Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯ ಕುಮಟಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ , ನಿ ಹಾಗೂ ಕಗ್ಗೋಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘನಿ, ಸಹಕಾರ ಸಂಘಗಳು ಸುಮಾರು ವರ್ಷಗಳಿಂದ ಕಾರ್ಯನಿರ್ವಹಿಸದೇ ಇರುವುದರಿಂದ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ೧೯೫೯ರ ಅಡಿಯಲ್ಲಿ ಸಮಾಪನೆಗೊಳಿಸಲು ಕ್ರಮವಹಿಸಲು ಅವಕಾಶವಿದೆ.ಸಂಘದ ಸದಸ್ಯರು, ಆಡಳಿತ ಮಂಡಳಿಯವರು ಕಾರ್ಯನಿರ್ವಹಿಸದೇ ಸ್ಥಗಿತಗೊಂಡ ಸಹಕಾರ ಸಂಘಗಳಿಗೆ ಸಂಬಂಧಿಸಿದಂತೆ ತಮ್ಮ ಆಕ್ಷೇಪಣೆಗಳು ಇದ್ದಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರು ವಿಜಯಪುರ ಇಲ್ಲಿಗೆ ಅಗತ್ಯ ದಾಖಲಾತಿಗಳೊಂದಿಗೆ ಈ ಪ್ರಕಟಣೆ ಹೊರಡಿಸಿದ ೧೫ ದಿನಗಳ ಒಳಗಾಗಿ ಸಲ್ಲಿಸಬೇಕು. ತಪ್ಪಿದಲ್ಲಿ ನೋಂದಣಿ ರದ್ಧತಿಗಾಗಿ ಕ್ರಮ ತೆಗೆದುಕೊಳ್ಳಲಾಗುವುದೆಂದು ವಿಜಯಪುರದ ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯ ಕುಮಟಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ , ನಿ ಹಾಗೂ ಕಗ್ಗೋಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘನಿ, ಸಹಕಾರ ಸಂಘಗಳು ಸುಮಾರು ವರ್ಷಗಳಿಂದ ಕಾರ್ಯನಿರ್ವಹಿಸದೇ ಇರುವುದರಿಂದ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ೧೯೫೯ರ ಅಡಿಯಲ್ಲಿ ಸಮಾಪನೆಗೊಳಿಸಲು ಕ್ರಮವಹಿಸಲು ಅವಕಾಶವಿದೆ.ಸಂಘದ ಸದಸ್ಯರು, ಆಡಳಿತ ಮಂಡಳಿಯವರು ಕಾರ್ಯನಿರ್ವಹಿಸದೇ ಸ್ಥಗಿತಗೊಂಡ ಸಹಕಾರ ಸಂಘಗಳಿಗೆ ಸಂಬಂಧಿಸಿದಂತೆ ತಮ್ಮ ಆಕ್ಷೇಪಣೆಗಳು ಇದ್ದಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರು ವಿಜಯಪುರ ಇಲ್ಲಿಗೆ ಅಗತ್ಯ ದಾಖಲಾತಿಗಳೊಂದಿಗೆ ಈ ಪ್ರಕಟಣೆ ಹೊರಡಿಸಿದ ೧೫ ದಿನಗಳ ಒಳಗಾಗಿ ಸಲ್ಲಿಸಬೇಕು. ತಪ್ಪಿದಲ್ಲಿ ನೋಂದಣಿ ರದ್ಧತಿಗಾಗಿ ಕ್ರಮ ತೆಗೆದುಕೊಳ್ಳಲಾಗುವುದೆಂದು ವಿಜಯಪುರದ ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕೊಲ್ಹಾರ, ತಿಕೋಟಾ ಹಾಗೂ ವಿಜಯಪುರ ತಾಲೂಕುಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ ಮಿಷನ್ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿ.ಪಂ. ಸಿಇಓ ರಿಷಿ ಆನಂದ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಜುಲೈ ೨೮ ರಂದು ಕೊಲ್ಹಾರ ತಾಲೂಕಿನ ತೆಲಗಿ, ರೋಣಿಹಾಳ ಮತ್ತು ಮುಳವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆಲಗಿ ಎಲ್ ಟಿ, ಚೀರಲದಿನ್ನಿ ರೋಣಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೋಣಿಹಾಳ, ಕುಪಕಡ್ಡಿ ಗ್ರಾಮಕ್ಕೆ ಹಾಗೂ ಮುಳವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಳವಾಡ ಸ್ಟೇಶನ್ ಮುಳವಾಡ ಗ್ರಾಮ, ತಿಕೋಟಾ ತಾಲೂಕಿನ ಬರಟಗಿ ಎಲ್.ಟಿ ಹಾಗೂ ವಿಜಯಪುರ ತಾಲೂಕಿನ ತಿಡಗುಂದಿ, ಡೊಮ್ಮನಾಳ, ಮತ್ತು ಡೊಮ್ಮನಾಳ,ಎಲ್ ಟಿ-೧ ಮತ್ತು ಡೊಮ್ಮನಾಳ ಎಲ್ ಟಿ-೨ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.ಜಲ ಜೀವನ ಮಿಷನ್ ಯೋಜನೆ ಅಡಿಯಲ್ಲಿ ಕೈಗೊಂಡ ಪ್ರತಿ ಗ್ರಾಮಗಳಿಗೆ ಪ್ರತಿ ಮನೆ -…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಮಾದಿಗರ ಸಂಘಟನೆಗಳ ಒಕ್ಕೂಟದ ವತಿಯಿಂದ ಅಗಸ್ಟ ೧ರಂದು ಒಳ ಮೀಸಲಾತಿಗಾಗಿ ಹೋರಾಟ ಮಾಡಲು ನಗರದಲ್ಲಿ ಪೂರ್ವಭಾವಿ ಸಭೆ ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ಮಾದಿಗರ ಸಂಘಟಣೆಗಳ ಒಕ್ಕೂಟ ಜಿಲ್ಲಾಧ್ಯಕ್ಷ ಶ್ರೀಶೈಲ ರತ್ನಾಕರ ಮಾತನಾಡಿ, ನಿವೃತ್ತ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ಹಾಗೂ ಜೆ.ಸಿ ಮಾಧುಸ್ವಾಮಿ ವರದಿಯಂತೆ ಪರಿಗಣಿಸಲು ಅಗಷ್ಟ ೧೫ ರ ಒಳಗೆ ಪರೀಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೋಳಿಸಬೇಕು ಇಲ್ಲದಿದ್ದರೆ ರಾಜ್ಯವ್ಯಾಪ್ತಿ ಗಂಭೀರ ಸ್ವರೂಪದ ಹೊರಾಟ ನಡೆಸಲಾಗುವುದು. ರಾಜ್ಯದಲ್ಲಿ ಪರೀಶಿಷ್ಟ ಜಾತಿಗೆ ಇರುವ ಶೇ%೧೫ ರಷ್ಟು ಮೀಸಲಾತಿಯಲ್ಲಿ ಮಾದರ, ಸಮಗಾರ, ಡೋರ, ಮಚಗಾರ, ಸಮುದಾಯದವರಿಗೆ ಶೇ%೬ ರಷ್ಟು ಒಳ ಮೀಸಲಾತಿ ನೀಡುವಂತೆ ಆಯೋಗ ಶಿಫಾರಸು ಮಾಡಿದೆ, ಆದರೆ ಸದ್ಯದ ಸರ್ಕಾರದಲ್ಲಿ ಇರುವು ಕೇಲವರು ಒಳಮೀಸಲಾತಿ ಜಾರಿಯಾಗಲು ಅಡಿಪಡಿಸುತ್ತಿದ್ದಾರೆ. ಹಿಂತವರ ಮಾತಿಗೆ ಮುಖ್ಯಮಂತ್ರಿಗಳು ಕಿವಿ ಕೊಡಬಾರದು. ಒಳ ಮೀಸಲಾತಿಗಾಗಿ ಸುಮಾರು ೪೦ ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಅಗಸ್ಟ ೧೫ ರ ಒಳಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲವಾದರೆ ಅಗಸ್ಟ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜನಪದ ಸಾಹಿತ್ಯ ನಮ್ಮ ಸಂಸ್ಕೃತಿಯ ಪ್ರತೀಕ. ನಮ್ಮೆಲ್ಲರ ಜೀವನಾಡಿಯಾಗಿರುವ ಜಾನಪದ ಸಾಹಿತ್ಯ ಇಂದು ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನದೇಯಾದ ವಿಶಿಷ್ಟ ಛಾಪನ್ನು ಮೂಡಿಸುವ ಮೂಲಕ ಮಾತೃ ಸಂಸ್ಕೃತಿಯನ್ನು ಉಳಿಸಿ ಬೆಳೆಸಿದ ಕೀರ್ತಿ ಜನಪದ ಸಾಹಿತ್ಯಕ್ಕೆ ಸಲ್ಲುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಭಿಪ್ರಾಯಪಟ್ಟರು. ವಿಜಯಪುರ ನಗರದ ಬಸವನ ಬಾಗೇವಾಡಿ ರಸ್ತೆಯಲ್ಲಿರುವ ರೇಣುಕಾ ನಗರ ಹಾಗೂ ಕೃಷಿ ನಗರದ ಬಡಾವಣೆಯಲ್ಲಿ ಮಂಗಳವಾರ ಸಂಜೆ ಶ್ರೀ ಮಲ್ಲಿಕಾರ್ಜುನ ದೇವಾಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಸಾಂಸ್ಕೃತಿಕ ಸಂಜೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಲ್ಲಿಕಾರ್ಜುನ ಸೇವಾ ಸಮಿತಿ ಇವರ ಸಹಯೋಗದಲ್ಲಿ ಜರುಗಿದ “ಜನಪದ ವೈಭವ” ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಪದ ಸಾಹಿತ್ಯ ನಮ್ಮೆಲ್ಲರ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಇಂತಹ ಸಾಹಿತ್ಯದ ಮೂಲಕ ಮಕ್ಕಳಲ್ಲಿ ಆಚಾರ-ವಿಚಾರ, ಸಂಸ್ಕೃತಿ, ಸಂಸ್ಕಾರಗಳನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು.ಅಧ್ಯಕ್ಷತೆ ವಹಿಸಿದ್ದ ಸಿಂದಗಿಯ ಹಿರಿಯ ಜಾನಪದ ವಿದ್ವಾಂಸ…

Read More

ಸಿಎಂ ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ? | ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮಗೆ ಇರುವ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ ಮಾಡುತ್ತಿದ್ದು, ಇದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸುರ್ಜೆವಾಲ ಅವರು ಶಾಸಕರನ್ನು ಭೇಟಿ ಮಾಡಿದ ಬಳಿಕ ಅನೇಕ ವಿಚಾರಗಳನ್ನು ಸಿಎಂ ಗಮನಕ್ಕೆ ತಂದಿದ್ದು, ಶಾಸಕರ ಅಹವಾಲುಗಳ ವಿಚಾರವಾಗಿ ಸಿಎಂ ಸಭೆ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನು ಇಲ್ಲ. ಈ ಬಗ್ಗೆ ನನಗೆ ಯಾವುದೇ ಆಕ್ಷೇಪ ಇಲ್ಲ. ಈ ವಿಚಾರದಲ್ಲಿ ನನಗೆ ಏನೂ ಕಷ್ಟವಾಗದಿದ್ದರೂ, ನಿಮಗೆ ಏಕೆ (ಮಾಧ್ಯಮಗಳು) ಕಷ್ಟವಾಗುತ್ತಿದೆ ಎಂದು ಮರುಪ್ರಶ್ನಿಸಿದರು.ನೀವು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಆಗಿದ್ದು ನಿಮ್ಮನ್ನು ಕರೆದಿಲ್ಲ ಎಂದಾಗ, “ಈ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ. ಬೆಂಗಳೂರಿನ ಅಭಿವೃದ್ದಿಗೆ ನಾವು ಪ್ರತ್ಯೇಕ ಅಜೆಂಡಾ ಹೊಂದಿರುವ ಕಾರಣಕ್ಕೆ ಆನಂತರ ಚರ್ಚೆ ನಡೆಸುತ್ತೇವೆ. ಬೆಂಗಳೂರಿನ ಅಭಿವೃದ್ದಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಾನು ಸಹ ಒಂದಷ್ಟು ಜನಪ್ರತಿನಿಧಿಗಳ ಜೊತೆ ಸಭೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕೃಷಿ ವಿಶ್ವವಿದ್ಯಾಲಯದಲ್ಲಿ ಮತ್ತು ಕೃಷಿ ಇಲಾಖೆಯಲ್ಲಿ ರೈತರ ಏಳಿಗೆಗೆ ಪೂರಕವಾಗಿ ಕೆಲಸ ಮಾಡಿದ ಸರಕಾರಿ ಕೃಷಿ ಅಧಿಕಾರಿ ಡಾ.ಆರ್.ಬಿ.ಬೆಳ್ಳಿಯವರ ಸೇವೆ ವರ್ಣತಾತೀತ ಎಂದು ಬೀದರದ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಿವೃತ್ತಗೊಂಡ ಡಾ. ಬೆಳ್ಳಿಯವರಿಗೆ ಸನ್ಮಾನ ಸಮಾರಂಭ ಮತ್ತು ಕುರಿ ಮತ್ತು ಆಡು ತರಬೇತಿ ಕಾರ್ಯಕ್ರಮದಲ್ಲಿ ಡಾ. ಬೆಳ್ಳಿಯವರ ಸನ್ಮಾನ ಕುರಿತು ಮಾತನಾಡಿದರು.ಕೃಷಿ ಉಪ ನಿರ್ದೇಶಕ ಚಂದ್ರಕಾಂತ ಪವಾರ ಮಾತನಾಡಿ ಬೆಳ್ಳಿಯವರದು ರೈತರೊಂದಿಗೆ ಒಳ್ಳೆಯ ಒಡನಾಟ, ರೈತರಿಗೆ ಮಾಹಿತಿ ನೀಡಿ ಬೆಳೆ ಬೆಳೆಸುವಲ್ಲಿ ಹೆಚ್ಚಿನ ಉತ್ಪಾದನೆ ಮಾಡಿಸುವಲ್ಲಿ ಬೆಳ್ಳಿ ಕಾರ್ಯ ಶ್ಲಾಘನೀಯ. ಬೆಳ್ಳಿಯವರು ತಮ್ಮ ಮನೆಯಲ್ಲಿ ಹೆಚ್ಚು ರೈತರು ಬಂದರೆ ಅದಕ್ಕೆಂದೆ ಒಂದು ಸಭಾ ಭವನ ನಿರ್ಮಿಸಿ ಅಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿರುವದು ಅವರು ರೈತರ ಕಾಳಜಿ ತೋರಿಸುತ್ತದೆ ಎಂದರು.ಸನ್ಮಾನಿತ ಡಾ. ಆರ್.ಬಿ.ಬೆಳ್ಳಿ, ಕೃಷಿ ವಿವಿ ವಿದ್ಯಾರ್ಥಿ ಮಲ್ಲಿಕಾರ್ಜುನ, ಶ್ರೀಶೈಲ ಆಳೂರ, ಚಂದ್ರಶೇಖರ ಪಾಸೋಡಿ, ಎಸ್.ಟಿ.ಪಾಟೀಲ, ಮುತ್ತುಗೌಡ ಪಾಟೀಲ, ಕೃಷಿ ವಿಜ್ಞಾನ ಕೇಂದ್ರದ ಡಾ.…

Read More

ಸಿಂದಗಿಯಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಉದ್ಘಾಟಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜ್ಯ ಸರ್ಕಾರ ೫ಗ್ಯಾರಂಟಿಗಳ ನಡುವೆ ರಾಜ್ಯವನ್ನು ಅತ್ಯಂತ ಸಮಗ್ರವಾಗಿ ಮುಂದುವರೆಸಿಕೊಂಡು ಹೋಗುತ್ತಿದೆ. ಕಾಂಗ್ರೆಸ್ ಸರಕಾರ ಕ್ಷೇತ್ರದ ಅಭಿವೃದ್ಧಿಗೆ ಶಾಸಕರಿಗೆ ರೂ.೫೦ಕೋಟಿ ಅನುದಾನವನ್ನು ನೀಡುತ್ತಿದ್ದಾರೆ. ಮತ್ತು ಅರಣ್ಯ ಇಲಾಖೆಯಿಂದ ಪ್ರತಿ ಶಾಸಕರಿಗೆ ರೂ.೦೧ಕೋಟಿ ಅನುದಾನವನ್ನು ಬಿಡುಗಡೆ ಮಾಡಿದ್ದೇವೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.ಸಿಂದಗಿ ಪಟ್ಟಣದ ಹೊನ್ನಪ್ಪಗೌಡ ಲೇಔಟ್‌ನಲ್ಲಿ ನಿರ್ಮಾಣಗೊಂಡ ಕರ್ನಾಟಕ ಅರಣ್ಯ ಇಲಾಖೆ, ವಿಜಯಪುರ ಹಾಗೂ ಸಿಂದಗಿ ಪ್ರಾದೇಶಿಕ ಅರಣ್ಯ ವಲಯ ವತಿಯಿಂದ ಹಮ್ಮಿಕೊಂಡ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಕೃತಿ ವಿಕೋಪ, ಹವಾಮಾನ ವೈಪರಿತ್ಯ ಜಗತ್ತಿನ ಜನರಿಗೆ ಕಾಡುವ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಜನ ತತ್ತರಿಸಿ ಹೋಗಿದ್ದಾರೆ. ಬದುಕು ಅಸ್ಥಿರವಾಗುತ್ತಿದೆ. ಬೀಗಿದೆ ಬರುವಂತಹ ಸ್ಥಿತಿಗೆ ಬರುವ ನಿರ್ಮಾಣವಾಗಿದೆ. ಇದಕ್ಕೆಲ್ಲ ಮೂಲ ಕಾರಣ ಪ್ರಕೃತಿ ನಾಶವೇ ವಿನಃ ಬೇರೆ ಯಾವುದು ಅಲ್ಲ ಎಂದು ವಿಷಾದವ್ಯಕ್ತಪಡಿಸಿದರು.ಕರೋನ ಸಂದರ್ಭದಲ್ಲಿ ಆಮ್ಲಜನಕದ ಕೊರತೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಜಯಪುರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಧಾರವಾಡ ಚೇತನ ಪೌಂಡೇಶನ್ ಹಮ್ಮಿಕೊಂಡ ವಿಜಯಪುರ ನುಡಿ ಸಡಗರ ಕಾರ್ಯಕ್ರಮದಲ್ಲಿ ಸಿಂದಗಿಯ ಶ್ರೀ ಪದ್ಮರಾಜ ಮಹಿಳಾ ಕಾಲೇಜಿನ ಉಪನ್ಯಾಸಕಿ ಹೇಮಾ ಹಿರೇಮಠ ಅವರಿಗೆ ಕಂಚ್ಯಾಣಿ ಶರಣಪ್ಪ ಸ್ಮರಣಿಯ ಶಿಕ್ಷಕರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು.ಈ ವೇಳೆ ಸಮ್ಮೇಳನಾಧ್ಯಕ್ಷ, ಕಸಾಪ ಜಿಲ್ಲಾ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಸಾಹಿತಿ ಪಂಡಿತ ಅವಜಿ, ಬಸವರಾಜ ಕುಂಬಾರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ವಿಶೇಷವಾಗಿ ಹೆಣ್ಣು ಮಕ್ಕಳು ಅತೀ ಸಡಗರ ಸಂಭ್ರಮದಿಂದ ಆಚರಿಸುವ ಹಬ್ಬ ಅದು ನಾಗರ ಪಂಚಮಿ ಹಬ್ಬ. ಈ ಹಬ್ಬಕ್ಕೆ ಮದುವೆಯಾದ ಹೆಣ್ಣು ಮಕ್ಕಳನ್ನು ತವರಿಗೆ ಕರೆದುಕೊಂಡು ಬರುವ ಪದ್ಧತಿ ಉತ್ತರ ಕರ್ನಾಟಕದಲ್ಲಿ ಇಂದಿಗೂ ಪ್ರಚಲಿತದಲ್ಲಿದೆ.ಉತ್ತರ ಕರ್ನಾಟಕ ಭಾಗದಲ್ಲಿ ನಾಗರ ಪಂಚಮಿ ದೊಡ್ಡ ಹಬ್ಬವೆಂದೇ ಹೇಳಬಹುದು.ಶ್ರಾವಣ ಮಾಸದ ಮೊದಲನೆ ಹಬ್ಬವಾದ ನಾಗರ ಪಂಚಮಿಯನ್ನು ಚಡಚಣ ತಾಲ್ಲೂಕಿನಾದ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.ಬೆಳ್ಳಂಬೆಳಗ್ಗೆ ಮಹಿಳೆಯರು ಮನೆ ಮುಂದೆ ರಂಗೋಲಿ ಹಾಕುವ ಮೂಲಕ ಶ್ರಾವಣ ಮಾಸದ ಮೊದಲ ಹಬ್ಬವಾದ ಪಂಚಮಿಯನ್ನು ಸಂಭ್ರಮದಿಂದ ಸ್ವಾಗತಿಸಿದರು.ಚಡಚಣ ಪಟ್ಟಣದ ಬಸವೇಶ್ವರ ನಗರದ ಮುತ್ತೈದೆಯರು ಮಕ್ಕಳೊಂದಿಗೆ ಸೇರಿ ಹೊಸ ಬಟ್ಟೆ ತೊಟ್ಟು, ಕಲ್ಲು ನಾಗರ ಕಟ್ಟೆಗಳಿಗೆ ತೆರಳಿ ಕುಟುಂಬದ ಎಲ್ಲರಿಗೂ ಒಳ್ಳೆಯದಾಗಲೆಂದು ಬೇಡಿಕೊಳ್ಳುತ್ತಾ ದೇವರಿಗೆ ಹಾಲೆರೆದು ವಿಶೇಷ ಪೂಜೆ ಸಲ್ಲಿಸಿದರು.ಗೃಹಿಣಿಯರು ಅತ್ಯಂತ ಸಂಭ್ರಮದಿಂದ ತಮ್ಮ ಅಕ್ಕಪಕ್ಕದ ಮನೆಗಳಿಗೆ ಹಾಗೂ‌ ಬಂಧು ಮಿತ್ರರ ಮನೆಗಳಿಗೆ ತೆರಳಿ‌ ತಾವು ತಯಾರಿಸಿದ ಎಲ್ಲ ವಿಧದ ಖಾದ್ಯಗಳನ್ನ ಒಳಗೊಂಡ ಬುತ್ತಿಯನ್ನು ಹಂಚಿ ಬಂದರು.ಹೀಗೆ ಒಬ್ಬರಿಗೊಬ್ಬರು ಮನೆಗಳಿಗೆ…

Read More