Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದಲ್ಲಿ ಕಳೆದರೆಡು ದಿನಗಳಿಂದ ಮಳೆ ಜೋರಾಗಿ ಆಗಾಗ ಬರುತ್ತಿದೆ. ಮಳೆ ನೀರು ಮತ್ತು ಚರಂಡಿ ನೀರು ಹರಿದು ಬರುತ್ತಿರುವ ಸ್ಥಳಗಳಲ್ಲಿ ವಾಸಿಸುವವರ ಮನೆಗಳಿಗೆ ನೀರು ನುಗ್ಗಿ ಹಾನಿಯಾಗುವ ಸಂಭವವಿರುತ್ತದೆ. ಕಳೆದ ಜೂನ್ ತಿಂಗಳಲ್ಲಿ ಇದೇ ರೀತಿಯಲ್ಲಿ ಪಟ್ಟಣದಲ್ಲಿ ಜೋರಾಗಿ ಸುರಿದ ಮಳೆಯಿಂದಾಗಿ ಪಟ್ಟಣದ ಲಕ್ಷ್ಮೀ ನಗರದ ಹೊಲ-ಗದ್ದೆಗಳಿಗೆ ಹೊಂದಿಕೊಂಡಿರುವ ಜಾಗೆಯಲ್ಲಿ ಅನಧಿಕೃತ ಮನೆ, ಚಪ್ಪರ ಹಾಕಿಕೊಂಡು ವಾಸಿಸುತ್ತಿರುವ ಜನರ ಮನೆಗಳಿಗೆ ಮಳೆ ನೀರು ನುಗ್ಗಿ ಹಾನಿ ಉಂಟು ಮಾಡಿತ್ತು. ಮತ್ತೆ ಇದೀಗ ಮಳೆ ಜೋರಾಗಿ ಸುರಿಯುವ ಮುನ್ಸೂಚನೆ ಇರುವದರಿಂದಾಗಿ ನೀರು ಜೋರಾಗಿ ಹರಿದು ಬರುವ ಸ್ಥಳಗಳಲ್ಲಿ ಅನಧಿಕೃತವಾಗಿ ಮನೆ ಇಲ್ಲವೇ ಚಪ್ಪರ ಹಾಕಿಕೊಂಡು ವಾಸಿಸುವವರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು. ಒಂದು ವೇಳೆ ಅವರು ಸ್ಥಳಾಂತರಗೊಳ್ಳದೇ ಹೋದರೆ ಮುಂದೆ ಆಗುವ ಅನಾಹುತಗಳಿಗೆ ಪುರಸಭೆ ಜವಾಬ್ದಾರವಾಗುವುದಿಲ್ಲ. ಇಂತಹ ಸ್ಥಳಗಳಲ್ಲಿ ಅನಧಿಕೃತವಾಗಿ ವಾಸಿಸುವ ಕುಟುಂಬಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರವಾಗಬೇಕೆಂದು ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ರಾಜ್ಯದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ವಿವಿಧ ಬಸವಪರ ಸಂಘಟನೆಗಳು ಸೆ.೧ ರಂದು ಬಸವ ಸಂಸ್ಕ್ರತಿ ಅಭಿಯಾನದಂಗವಾಗಿ ಬಸವೇಶ್ವರ ಜನಿಸಿದ ಬಸವನಬಾಗೇವಾಡಿಯಿಂದ ಬಸವ ರಥ ಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿವೆ. ಈ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಮಹಿಳೆಯರ ಸಂಘಟನೆಗಳು ಸಹ ಭಾಗಿಯಾಗುವ ಮೂಲಕ ಅಭಿಯಾನದ ಯಾತ್ರೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.ಪಟ್ಟಣದ ವಿರಕ್ತಮಠದಲ್ಲಿ ಈಚೆಗೆ ಬಸವ ಸಂಸ್ಕ್ರತಿ ಅಭಿಯಾನದಂಗವಾಗಿ ಬಸವನಬಾಗೇವಾಡಿಯಲ್ಲಿ ಸೆ. ೧ ರಂದು ಹಮ್ಮಿಕೊಂಡಿರುವ ಬಸವ ರಥಯಾತ್ರೆ ಚಾಲನೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಈಚೆಗೆ ಕರೆಯಲಾಗಿದ್ದ ಮಹಿಳಾ ಸಂಘಟನೆಗಳ ಪದಾಧಿಕಾರಿಗಳ ಹಾಗೂ ಸದಸ್ಯರ ಸಭೆಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಸೆ.೧ ರಂದು ನಡೆಯುವ ಕಾರ್ಯಕ್ರಮಕ್ಕೆ ನಾಡಿನ ವಿವಿಧ ಭಾಗಗಳಿಂದ ಅನೇಕ ಮಠಾಧೀಶರರು, ವಿದ್ವಾಂಸರು ಆಗಮಿಸುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಸೇರಿದಂತೆ ಶರಣರಿಗೆ ಸಂಬಂಧಪಟ್ಟಂತೆ ವಿಚಾರಗೋಷ್ಠಿ, ವಚನ ಸಂಗೀತ ಕಾರ್ಯಕ್ರಮ ಹಾಗೂ ಸಾಣೇಹಳ್ಳಿ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಮಕ್ಕಳ ಸಾಹಿತ್ಯವು ಮಕ್ಕಳಲ್ಲಿರುವ ಪ್ರತಿಭೆಯನ್ನು ಕೌಶಲ್ಯವನ್ನು ಗುರುತಿಸುವಂತಹ ಕೆಲಸ ಹಾಗೂ ಮಕ್ಕಳಲ್ಲಿ ಆದರ್ಶ ಗುಣಗಳನ್ನು ಬೆಳೆಸಿಕೊಳ್ಳಲು ವೇದಿಕೆಯು ಕೆಲಸ ಮಾಡುತ್ತದೆ ಎಂದು ತಾಲೂಕಾ ಮಕ್ಕಳ ಸಾಹಿತ್ಯ ಸಂಗಮ ವೇದಿಕೆಯ ಅಧ್ಯಕ್ಷ, ಉಪನ್ಯಾಸಕ ಸದಾನಂದ ಎಸ್ ಈರನಕೇರಿ ಹೇಳಿದರು.ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿರುವ ಶ್ರೀಮತಿ ಶಾಲಿನಿ ಮಾಣಿಕ್ ಚಂದ್ ದೋಶಿ ಮಹಿಳಾ ಪದವಿ ಪೂರ್ವ ಕಾಲೇಜು ಹಾಗೂ ತಾಲೂಕಾ ಮಕ್ಕಳ ಸಾಹಿತ್ಯ ಸಂಗಮ ವೇದಿಕೆ ಸಹಯೋಗದ ವತಿಯಿಂದ ವಿದ್ಯಾರ್ಥಿಗಳಿಗಾಗಿ ವಚನ ಕಂಠಪಾಠ ಸ್ಪರ್ಧೆ ಏರ್ಪಡಿಸಲಾಗಿತ್ತು.ಮಕ್ಕಳ ಸಾಹಿತ್ಯ ಬೆಳೆದು ಬಂದ ಬಗ್ಗೆ ವಿವರಿಸುತ್ತಾ , ವಚನ ಕಂಠ ಪಾಠ ಸ್ಪರ್ಧೆ ವಿದ್ಯಾರ್ಥಿಗಳಲ್ಲಿ ನೆನಪಿನ ಶಕ್ತಿಯನ್ನು ದ್ವಿಗುಣಗೊಳಿಸುವ ಕೆಲಸವನ್ನು ಹಾಗೂ ಮಕ್ಕಳಲ್ಲಿ ಸಾಹಿತ್ಯದ ಆಸಕ್ತಿಯನ್ನು ಹೆಚ್ಚಿಸುವ ಕೆಲಸ ಮಕ್ಕಳ ಸಾಹಿತ್ಯ ವೇದಿಕೆಯು ಮಾಡುತ್ತದೆ ಎಂದರು.ಮುಖ್ಯ ಅತಿಥಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಎಸ್ ಬಿ ಹಡಪದ್ ಉಪನ್ಯಾಸಕರು ಮಾತನಾಡುತ್ತಾ, ಸಾಹಿತ್ಯದಲ್ಲಿಯೇ ವಿಭಿನ್ನವಾದ ಸಾಹಿತ್ಯ ವಚನ ಸಾಹಿತ್ಯ. ಬಸವಾದಿ ಶರಣರ…

Read More

ಸಿಂದಗಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ದಲಿತ ಮುಖಂಡರಿಂದ ಮನವಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಯಾವುದೇ ಆಸ್ತಿ ಅಡವಾಗಿ ನೀಡದಿದ್ದರೂ ಆಸ್ತಿ ಮೇಲೆ ಬೋಜಾ ದಾಖಲಿಸಿದ ಸಿಂದಗಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಮುಖಂಡರು ಶನಿವಾರ ತಾಲೂಕು ಆಡಳಿತ ಸೌಧದ ಮುಂದೆ ಪ್ರತಿಭಟನೆ ನಡೆಸಿ ಗ್ರೇಡ್-೨ ತಹಶೀಲ್ದಾರ್ ಇಂದಿರಾಬಾಯಿ ಬಳಗಾನೂರ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಈ ವೇಳೆ ದಸಂಸ ಜಿಲ್ಲಾ ಸಂಚಾಲಕ ವೈ.ಸಿ. ಮಯೂರ, ಸಂತೋಷ ಮಣಗೀರಿ ಮಾತನಾಡಿ, ಸಿಂದಗಿ ಪಟ್ಟಣದ ನಿವಾಸಿ ಪ್ರವೀಣ ಹಾಲಹಳ್ಳಿ ಅವರಿಗೆ ಸೇರಿದ ಸಿಂದಗಿ ಸ.ನಂ. ೯೯೩/೪ರ ೨೦ ಗುಂಟೆ, ೯೯೩/೫ರ ೧೧ ಗುಂಟೆ ಆಸ್ತಿಯ ಮೇಲೆ ಸಿಂದಗಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ರೂ.೧.೮೪ಕೋಟಿ ಬೋಜಾವನ್ನು ಬಾಗಲಕೋಟೆಯ ಬಸವೇಶ್ವರ ಸಹಕಾರಿ ಬ್ಯಾಂಕಿನ ಹೆಸರಿನಲ್ಲಿ ದಾಖಲಿಸಿದ್ದಾರೆ ಎಂದು ಆರೋಪಿಸಿದರು.ಕೂಡಲೇ ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು.…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಾಲೆ ಆರಂಭವಾಯಿತೆಂದರೆ ಪ್ರತೀ ಶಾಲೆಗಳಲ್ಲಿ ಶಾಲಾ ಸಂಸತ್ ಚುನಾವಣೆಗೆ ತಯಾರಿ ನಡೆಯುತ್ತದೆ. ಆಯಾ ವರ್ಷದ ವಿದ್ಯಾರ್ಥಿ ನಾಯಕನ ಆಯ್ಕೆ ಪ್ರಕ್ರಿಯೆ ಚುನಾವಣೆಯ ಮೂಲಕ ಸಾಗುತ್ತದೆ ಎಂದು ಶ್ರೀ ಪದ್ಮರಾಜ ಪಬ್ಲಿಕ್ ಶಾಲೆಯ ಪ್ರಾಚಾರ್ಯ ದಾನಯ್ಯ ನಂದಿಕೋಲ ಹೇಳಿದರು.ಸಿಂದಗಿ ಪಟ್ಟಣದ ಶ್ರೀ ಪದ್ಮರಾಜ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿಗಾಗಿ ಚುನಾವಣಾ ಪ್ರಕ್ರಿಯೆಯನ್ನು ನೆರವೇರಿಸಿ ಮಾತನಾಡಿದ ಅವರು, ಮಕ್ಕಳಿಗೆ ಚುನಾವಣೆಯ ಅರಿವು ಮೂಡಿಸುವ ಪ್ರಯುಕ್ತ ಶಾಲಾ ಸಂಸತ್ ಚುನಾವಣೆ ಚುನಾವಣಾ ಆಯೋಗ ನಡೆಸುವ ನೈಜ ಚುನಾವಣಾ ಮಾದರಿಯಲ್ಲಿ ನಡೆಸಬೇಕು. ಇದರಿಂದ ಮಕ್ಕಳಲ್ಲಿ ಚುನಾವಣೆಯ ಪರಿಕಲ್ಪನೆ ಮತ್ತು ಮತದಾನದ ಅರಿವು ಮೂಡುತ್ತದೆ ಎಂದರು.ಈ ವೇಳೆ ವಿದ್ಯಾರ್ಥಿಗಳು ಸರದಿ ಸಾಲಿನಲ್ಲಿ ನಿಂತು ಚುನಾವಣಾ ಪ್ರಕ್ರಿಯೆಯಲ್ಲಿ ಮತ ಚಲಾಯಿಸಿದರು.ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಆಸಿಫ್ ಕೊಂಕಣಿ, ಶಿವಪುತ್ರ ಭಾಸಗಿ, ಶ್ರೀಧರ ಮಲ್ಲೇದ, ಅಭಿಷೇಕ ಬಿರಾದಾರ, ಸುರೇಶ ಸುಣಗಾರ, ರಾಣಿ ಜೋಗೂರ, ಅರುಣ ಕವಲಗಿ, ಅಕ್ಷತಾ ಕಿಣಗಿ, ಕಲಾವತಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಖಾಸಗಿ ಹೋಟೆಲೊಂದರಲ್ಲಿ ಜಾಂಭವ ಯುವ ಸೇನೆಯ ಸಿಂದಗಿ ತಾಲೂಕು ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ರಾಜ್ಯಾಧ್ಯಕ್ಷ ಡಾ.ರಮೇಶ ಚಕ್ರವರ್ತಿ ಅವರ ಆದೇಶದ ಮೇರೆಗೆ ಆದೇಶ ಪತ್ರ ನೀಡಿದರು.ಇದೇ ಸಂದರ್ಭದಲ್ಲಿ ಕರ್ನಾಟಕ ಆದಿಜಾಂಭವ ಜನಸಂಘದ ಉಕ ವಲಯ ಅಧ್ಯಕ್ಷ ಸಾಯಬಣ್ಣ ದೇವರಮನಿ, ಕೆಂಚಪ್ಪ ಪುರದಾಳ, ಆಕಾಶ ಇಂಗಳಗಿ, ಕನಕಮೂರ್ತಿ ವಗ್ಗರ, ಕಲ್ಯಾಣಿ ಪುರದಾಳ, ಮಂಜುನಾಥ ಕಟ್ಟಿಮನಿ ಹಣಮಂತ ಹೊಸಮನಿ, ರಾಹುಲ ದೊಡಮನಿ, ಮಂಜುನಾಥ ಯಾದವ, ನಾಗೇಶ ವಗ್ಗರ, ಸೋಮು ಕಡಿಮನಿ, ಸಂಜು ಕಟ್ಟಿಮನಿ, ಪ್ರಜ್ವಲ ದೇವರಮನಿ, ರಾಘು ಮೇಲಿನಮನಿ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ನಿಡಗುಂದಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷರಾಗಿ ಆಲಮಟ್ಟಿಯ ಚಂದ್ರಶೇಖರ ನುಗ್ಗಲಿ ಆಯ್ಕೆಯಾದರು.ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಣ ಸಭೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾದರು.ವಿಜಯೋತ್ಸವ;ಅವರು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ನಿಡಗುಂದಿ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರು, ಚಂದ್ರಶೇಖರ ನುಗ್ಗಲಿ ಅಭಿಮಾನಿಗಳು ಪಟ್ಟಣದ ಮುದ್ದೇಬಿಹಾಳ ಕ್ರಾಸ್ , ರೇಣುಕಾ ಮೆಡಿಕಲ್ ಶಾಪ್, ಬಸ್ ನಿಲ್ದಾಣ ಸೇರಿದಂತೆ ನಾನಾ ಕಡೆ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ತಾಲೂಕು ಅಧ್ಯಕ್ಷರಾದ ಮಹಾಂತೇಶ, ಮುಕಾರ್ತಿಹಾಳ ಹಾಗೂ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಲೀಂ ದಡೆದ, ಆರ್.ಬಿ.ಗೌಡರ ಮತ್ತಿತರರು, ೧ಲಕ್ಷ ೮೦ ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಯ ಸದಸ್ಯರಿರುವ ಆರು ದಶಕಗಳ ಇತಿಹಾಸ ಹೊಂದಿರುವ ಸಂಘಟನೆಯ ಚುಕ್ಕಾಣಿ ನಮ್ಮ ಜಿಲ್ಲೆಗೆ ಪ್ರಥಮ ಬಾರಿಗೆ ಲಭಿಸಿದೆ.ಶಿಕ್ಷಕ ಸಂಘಟನೆಗೆ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟ ಚಂದ್ರಶೇಖರ ನುಗ್ಗಲಿ ಅವರಿಗೆ ಈ ಹುದ್ದೆ ತಾನಾಗಿಯೇ ಒಲಿದು ಬಂದಿದೆ ಎಂದರು.ಸAಘದ ರಾಜ್ಯ ಸಹ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ವಿದ್ಯಾರ್ಥಿಗಳು ಸಾಕ್ಷಾತ್ ಸರಸ್ವತಿ ಆರಾಧಕ ರಾಗಬೇಕು. ಆ ನಿಟ್ಟಿನಲ್ಲಿ ಅಧ್ಯಯನವೇ ಜೀವನದ ಪಥವಾಗಬೇಕು. ಶಿಕ್ಷಕರ ಮಾತು ಗಳನ್ನು ಹೀರಿಕೊಂಡು ಬುದ್ದಿಯನ್ನು ಅರಳಿಸಿ ಕೊಳ್ಳಬೇಕು ಎಂದು ಹುಲ್ಯಾಳ ಗುರು ದೇವಾಶ್ರಮದ ಹರ್ಷಾನಂದ ಸ್ವಾಮೀಜಿ ಹೇಳಿದರು.ಬಸವಜ್ಯೋತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಶನಿವಾರ ನಡೆದ ಸರಸ್ವತಿ ಪೂಜೆ, 2025-26ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಬಾಹ್ಯ ಆಕರ್ಷಣೆ ಮೀರಿ ನಿಲ್ಲಬೇಕು. ವೇಗದ ಜಗತ್ತಿನಲ್ಲಿ ಕಾಲಕ್ಕೆ ತಕ್ಕಂತೆ ಬದುಕನ್ನು ಬದಲಿ ಸಿಕೊಳ್ಳಬೇಕು. ಕೇಳಿದ್ದನ್ನು ಮನನ ಮಾಡಿ ಕೊಂಡು ಸ್ಮರಣದಲ್ಲಿ ಇಟ್ಟುಕೊಳ್ಳಬೇಕು. ತಂದೆ-ತಾಯಿಗಳಿಗೆ, ಕಲಿತ ಶಿಕ್ಷಣ ಸಂಸ್ಥೆಗೆ, ನಾಡಿಗೆ ಕೀರ್ತಿ ತರುವ ಹಾಗೂ ಸಂಸ್ಥೆಯ ಗೌರವ ಹೆಚ್ಚಿಸುವ ವಿದ್ಯಾರ್ಥಿಗಳಾಗಬೇಕು ಎಂದು ಹೇಳಿದರು.ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜೇನು ನೊಣಗಳು ಹೂವಿನ ಬಣ್ಣ ಮತ್ತು ವಾಸನೆ ಕಿತ್ತುಕೊಳ್ಳದೆ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಚಾರಿತ್ರ್ಯ ಚಕ್ರವರ್ತಿ ಶ್ರೀಶಾಂತಿಸಾಗರ ಮುನಿ ಮಹಾರಾಜರ 70ನೇ ಪುಣ್ಯತಿಥಿ ಆಚರಣೆಗೆ ಅವಕಾಶ ಲಭಿಸಿದ್ದು, ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಜನತೆ ಪುಣ್ಯವಂತರು ಎಂದು ಮಹಾರಾಷ್ಟ್ರದ ಜೈನ ಸಮುದಾಯದ ಮುಖ್ಯಸ್ಥ ಬಾಳಾಸಾಬ ಪಾಟೀಲ ಹೇಳಿದರು.ನಗರದ ಪ್ರಭಾತನಗರ ಬಡಾವಣೆಯಲ್ಲಿರುವ ಶ್ರೀ ಪಾಶ್ವನಾರ್ಥ ದಿಗಂಬರ ಜೈನ ಮಂದಿರದಲ್ಲಿ ಚಾರಿತ್ರ್ಯ ಚಕ್ರವರ್ತಿ 108 ಶ್ರೀಶಾಂತಿಸಾಗರಮುನಿ ಮಹಾರಾಜರ 70ನೇ ಪುಣ್ಯತಿಥಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಚಾರಿತ್ರ್ಯಚಕ್ರವರ್ತಿ ಶಾಂತಿಸಾಗರ ಮುನಿ ಮಹಾರಾಜರ 70ನೇ ಪುಣ್ಯತಿಥಿ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸೋಣ. ಬೃಹತ್ ಸಮಾರಂಭ ಯಶಸ್ವಿಗಾಗಿ ಆಯೋಜನೆಗೆ ಪ್ರತಿಯೊಬ್ಬರೂ ತನು-ಮನ-ಧನ ಸಹಾಯ ಮಾಡಬೇಕು. ಸಮಿತಿಯವರು ವಹಿಸುವ ಜವಾಬ್ದಾರಿಗಳನ್ನು ಸಮಾಜ ಬಂಧುಗಳು ಅಚ್ಚುಕಟ್ಟಾಗಿˌ ಮಾಡಬೇಕು. ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ. ಅಗಸ್ಟ್ ಅಥವಾ ಸೆಪ್ಟೆಂಬ‌ರ್ ತಿಂಗಳಲ್ಲಿ ಪುಣ್ಯತಿಥಿ ಆಚರಣೆ ದಿನಾಂಕ ನಿಗದಿಗೊಳ್ಳಲಿದೆ ಎಂದು ಹೇಳಿದರು.ಅಧ್ಯಕ್ಷ ಬಾಳಾಸಾಬ ಪಾಟೀಲ, ಉಪಾಧ್ಯಕ್ಷ ಸುಭಾಷ ಮಗದುಮ್, ಕಾರ್ಯದರ್ಶಿ ಅಜೀತ ಬಂಡೆ, ಖಜಾಂಚಿ ರಾವಸಾಹೇಬ ಕೊಣ್ಣೂರ, ಅಭಯಕುಮಾರ ಬಾಗಾದೆ, ಆನಂದ ಉಗಾರೆ,…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನ್ಯಾನೋ ರಸ ಗೊಬ್ಬರಗಳ ಬಳಕೆಯಿಂದ ಅಧಿಕ ಇಳುವರಿ ಪಡೆಯಬಹುದು. ರಸಗೊಬ್ಬರ ಅಭಾವ ಶೇ.50ರಷ್ಟು ಕಡಿಮೆ ಮಾಡಬಹುದು ಎಂದು ಉಪಕೃಷಿ ನಿರ್ದೇಶಕಿ ಮಂಜುಳಾ ಬಸವರೆಡ್ಡಿ ತಿಳಿಸಿದರು.ಕೃಷಿ ಇಲಾಖೆ ಜಮಖಂಡಿ ಹಾಗೂ ಇಷ್ಟೋ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹುಲ್ಯಾಳ ಗ್ರಾಮದ ರುದ್ರಪ್ಪ ಮಲ್ಲಪ್ಪ ಝುಲಪಿ ಇವರ ತೋಟದಲ್ಲಿ ಗೋವಿನಜೋಳ ಬೆಳೆಯಲ್ಲಿ ನ್ಯಾನೋ ಯೂರಿಯಾ, ಡಿಎಪಿಯನ್ನು ದ್ರೋಣ್ ಮೂಲಕ ಸಿಂಪರಣೆ ಮಾಡಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.ನ್ಯಾನೋ ಗೊಬ್ಬರಗಳು ಪರಿಸರ ಸ್ನೇಹಿಯಾಗಿದ್ದು, ವಾತಾವರಣ ವೈಪರೀತ್ಯದ ಕಾಮ ತಡೆಗಟ್ಟುತ್ತವೆ. ಅರ್ಧ ದುಷ್ಪರಿಣಾಮ ಲೀಟರ್ ಒಂದು ಬಾಟಲ್ ಒಂದು ಚೀಲ ಹರಳು ರಸಗೊಬ್ಬರಕ್ಕೆ ಸಮವಾಗಿದೆ. ನ್ಯಾನೋ ಗೊಬ್ಬರಗಳ ಬಳಕೆಯಿಂದ ಬೆಳೆಗಳು ಉತ್ತಮ ರೀತಿಯಲ್ಲಿ ಬೆಳವಣಿಗೆ ಹೊಂದುತ್ತವೆ. ಕೃಷಿ ಕಾರ್ಮಿಕರ ಅವಲಂಬನೆ ಕಡಿತಗೊಳಿಸುತ್ತದೆ. ಸಮಯವ ಉಳಿತಾಯವಾಗುತ್ತದೆ. ಡೋಣ್ ಣ್ ಯಂತ್ರ ಬಾಡಿ ಬಾಡಿಗೆ ಪಡೆದು ನ್ಯಾನೋ ಗೊಬ್ಬರ ಹಾಗೂ ಕೀಟನಾಶಕಗಳ ಸಿಂಪರಣೆ ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ರೈತರು ನೇರ ಗೊಬ್ಬರಗಳ ಬದಲಾಗಿ ನ್ಯಾನೋ ಗೊಬ್ಬರಗಳ ಬಳಕೆ…

Read More