Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಡಿಜಿಟಲ್ ವಂಚನೆಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಅವಶ್ಯಕತೆ ಇದೆ, ನಮ್ಮ ಇಲಾಖೆಯಿಂದ ಸಾರ್ವಜನಿಕರಿಗೆ ಎಚ್ಚರ ನೀಡುತ್ತಿದ್ದರು ವಂಚನೆ ಮಾತ್ರ ಕಡಿಮೆಯಾಗುತ್ತಿಲ್ಲ ಆದ್ದರಿಂದ ಸಂಘ ಸಂಸ್ಥೆಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಡಿವೈಎಸ್ಪಿ ಎಸ್ ರೋಷನ ಜಮೀರ ಹೇಳಿದರು.ಇಲ್ಲಿನ ಬಸವ ಭವನದಲ್ಲಿ ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್ ವತಿಯಿಂದ ಸಾಮಾಜಿಕ, ಆರ್ಥಿಕ ಅಭಿವೃದ್ಧಿ ಕಾರ್ಯಾಗಾರದ ನಿಮಿತ್ತ ಡಿಜಿಟಲ್ ವಂಚನೆ ತಡೆಗಟ್ಟುವಿಕೆ, ಹಣಕಾಸು, ಸಾಕ್ಷರತೆ, ಜವಾಬ್ದಾರಿಯುತ ಸಾಲ, ಕ್ರೆಡಿಟ್ ಶಿಸ್ತು ಬಗ್ಗೆ ಉಪನ್ಯಾಸ ಜರುಗಿದವು.ಬ್ಯಾಂಕ ಖಾತೆ ಕೆವೈಸಿ ಅಪ್ ಡೆಟ್ ಮಾಡಿಕೊಳ್ಳಿ, ಒಟಿಪಿ ಹೇಳುವದು, ಮೊಬೈಲನಲ್ಲಿ ಬರುವ ಲಿಂಕ ಒತ್ತುವದು, ಅನಾಮಿಕ ಕರೆಗಳು, ಬ್ಯಾಂಕ ಸಿಬ್ಬಂದಿ ಹೆಸರಿನಲ್ಲಿ ಕರೆಗಳು ಬಂದಾಗ ಗಾಬರಿಯಾಗಿ ಯಾರು ಸ್ಪಂದಿಸಬಾರದು, ತಾವು ಖುದ್ದಾಗಿ ಬ್ಯಾಂಕಗೆ ಹೋಗಿ ವಿಚಾರಿಸಬೇಕು ಎಂದರು.ಪ್ರಾದೇಶಿಕ ವ್ಯವಸ್ಥಾಪಕ ರಾಮಕೃಷ್ಣ ಮಾತನಾಡಿ ಆರ್ಥಿಕ ನೆರವು, ಹಣಕಾಸು ಸಾಕ್ಷರತೆ ಬಗ್ಗೆ ಮಾತನಾಡಿ ನಿಮ್ಮ ಹೂಡಿಕೆ ಹಣವನ್ನು ನಿಮ್ಮಷ್ಟು ಕಾಳಜಿಯಿಂದ ನಿರ್ವಹಿಸಲು ಯಾರಿಂದಲೂ ಸಾಧ್ಯವಿಲ್ಲ, ತಜ್ಞರಿಂದ ಸಲಹೆ…
ಲೇಖನ- ಡಾ ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಕನ್ನಡ ಸಾಹಿತ್ಯದಲ್ಲಿ ಕೈವಲ್ಯ ಪದ್ದತಿಯನ್ನು ಪರಂಪರೆಯನ್ನು ಮುಂದುವರೆಸಿಕೊಂಡು ಹೋದವರಲ್ಲಿ ಬಾಲಲೀಲಾ ಮಹಾಂತ ಸ್ವಾಮಿಗಳು ಪ್ರಮುಖರು.ಮುಳಗುಂದ ಬಾಲಲೀಲಾ ಮಹಾಂತ ಶಿವಯೋಗಿಗಳು ಪ್ರಸಿದ್ಧ ಶಿವಯೋಗಿಗಳು ಮತ್ತು ಪವಾಡ ಪುರುಷ ಎಂದು ಹೆಸರುವಾಸಿಯಾಗಿದ್ದಾರೆ. ಅವರು ಮುಳಗುಂದ ಪಟ್ಟಣದಲ್ಲಿ ನೆಲೆಸಿದ್ದರು ಮತ್ತು ಅವರ ಸ್ಮರಣಾರ್ಥ ಜಾತ್ರಾ ಮಹೋತ್ಸವವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. ಅವರು ಬಾಲ್ಯದಲ್ಲಿಯೇ ವೈರಾಗ್ಯ ತಳೆದು, ದೇಶ ಸಂಚಾರ ಮಾಡಿ, ಅನೇಕ ಪವಾಡಗಳನ್ನು ಮಾಡಿದ್ದಾರೆ ಎಂದು ಹೇಳಲಾಗುತ್ತದೆ. ಇಲ್ಲಿ ಅವರ ಬಗ್ಗೆ ಇನ್ನಷ್ಟು ಮಾಹಿತಿ ಇದೆ:ಜೀವನ ಮತ್ತು ವೈರಾಗ್ಯಬಾಲಲೀಲಾ ಮಹಾಂತ ಶಿವಯೋಗಿಗಳು ವಿಜಯಪುರ ಜಿಲ್ಲೆಯ ಎರಿನಾಳ ಗ್ರಾಮದಲ್ಲಿ ಜನಿಸಿದರು ಎಂದು ನಂಬಲಾಗಿದೆ. ಅವರು ಎಂಟು ವರ್ಷದವರಾಗಿದ್ದಾಗ ವೈರಾಗ್ಯ ಪಡೆದು, ದೇಶ ಸಂಚಾರ ಮಾಡಿದರು.ಪವಾಡಗಳುಶಿವಯೋಗಿಗಳು ಅನೇಕ ಪವಾಡಗಳನ್ನು ಮಾಡಿದ್ದಾರೆಂದು ಹೇಳಲಾಗುತ್ತದೆ. ಮೈಸೂರು ಮಹಾರಾಜರ ರೋಗ ವಾಸಿ ಮಾಡಿದ್ದು, ಭಕ್ತನೊಬ್ಬನಿಗೆ ಪ್ರಸಾದದ ತಟ್ಟೆ ತುಂಬಿಸಿದ್ದು, ಮತ್ತು ಮಹಿಳೆಯೊಬ್ಬರಿಗೆ ಸಂತಾನ ಪ್ರಾಪ್ತಿಯಾಗುವಂತೆ ಆಶೀರ್ವಾದ ಮಾಡಿದ್ದು ಇವು ಕೆಲವು ಉದಾಹರಣೆಗಳು.ಮುಳಗುಂದದಲ್ಲಿ ನೆಲೆಅವರು ಮುಳಗುಂದ…
ಲೇಖನ- ಅರವಿಂದ ಜಿ. ಜೋಷಿಮೈಸೂರು”ನಮ್ಮ ಕಥಾ ಅರಮನೆ”ಬರಹಗಾರರು ಉದಯರಶ್ಮಿ ದಿನಪತ್ರಿಕೆ ಹುಟ್ಟುವಾಗಲೇ ಅಂಗವಿಕಲತೆ ಯಾಗಿದ್ದ ಅರುಣಾ,ಹೆತ್ತ ತಾಯಿ ಹೊರತುಪಡಿಸಿಉಳಿದವರ ದೃಷ್ಟಿಯಲ್ಲಿ ಬೇಡದ ವಸ್ತುವಿನಂತಾಗಿದ್ದಳು. ಸಾಮಾನ್ಯವಾಗಿ ಸೃಷ್ಟಿಕರ್ತ ತಾನೇನಾದರೂ ಕೊಡುವ ಸಮಯದಲ್ಲಿ ಮರೆತಿದ್ದರೆ ಪುನಃ ಯೋಚಿಸಿ ಅಂತಹವರಿಗೆ ಬೇರೆ ರೂಪದಲ್ಲಿ ಎರಡರಷ್ಟನ್ನು ಕರುಣಿಸುತ್ತಾನೆ ಎಂಬ ಮಾತಿಗೆ ಪೂರಕವಾಗುವಂತೆ ಅರುಣಾಳಿಗೆ ಅಸಾಧ್ಯ ಚುರುಕು ಬುದ್ಧಿ ನೀಡಿದ್ದ.ಅರುಣಾ ಬೆಳೆಯುತ್ತಿದ್ದಂತೆ ಗಣೀತ ವಿಷಯದಲ್ಲಿ ಅಪಾರ ಆಸಕ್ತಿ ತೋರಿಸುತ್ತ ಅದಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಓದಿ,ಜನ ಯಾವುದನ್ನು ಕಬ್ಬಿಣದ ಕಡಲೆ ಎನ್ನುತ್ತಿದ್ದರೋ ಆ ವಿಷಯವನ್ನು ನೀರು ಕುಡಿದಷ್ಟು ಸಲೀಸಾಗಿ ತಿಳಿದುಕೊಂಡಿದ್ದಳಲ್ಲದೇ ಅಷ್ಟೇ ಸರಳವಾಗಿ ಇತರರಿಗೂ ಅರ್ಥೈಸಿ ಹೇಳಿ ಕೊಡುವ ಸಾಮರ್ಥ್ಯ ಬೆಳೆಸಿಕೊಂಡಿದ್ದಳು. ಹೀಗಾಗಿ ಆಕೆ ತನ್ನ ಹದಿನೆಂಟನೇಯ ವಯಸ್ಸಿನಲ್ಲಿಮನೆಯಲ್ಲಿಯೇ”ಗಣೀತ”ವಿಷಯದ ಟ್ಯೂಷನ್ ಆರಂಭಿಸಿ ವಿದ್ಯಾರ್ಥಿಗಳ ಮನ ಮೆಚ್ಚುವ ಶಿಕ್ಷಕಿಯಾಗಿದ್ದಳು. ದಿನ ಕಳೆದಂತೆ ಇವಳ ಪಾಠ ಮಾಡುವ ಕೌಶಲ್ಯತೆಯ ಕೀರ್ತಿ ಸುತ್ತೆಲ್ಲ ಹರಡಿದಾಗ ಸಾಕಷ್ಟು ವಿದ್ಯಾರ್ಥಿಗಳು ಇವಳ ಪಾಠಕ್ಕೆ ಸೇರತೊಡಗಿದರು. ಅದರಿಂದ ಸಹಜವಾಗಿ ಲಕ್ಷ್ಮೀ ಅನುಗ್ರಹ ವೂ ಆಗತೊಡಗಿತು.ಈ ನಡುವೆ ಪುಟ್ಟ ಸಂಸಾರ…
ರಚನೆ- ಅನಸೂಯಾ ಕಾರಂತ್”ನಮ್ಮ ಕಥಾ ಅರಮನೆ”ಬರಹಗಾರರು ಉದಯರಶ್ಮಿ ದಿನಪತ್ರಿಕೆ ಚೈತ್ರ ಮಾಸದಿ ಮತ್ತೆ ವಸಂತನ ಆಗಮನಭೂದೇವಿಯ ಒಡಲಲ್ಲೊಂದು ನವಚೇತನಮಾಮರದಿ ಕೋಗಿಲೆಗಳ ಇಂಪಾದ ಕೂಜನಗರಿಬಿಚ್ಚಿದ ನವಿಲುಗಳ ಸಂತಸದ ನರ್ತನ ವೃಕ್ಷರಾಶಿಯು ಹಣ್ಣುಕಾಯಿಗಳ ಹೊತ್ತಿದೆದುಂಬಿಯೊಂದು ಮಕರಂದವ ಹೀರುತಿದೆಕುಳಿರ್ಗಾಳಿಯು ಬೀಸಿ ತಂಪನ್ನೆರೆಯುತಿದೆಪ್ರಕೃತಿಯಲಿ ಎಲ್ಲೆಲ್ಲೂ ಹಚ್ಚ ಹಸಿರು ತುಂಬಿದೆ ತರುಲತೆಗಳಲಿ ಹೊಸ ಚಿಗುರಿನ ಸಂಚಲನಪ್ರೇಮಿಗಳಿಗಿದು ಮಧುರ ಭಾವದ ಬಂಧನನವ ವರುಷದ ಯುಗಾದಿಯಾಚರಣೆಯ ದಿನಸಕಲರಿಗೂ ಒಳಿತಾಗಲೆಂದು ಹಾರೈಸಿದೆ ಮನ
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿನ ಮಕ್ಕಳೇ ಇಂದಿನ ನಾಯಕರು.ಮಕ್ಕಳು ಸಹ ದೇಶದ ಪ್ರಜೆಗಳಾಗಿರುವುದರಿಂದ ಶಾಲಾ ಕಲಿಕೆಯ ಜತೆಗೆ ಮಕ್ಕಳ ಸಂಸತ್ತಿನ ಮೂಲಕ ಪ್ರಜಾಪ್ರಭುತ್ವದ ಮೂಲಾಂಶಗಳನ್ನು ಬೆಳೆಸಿ, ದೇಶಕ್ಕೆಉತ್ತಮ ನಾಗರಿಕರನ್ನು ಕಾಣಿಕೆಯಾಗಿ ನೀಡಲು ಸಾಧ್ಯ ಎಂದು ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ ಹೇಳಿದರು.ಶುಕ್ರವಾರದಂದು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ‘ಮಕ್ಕಳ ಶಾಲಾ ಸಂಸತ್ತು-ಪ್ರತಿಜ್ಞಾ ವಿಧಿ ಬೋಧನೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳ ಸಂಸತ್-ಮಕ್ಕಳ ಪ್ರಾತಿನಿಧಿಕ ರಚನೆಯಾಗಿದ್ದು, ಶಾಲಾ ಸಿಬ್ಬಂದಿ ಜೊತೆ ಶಾಲಾ ನಿರ್ವಹಣೆಯಲ್ಲಿ ಮಕ್ಕಳನ್ನು ಪಾಲುದಾರರನ್ನಾಗಿ ಮಾಡುವ ಉದ್ದೇಶ ಹೊಂದಿದೆ. ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಇಂತಹ ಚಟುವಟಿಕೆಗಳು ಅಗತ್ಯವಾಗಿವೆ ಎಂದು ಹೇಳಿದರು.ಮುಖ್ಯ ಅತಿಥಿ ಸಂತೋಷ ಬಂಡೆ ಮಾತನಾಡಿ, ಮಕ್ಕಳ ಸಂಸತ್ತಿನಿಂದ ಶಾಲಾ ದಾಖಲಾತಿ ಮತ್ತು ಹಾಜರಾತಿಯಲ್ಲಿ ಸುಧಾರಣೆ ಮಾಡಿ, ಶಾಲೆಯಲ್ಲಿ ಶಿಸ್ತಿನ ಪರಿಸರ ನಿರ್ಮಾಣ ಮಾಡಲು ಸಾಧ್ಯ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಅನುಕೂಲವಾಗುತ್ತದೆ ಎಂದು ಹೇಳಿದರು.ಶಾಲಾ ಶಿಕ್ಷಕರೇ ಮತಗಟ್ಟೆ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದು…
ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ. ಈ ಕ್ಷೇತ್ರದ ಬೇಡಿಕೆಗಳಿಗೆ ಸ್ಪಂದಿಸಲು ಸಣ್ಣ ಕೈಗಾರಿಕೆ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಆಲಕುಂಟೆ ನಗರರದ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ವಿಜಯಪುರ ಜಿಲ್ಲಾ ಮಂಟಪ, ಲಾಯಿಟ್, ಮಾಯಿಕ್, ಫ್ಲಾವರ್ ಡೆಕೋರೇಶನ್ ಕೆಟರರ್ಸ್ ಮತ್ತು ಸಪ್ಲಾಯರ್ಸ್ ಮಾಲಿಕರ ಸಂಘ ಆಯೋಜಿಸಿದ್ದ ವಿಜಯಪುರ ಉತ್ಸವ- 2025 ಮತ್ತು 4ನೇ ಮಹಾ ಅಧಿವೇಶನ ಉದ್ಘಾಟಿಸಿ ಅವರು ಮಾತನಾಡಿದರು.ಶಾಮಿಯಾನ ಸಂಘದವರನ್ನು ಬೆಳೆಸಲು ಮತ್ತು ಅವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸರಕಾರದ ಯೋಜನೆಗಳನ್ನು ಅವರಿಗೆ ತಲುಪಿಸಲಾಗುವುದು. ವಿಜಯಪುರ ಜಿಲ್ಲೆಯಲ್ಲಿ…
ಬಿ.ಎಲ್.ಡಿ.ಇ ಸಂಸ್ಥೆ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಅವರಿಂದ ಸ್ಥಾಪಿತಗೊಂಡ ಭಾರತೀಯ ಲಿಂಗಾಯತ ಡೆವಲೆಪಮೆಂಟ್ ಏಜ್ಯುಕೇಶನಲ್ ಅಸೋಸಿಯೇಶನ್ 115 ವರ್ಷಗಳ ದೀರ್ಘ ಪ್ರಯಾಣದಲ್ಲಿ ಸಾರ್ಥಕ ಸೇವೆಯೊಂದಿಗೆ ಗುಣಾತ್ಮಕ ಶಿಕ್ಷಣ ನೀಡುವತ್ತ ಸಂಸ್ಥೆ ಮುಂಚೂಣಿಯಲ್ಲಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆ ಅಧ್ಯಕ್ಷ, ಸಚಿವ ಎಂ.ಬಿ.ಪಾಟೀಲ ಹೇಳಿದರು.ಜು.18 ರಂದು ಏರ್ಪಡಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ದಾಸೋಹಿ ಪೂಜ್ಯ ಬಂಥನಾಳ ಸಂಗಬಸವ ಮಹಾಶಿವಯೋಗಿಗಳು, ಮುತ್ಸದ್ದಿ ನಾಯಕರಾದ ಬಿ.ಎಂ.ಪಾಟೀಲರ ದೂರದೃಷ್ಟಿಯ ಫಲ ಈ ಭಾಗದಲ್ಲಿ ಎಲ್ಲರಿಗೂ ಶಿಕ್ಷಣ ದೊರೆಯುವ ಮೂಲ ಉದ್ದೇಶ ಸಫಲಗೊಂಡಿದೆ ಎಂದರು.ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ 4500 ವಿವಿಧ ಸಿಬ್ಬಂದಿ ಸಹಯೋಗದಲ್ಲಿ ವಿವಿಧ ವೈದ್ಯಕೀಯ ಶಿಕ್ಷಣ, ವಿವಿಧ ತಾಂತ್ರಿಕ ಶಿಕ್ಷಣ, ಕಲೆ ವಿಜ್ಞಾನ, ವಾಣಿಜ್ಯ, ವ್ಯವಹಾರ ಸೇರಿದಂತೆ ವಿವಿಧ ಕಾಲೇಜುಗಳ 36000 ವಿದ್ಯಾರ್ಥಿಗಳಿಗೆ ಇಡೀ ಕರ್ನಾಟಕದಲ್ಲಿಯೇ ಅತ್ಯುತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದರು.ಬಿ.ಎಲ್.ಡಿ.ಇ ಅಲೆನ್ ಕರಿಯರ್ ಅಕಾಡೆಮಿಯಲ್ಲಿ 2025-26 ನೇ ಸಾಲಿನಿಂದ NEET, JEE, K-CET ತರಬೇತಿಗಳನ್ನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗಕ್ಕೆ ಸಂಬಂಧಿಸಿದ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರೈತರು ಹಾಗೂ ವಿದ್ಯುತ್ ಗ್ರಾಹಕರರೊಂದಿಗೆ ಜುಲೈ ೧೯ರ ಮಧ್ಯಾಹ್ನ ೩:೩೦ಕ್ಕೆ ಸಂವಾದ ಸಭೆಯನ್ನು ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗ ಕಚೇರಿಯಲ್ಲಿ ನಡೆಸಲಾಗುವುದು.ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಂವಾದ ಸಭೆಯಲ್ಲಿ ಭಾಗವಹಿಸಿ,ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೆಸ್ಕಾಂ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘವಿಜಯಪುರ ಜಿಲ್ಲಾ ಘಟಕ ವತಿಯಿಂದ 2025ನೇ ಸಾಲಿನಲ್ಲಿ ಕೊಡಮಾಡುವ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಕೊಲ್ಹಾರ ತಾಲೂಕು ಕನ್ನಡಪ್ರಭ ಪತ್ರಿಕೆಯ ವರದಿಗಾರ ಮಲ್ಲಿಕಾರ್ಜುನ ಕುಬಕಡ್ಡಿ ಆಯ್ಕೆಯಾಗಿದ್ದಾರೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಕೊಲ್ಹಾರ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಅರುಣ ಬ ಔರಸಂಗ ತಿಳಿಸಿದ್ದಾರೆ.ಜು.19 ಶನಿವಾರ ಬೆಳಿಗ್ಗೆ 10 ಗಂಟೆಗೆ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಜವಳಿ, ಸಕ್ಕರೆ, ಕಬ್ಬು ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಸಂಸದ ರಮೇಶ ಜಿಗಜಿಣಗಿ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವ್ಹಿ. ಪ್ರಭಾಕರ್, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕಾನಿಪ ಜಿಲ್ಲಾಧ್ಯಕ್ಷ ಪ್ರಕಾಶ ಬೆಣ್ಣೂರ,…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಶುಚಿಗೊಳಿಸುವ ಕಾರ್ಮಿಕರಿಗೆ ಮತ್ತು ನಾಗರಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸ್ಥಳೀಯ ಪಟ್ಟಣ ಪಂಚಾಯಿತಿ ವತಿಯಿಂದ ‘ನಮಸ್ತೆ ದಿನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಿರೇಶ ಹಟ್ಟಿ ಮಾತನಾಡಿ, ದೇಶ ವ್ಯಾಪ್ತಿಯಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದೊಂದಿಗೆ ಜಂಟಿಯಾಗಿ ನಮಸ್ತೆ ಯೋಜನೆಯನ್ನು ಪ್ರಾರಂಭಿಸಿದ್ದು, ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಕಾರ್ಮಿಕರ (SSWs) ಸುರಕ್ಷತೆ ಮತ್ತು ಘನತೆಯನ್ನು ಕಾಪಾಡುವುದು ಮತ್ತು ನೈರ್ಮಲ್ಯ ಶುಚಿಗೊಳಿಸುವ ಕೆಲಸದಲ್ಲಿ ಸಾವುಗಳಾಗುವುದನ್ನು ತಡೆಗಟ್ಟುವುದು ಈ ಯೋಜನೆಯ ಉದ್ದೇಶವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಸರ್ಕಾರಿ ಡಿಪ್ಲೋಮಾ ಕಾಲೇಜಿನ ಪ್ರಾಚಾರ್ಯ ಎಂ.ಬಿ ಗರಸಂಗಿ ಪೌರಕಾರ್ಮಿಕರಿಗೆ ಒಳಚರಂಡಿ, ಚರಂಡಿ, ರಸ್ತೆಗಳು ಇತರಕಡೆ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಭದ್ರತಾ ಕ್ರಮಗಳ ಬಗ್ಗೆ ಮತ್ತು ಕಾರ್ಮಿಕರು ಧರಿಸಬೇಕಾದ ಉಡುಪುಗಳ ಕುರಿತು ಅರಿವು ಮೂಡಿಸಿದರು.ಈ ಸಂದರ್ಭದಲ್ಲಿ ಪ.ಪಂ ಸದಸ್ಯರು, ಸಿಬ್ಬಂದಿಗಳು ಹಾಗೂ ಪೌರಾಕಾರ್ಮಿಕರು ಇದ್ದರು.
