತೆ ಇದೆ. ಈ ಹುದ್ದೆಗಳ ನೇಮಕಾತಿಗೆ ವಿಳಂಬವಾಗುತ್ತಿರುವದರಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಸಲುವಾಗಿ ಹುದ್ದೆಗಳನ್ನು ಆಹ್ವಾನಿಸಲು ನಿರ್ಧರಿಸಲಾಯಿತು. ಮತ್ತು ಶಾಲೆಗೆ ಶೌಚಾಲಯ ಮತ್ತು ಕುಡಿಯುವ ನೀರಿನ ಸಮಸ್ಯೆಯನ್ನು ತೀವ್ರವಾಗಿ ಬಗೆ ಹರಿಸುವ ಕುರಿತು ಚಿಂತಿಸಲಾಯಿತು. ಅಲ್ಲದೆ ಆಟದ ಮೈದಾನವೂ ಸೇರಿದಂತೆ ಊಟಕ್ಕಾಗಿ ದೊಡ್ಡ ಭೋಜನಾಲಯ ನಿರ್ಮಿಸಲು ಸಂಬಂಧಿಸಿದ ಇಲಾಖೆಯೊಂದಿಗೆ ಚರ್ಚಿಸಲು ನಿರ್ಧರಿಸಿದರು.ಬಳಿಕ ಬಿಸಿಯೂಟದ ಸಹಾಯಕ ನಿರ್ದೇಶಕರಾದ ಡಾ. ಎಂ.ಎಂ.ಬೆಳಗಲ್ಲ ಮತ್ತು ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಶಾಲಾ ಮಕ್ಕಳ ಜೊತೆಗೆ ಕುಳಿತು ಮದ್ಯಾಹ್ನದ ಬಿಸಿಯೂಟವನ್ನು ಸವಿದು ಗುಣಮಟ್ಟ ಪರೀಕ್ಷಿಸಿದರು.ಈ ಸಂದರ್ಭದಲ್ಲಿ ಅಧ್ಯಕ್ಷೆ ಪೂರ್ಣಿಮಾ ಬೆಳಗಲ್ಲ, ಉಪಾಧ್ಯಕ್ಷ ಸಂಗನಗೌಡ ಪಾಟೀಲ, ಸದಸ್ಯರಾದ ಮನೋಹರ ಪಾಟೀಲ, ಬಂದೆನಮಾಜ ಕುಮಸಿ, ನಿಂಗನಗೌಡ ಬಿರಾದಾರ, ಯಲ್ಲಪ್ಪ ಮ್ಯಾಗೇರಿ, ಗೀತಾ ನಾಲತವಾಡ,…

Read More

ಕಳೆದ ೯ ದಿನಗಳಿಂದ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹ | ಪ್ರತಿಭಟನಾ ಮೆರವಣಿಗೆ ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ರುಕುಂಪೂರ ರಸ್ತೆ ಅತಿಕ್ರಮಣ ತೆರವುಗೊಳಿಸುವಂತೆ ಆಗ್ರಹಿಸಿ ಕಳೆದ ೯ ದಿನಗಳಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು ಇಲ್ಲಿವರೆಗೂ ಯಾವೊಬ್ಬ ಅಧಿಕಾರಿಗಳು ಹೋರಾಟಗಾರರ ಬೇಡಿಕೆ ನ್ಯಾಯಯುತವಾಗಿ ಸ್ಪಂದಿಸದಿರುವುದನ್ನು ಖಂಡಿಸಿ ಗುರುವಾರ ಆಲಮೇಲ ಪಟ್ಟಣ್ಣ ಬಂದ್ ಗೊಳಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಘೋಷಣೆಗಳನ್ನು ಕೂಗುತ್ತ ಮೆರವಣಿಗೆ ಮಾಡಿದರು.ಹರಿಶ ಎಂಟಮಾನ ಮಾತನಾಡಿ, ಧರಣಿ ಸತ್ಯಾಗ್ರಹ ಆರಂಭಗೊಂಡು ೯ ದಿನಗಳಾದರೂ ಎಡಿಎಲ್‌ಆರ್ ಅಧಿಕಾರಿಗಳಿಂದ ಎರಡು-ಮೂರು ಬಾರಿ ಸರ್ವೇ ಮಾಡಿದರು ಸ್ಪಷ್ಟ ವರದಿ ನೀಡುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಕೆಳಿದರೆ ನಾಳೆ ಎಡಿಎಲ್‌ಆರ್ ವರದಿ ಬರುತ್ತೆ ಎಂದು ದಿನ ಮುಂದೂಡುತ್ತಿರುವುದು ಸರಿಯಲ್ಲ. ಅಧಿಕಾರಿಗಳು ಸಾರ್ವಜನಿಕರ ಬೇಡಿಕೆಗಳನ್ನು ಆಲಿಸಿ ಸಮಸ್ಯೆಗಳು ಬಗೆಹರಿಸುವುದನ್ನು ಬಿಟ್ಟು ಪ್ರಭಾವಿ ವ್ಯಕ್ತಿಗಳ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣ ಬಂದ ಯಶಸ್ವಿ: ಧರಣಿ ಸತ್ಯಾಗ್ರಹ ಹಮ್ಮಿಕೊಂಡು ಎಂಟು ದಿನ ಪೂರ್ಣಗೊಂಡು ಗುರುವಾರ ೯ನೇ ದಿನದಂದು ಅಧಿಕಾರಿಗಳ ವರ್ತನೆ ಬೆಸತ್ತ…

Read More

ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಪ್ರೊ.ಸಿದ್ದಲಿಂಗೇಶ ಸಜ್ಜನ ಶೆಟ್ಟರ್ ಅವರು ಅಜಗಣ್ಣ ಮತ್ತು ಮುಕ್ತಾಯಕ್ಕ ಅವರ ಬಗೆಗೆ ಹೇಳುತ್ತಾ ಪುಲಿಗೆರೆಯ ಆದಯ್ಯ, ಅಗ್ಗವಣಿ ಹೊನ್ನಯ್ಯ ಅವರೂ ಸಹ ಗದಗ ಭಾಗದ ಹೆಮ್ಮೆಯ ಶರಣರು ಎನ್ನುವುದನ್ನು ಹಂಚಿಕೊಂಡರು.ಗದಗ ಹತ್ತಿರದ ಲೆಕ್ಕದ ಗುಂಡಿ, ಲಕ್ಕುಂಡಿಯಲ್ಲಿದ್ದ ಅಜಗಣ್ಣ ಮತ್ತು ಮುಕ್ತಾಯಕ್ಕ ಅವರ ಅಣ್ಣ – ತಂಗಿಯ ಸಂಬಂಧ ಅತ್ಯಂತ ವಿಶೇಷವಾದದ್ದು, ಅವರದು ಒಕ್ಕಲುತನದ ಮತ್ತು ಸದಾಚಾರದ ಕುಟುಂಬ ಎಂದು ಹೇಳುತ್ತಾ ಅಜಗಣ್ಣನವರ ಅಂತರಂಗದ ಭಕ್ತಿ ಮತ್ತು ಅಣ್ಣ-ತಂಗಿಯರ ಸುಜ್ಞಾನದ ಪಯಣವನ್ನು ವರ್ಣಿಸಿದರು.ಆದ್ಯರ ಅರವತ್ತು ವಚನಕ್ಕೆ ದಣ್ಣಾಯಕರ ಇಪ್ಪತ್ತು ವಚನದಣ್ಣಾಯಕರ ಇಪ್ಪತ್ತು ವಚನಕ್ಕೆ ಪ್ರಭುದೇವರ ಹತ್ತು ವಚನಪ್ರಭುದೇವರ ಹತ್ತು ವಚನಕ್ಕೆ ಅಜಗಣ್ಣನ ಐದು ವಚನಅಜಗಣ್ಣನ ಐದು ವಚನಕ್ಕೆ ಕೂಡಲ ಚನ್ನಸಂಗಮದೇವಾದೇವಿಯಕ್ಕಳದೊಂದೆ ವಚನಎಂದು ಹೇಳುತ್ತಾ ಅಜಗಣ್ಣ ನವರ ಮಹಿಮೆಯನ್ನು ಸಾರಿದರು.ಅಜಗಣ್ಣನವರಿಗೆ ಬಹಿರಂಗದ ಪೂಜೆ ಒಗ್ಗಲಿಲ್ಲ,ಅವರದು ಅಂತರಂಗದ ಸಾಧನೆ,ಧ್ಯಾನ, ಧಾರಣೆಯಾಗಿತ್ತು. ಇಷ್ಟಲಿಂಗವನ್ನು ಗೋಪ್ಯವಾಗಿ ಧರಿಸಬೇಕು ಎನ್ನುವುದು ಅವರ ಆಶಯ. ಅವರು ಗಂಟಲು ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೆಬಿಹಾಳ: ಮಾಲಿಕರಿಲ್ಲದ ಬೀದಿ ದನಗಳ ಹಾವಳಿ ತಡೆಗಟ್ಟಿ ರೈತರ ಬೆಳೆಯನ್ನು ಉಳಿಸಬೇಕು ಒತ್ತಾಯಿಸಿ ರೈತ ಮುಖಂಡರು ಇಲ್ಲಿನ ಪುರಸಭೆ ಮುಖ್ಯಾಧಿಕಾರಿಗಳಿಗೆ ಮತ್ತು ಪೊಲೀಸ್ ಇಲಾಖೆಗೆ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮುಖಂಡ ರಫೀಕ ಬೀಳಗಿ ಮಾತನಾಡಿ, ಬೀದಿ ದನಗಳ ಹಾವಳಿಯಿಂದ ಬೇಸತ್ತು ಹೋಗಿದ್ದೇವೆ. ಹಗಲು ರಾತ್ರಿ ಎನ್ನದೇ ಬೇಲಿ ಜಿಗಿದು ಹೊಲಗಳಿಗೆ ನುಗ್ಗಿ ಬೆಳೆಯನ್ನೆಲ್ಲ ಹಾಳುಮಾಡುತ್ತಿವೆ. ಅಲ್ಲದೇ ಜಮೀನನ್ನು ಕಾಯುವ ರೈತರ ಮೇಲೂ ಮಗಿಬಿಳುತ್ತಿವೆ. ಇದರಿಂದ ರೈತ ಬೆಳೆ ಕಳೆದುಕೊಳ್ಳುತ್ತಿರುವದಲ್ಲದೇ ಪ್ರಾಣ ಭಯದಿಂದ ಜೀವನ ನಡೆಸುವಂತಾಗಿದೆ. ಜಮೀನುಗಳಲ್ಲಿ ಮಾತ್ರವಲ್ಲದೇ ಈ ದನಗಳು ಸಾರ್ವಜನಿಕರು ಸದಾ ಓಡಾಡುವ ಪ್ರಮುಖ ರಸ್ತೆಗಳಲ್ಲಿ, ಮುಖ್ಯ ಬಜಾರ್ ನಲ್ಲಿ, ಪ್ರಮುಖ ವೃತ್ತಗಳಲ್ಲಿ ಜನೆತೆಗೆ, ಅಂಗಡಿಕಾರರಿಗೆ, ಬೀದಿ ಬದಿ ವ್ಯಾಪಾರಸ್ಥರಿಗೆ ತೊಂದರೆ ನೀಡುತ್ತಿವೆ. ಈ ತೊಂದರೆಯಿಂದ ರೈತರು ಮಾತ್ರವಲ್ಲದೇ ಸಾರ್ವಜನಿಕರೂ ಕೂಡ ಹೈರಾಣಾಗಿದ್ದಾರೆ. ಈ ಬಗ್ಗೆ ಪುರಸಭೆಯವರು ಕೂಡಲೇ ಎಚ್ಚೆತ್ತುಕೊಂಡು ಎಲ್ಲ ದನಗಳನ್ನು ಹತ್ತಿರದ ಗೋಶಾಲೆಗೆ ಕಳುಹಿಸಬೇಕು. ತಪ್ಪಿದ್ದಲ್ಲಿ ಸಾವಿರಾರು ರೈತರು ಸೇರಿ ಪುರಸಭೆ ಎದುರು…

Read More

ಲೇಖನ- ಜಯಶ್ರೀ ಅಬ್ಬಿಗೇರಿ, ಬೆಳಗಾವಿಸ ಪ ಪೂ ಕಾಲೇಜುಹಿರೇಬಾಗೇವಾಡಿಜಿ: ಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ತಪ್ಪು ಎಂದರೇನು?ನಮ್ಮ ಅಜ್ಞಾನದಿಂದ ಉಂಟಾಗುವ ಕ್ರಿಯೆ. ಅರಿವಿನ ಕೊರತೆಯಿಂದ ಸಂಭವಿಸುವಂತಹದು. ನಮಗೆ ಆ ಕ್ಷಣಕ್ಕೆ ಸರಿ ಎನಿಸಿದ್ದು. ಅರಿವಿನ ಮೂಸೆಯಲ್ಲಿ ಸರಿಯೆನಿಸಲಾರದ್ದು. ಘಟಿಸಿದ ಮೇಲೆ ತಿಳುವಳಿಕೆಗೆ ಬರುವಂತಹದು. ಎಂದು ನಾವು ಸಾಮಾನ್ಯವಾಗಿ ತಪ್ಪನ್ನು ಅರ್ಥೈಸುತ್ತೇವೆ. ತಪ್ಪಿನ ಮೇಲೆ ನಮಗೆ ಅಧಿಕಾರ ಇದೆಯೆ?ನಾವು ಮಾಡುವ ತಪ್ಪಿನ ಮೇಲೆ ಮೊದ ಮೊದಲು ನಮಗೆ ಅಧಿಕಾರವೇನೂ ಇರುವದಿಲ್ಲ. ಅವು ತಾವಾಗಿಯೇ ಘಟಿಸುತ್ತವೆ. ನಾವು ಮಾಡುವದು ತಪ್ಪು ಎಂದು ತಿಳಿದ ಮೇಲೂ ಮುಂದುವರೆಸುತ್ತೆವಲ್ಲ ಆಗ ತಪ್ಪುಗಳ ಮೇಲೆ ನಮ್ಮ ಅಧಿಕಾರ ಸ್ಥಾಪನೆಯಾಗುತ್ತದೆ. ಆ ಬಳಿಕ ತಪ್ಪುಗಳನ್ನು ಮಾಡುವದು ಬಿಡುವದು ನಮ್ಮ ಇಚ್ಛೆಗಳನ್ನು ಅವಲಂಬಿಸಿದೆ. ತಪ್ಪುಗಳ ಮೇಲೆ ಅಧಿಕಾರ ಸ್ಥಾಪಿಸಬೇಕೆಂದರೆ ಮಾಡಿದ ತಪ್ಪುಗಳನ್ನು ಮತ್ತೆಂದೂ ಮರಕಳಸದಂತೆ ಎಚ್ಚರವಹಿಸಬೇಕು. ಸಣ್ಣ ಮಕ್ಕಳಿದ್ದಾಗ ದಿನನಿತ್ಯ ಅನೇಕ ತಪ್ಪುಗಳನ್ನು ಮಾಡುವದನ್ನು ಕಾಣುತ್ತೇವೆ. ಕ್ರಮೇಣ ತಪ್ಪುಗಳ ಸಂಖ್ಯೆ ಕಡಿಮೆಯಾಗುತ್ತದೆ. ಅದಕ್ಕೆ ಕಾರಣ ಕಲಿಕೆ ಮತ್ತು ಅನುಭವ.ತಪ್ಪು ಮಾಡುವಾಗ ಉಂಟಾಗುವ…

Read More