Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಬಳೂತಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಣಮಾಪುರ ಪಂಚಾಯಿತಿ ಮಟ್ಟದ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಅಶೋಕ ಗಿಡ್ಡಪ್ಪಗೋಳ ಮಾತನಾಡಿ, ಮಗುವಿನ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆಯು ಸಹಕಾರಿಯಾಗಿದೆ ಮತ್ತು ಮಕ್ಕಳ ಕಲಿಕೆಗೆ ಪೂರಕವಾಗಿದೆ ಎಂದು ಹೇಳಿದರು.ಅತಿಥಿಗಳಾಗಿ ದೈಹಿಕ ಶಿಕ್ಷಣಾಧಿಕಾರಿ ಎಸ್ ಎಸ್ ಅವಟಿ ಮಾತನಾಡಿ, ಮಕ್ಕಳ ಆರೋಗ್ಯ ಮತ್ತು ಜ್ಞಾನ ಸಂಪಾದನೆಗೆ ಕ್ರೀಡೆ ಅಡಿಪಾಯ ಇದ್ದಂತೆ ಮತ್ತು ಪಾಲಕರು ಮಕ್ಕಳ ಕ್ರೀಡೆಗೆ ಪ್ರೋತ್ಸಾಹ ನೀಡುವ ಕೆಲಸ ಆಗಬೇಕು ಎಂದು ಹೇಳಿದರು.ಸಾನಿಧ್ಯ ಶೆಂಕ್ರೆಯ್ಯ ಚಿಕ್ಕಮಠ, ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಬಸವರಾಜ ಬನಾಗೊಂಡ, ಸಿಆರ್ಪಿ ಸಂಗಮೇಶ ಜಂಗಮಶೆಟ್ಟಿ, ಮುಖ್ಯ ಶಿಕ್ಷಕ ವ್ಹಿ.ಬಿ. ಬಡಿಗೇರ, ದುಂಡಪ್ಪ ಬನಾಗೊಂಡ, ಶ್ರೀಶೈಲ ಗಾಮನ್ನವರ, ಬಸವರಾಜ ಮಾಳೆದ, ಶೇಕಪ್ಪ ಔರಸಂಗ, ಜಗದೀಶ ಸುನಗದ, ಬಸವರಾಜ ಚೌಧರಿ, ಅಭಿಷೇಕ ಹೆಬ್ಬಾಳ, ನವೀನ್ ಕೋರಿ, ಶಿವಾನಂದ ಪಡಶೆಟ್ಟಿ , ಸುರೇಶ ಬಿರಾದಾರ ಉಪಸ್ಥಿತರಿದ್ದರು.
ಕಂದಕ ಹೂಳು ತೆಗೆಯುವುದು-ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಚಾಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಶನಿವಾರ ನಗರದ ಜಾಮೀಯಾ ಮಸೀದಿ ರಸ್ತೆಯ ರೊಡಗಿಮಡ್ಡಿ ಖಬರಸ್ಥಾನ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.೨೦೦ಲಕ್ಷ ವೆಚ್ಚದಲ್ಲಿ ಕೋಟೆಗೋಡೆ ಕಂದಕ, ಮನಗೂಳಿ ಅಗಸಿಯಿಂದ ಕಸ್ತೂರಿ ಕಾಲೋನಿವರೆಗೆ ಹಾಗೂ ರೂ.೧೦೦ ಲಕ್ಷ ವೆಚ್ಚದಲ್ಲಿ ರೊಡಗಿಮಡ್ಡಿ ಖಬರಸ್ಥಾನದಿಂದ ಸಿಂದಗಿ ರಸ್ತೆಯ ರೈಲ್ವೆ ಸೇತುವೆವರೆಗಿನ ಕಂದಕದಲ್ಲಿನ ಹೂಳು ತೆಗೆಯುವುದು ಹಾಗೂ ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಹಾಗೂ ಇಂಡಿ ರಸ್ತೆ ಶಹಾಪೇಟ ಓಣಿ ಯಲ್ಲಮ್ಮ ದೇವಸ್ಥಾನದ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.೨೦೦ ಲಕ್ಷ ವೆಚ್ಚದಲ್ಲಿ ಶಹಾಪೇಟೆ, ಸುಣಗಾರ ಗಲ್ಲಿಯಿಂದ ಸ್ಟೇಷನ್ ಹಿಂದಿನ ರಸ್ತೆ ಮೂಲಕ ಅಪ್ಸರಾ ಥೇಟರ್ ವರೆಗೆ ಮಳೆ ನೀರು ಚರಂಡಿ ಕಾಮಗಾರಿ ಮತ್ತು ಪ್ರವಾಹ ನಿಯಂತ್ರಣ ಕಾಮಗಾರಿಗೆ ಚಾಲನೆ ನೀಡಿದರು.ಈ ಹಿಂದೆ ಸೆಪ್ಟಂಬರ್ ೨೦೨೪ ರಂದು ವಿಜಯಪುರ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಹಾಪೇಟೆ, ಸುಣಗಾರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಸಾಕಷ್ಟು ನ್ಯಾನೋ ಯೂರಿಯಾ ಲಭ್ಯವಿದ್ದು, ಯೂರಿಯಾ ಬದಲಾಗಿ ನ್ಯಾನೋ ಯೂರಿಯಾ ಬಳಕೆ ಮಾಡುವಂತೆ ಜಂಟಿ ಕೃಷಿ ಉಪನಿರ್ದೇಶಕರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಕಾಂಪ್ಲೆಕ್ಸ್ ರಸಗೊಬ್ಬರ ೧೫೫೬೩ ಟನ್ ಲಭ್ಯವಿದ್ದು, ಈ ರಸಗೊಬ್ಬರವನ್ನು ರೈತರು ಬಳಕೆ ಮಾಡಬೇಕು. ರೈತರು ಲಭ್ಯವಿರುವ ವಿವಿಧ ರಸಗೊಬ್ಬರಗಳನ್ನು ತಮ್ಮ ಬೆಳೆಗಳಿಗೆ ಅವಶ್ಯಕತೆನುಗುಣಗವಾಗಿ ಬಳಸುವಂತೆ ಅವರು ಕೋರಿದ್ದಾರೆ.ಜಿಲ್ಲೆಗೆ ೨೦೨೫ರ ಜುಲೈ ಅಂತ್ಯದವರೆಗೆ ೨೪೯೫೦ ಟನ್ ಯೂರಿಯಾ ರಸಗೊಬ್ಬರ ಹಂಚಿಕೆಯಾಗಿದ್ದು, ಈವರೆಗೆ ೩೦೮೭೦ ಟನ್ ಮಾರಾಟವಾಗಿ ೪೮೪೨ ಟನ್ ಯೂರಿಯಾ ವಿವಿಧ ಮಾರಾಟಗಾರರಲ್ಲಿ ದಾಸ್ತಾನಿದ್ದು, ಜಿಲ್ಲೆಯಲ್ಲಿ ಅಗತ್ಯ ಯೂರಿಯಾ ರಸಗೊಬ್ಬರ ಬೇಡಿಕೆ ತಕ್ಕಂತೆ ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲೆಯಲ್ಲಿ ರಸಗೊಬ್ಬರ ದಾಸ್ತಾನಿದ್ದು, ವಿತರಣೆ ಪ್ರಗತಿಯಲ್ಲಿದೆ. ದಿನಾಂಕ : ೨೩.೭೦೨೯೨೫ರಂದು ಪಿಪಿಎಲ್ (ಜುವಾರಿ) ಸಂಸ್ಥೆಯಿಂದ ೧೦೧೨ ಟನ್, ದಿನಾಂಕ : ೨೪-೦೭-೨೦೨೫ರಂದು ಆರ್ಸಿಎಫ್ ಸಂಸ್ಥೆಯಿAದ ೨೧೨ ಟನ್ ಹಾಗೂ ದಿನಾಂಕ : ೨೭-೦೭-೨೦೨೫ ರಂದು ಕೋರಮಂಡಲ ಸಂಸ್ಥೆಯ ೨೦೦ ಟನ್ ಯೂರಿಯಾ ರಸಗೊಬ್ಬರ ಜಿಲ್ಲೆಗೆ ಸರಬರಾಜಾಗಿದ್ದು, ವಿತರಣೆ ಪ್ರಗತಿಯಲ್ಲಿದೆ.…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವರನ್ನಾಗಿ ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಎಲ್.ಲಕ್ಕಣ್ಣನವರ ಅವರನ್ನು ತಕ್ಷಣ ಜಾರಿಗೆ ಬರುವಂತೆ ನೇಮಕ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ಮಹಿಳಾ ವಿಶ್ವವಿದ್ಯಾನಿಲಯದ ಪ್ರಸ್ತುತ ಮೌಲ್ಯಮಾಪನ ಕುಲಸಚಿವರಾಗಿದ್ದ ಪ್ರೊ.ಎಚ್.ಎಂ.ಚಂದ್ರಶೇಖರ್ ಅವರ ಸೇವೆಯನ್ನು ಅವರ ಮಾತೃ ಸಂಸ್ಥೆಯಾಗಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ತಕ್ಷಣ ಜಾರಿಗೆ ಬರುವಂತೆ ಹಿಂತಿರುಗಿಸಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.
ಸಿಂದಗಿ ಪಿಇಎಸ್ ಕಾಲೇಜಿನಲ್ಲಿ ಯುವ ಬ್ರಿಗೇಡ್ ವತಿಯಿಂದ ಕಾರ್ಗಿಲ್ ವಿಜಯ ದಿವಸ ನಿಮಿತ್ತ ವಿಜಯ ಸಿಂಧೂರ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಯುದ್ಧ ಯಾವಾಗಲು ನಡೆಯುದಿಲ್ಲ. ಆದರೆ ನಮ್ಮ ಯೋಧರು ಮಾತ್ರ ಯಾವಾಗಲೂ ಪ್ರಾಣಾರ್ಪಣೆಗೆ ಸಿದ್ದವಾಗಿಯೇ ಇರುತ್ತಾರೆ. ಇಂತಹ ಯೋಧರನ್ನು ಗೌರವಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.ಸಿಂದಗಿ ಪಟ್ಟಣದ ಪಿಇಎಸ್ ಕಾಲೇಜಿನಲ್ಲಿ ಯುವ ಬ್ರಿಗೇಡ್ ವತಿಯಿಂದ ಕಾರ್ಗಿಲ್ ವಿಜಯ ದಿವಸ ನಿಮಿತ್ತ ಹಮ್ಮಿಕೊಂಡ ವಿಜಯ ಸಿಂಧೂರ ಕಾರ್ಯಕ್ರವನ್ನು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.ದೇಶ ಮತ್ತ ದೇಶವಾಸಿಗಳ ಸಂರಕ್ಷಣೆಗಾಗಿ ತಮ್ಮ ಬದುಕನ್ನೇ ತ್ಯಾಗ ಮಾಡಿದ ಹಾಗೂ ೨೬ರ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಆಚರಣೆ ಮಾಡಲಾಗುವ ಈ ಸಂಭ್ರಮ ದೇಶಾಭಿಮಾನ, ಸೈನಿಕರ ಗೌರವದ ಸಂಕೇತ. ಕಾರ್ಗಿಲ್ ಯುದ್ಧದಲ್ಲಿ ಭಾರತ ಜಯಗಳಿಸಿ ೨೬ವರ್ಷ ಕಳೆದಿದೆ. ಪಾಕಿಸ್ತಾನ ವಿರುದ್ಧ ಆಪರೇಷನ್ ಸಿಂಧೂರ ನಡೆಸಿ ಮತ್ತೊಮ್ಮೆ ಭಾರತ ಪರಾಕ್ರಮ ಮೆರೆದಿದೆ. ಜು.೨೬ರಂದು ಕಾರ್ಗಿಲ್ ವಿಜಯೋತ್ಸವ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಹೊನ್ನೊಪ್ಪಗವಡ ಲೇಔಟ್ನಲ್ಲಿ ರೂ.೨ಕೋಟಿ ವೆಚ್ಚದಲ್ಲಿ ಸಾಲುಮರದ ತಿಮ್ಮಕನ ವೃಕ್ಷೆೋದ್ಧಾನ ನಿರ್ಮಾಣವಾದ ಉದ್ಯಾನ ಉದ್ಘಾಟನೆ ಹಾಗೂ ಬಸವೇಶ್ವರ ವೃತ್ತದಿಂದ ವಿವೇಕಾನಂದ ವೃತ್ತದ, ವಿವೇಕಾನಂದ ವೃತ್ತದಿಂದ ಗೋಲಗೇರಿ ರಸ್ತೆಯವರೆಗೆ ಹೊಸ ವಿದ್ಯುತ್ ಕಂಬಗಳ ಜೋಡಣಾ ಕಾಮಗಾರಿ ಉದ್ಘಾಟನೆ ಸಮಾರಂಭವು ಜು.೨೮ರಂದು ಸೋಮವಾರ ಸಾಯಂಕಾಲ ೬ರಂದು ಹಮ್ಮಿಕೊಳ್ಳಲಾಗಿದೆ. ಉದ್ಘಾಟನೆಯನ್ನು ಸಚಿವ ಈಶ್ವರ ಖಂಡ್ರೆ ಹಾಗೂ ಶಾಸಕ ಅಶೋಕ ಮನಗೂಳಿ ನೆರವೇರಿಸುವರು. ಕಾರ್ಯಕ್ರಮದಲ್ಲಿ ಸಮಗ್ರ ತಾಲೂಕಿನ ಜನತೆ ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ತಾಲೂಕಾಧ್ಯಕ್ಷ ಸುರೇಶ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ವಿಧ್ಯಾರ್ಥಿಗಳು ಸರಕಾರದಿಂದ ದೊರೆಯುವ ಸವಲತ್ತುಗಳನ್ನು ಪಡೆದುಕೊಂಡು ವಿದ್ಯಾವಂತರಾಗಬೇಕು, ಪಾಲಕರು ಪೋಷಕರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡುವುದರ ಜೊತೆಗೆ ಯಾವುದೇ ಕಾರಣಕ್ಕೂ ಯಾವೊಬ್ಬ ಮಗುವೂ ಕೂಡಾ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು, ಈ ಹಿನ್ನೆಲೆಯಲ್ಲಿ ಸರಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಯಡ್ರಾಮಿ ಹೇಳಿದರು.ಕಲಕೇರಿ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲಾ ಆವರಣದಲ್ಲಿ ನಡೆದ ಕಲಕೇರಿ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವಂತಹ ವಿವಿದ ಸರಕಾರಿ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಕೇಂದ್ರ ಸರ್ಕಾರದ ರಾಷ್ಟಿçÃಯ ಸಾಕ್ಷರತಾ ಮಿಷನ್ ಸದಸ್ಯ ಡಾ.ನಾಗರಾಜ್ ಗೌರಿಬಿದನೂರ ಇವರ ಸಾರಥ್ಯದಲ್ಲಿ ಕಲಕೇರಿ ಗ್ರಾಮದ ಭಗೀರಥ ಸಮಾಜದ ಮುಖಂಡರಾದ ಭಾಗ್ಯವಂತ ಮೋಪಗಾರ ಇವರ ನೇತೃತ್ವದಲ್ಲಿ ಹಮ್ಮಿಕೊಂಡ ಉಚಿತ ಸಮವಸ್ತç ಹಾಗೂ ಪಠ್ಯಪುಸ್ತಕ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.ಕಲಕೇರಿ ಗ್ರಾಮದ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟಗಳನ್ನು ನಡೆಸಬೇಕೆಂದು ಇಲ್ಲಿನ ಸ್ಥಳಿಯ ಮುಖಂಡರು ಮನವಿಯನ್ನು ಮಾಡಿದ್ದು,…
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಆರ್ಥಿಕ ಸೇರ್ಪಡೆ ಪರಿಪೂರ್ಣತೆ ಅಭಿಯಾನ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆಯಿತು.ಕಲಕೇರಿ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆ ಹಾಗೂ ಜಿಲ್ಲೆಯ ಅಗ್ರಾಣಿಯ ಬ್ಯಾಂಕ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಜನರಿಗೆ ಕೇಂದ್ರ ಯೋಜನೆಗಳ ಕುರಿತು ಮಾಹಿತಿ ನೀಡಿ, ಯೋಜನೆಗಳಿಗೆ ನೋಂದಣಿ ಮಾಡಿಸಿದರು.ಇದೆ ವೇಳೆ ಮಾತನಾಡಿದ ಜಿಲ್ಲಾ ಆಗ್ರಣಿಯ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಶ್ರೀ ಸಿದ್ದಯ್ಯ ಮಾತನಾಡಿ ಕೇಂದ್ರ ಸರ್ಕಾರ ಯೋಜನೆಗಳಾದ ಪ್ರಧಾನ ಮಂತ್ರಿ ಜೀವನ ಜ್ಯೋತಿ ಮತ್ತು ಸುರಕ್ಷ ಯೋಜನೆ ಅಕಾಲಿಕ ಮರಣ ಮತ್ತು ಅಪಘಾತ ವಿಮೆ ಕುರಿತು ಮತ್ತು ಆನಲೈನ್ ವಂಚನೆಗಳ ಕುರಿತು ವಿವರಣೆ ನೀಡಿ ಸಾರ್ವಜನಿಕರು ಯೋಜನೆಗಳ ಸದುಪಯೋಗ ಡೆದುಕೊಳ್ಳಬೇಕು ಎಂದರು.ಇದೆ ವೇಳೆ ಉಪಸ್ಥಿತರಿದ್ದ ಕಲಕೇರಿ ಹೀರೆಮಠದ ಸಿದ್ದರಾಮ ಶಿವಾಚಾರ್ಯರು ಮಾತನಾಡಿ ಬ್ಯಾಂಕ್ ಮೂಲಕ ದೊರೆಯವ ಸರ್ಕಾರದ ಯೋಜನೆಗಳನ್ನು ಕುಟುಂಬದ ಸುರಕ್ಷತೆ ದೃಷ್ಟಿಯಿಂದ ಇಂದೆ ನೊಂದಾಯಿಸಿಕೊಳ್ಳಲು ಸಲಹೆ ನೀಡಿದರು.ಗ್ರಾಮ ಪಂಚಾಯತ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಬರೀ ರ್ಯಾಂಕ್ ಗಳಿಸುವುದೊಂದೇ ಶಿಕ್ಷಣವಲ್ಲ, ನಮ್ಮ ಸಂಸ್ಕಾರ ನಡುವಳಿಕೆಗಳನ್ನು ಉತ್ತಮ ಗೊಳಸಿಕೊಳ್ಳುವುದು ನಿಜವಾದ ಶಿಕ್ಷಣದ ಧ್ಯೇಯವೆಂದು ಸಾಹಿತಿ, ಪತ್ರಕರ್ತ ನಾರನಗೌಡ ಉತ್ತಂಗಿ ಹೇಳಿದರು.ಗ್ರಾಮದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪ್ರಥಮ ಪಿಯೂಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕ್ರೀಢೆ, ಸಾಂಸ್ಕçತಿಕ ಚಟುವಟಿಕೆಗಳ ಉದ್ಘಾಟಣಾ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿ ಉಪನ್ಯಾಸ ನೀಡಿದ ಅವರು ಸಧ್ರಡ ದೇಹದಲ್ಲಿ ಸಧ್ರಡ ಮನಸ್ಸಿರುತ್ತದೆ, ಪ್ರತಿಯೊಂದು ಪಠ್ಠೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು, ಓದುವ ಸಮಯದಲ್ಲಿ ತಮ್ಮ ಗಮನವನ್ನು ಬೇರೆಡೆ ತಿರುಗಿಸದೆ ನೇರ ಗುರಿಯೊಂದಿಗೆ ಸತತ ಅಧ್ಯಯನ ಮಾಡಿದಲ್ಲಿ ಜೀವನದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಾಧನೆ ಮಾಡಬಹುದು ಎಂದರು.ಉಪನ್ಯಾಸಕರಾದ ಎ.ಬಿ. ಗೌಡಪ್ಪನವರ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರಮ ಪಟ್ಟರೆ ಮಾತ್ರ ಆತ್ಮವಿಶಾಸ ಬರುತ್ತದೆ, ಆತ್ಮವಿಶ್ವಾಸ ಉನ್ನತಿ ನೀಡುತ್ತದೆ, ಒಳ್ಳೆಯ ನಡುವಳಿಕೆಯಿಂದ ತಂದೆ ತಾಯಿಯರಿಗೆ ವಿಧೇಯರಾಗಿ ಸತತ ಅದ್ಯಯನ ಮಾಡಿದಲ್ಲಿ ಒಳ್ಳೆಯ ಫಲ ದೊರೆಯಲಿದೆ ಮಕ್ಕಳ ಸರ್ವತೋಮುಖ ಅಭಿವೃದ್ದಿಯೇ ಶಿಕ್ಷಣದ ಮೂಲ ಉದ್ದೇಶ ಎಂದರು.ಅಭಿವೃದ್ದಿ ಸಮೀತಿಯ ಪ್ರಭು ನೇಸೂರ,…
ಉದಯರಶ್ಮಿ ದಿನಪತ್ರಿಕೆ ಚಡಚಣ: ಯಾವುದೇ ದೇಶ ಯುದ್ಧ ಬಯಸುವುದಿಲ್ಲ ಮತ್ತು ಯುದ್ಧ ಅನಿವಾರ್ಯ ಅಲ್ಲ. ಆಕಸ್ಮಿಕವಾಗಿ ಯುದ್ಧ ನಡೆಯುತ್ತವೆ.ಯುದ್ಧಗಳು ದೇಶಗಳ ಪ್ರಗತಿಗೆ ಮಾರಕ ಎಂದು ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಡಾ| ಮುರುಗೇಶ ಕೆ.ಎಂ. ಅಭಿಪ್ರಾಯಪಟ್ಟರು.ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಎನ್.ಸಿ.ಸಿ. ಘಟಕ ಭಾರತವು ೨೬ನೇ ಕಾರ್ಗಿಲ್ ವಿಜಯ ದಿವಸವನ್ನು ೧೯೯೯ರ ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಸೇನೆಯ ಶೌರ್ಯ, ಬಲಿದಾನ ಮತ್ತು ರಾಷ್ಟ್ರೀಯ ಏಕತೆಯ ಸ್ಮರಣಾರ್ಥವಾಗಿ ನೆನಪಿಸಿಕೊಳ್ಳಲಾಗುತ್ತದೆ ಕಾರ್ಗಿಲ್ ವಿಜಯ ದಿವಸದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತಿದೆ. ಎಂಥ ಭಯಾನಕ ಪರಿಸ್ಥಿತಿ ಎದುರಾದರೂ ಭಾರತೀಯ ಯೋಧರು ದೇಶದ ಗಡಿಯಲ್ಲಿ ತಮ್ಮ ಜೀವದ ಹಂಗು ತೊರೆದು ಹೋರಾಡಿ ಭಾರತ ದೇಶದ ನಾಗರಿಕರು ನೆಮ್ಮದಿಯಾಗಿ ಜೀವಿಸುವಂತೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಾ| ಎಸ್. ಬಿ. ರಾಠೋಡ ಅವರು ಮಾತನಾಡಿ,…
