Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಚಡಚಣ: ಮೊಟ್ಟ ಮೊದಲ ಬಾರಿಗೆ ಹವ್ಯಾಸಿ ಹಾಡುಗಾರರಿಗೋಸ್ಕರ ‘ಸ್ನೇಹಸಂಗಮ ಮೆಲೊಡೀಸ್ ಹಾಗೂ ಸ್ನೇಹಸಂಗಮ ಕರೋಕೆ ಸ್ಟುಡಿಯೋ ಚಡಚಣ’ ಇವರ ನೇತೃತ್ವದಲ್ಲಿ ಈಗಾಗಲೇ ವೇದಿಕೆ ಮೇಲೆ ಕಾರ್ಯಕ್ರಮ ಕೊಡುತ್ತಿರುವ ಪ್ರೊಫೆಷನಲ್ ಗಾಯಕರನ್ನು ಹೊರತುಪಡಿಸಿ ‘ನಾವೇನು ಬಾತ್ರೂಮ್ ಸಿಂಗರ್’ ಅಂತ ಹೇಳ್ತೀವಿ ಅಂತಹ ಸಂಗೀತ ಆಸಕ್ತರನ್ನ ಒಗ್ಗೂಡಿಸಿ, ಅವರಲ್ಲಿನ ಸಿಂಗಿಂಗ್ ಟ್ಯಾಲೆಂಟ್ ಅನ್ನು ಗುರುತಿಸಿ, ಸಂಗೀತ ತಜ್ಞರ ಹಾಗೂ ಗಾಯಕರ ಮಾರ್ಗದರ್ಶನ ಕೊಡಿಸಿ, ಸಮಾಜಕ್ಕೆ ಪರಿಚಯಿಸಲು “ಕ್ರೇಜಿ ಸಿಂಗರ್ ಅವಾರ್ಡ್- 2025 ಇವೆಂಟ್” ಎಂಬ ಉತ್ತಮ ವೇದಿಕೆಯೊಂದು ಸಿದ್ಧಗೊಂಡಿದೆ.ಚಡಚಣ ಪಟ್ಟಣದಲ್ಲಿ ಇದೇ ಜುಲೈ. 27 ರ ಭಾನುವಾರದಂದು ಬೆಳಿಗ್ಗೆ 09-00 ಗಂಟೆಗೆ ಚಡಚಣ ಪಟ್ಟಣದಲ್ಲಿರುವ ವಿದ್ಯಾಭಾರತಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದು, ಆಸಕ್ತರು ಭಾಗವಹಿಸಲು ತಮ್ಮ ಹೆಸರು ಹಾಗೂ ಸ್ವವಿವರದೊಂದಿಗೆ ಸ್ನೇಹಸಂಗಮ ಕರೋಕೆ ಸಿಂಗಿಂಗ್ ಸ್ಟುಡಿಯೋ, ಕೃಷ್ಣಾ ಕಾಂಪ್ಲೆಕ್ಸ್, ಬಸ್ ನಿಲ್ದಾಣ ಚಡಚಣ ಅಥವಾ ಹೆಚ್ಚಿನ ಮಾಹಿತಿಗಾಗಿ ಆಯೋಜಕರಾದ ಗಜಾನಂದ ಸುತಾರ ಮೋ. 9964624624 ಇಲ್ಲಿಗೆ ಸಂಪರ್ಕಿಸಿ, ಜುಲೈ. 26…
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಬ್ಯಾಂಕ್ ಆಪ್ ಬರೋಡಾ ಶಾಖೆಯಲ್ಲಿ ೧೧೮ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ವ್ಯವಾಸ್ಥಾಪಕರಾದ ಅನೀಲಕುಮಾರ ಮಾತನಾಡಿ, ಸತತವಾಗಿ ೧೧೮ ವರ್ಷಗಳಿಂದ ಉತ್ತಮ ಗ್ರಾಹಕರ ಸ್ನೇಹಿ ಸೇವೆ ಸಲ್ಲಿಸುತ್ತಿರುವ ಬ್ಯಾಂಕ ಹತ್ತಾರು ಲಾಭದಾಯಕವಾದ ಉಳಿತಾಯ ಯೋಜನೆಗಳನ್ನು ತಂದಿದ್ದು ಗ್ರಾಹಕರು ಇದರ ಸದುಪಯೋಗ ಪಡೆಯಬೇಕೆಂದರು.ಈ ಸಂದರ್ಭದಲ್ಲಿ ಕಿರಿಯ ವ್ಯವಸ್ಥಾಪಕ ಚಂದ್ರಶೇಖರ ರಾಠೋಡ, ನಿಂಗಪ್ಪ ಭಜಂತ್ರಿ, ಬ್ಯಾಂಕ ಸಿಬ್ಬಂದಿಗಳಾದ ಗೂಳಪ್ಪ ವಡ್ಡೋಡಗಿ, ಗುರುರಾಜ ಅಡಕಿ, ಸಾಯಿ ನಾಯಕ್, ಮಹಾಂತೇಶ ಹಿಪ್ಪರಗಿ, ಪ್ರಜ್ವಲ್ ಅಡಕಿ, ಪ್ರಮೋದ ಬಿರಾದಾರ, ಯಲಗೂರಪ್ಪ ವಡ್ಡೋಡಗಿ, ಮೌನೇಶ ಅರಕೇರಿ ಉಪಸ್ಥಿತರಿದ್ದರು.
ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ವರ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಾಮಾನ್ಯ ಕಾನೂನಿನ ಅರಿವು ವ್ಯಾಪಕವಾಗಿ ಹದಿಹರೆಯದ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಕೆಯಾದಾಗ ಮಾತ್ರವೇ ದೇಶದ ಬದಲಾವಣೆ ಸಾಧ್ಯ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ವರ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯಲ್ಲಿ ನಡೆದ ವಿದ್ಯಾ ಭಾರತಿ ಕರ್ನಾಟಕ ವಿಜಯಪುರ ಜಿಲ್ಲಾ ಸಂಕುಲಗಳ ಶಾಲೆಗಳ ೨೦೨೫-೨೬ನೇ ಸಾಲಿನ ಶೈಕ್ಷಣಿಕ ಸಹಮಿಲನದಲ್ಲಿ ಕಾರ್ಯಕ್ರಮವನ್ನು ಉದ್ಘಾಟಸಿ ಅವರು ಮಾತನಾಡಿದರು.ಸಂಸ್ಕಾರದ ಆಯ್ಕೆಯಲ್ಲಿ ಬದುಕಿನ ಉಸಿರು ಅಡಗಿರುತ್ತದೆ. ತಾಯಿ, ರೈತ, ಶಿಕ್ಷಕರುಗಳಿಗೆ ಯಾವುದೇ ಜಾತಿ, ಬೇಧ-ಭಾವ ಸಂಕೋಲೆಗಳ ಬಂಧನವಿಲ್ಲ. ಸಮಾಜದ ಅನಿಷ್ಠ ಪದ್ಧತಿ ದೂರವಾಗಬೇಕಾದರೆ ವಿದ್ಯಾರ್ಥಿ ದೆಸೆಯಲ್ಲಿಯೆ ವ್ಯಾಸಂಗ ಮಾಡಿರಬೇಕು ಎಂದರು.ಕೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಮಾತನಾಡಿ ವಿದ್ಯಾ ಭಾರತಿ ಸಂಕುಲಗಳು ಭಾರತೀಯ ಚಿಂತನೆಗಳನ್ನು ಎತ್ತರಿಸುವ ಪ್ರಯತ್ನ ಮಾಡುತ್ತಿದೆ. ನಮ್ಮೆಲ್ಲರಲ್ಲಿ ನಾವೆಲ್ಲ ಒಂದು ಎನ್ನುವ ಭಾವೆನೆ ಸದಾ ಇರಬೇಕು. ಶಿಕ್ಷಕರು ತಮ್ಮಲ್ಲಿ ವಿದ್ಯಾರ್ಥಿಗಳನ್ನ ವಿವಿಧ ಕ್ಷೇತ್ರದ ಬೆಳವಣಿಗೆಗೆ ಬೇಕಾದ ತ್ಯಾಗಕ್ಕೆ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಕೃಷಿ ಮಾರುಕಟ್ಟೆಯಿಂದ ನಮ್ಮ ರೈತರಿಗೆ, ಕಾರ್ಯಕರ್ತರಿಗೆ ದೊರೆಯುವ ಪ್ರತಿಯೊಂದು ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸುವ ಕಾರ್ಯ ಮಾಡುತ್ತೆನೆಂದು ಎಪಿಎಂಸಿ ನಾಮನಿರ್ದೆಶಿತ ಸದಸ್ಯ ಉಮೇಶ ಪೂಜಾರಿ ಹೇಳಿದರು.ಗ್ರಾಮದ ಕಾಂಗ್ರೆಸ್ ಕಛೇರಿ, ಹಾಗೂ ಮನೆಯ ಆವರಣದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಪಕ್ಷ ನನಗೆ ನೀಡಿರುವ ಈ ಅವಕಾಶವನ್ನು ಬಳಸಿಕೊಂಡು ಉತ್ತಮ ಸೇವೆ ಸಲ್ಲಿಸುವ ಮೂಲಕ ಪಕ್ಷಕ್ಕೆ ಕೊಡುಗೆ ನೀಡುತ್ತೇನೆ, ಪ್ರತಿಯೊಬ್ಬ ಕಾರ್ಯಕರ್ತರು ತಮ್ಮಲ್ಲಿರುವ ಸಣ್ಣಪುಟ್ಟ ಭಿನ್ನಾಬಿಪ್ರಾಯಗಳನ್ನು ಬದಿಗೊತ್ತಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬರು ಕೈಜೋಡಿಸಬೇಕು.ಗ್ರಾ.ಪಂ. ಸದಸ್ಯ ಮಹಾಲಿಂಗ ಮಾಯನ್ನವರ ಮಾತನಾಡಿ ಚಿಮ್ಮಡ ಗ್ರಾಮಸ್ಥರಿಗೆ ಸರಕಾರ ಎಪಿಎಂಸಿ ನಾಮನಿರ್ದೆಶಕ ಸ್ಥಾನವನ್ನು ನೀಡುವ ಮೂಲಕ ಉತ್ತಮ ಅವಕಾಶವನ್ನು ನೀಡಿದ್ದುಉ ಅದನ್ನು ಸದುಪಯೋಗ ಪಡೆದುಕೊಳ್ಳುತ್ತೇವೆ. ಅವಕಾಶ ನೀಡಿದ ಎಲ್ಲರನ್ನು ಗ್ರಾಮಸ್ಥರ ಪರವಾಗಿ ಅಭಿನಂದಿಸುತ್ತೇವೆಂದರು. ಪ್ರಮುಖರಾದ ಅಶೋಕ ಮೋಟಗಿ, ಗ್ರಾ. ಪಂ ಸದಸ್ಯ ಚನ್ನಪ್ಪ ಪೂಜಾರಿ, ಅರುಣ ಗಾಣಿಗೇರ, ಶ್ರೀಶೈಲ ಮಠಪತಿ, ಮಹಾಲಿಂಗ ಬಳಗಾರ, ಪಿರಸಾಬ ನದಾಫ, ಅಶೋಕ ಚಿಮ್ಮಡ, ಮಹಾದೇವ ಕೋಳಿ,…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದಲ್ಲಿ ತೇರದಾಳ ಶಾಸಕ ಸಿದ್ದು ಸವದಿಯವರ ೬೬ ನೇ ಜನ್ಮದಿನಾಚರಣೆಯ ನಿಮಿತ್ತ ಸ್ಥಳಿಯ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯ, ಸರಕಾರಿ ಪ್ರೌಢಶಾಲೆ ಹಾಗೂ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಬಡ ವಿದ್ಯಾರ್ಥಿಗಳಿಗೆ ನೋಟ್ಬುಕ್ಗಳನ್ನು ವಿತರಿಸಲಾಯಿತು.ಜನ್ಮದಿನಾಚರಣೆಯ ನಿಮಿತ್ತ ಮಂಗಳವಾರ ಮುಂಜಾನೆ ಸ್ಥಳಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಆಗಮಿಸಿದ ಶಾಸಕ ಸವದಿಯವರಿಗೆ ಗ್ರಾಮದ ಪ್ರಮುಖರಾದ ಶಾಸಕರ ಸೂಚನೆಯಂತೆ ಶಾಲು, ಹೂವಿನಹಾರ ತರದೆ ಬಡ ವಿದ್ಯಾರ್ಥಿಗಳಿಗೆ ಅಗತ್ಯವಾಗುವ ನೋಟ್ಬುಕ್ ನೀಡುವ ಮೂಲಕ ಶುಭಾಶಯ ಕೋರಿದರು. ಸ್ಥಳದಲ್ಲಿಯೇ ಬಡ ವಿದ್ಯಾರ್ಥಿಗಳನ್ನು ಕರೆಸಿ ಶಾಸಕರ ಕೈಯಿಂದಲೇ ಅವುಗಳನ್ನು ವಿತರಿಸುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು. ತಾ.ಪಂ.ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ಗ್ರಾ.ಪಂ. ಮಾಜಿ ಅಧ್ಯಕ್ಷ ಆನಂದ ಕವಟಿ, ಬಸವರಾಜ ಕುಂಚನೂರ ಸೇರಿದಂತೆ ಹಲವಾರು ಜನ ಪ್ರಮುಖರು ಈಸಂಧರ್ಬದಲ್ಲಿ ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯನ್ನು ೩೭೧ಜೆ ಮೀಸಲಾತಿಗೆ ಸೇರಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಪದಾಧಿಕಾರಿಗಳು ವಿಜಯಪುರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೆನೆಯ ಜಿಲ್ಲಾಧ್ಯಕ್ಷ ಕೃಷ್ಣಾ ಭೋಸಲೆ ಮಾತನಾಡಿ, ವಿಜಯಪುರ ಜಿಲ್ಲೆಗೆ ಆದ ಐತಿಹಾಸಿಕ ಅನ್ಯಾಯ ಸರಿಪಡಿಸಲು ೩೭೧ಜೆ ಮೀಸಲಾತಿ ಒದಗಿಸುವುದಾಗಿ ಪಕ್ಷದವರು ಹಾಗೂ ಪಕ್ಷೇತರ ಅಭ್ಯರ್ಥಿಗಳು ಪ್ರಣಾಳಿಕೆಯಲ್ಲಿ ಘೋಷಿಸಿದ್ದರು. ವಿಜಯಪುರ ಜಿಲ್ಲೆಯನ್ನು ೩೭೧ಜೆ ಮೀಸಲಾತಿಗೆ ಸೇರಿಸಬೇಕು. ವಿಜಯಪುರ ಜಿಲ್ಲೆಯು ಅತಿ ಹಿಂದುಳಿದ ಪ್ರದೇಶವಾಗಿದೆ. ಮೀಸಲಾತಿ ವಿರೋಧಿಸಿದ ಪಕ್ಷ ಮತ್ತು ಮುಖಂಡರು ಯುವ ಜನರ ಮತ ಪಡೆಯುವಗೋಸ್ಕರ ೩೭೧ ಜೆ ಕಲ್ಯಾಣ ಕರ್ನಾಟಕ ಮೀಸಲಾತಿಯನ್ನು ಒದಗಿಸುವುದಾಗಿ ಭರವಸೆ ನೀಡಿದ್ದರು. ಚುನಾವಣೆ ಮುಗಿದ ನಂತರ ಯಾವೊಬ್ಬ ಜನಪ್ರತಿನಿಧಿಗಳು ವಿಜಯಪುರ ಜಿಲ್ಲೆಗೆ ನ್ಯಾಯಯುತವಾಗಿ ಸಿಗಬೇಕಾಗಿರುವ ಶೈಕ್ಷಣಿಕ ಹಾಗೂ ಉದ್ಯೋಗದ ಮೀಸಲಾತಿ ಒದಗಿಸುವ ಪಯತ್ನ ಮಾಡದೇ ಇರವುದು ದುರಂತದ ಸಂಗತಿ. ಪದೇ ಪದೇ ಸುಳ್ಳು ಭರವಸೆಗಳನ್ನು ರಾಜಕಾರಣಿಗಳು ನೀಡಿ ಜನರಿಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ಭಾರತೀಯ ಧ್ವಜವು ಅಪಾರ ಮೌಲ್ಯ ಮತ್ತು ಮಹತ್ವವನ್ನು ಹೊಂದಿದೆ. ಇದು ನಮ್ಮ ಹೆಮ್ಮೆ, ಏಕತೆ ಮತ್ತು ದೇಶಭಕ್ತಿ ಭಾವವನ್ನು ಒಳಗೊಂಡಿದೆ. ಧ್ವಜವು ಭಾರತದ ಶ್ರೀಮಂತ ಪರಂಪರೆ ಮತ್ತು ಸ್ವಾತಂತ್ರ್ಯಕ್ಕಾಗಿ ಅದರ ಹೋರಾಟ, ಸತ್ಯ, ಶಾಂತಿ, ತ್ಯಾಗ, ಬಲಿದಾನ ಮತ್ತು ಅಹಿಂಸೆಯ ಸಂಕೇತವಾಗಿ ಕಾರ್ಯನಿರ್ವಹಿಸುತ್ತದೆ. ಧ್ವಜವು ಪ್ರತಿನಿಧಿಸುವ ಶಾಂತಿ, ವೈವಿಧ್ಯತೆ ಮತ್ತು ಪ್ರಗತಿಯ ಮೌಲ್ಯಗಳನ್ನು ಎತ್ತಿಹಿಡಿಯುತ್ತದೆ ಎಂದು ಪ್ರೊ. ಎಂ.ಎಸ್.ಖೊದ್ನಾಪೂರ ಅಭಿಪ್ರಾಯಪಟ್ಟರು.ಅವರು ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ದಿನಾಂಕ: ೨೨-೦೭-೨೦೨೫ ರಂದು ಆಯೋಜಿಸಿದ್ದ ರಾಷ್ಟ್ರೀಯ ಧ್ವಜ ದಿನದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಅವರು ಮಾತನಾಡುತ್ತಾ, ರಾಷ್ಟ್ರೀಯ ಧ್ವಜ ದಿನವನ್ನು ಪ್ರತಿಯೊಂದು ಶಾಲೆ-ಕಾಲೇಜುಗಳಲ್ಲಿ ಆಚರಿಸುವ ಮೂಲಕ ವಿದ್ಯಾರ್ಥಿಗಳು, ಸಾರ್ವಜನಿಕರು, ಯುವಕರಿಗೆ ರಾಷ್ಟ್ರಧ್ವಜದ ಇತಿಹಾಸ, ಮಹತ್ವ ಮತ್ತು ಸಾಂಕೇತಿಕತೆಯ ಬಗ್ಗೆ ಅರಿವು ಮೂಡಿಸುವುದು, ರಾಷ್ಟ್ರ ಧ್ವಜ ಮತ್ತು ಅದು ಪ್ರತಿನಿಧಿಸುವ ಸ್ವಾತಂತ್ರ್ಯ, ಸಾರ್ವಭೌಮತ್ವ ಮತ್ತು ಏಕತೆಗೆ ದೇಶಭಕ್ತಿ, ಗೌರವ ಮತ್ತು ಹೆಮ್ಮೆಯ ಭಾವವನ್ನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ಗಳ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಕರೆಯ ಮೇರೆಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಅಖಿಲ ಭಾರತೀಯ ವಿದ್ಯಾರ್ಥಿ ಪತಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತು.ಒಂದು ದೇಶ ಹಾಗೂ ರಾಜ್ಯ ಅಭಿವೃದ್ಧಿಯಾಗಬೇಕೆಂದರೆ ಅಲ್ಲಿನ ಶಿಕ್ಷಣ ವ್ಯವಸ್ಥೆಗೆ ಬೇಕಾಗಿರುವ ಮೂಲಭೂತ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಒದಗಿಸುವುದು ಸರ್ಕಾರಗಳ ಆದ್ಯ ಕರ್ತವ್ಯ, ಗ್ರಾಮೀಣ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಆದರೆ ಅವುಗಳ ಸಮರ್ಪಕ ಅನುಷ್ಠಾನವಾಗದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸರಿಯಾದ ಹಾಸ್ಟೆಲ್ ವ್ಯವಸ್ಥೆ ಹಾಗೂ ವಿದ್ಯಾರ್ಥಿ ವೇತನವನ್ನು ನೀಡದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ.ಹಾಸ್ಟೆಲ್ಗಳ ಸಮಸ್ಯೆಗಳನ್ನು ಸರಿಪಡಿಸಿ: ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವ್ಯಾಪ್ತಿಯಲ್ಲಿ ೧,೨೫೮ ಹಾಸ್ಟೆಲ್ ಗಳಿದ್ದು ೧,೬೮,೮೩೩ ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ವಾಸವಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ…
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ – ೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಅಕ್ಷರಗಳನ್ನು ಸುಂದರವಾಗಿ ಬರೆಯುವ ಪೆನ್ಸಿಲ್ ವಿಭಿನ್ನ ವಿಚಾರಗಳನ್ನು ದಾಖಲಿಸಿ ಇಡಬಲ್ಲದು. ಅದ್ಭುತವಾದ ಕಥೆಗಳು, ಕವನಗಳು, ಒಳ್ಳೆಯ ಮತ್ತು ಕೆಟ್ಟ ವಿಚಾರಗಳನ್ನು ಬರೆಯುವ ಮೂಲಕ ಮತ್ತು ಬರೆದ ಅಕ್ಷರಗಳಿಂದ ವ್ಯಕ್ತಿ ವ್ಯಕ್ತಿಗಳಲ್ಲಿ ಪ್ರೀತಿ ಹುಟ್ಟಿಸುವ ಅಥವಾ ದ್ವೇಷವನ್ನು ಬಿತ್ತುವ ಗುಣ ಪೆನ್ಸಿಲ್ಗೆ ಇದೆ. ಆದರೆ, ಪೆನ್ಸಿಲಿಗೆ ಬರೆಯುವ ಕೈಗಳ ಸಹಕಾರ ಇಲ್ಲದಿದ್ದರೆ ಕೇವಲ ಪೆನ್ಸಿಲ್ ಒಂದೇ ಏನನ್ನೂ ಬರೆಯಲು ಯಾ ಮಾಡಲು ಸಾಧ್ಯವಿಲ್ಲ. ಅಕ್ಷರಗಳನ್ನು ಬರೆಯುವ ಪೆನ್ಸಿಲ್ ಬಳಸುತ್ತಾ ಹೋದಂತೆ ಅದರ ಮೊನಚನ್ನು ಮತ್ತು ಬರೆಯುವ ಗುಣವನ್ನು ಕಳೆದುಕೊಳ್ಳುತ್ತದೆ. ಆಗ ಪೆನ್ಸಿಲ್ನ ತುದಿಯನ್ನು ಕೆತ್ತಿ ಮತ್ತೊಮ್ಮೆ ಮೊನಚು ಮಾಡಿದಾಗ ಮತ್ತೆ ತೀಕ್ಷ್ಣವಾಗಿ ಬರೆಯಲು ಪ್ರಾರಂಭಿಸುತ್ತದೆ. ಮನುಷ್ಯನ ಬದುಕಿನಲ್ಲಿ ಎದುರಾಗುವ ಕಷ್ಟಗಳು ಪೆನ್ಸಿಲನ್ನು ಕೆತ್ತುವಂತಹ ಕೆಲಸಕ್ಕೆ ಸಮಾನವಾದದ್ದು. ಮೊನಚು ಮಾಡುವಾಗ ನೋವಾಗುವುದು ಸಹಜ. ಆದರೆ ಆ ಮೊನಚು ಮಾಡುವ (ಕೆತ್ತುವ) ಕಷ್ಟವು ಕಳೆದ ಮರುಕ್ಷಣ…
ಲೇಖನ- ರಶ್ಮಿ ಕೆ. ವಿಶ್ವನಾಥ್ಮೈಸೂರು ಉದಯರಶ್ಮಿ ದಿನಪತ್ರಿಕೆ ‘ಈ ಹಾಳಾದ್ ಮೊಬೈಲ್ ಬಂದು ಮಕ್ಕಳೆಲ್ಲ ಹಾಳು’ ಹೌದಾ.. ಹಾಳಾದ್ರಾ?..ಮಕ್ಕಳಾ?.. ಹಾಗಾದ್ರೆ ನೀವು…!? ಮುಟ್ಟೋದೇ ಇಲ್ವಾ.!? ಮೊಬೈಲ್ ನಿಂದ ಏನು ಪ್ರಯೋಜನವೇ ಆಗಿಲ್ವಾ.!? ಒಮ್ಮೆ ಯೋಚಿಸಿಇಷ್ಟೆಲ್ಲ ಬುದ್ದಿವಂತಿಕೆ ಇರುವ ದೊಡ್ಡವರಿಗೇನೆ ಮೊಬೈಲ್ ಬಿಟ್ಟು ಇರ್ಲಿಕ್ಕೆ ಆಗ್ತಾ ಇಲ್ಲ, ಇನ್ನ ಮಕ್ಕಳು? ಸಮಸ್ಯೆ ಎಲ್ಲಿಲ್ಲ ಹೇಳಿ? ಎಲ್ಲ ಕಡೆ ಇದೆ ದೊಡ್ಡವರು -ಚಿಕ್ಕವರು, ಬಡವರು – ಶ್ರೀಮಂತರು ಎಲ್ಲ ಕಡೆ. ಅದನ್ನ ನಾವು ತೆಗೆದುಕೊಳ್ಳುವ ರೀತಿಯಲ್ಲಿ..ಮೊಬೈಲ್ ಇದ್ದರೆ ಒಳ್ಳೆಯದಾಯಿತು ಎಲ್ಲಾ ಕೆಲಸಗಳು ಕೈ ಅಳತೆಯಲ್ಲಿಯೇ ಆಗುತ್ತಿವೆ ಎಂದುಕೊಳ್ಳಬಹುದು. ಮೊಬೈಲ್ ಇಲ್ಲ ಎಂದರೆ.. “ಒಳ್ಳೆಯದಾಯಿತು” ಎನ್ನಲು ಅದೀತೆ.?? ಹಾಗೆಂದುಕೊಳ್ಳೋಣ, ಮೊಬೈಲ್ ಹುಚ್ಚು ಕಡಿಮೆ ಮಾಡಿಕೊಳ್ಳೋಣ, ಮೊಬೈಲ್ ಸ್ಟ್ರಾಂಗಾ ನನ್ನ ಮನಸ್ಸು ಸ್ಟ್ರಾಂಗಾ ನೋಡೋಣ ಎಂದು ವಾಟ್ಸಾಪ್ ಅನ್ಇನ್ಸ್ಟಾಲ್ ಮಾಡಿದೆ. ಗೆಳತಿ ಬಂದವರೇ “ಅಯ್ಯೋ ದೇವಾ.. ನೀವು ಇನ್ನ ಅದನ್ನ ಮಾಡಿಲ್ವಾ ಮೊನ್ನೆನೇ ಗ್ರೂಪ್ ನಲ್ಲಿ ಮೆಸೇಜ್ ಹಾಕಿದ್ದಾರಲ್ಲ..?!” ಅಂದ್ರು. “ಹೌದಾ..” ಎಂದು ಎದ್ದು ಬಿದ್ದು ಇನ್ಸ್ಟಾಲ್…
