Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ನಾಡಿನಲ್ಲಿ ಶ್ರಾವಣ ಮಾಸದ ಆರಂಭವಾಗುತ್ತಿದ್ದಂತೆ ಪಟ್ಟಣ ಸೇರಿದಂತೆ ತಾಲೂಕಿನಲ್ಲಿರುವ ಎಲ್ಲ ದೇವಸ್ಥಾನಗಳಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ, ರುದ್ರಾಭಿಷೇಕ,ದೇವರಿಗೆ ಭಕ್ತರು ಹರಕೆ ಸಲ್ಲಿಸುವುದು, ಪುರಾಣ-ಪ್ರವಚನ ಆರಂಭ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರಾವಣ ಮಾಸದ ಮೊದಲ ದಿನವಾದ ಸೋಮವಾರ ಆರಂಭವಾದವು.ಎಲ್ಲ ಮಾಸಗಳಲ್ಲಿ ಶ್ರಾವಣ ಮಾಸ ಹಿಂದುಗಳಿಗೆ ಪವಿತ್ರ ಮಾಸವಾಗಿದೆ. ಈ ಮಾಸದಲ್ಲಿ ಜನರು ಉಪವಾಸ ವ್ರತ ಮಾಡುವದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಸಹಜ. ಈ ಮಾಸದಲ್ಲಿ ಹಬ್ಬಗಳು ಸಾಲು ಸಾಲಾಗಿ ಆರಂಭವಾಗುತ್ತವೆ. ಈ ಮಾಸದಲ್ಲಿ ನಾಗರಪಂಚಮಿ ಮೊದಲ ಬರುವ ಹಬ್ಬವಾಗಿದೆ. ನಂತರ ವರಮಹಾಲಕ್ಷ್ಮೀ ಪೂಜೆ, ಕೃಷ್ಣ ಜನ್ಮಾಷ್ಟಮಿ, ನೂಲ ಹುಣ್ಣಿಮೆಯಂದು ರಕ್ಷಾ ಬಂಧನ ಹಬ್ಬ, ರಾಘವೇಂದ್ರ ಸ್ವಾಮೀಜಿಗಳ ಆರಾಧನೆ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಶ್ರಾವಣ ಮಾಸದಲ್ಲಿನ ಪ್ರತಿ ಶುಕ್ರವಾರ ಸುಮಂಗಲೆಯರು ಲಕ್ಷ್ಮೀ ಪೂಜೆ ಮಾಡುವುದು ವಿಶೇಷ.ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ (ಬಸವೇಶ್ವರ) ದೇವರಿಗೂ ಸಹ ಪ್ರತಿ ಶ್ರಾವಣ ಮಾಸದಲ್ಲಿ ಒಂದು ತಿಂಗಳ ಕಾಲ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ನಿಡಗುಂದಿ ತಾಲೂಕಿನ ಬ್ಯಾಲ್ಯಾಳ ಗ್ರಾಮಸ್ಥರು ಕಲುಷಿತ ನೀರು ಸೇವಿಸಿ ಅಸ್ತವ್ಯಸ್ಥಗೊಂಡು ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಗೆ ದಾಖಲಾದ ಜನರ ಆರೋಗ್ಯವನ್ನು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು.ಪಟ್ಟಣದ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು ಆಸ್ಪತೆಗೆ ದಾಖಲಾದ ಹತ್ತು ಜನರ ಆರೋಗ್ಯವನ್ನು ವಿಚಾರಿಸಿದರು. ನಂತರ ವೈದ್ಯಾಧಿಕಾರಿಗಳಿಗೆ ಸೂಕ್ತವಾದ ಚಿಕಿತ್ಸೆ ನೀಡಬೇಕೆಂದರು.ತಾಲೂಕು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಾಬೀರ ಪಟೇಲ ಅವರು, ಬ್ಯಾಲ್ಯಾಳ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಗ್ರಾಮಸ್ಥರು ವಾಂತಿ, ಭೇದಿಯಿಂದ ಬಳಲುತ್ತಿದ್ದಾರೆ. ಶನಿವಾರದಿಂದಲೇ ನಮ್ಮ ಆಸ್ಪತ್ರೆಗೆ ಚಿಕಿತ್ಸೆಗೆ ಬರುತ್ತಿದ್ದಾರೆ. ಆಸ್ಪತ್ರೆಗೆ ಬರುವ ಎಲ್ಲರಿಗೂ ಸೂಕ್ತವಾದ ಚಿಕಿತ್ಸೆ ನೀಡಿ ಉಪಚರಿಸಲಾಗುತ್ತಿದೆ. ಈಗಾಗಲೇ ಕೆಲವರು ಆರಾಮವಾಗಿ ಮನೆಗೆ ತೆರಳಿದ್ದಾರೆ. ಈಗ ಮಕ್ಕಳು ಸೇರಿದಂತೆ ಹತ್ತು ಜನರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕೆಲವರು ಇಟಗಿ ಗ್ರಾಮದಲ್ಲಿರುವ ಆರೋಗ್ಯ ಕೇಂದ್ರದಲ್ಲಿಯೂ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಕವಿತಾ ದೊಡಮನಿ, ಜಿಲ್ಲಾ ಸರ್ವೇಕ್ಷಾಣಾಧಿಕಾರಿ ಡಾ.ಅಪ್ಪಾಸಾಬ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಮಂಗಳವಾರ ನಾಗರ ಪಂಚಮಿ ಹಬ್ಬವನ್ನು ಜನರು ಶ್ರದ್ದಾ ಭಕ್ತಿಯಿಂದ ಸಂಭ್ರಮದಿಂದ ಆಚರಿಸಿದರು.ಸೋಮವಾರ ಮನೆಯಲ್ಲಿ ಮನೆಯ ಎಲ್ಲ ಸದಸ್ಯರ ಹೆಸರು ಹೇಳುವ ಮೂಲಕ ನಾಗದೇವರಿಗೆ ಹಾಲು ಎರೆಯುವ ಮೂಲಕ ಒಳಗಡೆ ಹಾಲು ಎರೆಯುವ ಹಬ್ಬವನ್ನು ಆಚರಿಸಿದ್ದರು. ಇಂದು ಮನೆಯ ಹೊರಗೆ ಹಾಲು ಎರೆಯುವ ಹಬ್ಬವಿರುವದರಿಂದಾಗಿ ಪಟ್ಟಣದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಬಸವ ತೀರ್ಥ ಬಳಿಯಿರುವ ಅರಳಿ ಮರ ಹಾಗೂ ಬನ್ನಿಮರದ ಕೆಳಗೆ ಇರುವ ನಾಗದೇವನಿಗೆ, ಮಹಾರಾಜ ಮಠದ ಹತ್ತಿರವಿರುವ ನಾಗದೇವತೆ, ವೀರಭದ್ರೇಶ್ವರ ನಗರದಲ್ಲಿರುವ ಲಕ್ಷ್ಮೀದೇವಿ ದೇವಸ್ಥಾನದಲ್ಲಿರುವ ನಾಗದೇವತೆ ಮೂರ್ತಿಗೆ ಸೇರಿದಂತೆ ವಿವಿಧ ದೇವಸ್ಥಾನದಲ್ಲಿರುವ ಕಲ್ಲುನಾಗದೇವರಿಗೆ ಸುಮಂಗಲೆಯರು ತಮ್ಮ ಮಕ್ಕಳೊಂದಿಗೆ ಸೇರಿ ನಾಗದೇವನಿಗೆ ಹಾಲೆರೆದು ಪೂಜೆ ಸಲ್ಲಿಸಿದರು.ನಾಗದೇವತೆ ಇರುವ ದೇವಸ್ಥಾನಗಳ ಕಡೆಗೆ ಸುಮಂಗಲೆಯರು ತೆರಳಿ ಪಂಚಮಿ ಹಬ್ಬದಂಗವಾಗಿ ತಯಾರಿಸಿದ ವಿವಿಧ ಬಗೆಯ ಸಿಹಿ ತಿಂಡಿಗಳು, ಖಾದ್ಯಗಳು ದೇವರಿಗೆ ನೈವೇದ್ಯ ಅರ್ಪಿಸಿ ಭಕ್ತಿ ಮೆರೆದರು. ಪಂಚಮಿ ಹಬ್ಬದಂಗವಾಗಿ ಮಹಿಳೆಯರು ಮಕ್ಕಳು ಹೊಸ ಬಟ್ಟೆ ಧರಿಸಿ ಮನೆಗಳಲ್ಲಿ ಕಟ್ಟಿರುವ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಹಬ್ಬಗಳು ಮನುಷ್ಯನ ಪ್ರಗತಿಗೆ ಪೂರಕವಾಗಿದ್ದರೂ ಕೆಲವು ಆಚರಣೆಗಳು ಮೂಢನಂಬಿಕೆಗೆ ಪ್ರಚೋದನೆ ನೀಡುತ್ತಿವೆ. ಇದನ್ನು ಹೋಗಲಾಡಿಸಲು ಬಸವ ಪಂಚಮಿಯಂದು ಹಾಲನ್ನು ರೋಗಿಗಳಿಗೆ ವಿತರಿಸುವ ಮೂಲಕ ಬಸವ ಪಂಚಮಿಯನ್ನಾಗಿ ಆಚರಿಸಲಾಗುತ್ತಿದೆ ಎಂದು ಅಥಣಿಯ ಮೋಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ಹೇಳಿದರು.ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯು ಬಸವ ಪಂಚಮಿ ಹಬ್ಬದಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಬಡ ರೋಗಿಗಳಿಗೆ ಹಾಲು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹುತ್ತಕ್ಕೆ ಹಾಲು ಸುರಿದು ಅವೈಜ್ಞಾನಿಕವಾಗಿ ಆಚರಣೆಗೆ ಜನರು ಮುಂದಾಗುತ್ತಾರೆ. ಇದರಿಂದ ಅಪಾರ ಪ್ರಮಾಣ ಹಾಲು ವ್ಯರ್ಥವಾಗುತ್ತಿದೆ. ನಮ್ಮ ರಾಜ್ಯವೊಂದರಲ್ಲೇ ಪ್ರತಿ ವರ್ಷ ಅಪೌಷ್ಟಿಕತೆಯಿಂದ ಸಾವಿರಾರು ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಹಾಲನ್ನು ವ್ಯರ್ಥ ಮಾಡುವ ಬದಲಿಗೆ ಮಕ್ಕಳಿಗೆ ಮತ್ತು ಬಡವರಿಗೆ ಕೊಟ್ಟರೆ ಅದು ಅಮೃತವಾಗುತ್ತದೆ. ಈ ಕುರಿತು ಜನರು ಚಿಂತಿಸಬೇಕು ಎಂದರು.ಬಡ ಮಕ್ಕಳು, ಅನಾಥರು ಹಾಗೂ ಆಸ್ಪತ್ರೆಯಲ್ಲಿನ ಬಡ ರೋಗಿಗಳಿಗೆ ಈ ಹಾಲು ಹಂಚುವ ಮೂಲಕ ರಾಷ್ಟ್ರೀಯ ಬಸವಸೈನ್ಯ ಅರ್ಥಪೂರ್ಣವಾಗಿ ಹಬ್ಬ ಆಚರಿಸುತ್ತಿರುವುದು ಬದಲಾವಣೆಯ ಸಂಕೇತವಾಗಿದೆ. ಎಲ್ಲರೂ ಮೂಢನಂಬಿಕೆಯಿಂದ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸಮಾಜವನ್ನು ವೈಚಾರಿಕ ಪ್ರಜ್ಞೆಯೊಂದಿಗೆ ಮಾದರಿ ಸಮಾಜ ರೂಪಿಸಲು ಬಸವಾದಿ ಶರಣರು ಪ್ರಯತ್ನ ನಡೆಸಿದ್ದರು. ವಿಶ್ವಗುರು ಬಸವೇಶ್ವರರ ಲಿಂಗೈಕ್ಯರಾದ ಪುಣ್ಯದಿನವಾದ ಇಂದು ನಾಗಪಂಚಮಿ ದಿನದಂದು ಕಲ್ಲು ನಾಗದೇವರಿಗೆ ಹಾಲು ಎರೆಯದೇ ಪೌಷ್ಟಿಕ ಆಹಾರವಾದ ಹಾಲನ್ನು ಮಕ್ಕಳಿಗೆ ಕುಡಿಯಲು ಕೊಡುವ ಮೂಲಕ ಶರಣರ ವೈಚಾರಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳವಂತಾಗಬೇಕೆಂದು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.ಪಟ್ಟಣದ ನಂದೀಶ್ವರ ರಂಗಮಂದಿರದಲ್ಲಿ ಬಸವೇಶ್ವರ ಸೇವಾ ಸಮಿತಿ, ಬಸವೇಶ್ವರ ಜಾತ್ರಾ ಉತ್ಸವ ಸಮಿತಿಯ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಸವ ಪಂಚಮಿ ಕಾರ್ಯಕ್ರಮದಲ್ಲಿ ಬಸವೇಶ್ವರ ದೇವಾಲಯ ಕನ್ನಡ ಮಾಧ್ಯಮ ಶಾಲೆಯ ಮಕ್ಕಳಿಗೆ ಹಾಲು ವಿತರಿಸಿ ಮಾತನಾಡಿದ ಅವರು, ಪೌಷ್ಟಿಕ ಆಹಾರವಾಗಿರುವ ಹಾಲನ್ನು ಕಲ್ಲು ಮಣ್ಣಿನ ಮೇಲೆ ಸುರಿಯುವುದು ಸಲ್ಲದು. ಬಸವ ಪಂಚಮಿ ಆಚರಿಸುವ ಮೂಲಕ ಕಲ್ಲು-ಮಣ್ಣನ್ನು ದೇವರೆಂದು ತಿಳಿದು ಅದರ ಮೇಲೆ ಹಾಲು ಸುರಿದು ಹಾಳು ಮಾಡುವ ಮೌಢ್ಯನಂಬಿಕೆ ಹೋಗಲಾಡಿಸುವಂತಾಗಬೇಕು. ಮೌಢ್ಯ-ಕಂದಾಚಾರಗಳನ್ನು ಬಿಡಬೇಕು. ಮಾನವೀಯ ಮೌಲ್ಯದ ಆಚರಣೆಗಳನ್ನು ಅಳವಡಿಸಿಕೊಳ್ಳುವಂತಾಗಬೇಕೆಂದರು.ಅಥಣಿ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ ಮಾತನಾಡಿ, ನಾಡಿನಲ್ಲಿ ಶುದ್ಧ…

Read More

ಲೇಖನ- ರೇವಣಸಿದ್ದ ಬಗಲಿಬೆಂಗಳೂರು ಗ್ರಾಮಾಂತರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ ಕರ್ನಾಟಕದ ಗ್ರಾಮೀಣ ಪ್ರದೇಶದಲ್ಲಂತು ನಾಗರ ಪಂಚಮಿ ಹಬ್ಬವನ್ನ ಸಡಗರ, ಸಂಭ್ರಮದಿಂದ ಹೆಣ್ಮಕ್ಕಳು ಜೋಕಾಲಿಯಲ್ಲಿ ಜಿಕಿಕೊಂಡು ಆಚರಿಸುವ ಹಬ್ಬವಷ್ಟೆ ಅಲ್ಲದೇ ಇದು ಸಹೋದರತ್ವದ ಬಾಂಧವ್ಯ ಬೆಸೆಯುವಂತಹ ಮಹತ್ವಪೂರ್ಣ ನಾಡಿನ ದೊಡ್ಡ ಹಬ್ಬವಿದಾಗಿದೆ. ಈ ನಾಗರ ಪಂಚಮಿ ಹಬ್ಬ ಸಮಿಪಿಸುತ್ತಿದಂತೆ ಗಂಡನ ಮನೆಯಲ್ಲಿರುವ ಪ್ರತಿ ಹೆಣ್ಮಕ್ಕಳ ಮುಖದಲ್ಲಿ ಎಲ್ಲಿಲ್ಲದ ಸಂತಸ ಕಾಣಬಹುದು. ಏಕೆಂದರೆ ಸಹೋದರನಾದವನು ಸಹೋದರಿಯ ಗಂಡನ ಮನೆಗೆ ಹೋಗಿ ಪಂಚಮಿ ಹಬ್ಬಕ್ಕೆ ಕರೆತರುವದು ಪುರಾತನ ಕಾಲದಿಂದಲ್ಲೂ ವಾಡಿಕೆಯಾಗಿ ಬಂದಿದೆ. ಅದಕ್ಕೆ ಪ್ರತಿ ಹೆಣ್ಮಕ್ಕಳಲ್ಲಿ ಪಂಚಮಿಯ ಸಂಭ್ರಮ ಮನೆ ಮಾಡಿರುತ್ತದೆ.ಈ ದಿನದಂದು ಸಹೋದರಿಯರು ತಮ್ಮ ಸಹೋದರರಿಗೆ ಬೆಳಿಗ್ಗೆ ಎದ್ದೊಡನೆ ಮೈತುಂಬಾ ಎಣ್ಣೆ-ಜೋಳದ ಹಿಟ್ಟು ಹಚ್ಚಿ ಸ್ನಾನ ಮಾಡಿಸುವುದು ಹಿಂದಿನಿಂದ ಬಂದ ವಾಡಿಕೆ. ನಾಡಿನಾದ್ಯಂತ ಮಹಿಳೆಯರು ಹಾಗೂ ಪುಟ್ಟ ಹೆಣ್ಮಕ್ಕಳು ಹೊಸ ಬಟ್ಟೆ ತೊಟ್ಟು…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಬಹುತೇಕ ಎಲ್ಲ ಊರುಗಳ ಮಠಮಾನ್ಯಗಳಲ್ಲಿ ಶ್ರಾವಣ ಮಾಸದಲ್ಲಿ ಪುರಾಣ ಪ್ರವಚನ ಕಾರ್ಯಕ್ರಮಗಳು ನಡೆಯುತ್ತವೆ. ಶ್ರಾವಣ ಮಾಸದಲ್ಲಿಯೇ ಈ ಕಾರ್ಯಕ್ರಮಗಳು ಏಕೆ ನಡೆಯುತ್ತವೆ ಎಂಬುದಕ್ಕೆ ಹಿನ್ನೆಲೆ ಇದೆ.ಬೇಸಿಗೆ ಮುಗಿಯುತ್ತ ಬಂದು ಮುಂಗಾರು ಮಳೆ ಪ್ರಾರಂಭವಾದಾಗ ಮೊದಲ ಮಳೆ ಬೀಳುವ ಹೊತ್ತಿಗೆ ತನ್ನ ಹೊಲವನ್ನು ಹದ ಮಾಡಿಕೊಳ್ಳುವ ರೈತ ಒಂದು ಹದವಾದ ಮಳೆ ಬಿದ್ದೊಡನೆ ತನ್ನ ಹೊಲದಲ್ಲಿ ಬೀಜವನ್ನು ಬಿತ್ತುತ್ತಾನೆ. ಮತ್ತೊಂದೆರಡು ಸಣ್ಣ ಪುಟ್ಟ ಮಳೆಗಳಿಂದ ಆ ಬೀಜಗಳು ಮೊಳಕೆ ಒಡೆದು ಸಣ್ಣ ಕುಡಿಯಾಗಿ ನಂತರ ಸಸಿಯಾಗಿ ಮಾರ್ಪಡುವ ಈ ಸಮಯದಲ್ಲಿ ಆತನಿಗೆ ತನ್ನ ರೈತಾಪಿ ಕೆಲಸಗಳಿಂದ ತುಸು ಮಟ್ಟಿನ ಬಿಡುಗಡೆ. ಪ್ರತಿದಿನ ಮುಂಜಾನೆ ನಿಯಮಿತವಾಗಿ ಹೊಲಕ್ಕೆ ಹೋಗಿ ನಿಧಾನವಾಗಿ ಕುಡಿಯೊಡೆದ ಸಸಿಗಳ ಬೆಳವಣಿಗೆಯನ್ನು ನೋಡಿ ಹರ್ಷಿಸಿ ಮನೆಯಲ್ಲಿರುವ ಜಾನುವಾರುಗಳ ದೈನಂದಿನ ಜವಾಬ್ದಾರಿಯನ್ನು ನಿರ್ವಹಿಸಿದರೆ ಆತನ ಬಹುತೇಕ ಕೆಲಸ ಮುಗಿಯುತ್ತದೆ. ಈ ರೀತಿಯ ತುಸು ವಿರಾಮ ಸಮಯದಲ್ಲಿ ಆತ ಕುಟುಂಬದೊಡನೆ ಒಂದೆರಡು ದಿನಗಳ…

Read More

ಬಸವನ ಬಾಗೇವಾಡಿ ಮತ್ತು ನಿಡಗುಂದಿ ತಾಲೂಕುಗಳ ವಿವಿಧ ಕಾಮಗಾರಿಗಳ ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಸೋಮವಾರ ಜಿಲ್ಲೆಯ ಬಸವನ ಬಾಗೇವಾಡಿ ಮತ್ತು ನಿಡಗುಂದಿ ತಾಲ್ಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.ಬಸವನ ಬಾಗೇವಾಡಿ ತಾಲೂಕಿನ ಮಣ್ಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೂರ, ಮಣ್ಣೂರ ಹಾಗೂ ಹಂಗರಗಿ ಹಾಗೂ ನಿಡಗುಂದಿ ತಾಲೂಕಿನ ಚಿಮ್ಮಲಗಿ ಎಲ್ ಟಿ, ಮರಿಮಟ್ಟಿ, ಆಲಮಟ್ಟಿ, ಆಲಮಟ್ಟಿ ವಸ್ತಿ, ಬೇನಾಳ ಆರ್.ಸಿ, ಗುಡದಿನ್ನಿ, ಹುಣಶ್ಯಾಳ್ ಪಿ ಸಿ, ಬೀರಲದಿನ್ನಿ ಹಾಗೂ ಗೊಳಸಂಗಿ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳ ಸ್ಥಳ ವೀಕ್ಷಣೆ ಮಾಡಿದ ಅವರು, ಮನೆ ಮನೆಗಳಿಗೆ ಅಳವಡಿಸಲಾಗಿರುವ ನಳಗಳ ಸಂಪರ್ಕ ಬಗ್ಗೆ ಫಲಾನುಭವಿಗಳೊಂದಿಗೆ ಚರ್ಚೆ ಮಾಡಿದರು.ಈ ಸಂದರ್ಭದಲ್ಲಿ ನಿಡಗುಂದಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ವೆಂಕಟೇಶ ವಂದಾಲ, ಬಸವನ ಬಾಗೇವಾಡಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರಕಾಶ ದೇಸಾಯಿ, ಗ್ರಾಮೀಣ ಕುಡಿಯುವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆಗಸ್ಟ್ ೦೧ ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ ಮಾದಕ ವಸ್ತು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ,…

Read More

ಸಚಿವ ಶಿವಾನಂದ ಪಾಟೀಲ ನೇತೃತ್ವದ ದ್ರಾಕ್ಷಿ ಬೆಳೆಗಾರರ ಸಭೆ | ಅಪಘಾನಿಸ್ತಾನದ ತಳಿ ಆಮದಿಗೆ ಚಿಂತನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಸಾಯನಿಕ ಬಳಕೆಗೆ ಬದಲಾಗಿ ವಿಷಮುಕ್ತವಾಗಿ ಹಾಗೂ ಯುರೋಪಿಯನ್ ರಾಷ್ಟ್ರಗಳಿಗೆ ಸಾಗಿಸಲು ರಫ್ತು ಗುಣಮಟ್ಟದ ಒಣ ದ್ರಾಕ್ಷಿ ಬೆಳೆಯಲು ಮಾರ್ಗಸೂಚಿ ರೂಪಿಸುವ ಅಗತ್ಯವಿದೆ. ಜೊತೆಗೆ ಅಧಿಕ ಇಳುವರಿ, ವಿಶಿಷ್ಟ ಸ್ವಾದ ಹೊಂದಿರುವ ಅಪಘಾನಿಸ್ತಾನ ರಾಷ್ಟ್ರದ ೫-೬ ದ್ರಾಕ್ಷಿ ತಳಿಗಳನ್ನು ಪರಿಚಯಿಸಲು ಯೋಜಿಸುವ ಕುರಿತು ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ನಡೆದ ದಕ್ಷಿಣ ಭಾರತದ ದ್ರಾಕ್ಷಿ ಬೆಳೆಗಾರರ ಸಭೆಯಲ್ಲಿ ನಿರ್ಧರಿಸಲಾಯಿತು.ಭಾನುವಾರ ಸಂಜೆ ನಗರದಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಸಚಿವ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿದ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ದ್ರಾಕ್ಷಿ ಬೆಳೆಗಾರರ ಸಂಘದ ಪ್ರತಿನಿಧಿಗಳು ಒಣದ್ರಾಕ್ಷಿ ಸುದೀರ್ಘ ಚರ್ಚೆ ನಡೆಸಿದರು.ಸಭೆಯಲ್ಲಿ ಪಾಲ್ಗೊಂಡಿದ್ದ ರಾಷ್ಟ್ರೀಯ ದ್ರಾಕ್ಷಿ ಬೆಳೆಗಾರರ ಮಹಾಮಂಡಳದ ಅಧ್ಯಕ್ಷ ಸೋಪನ್ ಕಾಂಚನ್ ನೇತೃತ್ವದಲ್ಲಿ ಸಚಿವ ಶಿವಾನಂದ ಪಾಟೀಲ ಅವರನ್ನು…

Read More