Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಹದಿ ಹರೆಯದ ವಯಸ್ಸಿನಲ್ಲಿ ನಡೆದಾಡೋ ನೆಲ ಕಾಣೊಲ್ಲ ಅಂತಾರೆ. ಅಂಥ ವಯಸ್ಸಿನಲ್ಲಿ ಹಿರಿಯರ ಮಾತು ಕಿವಿಗೆ ಬೀಳುವುದೂ ಅಷ್ಟಕ್ಕಷ್ಟೆ. ಓದಿನಲ್ಲಿ ಗಮನವಿಲ್ಲದ್ದಕ್ಕೆ ಪಿಯುಸಿ ಅರ್ಧಂಬರ್ಧ. ಗೋತಾ ಹೊಡೆದ ವಿಷಯ ಕಟ್ಟಿ ಪಾಸಾಗೋಕೆ ಮನಸ್ಸಿಲ್ಲ. ಕೆಲಸಕ್ಕೆ ಅಂತ ಅಲ್ಲಿ ಇಲ್ಲಿ ಅಲೆದರೆ ಅನುಭವವೂ ಇಲ್ಲ, ಕೆಲಸಕ್ಕೆ ಅಗತ್ಯವಿರುವ ಶಿಕ್ಷಣವೂ ಇಲ್ಲ ಅಂತ ಯಾರೂ ಕೆಲಸ ಕೊಡುವುದಿಲ್ಲ. ಒಂದು ವೇಳೆ ಸಣ್ಣ ಪುಟ್ಟ ಕೆಲಸ ಸಿಕ್ಕರೂ ಅವು ಮನಸ್ಸಿಗೆ ಹಿಡಿಸಲ್ಲ. ಕಲಿತಿದ್ದೇ ಕಡಿಮೆ ಅಂದ ಮೇಲೆ ಒಳ್ಳೆಯ ಸಂಬಳವನ್ನು ನಿರೀಕ್ಷಿಸುವ ಹಾಗಿಲ್ಲ. ಹೋಗಲಿ ಏನಾದರೂ ವ್ಯಾಪಾರ ಮಾಡೋಣ ಅಂದರೆ ಮೂರು ಹೊತ್ತಿನ ಊಟಕ್ಕೆ ಲಾಟರಿ ಹೊಡೆಯುವ ಸ್ಥಿತಿಯಲ್ಲಿ ಅದು ಸಾಧ್ಯವಿರದ ಮಾತು. ಆರಕ್ಕೇರದ ಮೂರಕ್ಕಿಳಿಯದ ಆರ್ಥಿಕ ಸ್ಥಿತಿಯಲ್ಲಿ ಬಂಡವಾಳ ಹೊಂದಿಸುವುದು ಕಷ್ಟ. ಹೀಗೆ ದಿಕ್ಕು ತಪ್ಪಿದ ಮನೋ ಸ್ಥಿತಿಯಲ್ಲಿ ಏನು ಮಾಡಬೇಕೆಂದು ತೋಚದೇ ದುಡ್ಡಿನ ಹಿಂದೆ ಅಲೆಯುತ್ತ ಇಸ್ಪಿಟ್ ಕ್ರಿಕೆಟ್ ಬೆಟ್ಟಿಂಗ್ನಂಥ ದಂದೆಯಲ್ಲಿ ಸಿಲುಕಿಕೊಂಡು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊAಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ನಲ್ಲಿ ಬಾಕಿ ಉಳಿದಿರುವ ೨೦೨೫-೨೬ನೇ ಸಾಲಿನ ಪ್ರಥಮ ವರ್ಷದ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ಪದವಿ ಸೀಟುಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಸದರಿ ಪದವಿಯೂ ೪ ವರ್ಷದಾಗಿದ್ದು, ೮ ಸೆಮಿಸ್ಟರ್ಗಳನ್ನು ಒಳಗೊಂಡಿರುತ್ತದೆ. ೩ ನೇ ಸೆಮಿಸ್ಟರ್ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ, ಅನ್ವಯಕಲೆ, ಕಲಾ ಇತಿಹಾಸ, ಛಾಯಾಚಿತ್ರ ಹಾಗೂ ಛಾಯಚಿತ್ರ ಪತ್ರಿಕೋದ್ಯಮ ವಿಭಾಗದ ವಿಷಯಗಳಿರುತ್ತವೆ. ಅರ್ಜಿ ಸಲ್ಲಿಸಲು ದಿನಾಂಕ:೩೦-೦೭-೨೦೨೫ ರಂದು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:೦೮೨೧-೨೪೩೮೯೩೧,https://uucms.karnataka.gov.in ಹಾಗೂ https://www.cavamysore.karnataka.gov.in ವೆಬ್ಸೈಟ್ನ್ನು ಸಂಪರ್ಕಿಸಬಹುದಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಮಿಕರ ರಾಜ್ಯ ವಿಮಾ ನಿಗಮವು ಕಾರ್ಮಿಕರ ಕಲ್ಯಾಣಕ್ಕಾಗಿ SPREE ೨೦೨೫- ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣೀಯನ್ನು ಉತ್ತೇಜಿಸುವ ಯೋಜನೆ-೨೦೨೫ ಎಂಬ ನವೀಕೃತ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಡಿಸೆಂಬರ್ ೩೧ರವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಕಾರ್ಮಿಕರ ರಾಜ್ಯ ವಿಮಾ ನಿಗಮದ ಜಿಲ್ಲಾ ಶಾಖಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅಂಗಡಿಗಳು, ಹೋಟೆಲ್ ಮತ್ತು ರೆಸ್ಟೋರೆಂಟ್ಗಳು, ಸಿನೆಮಾ ಹಾಲ್, ರಸ್ತೆ ಸಾರಿಗೆ ಘಟಕಗಳು, ವಾರ್ತಾಪತ್ರಿಕಾ ಘಟಕಗಳು, ಖಾಸಗಿ ವೈದ್ಯಕೀಯ ಸಂಸ್ಥೆಗಳು. ವಿದ್ಯಾ ಸಂಸ್ಥೆಗಳು ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಗಳಲ್ಲಿ ಕಾರ್ಯನಿರ್ವಹಿಸುವ ಗುತ್ತಿಗೆ ಕಾರ್ಮಿಕರು ಹಾಗೂ ತಾತ್ಕಾಲಿಕ, ಸಾಂಧರ್ಭಿಕ ಗುತ್ತಿಗೆ ಕಾರ್ಮಿಕರನ್ನು ಒಳಗೊಂಡAತೆ ಕಾರ್ಯನಿರತ ಅರ್ಹ ಉದ್ಯೋಗಸ್ಥರು ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ.ಒಂದು ಬಾರಿ ನೋಂದಾಯಿಸಿಕೊAಡರೆ, ನೋಂದಣಿಯಾದ ದಿನಾಂಕದಿAದ ಉದ್ಯೋಗಿಗಳು ಹಾಗೂ ಅವರ ಕುಟುಂಬದ ಸದಸ್ಯರುಗಳಿಗೆ ವೈದ್ಯಕೀಯ ಸೌಲಭ್ಯಗಳಾದ ಅನಾರೋಗ್ಯ, ಪ್ರಸವ (ಹೆರಿಗೆ), ಅಪಘಾತ ಹಾಗೂ ಉದ್ಯೋಗದ ಸಂದರ್ಭದಲ್ಲಿ ಉದ್ಯೋಗಿಗಳು ಮರಣ ಹೊಂದಿದ್ದರೆ, ನಗದು ಸೌಲಭ್ಯ ಸೇರಿದ್ದಂತೆ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಸಿಬಿಎಸ್ಇ ಶಾಲಾ ಆವರಣದಲ್ಲಿರುವ ನಂದೀಶ್ವರ ರಂಗಮಂದಿರದಲ್ಲಿ ಶ್ರಾವಣ ಮಾಸದಂಗವಾಗಿ ಹಾಗೂ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ಜಾತ್ರಾಮಹೋತ್ಸವದಂಗವಾಗಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ, ಬಸವೇಶ್ವರ ಜಾತ್ರಾ ಉತ್ಸವ ಸಮಿತಿ ಹಾಗೂ ಬಸವೇಶ್ವರ ಸೇವಾ ಸಮಿತಿಯ ಸಹಯೋಗದಲ್ಲಿ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿಯವರಿಂದ ಒಂದು ತಿಂಗಳ ಕಾಲ ಹಮ್ಮಿಕೊಂಡಿರುವ ಬಸವ ಸಂಸ್ಕ್ರತಿ ಪ್ರವಚನದ ಉದ್ಘಾಟನೆ ಕಾರ್ಯಕ್ರಮ ಜು. ೨೫ ರಂದು ಸಂಜೆ ೬ ಗಂಟೆಗೆ ನಡೆಯಲಿದೆ ಎಂದು ಬಸವೇಶ್ವರ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ರವಿ ರಾಠೋಡ ಹೇಳಿದರು.ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮವನ್ನು ಸಚಿವ ಶಿವಾನಂದ ಪಾಟೀಲ ಉದ್ಘಾಟಿಸುವರು. ಕಾರ್ಯಕ್ರಮದ ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಪ್ರವಚನಕಾರ ಪ್ರಭು ಚನ್ನಬಸವ ಸ್ವಾಮೀಜಿ ವಹಿಸುವರು. ನೇತೃತ್ವವನ್ನು ಶಿವಾನಂದ ಈರಕಾರ ಮುತ್ಯಾ ವಹಿಸುವರು. ಅಧ್ಯಕ್ಷತೆಯನ್ನು ಬಸವೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ವಹಿಸುವರು. ಮುಖ್ಯ ಅತಿಥಿಗಳಾಗಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ…
ವಿಜಯಪುರ ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಭೇಟಿ ನೀಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಆಶ್ರಮ ರಸ್ತೆಯಲ್ಲಿರುವ ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆ’ಗೆ ಇಂದು ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಮಕ್ಕಳ ಕಲಿಕಾ ಪರಿಸ್ಥಿತಿಗಳ ಬಗ್ಗೆ ವಿಚಾರಿಸಿದರು.ತರಗತಿ ಕೊಠಡಿ, ಲ್ಯಾಬ್, ಗ್ರಂಥಾಲಯ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ಅಧ್ಯಾಪಕರು ಹಾಗೂ ಸಿಬ್ಬಂದಿಗಳಿಂದ ಮಾಹಿತಿ ಪಡೆದರು.ವಿದ್ಯಾರ್ಥಿಗಳು ಅಭಿಪ್ರಾಯ, ಅಗತ್ಯವಿರುವ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಆಲಿಸಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ಕನಸುಗಳ ಬಗ್ಗೆ ಹಂಚಿಕೊಂಡಾಗ ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಹ ಪ್ರೇರಣಾದಾಯಕ ಮಾತು ಹೇಳಿ ಹುರಿದುಂಬಿಸಿದರು.ಶಾಲೆಯ ಅಧ್ಯಕ್ಷ ಶಿವಾನಂದ ರೇಶ್ಮಿ ಹಾಗೂ ಮುಖ್ಯೋಪಾಧ್ಯಾಯರು ಡಾ. ಸುಜಾತಾ ಬಿರಾದಾರ ಅವರು, ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಮಕ್ಕಳಿಗೆ ಎದುರಾಗುತ್ತಿರುವ ತೊಂದರೆಗಳನ್ನು ಸಚಿವರ ಗಮನಕ್ಕೆ ತಂದರು. ವಿಶೇಷವಾಗಿ ಆಟದ ಮೈದಾನ,…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ರೈತರು ಸಹನಾಮೂರ್ತಿಗಳು ಮತ್ತು ಸ್ವಾಭಿಮಾನಿಗಳು ಎಂದು ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಸೀತಪ್ಪ ಗಣಿ ಹೇಳಿದರು.ಸೋಮವಾರ ಆಲಮಟ್ಟಿ ಹಳೆ ರಾಷ್ಟ್ರೀಯ ಹೆದ್ದಾರಿ ಬಳಿ ಲಕ್ಷ್ಮಿದೇವಸ್ಥಾನದ ಮುಂದೆ ರೈತ ಹುತಾತ್ಮರ ದಿನಾಚರಣೆಯ ನೇತೃತ್ವ ವಹಿಸಿ ಮಾತನಾಡಿದರು.ನವಲಗುಂದ-ನರಗುಂದ ರೈತರು ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ಮಾಡುವಾಗ ಸರ್ಕಾರ ಅವರ ಮೇಲೆ ದಾಳಿ ನಡೆಸಿದ್ದರಿಂದ ರೈತರು ಉಗ್ರನಿಲುವು ತಾಳಿ ಬಂಡಾಯ ಏಳುವಂತಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ರವಿಶಂಕರ್ ಕೋತಿನ್, ಬಸಯ್ಯ ಹಿರೇಮಠ, ಸುಭಾಸ ಚೋಪಡೆ, ಲಕ್ಷ್ಮಣ ಬಿರಾದಾರ, ಪೀರಸಾಬ ನದಾಫ, ವೆಂಕಟೇಶ ವಡ್ಡರ, ಸಾಬಣ್ಣ ಅಂಗಡಿ, ರಾಮಣ್ಣ ಸೀತಿಮನಿ, ಸಂಜು ಚನಗೊಂಡ, ರಾಜು ಯಲಗಾರ ಮೊದಲಾದವರಿದ್ದರು.
ಉದಯರಶ್ಮಿ ದಿನಪತ್ರಿಕೆ ಚಡಚಣ: ಬಳ್ಳೋಳ್ಳಿ ಗ್ರಾಮದಲ್ಲಿ ಸುಖ, ಸಮೃದ್ಧಿ ನೆಲಸಲಿ ಮತ್ತು ವರುಣನ ಕೃಪಾಕಟಾಕ್ಷದ ಸಲುವಾಗಿ ಥಂಡಿ ಕಾರ್ಯಕ್ರಮ ನಮ್ಮ ಹಿರಿಯರ ವಾಡಿಕೆಯಂತೆ ಸುಮಾರು ವರ್ಷಗಳಿಂದ ಆಚರಣೆ ಮಾಡುತ್ತಾ ಬಂದಿದ್ದೇವೆ ಎಂದು ಜೈ ಭವಾನಿ ಗೋಂದಳಿ ಸೇವಾ ಸಮೀತಿಯ ಗೌರವ ಅಧ್ಯಕ್ಷ ರಾಜು ಬಿಸೆ ಹೇಳಿದರು.ಪ್ರತಿ ವರ್ಷದಂತೆ ಈ ವರ್ಷವು ಕೂಡಾ ಜೈ ಭವಾನಿ ಗೋಂದಳಿ ಸೇವಾ ಸಮೀತಿ ಬಳ್ಳೊಳ್ಳಿ ಇವರಿಂದ ಮರಗಮ್ಮ ದೇವಿಯ ಮತ್ತು ದುರ್ಗಾ ದೇವಿಯ ಥಂಡಿ ಕಾರ್ಯಕ್ರಮ ಅತಿ ವಿರ್ಜಂಭಣೆಯಿಂದ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ದೇವೆಂದ್ರ ಬಿಸೆ, ಗೌತಮ ಬಿಸೆ,ಅನೀಲ ಕಾಳೆ ತಮ್ಮ ಅನಿಸಿಕೆಗಳನ್ನು ತಿಳಿಸಿದರು.ಪ್ರತಾಪ ಬಿಸೆ, ಮನೊಹರ ಬಿಸೆ, ಶ್ರೀಶೈಲ ಶಿಂಧೆ, ವಸಂತ ಶಿಂಧೆ, ಭಾಜಿರಾಬ ಶಿಂಧೆ, ಬಸವರಾಜ ಬಿಸೆ, ಲಕ್ಷಣ ಪಾಚಂಗೆ, ಆಕಾಶ ಸಾಳುಂಕೆ, ಅಜಿತ ಸಾಳುಂಕೆ, ದೀಪಕ ಬಿಸೆ ಹಾಗೂ ಗೋಂದಳಿ ಸಮಾಜದ ಎಲ್ಲ ಸದಸ್ಯರು ಗ್ರಾಮಸ್ಥರು ಇದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸ್ವಪ್ನಾ ವಾಕ್ ಹಾಗೂ ಶ್ರವಣ ದೋಷವುಳ್ಳ ಮಕ್ಕಳ ಶಾಲೆಯಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರ ಜನ್ಮದಿನವನ್ನು ಅವರ ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದರು. ಶಾಲೆಯಲ್ಲಿರುವ ಮಕ್ಕಳಿಗೆ ಹಣ್ಣು ಹಂಪಲು, ಸಿಹಿ ವಿತರಿಸಿದರು.ಈ ವೇಳೆ ಮಾತನಾಡಿದ ಮಾಜಿ ಉಪಮೇಯರ್ ಗೋಪಾಲ ಘಟಕಾಂಬಳೆ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿರುವ ಛಲವಾದಿ ನಾರಾಯಣಸ್ವಾಮಿ ಅವರು ಒಬ್ಬ ಶ್ರೇಷ್ಠ ಜನನಾಯಕ, ಶೋಷಿತ ಸಮುದಾಯಗಳ ಧ್ವನಿಯಾಗಿರುವ ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್ನಲ್ಲಿ ಸದಾ ಜನರ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವುದುಂಟು, ಹೀಗಾಗಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಸಮಾಜಸೇವೆಯೊಂದಿಗೆ ಆಚರಿಸಲಾಗುತ್ತಿದೆ, ದೇವರು ಅವರಿಗೆ ಇನ್ನೂ ಹುದ್ದೆಗಳನ್ನು ನೀಡಲಿ ಎಂದು ಹಾರೈಸಿದರು.ವಿಡಿಎ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ, ಪ್ರಮುಖರಾದ ಈರಣ್ಣ ಪಟ್ಟಣಶೆಟ್ಟಿ, ವಿನಾಯಕ ದಹಿಂಡೆ, ಸಿದ್ಧು ಮಲ್ಲಿಕಾರ್ಜುನಮಠ, ರಾಜೇಶ ತಾವಸೆ, ರಮೇಶ ದೇವಕರ, ಕಾಂತು ಶಿಂಧೆ ಮೊದಲಾದವರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಹಕಾರ ಭಾರತಿ ಕರ್ನಾಟಕ ನೂತನ ವಿಜಯಪುರ ಜಿಲ್ಲಾಧ್ಯಕ್ಷ ಶ್ರೀಹರ್ಷಗೌಡ ಪಾಟೀಲ್, ಸಂಘಟನಾ ಕಾರ್ಯದರ್ಶಿ ದೀಪಕ್ ಶಿಂತ್ರೆ, ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಂಚಲಿ ಆಯ್ಕೆಯಾಗಿದ್ದು, ಜುಲೈ ೨೫ ರಂದು ನಗರದ ಭಾವಸರ್ ಸಾಂಸ್ಕೃತಿಕ ಭವನದಲ್ಲಿ ರಾಜ್ಯಾಧ್ಯಕ್ಷರಿಂದ ಪದಗ್ರಹಣ ಕಾರ್ಯಕ್ರಮ ನೆರವೇರುವುದು.ಅಯ್ಕೆಗೊಂಡ ನೂತನ ಜಿಲ್ಲಾದ್ಯಕ್ಷರಿಂದ ಜಿಲ್ಲಾ ಕಾರ್ಯಕಾರಿ ಸದಸ್ಯರು, ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ಮುಖ್ಯಸ್ಥರು ಮತ್ತು ವಿವಿಧ ಪ್ರಕೋಷ್ಟ ಅಧಿಕಾರಿಗಳ ಪದಗ್ರಹಣ ನೆರವೇರುವುದು.ಈ ಸಮಾರಂಭವನ್ನು ಸಂಸದರಾದ ರಮೇಶ್ ಜಿಗಜಿಣಗಿ ಅವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಹಕಾರ ಭಾರತಿಯ ರಾಷ್ಟ್ರೀಯ ಸಂರಕ್ಷಕ ರಮೇಶ್ ವೈದ್ಯಜಿ, ರಾಜ್ಯ ಅಧ್ಯಕ್ಷ ಪ್ರಭುದೇವ್ ಮಾಗನೂರ್, ರಾಜ್ಯ ಮುಖ್ಯ ಕಾರ್ಯದರ್ಶಿ ನರಸಿಂಗ್ ಕಾಮತ್, ಮಾಜಿ ಶಾಸಕ ಅರುಣ್ ಶಹಪುರ್, ನಿವೃತ್ತ ಅಪರ ನಿಬಂಧಕರು ಸಹಕಾರಿ ಇಲಾಖೆ, ಎಂ.ಜಿ. ಪಾಟೀಲ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ, ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ವಿಜಯಕುಮಾರ್ ಇಜೇರಿ, ಶಾಂತೇಶ್ವರ ಸಹಕಾರಿ ಸಂಘದ ಸಂಸ್ಥಾಪಕ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ದೇಶ ರಕ್ಷಕರ ಪಡೆ ಕಛೇರಿಯಲ್ಲಿ ಯುವ ಘಟಕದ ಸಭೆ ಹಾಗೂ ನೂತನ ಪದಾಧಿಕಾರಿಗಳ ನೇಮಕ ನಡೆಯಿತು.ಸಭೆಯನ್ನುದ್ದೇಶಿಸಿ ಮಾತನಾಡಿದ ಯುವ ಘಟಕದ ಅಧ್ಯಕ್ಷರಾದ ಆದಿತ್ಯ ಬಡಿಗೇರ, ಕಳೆದ ಐದು ವರ್ಷಗಳಿಂದ ನಾನು ದೇಶ ರಕ್ಷಕರ ಪಡೆಯ ಕಾರ್ಯಗಳಲ್ಲಿ ಭಾಗವಹಿಸುತ್ತಿದ್ದು, ನನ್ನಲ್ಲಿರುವ ಉತ್ಸಾಹ ನೋಡಿ ನನ್ನನ್ನು ಯುವ ಘಟಕದ ಅಧ್ಯಕ್ಷನನ್ನಾಗಿ ಆಯ್ಕೆಮಾಡಿದರು. ಯುವ ಘಟಕದ ಅಧ್ಯಕ್ಷನಾಗಿ ನಾನು ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ನಮ್ಮ ಸಂಘಟನೆಗೆ ಸೇರಿಸಿ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರೇರೇಪಿಸುವ ಆಲೋಚನೆಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದೇನೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿ ಕೊಳ್ಳುವ ಮೂಲಕ ಸಮಾಜದಲ್ಲಿನ ಲೋಪ – ದೋಷಗಳನ್ನು ತಿದ್ದಬಹುದು. ಶೀಘ್ರದಲ್ಲಿಯೇ ನಾವು ಕಾಲೇಜುಗಳಿಗೆ ಭೇಟಿ ನೀಡಿ ಸದಸ್ಯತ್ವ ಅಭಿಯಾನವನ್ನು ಸಹ ಪ್ರಾರಂಭಿಸುತ್ತೇವೆ. ದೇಶ ಪ್ರೇಮಿ ಕಾರ್ಯಗಳಲ್ಲಿ ಭಾಗವಹಿಸಲು ಇಚ್ಛಿಸುವ ಯುವಕರು ನಮ್ಮ ಸಂಘಟನೆಯ ಕಛೇರಿಗೆ ಸಂಪರ್ಕಿಸಬಹುದು ಎಂದು ಹೇಳಿದರು.ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು. ಸಿದ್ದು ಅಂಬಿಗೇರ ಅವರನ್ನು ಉಪಾಧ್ಯಕ್ಷರನ್ನಾಗಿ, ಓಂ ಜಾಧವ…
