Author: editor.udayarashmi@gmail.com

ರಂಗಕರ್ಮಿ ರಾಜು ತಾಳಿಕೋಟೆ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ (ವಿಜಯಪುರ): ರಂಗದ ಮೇಲೆ ಹಾಸ್ಯದ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಿ ಜನಮನ್ನಣೆ ಗಳಿಸಿದ್ದ ರಾಜು ತಾಳಿಕೋಟಿ ಎಂಬ ಅದ್ಬುತ ಕಲಾವಿದ ನಗುತ್ತಲೇ ಜೀವನ ರಂಗಕ್ಕೆ ವಿದಾಯ ಹೇಳಿದ್ದಾರೆ. ರಂಗಭೂಮಿ ಇಂಥ ಅದ್ಭುತ ಪ್ರತಿಭೆಯನ್ನು ಕಳೆದುಕೊಂಡು ಬಡವಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ವಿಷಾದಿಸಿದರು.ನಿಧನರಾಗಿರುವ ರಂಗಕರ್ಮಿ, ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟಿ ಅವರ ಅಂತಿಮ ದರ್ಶನ ಪಡೆದು ಸಿಂದಗಿ ಕನ್ನಡ ಸಾಹಿತ್ಯ ಬಳಗ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಸಚಿವರು, ಹಾಸ್ಯದ ಮೂಲಕ ಸಮಾಜದ ಲೋಪ ತಿದ್ದುವ ಮಹತ್ವದ ಸೇವೆ ಮಾಡಿದ್ದರು. ಸಾವಿರಾರು ಪ್ರತಿಭೆಗಳಿಗೆ ಮಾರ್ಗದರ್ಶನ ಮಾಡಿ, ರಂಗಭೂಮಿ ಅಭಿವೃದ್ಧಿಗೆ ವಿಶಿಷ್ಟ ಕೊಡುಗೆ ನೀಡಿದ್ದರು ಎಂದು ವಿವರಿಸಿದರು.ಬಡತನದಲ್ಲಿ ಹುಟ್ಟಿ, ತಾಳಿಕೋಟೆಯ ಶ್ರೀಖಾಸ್ಗತೇಶ್ವರ ಮಠದಲ್ಲಿ ತ್ರಿವಿಧ ದಾಸೋಹ ಮಾಡಿ, ಸ್ವಂತ ನಾಟಕ ಕಂಪನಿ ಕಟ್ಟಿ ಬೆಳೆಸಿದ್ದರು. ತಮ್ಮ…

Read More

“When Teachers Breakdown Silently: The Hidden Cost of Disrespect” ಲೇಖನದ ಭಾವಾನುವಾದ ಅನುವಾದ- ಪ್ರಶಾಂತ ಕುಲಕರ್ಣಿಶಿಕ್ಷಕ, ಲೇಖಕಶ್ರೀ ಪದ್ಮರಾಜ ಬಿ.ಎಡ್ ಕಾಲೇಜ್ಸಿಂದಗಿವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಇಂದಿನ ಸಮಾಜದಲ್ಲಿ ಹಿಂಸಾಚಾರ, ಸುಲಿಗೆ, ಮೋಸ, ನೈತಿಕ ಕುಸಿತ ಇತ್ಯಾದಿ ಘಟನೆಗಳು ಹೆಚ್ಚುತ್ತಿವೆ. ಪ್ರತೀ ಸಾರಿ ಇಂತಹ ಘಟನೆಗಳು ಸಂಭವಿಸಿದಾಗ ಜನರ ಮೊದಲ ಪ್ರತಿಕ್ರಿಯೆ — “ಈಗಿನ ಮಕ್ಕಳು ಸರಿಯಿಲ್ಲ!” ಎನ್ನುವುದು. ಆದರೆ ಮಕ್ಕಳು ಅಂಥವರಾಗಲು ಕಾರಣವೇನು ಎನ್ನುವುದರ ಬಗ್ಗೆ ಯಾರೂ ಆಳವಾಗಿ ಚಿಂತಿಸೋದಿಲ್ಲ.ಮಕ್ಕಳ ನಡೆ-ನುಡಿಗಳ ಹಿಂದೆ ಮನೆಯ ವಾತಾವರಣ, ಪೋಷಕರ ಧೋರಣೆ ಮತ್ತು ಶಿಕ್ಷಣ ವ್ಯವಸ್ಥೆಯ ಪ್ರಭಾವ ಅಡಗಿದೆ. ಇವೆಲ್ಲದರಲ್ಲಿಯೂ ಶಿಕ್ಷಕರು ಪ್ರಮುಖ ಪಾತ್ರವಹಿಸುತ್ತಾರೆ ಎಂಬುದು ನಿಸ್ಸಂಶಯ. ಆದರೆ ತಪ್ಪು ನಡೆದರೆ ಎಲ್ಲರ ತೋರು ಬೆರಳು ನೇರವಾಗಿ ಶಿಕ್ಷಕರತ್ತ ತಿರುಗುತ್ತದೆ.ಒಂದು ಕಾಲದಲ್ಲಿ ಶಿಕ್ಷಕರು ದೇವರಷ್ಟೇ ಗೌರವಿಸಲ್ಪಡುತ್ತಿದ್ದರು. ರಸ್ತೆ ಮೇಲೆ ಶಿಕ್ಷಕರು ಎದುರಾದರೆ ಮಕ್ಕಳು ಮಾತ್ರವಲ್ಲದೆ ಅವರ ಪೋಷಕರೂ ಸಹ ಗೌರವದಿಂದ ನಮನ ಮಾಡುತ್ತಿದ್ದರು. “ಗುರು ಬ್ರಹ್ಮ, ಗುರು ವಿಷ್ಣು, ಗುರು…

Read More

ಇಂದು (ಅಕ್ಟೋಬರ ೧೫, ಬುಧವಾರ) “ಜಾಗತಿಕ ಕೈ ತೊಳೆಯುವ ದಿನ” ದ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಮಹಾತ್ಮಾ ಗಾಂಧೀಜಿಯವರು ಹೇಳಿರುವಂತೆ,Cleaniness is next to Godliness ” ಯಾವುದೇ ವ್ಯಕ್ತಿಯ ಆರೋಗ್ಯ ಉತ್ತಮವಾಗಿರಬೇಕಾದರೆ ಶುಚಿತ್ವ, ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಇದರಿಂದ ರೋಗ-ರುಜಿನಗಳು ಬರದಂತೆ ತಡೆಗಟ್ಟಬಹುದು ಮತ್ತು ಜೀವ ಉಳಿಸಲು ಪರಿಣಾಮಕಾರಿ. ಯಾವುದೇ ಕೆಲಸ-ಕಾರ್ಯ ಮಾಡಿದ ನಂತರ ಸ್ವಚ್ಛವಾಗಿ ಕೈ ತೊಳೆದುಕೊಂಡು ನಮ್ಮ ದೈಹಿಕ ಆರೋಗ್ಯವನ್ನು ರೋಗಮುಕ್ತಗೊಳಿಸಬಹುದು. ಹೀಗೆ ಜನರು ತಮ್ಮ ಆರೋಗ್ಯವನ್ನು ಉತ್ತಮವನ್ನಾಗಿಸಿಕೊಳ್ಳಲು ಮತ್ತು ಕೈ ತೊಳೆಯುವಂತೆ ಪ್ರೇರೇಪಿಸಲು ಮತ್ತು ಶುಚಿತ್ವ ಮತ್ತು ನೈರ್ಮಲ್ಯತೆ ಕಾಪಾಡಿಕೊಳ್ಳಬೇಕೆಂದು ಜಾಗೃತಿ ಮೂಡಿಸಲು ಪ್ರತಿ ವರ್ಷ ಅಕ್ಟೋಬರ ೧೫ ರಂದು ಜಾಗತಿಕ ಕೈ ತೊಳೆಯುವ ದಿನವನ್ನು ಆಚರಿಸಲಾಗುತ್ತಿದೆ.ಆಚರಣೆಯ ಇತಿಹಾಸ ಮೊಟ್ಟಮೊದಲು ೨೦೦೮ ರಲ್ಲಿ ಗ್ಲೋಬಲ್ ಹ್ಯಾಂಡ್ ವಾಷಿಂಗ್ ಪಾರ್ಟನರ್‌ಶಿಫ್ ಸಂಸ್ಥೆಯು ಅಕ್ಟೋಬರ ೧೫ ರಂದು ಜಾಗತಿಕವಾಗಿ ಕೈ ತೊಳೆಯುವ ದಿನವನ್ನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೊ ಎಸೆದ ಪ್ರಕರಣ, ಇದು ನ್ಯಾಯಾಂಗ ವ್ಯವಸ್ಥೆಯ ಮೇಲೆ ದಾಳಿ ಹಾಗೂ ಇದು ಪ್ರತಿ ದಲಿತನ ಮೇಲಿನ ದೌರ್ಜನ್ಯ – ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ತೀವ್ರವಾಗಿ ಖಂಡಿಸಿದ್ದಾರೆ.ದೇಶದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಶೊ ಎಸೆದ ಘಟನೆಯು ಕೇವಲ ಒಂದು ವ್ಯಕ್ತಿಯ ಮೇಲಿನ ದಾಳಿಯಲ್ಲ, ಇದು ಇಡೀ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಯೋಜಿತ ಷಡ್ಯಂತ್ರವಾಗಿದೆ. ಈ ಘಟನೆಯು ಪ್ರತಿ ದಲಿತನ ಗೌರವ ಮತ್ತು ನ್ಯಾಯದ ಹಕ್ಕನ್ನು ಧಿಕ್ಕರಿಸುವ ದೌರ್ಜನ್ಯವಾಗಿದ್ದು, ಬಿಜೆಪಿ ಸರ್ಕಾರದಿಂದ ನ್ಯಾಯದ ಧ್ವನಿಯನ್ನು ಮುಚ್ಚುವ ಪ್ರಯತ್ನವೆಂದು ಆಮ್ ಆದ್ಮಿ ಪಾರ್ಟಿ (ಆಪ್) ಖಂಡಿಸುತ್ತದೆ ಎಂದು ಭೋಗೇಶ್ ಸೋಲಾಪುರ್ ವಾಗ್ದಾಳಿ ನಡೆಸಿದರು.ಈ ಸಂದರ್ಭದಲ್ಲಿ, ವಿಜಯಪುರದಲ್ಲಿ ಅಕ್ಟೋಬರ್ 16 ರಂದು ನಡೆಯುತ್ತಿರುವ “ವಿಜಯಪುರ ಬಂದ್‌” ಗೆ ಆಮ್ ಆದ್ಮಿ ಪಾರ್ಟಿ ವಿಜಯಪುರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಗುಬ್ಬೇವಾಡ ರವರ ನೇತೃತ್ವದಲ್ಲಿ ಓಟ ಚೋರಿ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.ಇದೇ ವೇಳೆ ಸುಪ್ರೀಂ ಕೋರ್ಟ ಮುಖ್ಯ ನ್ಯಾಯಾಧೀಶರ ಮೇಲೆ ಶೂ ಎಸೆದ ವಕೀಲನ ವಿರುದ್ಧ ಮತ್ತು ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ನಗರದ ಡಿ.ದೇವರಾಜ ಅರಸು ವೃತ್ತದಲ್ಲಿ ನಡೆಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ಮಾತನಾಡಿ, ಇವತ್ತು ಮತಗಳ್ಳತನ ಮಾಡುವುದರ ಮೂಲಕ ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಿದೆ ಹಾಗೂ ನಮ್ಮ ವಿಜಯಪುರ ನಗರದಲ್ಲಿಯೂ ಕೂಡ ಮತಗಳ್ಳತನ ಮಾಡಲಾಗಿದೆ ಎಂದು ಹೇಳಿದರು.ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಗುಬ್ಬೇವಾಡ ಮಾತನಾಡಿ, ಸುಪ್ರೀಂ ಕೋರ್ಟ ಮುಖ್ಯ ನ್ಯಾಯಾಧೀಶರ ಮೇಲೆ ಶೂ…

Read More

ವಿಜಯಪುರದ ಶ್ರೀ ಸಿದ್ದೇಶ್ವರ ಬ್ಯಾಂಕ್ ಚುನಾವಣೆ | ಹಳೆಯ ಪೆನಲ್‌ಗೆ ಸದಸ್ಯರ ಒಲವು | ಫಲ ಕೊಟ್ಟ ಸಚಿವ ಶಿವಾನಂದ ಪಾಟೀಲ & ಮಾಜಿ ಸಚಿವ ಪಟ್ಟಣಶೆಟ್ಟಿ ಜಂಟಿ ಕಾರ್ಯತಂತ್ರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿ ಅವರು ಸ್ಥಾಪಿಸಿದ ಪ್ರತಿಷ್ಠಿತ ಸಿದ್ದೇಶ್ವರ ಬ್ಯಾಂಕ್ ಚುನಾವಣೆಯಲ್ಲಿ ಸಹಕಾರ ಕ್ಷೇತ್ರದ ಚಾಣಾಕ್ಷ ಎಂದೇ ಖ್ಯಾತಿಯಾಗಿರುವ ಸಚಿವ ಶಿವಾನಂದ ಪಾಟೀಲ ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರ ಜಂಟಿ ರಣತಂತ್ರ ಫಲ ಕೊಟ್ಟಿದ್ದು ಹಳೆಯ ಪೆನಲ್’ ಸದಸ್ಯರೇ ಪುನರಾಯ್ಕೆಯಾಗಿದ್ದಾರೆ.ಅವಿರೋಧ ಆಯ್ಕೆ ನಡೆಯುವ ನಿಟ್ಟಿನಲ್ಲಿ ಸಚಿವ ಶಿವಾನಂದ ಪಾಟೀಲ ಪ್ರಯತ್ನಿಸಿದರಾದರೂ ಸಹ ಚುನಾವಣೆ ನಡೆಯಿತು. ಆದರೂ ಸಹ ಹಳೆಯ ಪೆನಲ್ ಪರ ಬ್ಯಾಂಟಿಂಗ್ ನಡೆಸಿದ್ದ ಸಚಿವ ಶಿವಾನಂದ ಪಾಟೀಲ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಜಂಟಿ ಕಾರ್ಯತಂತ್ರ ನಡೆಸಿ ತಮ್ಮ ಬೆಂಬಲಿತ ಎಲ್ಲ ಪೆನಲ್ ಸದಸ್ಯರನ್ನು ಆಯ್ಕೆಯಾಗಿಸುವ ನಿಟ್ಟಿನಲ್ಲಿ ಯಶಸ್ವಿಯಾಗಿದ್ದಾರೆ.೧೯ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಹಳೆಯ ಪೆನಲ್ ಸದಸ್ಯರೇ ಆಯ್ಕೆಯಾಗಿದ್ದಾರೆ.ಬ್ಯಾಂಕನ್ನು ಲಾಭಾಂಶದತ್ತ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಗರದ ಎ ಜಿ ದೇಸಾಯಿ ವೃತ್ತದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆದಿರುವ ಕೃತ್ಯ ಖಂಡಿಸಿ ಜಮಖಂಡಿಯಲ್ಲಿ ಕಾನೂನು ವಿದ್ಯಾರ್ಥಿಗಳು ಖಂಡಿಸಿ ಪ್ರತಿಭಟನೆ ಮಾಡಿದರು.ಪ್ರತಿಭಟನೆಯ ಉದ್ದೇಶಿಸಿ ಮಾತನಾಡಿದ ಕಾನೂನು ವಿದ್ಯಾರ್ಥಿಗಳ ಒಕ್ಕೂಟದ ಮುಖಂಡ ಹಣಮಂತ ಯಮಗಾರ, ಸಿಜೆಐ ಬಿ. ಆರ್. ಗವಾಯಿ ಅವರಿಗೆ ಮಾತ್ರ ಆದ ಅವಮಾನ ಅಲ್ಲ ಇದು ನಮ್ಮ ಭಾರತ ಮಾತೆಗೆ ಆದ ಅವಮಾನ ಈ ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಕಾನೂನು ವಿದ್ಯಾರ್ಥಿನಿಯಾದ ವಚನಾ ಶೃಂಗೇರಿ ಮಾತನಾಡಿ, ಈ ನಮ್ಮ ದೇಶದಲ್ಲಿ ಸುಪ್ರೀಂ ಕೋರ್ಟ್ ಸಿಜೆಐ ಅವರಿಗೆ ರಕ್ಷಣೆ ಇಲ್ಲ,ಇನ್ನೂ ಸಾಮಾನ್ಯ ಜನರ ಜೀವನ ಅಧೋಗತಿಯಾಗಿದೆ ಮತ್ತು ಆರೋಪಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಆತನನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯ ಮಾಡಿದರು.ಉದಯ ಒಡೆಯರ ಮಾತನಾಡಿ, ದೇಶದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಸರ್ಕಾರ ಕೂಡಲೇ ಇದನ್ನು ಸರಿ ಪಡಿಸಬೇಕು ಎಂದು…

Read More

ವಿಜಯಪುರದಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಬೆಳೆ ಸಮೀಕ್ಷೆ ಅತ್ಯಂತ ನಿರ್ಲಕ್ಷ್ಯತನದಿಂದ ನಡೆಯುತ್ತಿದೆ, ಪರಿಹಾರ ಹಣವೂ ಸಹ ಅತ್ಯಲ್ಪ. ಹೀಗಾಗಿ ಕೂಡಲೇ ಮಹಾರಾಷ್ಟ್ರ ಮಾದರಿಯಲ್ಲಿ ರೈತರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹೇಳಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಬೆಳೆಹಾನಿಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಪರಿಹಾರ ಅತ್ಯಂತ ಅತ್ಯಲ್ಪ, ರೈತರಿಗೆ ಯಾವ ಪ್ರಯೋಜನಕ್ಕೂ ಬಾರದಾಗಿದೆ, ರಾಜ್ಯ ಸರ್ಕಾರ ಕೇವಲ ೨೫೦೦ ಕೋಟಿ ರೂ. ಮಾತ್ರ ಪರಿಹಾರ ಬಿಡುಗಡೆ ಮಾಡಿದೆ, ಆದರೆ ನೆರೆಯ ಮಹಾರಾಷ್ಟ್ರ ಸರ್ಕಾರ ೩೧ ಸಾವಿರ ಕೋಟಿ ರೂ. ಮಹಾರಾಷ್ಟ್ರ ಪರಿಹಾರದ ಪ್ಯಾಕೇಜ್ ನೀಡಿದೆ. ಅಲ್ಲದೇ, ಪ್ರತಿ ಹೆಕ್ಟೇರ್ ಗೆ ೩೭ ಸಾವಿರ ಬೆಳೆ ಪರಿಹಾರ ಘೋಷಿಸಿದೆ, ಇದೇ ಮಾದರಿಯಲ್ಲಿ ನಮ್ಮ ಸರ್ಕಾರ ಸಹ ಈ…

Read More

ನೀರಾವರಿ ಮತ್ತು ಕೋಟಿ ವೃಕ್ಷ ಅಭಿಯಾನದ ಫಲ | ಬ್ರೆಜಿಲ್ ವಿಜ್ಞಾನಿ ಬೆನೆಡಿಟೊ ಎಚ್. ಮಚಾಡೊ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೀರಾವರಿ ಮತ್ತು ಕೋಟಿ ವೃಕ್ಷ ಅಭಿಯಾನದ ಫಲವಾಗಿ ಜಿಲ್ಲೆಯ ಪರಿಸರದಲ್ಲಿ ಗಣನೀಯ ಬದಲಾವಣೆಯಾಗಿದೆ ಎಂದು ಬ್ರೆಜಿಲ್ ಸಾ ಪಾಲೊ ವಿಶ್ವವಿದ್ಯಾಲಯದ ಶರೀರ ಕ್ರಿಯಾ ಶಾಸ್ತ್ರ ವಿಭಾಗದ ಸಲಹೆಗಾರ ಮತ್ತು ವಿಜ್ಞಾನಿ ಬೆನೆಡಿಟೊ ಎಚ್. ಮಚಾಡೊ ಹೇಳಿದ್ದಾರೆ.ಅಕ್ಟೋಬರ್ 6 ರಿಂದ ಅಕ್ಟೋಬರ್ 9ರ ವರೆಗೆ ನಗರಕ್ಕೆ ಭೇಟಿ ನೀಡಿದ ಅವರು, ತಮ್ಮ ಪತ್ನಿ ಮತ್ತು ಸಾ ಪಾಲೊ ವಿವಿಯ ಔಷಧ ರಸಾಯನಶಾಸ್ತ್ರ ವಿಭಾಗದ ನಿಕಟಪೂರ್ವ ಪ್ರಾಧ್ಯಾಪಕಿ ಪ್ರೊ.ಲೂಸಿಯಾನ್ ಎಂ. ಬೆನಧ್ಯಾಕ್ ಅವರೊಂದಿಗೆ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ನಾನಾ ವಿಭಾಗಗಳಲ್ಲಿ ನಡೆದ ವಿಚಾರ ವಿನಿಮಯ, ಸಂವಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.ಶರೀರ ಕ್ರಿಯಾ ಶಾಸ್ತ್ರ ವಿಭಾಗಕ್ಕೆ ಭೇಟಿ ನೀಡಿದ ಅವರು, ಅಲ್ಲಿ ಪ್ರೊ. ಕುಸಾಲ ದಾಸ ಅವರು ಅವರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತ್ಯಾಧುನಿಕ ಪ್ರಯೋಗಾಲಯದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಅಲ್ಲದೇ, ಮೆದುಳಿನ…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದ ಬಸ್‌ನಿಲ್ದಾಣದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಕಲಕೇರಿ ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಸದಸ್ಯರು ಸೇರಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿಗಳಾದ ಪ್ರಭುಗೌಡ ಪಾಟೀಲ ಲಿಂಗದಳ್ಳಿ ಅವರ ನೇತೃತ್ವದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ಕಲಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜಅಹ್ಮದ ಸಿರಸಗಿ ಅವರು, ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮವು ಸುಮಾರು ೨೦ ಸಾವಿರ ಜನಸಂಖ್ಯೆಯನ್ನು ಹೊಂದಿದ್ದು, ಸುತ್ತಮುತ್ತಲಿನ ೪೦ ಹಳ್ಳಿಗಳಿಗೆ ಶಿಕ್ಷಣ, ವಾಣಿಜ್ಯ, ವ್ಯಾಪರಿ ಕೇಂದ್ರವಾಗಿದೆ. ಪ್ರತಿದಿನ ಸಾವಿರಾರು ಜನರು ವಿವಿಧ ಕೆಲಸ ಕಾರ್ಯಗಳ ಮೇಲೆ ಬಸ್‌ಗಳ ಮೂಲಕ ಕಲಕೇರಿ ಗ್ರಾಮಕ್ಕೆ ಆಗಮಿಸುತ್ತಾರೆ, ಕಲಕೇರಿ ಗ್ರಾಮದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಹಾಗೂ ಮಹಿಳೆಯರಿಗೆ ಸರಿಯಾದ ಶೌಚಾಲಯ ವ್ಯವಸ್ಥೆ ಇರುವುದಿಲ್ಲ, ಇರುವ ಒಂದು ಶೌಚಾಲಯವೂ ಕೂಡಾ ಸುಮಾರು ತಿಂಗಳುಗಳಿಂದ ಬಾಗಿಲು ಮುಚ್ಚಿರುತ್ತದೆ.ಅದೇ ರೀತಿ ಬಸ್ ನಿಲ್ದಾಣದ ಆವರಣ ತಗ್ಗು…

Read More