Author: editor.udayarashmi@gmail.com

ಲೇಖನ.- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಅಪ್ಪ ಜಗತ್ಪಾಲಕ ಸೂರ್ಯದೇವನೇ,ನಿನಗೆ ಹೀಗೊಂದು ಪತ್ರ ಬರೆಯುವ ಪ್ರಮೇಯ ಬದುಕಿನಲ್ಲಿ ಬರುತ್ತದೆ ಎಂದು ಖಂಡಿತವಾಗಿಯೂ ಅಂದುಕೊಂಡಿರಲಿಲ್ಲ ಆದರೇನು ಮಾಡುವುದು?ಇದೀಗ ನಿನಗೆ ಪತ್ರ ಬರೆಯಲೇಬೇಕಾದ, ಬರೆದು ಕ್ಷಮೆ ಕೇಳಿಕೊಳ್ಳಲೇಬೇಕಾದ ಕಾಲ ಕೂಡಿ ಬಂದಿದೆ.ನೀನು ನಮ್ಮನ್ನು ಕ್ಷಮಿಸುವೆ ಎಂಬ ಭರವಸೆ ನನಗಿಲ್ಲ. ಆದರೆ ನಮ್ಮ ಸ್ವಯಂಕೃತ ಅಪರಾಧದ ತಪ್ಪೊಪ್ಪಿಗೆಯನ್ನು ನಿನ್ನ ಮುಂದೆ ಹೇಳಿಕೊಂಡು ನನ್ನ ಮನದ ಭಾರವನ್ನು ಹಗುರವಾಗಿಸಿಕೊಳ್ಳುವ ಆಶಯ ನನ್ನದು.ನಮ್ಮ ಬದುಕನ್ನು ಬೆಳಗುವ ನಮ್ಮೆಲ್ಲ ದೈನಂದಿನ ಕೃತ್ಯಗಳಿಗೆ ಸಾಕ್ಷಿಯಾಗುವ ನಮಗೆ ಆಹಾರ ತಯಾರಿಸಿಕೊಳ್ಳಲು ಬೇಕಾಗುವ ಸಸ್ಯಗಳಿಗೆ ಸಂಜೀವಿನಿಯಾಗಿರುವ, ನಿನ್ನ ಅಸ್ತಿತ್ವವಿಲ್ಲದೆ ನಾವ್ಯಾರು ಇಲ್ಲ ಎಂಬ ಅರಿವನ್ನು ಹೊಂದಿದ್ದರೂ ಕೂಡ, ತಿಳಿದು ಕೂಡ ಅಜ್ಞರಂತೆ ವರ್ತಿಸುತ್ತಿರುವ ನಿನ್ನ ಮಕ್ಕಳ ತಪ್ಪು ಕ್ಷಮಿಸಲಾರದ ಮಹಾಪರಾಧ.. ನಿಜ.ಕೇವಲ ನಾಲ್ಕೈದು ದಶಕಗಳ ಹಿಂದೆ ಉದ್ಯಮಗಳು ತೆವಳುತ್ತಿರುವ ಕಾಲದಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅವಶ್ಯಕತೆ ಇತ್ತು.. ಇದೀಗ ಸರ್ಕಾರದ ಕಟ್ಟುನಿಟ್ಟಿನ ನಿಯಮಾವಳಿಗಳ ಚಾಪೆಯ ಕೆಳಗೆ ನುಸುಳುವ ಕಲೆ ಜನರಿಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಭರ್ಜರಿ ವಿಜಯ ಸಾಧಿಸಿದ್ದಾರೆ. ಈ ಗೆಲುವು ರಾಜ್ಯ ಸರ್ಕಾರದ ಸಾಧನೆಗೆ ಮತದಾರರು ನೀಡಿರುವ ಮನ್ನಣೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ.ಬಿಜೆಪಿ ಮುಖಂಡರು ಪ್ರಚೋದನಕಾರಿ ಭಾಷಣಗಳ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಎಷ್ಟೇ ಅಪಪ್ರಚಾರ ನಡೆಸಿದರೂ ಮತದಾರರು ಮಾತ್ರ ಅಭಿವೃದ್ಧಿ ಮತ್ತು ಸಮಾಜದಲ್ಲಿ ಶಾಂತಿಯನ್ನು ಬಯಸಿ ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದ ಉಮೇಶ ಮೇಟಿ ಮತ್ತು ಸಮರ್ಥ ಶಾಮನೂರು ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಅವರು ವಿಶ್ಲೇಷಣೆ ಮಾಡಿದ್ದಾರೆ.ಪ್ರಚಾರದ ವೇಳೆ ರಾಜ್ಯ ಸರ್ಕಾರವನ್ನು ಲಘುವಾಗಿ ಟೀಕೆ ಮಾಡಲಾಯಿತು. ಮತ ವಿಭಜನೆಯ ಪ್ರಯತ್ನಗಳೂ ನಡೆದವು. ಆದರೆ ಮತದಾರರು ಅಪಪ್ರಚಾರಗಳಿಗೆ ಮನ್ನಣೆ ನೀಡಲಿಲ್ಲ. ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕೈ ಬಲಪಡಿಸಿದ್ದಾರೆ ಎಂದು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಸಾಧನೆ ತೋರಿದ ೫ ಸಾವಿರ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಅಭೂತಪೂರ್ವ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ವಿಜಯಪುರದ ಕಿತ್ತೂರ ರಾಣಿ ಚೆನ್ನಮ್ಮ ಮಂಗಲ ಕಾರ್ಯಾಲಯದಲ್ಲಿ ಇದೇ ದಿನಾಂಕ ೨೪ ರಂದು ನಡೆಯಲಿದೆ. ಇದೇ ಪ್ರಥಮ ಬಾರಿಗೆ ಅಪೂರ್ವ ರೀತಿಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪಂಚಮಸಾಲಿ ಸಮಾಜದ ಮುಖಂಡ ಡಾ.ಸುರೇಶ ಬಿರಾದಾರ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತಾಹಿಸುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ಜಿಲ್ಲಾಮಟ್ಟದಲ್ಲಿ ಈ ರೀತಿ ಸಮಾಜದ ವಿದ್ಯಾರ್ಥಿಗಳಿಗೆ ಸಾವಿರಾರು ಸಂಖ್ಯೆಯಲ್ಲೊ ಒಂದೇ ವೇದಿಕೆಯಲ್ಲಿ ಸನ್ಮಾನಿಸುವ ಕಾರ್ಯಕ್ರಮ ಇದಾಗಲಿದೆ ಎಂದರು.ಪಂಚಮಸಾಲಿ ಸಮಾಜ ಕೃಷಿ ಆದಾರಿತ ಸಮಾಜ, ನಮ್ಮ ಸಮಾಜದಲ್ಲಿ ಬಹಳಷ್ಟು ಬಡವರೇ ಇದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ತೋರಲು ಅನುಕೂಲವಾಗಲು ಹಾಗೂ ಉಳಿದ ವಿದ್ಯಾರ್ಥಿಗಳಿಗೂ ಸ್ಪೂರ್ತಿ ತುಂಬುವ ನಿಟ್ಟಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಿಜಯೋತ್ಸವ ಸಮಿತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ, ಬಡ ವಿದ್ಯಾರ್ಥಿಗಳಿಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿನ ಮಕ್ಕಳೇ ಶಕ್ತಿ, ಪ್ರಭುದ್ಧ ಭಾರತದ ನಿಜವಾದ ಆಸ್ತಿ. ಅವರಲ್ಲಿ ಅಡಗಿರುವ ಪ್ರತಿಭೆ, ಕನಸುಗಳು ಮತ್ತು ಪರಿಶ್ರಮವೇ ನಾಳೆಯ ದೇಶದ ದಿಕ್ಕನ್ನು ನಿರ್ಧರಿಸುತ್ತವೆ. ಸರಿಯಾದ ಶಿಕ್ಷಣ, ನೈತಿಕ ಮೌಲ್ಯಗಳು ಮತ್ತು ಪ್ರೋತ್ಸಾಹ ದೊರೆತರೆ, ಅವರು ಕೇವಲ ತಮ್ಮ ಭವಿಷ್ಯವನ್ನಷ್ಟೇ ಅಲ್ಲ, ರಾಷ್ಟ್ರದ ಭವಿಷ್ಯವನ್ನೂ ಹೊಳೆಯುವಂತೆ ಮಾಡುತ್ತಾರೆ ಎಂದು ಪಿಎಸೈ ಮಹೇಶ ಸಂಕ ಹೇಳಿದರು.ನಗರದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ ಯುವ ಬ್ರಿಗೇಡ್ ಆಯೋಜಿಸಿದ ಡಾ.ಬಾಬಾ ಸಾಹೇಬ ಅಂಬೇಡ್ಕರ ರ ೧೩೫ ನೇ ಜಯಂತ್ಯೋತ್ಸವದಲ್ಲಿ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ಧನ ಹಾಗೂ ಪುಸ್ತಕ ವಿತರಣೆ ಮಾಡಿ ಅವರು ಮಾತನಾಡಿದರು.“ಮಕ್ಕಳನ್ನು ಕೇವಲ ಪಾಠಪುಸ್ತಕಗಳಿಗೆ ಸೀಮಿತಗೊಳಿಸದೇ, ಅವರಲ್ಲಿರುವ ಸೃಜನಶೀಲತೆ ಮತ್ತು ಹೊಣೆಗಾರಿಕೆಯನ್ನು ಬೆಳೆಸುವುದು ಅತ್ಯಂತ ಮುಖ್ಯ. ಇಂದಿನ ಮಕ್ಕಳನ್ನು ಸರಿಯಾದ ದಾರಿಯಲ್ಲಿ ನಡೆಸಿದರೆ, ಪ್ರಭುದ್ಧ ಮತ್ತು ಶಕ್ತಿಶಾಲಿ ಭಾರತ ನಿರ್ಮಾಣ ಸಾಧ್ಯ. ಎಂದು ಹೇಳಿದರು. ಉದ್ಘಾಟಕರಾಗಿ ನಗರ ಪಾಲಿಕೆ ಸದಸ್ಯ ಕುಮಾರ ಗಡಗಿ ಮಾತನಾಡಿ, ಮಕ್ಕಳಲ್ಲಿ ಸೃಜನಾತ್ಮಕ ಚಿಂತನೆ ಪಾಲಕರು ಬಿತ್ತಬೇಕು. ಅವರ ಕನಸಿಗೆ…

Read More

ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಶ್ಚಿಮ ಬಂಗಾಳದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ದೇಶದ ಇತಿಹಾಸದಲ್ಲಿಯೇ ಇದೊಂದು ಐತಿಹಾಸಿಕ ಮೈಲಿಗಲ್ಲು. ದೇಶದೆಲ್ಲೆಡೆ ಹೊಸ ಸಂಚಲನ ಸೃಷ್ಠಿಯಾಗಿದ್ದು, ಕಾರ್ಯಕರ್ತರಲ್ಲಿ ಆತ್ಮ ವಿಶ್ವಾಸ ಇಮ್ಮಡಿಸಿದೆ ಎಂದು ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯಿಸಿದ್ದಾರೆ.ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಪಶ್ಚಿಮ ಬಂಗಾಳದ ಫಲಿತಾಂಶ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ದಶಕಗಳ ಹೋರಾಟದ ಫಲವಾಗಿ ಪಶ್ಚಿಮ ಬಂಗಾಳದಲ್ಲಿ ಕೇಸರಿ ಬಾವುಟ ಹಾರಾಡುತ್ತಿದೆ. ಇದು ಶಾಮ್‌ಪ್ರಸಾದ್ ಮುಖರ್ಜಿ ಅವರ ದೂರದೃಷ್ಠಿಯ ಫಲ ಮತ್ತು ಈ ಗೆಲುವು ಅವರ ಕನಸು ನನಸಾಗುತ್ತಿರುವುದರ ಪ್ರತೀಕ ಎಂದು ಕೊಂಡಾಡಿದರು.ಈ ಗೆಲುವು ಅಸಂಖ್ಯಾತ ಕಾರ್ಯಕರ್ತರ ತ್ಯಾಗ, ಸಂಘರ್ಷ ಹಾಗೂ ಪ್ರಾಮಾಣಿಕ ಸೇವೆಯ ಫಲ. ಇನ್ನು ಅಸ್ಸಾಂನಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ದೇಶದಲ್ಲಿನ್ನೂ ಬಿಜೆಪಿಯ ಅಲೆ ಇದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಮುಂದಿನ ದಿನಮಾನಗಳಲ್ಲಿ ಕಾಂಗ್ರೆಸ್ ಹೇಳ ಹೆಸರಿಲ್ಲದಂತಾಗಲಿದೆ. ಕಾಂಗ್ರೆಸ್ ಮುಕ್ತ ಭಾರತದ ಕನಸು…

Read More

ಮೈಗೂರ ಗ್ರಾಮದಲ್ಲಿ ಹಿರಿಯ ಚಿತ್ರನಟ ಶ್ರೀಧರ್ ಅಭಿಮತ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪವಾಡ ಪುರುಷರು ಹಾಗೂ ಸತ್ಪುರುಷರ ಆಶೀರ್ವಾದ ನಮ್ಮ ಬದುಕನ್ನು ಉದ್ಧಾರ ಮಾಡುತ್ತದೆ. ದೈವಾನುಗ್ರಹಕ್ಕಾಗಿ ನಾವು ಭಕ್ತಿಯಿಂದ ಪ್ರಾರ್ಥಿಸಬೇಕು ಎಂದು ಹಿರಿಯ ಚಿತ್ರನಟ ಶ್ರೀಧರ್ ಹೇಳಿದರು.ತಾಲೂಕಿನ ಮೈಗೂರ ಗ್ರಾಮದ ಗುರುದೇವಾಶ್ರಮದ ಆವರಣದಲ್ಲಿ ಶಿವಾನಂದ ಮಠದ ಜಾತ್ರಾ ಮಹೋತ್ಸವ ಹಾಗೂ ಲಿಂ.ಮಲ್ಲಿಕಾರ್ಜುನ ಮಹಾಸ್ವಾಮೀಜಿ ಅವರ ಪುಣ್ಯಾರಾಧನೆ ನಿಮಿತ್ತ ಶುಕ್ರವಾರ ರಾತ್ರಿ ಹಮ್ಮಿಕೊಳ್ಳಲಾಗಿದ್ದ ಮೈಗೂರ ಪವಾಡ ಪುರುಷ ಪೌರಾಣಿಕ ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಭಕ್ತಿಯಿಂದ ಕೇಳಿದ್ದನ್ನು ನೀಡಲು ಪರಮಾತ್ಮ ಸ್ವಲ್ಪ ವಿಳಂಬ ಮಾಡಬಹುದು, ಆದರೆ ಸದ್ಗುರುಗಳು ಎಂದಿಗೂ ವಿಳಂಬ ಮಾಡುವುದಿಲ್ಲ. ಭಕ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಶಕ್ತಿ ಮಹಾಗುರುಗಳಿಗಿದೆ. ಮನುಷ್ಯ ಜನ್ಮ ಪಡೆಯುವುದೇ ದೊಡ್ಡ ಪುಣ್ಯ. ಅಂತಹ ಪುಣ್ಯದ ಫಲವಾಗಿ ನಮಗೆ ಮಹಾಪುರುಷರ ಸನ್ನಿಧಿಯಲ್ಲಿ ಇರುವ ಭಾಗ್ಯ ಸಿಗುತ್ತದೆ. ಜೀವನದ ಕಷ್ಟ-ನೋವುಗಳನ್ನು ನಿವಾರಿಸುವ ಸಾಮರ್ಥ್ಯ ಸತ್ಪುರುಷರಿಗಿದೆ ಎಂದರು.ಹಿರಿಯ ನಟಿಯರಾದ ಅನು ಪ್ರಭಾಕರ್ ಮತ್ತು ಭವ್ಯಾ ಮಾತನಾಡಿ, ಪವಾಡ ಪುರುಷರು ನಡೆದಾಡಿದ ನೆಲವೇ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ ವಿಜಯಪುರ ವಲಯದಲ್ಲಿ ೫೦ಕ್ಕೂ ಹೆಚ್ಚು ಪದವಿ ಕಾಲೇಜುಗಳಿದ್ದರೂ, ಕ್ರೀಡಾ ಸ್ಪರ್ಧೆಯಲ್ಲಿ ಕೇವಲ ೬ ತಂಡಗಳು ಮಾತ್ರ ಭಾಗವಹಿಸಿರುವುದು ವಿಷಾದನೀಯ ಸಂಗತಿ ಎಂದು ಕೃಷಿಕ ಸಮಾಜದ ತಾಲೂಕಾಧ್ಯಕ್ಷ, ಸಂಸ್ಥೆಯ ನಿರ್ದೇಶಕ ಶಿವಪ್ಪಗೌಡ ಬಿರಾದಾರ ಕಳವಳ ವ್ಯಕ್ತಪಡಿಸಿದರು.ಸಿಂದಗಿ ನಗರದ ತಾ.ಶಿ.ಪ್ರಮಂಡಳಿಯ ಸಿ.ಎಂ. ಮನಗೂಳಿ ಪದವಿ ಮಹಾವಿದ್ಯಾಲಯ ಹಾಗೂ ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ವಿಜಯಪುರ ದ್ವಿತೀಯ ವಲಯದ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ವಿದ್ಯಾರ್ಥಿಗಳು ಕ್ರೀಡೆಗಳಿಗಿಂತ ಪಠ್ಯ ಚಟುವಟಿಕೆ ಮತ್ತು ತಂತ್ರಜ್ಞಾನಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದರ ಪರಿಣಾಮವಾಗಿ ದೈಹಿಕ ಚಟುವಟಿಕೆಗಳು ಕಡಿಮೆಯಾಗುತ್ತಿದ್ದು, ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆ ಕುಂಠಿತವಾಗುತ್ತಿದೆ. ಹಾಗೆಯೇ, ಪೋಷಕರು ಹಾಗೂ ಶಿಕ್ಷಕರು ಕೂಡ ವಿದ್ಯಾರ್ಥಿಗಳನ್ನು ಕ್ರೀಡೆಗಳತ್ತ ಪ್ರೋತ್ಸಾಹಿಸುವ ಜವಾಬ್ದಾರಿ ಹೊಂದಿದ್ದಾರೆ. ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗದೆ, ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆಗಳೂ ಮಹತ್ವದ್ದೆಂಬ ಅರಿವು ಮೂಡಿಸುವ ಅಗತ್ಯವಿದೆ ಎಂದರು.ಈ ವೇಳೆ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಣಮಂತ ಸುಣಗಾರ ಮಾತನಾಡಿ, ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ…

Read More

ಎಕ್ಸಲಂಟ್ ಕಾಲೇಜಿನಲ್ಲಿ ನಡೆದ ಬ್ರಿಡ್ಜ್ಕೋರ್ಸ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಂಜುನಾಥ ಜುನಗೊಂಡ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೇತುಬಂಧ ಕಾರ್ಯಕ್ರಮವು ಶೈಕ್ಷಣಿಕ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳನ್ನು ಸನ್ನದ್ದಗೊಳಿಸುತ್ತದೆ. ನಿಮ್ಮ ಬದುಕಿನಲ್ಲಿರುವ ನಿರಾಸೆಯ ಸಂಹಾರವಾಗಿ ಸಾಧನೆಯ ಸಾಕಾರ ಮಾಡಿಸುತ್ತದೆ ಎಂದು ಪ್ರಾಂಶುಪಾಲ ಮಂಜುನಾಥ ಮ. ಜುನಗೊಂಡ ಹೇಳಿದರು.ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಸಲಾಗಿದ್ದ ೨೦೨೬-೨೭ ನೇ ಸಾಲಿಗೆ ದಾಖಲಾತಿ ಪಡೆದುಕೊಂಡ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಬ್ರಿಡ್ಜಕೋರ್ಸ ಉದ್ಘಾಟನೆ ಹಾಗೂ ಶಾರದಾಮಾತೆಯ ಪೂಜಾ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು; ಸೇತು ಬಂದ ಕಾರ್ಯಕ್ರಮವು ಇಂದಿನ ಕ್ಷಣಗಳನ್ನು ಮುಂದಿನ ಬದುಕಿನೊಂದಿಗೆ ಬೆಸೆಯುವ ಕಾರ್ಯಕ್ರಮವಾಗಿದೆ. ಮಕ್ಕಳಲ್ಲಿ ಅಡಗಿರುವ ಸುಪ್ತವಾದ ಅಂತಃಶಕ್ತಿಯನ್ನು ಜಾಗೃತಗೊಳಿಸಿ ವಿಜ್ಞಾನ ವಿಭಾಗದಲ್ಲಿ ಬರುವ ಸವಾಲುಗಳನ್ನು ಎದುರಿಸುವುದಕ್ಕೆ ತಯಾರು ಮಾಡುವ ಗರಡಿ ಮನೆಯಾಗಿದೆ ಎಂದರು.ಶೈಕ್ಷಣಿಕ ಸಂಯೋಜಕ ಹಾಗೂ ಗಣಿತ ವಿಭಾಗದ ಮುಖ್ಯಸ್ಥ ಮಂಜುನಾಥ ತುಮ್ಮರಮಟ್ಟಿ ಮಾತನಾಡಿದರು.ಲಾಂಗ್ ಟರ್ಮ ವಿಭಾಗದ ಶೈಕ್ಷಣಿಕ ಸಂಯೋಜಕ ಯಗ್ನೇಶ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ರೇವಣಸಿದ್ದಪ್ಪ ರಾಜಾಪೂರ, ರಸಾಯನಶಾಸ್ತ್ರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಸೋಮವಾರ ನಾನಾ ಅಭಿವೃದ್ದಿ ಕಾಮಗಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಅವರು ಚಾಲನೆ ನೀಡಿದರು.ಬೆಳಿಗ್ಗೆ ೧೦ ಗಂಟೆಗೆ ಗೋಲ್ ಗುಂಬಜ್ ನಿಂದ ಹಕೀಮ್ ಚೌಕ್ ವರೆಗೆ ೨ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.ಬಳಿಕ ವಾರ್ಡ್ ನಂ.೧೮ ರಲ್ಲಿ ೨ ಕೋಟಿ ರೂ. ವೆಚ್ಚದಲ್ಲಿ ಪರಿಶಿಷ್ಟ ವರ್ಗಗಳ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಹಾಗೂ ಹರಣಶಿಖಾರಿ ಓಣಿಯಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿದರು.ಅಲ್ಲಿಂದ ನೇರವಾಗಿ ಕಾಸಗೇರಿ ಖಾದಿ ಗ್ರಾಮೋದ್ಯೋಗ ಮಾರ್ಗವಾಗಿ ಮುಬೀನ್ ಸರ್ಕಲ್ ಅಥಣಿ ಗಲ್ಲಿ ಮುಖಾಂತರ ಕೇಂದ್ರ ಬಸ್ ನಿಲ್ದಾಣವರೆಗೆ ಒಳಚರಂಡಿ, ಮಳೆ ನೀರು ಚರಂಡಿ, ಅಲಂಕಾರಿಕ ಬೀದಿ ದೀಪ ಅಳವಡಿಸಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಗಂಗಾಧರ ಸಂಬಣ್ಣಿ ಮಹಾಪೌರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಹತ್ತು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಎನ್ ಸಿವಿಟಿ ಸಂಯೋಜಿತ ವೃತ್ತಿಗಳಿಗೆ ೨೦೨೬ರ ಆಗಸ್ಟ್ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.೧೦ನೇ ತರಗತಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳೂ ಅಭ್ಯರ್ಥಿಗಳು¹LnE Karnataka Portal (www.cite.karnataka.gov.in⁠�) ಮೂಲಕ ಏ.೨೭ ರಿಂದ ಮೇ.೮ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಜಿಲ್ಲಾ ನೋಡಲ್ ಸರಕಾರಿ ಐಟಿಐ ತರಬೇತಿ ಸಂಸ್ಥೆ, ೮ ಸಾಂಪ್ರದಾಯಿಕ ಹಾಗೂ ೦೬ Iಟಿಜusಣಡಿಥಿ-೪.೦ ವೃತ್ತಿಗಳಲ್ಲಿ ಒಟ್ಟು ೫೧೮ ಸೀಟುಗಳು ಲಭ್ಯವಿದ್ದು. Weಟಜeಡಿ ವೃತ್ತಿಗೆ ೮ನೇ ಪಾಸ್, ೧೦ನೇ ಪಾಸ್ ಹಾಗೂ ಫೇಲ್ ಅಭ್ಯರ್ಥಿಗಳೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೯೦೩೫೪೩೪೩೮೧, ೯೮೮೬೪೩೭೫೧೭, ೯೯೭೨೬೮೨೧೮೪, ೯೪೪೮೯೮೬೩೮೧,೦೮೩೫೨-೨೮೦೩೬೦, ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Read More