Author: editor.udayarashmi@gmail.com

ಲಿಂಗಾಯತರಿಗೆ ಅಲ್ಪ ಸಂಖ್ಯಾತ ಮಾನ್ಯಕೆಗೆ ಕೇಂದ್ರ ಸರಕಾರಕ್ಕೆ ಮರು ಮೇಲ್ಮನವಿ ಸಲ್ಲಿಸಿ | ಮಹಿಳಾ ವಿವಿದಲ್ಲಿ ಸೀರೆಯುಟ್ಟ ಅಕ್ಕಮಹಾದೇವಿ ಪುತ್ಥಳಿ ಸ್ಥಾಪಿಸಿ | ಡಾ.ಶಶಿಕಾಂತ ಪಟ್ಟಣ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನ್ಯಾಯಮೂರ್ತಿ ನಾಗಮೋಹನದಾಸ ವರದಿಯಾಧಾರಿತ ಹಿಂದಿನ ಸರಕಾರದ ಶಿಫಾರಸ್ಸನ್ನು ಸದೃಢಗೊಳಿಸಿ ಲಿಂಗಾಯತ ಧರ್ಮಿಯರನ್ನು ಅಲ್ಪ ಸಂಖ್ಯಾತ ಎಂದು ಪರಿಗಣಿಸಲು ಮತ್ತೆ ಕೇಂದ್ರ ಸರಕಾರಕ್ಕೆ ಮರು ಮೇಲ್ಮನವಿಯನ್ನು ಸಲ್ಲಿಸಿ ಲಿಂಗಾಯತರಿಗೆ ನ್ಯಾಯ ಒದಗಿಸಬೇಕೆಂದು ಪುಣೆ-ವಿಜಯಪುರದ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಆಗ್ರಹಿಸಿದ್ದಾರೆಮಂಗಳವಾರ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಲಿಂಗಾಯತರನ್ನು 2 D ಅಲ್ಪ ಸಂಖ್ಯಾತ ಸ್ಥಾನಮಾನದ ಮಾನ್ಯತೆ ನೀಡಲು ಕಾನೂನಿನಲ್ಲಿ ಅವಕಾಶವಿದ್ದು ಈ ಕೂಡಲೇ ಲಿಂಗಾಯತ ಧರ್ಮಿಯರನ್ನು ಅಲ್ಪ ಸಂಖ್ಯಾತ ಎಂದು ಪರಿಗಣಿಸಿ ಆದೇಶ ಹೊರಡಿಸಬೇಕೆಂದು ಒತ್ತಾಯಿಸಿದರು.ಕರ್ನಾಟಕದ ಏಕಮೇವ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಪೂರ್ಣ ಪ್ರಮಾಣದಲ್ಲಿ ಸ್ಥಾಪಿಸಿ ಹೆಚ್ಚಿನ ಆರ್ಥಿಕ ಅನುದಾನ ನೀಡಿ ಶರಣ ಸಾಹಿತ್ಯದ ಸಂಶೋಧನೆ ಪರಿಷ್ಕರಣೆ ಪ್ರಕಟಣೆಗೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಾಂಪ್ರದಾಯಿಕ ಸಾವಯವ ಕೃಷಿ ಪದ್ಧತಿಯನ್ನು ವೈಜ್ಞಾನಿಕ ಸಲಕರಣೆಗಳೊಂದಿಗೆ ಅಳವಡಿಸಿಕೊಳ್ಳುವುದು ಇಂದು ಅನಿವಾರ್ಯವಾಗಿದೆ ಎಂದು ಶಾಸಕ ರಾಜುಗೌಡ ಪಾಟೀಲ (ಕುದರಿಸಾಲವಾಡಗಿ) ಹೇಳಿದರು.ಪಟ್ಟಣದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಸೋಮವಾರ ಜರುಗಿದ ರೈತ ಹುತಾತ್ಮ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಇಂದು ಕೃಷಿ ಸಮುದಾಯದಲ್ಲಿ ಎತ್ತುಗಳ ಸಂತತಿ ನಶಿಸುತ್ತಿದೆ. ಹಿಂದೆ ಕುಟುಂಬದ ಬೇಡಿಕೆ ಅನುಗುಣವಾಗಿ ನಮ್ಮ ಕೃಷಿ ನೀತಿ ಇತ್ತು. ಆದರೆ ಇಂದು ಬದಲಾಗುತ್ತಿರುವ ಜನತೆಯ ಮನೋಧೋರಣೆಯ ಫಲವಾಗಿ ಕೃಷಿಯಲ್ಲಿ ರಾಸಾಯನಿಕ ಗೊಬ್ಬರಗಳ ಬಳಕೆ ಹೆಚ್ಚಾಗುತ್ತಿದೆ. ಮೀತಿಮಿರಿದ ಆಹಾರದ ಬೇಡಿಕೆಯಿಂದ ನಮ್ಮ ಮೂಲ ಕೃಷಿ ಪದ್ಧತಿಯನ್ನು ಕೈಬಿಟ್ಟ ಕಾರಣ ಕ್ಯಾನ್ಸರ್‌ನಂತ ರೋಗಗಳಿಗೆ ನಾವು ಬಲಿಯಾಗುತ್ತಿದ್ದೇವೆ. ಆದ್ದರಿಂದ ನಮ್ಮ ರೈತರು ಮೊದಲಿನಂತೆ ಸಾವಯವ ಕೃಷಿ ಚಟುವಟಿಕೆಗಳ ಕುರಿತು ಒಲವು ಬೆಳೆಸಿಕೊಳ್ಳಬೇಕು ಎಂದರು.ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ನಂದಿ ಕೃಷಿ ಚಿಂತಕ ಬಸವರಾಜ ಬಿರಾದಾರ ಮಾತನಾಡಿ, ಗೋವು ಹಾಗೂ ನಂದಿ ಸಂತತಿಯ ಮೇಲೆ ಕೃಷಿಯ ಭವಿಷ್ಯ ನಿಂತಿದೆ. ನಂದಿ ಸಂಪತ್ತು ಕಸಾಯಿಖಾನೆಗೆ ಹೋಗುವುದು ನಿಲ್ಲಬೇಕು. ಅದಕ್ಕಾಗಿ ಪಕ್ಷಾತೀತ ಹಾಗೂ…

Read More

ಇದು ಆಧಾರರಹಿತ ಆರೋಪಗಳ ಅಸಾಧಾರಣ ಪ್ರಕರಣ | ಮುಂದಿನ ವಿಚಾರಣೆ ಆಗಸ್ಟ್ 5ಕ್ಕೆ | ನ್ಯಾಯಾಲಯ ಹೇಳಿಕೆ ಬೆಂಗಳೂರು: ಧರ್ಮಸ್ಥಳದಲ್ಲಿ ರಹಸ್ಯ ಸಮಾಧಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ವಿರುದ್ಧ ಮಾನಹಾನಿಕರ ವಿಷಯವನ್ನು ಪ್ರಕಟಿಸದಂತೆ ಮಾಧ್ಯಮಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳ ಮೇಲೆ ಬೆಂಗಳೂರು ಕೋರ್ಟ್ ನಿರ್ಬಂಧ ಹೇರಿದೆ. ಶ್ರೀ ಮಂಜುನಾಥಸ್ವಾಮಿ ದೇವಾಲಯದ ಕಾರ್ಯದರ್ಶಿ ಸಲ್ಲಿಸಿದ ಮಾನಹಾನಿ ಮೊಕದ್ದಮೆ ಅರ್ಜಿ ಸಂಬಂಧ ಈ ಆದೇಶ ಹೊರಡಿಸಲಾಗಿದೆ. ಶ್ರೀ ಮಂಜುನಾಥಸ್ವಾಮಿ ದೇವಾಲಯದ ಮಾಜಿ ಸ್ವಚ್ಛತ ಕೆಲಸಗಾರನೊಬ್ಬ ದೇವಾಲಯದ ಮೇಲ್ವಿಚಾರಕರು ಹಲವಾರು ಶವಗಳನ್ನು ಸಮಾಧಿ ಮಾಡಲು ಒತ್ತಾಯಿಸಿದ್ದಾರೆ ಎಂಬ ಆರೋಪಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿಗಳು ಬಂದ ನಂತರ ಈ ಆದೇಶ ಹೊರಬಿದ್ದಿದೆ. ಆದಾಗ್ಯೂ, ಸ್ವಚ್ಛತ ಕೆಲಸಗಾರ ಹರ್ಷೇಂದ್ರ ಕುಮಾರ್ ಅಥವಾ ಅವರ ಕುಟುಂಬದ ಹೆಸರನ್ನು ಎಲ್ಲೂ ಹೇಳಿಲ್ಲ. ಒಂದು ಸಂಸ್ಥೆ ಮತ್ತು ದೇವಾಲಯದ ವಿರುದ್ಧ ಆರೋಪ ಬಂದರೆ ಅದು ವಿವಿಧ ಕಾಲೇಜುಗಳು ಮತ್ತು ಶಾಲೆಗಳಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ನಿವೃತ್ತಿಯಾದ ಸರ್ಕಾರಿ ನೌಕರರಿಗೆ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಲು ಸಾದ್ಯವಾಗುವದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಣಯವನ್ನು ಖಂಡಿಸಿ ಆಲಮೇಲ ತಾಲೂಕು ನಿವೃತ ನೌಕರ ಸಂಘ ತಹಶೀಲ್ದಾರ ಮೂಲಕ ಪ್ರದಾನ ಮಂತ್ರಿಗಳಿಗೆ ಮವಿ ಸಲ್ಲಿಸಿದರು.ನಿವೃತ ನೌಕರಾದ ಸಂಘದ ಎನ್.ಎ. ಬಿರಾದಾರ ಮಾತನಾಡಿ ಕೇಂದ್ರ ಸರ್ಕಾರಿ ನೌಕರರ ಹಾಗೂ ಪಿಂಚಣಿದಾರರ ವೇತನವನ್ನು ಪರಿಸ್ಕರಿಸಲು ಈಗಾಗಲೆ ೮ನೇ ವೇತನ ಆಯೋಗ ರಚನೆ ಮಾಡಿದೆ ಸದರಿ ಆಯೋಗವು ಕಾರ್ಯೋನ್ಮಖವಾಗಿರುತ್ತದೆ, ಇತ್ತಿಚೆಗೆ ಕೇಂದ್ರ ಸರ್ಕಾರವು ೨೦೨೫ ಮಾರ್ಚ ೨೫ ರಂದು ಲೋಕಸಭೆಯಲ್ಲಿ ಆರ್ಥಿಕ ಸಚಿವರಾದ ನಿರ್ಮಲಾ ಸೀತಾರಂ ಅವರು ಆರ್ಥಿಕ ಬಿಲ್ಲನ್ನು ಮಂಡಿಸುವಾಗ ೨೦೨೬ ಎಪ್ರೀಲ್ ೧ಕ್ಕೆ ಮೊದಲು ನಿವೃತ್ತಿಯಾದ ಸರ್ಕಾರಿ ನೌಕರರಿಗೆ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಲು ಸಾದ್ಯವಾಗುವದಿಲ್ಲ ಎಂಬ ನಿರ್ಣಯವನ್ನು ತೆಗೆದುಕೊಳ್ಳಲಾಗುತ್ತಿದೆ ಇದರಿಂದ ೨೦೨೬ ಎಪ್ರೀಲ್ ಮೊದಲು ನಿವೃತ್ತಿಯಾದ ಸರ್ಕಾರಿ ನೌಕರರಿಗೆ ಮತ್ತು ಕುಟುಂಬ ಪಿಂಚಣಿದಾರರಗಿಗೆ ಆರ್ಥಿಕ ಸಂಕಷ್ಟಕೋಳಗಾಗುತ್ತಾರೆ. ಇದನ್ನು ಮನಗಂಟು ಇನ್ನೊಮ್ಮೆ ಮರು ಪರಿಶಿಲಿಸಿ ನ್ಯಾಯ ಒದಗಿಸಿಕುಡಬೇಕು…

Read More

ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸ್ಪಷ್ಟನೆ B (ಇಂದು (ಜುಲೈ ೨೨, ಮಂಗಳವಾರ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾಗಿ ಇತ್ತೀಚೆಗೆ ೧ವರ್ಷ ಪೂರೈಸಿದ ಸಂಗಮೇಶ ಬಬಲೇಶ್ವರ ಅವರ ೪೫ನೆಯ ಜನುಮದಿನ ಈ ನಿಮಿತ್ತ ಉದಯರಶ್ಮಿ ಪತ್ರಿಕೆ ಸಂಪಾದಕ ಅವರನ್ನು ಸಂದರ್ಶಿಸಿದ ವಿವರ ತಮ್ಮ ಅವಗಾಹನೆಗೆ.. ವಿಶೇಷ ಸಂದರ್ಶನ- ಇಂದುಶೇಖರ ಮಣೂರಸಂಪಾದಕ, ’ಉದಯರಶ್ಮಿ’ ಉದಯರಶ್ಮಿ ದಿನಪತ್ರಿಕೆ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾಗಿ ಒಂದೇ ವರ್ಷದ ಅವಧಿಯಲ್ಲಿ ಮಕ್ಕಳಿಗಾಗಿ ಇಂತಹದ್ದೊಂದು ಅಕಾಡೆಮಿ ಅಸ್ತಿತ್ವದಲ್ಲಿದೆ ಎಂದು ನಾಡಿನ ಬಹುತೇಕರಿಗೆ ಗೊತ್ತೇ ಇಲ್ಲದ ಸಂಗತಿಯನ್ನು ಇಂದು ತಮ್ಮ ಕಾರ್ಯದಕ್ಷತೆ ಹಾಗೂ ಅರ್ಥಪೂರ್ಣ ಕಾರ್ಯಕ್ರಮಗಳಿಂದ ನಾಡಿನ ಮನೆ ಮಾತಾದವರು ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು. ಕಾಲಿಗೆ ಚಕ್ರಕಟ್ಟಿಕೊಂಡವರಂತೆ ನಾಡಿನಾದ್ಯಂತ ಸಂಚರಿಸಿ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತ ಹಲವಾರು ರಚನಾತ್ಮಕ ಕಾರ್ಯಗಳನ್ನು ಹಮ್ಮಿಕೊಂಡು ಸಫಲತೆಯ ದೋಣಿಯಲ್ಲಿ ಪಯಣಿಸುತ್ತಿರುವ, ನಾಡಿನ ಮಕ್ಕಳ ಕಣ್ಮಣಿಯಾಗಿ ಹೊರಹೊಮ್ಮುತ್ತಿರುವ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರ ೪೫ನೇ ಜನ್ಮದಿನ (ಜು.೨೨) ನಾಳೆ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ ಖಡಗೇಕರ ಅವರ ದಕ್ಷ ಹಾಗೂ ಪ್ರಾಮಾಣಿಕ ಸೇವೆಗೆ “ವಿಜಯಪುರ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ” ಲಭಿಸಿದೆ.ಈ ಸಂದರ್ಭದಲ್ಲಿ ಚಡಚಣ ಸರಕಾರಿ ಸಂಘದ ಅಧ್ಯಕ್ಷ ಬಸವರಾಜ. ಮಜ್ಜಗಿ, ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವಿಠ್ಠಲ ಕಾಂಬಳೆ, ಚಡಚಣ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ ಎಸ್ ಸೋನಗಿ, ಪ್ರಧಾನ ಕಾರ್ಯದರ್ಶಿ ಬಸವಂತ ಉಮರಾಣಿ, ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಂಘದ ಅಧ್ಯಕ್ಷ ಎಸ್ ಎಸ್ ಪಾಟೀಲ ಅವರು ಚಡಚಣ ತಾಲೂಕಿನ ಸಮಸ್ತ ನೌಕರರ ಪರವಾಗಿ ಸನ್ಮಾನಿಸಿ ಅಭಿನಂದಿಸಿದರು.

Read More

ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್, ಲೈಟಿಂಗ್, ಧ್ವನಿವರ್ಧಕ & ಡೆಕೋರೇಶನ್ ಮಾಲೀಕರ ಸಂಘದ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ ಪಾಟೀಲ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಾಮೀಯಾನಾ, ಪೆಂಡಾಲ್, ಲೈಟಿಂಗ್, ಡೆಕೋರೇಶನ್ ಮಾಲೀಕರು ಸಮಾಜದಲ್ಲಿ ನಿರುದ್ಯೋಗ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಸರ್ಕಾರದ ಮೇಲೆ ಭಾರ ಕಡಿಮೆ ಆಗಿದೆ ಎಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಹೇಳಿದರು.ನಗರದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಿಂಭಾಗದ ಆಲಕುಂಟೆ ಪ್ರದೇಶದಲ್ಲಿ ಹಮ್ಮಿಕೊಂಡಿರುವ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಸಂಘ ಹಮ್ಮಿಕೊಂಡಿದ್ದ ವಿಜಯಪುರ ಉತ್ಸವದ ವಸ್ತು ಪ್ರದರ್ಶನದಲ್ಲಿ ಅದೃಷ್ಟದ ಬಹುಮಾನ ವಿತರಿಸಿ ಮಾತನಾಡಿದರು.ದೇಶದಲ್ಲಿರುವ ಜನಸಂಖ್ಯೆಯಲ್ಲಿ ಸರ್ಕಾರವೇ ಎಲ್ಲರಿಗೂ ಉದ್ಯೋಗ ನೀಡಲು ಸಾಧ್ಯವಿಲ್ಲ. ದೇಶದಲ್ಲಿ ಶೇ.93 ಕ್ಕಿಂತ ಅಧಿಕ ಜನರಿಗೆ ಉದ್ಯೋಗವಿಲ್ಲ. ಆದರೆ ಪೆಂಡಾಲ್, ಶಾಮೀಯಾನಾ ಮಾಲೀಕರು ವಿಶೇಷವಾಗಿ ಕರ್ನಾಟಕ ರಾಜ್ಯದಲ್ಲಿ 2 ಲಕ್ಷ ಜನರಿಗೆ ಉದ್ಯೋಗ ನೀಡಿದ್ದಾರೆ. ಇದು ಸರ್ಕಾರದ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲ್ಲೂಕಿನ ತಾಂಬಾ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕಾರ್ಯ ಶ್ಲಾಘನೀಯ ಎಂದು ಪ್ರಶಾಂತ ಭೈರಾಮಡಗಿ ಹೇಳಿದರು.ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಂದೆ ದಿ. ಎಮ್.ಡಿ. ಭೈರಾಮಡಗಿ ಶಿಕ್ಷಕರ ಸ್ಮರಣಾರ್ಥ ಧ್ವಜಾರೋಹಣ ಕಟ್ಟೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ನಮ್ಮ ತಂದೆಯವರು ಮಕ್ಕಳಗೆ ಆಸ್ತಿ ಮಾಡುವುದಕ್ಕಿಂತ, ಮಕ್ಕಳನ್ನೇ ಆಸ್ತಿಯನ್ನಾಗಿ ತಿಳಿದು, ನಮ್ಮ ಸರ್ವೋತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ನಮ್ಮ ತಂದೆಯವರು ಕೂಡ ಒಬ್ಬ ಶಿಕ್ಷಕರು ಅವರ ಸ್ಮರಣಾರ್ಥ ಪ್ರಜ್ವಲ್ ಮತ್ತು ಪ್ರಶಾಂತ ಭೈರಾಮಡಗಿ ಬಂಧುಗಳಿಂದ ಧ್ವಜಾರೋಹಣದ ಕಟ್ಟೆ ನಿರ್ಮಾಣಕ್ಕೆ ೫೦ ರಿಂದ ೬೦ ಸಾವಿರ ರೂಪಾಯಿಯಲ್ಲಿ ಒಂದು ಸುಂದರವಾದ ಕಟ್ಟೆಯನ್ನು ನಿರ್ಮಾಣ ಗೊಳಿಸುತ್ತಿದ್ದೇವೆ. ಸರ್ಕಾರದೊಂದಿಗೆ ಸಮುದಾಯವೂ ಸಹಕಾರ ನೀಡಿದರೆ ಸರ್ಕಾರಿ ಶಾಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ. ಸರ್ಕಾರಿ ಶಾಲೆ ಹೆಮ್ಮರವಾಗಿ ಬೆಳೆಯಲ್ಲು ಶಿಕ್ಷಕರು, ಎಸ್.ಡಿ.ಎಮ್.ಸಿ ಅಧ್ಯಕ್ಷರು ಮತ್ತು ಗ್ರಾಮಸ್ಥರ ಶ್ರಮ ಕಾರಣವಾಗಿರುತ್ತದೆ. ವಿದ್ಯಾರ್ಥಿಗಳು ದೇವರಿಗೆ ಸಮಾನ, ಶಿಕ್ಷಕ ವೃತ್ತಿ ಪವಿತ್ರವಾದದ್ದು, ವಿದ್ಯಾರ್ಥಿಗಳನ್ನು…

Read More

ಕಲಕೇರಿಯ ಆದರ್ಶ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿಶೇಷ ಉಪನ್ಯಾಸ ನೀಡಿದ ಪ್ರೊ.ಜಗದೀಶ ಸಾತಿಹಾಳ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಶಿಕ್ಷಣ ಕೇವಲ ಅಂಕಗಳನ್ನು ಪಡೆಯಲಿಕ್ಕಲ್ಲ ಮಕ್ಕಳಲ್ಲಿ ಬದಕುವ ಶೈಲಿ, ಸಂಸ್ಕಾರ ಕಲಿಸಿ ಕನಸುಗಳನ್ನು ಬಿತ್ತುವುದಾಗಿದ್ದು, ೧೬ ವರ್ಷದೊಳಗಿನ ಮಕ್ಕಳಿಗೆ ಫೋನ್ ಉಪಯೋಗ ಸುರಕ್ಷಿತವಲ್ಲ ಎಂದು ವಿಜಯಪುರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಸಂಗನಬಸವ ಪಿಯು ಮತ್ತು ಎಸ್.ಸಿ ಉಪ್ಪಿನ ಪದವಿ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕರಾದ ಪ್ರೊ. ಜಗದೀಶ ಸಾತಿಹಾಳ ಹೇಳಿದರು.ಕಲಕೇರಿಯ ಆದರ್ಶ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ ಮಕ್ಕಳ ಪರಿಪೂರ್ಣ ಭವಿಷ್ಯಕ್ಕಾಗಿ ಪಾಲಕರ ಕರ್ತವ್ಯ ಮತ್ತು ಫೋನ್ ಉಪಯೋಗದಿಂದ ಆಗುವ ಅನಾನುಕೂಲತೆಗಳು ಕುರಿತ ವಿಶೇಷ ಉಪನ್ಯಾಸ ಮತ್ತು ಪಾಲಕರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ಪಾಲಕರು ದುಡ್ಡ ಕೊಟ್ಟು ಸ್ಕೂಲ್‌ಗೆ ಸೇರಿಸಿದ್ರೆ ಜವಾಬ್ದಾರಿ ಮುಗಿಯಲಿಲ್ಲ, ತಾವೆಸ್ಟೇ ಕೆಲಸದಲ್ಲಿ ಬ್ಯುಸಿ ಇದ್ದರೂ ಮಕ್ಕಳಿಗೆ ಸಮಯ ಕೊಟ್ಟು ಬೆಂಬಲಿಸಿ, ಅವರನ್ನು ಬೇರೆ ಮಕ್ಕಳ ಜೊತೆ ಹೋಲಿಸ್ಬೇಡಿ, ಪ್ರತಿ ಮಗುವಿನ ಸಾಮರ್ಥ್ಯ ವಿಭಿನ್ನವಾಗಿರುತ್ತೆ. ಅಂಕಳಿಂದ ಮಕ್ಕಳನ್ನು ಅಳೆಯಬೇಡಿ ಅವರಲ್ಲಿರುವ ವಿಶೇಷವಾದ ಕೌಶಲ್ಯಕ್ಕೆ…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನ ಕಾರ್ಯಕ್ರಮದಲ್ಲಿ ಸಾಧನೆಗೈದ ವಿಜಯ ಕರ್ನಾಟಕ ವರದಿಗಾರರಾದ ಶಿವಾನಂದ ಸಜ್ಜನ, ಕನ್ನಡಪ್ರಭ ವರದಿಗಾರರಾದ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಮಲ್ಲಿಕಾರ್ಜುನ ಕುಬಕಡ್ಡಿ, ಸುವರ್ಣ ನ್ಯೂಸ್ ಕ್ಯಾಮರಾಮೆನ್ ಅಪ್ಪು ಚಿನಗುಂಡಿ ಸೇರಿದಂತೆ ಜಿಲ್ಲೆಯ ಒಟ್ಟು ೧೮ ಪತ್ರಕರ್ತರಿಗೆ ೨೦೨೫ನೇ ಸಾಲಿನ ಜಿಲ್ಲಾ ವಾರ್ಷಿಕ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಸಚಿವದ್ವಯರಾದ ಎಂ.ಬಿ.ಪಾಟೀಲ ಮತ್ತು ಶಿವಾನಂದ ಪಾಟೀಲ ಅವರು ಸೇರಿದಂತೆ ಕಾನಿಪದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ, ಪ್ರಧಾನ ಕಾರ್ಯದರ್ಶಿ ಜಿ.ಲೋಕೇಶ, ಭವಾನಿಸಿಂಗ್ ರಾಠೋಡ, ಎಸ್ಪಿ ಲಕ್ಷö್ಮಣ ನಿಂಬರಗಿ, ಡಿವೈಎಸ್ಪಿ ಬಸವರಾಜ ಯಲಿಗಾರ ಮತ್ತು ಕಾನಿಪ ಜಿಲ್ಲಾಧ್ಯಕ್ಷರಾದ ಪ್ರಕಾಶ ಬೆಣ್ಣೂರ, ಕಾನಿಪ ಜಿಲ್ಲಾ ಉಪಾಧ್ಯಕ್ಷರಾದ ಇಂದುಶೇಖರ ಮಣೂರ ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಕಾನಿಪ ಪದಾಧಿಕಾರಿಗಳು ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ನೀಡಿ ಗೌರವಿಸಿದರು ಮತ್ತು ಇದೇ ವೇಳೆ ಪತ್ರಕರ್ತರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ…

Read More