Author: editor.udayarashmi@gmail.com

ನೂರಕ್ಕು ಹೆಚ್ಚು ಕಿ.ಮಿ ವ್ಯಾಪಿಸಿದ ನಾಗಠಾಣ ಮತಕ್ಷೇತ್ರ ಯಾವ ಪುಣ್ಯಾತ್ಮನಿಂದ ವಿಂಗಡನೆ ಆಗಿದೆಯೊ ಗೊತ್ತಿಲ್ಲ :ಶಾಸಕ ವಿಠ್ಠಲ ಕಟಕಧೋಂಡ ಉದಯರಶ್ಮಿ ದಿನಪತ್ರಿಕೆ ಚಡಚಣ: ಲೋಕೋಪಯೊಗಿ ಇಲಾಖೆಯಲ್ಲಿ ೨೦೨೪-೨೫ ಸಾಲಿನ ೫೦೫೪ ಜಿಲ್ಲಾ ಮುಖ್ಯ ರಸ್ತೆ ಸುಧಾರಣೆ (ಅಪೆಂಡಿಕ್ಸ್-ಇ) ಯೋಜನೆ ಅಡಿಯಲ್ಲಿ ಇಂಡಿ ರೈಲ್ವೆ ನಿಲ್ದಾಣದಿಂದ ನಾಗಠಾಣ ಮತಕ್ಷೇತ್ರದ ಹಲಸಂಗಿ ಗ್ರಾಮದ ಮೂಲಕ ರಾಷ್ಟ್ರೀಯ ಹೆದ್ದಾರಿವರೆಗೆ ರೂ.೫ ಕೋಟಿ ಮೊತ್ತದ ರಸ್ತೆ ನಿರ್ಮಾಣ ಸೇರಿದಂತೆ ಒಟ್ಟು ರೂ.೧೦.೬೫ ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಭೂಮಿ ಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಶಾಸಕರು, ಮತಕ್ಷೇತ್ರದ ಅನೇಕ ಅಭಿವೃದ್ಧಿ ಕೆಲಸಗಳ ಕುರಿತು ಚುನಾವಣೆ ಪೂರ್ವದಲ್ಲಿ ನಾನು ಕ್ಷೇತ್ರದ ಜನತೆಗೆ ಅಭಿವೃದ್ಧಿಗಾಗಿ ಮಾತುಕೊಟ್ಟಿದ್ದೆ. ಅದರಂತೆ ಕೆಲಸ ಮಾಡುತ್ತಿದ್ದೇನೆ, ಮುಂದಿನ ದಿನಗಳಲ್ಲಿ ಸರ್ಕಾರ ಇನ್ನು ಅನೇಕ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಂಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇತಿಹಾಸ ನಿರ್ಮಿಸಲಿದೆ ಎಂದು ಹೇಳಿದರು.ರೈತರ ಪರವಾಗಿ ನೀರಾವರಿ ಯೋಜನೆಗಳಿಂದ ರೈತರಿಗೆ ಅನುಕೂಲವಾಗಿದೆ. ನಮ್ಮ ಸರ್ಕಾರ ರೈತರಿಗೆ ಜಮೀನಿನ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಚಡಚಣ ತಾಲೂಕು ಘಟಕ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ಇದೇ ರವಿವಾರ ಜು.27 ರಂದು ಬೆಳಿಗ್ಗೆ 10:30 ಕ್ಕೆ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಲಯದಲ್ಲಿ ನಡೆಯಲಿದೆ.ಕಾರ್ಯಕ್ರಮದ ಸಾನಿಧ್ಯವನ್ನು ಸ್ಥಳೀಯ ವಿರಕ್ತ ಮಠದ ಷಡಕ್ಷರ ಸ್ವಾಮೀಜಿ ವಹಿಸಲಿದ್ದಾರೆ.ಉದ್ಘಾಟಕರಾಗಿ ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಆಗಮಿಸಲಿದ್ದಾರೆ. ಮಹಾಸಭೆಯ ರಾಷ್ಟ್ರೀಯ ಮಹಿಳಾ ಅಧ್ಯಕ್ಷೆ ವೀಣಾ ಕಾಶಪ್ಪನವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಮಹಾಸಭೆ ಜಿಲ್ಲಾಧ್ಯಕ್ಷ ವಿ.ಸಿ ನಾಗಠಾಣ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ರಾಜಶೇಖರ್ ಸಿರಿ ಹಾಗೂ ಉಪಸ್ಥಿತರಾಗಿ ಎಸ್ ಆರ್ ಅವಜಿ, ಬಿ.ಎಮ್. ಕೋರೆ ಮತ್ತು ಶ್ರೀ ಬಿ.ಎ ಪಾಟೀಲ್ ಇರಲಿದ್ದಾರೆ.ತಾಲೂಕು ಘಟಕದೊಂದಿಗೆ ಮಹಿಳಾ ಘಟಕ ಹಾಗೂ ಯುವ ಘಟಕ ಕೂಡ ಅಸ್ತಿತ್ವಕ್ಕೆ ಬರಲಿವೆ. ಸಮಸ್ತ ವೀರಶೈವ ಲಿಂಗಾಯತ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅಧ್ಯಕ್ಷ ಎಸ್.ಆರ್ ಅವಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಝಳಕಿಗೆ ಧಿಡೀರನೆ ಭೇಟಿ ನೀಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಡಾ.ತಿಪ್ಪೇಸ್ವಾಮಿ ಕೆ.ಟಿ ಸಲಹೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಝಳಕಿ ಗ್ರಾಮದ ಸರ್ಕಾರಿ ಪ್ರೌಢಶಾಲೆ, ಡಿಗ್ರಿ ಕಾಲೇಜಿಗೆ ಗ್ರಾಮ ಪಂಚಾಯತ್, ಪೊಲೀಸ್ ಠಾಣೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ. ಟಿ. ಧಿಡೀರನೇ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗ್ರಾ.ಪಂಚಾಯತಿ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು, ಪ್ರತಿ ತಿಂಗಳಿಗೆ ಪಂಚಾಯತನಲ್ಲಿ ಮಕ್ಕಳ ಕುರಿತು ನೀತಿ ಕಾನೂನು, ಕ್ರಿಯಾ ಯೋಜನೆ, ಶಿಕ್ಷಣ ಮಾಹಿತಿ ಹಂಚಿಕೆ, ಸಾಹಿತ್ಯ ತರಬೇತಿ ಕಾರ್ಯಾಗಾರ, ಮಕ್ಕಳನ್ನು ಕುರಿತು ಪ್ರಚಾರ ಮತ್ತು ಆಂದೋಲನ, ವಿಕಾಸ ಸಂಬಂಧಿತ ಸಂಶೋಧನೆ, ಹಕ್ಕುಗಳ ಕುರಿತು ಸಾಹಿತ್ಯ ರಚನೆ, ಪ್ರತಿಪಾದನೆ ಮತ್ತು ವಕೀಲಿ ಇಂತಹ ಚಟುವಟಿಕೆಗಳನ್ನು ಮಾಡಿ ಮಕ್ಕಳಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರಲ್ಲದೆ, ಆ ಸಂದರ್ಭದಲ್ಲಿ ಸಭೆಗೆ ಸಿ. ಆರ್. ಸಿ. ಮತ್ತು ಗ್ರಾಮಕ್ಕೆ ಸಂಭಂದಿಸಿದ ಪೊಲೀಸ ಸಿಬ್ಬಂದಿ ಎಲ್ಲರು ಹಾಜರಾಗಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪರಮಗೊಂಡ ಗವರೋಜಿ ರಾಜೀನಾಮೆಯಿಂದ ತೆರವಾದ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆಯುವ ಸಾಧ್ಯತೆ ಇದೆ.ಸಾಮಾನ್ಯ ವರ್ಗದಿಂದ ಆಯ್ಕೆಯಾಗಿದ್ದ ಪರಮಗೊಂಡ ಗವರೋಜಿ ಅವಧಿ ಪೂರ್ಣವಾಗುವ ಮುಂಚೆ ರಾಜೀನಾಮೆ ನೀಡಿದ್ದರಿಂದ ಉಳಿದ ಅವಧಿಗೆ ಅಧ್ಯಕ್ಷರಾಗಲು ಕಾಂಗ್ರೆಸ್ ಸದಸ್ಯರಲ್ಲಿ ಕಸರತ್ತು ನಡೆದಿತ್ತು. ಮಾಜಿ ಶಾಸಕ ಆನಂದ ನ್ಯಾಮಗೌಡರ ನಿರ್ಧಾರವೇ ಅಂತಿಮವಾಗಿದ್ದು, ಈಗಾಗಲೇ ಅವರು ಒಬ್ಬ ಹಿರಿಯ ಸದಸ್ಯನ ಮೇಲೆ ಒಲವು ತೋರಿದ್ದರಿಂದ ಪೈಪೋಟಿಗೆ ತೆರೆ ಬಿದ್ದಿದೆ.ಒಟ್ಟು 31 ಸದಸ್ಯರಲ್ಲಿ ಕಾಂಗ್ರೆಸ್‌ 20, ಬಿಜೆಪಿಯ 7, ಪಕ್ಷೇತರ 4 ಸದಸ್ಯರು ಇದ್ದಾರೆ. ಮಾಜಿ ಶಾಸಕ ಆನಂದ ನ್ಯಾಮಗೌಡರು ಈ ಬಾರಿ ಹಾಲುಮತ ಕುರುಬ ಸಮುದಾಯದ ಹಿರಿಯ ಸದಸ್ಯ ಈಶ್ವರ ವಾಳೆನ್ನವರ ಅವರಿಗೆ ಅವಕಾಶ ಕಲ್ಪಿಸಿ ಕೊಡಲು ಮುತುವರ್ಜಿ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.ಅ.1ರಂದು ಅಧ್ಯಕ್ಷರ ಆಯ್ಕೆ: ನಗರಸಭೆ ಸಭಾಭವನದಲ್ಲಿ ಅ.1ರಂದು ಬೆಳಗ್ಗೆ 10 ರಿಂದ11 ಗಂಟೆ ವರೆಗೆ ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಮಧ್ಯಾಹ್ನ 1 ಗಂಟೆಗೆ ಸಭೆ ಆರಂಭವಾಗುತ್ತಿದ್ದಂತೆಯೇ ಪರಿಶೀಲನೆ ನಡೆಸಲಾಗುವುದು.…

Read More

ರಾಜ್ಯ ಸರ್ಕಾರದ ವಿರುದ್ಧ ಜಮಖಂಡಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಪ್ರತಿಭಟನೆ | ವಿದ್ಯಾರ್ಥಿಗಳಲ್ಲಿ ಭುಗಿಲೆದ್ದ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ವಿದ್ಯಾರ್ಥಿ ವೇತನ ಹಾಗೂ ಹಾಸ್ಟೆಲ್ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕ ವಿದ್ಯಾರ್ಥಿಗಳು ನಗರದ ದೇಸಾಯಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.ತಾಲೂಕು ಸಂಚಾಲಕ ಪುಂಡಿಲಕ ಪೂಜಾರಿ ಮಾತ ನಾಡಿ, ದೇಶದ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣ ವ್ಯ ವಸ್ಥೆ ಚನ್ನಾಗಿರಬೇಕು. ಶಿಕ್ಷಣಕ್ಕೆ ಬೇಕಾದ ಮೂಲಸೌಲ ಭ್ಯಗಳನ್ನು ಸರ್ಕಾರಗಳು ಕಲ್ಪಿಸಿಕೊಡಬೇಕು. ಇದು ಸರ್ಕಾರಗಳ ಆದ್ಯ ಕರ್ತವ್ಯವಾಗಿದೆ. ಗ್ರಾಮೀಣ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಆದರೆ ಅವುಗಳ ಸಮರ್ಪಕ ಅನುಷ್ಠಾನವಾಗದೆ ವಿದ್ಯಾರ್ಥಿಗಳು ತೊಂದರೆ ಅನುಭವಿ ಸುವಂತಾಗಿದೆ. ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸರಿ ಯಾದ ಹಾಸ್ಟೆಲ್‌ ವ್ಯವಸ್ಥೆ ಹಾಗೂ ವಿದ್ಯಾರ್ಥಿ ವೇತನ ವನ್ನು ನೀಡದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ…

Read More

ಮುತ್ತಿನಕಂತಿ ಹಿರೇಮಠದ ಶಿವಲಿಂಗಪಂಡಿತಾರಾಧ್ಯ ಶಿವಾಚಾರ್ಯರ ನೇತೃತ್ವ ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ˌಎಮ್ˌಇಟ್ಟಿಜಮಖಂಡಿ: ಕಳೆದ ರವಿವಾರದ ಸ್ವಚ್ಚತಾ ಅಭಿಯಾನದಲ್ಲಿ ಜಮಖಂಡಿ ನಗರದ ಕಿರಾಣಿ ವ್ಯಾಪಾರಸ್ಥರ ಸಂಘದ 50 ಸದಸ್ಯರ ಸಹಿತ 140 ಜನರು ಸ್ವಚ್ಚತಾ ಅಭಿಯಾನ ಶ್ರಮದಾನದಲ್ಲಿ ಪಾಲ್ಗೊಂಡು ಹಿಂದು ರುದ್ರಭೂಮಿ ಸ್ವಚ್ಚತೆಯಲ್ಲಿ ತೊಡಗಿಕೊಂಡಿದ್ದರು.ಜಮಖಂಡಿ ನಗರದ ರಾಜ್ಯ ಹೆದ್ದಾರಿಯಲ್ಲಿ ಬರತಕ್ಕ ಅಂದಾಜು 24 ಎಕರೆ ಪ್ರದೇಶದ ಹಿಂದು ರುದ್ರಭೂಮಿಯಲ್ಲಿ 4ನೇ ರವಿವಾರದ ಸ್ವಚ್ಚತಾ ಅಭಿಯಾನದ ಶ್ರಮದಾನದಲ್ಲಿ ನೂರೆಂಟು ಜನರು ಮತ್ತು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.ಕಳೆದ 4 ವಾರಗಳಿಂದ ಮುತ್ತಿನಕಂತಿ ಹಿರೇಮಠದ ಶಿವಲಿಂಗಪಂಡಿತಾರಾಧ್ಯ ಶಿವಾಚಾರ್ಯರ ನೇತೃತ್ವದಲ್ಲಿ ಆರಂಭ ಆಗಿರುವ ಸ್ವಚ್ಚತಾ ಅಭಿಯಾನ ಶ್ರಮದಾನ ಜಮಖಂಡಿ ಜನತೆ ಸಹಕಾರದಿಂದ ಹಿಂದು ರುದ್ರಭೂಮಿಯಲ್ಲಿ ಸ್ವಚ್ಚತಾ ಅಭಿಯಾನ ಯಶಸ್ವಿಯಾಗಿ ಮುನ್ನಡೆಯುತ್ತಿದೆ. 1ನೇ ರವಿವಾರ ನಡೆದ ಸ್ವಚ್ಚತಾ ಶ್ರಮದಾನದಲ್ಲಿ 25 ಜನರು, 2ನೇ ರವಿವಾರ 60 ಜನರು, 3ನೇ ರವಿವಾರ 85 ಜನರು ಪಾಲ್ಗೊಂಡಿದ್ದರು.ಶ್ರೀಗಳಿಂದ ಮನವಿ ಮುತ್ತಿನಕಂತಿ ಹಿರೇಮಠದ ಶಿವಲಿಂಗಪಂಡಿತಾರಾಧ್ಯ ಶಿವಾಚಾರ್ಯರು ಮತ್ತು ಓಲೇಮಠದ ಪ.ಪೂ.ಆನಂದದೇವರು ನೇತೃತ್ವದಲ್ಲಿ ಅನೈತಿಕ…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಒಂದಾನೊಂದು ಕಾಲದಲ್ಲಿ ಒಂದು ಹಳ್ಳಿಯಲ್ಲಿ ಒಬ್ಬ ಧೈರ್ಯಶಾಲಿಯಾದ ಪುಟ್ಟ ಹುಡುಗಿ ಇದ್ದಳು. ಸದಾ ತನ್ನ ಕೋಣೆಯ ಮಂಚದ ಮೇಲೆ ಮಲಗಿರುತ್ತಿದ್ದ ಆಕೆಗೆ ಅತ್ಯಂತ ಗಂಭೀರವಾದ ಕಾಯಿಲೆಯು ಆವರಿಸಿತ್ತು ಆಕೆಯ ಶಕ್ತಿಯೆಲ್ಲವೂ ಬಸಿದು ಹೋದಂತೆ ಆಗಿತ್ತು.. ಆದರೆ ಆಕೆಯ ಕನಸು ಕಾಣುವ ಶಕ್ತಿ ಮಾತ್ರ ಕುಂದಿರಲಿಲ್ಲ ಪ್ರತಿದಿನವೂ ಆಕೆ ತನ್ನ ಕೋಣೆಯ ಕಿಡಕಿಯಿಂದ ಹೊರಗೆ ಇರುವ ಮರವೊಂದನ್ನು ತದೇಕಚಿತ್ತದಿಂದ ನೋಡುತ್ತಾ ನಿಲ್ಲುತ್ತಿದ್ದಳು. ಗಿಡದಿಂದ ಒಂದೊಂದಾಗಿ ಎಲೆಗಳು ಉದುರುವುದು ಆಕೆಗೆ ಸೋಜಿಗದ ವಿಷಯವಾಗಿತ್ತು.ಒಂದು ದಿನ ಮಧ್ಯಾಹ್ನದ ಸಮಯದಲ್ಲಿ ಅತ್ಯಂತ ಸೋತ ದನಿಯಲ್ಲಿ ಆಕೆ ತನ್ನ ಅಕ್ಕನಿಗೆ ಹೀಗೆ ಹೇಳಿದಳುಆ ಗಿಡದಲ್ಲಿ ಇನ್ನು ಎಷ್ಟು ಎಲೆಗಳು ಉದುರುವುದು ಬಾಕಿ ಉಳಿದಿವೆ?ಅತಿಯಾದ ನೋವಿನಿಂದ ಆಕೆಯ ಸಹೋದರಿ ಆಕೆಯ ಬಳಿ ಬಂದು ಆಕೆಯ ಹಣೆಯನ್ನು ನೇವರಿಸುತ್ತಾ ಯಾಕೆ ಹೀಗೆ ಕೇಳುತ್ತಿರುವೆ ಎಂದು ಪ್ರೀತಿಯಿಂದ ಕೇಳಿದಳು.ಯಾಕೆಂದರೆ ಆ ಗಿಡದ ಕೊನೆಯ ಎಲೆ ಉದುರಿದ ದಿನವೇ ನನ್ನ ಕೊನೆಯ ದಿನ…

Read More

ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಡಾ. ಶಶಿಕಾಂತ ಪಟ್ಟಣ ಅವರ ನೇತೃತ್ವದಲ್ಲಿ ನಮ್ಮ ವೇದಿಕೆ ಯಿಂದ ಮೂರನೆಯ ವರ್ಷದ ಶರಣ ಮಾಸದ ಉಪನ್ಯಾಸಗಳು ಜುಲೈ 24 ರಿಂದ ಆಗಸ್ಟ್ 26 ರವರೆಗೆ ಒಂದು ತಿಂಗಳ ಕಾಲ ಸತತವಾಗಿ ನಡೆಯುತ್ತಿವೆ.ಗುರುವಾರ ಶರಣ ಮಾಸದ ಮೊದಲ ದಿನ ಪರಮಪೂಜ್ಯಶಿವರುದ್ರಸ್ವಾಮಿಗಳು – ಬೇಲಿಮಠ -ಬೆಂಗಳೂರು ಇವರು “ಶರಣರ ದೃಷ್ಟಿಯಲ್ಲಿ ಶಿವಯೋಗ” ಈ ವಿಷಯದ ಕುರಿತು ನಮ್ಮ ಜೊತೆಗೆ ಹಂಚಿಕೊಂಡರು.ಶಿವ ಎಂದರೆ ಅಂತರಂಗದ ಸಾಧನೆ, ಸಂದೇಹವಿಲ್ಲದ ಸ್ಪಷ್ಟವಾದ ಮಾರ್ಗ, ಎಲ್ಲರಿಗೂ ಮಂಗಳವನ್ನು ಮಾಡುವುದು, ತನ್ನೊಳಗಿನ ನೆಲೆಯನ್ನು ಕಂಡುಹಿಡಿದುಕೊಳ್ಳುವುದು, ತನ್ನ ನಿಜ ಸ್ಥಿತಿ ಅರಿಯಬೇಕಾದದ್ದು ಎನ್ನುವುದನ್ನು ಸ್ಪಷ್ಟ ಪಡಿಸಿದರು.ನಂತರದಲ್ಲಿ ಬಸವನಿಜಯೋಗವನ್ನು ತಿಳಿಯಪಡಿಸುತ್ತ, ಹಲವಾರು ಶರಣರ ವಚನಗಳ ಉಲ್ಲೇಖದೊಂದಿಗೆ, ನಡೆ-ನುಡಿ ಸಹಜ ರೀತಿಯಲ್ಲಿ ಹೇಗೆ ಅನುಭಾವಿಕ ನೆಲೆಯಲ್ಲಿ ಇರಬೇಕು, ಆಯತ, ಸ್ವಾಯತ ಸನ್ನಿಹಿತದ ವಿವರಣೆಯೊಂದಿಗೆ ಅಂತರ್ಮುಖಿಯಾಗಿ ಹೇಗೆ ಸಾಧನೆ ಮಾಡಬೇಕು, ನಾನು ನೀನು ಎಂಬ ಭೇದವಳಿದು…

Read More

ಲೇಖನ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೆಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಶ್ರೀಮತಿ ಗೌರಮ್ಮ ನಾಶಿ ಅವರು ನಮ್ಮ ಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ – ಪುಣೆ ಸಂಸ್ಥೆಯ ಆಜೀವ ಸದಸ್ಯರು, ದತ್ತಿ ದಾಸೋಹಿಗಳು ಮತ್ತು ನಮ್ಮೆಲ್ಲರ ಮಾತೃಸ್ವರೂಪಿ ಸ್ಥಾನದಲ್ಲಿರುವವರು. ಒಬ್ಬ ನಿಷ್ಠುರ, ದಿಟ್ಟ, ನೇರನುಡಿಯ, ಸರಳ ವ್ಯಕ್ತಿತ್ವದ, ಅರಿವಿನ ಆಳವನ್ನು ತಿಳಿದಿರುವ, ಆಚರಣೆಯೇ ಮುಖ್ಯ ಎನ್ನುವ ನಿಲುವನ್ನು ತಳೆದಿರುವ ಶರಣೆ ಎನ್ನುವುದರಲ್ಲಿ ಎರಡು ಮಾತಿಲ್ಲ.ಗೌರಮ್ಮ ಅವರ ಹುಟ್ಟಿದ ಊರು ಬಾಗಲಕೋಟ ಜಿಲ್ಲೆಯ ಗುಳೇದಗುಡ್ಡ. ಇವರು ಎಂ.ಎ. ಕನ್ನಡದಲ್ಲಿ ತಮ್ಮ ಶಿಕ್ಷಣವನ್ನು ಪೂರೈಸಿದ್ದಾರೆ. ಗೌರಮ್ಮ ಅವರು ರಾಧಾಕೇಸರಿ ವಿದ್ಯಾಸಂಸ್ಥೆಯ ಅಲೋಕ್ ಇಂಗ್ಲೀಷ್ ಮಾಧ್ಯಮ ಶಾಲೆಯಲ್ಲಿ ಮೂರು ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ನಂತರದಲ್ಲಿ ಪ್ರತಿಷ್ಠಿತ ಬಸವೇಶ್ವರ ವಿದ್ಯಾವರ್ಧಕ ಸಂಘದಲ್ಲಿ ಕಚೇರಿ ಅಧೀಕ್ಷಕರಾಗಿ ಸೇವೆಯನ್ನು ಮಾಡಿದ್ದಾರೆ. 1968-69 ರಲ್ಲಿ ಶಿವಾನುಭವ ಪಾಠಶಾಲೆಯನ್ನು ಪೂರೈಸಿದ್ದಾರೆ.ಗೌರಮ್ಮ ಅವರ ತಂದೆ ತಾಯಿ ಹೆಚ್ಚು ಶಿಕ್ಷಿತರಲ್ಲದಿದ್ದರೂ ಸುಸಂಸ್ಕೃತರು. ತಂದೆಯ ಮೂಲಸ್ಥರು ಬಿದರಕೋಟೆ ಗೌಡರು. ನಿಜಾಮರ ಆಳ್ವಿಕೆಯ ಪರಿಣಾಮವಾಗಿ…

Read More

ಮಹದಾಯಿ ಯೋಜನೆ ಕುರಿತು ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಗರಂ | ಬಿಜೆಪಿ ಸಂಸದರ ವಿರುದ್ಧ ವಾಗ್ದಾಳಿ ಬೆಂಗಳೂರು: ಮಹದಾಯಿಗೆ ಕೇಂದ್ರ ಸರ್ಕಾರ ಅನುಮತಿ ಕೊಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.ಗೋವಾ ಸಿಎಂ ಹೇಳಿಕೆಯನ್ನ ನಾನು ಖಂಡಿಸುತ್ತೇನೆ. ಗೋವಾ ಸಿಎಂ ಮಾನಸಿಕ ಸ್ಥಿಮತ ಕಳೆದುಕೊಂಡಿದ್ದಾರೆ. ಗೋವಾ ಸಿಎಂಗೆ ಫೆಡರಲ್‌ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ.ಈಗಾಗಲೇ ಮಹದಾಯಿ ಯೋಜನೆ ಬಗ್ಗೆ ಅವಾರ್ಡ್ ತೀರ್ಮಾ ಆಗಿದೆ. ಟೆಂಡರ್ ಕೂಡ ಕರೆಯಲಾಗಿದೆ. ಕೆಲಸ ಶುರು ಮಾಡಬೇಕು. ಇದರ ಮಧ್ಯೆ ಅರಣ್ಯ ಇಲಾಖೆ ಏನೋ ನೊಟೀಸ್‌ ಕೊಟ್ಟಿದೆ. ನಾವು ಅದಕ್ಕೆ ಎಲ್ಲಾ ಉತ್ತರ ಕೊಡುತ್ತೇವೆ. ಮಹದಾಯಿ ವಿಷಯದಲ್ಲಿ ನಮ್ಮ ಕೆಲಸ ನಾವು ಪ್ರಾರಂಭ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.ಸಂಸದ ಸ್ಥಾನಕ್ಕಾಗಿ ರಾಜ್ಯವನ್ನು ಮಾರಿಕೊಳ್ಳೋದಕ್ಕೆ ಆಗಲ್ಲ, ಸಂಸದರ ವಿರುದ್ಧ ಡಿಸಿಎಂ ಗರಂಇದೇ ವೇಳೆ ಮಹದಾಯಿ ವಿಷಯವಾಗಿಯೂ ಅಸಮಾಧಾನ ವ್ಯಕ್ತಪಡಿಸಿರುವ ಡಿಕೆ ಶಿವಕುಮಾರ್,…

Read More