Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ವಿದ್ಯುತ್ ವಿತರಣಾ ಲಿಂಕ್ ಲೈನ್ ಕಾಮಗಾರಿ ಕಾರಣ ದಿ:೨೬ ರಂದು(ಶನಿವಾರ) ೧೧೦/೧೧ ಕೆ.ವ್ಹಿ ದೇವರಹಿಪ್ಪರಗಿ ಸ್ಟೇಷನ್ನಿಂದ ಹೋಗುವ ದೇವರಹಿಪ್ಪರಗಿ ಎನ್.ಜೆ.ವಾಯ್, ಇಂಗಳಗಿ ಎನ್.ಜೆ.ವಾಯ್, ಕನ್ನೋಳ್ಳಿ ಎನ್.ಜೆ.ವಾಯ್, ಇಂಗಳಗಿ ಐ.ಪಿ, ಪಡಗಾನೂರ ಐ.ಪಿ, ಹರನಾಳ ಹೊಸ ಹಾಗೂ ಹಳೆಯ ಐಪಿ, ಫೀಡರ್ಗಳ ಮೇಲೆ ಬೆಳಿಗ್ಗೆ ೯.೦೦ ಗಂಟೆಯಿAದ ಸಾಯಂಕಾಲ ೬.೦೦ ಗಂಟೆಯವರೆಗೆ ವಿದ್ಯುತ್ ಮಾರ್ಗಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಕಾರಣ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕಾಗಿ ಹೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರ ದೇವರಹಿಪ್ಪರಗಿ ಇವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜಕೀಯ ದುರುದ್ದೇಶದಿಂದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ಧ ದಾಖಲಿಸಿದ್ದ ಅರ್ಜಿಯನ್ನು ಕರ್ನಾಟಕ ಸರ್ವೋಚ್ಛ ನ್ಯಾಯಾಲಯವು ಇದೇ ಜು.18 ಶುಕ್ರವಾರ ದಂದು ವಜಾಗೊಳಿಸಿದೆ.2023ರ ವಿಧಾನಸಭಾ ಚುನಾವಣೆಯಲ್ಲಿ ನಗರ ಶಾಸಕರ ವಿರುದ್ಧ ಸೋಲು ಕಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಖಾಜಾಸಾಬ್ ಮುಶ್ರೀಪ್, ಹತಾಶನಾಗಿ 2023 ರ ಜೂನ್ 23 ರಂದು ದೂರು ನೀಡಿದ್ದರು. ಇದನ್ನು 2023ರ ಜುಲೈ 12 ರಂದು ಮಾನ್ಯ ಹೈಕೋರ್ಟ ಅರ್ಜಿ ವಜಾಗೊಳಿಸಿದಲ್ಲದೆ, ರೂ.1 ಲಕ್ಷ ದಂಡ ಹಾಕಿ ಛಿಮಾರಿ ಹಾಕಿತ್ತು. ಹೈಕೋರ್ಟ ತೀರ್ಪು ಪ್ರಶ್ನಿಸಿ ಮತ್ತೆ ಮಾನ್ಯ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮೇಲ್ಮನವಿಯನ್ನು ಸಹ ನ್ಯಾಯಾಲಯವು ವಜಾಗೊಳಿಸಿದೆ. ಇದರಿಂದ ಸುಳ್ಳು ಆರೋಪ ಮಾಡಿ ವಿನಾಕಾರಣ ನ್ಯಾಯಾಲಯದ ಸಮಯ ವ್ಯರ್ಥ ಮಾಡಿರುವ ಇವರಿಗೆ ಮುಖಭಂಗವಾದಂತಾಗಿದೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಇತ್ತೀಚಿಗೆ ಜರುಗಿದ ರೈತ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ತಾಲ್ಲೂಕಿನ ಪ್ರಗತಿಪರ ಸಾವಯವ ಕೃಷಿಕ ಹಾಗೂ ನಿವೃತ್ತ ಶಿಕ್ಷಕ ಎಮ್.ಎಸ್.ಅರ್ಜುಣಗಿ ಇವರಿಗೆ ಜೋಡಿರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ವಿವಿಧ ಸಹಕಾರ ಸಂಘ, ಸಂಸ್ಥೆಗಳ ನಿರ್ದೇಶಕರು ಹಾಗೂ ಸಿಬ್ಬಂದಿ ಸಹಕಾರ ಭಾರತಿಯ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ವಿವಿಧ ಪದಾಧಿಕಾರಿಗಳ ಹುದ್ದೆಗೆ ನೇಮಗೊಂಡಿದ್ದಾರೆ.ಪಟ್ಟಣದ ರಾವುತರಾಯ ಮಲ್ಲಯ್ಯ ದೇವಸ್ಥಾನ ಕಮೀಟಿ ಅಧ್ಯಕ್ಷ ವಿನೋದಗೌಡ ಪಾಟೀಲ ಸಹಕಾರ ಭಾರತಿ ದೇವರಹಿಪ್ಪರಗಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ, ಸಮೃದ್ಧಿ ಸಹಕಾರ ಸಂಘದ ನಿರ್ದೇಶಕ ಕೆ.ಎಸ್.ಕೋರಿ ತಾಲ್ಲೂಕು ಘಟಕದ ಸಂಘಟನಾ ಕಾರ್ಯದರ್ಶಿಯಾಗಿ, ಹಾಗೂ ಕಲ್ಮೇಶ್ವರ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ಯಲ್ಲಾಲಿಂಗ ವಡ್ಡೋಡಗಿ ಇವರು ತಾಲ್ಲೂಕು ಘಟಕದ ಪ್ರಧಾನಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.ವೀರಭದ್ರೇಶ್ವರ ಸೌಹಾರ್ದ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಸಿದ್ದು ಆನಂದಿ ಜಿಲ್ಲಾ ಘಟಕದ ಸದಸ್ಯ ಸ್ಥಾನಕ್ಕೆ ನೇಮಕಗೊಂಡಿದ್ದಾರೆ ಎಂದು ಸಹಕಾರ ಭಾರತಿ ವಿಜಯಪುರ ಜಿಲ್ಲಾ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ವಿಜಯಪುರ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಬೆಂಗಳೂರಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ವಿಜಯಪುರ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಜುಲೈ ೩೦ರ ಬೆಳಿಗ್ಗೆ ೯ಗಂಟೆಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರ ಹಮ್ಮಿಕೊಳ್ಳಲಾಗಿದೆ.ಹೊಸದಾಗಿ ಸ್ಥಾಪಿಸಬಹುದಾದ ಉದ್ಯಮದ ಮಾಹಿತಿ, ಕೈಗಾರಿಕೆ ಇಲಾಖೆ ಮತ್ತು ಬ್ಯಾಂಕಿನಿಂದ ಸಿಗಬಹುದಾದ ಸಹಾಯ ಸೌಲಭ್ಯಗಳ ಮಾಹಿತಿ ಹಾಗೂ ಯಶಸ್ವಿ ಉದ್ಯಮಿದಾರರು ಈ ಶಿಬಿರದಲ್ಲಿ ತಮ್ಮ ಅನುಭವವನ್ನು ಹಂಚಿಕೆಕೊಳ್ಳಲಿದ್ದು, ೨೦ ರಿಂದ ೪೫ ವರ್ಷದೊಳಗಿನ ಆಸಕ್ತರು ತಮ್ಮ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ.೮೮೮೪೧೮೪೪೩೯ ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಭೂತನಾಳ ಕೆರೆ ಹತ್ತಿರದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಜುಲೈ೨೫ರಂದು ಕಟ್ಲಾ ಮತ್ತು ರೋಹು ಮೀನು ಮರಿಗಳನ್ನು ತಲಾ ೧ ರೂ. ನಂತೆ ಮಾರಾಟ ಮಾಡಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ೯೯೪೫೯೫೯೭೦೪, ೯೯೦೦೭೭೬೨೦೫, ೦೮೩೫೨-೨೬೪೫೧೬ ಹಾಗೂ ೯೪೮೦೫೧೮೬೭೯ ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಜಿಲ್ಲಾ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಾಲಿ ಬಸವೇಶ್ವರ ಸರ್ಕಲ್ ಹತ್ತಿರವಿರುವ ಕಣಬೂರು ಕಾಂಪ್ಲೆಕ್ಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ತಿಕೋಟಾದ ಉಪ ಖಜಾನೆ ಕಚೇರೆಯು ಜುಲೈ ೨೮ರಿಂದ ತಿಕೋಟಾದ ಪ್ರಜಾಸೌಧಕ್ಕೆ ಸ್ಥಳಾಂತರಗೊಳ್ಳಲಿದ್ದು, ಸಾರ್ವಜನಿಕರು ಇನ್ನು ಮುಂದೆ ಖಜಾನೆ ಸೇವೆಗಳನ್ನು ಸ್ಥಳಾಂತರಗೊAಡಿರುವ ನೂತನ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ವಿಜಯಪುರ ಜಿಲ್ಲಾ ಖಜಾನೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ ಒದಗಿಸುವ ಮೂಲಕ ಡಿಜಿಟಲ್ ಟಚ್ ನೀಡಲಾಗುತ್ತಿದೆ ಎಂದು ಆಶಾ ಎಂ. ಪಾಟೀಲ ಹೇಳಿದ್ದಾರೆ.ಗುರುವಾರ ತಿಕೋಟಾ ತಾಲೂಕಿನ ಅರಕೇರಿಯ ಸರಕಾರಿ ಪ್ರೌಢಶಾಲೆಯಲ್ಲಿ ಎಕಸ್ ಸಂಸ್ಥೆಯಿಂದ ಸಿ.ಎಸ್.ಆರ್ ಅನುದಾನದಡಿ ಮಂಜೂರಾಗಿರುವ ಸ್ಮಾರ್ಟ್ ಬೋರ್ಡ್ ಉದ್ಘಾಟನೆ ಮತ್ತು ಧಾಸ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಅರಕೇರಿ ಎಲ್.ಟಿ-3ರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾ ಸಲಕರಣೆ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಮಹಾನಗರಗಳ ಖಾಸಗಿ ಶಾಲೆಗಳಲ್ಲಿ ಸಿಗುವ ಅತ್ಯಾಧುನಿಕ ಸೌಲಭ್ಯಗಳನ್ನು ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಒದಗಿಸಲು ಸಚಿವ ಎಂ. ಬಿ. ಪಾಟೀಲ ಅವರು ಸಿ.ಎಸ್.ಆರ್ ಅನುದಾನವನ್ನು ಬಳಸಿ ಸ್ಮಾರ್ಡ್ ಬೋರ್ಡ್ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಂಡಿದ್ದಾರೆ. ಈ ಅನುದಾನವನ್ನು ಬಳಸಿ ಬಬಲೇಶ್ವರ ಮತಕ್ಷೇತ್ರದ ಸರಕಾರಿ ಶಾಲೆಗಳಲ್ಲಿ ಕಳೆದ ವರ್ಷ 25 ಮತ್ತು ಈ ವರ್ಷ 25 ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸಲಾಗಿದೆ. ಇದರಿಂದಾಗಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆ ಕಟ್ಟಿ ಬೆಳೆಸಿದ ಡಾ. ಫ.ಗು.ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಬಿ.ಎಂ.ಪಾಟೀಲ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ ದಿ.27 ರವಿವಾರ ಬೆ. 10.30 ಗಂ. ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಗ್ರಂಥಾಲಯ ಸಭಾಂಗಣದಲ್ಲಿ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರದ ಚಿಂತನ-ಸಾಂಸ್ಕೃತಿಕ ಬಳಗದ ವತಿಯಿಂದ ಆಯೋಜಿಸಲಾಗಿದೆ.ಬೆಂಗಳೂರಿನ ಬೇಲಿಮಠ ಮಹಾಸಂಸ್ಥಾನ ಮಠದ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದಾರೆ. ಬಿ.ಎಲ್.ಡಿ.ಇ ಅಧ್ಯಕ್ಷ, ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಚಿಂತನ ಬಳಗ ಕಾರ್ಯದರ್ಶಿ ಡಾ.ಮಹಾಂತೇಶ ಬಿರಾದಾರ ತಿಳಿಸಿದ್ದಾರೆ.
ಅ.೧ ರಂದು ಶಾಲೆಗೆ ಬೀಗ ಹಾಕಿ ಪ್ರತಿಭಟಿಸಲು ಬಳ್ಳೊಳ್ಳಿ ಗ್ರಾಮಸ್ಥರ ನಿರ್ಧಾರ ಉದಯರಶ್ಮಿ ದಿನಪತ್ರಿಕೆ ಚಡಚಣ: ಇತ್ತಿತ್ತಲಾಗಿ ಸರಕಾರಿ ಶಾಲೆಗಳ ಜಮೀನನ್ನೆ ಒತ್ತುವರಿ ಮಾಡುವದು ಸರ್ವೆಸಾಮಾನ್ಯವಾಗಿದೆ ಇದಕ್ಕೆಲ್ಲ ಮುಖ್ಯ ಕಾರಣ ಗ್ರಾ.ಪಂ. ಅಥವಾ ಪ.ಪಂ. ಅಧಿಕಾರಿಗಳೆ ನೇರ ಹೋಣೆ ಏಕೆಂದರೆ ಕಾನೂನು ಬಾಹೀರವಾಗಿ ಹಣದ ಆಮಿಷಕ್ಕೆ ಒಳಗಾಗಿ ನಕಲಿ ಜಾಗದ ಉತಾರೆ ತಯಾರಿಸಿ ಕೊಡುತ್ತಿರುವದು, ಮುಂದಿನ ದಿನಮಾನಗಳಲ್ಲಿ ತುಂಬಾ ಅಪಾಯಕಾರಿಯಾಗಿದೆ. ಇದಕ್ಕೆ ಗ್ರಾ.ಪಂ.ಸದಸ್ಯರ ಒಲವು ಇಲ್ಲದೆ ಇಂಥಹ ಒತ್ತುವರಿ ಕೆಲಸಕ್ಕೆ ಯಾವ ಗ್ರಾ.ಪಂ.ಅಧಿಕಾರಿ ಒಪ್ಪುವದಿಲ್ಲ ಇಂಥಹ ಪ್ರಕರಣಗಳು ಹಳ್ಳಿಗಳಲ್ಲಿ ಅಲ್ಲದೆ ಪಟ್ಟಣಗಳಲ್ಲಿಯೂ ಪ್ರಕರಣಗಳು ನಡೆದಿದ್ದರು ಸರಕಾರದ ಅಧಿಕಾರಿಗಳ ಗಮನಕ್ಕೆ ತಂದರು ಏನು ಕ್ರಮ ಕೈಗೋಳ್ಳದಿರುವದು ಹಲವು ಅನುಮಾನಗಳಿಗೆ ಕಾರಣವಾಗುತ್ತಿವೆ.ಇದಕ್ಕೆ ಪುಷ್ಟಿ ಎಂಬಂತೆ ಬಳ್ಳೊಳ್ಳಿ ಗ್ರಾಮದ ಸರಕಾರಿ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಒತ್ತುವರಿ ಮಾಡಿದ್ದನ್ನು ತೆರವು ಮಾಡಬೇಕು ಎಂದು ಆಗ್ರಹಿಸಿ ಅ.೦೧ ರಿಂದ ಶಾಲೆಗೆ ಬೀಗ ಜಡಿಯುವುದಾಗಿ ಬಳ್ಳೊಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಎಚ್ಚರಿಸಿದ್ದಾರೆ.ಈ ಕುರಿತು…
