Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಪೂಜ್ಯರೇ..ತಾವು ಕೆಲವು ವರುಷಗಳಿಂದ ವಚನ ಚಳುವಳಿ ಶರಣರ ಚಿಂತನ ಆಶಯಗಳಿಗೆ ವ್ಯತಿರಿಕ್ತವಾಗಿ ಮಾತ ಆಡುತ್ತಿರುವುದು ಕಂಡು ಬಂದಿದೆ. ಹಲವು ಬಾರಿ ತಾವು ಅಸಂವಿಧಾನ ಪದಗಳನ್ನು ಬಳಸಿ ಶರಣ ಸಂಸ್ಕೃತಿ ಬಸವ ಪರಂಪರೆಗೆ ನಿರಂತರ ಅವಮಾನ ಮಾಡುತ್ತಿದ್ದೀರಿ.ವಚನಗಳ ಮೂಲ ಸ್ವರೂಪ ಮತ್ತು ಅರ್ಥವನ್ನು ವಿರೂಪಗೊಳಿಸುತ್ತಿದ್ದೀರಿ. ಬಹುಶಃ ನೀವು ವಚನ ಸಾಹಿತ್ಯದ ಮೌಲ್ಯವನ್ನು ಮತ್ತು ಅಧ್ಯಯನವನ್ನು ಇನ್ನೊಮ್ಮೆ ಅವಲೋಕನ ಮಾಡಿ.ತಮ್ಮ ಗಮನಕ್ಕೆ ಈ ಕೆಳಗಿನ ಅಂಶಗಳು 1 )ಬಸವಣ್ಣ ಮತ್ತು ಶರಣರ ವಚನಗಳು ಅವೈದಿಕ ಮತ್ತು ಸನಾತನ ವ್ಯವಸ್ಥೆಯ ವಿರುದ್ಧ ಬಂಡೆದ್ದ ಸೈದ್ಧಾಂತಿಕ ಚಿಂತನೆಗಳು. 2 )ಸುಮಾರು 48 ವಚನಕಾರರು 468 ವಚನಗಳಲ್ಲಿ ವೇದ ಆಗಮ ಶಾಸ್ತ್ರ ಪುರಾಣಗಳನ್ನು ಸಾರಾ ಸಗಟಾಗಿ ತಿರಸ್ಕರಿಸಿದ್ದಾರೆ. 3) ಎಲ್ಲಾ ವೈದಿಕ ವ್ಯವಸ್ಥೆಯ ಆಚರಣೆಗಳನ್ನು ತಳ್ಳಿ ಹಾಕಿದ್ದಾರೆ 4)ತಾವು ಮೇಲಿಂದ ಮೇಲೆ ಬಸವಣ್ಣ ಹಿಂದೂ ಧರ್ಮದವನು ಹಿಂದೂ ಧರ್ಮದ ಉದ್ಧಾರಕ ಎಂದೆಲ್ಲಾ ನೀವು ನಿಮ್ಮ ಬಳಗ ಹೇಳುತ್ತಿದೆ. ಪೂಜ್ಯರೇ ತಾವು ಹಿಂದೂ ಪದವನ್ನು ಯಾವ ವೇದ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರ ಕನಸಿನ ಯೋಜನೆಯಾದ ಸಂತೆ ಮಾರುಕಟ್ಟೆ ಅಭಿವೃದ್ಧಿಯ ಕಾಮಗಾರಿಗೆ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಅವರ ಮತಕ್ಷೇತ್ರವಾದ ಬಸವನ ಬಾಗೇವಾಡಿಯ ಕೊಲ್ಹಾರ ಪಟ್ಟಣಕ್ಕೆ ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ಪಟ್ಟಣದ ದಿಗಂಬರೇಶ್ವರ ಮಠದ ಬಳಿಯಿರುವ ಸಂತೆ ಮಾರುಕಟ್ಟೆ ಆವರಣದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷ ಚನಮಲ್ಲಪ್ಪ ಗಿಡ್ಡಪ್ಪಗೋಳ ಭೂಮಿ ಪೂಜೆ ನೆರವೇರಿಸಿದರು.ನಬಾರ್ಡ್ ಯೋಜನೆ ಅಡಿಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವಿಜಯಪುರ ವ್ಯಾಪ್ತಿಯಲ್ಲಿ ಬರುವ ಕೊಲ್ಹಾರ ಪಟ್ಟಣದಲ್ಲಿ 4 ಎಕರೆ 23 ಗುಂಟೆ ಜಾಗದಲ್ಲಿ ಅಂದಾಜು 7 ಕೋಟಿ ರೂಪಾಯಿ ವೆಚ್ಚದ ಸಂತೆ ಮಾರುಕಟ್ಟೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.ಸಂತೆ ಮಾರುಕಟ್ಟೆಯು ಕಂಪೌಂಡ್ ಗೋಡೆ, ಪ್ಲಾಟ್ ಫಾರ್ಮ್, ಡಾಂಬರ ರಸ್ತೆ, ಚರಂಡಿ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಹೈಮಾಸ್ಕ್ ಲೈಟ್, ಜಾನುವಾರು ಕಟ್ಟಲು ಕಲ್ಲಿನ ವ್ಯವಸ್ಥೆ ಸೇರಿದಂತೆ ಹಲವಾರು ಕಾಮಗಾರಿಗಳನ್ನು ಒಳಗೊಂಡಿದೆ.ಮಹಾಂತಯ್ಯ ಹಿರೇಮಠ ಪೂಜೆ ನೆರವೇರಿಸಿದರು.ಈ ವೇಳೆ ಎ ಪಿ ಎಂ ಸಿ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರುಗಳಿಗೆ ಉಪವೇಶನ ಶುಲ್ಕವನ್ನು ನೀಡುವಂತೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗ್ರಾಮ ಪಂಚಾಯತಿ ಸದಸ್ಯರ ಮಹಾಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರದೀಪ ಪಾಟೀಲ ಮನವಿ ಸಲ್ಲಿಸಿದರು.ಸರಕಾರದ ಆದೇಶದ ಪ್ರಕಾರ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಿಗೆ ಸಭೆಯೊಂದಕ್ಕೆ ಎ,26 2011 ರಿಂದ ನ 23 2023 ರವರೆಗೆ ₹ 100, ಜ 23 2024 ರಿಂದ ನ 16 2025 ರವರೆಗೆ ₹ 300 ಹಾಗೂ ಜ 6 2025 ರಿಂದ ₹ 350 ಗಳನ್ನು ಕೊಡಲು ಆದೇಶವಿದ್ದರೂ ಕೂಡಾ ಇಲ್ಲಿಯವರೆಗೆ ಕೊಲ್ಹಾರ ತಾಲ್ಲೂಕಿನ ಪಿಡಿಓ ಅಧಿಕಾರಿಗಳು ಗ್ರಾಮ ಪಂಚಾಯತ್ ಸದಸ್ಯರುಗಳ ಸಭೆಗಳಿಗೆ ನೀಡಬೇಕಾಗಿದ್ದ ಉಪವೇಶನ ಶುಲ್ಕವನ್ನು ನೀಡಿರುವುದಿಲ್ಲ, ಕಾರಣ ತಕ್ಷಣ ನೀಡಲು ಕ್ರಮ ತೆಗೆದುಕೊಳ್ಳುವಂತೆ ಮನವಿ ಸಲ್ಲಿಸಿದರು.ಕ್ರಮ ತೆಗೆದುಕೊಳ್ಳದೆ ಹೋದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವದು ಎಂದು ಮನವಿಯಲ್ಲಿ ತಿಳಿಸಿದ್ದಾರೆ,
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ವಾಹನ ಸವಾರರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕೊಲ್ಹಾರ ಪೊಲೀಸ ಠಾಣಾಧಿಕಾರಿ ಅಶೋಕ ನಾಯಕ ತಿಳಿಸಿದರು.ವಿಜಯಪುರ ಜಿಲ್ಲಾ ಪೊಲೀಸ್ ಹಾಗೂ ಬಸವನಬಾಗವಾಡಿ ಉಪ ವಿಭಾಗದ ಕೊಲ್ಹಾರ ಪೊಲೀಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಅಂಗವಾಗಿ ವಿಜಯಪುರ ಹುಬ್ಬಳ್ಳಿ ರಾಷ್ಟೀಯ ಹೆದ್ದಾರಿ ಬಳಿ ಸೋಮವಾರ ಪಿಎಸ್ಐ ಅಶೋಕ ನಾಯಕ ಅವರು ದ್ವಿಚಕ್ರ ವಾಹನ ಸವಾರರಿಗೆ ಗುಲಾಬಿ ಹೂ ಕೊಡುವುದರ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.ಕಡ್ಡಾಯವಾಗಿ ದ್ವಿಚಕ್ರ ವಾಹನದ ಸವಾರರು ಹೆಲ್ಮೆಟ್ ಧರಿಸತಕ್ಕದ್ದು, ಸೀಟ್ ಬೆಲ್ಟ್ ಹಾಕಿಕೊಳ್ಳುವುದು, ಲೈಸನ್ಸ್ ಅನ್ನು ಹೊಂದಿರುವುದು, ವಾಹನದ ಇನ್ಸೂರೆನ್ಸ್ ಕಡ್ಡಾಯ ಮಾಡಿಸಿಕೊಳ್ಳುತಕ್ಕದ್ದು, ವಾಹನದ ನೋಂದಣಿಯನ್ನು ಮಾಡಿಸಿಕೊಳ್ಳುವಂಥದ್ದು, ಕುಡಿದು ವಾಹನ ಚಾಲನೆಯನ್ನು ಮಾಡದೆ ಇರುವುದು ಈ ರೀತಿ ಮಾಹಿತಿಯನ್ನು ವಾಹನ ಸವಾರರಿಗೆ ನೀಡಿ ಅವರಲ್ಲಿ ಜಾಗೃತಿಯನ್ನು ಮೂಡಿಸಿದರು. ಈ ವೇಳೆ ಪೊಲೀಸ್ ಸಿಬ್ಬಂದಿ ವರ್ಗದವರು ಇದ್ದರು.
ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರಿಂದ ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಾ ಕೇಂದ್ರವಾಗಿರುವ ಕೊಲ್ಹಾರ ಪಟ್ಟಣದಲ್ಲಿ ಕೃಷಿ ಮಾರುಕಟ್ಟೆಗೆ ಮೂಲಭೂತ ಸೌಲಭ್ಯ ಕಲ್ಪಿಸುವ ಕುರಿತು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು.ಈ ವೇಳೆ ಮಾತನಾಡಿದ ಸಚಿವರು, ಕೊಲ್ಹಾರ ಪಟ್ಟಣದಲ್ಲಿ ಕೃಷಿ ಮಾರುಕಟ್ಟೆ ಸ್ಥಾಪನೆ ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸಬೇಕಿದೆ. ವಿಶೇಷವಾಗಿ ಮಾರುಕಟ್ಟೆ ಪ್ರಾಂಗಣದಲ್ಲಿ ಜಾನುವಾರುಗಳ ಸಂತೆ ನಡೆಸಲು ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿದರು.ಕೃಷಿ ಮಾರುಕಟ್ಟೆ ಪ್ರದೇಶದಲ್ಲಿ ಮೂಲಭೂತ ಸೌಲಭ್ಯ ಸಹಿತ ಅಭಿವೃದ್ಧಿ ಮಾಡುವುದರಿಂದ ಕೊಲ್ಹಾರ ಪಟ್ಟಣ ಅಭಿವೃದ್ಧಿ ಆಗಲಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆ ಬಲವರ್ಧನೆಯಿಂದ ಪಟ್ಟಣ ಪಂಚಾಯತಿಗೂ ಆದಾಯ ಹೆಚ್ಚಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.ಸ್ಥಳೀಯವಾಗಿ ಕೃಷಿ ಮೇಲ್ದಂಡೆ ಯೋಜನೆಯ ಪುನರ್ವಸತಿ ಕೇಂದ್ರದಲ್ಲಿ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ4 ಎಕರೆ ಜಮೀನು ಮಂಜೂರಾಗಿದೆ. ಸದರಿ ಕೃಷಿ ಮಾರುಕಟ್ಟೆಗೆ ಕಾಯಕಲ್ಪ ನೀಡಲು…
ಉದಯರಶ್ಮಿ ದಿನಪತ್ರಿಕೆ ಚಡಚಣ: ಇಂಡಿ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಎದುರಾಗಿರುವ ಸಮಸ್ಯೆಗಳ ಕುರಿತು ಝಳಕಿ ಹಾಗೂ ಇಂಡಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ (ಕಲ್ಯಾಣ) ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಇಂಡಿ ತಾಲೂಕು ಕರವೇ ಉಪಾಧ್ಯಕ್ಷ ಪ್ರಕಾಶಗೌಡ ಬಿರಾದಾರ ಅವರ ನೇತೃತ್ವದಲ್ಲಿ ರವಿವಾರ ಮನವಿ ಸಲ್ಲಿಸಲಾಯಿತು.ಲೋಣಿ ಬಿಕೆ ಗ್ರಾಮದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ (ಕಲ್ಯಾಣ) ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಇಂಡಿ ತಾಲೂಕು ಕರವೇ ಉಪಾಧ್ಯಕ್ಷ ಪ್ರಕಾಶಗೌಡ ಬಿರಾದಾರ, ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿಲ್ಲ ಹಾಗೂ ಕಲಿಕಾ ಚಟುವಟಿಕೆಗಳು ಸರಿಯಾಗಿ ನಡೆಯುತ್ತಿಲ್ಲ. ಇಂಡಿ ತಾಲೂಕಿನ ಬಹುತೇಕ ಅಂಗನವಾಡಿಗಳಲ್ಲಿಯೂ ಇದೇ ಪರಿಸ್ಥಿತಿ ಇರುವುದಾಗಿ ಆರೋಪಿಸಿದರು.ಈ ಕುರಿತು ಸಿಡಿಪಿಓ ಅಧಿಕಾರಿಗಳಿಗೆ ಹಲವು ಬಾರಿ ಕ್ರಮಗೈಗೊಳ್ಳುವಂತೆ ಹೇಳಿದರು ಯಾವುದೇ ಪ್ರಯೋಜನ ವಾಗಿಲ್ಲಾ ಎಂದ ಅವರು ಯಾವುದೇ ಅಂಗನವಾಡಿ ಕೇಂದ್ರಗಳಿಗೆ ಸಿಡಿಪಿಓ ಅಧಿಕಾರಿಗಳು ಭೇಟಿ ನೀಡದೆ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಸಾವಿತ್ರಿಬಾಯಿ ಫುಲೆ ಅವರು ಮಹಿಳಾ ಶಿಕ್ಷಣ ಪ್ರಸಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿರಿಸಿದ್ದರು ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಭೀಮಾಶಂಕರ ವಾಘಮೋರೆ ಹೇಳಿದರು.ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಂ-2 ಮರಡಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಾತೆ ಸಾವಿತ್ರಿಬಾಯಿ ಫುಲೆ ಜಯಂತಿಯ ಮುಖ್ಯ ಅತಿಥಿಗಳಾಗಿ ಮಾತನಾಡಿದರು. 19ನೇ ಶತಮಾನದ ಭಾರತದ ಪ್ರಸಿದ್ಧ ಸಮಾಜ ಸುಧಾರಕಿಯಾಗಿದ್ದ ಸಾವಿತ್ರಿಬಾಯಿ ಫುಲೆ ಅವರು ಶ್ರೇಷ್ಠ ಲೇಖಕಿ ಸಹ ಹೌದು, ಲಿಂಗಭೇದ ಮತ್ತು ಜಾತಿ ಸಮಸ್ಯೆಗಳ ವಿರುದ್ಧ ಹೋರಾಡಿ,ಮಹಿಳಾ ಶಿಕ್ಷಣಕ್ಕೆ ಒತ್ತು ನೀಡುತ್ತಾ ಭಾರತೀಯ ಸ್ತ್ರೀವಾದದ ತಾಯಿಯಾಗಿ ಇಂದಿನ ಯುವತಿಯರಿಗೆ ಸ್ಪೂರ್ತಿಯಾಗಿದ್ದಾರೆ ಎಂದರು.ಶಿಕ್ಷಕ ಜಗದೀಶ ಚಲವಾದಿ ಮಾತನಾಡಿ ಗರ್ಭಿಣಿ ಮತ್ತು ಶೋಷಿತ ವಿಧವೆಯರ ಸುರಕ್ಷತೆಗಾಗಿ ತಮ್ಮ ಸ್ವಂತ ಮನೆಯಲ್ಲಿ ಶಿಶು ಹತ್ಯೆ ತಡೆಗಟ್ಟುವ ಮನೆ ಪ್ರಾರಂಭಿಸಿ ಸತ್ಯಶೋಧಕ ಸಮಾಜ ಸ್ಥಾಪಿಸಿ, ವರದಕ್ಷಿಣೆ ಅಥವಾ ಬಹಿರಂಗ ವೆಚ್ಚವಿಲ್ಲದೆ ಮದುವೆಯ ಅಭ್ಯಾಸವನ್ನು ಪ್ರಾರಂಭಿಸಿದ ಭಾರತದ ದಿಟ್ಟ ಮಹಿಳೆ ಎಂದು ಹೇಳಿದರು. ಸಂದರ್ಭದಲ್ಲಿ ಶಾಲೆಯ ಎಲ್ಲ ಮಕ್ಕಳಿಗೆ ಜಯಂತಿ ಸವಿನೆನಪಿಗಾಗಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮನೆಯಿಂದ ಶಾಲೆಗೆ ಬಂದ ಮಗುವಿನಲ್ಲಿ ಉತ್ತಮ ಸಂಸ್ಕಾರ ತುಂಬಿ ಪೂರ್ಣಪ್ರಜ್ಞಾ ಮಾಡಿ ಸಮಾಜಕ್ಕೆ ಕೊಡುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಇನ್ನರ್ ವಿಲ್ ಕ್ಲಬ್ ಮಾಜಿ ಅಧ್ಯಕ್ಷೆ ನಾಗರತ್ನ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಮಾಂಗಲ್ಯ ಭವನದಲ್ಲಿ ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಮತ್ತು ಕ್ರೀಯೇಟಿವ್ ಕಿಡ್ಸ್ ಹೋಮ್ದ ವಾರ್ಷಿಕೋತ್ಸವದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರೆಂದರೆ ಶ್ರೇಷ್ಠ ಶಿಲ್ಪಿಗಳಾಗಿದ್ದು, ಮಕ್ಕಳಲ್ಲಿ ಸಮಾನತೆ, ವೈಚಾರಿಕತೆ, ದಯೆ ಮುಂತಾದ ರಾಷ್ಟ್ರೋದ್ಧಾರದ ವಿಚಾರಗಳನ್ನು ಬಿತ್ತುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಈ ಶಾಲೆಯ ಶಿಕ್ಷಕಿಯರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆ ಸಂಸ್ಥಾಪಕ ರಾಷ್ಟç ಪ್ರಶಸ್ತಿ ಪುರಸ್ಕೃತ ಶಿಕ್ಷಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹ.ಮ. ಪೂಜಾರ ಮಾತನಾಡಿ, ಮಕ್ಕಳಿಗೆ ಸಾಂಪ್ರದಾಯಿಕ ಶಿಕ್ಷಣ ನೀಡುವುದರ ಜೊತೆಗೆ ಅವರ ವ್ಯಕ್ತಿತ್ವ ರೂಪಿಸುವ ಚಟುವಟಿಕೆಗಳನ್ನು ಶಾಲೆ ಹಮ್ಮಿಕೊಳ್ಳಾಗುತ್ತಿದೆ. ಮಕ್ಕಳಿಗೆ ಉನ್ನತ ಶಿಕ್ಷಣ, ಮೌಲ್ಯಾಧಾರಿತ ಸಂಸ್ಕಾರ ಕ್ರೀಯಾತ್ಮಕ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಾನೂನು ಪದವಿ ಪಡೆದುಕೊಳ್ಳಬೇಕಾದರೆ ಮೊದಲೆಲ್ಲ ಬೇರೆಡೆಗೆ ಹೋಗಿ ಕಲಿಯುವ ವ್ಯವಸ್ಥೆ ಇತ್ತು. ಆದರೆ ಇಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಟಿಎಸ್ಪಿ ಮಂಡಳಿ ಗ್ರಾಮೀಣ ಮಕ್ಕಳ ಅನುಕೂಲಕ್ಕಾಗಿ ಕಾನೂನು ಮಹಾವಿದ್ಯಾಲಯ ಪ್ರಾರಂಭಿಸಿದ್ದು ಸಂತಸ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ನಾಗೇಶ ಮೊಗೇರ ಹೇಳಿದರು.ಸಿಂದಗಿ ಪಟ್ಟಣದ ಎಚ್.ಜಿ.ಕಾಲೇಜಿನ ಸಭಾಂಗಣದಲ್ಲಿ ಟಿಎಸ್ಪಿ ಮಂಡಳಿ ಕಾನೂನು ಮಹಾವಿದ್ಯಾಲಯ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ಹಮ್ಮಿಕೊಂಡ ಕಾನೂನು ಅರಿವು ನೆರವು, ರಸ್ತೆ ಸುರಕ್ಷತಾ ಜಾಗೃತಿ ಸಪ್ತಾಹ ಹಾಗೂ ವಿದ್ಯಾರ್ಥಿ ಒಕ್ಕೂಟ, ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತದಲ್ಲಿಯೂ ವಕೀಲರ ಪಾತ್ರ ಬಹಳ ಮುಖ್ಯವಾಗಿದೆ. ಇಲ್ಲಿನ ವಿದ್ಯಾರ್ಥಿಗಳು ಒಳ್ಳೆಯ ರಿತೀಯಿಂದ ಅಧ್ಯಯನ ಮಾಡಿ ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು.ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎ.ಆರ್.ಎ ಮುಲ್ಲಾ, ಸಿವಿಲ್ ನ್ಯಾಯಾಧೀಶೆ ಪಂಕಜಾ ಕೊಣ್ಣೂರ ಮಾತನಾಡಿ, ಕಾನೂನು ಮಹಾವಿದ್ಯಾಲಯವನ್ನು ತಾಲೂಕು ಮಟ್ಟದಲ್ಲಿ ಈ…
ಎರಡೆರಡು ಮರಣೋತ್ತರ ಪರೀಕ್ಷೆ | ಪ್ರಕರಣ ಮರೆಮಾಚಲು ಕಾಂಗ್ರೆಸ್ ವ್ರವಸ್ಥಿತ ಯತ್ನ | ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಆರೋಪ ಬೆಂಗಳೂರು: ಬಳ್ಳಾರಿ ಗುಂಡಿನ ದಾಳಿಯನ್ನು ‘ಮರೆಮಾಚಲು’ ಕರ್ನಾಟಕ ಸರ್ಕಾರ ವ್ಯವಸ್ಥಿತ ಪಿತೂರಿ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಸೋಮವಾರ ಗಂಭೀರ ಆರೋಪ ಮಾಡಿದ್ದು, ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.ಜೆಡಿ(ಎಸ್) ರಾಜ್ಯ ಕಚೇರಿ ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ‘ಈ ವಿಷಯವು ಕೇವಲ ಪಕ್ಷದ ಕಾರ್ಯಕರ್ತನ ಹತ್ಯೆಯಲ್ಲ, ಆದರೆ ಹೊಣೆಗಾರರನ್ನು ರಕ್ಷಿಸಲು ಸರ್ಕಾರ ಮಾಡಿದ ಪ್ರಯತ್ನಗಳಾಗಿವೆ. ಸಂತ್ರಸ್ತನ ದೇಹವನ್ನು ಅಕ್ರಮವಾಗಿ ಎರಡು ಮರಣೋತ್ತರ ಪರೀಕ್ಷೆಗಳಿಗೆ ಒಳಪಡಿಸಲಾಗಿದೆ. ಕರ್ನಾಟಕದಲ್ಲಿ “ಕಾನೂನು ಮತ್ತು ಸುವ್ಯವಸ್ಥೆಯ ಕುಸಿತ” ಎಂದು ಅವರು ವಿವರಿಸಿದ್ದನ್ನು ಉಲ್ಲೇಖಿಸಿ, ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕೆಂದು ಅವರು ಒತ್ತಾಯಿಸಿದರು.ಅಂತೆಯೇ ಗುಂಡಿನ ಚಕಮಕಿಯ ಸುತ್ತಲಿನ “ನಿರೂಪಣೆಯನ್ನು ಬದಲಾಯಿಸುವ” ಪ್ರಯತ್ನದ ಭಾಗವಾಗಿ ಎರಡನೇ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಎರಡನೇ ಮರಣೋತ್ತರ ಪರೀಕ್ಷೆಯ ಅಗತ್ಯವೇನಿತ್ತು. ಮೊದಲ ಮರಣೋತ್ತರ ಪರೀಕ್ಷೆ ವರದಿಯ…
