Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬೆಂಗಳೂರಿನಲ್ಲಿ ನಡೆದ ನ್ಯಾಯಾಂಗ ಅಧಿಕಾರಿಗಳ 22ನೇ ದ್ವೈವಾರ್ಷಿಕ ರಾಜಮಟ್ಟದ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಅಭಿಮತ ಬೆಂಗಳೂರು: ರಾಜ್ಯದ ಉಚ್ಚ ನ್ಯಾಯಾಲಯಕ್ಕೆ ಪ್ರವೇಶವನ್ನು ಸುಧಾರಿಸಬೇಕೆನ್ನುವ ಬಲವಾದ ಅಗತ್ಯವಿದೆ. ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಬೆಂಗಳೂರಿನ ಜಿಕೆವಿಕೆಯ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ನಡೆದ ನ್ಯಾಯಾಂಗ ಅಧಿಕಾರಿಗಳ 22ನೇ ದ್ವೈವಾರ್ಷಿಕ ರಾಜಮಟ್ಟದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪ್ರಸಕ್ತ ಕಾಲಘಟ್ಟದಲ್ಲಿ ಕಾನೂನು ಮತ್ತು ತಂತ್ರಜ್ಞಾನವು ಪ್ರತ್ಯೇಕ ಕ್ಷೇತ್ರಗಳಾಗಿ ಉಳಿದಿಲ್ಲ. ಈಗ ಮುಂದುವರೆದು ನ್ಯಾಯಾಂಗ ಕ್ಷೇತ್ರಕ್ಕೆ ಕೃತಕ ಬುದ್ಧಿಮತ್ತೆಯ ಪ್ರವೇಶವಾಗಿದೆ. ಅದರಿಂದಾಗಿ ಆಡಳಿತ, ಹಕ್ಕುಗಳು ಮತ್ತು ನ್ಯಾಯದ ಸ್ವರೂಪವನ್ನು ರೂಪಿಸುವ ಪರಸ್ಪರ ಸಂಬಂಧ ಹೊಂದಿರುವ ಶಕ್ತಿಗಳ ನಡುವೆ ನಿರ್ಣಾಯಕ ಹಂತದಲ್ಲಿ ನಾವು ಇಂದು ನಿಂತಿದ್ದೇವೆ. ಈ ಪಯಣದಲ್ಲಿ ನ್ಯಾಯಾಂಗಕ್ಕೆ ಅದರ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ಗೌರವಿಸುತ್ತಲೇ ಅದಕ್ಕೆ ಬೆಂಬಲ ನೀಡುವುದು, ಸಕ್ರಿಯಗೊಳಿಸುವುದು ಮತ್ತು ಬಲಪಡಿಸುವುದು ಆಡಳಿತದ ಪಾತ್ರ. ನ್ಯಾಯಾಂಗ…
ಕಲ್ಶಾಣದೇಶ್ವರ ಜಾತ್ರೆ | ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ | ಮಾಗಣಗೇರಿಯ ಏಕಾಕ್ಷರ ಶಿವಾಚಾರ್ಯ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಾನವ ಇತರರಿಗೆ ಆಸರೆಯಾಗಿ ಬದುಕಬೇಕು. ಇತರರಿಗೆ ಬೇಸರವಾಗುವಂತಿದ್ದರೆ ಅದು ನಶ್ವರದ ಬದುಕಾಗಿರುತ್ತದೆ ಎಂದು ಯಡ್ರಾಮಿ ತಾಲೂಕಿನ ಸುಕ್ಷೇತ್ರ ಮಾಗಣಗೇರಿಯ ರುದ್ರಮುನೇಶ್ವರ ಹಿರೇಮಠದ ಪಟ್ಟಾಧ್ಶಕ್ಷ ಏಕಾಕ್ಷರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಸಿಂದಗಿ ತಾಲೂಕಿನ ಸುಕ್ಷೇತ್ರ ಹೊನ್ನಳ್ಳಿ ಬ್ರಹ್ಮದೇವನಮಡು ಗ್ರಾಮದ ಕಲ್ಯಾಣದೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ ಹಮ್ಮಿಕೊಂಡ ಶ್ರೀದೇವಿ ಹಾಗೂ ೩೫೧ ಮುತೈದಿಯರಿಗೆ ಉಡಿ ತುಂಬುವ ಕಾಯಕ್ರಮದಲ್ಲಿ ಸಮ್ಮುಖ ವಹಿಸಿ ಮಾತನಾಡಿದ ಅವರು, ಮಾನವನ ಜನ್ಮದಿಂದ ಜಗತ್ತಿಗೆ ಉಪಯೋಗವಾಗಬೇಕು. ಇದಕ್ಕೆ ನಿದರ್ಶನವೇ ಶ್ರೀಮಠದ ಲಿಂಗೈಕ್ಯ ವೀರಘಂಟಯ್ಶ ಸ್ವಾಮೀಜಿ. ಇವರ ಸತ್ಯ ಸನ್ಮಾರ್ಗವು ಮನುಕುಲಕ್ಕೆ ದಾರಿದೀಪವಾಗಿದೆ. ಸಂಪತ್ತಿನ ಬೆನ್ನು ಹತ್ತದೇ ಸದ್ವಿಚಾರಗಳು, ನಡೆ ನುಡಿಯಲ್ಲಿ ಭಿನ್ನವಿಲ್ಲದಂತೆ ಬದುಕಿದ್ದೇ ಆದಲ್ಲಿ ದೈವಾನುಗ್ರಹ ಸದಾ ಇರುತ್ತದೆ. ವಿಕೃತಿಯಾಗಿ ಯಾರು ಬದುಕುತ್ತಾರೋ ಅವರು ಮಣ್ಣಲ್ಲಿ ಮಣ್ಣಾಗುತ್ತಾರೆ. ಇಂತಹ ಬದುಕು ನಿರರ್ಥಕವಾಗಿರುತ್ತದೆ. ಈ ಬದುಕು ಎಂಬ ಮೂರಕ್ಷರದ ಪದಕ್ಕೆ ಸದ್ಗುರುವಿನ ಆಶೀರ್ವಾದ…
41 ಡಿಗ್ರಿ ಸೆಲ್ಸಿಯಸ್ ದಾಟಿದ ಉಷ್ಣಾಂಶ | ನದಿಯಲ್ಲಿ ಈಜಿನ ಮೊರೆಹೋದ ಯುವಕರು | ಕಾದು ಕೆಂಡದಂತಾಗುವ ಭೂಮಿ ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ್ ಎಮ್ ಇಟ್ಟಿಜಮಖಂಡಿ: ದಿನದಿಂದ ದಿನಕ್ಕೆ ಬಿಸಿಲಿನ ಧಗೆ ಹೆಚ್ಚುತ್ತಿದೆ. ಅಧಿಕ ತಾಪಮಾನದಿಂದ ಭೂಮಿ ಕಾದು ಕೆಂಡದಂತಾಗಿದೆ. ಇದರಿಂದ ಸಾರ್ವಜನಿಕರು, ರೈತರು ತತ್ತರಿಸಿ ಹೋಗಿದ್ದಾರೆ. ಬಿಸಿಲಾಘಾತ ತಡೆದುಳ್ಳಲು ಗ್ರಾಮೀಣ ಪ್ರದೇಶದ ಯುವಕರು ತಮ್ಮೂರಿನ ನದಿಯಲ್ಲಿ ಈಜಿನ ಮೊರೆ ಹೋಗಿದ್ದಾರೆ.ಮಳೆಗಾಲದಲ್ಲಿ ಮಳೆ ಸುರಿದು ಭೂತಾಯಿ ಒಡಲು ತಂಪಾಗಿರುತ್ತೆ. ಕೃಷಿ ಚಟುವಟಿಕೆಗಳು ಗರಿಗೆದರುತ್ತವೆ. ಆದರೆ ಬಿರು ಬೇಸಿಗೆಯಲ್ಲಿ ವರುಣನ ದರ್ಶನವಿಲ್ಲದ ಕಾರಣ ಉರಿವ ಸೂರ್ಯನ ತಾಪ ತಡೆದುಕೊಳ್ಳುವುದು ಕಷ್ಟವಾಗಿದೆ. ಎಲ್ಲೇ ಕುಂತರು-ನಿಂತರೂ ಮನಸ್ಸಿಗೆ ನೆಮ್ಮದಿ ಇಲ್ಲದಾಗಿದೆ. ತಂಪಾದ ನೆರಳಿಗಾಗಿ ಹಂಬಲಿಸುವಂತಾಗಿದೆ.ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಶ್ರಮಬಿಂದು ಸಾಗರದ ಕೃಷ್ಣಾ ನದಿ ಪಾತ್ರದ, ತಾಪಮಾನ ಏರಿಕೆಯಿಂದ ನಲುಗಿರುವ ಜನ ಈಜಿನ ಮೊರೆ ಹೋಗಿದ್ದಾರೆ. ಈ ನದಿಯಲ್ಲಿ ನಿತ್ಯ ಬೇರೆ ಬೇರೆ ಗ್ರಾಮಗಳ ನೂರಾರು ಯುವಕರು ಈಜಲು ಬರುತ್ತಾರೆ. ಆಲಗೂರ, ಹಿರೇಪಡಸಲಗಿ, ನಾಗನೂರ, ಕವಟಗಿ,…
ಲೇಖನ.- ಶಿಲ್ಪಾ ಮೃತ್ಯುಂಜಯ ಮಿಣಜಿಗಿಶಿಕ್ಷಕರು, ಕೆ. ಇ. ಬೋರ್ಡ್ಸೆಂಟ್ರಲ್ ಸ್ಕೂಲ.ಧಾರವಾಡ ಉದಯರಶ್ಮಿ ದಿನಪತ್ರಿಕೆ ಬಸವಣ್ಣನವರ ವಚನಗಳು ಕೇವಲ ಸಾಹಿತ್ಯವಲ್ಲ, ಅವು ಬದುಕನ್ನು ತಿದ್ದುವ ದಿವ್ಯ ಮಂತ್ರಗಳು.12ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರರಾದ ಬಸವಣ್ಣನವರು ಕನ್ನಡ ಸಾಹಿತ್ಯಕ್ಕೆ ನೀಡಿದ ‘ವಚನ’ಗಳ ಮಹತ್ವವನ್ನು ಈ ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ.ಬಸವೇಶ್ವರ ವಚನಗಳ ಮಹತ್ವಕನ್ನಡ ಸಾಹಿತ್ಯ ಚರಿತ್ರೆಯಲ್ಲಿ 12ನೇ ಶತಮಾನವನ್ನು ‘ವಚನ ಕ್ರಾಂತಿಯ ಯುಗ’ ಎಂದು ಕರೆಯಲಾಗುತ್ತದೆ. ಸಾಮಾನ್ಯ ಜನರಿಗೂ ಅರ್ಥವಾಗುವ ಸರಳ ಭಾಷೆಯಲ್ಲಿ ಉನ್ನತ ಜೀವನದರ್ಶನವನ್ನು ನೀಡಿದವರು ಬಸವಣ್ಣನವರು. ಅವರ ವಚನಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ಬಹುಷಃ ಮಾನವರಾದ ನಾವು ವಚನಗಳು ಮತ್ತು ಅವುಗಳ ಅರ್ಥಗಳನ್ನು ಚನ್ನಾಗಿ ತಿಳಿದುಕೊಂಡರೆ ಯಾವ ನ್ಯಾಯಾಲಯವು ಇರುತ್ತಿರಲಿಲ್ಲ ಅನಿಸುತ್ತದೆ. ಸರಳ ಭಾಷೆಯಲ್ಲಿ ಮೂಡಿವೆಅಂದಿನ ಕಾಲದಲ್ಲಿ ಧಾರ್ಮಿಕ ಮತ್ತು ತಾತ್ವಿಕ ಜ್ಞಾನವು ಸಂಸ್ಕೃತ ಭಾಷೆಗೆ ಸೀಮಿತವಾಗಿತ್ತು. ಬಸವಣ್ಣನವರು ಈ ಜ್ಞಾನವನ್ನು ಪಂಡಿತರ ಮಠದಿಂದ ಸಾಮಾನ್ಯ ಜನರ ಅಂಗಳಕ್ಕೆ ತಂದರು. ಆಡುಭಾಷೆಯಾದ ಕನ್ನಡದಲ್ಲಿ ವಚನಗಳನ್ನು ರಚಿಸುವ ಮೂಲಕ, ಪ್ರತಿಯೊಬ್ಬರಿಗೂ ತತ್ವಜ್ಞಾನ ಸುಲಭವಾಗಿ ತಲುಪುವಂತೆ…
ಲೇಖನಮಲ್ಲಪ್ಪ. ಸಿದ್ರಾಮ ಖೊದ್ನಾಪೂರ(ತಿಕೋಟಾ)ವಿಜಯಪುರ ಮಹಾಮಾನವತಾವಾದಿ ಬಸವಣ್ಣನವರು ೧೨ ನೇಯ ಶತಮಾನದ ಮಹಾನ್ ಕ್ರಾಂತಿಕಾರಿ, ಸಮಾಜ ಸುಧಾರಕ ಮತ್ತು ತತ್ವಜ್ಞಾನಿಯಾಗಿದ್ದರು. ಅವರು ತನ್ನ ವಚನಗಳ ಮೂಲಕ ಸಮಾಜದಲ್ಲಿನ ಜಾತಿ, ಲಿಂಗ ತಾರತಮ್ಯ ಮತ್ತು ಮೌಢ್ಯತೆಗಳನ್ನು ಕಠೋರವಾಗಿ ವಿರೋಧಿಸುತ್ತಾ, ಸಮಾನತೆ ಮತ್ತು ಕಾಯಕ ನಿಷ್ಠೆಯನ್ನು ಬೋಧಿಸಿದ ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದರು. ಧರ್ಮದ ಮೂಲ ಎಂಬ ಸಂದೇಶ ಸಾರುತ್ತಾ, ಸಾಮಾಜಿಕ ಜಾಗೃತಿ ಮೂಡಿಸುತ್ತಾ, ಸಮ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದವರು. ಸುಮಾರು ೯೦೦ ವರ್ಷಗಳ ಹಿಂದೆಯೇ ಸಾಮಾಜಿಕ ಕಾನೂನು, ಸಂವಿಧಾನ, ಪ್ರಜಾಪ್ರಭುತ್ವ, ಸಮ ಸಮಾಜದ ನಿರ್ಮಾಣ, ಆರ್ಥಿಕತೆ, ಶಿಕ್ಷಣ ಮತ್ತು ಜ್ಞಾನ-ವಿಜ್ಞಾನದ ಪರಿಕಲ್ಪನೆಯಲ್ಲಿಯೇ ಅನುಭವ ಮಂಟಪವನ್ನೇ ಸ್ಥಾಪಿಸಿದ್ದರು.ಸಮಾನತೆಯ ಹರಿಕಾರರಾಗಿ ಬಸವಣ್ಣ ಅನುಭವ ಮಂಟಪ ಸ್ಥಾಪಿಸಿ, ಅಲ್ಲಮ ಪ್ರಭುಗಳು, ಮಡಿವಾಳ ಮಾಚಯ್ಯ, ನೂಲಿಯ ಚಂದಯ್ಯ, ಸಮಗಾರ ಹರಳಯ್ಯ, ಡೋಹರ ಕಕ್ಕಯ್ಯ, ಮಡಿವಾಳ ಮಾಚಯ್ಯ, ಮೋಳಿಗೆ ಮಾರಯ್ಯ, ಅಂಬಿಗೇರ ಚೌಡಯ್ಯ, ಅಕ್ಕ ಮಹಾದೇವಿ, ಆಯ್ದಕ್ಕಿ ಲಕ್ಕಮ್ಮ ಅವರಂತಹ ಎಲ್ಲ ಬಸವಾದಿ ಶರಣರೆಲ್ಲರೂ ಒಂದೆಡೆ ಸೇರಿಸಿ ಜಾತಿ, ಮತ, ಲಿಂಗಗಳ ಭೇದವನ್ನು…
ಲೇಖನ.*- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಚೆಂದದ ಚಂದನಾಪೂರ್ಣ ಚಂದಿರನಂತೆ ಹೊಳೆಯುವ ನಿನ್ನ ಮುಖ, ಆ ಮುಖದಲ್ಲಿ ಬೆಳದಿಂಗಳಿನಂತೆ ಬೆಳಗುವ ನಗು ಕಾಣಲು ಕಾದು ಕುಳಿತ ಅದೆಷ್ಟೋ ದಿನಗಳು ಕಣ್ಣ ಮುಂದಿವೆ. ಆ ನಗುಮೊಗದಲ್ಲಿ ಮಲ್ಲಿಗೆಯ ಹೂಗಳು ಅರಳಿದಂತೆ ಕಾಂತಿಯುಕ್ತ ಕಂಗಳು ನನ್ನನ್ನು ಕರೆದಂತೆ ಭಾಸವಾಗುತ್ತದೆ. ಹಂಸದಂತಹ ನಡಿಗೆ ಕಾರ್ಮೋಡದಂತೆ ಕಪ್ಪಾದ ಸೊಂಪಾದ ಕೂದಲು, ಬೆನ್ನ ತುಂಬ ಹರಡಿದ ಕೇಶರಾಶಿ ನೋಡುವುದೇ ಚಂದ. ನಿನ್ನನ್ನು ನೋಡುವುದೆಂದರೆ ಕಣ್ಣಿಗೊಂದು ಹಬ್ಬವೇ ಸರಿ. ನಿನ್ನನ್ನು ಕಂಡ ಅರಸಿಕನೂ ರಸಿಕನಾಗಿ ಬಿಡುತ್ತಾನೆದಿನ್ನು ನಿನ್ನ ಮಾತುಗಳೋ ವೀಣೆಯ ನಾದದಂತೆ ಮಧುರ ಮಧುರ. ಒಂದೇ ಮಾತಿನಲ್ಲಿ ಹೇಳುವುದಾದರೆ ನನಗಾಗಿ ಆಗಸದಿಂದ ಇಳಿದ ರತಿ ನೀನು. ಮೊದಲ ನೋಟದಲ್ಲೇ ನಿನ್ನಲ್ಲಿ ಕಳೆದು ಹೋದೆ ನಾನು. ಮನದಲ್ಲಿನ ಪ್ರೀತಿ ದಿನೇ ದಿನೇ ಚಿಗುರೊಡೆದಿದೆ. ಪುಟ್ಟ ಪುಟ್ಟ ಎಲೆಗಳಿಂದ ಕೂಡಿದ ಬಳ್ಳಿಯಾಗಿದೆ. ಬೆಳೆಯುತ್ತ ಬೆಳೆಯುತ್ತ ಬಳ್ಳಿಯ ನೆತ್ತಿಯ ಮೇಲಿನ ಮೊಗ್ಗಾಗಿದೆ. ಮೊಗ್ಗು ಹಿಗ್ಗಿ ಹಿಗ್ಗಿ ಈಗ ಹೂವಾಗಿದೆ. ಮನದ ಮೂಲೆಯಲ್ಲಿನ…
ಜಿಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ | ಶಾಸಕ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ | ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಬೆಂಗಳೂರು: ಧಾರವಾಡ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಾಧಿ ಶಿಕ್ಷೆ ನೀಡಿದೆ. ಇದೇ ಪ್ರಕರಣದಲ್ಲಿ 15 ಅಪರಾಧಿಗಳಿಗೂ ಜೀವಾವಾಧಿ ಶಿಕ್ಷೆ ವಿಧಿಸಿರುವ ಕೋರ್ಟ್ 19ನೇ ಅಪರಾಧಿ ಚೆನ್ನಕೇಶವ ಟಿಂಗರಿಕರ್ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ಕೋರ್ಟ್ ನ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಇಂದು ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ವಿನಯ್ ಕುಲಕರ್ಣಿ ಮತ್ತು ಇತರರಿಗೆ ಕ್ರಿಮಿನಲ್ ಪಿತೂರಿ ಮತ್ತು ಕೊಲೆ ಸೇರಿದಂತೆ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಶಿಕ್ಷೆ ವಿಧಿಸಿದ್ದಾರೆ. ಇದೇ ವೇಳೆ ಯೋಗೇಶ್ ಗೌಡ ಮಕ್ಕಳಿಗೆ ಪರಿಹಾರವಾಗಿ 16 ಲಕ್ಷ ರೂಪಾಯಿ ನೀಡುವಂತೆ ಕೋರ್ಟ್ ಸೂಚಿಸಿದೆ.ವಿನಯ್ ಕುಲಕರ್ಣಿ…
ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ಸೋಮನಗೌಡ(ಅಪ್ಪುಗೌಡ) ಪಾಟೀಲ ಮನಗೂಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಜಗತ್ತಿನಲ್ಲಿ ಪ್ರೀತಿ-ವಿಶ್ವಾಸ ಬಹುಮುಖ್ಯವಾಗಿದೆ. ಪ್ರತಿಯೊಬ್ಬರೂ ಪ್ರೀತಿ-ವಿಶ್ವಾಸ ಬಾಂಧವ್ಯದಿಂದ ಜೀವನ ಮಾಡಲು ಧಾರ್ಮಿಕ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ಸೋಮನಗೌಡ(ಅಪ್ಪುಗೌಡ) ಪಾಟೀಲ ಮನಗೂಳಿ ಹೇಳಿದರು.ತಾಲೂಕಿನ ಮನಗೂಳಿ ಪಟ್ಟಣದ ಭಜನಾ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪಟ್ಟೀಕಂಥಿ ಹಿರೇಮಠದ ಬಾಲತಪಸ್ವಿ ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ 77ನೇ ಯಾತ್ರಾಮಹೋತ್ಸ, ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ 25ನೇ ಸಂಸ್ಮರಣೋತ್ಸವ ಹಾಗೂ ಶ್ರೀಗುರು ಮಹಾಂತೇಶ್ವರ ಪ್ರಶಸ್ತಿ ಹಾಗೂ ಭೂ ಜನ ಆರೋಗ್ಯ ರಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ,ಗುರುರಕ್ಷೆ, ಧರ್ಮ ಜಾಗೃತಿ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ಪ್ರತಿಯೊಬ್ಬರಲ್ಲಿ ಪ್ರೀತಿ-ವಿಶ್ವಾಸ ಇಲ್ಲದಂತಾಗಿರುವದು ವಿಷಾದನೀಯ. ಇದನ್ನು ಉಳಿಸಿಕೊಳ್ಳುವದು ಬಹಳ ದೊಡ್ಡ ಶಕ್ತಿಯಾಗಿದೆ. ಇದನ್ನು ಪ್ರತಿಯೊಬ್ಬರೂ ಉಳಿಸಿಕೊಂಡು ಜೀವನ ಮಾಡುವ ಅಗತ್ಯವಿದೆ. ಮನಸ್ಸಿನಲ್ಲಿ ಒಂದು ಹೊರಗೊಂದು ವಿಚಾರವನ್ನು ಇಟ್ಟುಕೊಂಡು ಜೀವನ ಸಾಗಿಸುವದು ಸರಿಯಲ್ಲ. ಎಂದಿಗೂ ವೈಮನಸ್ಸು ಇರಬಾರದು.…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಹೊರವಲಯದಲ್ಲಿರುವ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್ನ ಪ್ರಸಕ್ತ ಸಾಲಿನ ಸಿಬಿಎಸ್ಸಿ ೧೦ನೆಯ ತರಗತಿಯ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ೧೦ನೆಯ ತರಗತಿಯ ವಾಷೀಕ ಪರೀಕ್ಷೆಗೆ ಹಾಜರಾದ ಒಟ್ಟು ೫೭ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ೨೦ ವಿದ್ಯಾರ್ಥಿಗಳು, ೩೭ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಶಾಲೆಯ ಒಟ್ಟು ಪಲಿತಾಂಶ ೧೦೦ಕ್ಕೆ ೧೦೦ರಷ್ಟಾಗಿದೆ. ವೈಷ್ಣವಿ ಮಸಳಿ, ಮಾಹಿತಿ ತಂತ್ರಜ್ಞಾನ (ಐ.ಟಿ) ಮತ್ತು ಕನ್ನಡ ವಿಷಯದಲ್ಲಿ ೧೦೦ಕ್ಕೆ ೧೦೦ ಅಂಕ, ಸ್ನೇಹಾ ಪಾಟೀಲ ಕನ್ನಡ ವಿಷಯದಲ್ಲಿ ೧೦೦ಕ್ಕೆ ೧೦೦ ಅಂಕಗಳನ್ನು ಪಡೆದುಕೊಂಡಿದ್ದಾರೆ. ವೈಷ್ಣವಿ ಮಸಳಿ ಶೇ.೯೯ರಷ್ಟು ಪ್ರತಿಶತ ಅಂಕ ಪಡೆಯುವುದರ ಮೂಲಕ ಸಿಂದಗಿ ತಾಲೂಕು ಹಾಗೂ ವಿಜಯಪುರ ಜಿಲ್ಲೆಗೆ ಅತ್ಯುನ್ನತ ಶ್ರೇಣಿ ತೇರ್ಗೆಡೆ ಹೊಂದಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿದ್ಯಾರ್ಥಿನಿಯರ ಈ ಕಠಿಣ ಪರಿಶ್ರಮ, ಶಾಲೆಯ ಶಿಕ್ಷಕರ ಅತ್ಯುತ್ತಮ ಭೋಧನೆಯಿಂದ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳನ್ನು ಪಡೆಯುವದರೊಂದಿಗೆ ಶಾಲೆಯ ಪಲಿತಾಂಶ ಶೇ.೧೦೦ಕ್ಕೆ ೧೦೦ರಷ್ಟು ವಿದ್ಯಾರ್ಥಿಗಳು ಉತ್ತಮ…
