Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ದಸ್ತು ಬರಹಗಾರರ (ಬಾಂಡ್ ರೈಟರ್ಸ್) ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹಾಗೂ ದಸ್ತುಬರಹಗಾರ ಎಚ್.ಆರ್.ಬಾಗವಾನ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಪಟ್ಟಣದ ದಸ್ತು ಬರಹಗಾರರ ಮಳಿಗೆಗಳ ಆವರಣದಲ್ಲಿ ನಡೆದ ಆಯ್ಕೆ ಪ್ರಕ್ರೀಯೆಯಲ್ಲಿ ಬಾಗವಾನ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಉಪಾಧ್ಯಕ್ಷರನ್ನಾಗಿ ರಾಜೇಂದ್ರಕುಮಾರ ಪಾವಲೆ, ಪ್ರಧಾನ ಕಾರ್ಯದರ್ಶಿಯನ್ನಾಗಿ ಡಿ.ಎಚ್.ತೊಗರಿ, ಖಜಾಂಚಿಯಾಗಿ ಎಂ.ಎಂ.ಕಟಗಿ, ಜಿಲ್ಲಾ ಪ್ರತಿನಿಧಿಯಾಗಿ ಎಚ್.ಎಸ್.ನಾಯ್ಕೋಡಿ ಇವರುಗಳನ್ನು ಆಯ್ಕೆ ಮಾಡಲಾಯಿತು.ಈ ವೇಳೆ ಸಂಘದ ರಾಜ್ಯ ಸಮಿತಿ ಸದಸ್ಯ ಜಿ.ಎಸ್.ಜೋಳದ, ಸದಸ್ಯರಾದ ಎಸ್.ಬಿ.ಕಡಿ, ಡಿ.ಎಸ್.ಹಿರೇಮಠ, ಆರ್.ಎ.ನಾಡಗೌಡ, ಎಸ್.ಎಸ್.ಹಳ್ಳೂರ, ಎಂ.ಎ.ಮುಲ್ಲಾ ಇದ್ದರು.ಇದೇ ವೇಳೆ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಇಂದು ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಬದುಕನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯುವಂತಹ ಕೌಶಲ್ಯಾಧಾರಿತ ಉದ್ಯೋಗಗಳು ಸೃಷ್ಟಿಯಾಗಿವೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಂಡು ತಮ್ಮ ಬದುಕಿನಲ್ಲಿ ಉದ್ಯೋಗ ಮಾಡುವ ಮೂಲಕ ತಮ್ಮ ಬದುಕನ್ನು ಉತ್ತಮವಾಗಿ ಕಳೆಯಬೇಕು ಎಂದು ಬಿಎಲ್ಇಡಿ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಮಾಜಶಾಸ್ತ್ರ ಪ್ರಾಧ್ಯಾಪಕ ಡಾ.ವೈ.ಬಿ.ನಾಯಕ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೌಶಲ್ಯಾಭಿವೃದ್ಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಪದವಿ ಎಂಬುವದು ನಿರುದ್ಯೋಗ ಸೃಷ್ಟಿ ಮಾಡುವ ಹಂತ ಎಂದು ಬಹುತೇಕರು ನಂಬಿದ್ದಾರೆ. ಪದವಿ ಒಂದೇ ನಮ್ಮ ಬದುಕಿಗೆ ಆಸರೆಯಾಗಿ ನಿಲ್ಲುವಂತದ್ದು ಅಲ್ಲ. ಕಲಿಕೆಯ ಜೊತೆ ಜೊತೆಗೆ ಗಳಿಕೆಯನ್ನು ಮಾಡಿಕೊಳ್ಳುವುದು ಜಾಣರ ಲಕ್ಷಣವಾಗಿದೆ ಎಂದರು.ಇಂದು ಮಹಿಳೆಯರು ಮನೆಯಲ್ಲಿಯೇ ಕುಳಿತುಕೊಂಡು ಹೊಲಿಗೆ, ವಸ್ತ್ರ ವಿನ್ಯಾಸ ಮೆಹಂದಿ, ಕಂಪ್ಯೂಟರ್, ಪ್ಯಾಶನ್ ಡಿಸೈನ್ ಮುಂತಾದ ಉತ್ತಮ ಹಣ ಗಳಿಕೆಯ ಚಿಕ್ಕ ಚಿಕ್ಕ ಉದ್ಯೋಗಗಳನ್ನು ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಲು ಸಾಧ್ಯವಿದೆ. ವ್ಯವಹಾರಿಕ ಜ್ಞಾನವಿದ್ದ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಕಲಿಕೆಯ ಹಂಬಲ ಹೊಂದಿರುವ ಬಡ ವಿದ್ಯಾರ್ಥಿಗಳಾದ ತಾಲೂಕಿನ ಸವಳಹಳ್ಳ ತಾಂಡಾದ ಅಂಕಿತಾ ರಾಠೋಡ, ಸಾಹೀಲ ಚವ್ಹಾಣ, ಚೇತನಕುಮಾರ ರಜಪೂತ ಅವರ ಪದವಿ ವ್ಯಾಸಂಗ ಶುಲ್ಕವನ್ನು ತುಂಬುವ ಮೂಲಕ ಸ್ಥಳೀಯ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ವಿನುತ ಕಲ್ಲೂರ (ವಿವೇಕ ಬ್ರಿಗೇಡ್) ಸಚೀನ ಕಲ್ಲೂರ ಅವರು ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಆರ್ಥಿಕವಾಗಿ ಸಹಾಯ ಮಾಡಿದ್ದಾರೆ. ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಅವರಿಗೆ ಗುರುವಾರ ಮೂವರು ವಿದ್ಯಾಥಿಗಳ ಪದವಿ ಶುಲ್ಕವನ್ನು ನೀಡಿದರು. ಮೂವರು ವಿದ್ಯಾರ್ಥಿಗಳ ಪದವಿ ಶುಲ್ಕವನ್ನು ಸ್ವೀಕರಿಸಿದ ಪ್ರಾಚಾರ್ಯರು ಬಡ ವಿದ್ಯಾರ್ಥಿಗಳ ಕಲಿಕೆಗೆ ಧನಸಹಾಯ ಮಾಡಿದ ಮಹನೀಯರ ಕಾರ್ಯ ಶ್ಲಾಘನೀಯವಾಗಿದೆ ಎಂದರು.ಧನ ಸಹಾಯ ಪಡೆದ ವಿದ್ಯಾರ್ಥಿಗಳು ನಾವು ನಿರಂತರ ಅಧ್ಯಯನ ಮಾಡುವ ಮೂಲಕ ಮಹಾವಿದ್ಯಾಲಯಕ್ಕೆ, ಧನಸಹಾಯ ಮಾಡಿದ ಮಹನೀಯರಿಗೆ ಚ್ಯುತಿ ಬಾರದಂತೆ ಉತ್ತಮ ಸಾಧನೆ ಮಾಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ಪೃಥ್ವಿರಾಜ ನಾಯ್ಕೋಡಿ, ಶಿವಾನಂದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕ್ರೀಡೆಗಳು ಬದುಕಿನ ಅವಿಭಾಜ್ಯ ಅಂಗವಾಗಲಿ ಎಂದು ಸಮಾಜ ಸೇವಕ ಫಯಾಜ ಕಲಾದಗಿ ಹೇಳಿದರು.ನಗರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಲಯನ್ಸ್ ಪುಟ್ಬಾಲ್ ಕ್ಲಬ್ ವತಿಯಿಂದ ಹಮ್ಮಿಕೊಂಡ ೨೧ ವರ್ಷ ವಯೋಮಿತಿಯ ಬಾಲಕ ಹಾಗೂ ಬಾಲಕಿಯರ ಪಂದ್ಯಾವಳಿ ಡಾ.ಬಿ.ಆರ್. ಅಂಬೇಡ್ಕರ್ ಪುಟ್ಬಾಲ್ ಪಂದ್ಯಾಳಿ ೨೦೨೫ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಇಂದಿನ ಯುವಕರು ದುಷ್ಟಟಕ್ಕೆ ಬಲಿಯಾಗುತ್ತಿದ್ದಾರೆ. ತಮ್ಮ ಅಮೂಲ್ಯವಾದ ಆರೋಗ್ಯವನ್ನು ಕಾಪಾಡಿಕೊಳ್ಳದೇ ವ್ಯಸನೀಗಳಾಗುತ್ತಿರುವುದು ವಿಷಾದನೀಯ. ಯುವಕರು ಸದೃಢವಾದ ದೇಹವನ್ನು ಹೊಂದಲು ಕ್ರೀಡೆಗಳಲ್ಲಿ ತೊಡಗಿಕೊಳ್ಳಬೇಕು. ಕ್ರೀಡೆಯು ಬದುಕಿನ ಅವಿಭಾಜ್ಯ ಅಂಗವಾಗಬೇಕು ಎಂದು ಕರೆ ನೀಡಿದರು. ರಾಜ್ಯ ಮತ್ತು ದೇಶದ ಕೀರ್ತಿ ಪತಾಕೆಯನ್ನು ಜಗತ್ತಿನಾದ್ಯಂತ ಹರಿಡಿಸುವ ಕೆಲಸದಲ್ಲಿ ಪ್ರತಿಯೊಬ್ಬರು ತೊಡಗಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ್ ದೈವಾಡಿ ಮಾತನಾಡಿದರು.೨೧ ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಲಯನ್ಸ್ ಫುಟ್ಬಾಲ್ ತಂಡ ಪ್ರಥಮ ಸ್ಥಾನ ಪಡೆದರು, ರಿತೇಶ್ ಫುಟ್ಬಾಲ್ ತಂಡ ವಿಜಯಪುರ…
ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ನಿಜವಾಗಿಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳನ್ನು, ಅಲ್ಪಸಂಖ್ಯಾತರನ್ನು ತಮ್ಮ ಮನೆಯಾಳುಗಳ ರೀತಿ ನೆಹರೂ- ಕುಟುಂಬ ನೋಡಿಕೊಂಡು ಬಂದಿದೆ. ಇಂತಹ ಕಾಂಗ್ರೆಸ್ ಪಕ್ಷದಿಂದ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಕೊಡಲು ಸಾಧ್ಯವೇ? ಬಿಹಾರ ರಾಜ್ಯದ ಚುನಾವಣೆ ಸಮೀಪಿಸುತ್ತಿರುವ ಕಾರಣದಿಂದಾಗಿ ಎಐಸಿಸಿಯ ಒಬಿಸಿ ಸಮಿತಿಯು ಸಿದ್ದರಾಮಯ್ಯನವರ ಮೂಲಕ ಹಿಂದುಳಿದ ವರ್ಗಗಳ ಕುರಿತು ಮೊಸಳೆಕಣ್ಣೀರು ಹಾಕುತ್ತಿದೆ ಎಂದು ವ್ಯಂಗ್ಯವಾಡಿದರು.ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಒಬಿಸಿ ಸಮಿತಿಯ ಸಭೆಯಲ್ಲಿ ಹಿಂದುಳಿದವರು ದಲಿತರು ಅಲ್ಪಸಂಖ್ಯಾತರ ಅಭಿವೃದ್ಧಿಯಾಗಿಲ್ಲ ಎಂದರೆ ದೇಶದ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಸಭೆಯಲ್ಲಿ ಹೇಳಿದ್ದಾರೆ. ಬಿಜೆಪಿ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ವಿರೋಧಿ, ಎಂದೂ…
ಲೇಖನ- ಶ್ರೀದೇವಿ ಓಂಕಾರ್”ನಮ್ಮ ಕಥಾ ಅರಮನೆ”ಬರಹಗಾರರು ಉದಯರಶ್ಮಿ ದಿನಪತ್ರಿಕೆ ಈಗಿನ ಕಾಲದಲ್ಲಿ ನಾಗರೀಕತೆ ಅನ್ನೋ ಮಾತು ವಿರಳವಾಗಿ ಹೋಗುತ್ತಾ ಇದೆ. ಐವತ್ತು ಅರವತ್ತು ವರ್ಷಗಳ ಹಿಂದಿನ ಜನರಿಗೂ ಈಗಿನ ಕಾಲದ ಜನರಿಗೂ ತುಂಬಾ ವ್ಯತ್ಯಾಸ ಕಂಡು ಬರುತ್ತದೆ. ಆಧುಕತೆಯು ಹೆಚ್ಚಿದಂತೆ ಅನಾಗರಿಕತೆಯೂ ಹೆಚ್ಚುತ್ತಾ ಇದೆ ಎಂದರೆ ತಪ್ಪಾಗಲಾರದು. ಮನುಷ್ಯನಲ್ಲಿ ಭಯ ಭಕ್ತಿ ಕಡಿಮೆ ಆಗ್ತಾ ಇದೆ. ಯುವ ಪೀಳಿಗೆಗೆ ಯಾವುದೇ ರೀತಿಯ ಭಯವಿಲ್ಲ. ನಾವೆಲ್ಲರೂ ಹಿರಿಯರಿಗೆ ತಗ್ಗಿ ಬಗ್ಗಿ ನಡೆದುಕೊಂಡು ಹೋಗುತ್ತಿದ್ದೆವು. ದೊಡ್ಡವರ ಮಾತು ಚಾಚೂ ತಪ್ಪದೆ ಪಾಲಿಸಿಕೊಂಡು ಹೋಗುತ್ತಿದ್ದೆವು. ಆದರೆ ಮೋಬೈಲ್, ಲ್ಯಾಪ್ಟಾಪ್ ಇದೇ ಇಂದಿನವರ ಜೀವನ ವಾಗಿದೆ. ಹಾಗೆಯೇ ಹಣವು ಎಲ್ಲರನ್ನೂ ತಪ್ಪು ದಾರಿಗೆ ಕೊಂಡು ಹೋಗ್ತಾ ಇರುವುದು ನೋಡ್ತಾ ಇದ್ದೀವಿ. ಹಾಗೆಯೇ ಎಲ್ಲರಿಗೂ ಶೌಕಿ ಜೀವನ ಬೇಕು. ಮನೆ ಹಿರಿಯರು ಅವರಿಗೆ ಬೇಡಾ. ಅದೂ ಅಲ್ಲದೇ ಯಾರನ್ನೂ ಕೇಳಿದರೂ ಗಂಡ ಹೆಂಡತಿ ಹೊಂದಾಣಿಕೆ ಇಲ್ಲದೇ ವಿಚ್ಛೇದನ ಅತಿಯಾಗಿದೆ. ಪ್ರೀತಿ ಪ್ರೇಮ ಎಂಬ ಶಬ್ದಕ್ಕೆ ಬೆಲೆ ಇಲ್ಲದಂತಾಗಿದೆ. ಪ್ರತಿಯೊಬ್ಬರಿಗೂ…
ರಚನೆ- ಸಿರಿ ಕಿರಣ”ನಮ್ಮ ಕಥಾ ಅರಮನೆ”ಬರಹಗಾರರು ಉದಯರಶ್ಮಿ ದಿನಪತ್ರಿಕೆ ನೀ ಬರುವ ಗಳಿಗೆಯ ಎದುರು ನೋಡುತಾನಿನ ನೋಡುವ ಕಾತುರತೆಯಿಂದಬೆರಗಾಗಿಸೋ ನಿನ್ನ ಮಾತಿನ ಮೋಡಿಗೆಪುಲಕಗೊಳ್ಳುವುದು ನನ್ನೀ ಹೃದಯ ಸವೆಸಿದ ಪಯಣದ ದಾರಿಯಲಿ..ವಿನಿಮಯಿಸಿದ ಮಾತಿನ ಧಾಟಿಯಲಿಸಾಂತ್ವನ ನೀಡಿದ ನಿನ್ನ ಮೃದು ಸ್ಪರ್ಶದಲ್ಲಿಹಾತೊರೆಯುತ್ತಿದೆ ಮನವು ನಿನ್ನ ಬಳಿ ಸೇರಲು. ನಾವಾಡಿದ ಮಾತಿನ ಮಣಿಗಳ ಪೋಣಿಸುವೆನಾವು ನಡೆದ ದಾರಿಯ ಜಾಡ ಹಿಡಿದುಪ್ರೀತಿಯ ಸ್ಪರ್ಶದ ತಂತಿಯ ಬೆಸುಗೆಯಲಿನಮ್ಮ ಅನುಬಂಧವ ಗಟ್ಟಿ ಮಾಡಲು ನೀಡು ಬಾ ನಿನ್ನ ಪ್ರೇಮ ಪಾರಿಜಾತವಶಿರದಲ್ಲಿ ಧರಿಸಿ ನಾ ನಿನ್ನ ಮೆರೆಸುವೆನೆನಪಲ್ಲೇ ನೆಪವಾಗದೇ ಈ ನಮ್ಮ ಪ್ರೀತಿಯಇಡೀ ಜಗತ್ತಿಗೇ ಸಾರಿ ಹೇಳುವೆ.
ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ರಾಕೆಟ್ ಮೇಲಕ್ಕೆ ಹಾರುವಾಗ ಒಂದೊಂದೇ ಭಾಗವನ್ನು ಕೆಳಕ್ಕೆ ಬೀಳಿಸುತ್ತದೆ. ಹಗುರವಾದ ಮೇಲೆ ತನ್ನ ಕಕ್ಷೆಯತ್ತ ಮುನ್ನುಗ್ಗುತ್ತದೆ. ಈ ಸಂಗತಿ ನಮಗೆಲ್ಲ ಗೊತ್ತೆ ಇದೆ. ಗಗನದೆತ್ತರಕ್ಕೆ ಹಾರಲು ಯಾರಿಗೆ ಇಷ್ಟವಿಲ್ಲ ಹೇಳಿ? ನಾವೆಲ್ಲ ಗಗನದೆತ್ತರಕ್ಕೆ ಹಾರಲು ಬಯಸುತ್ತೇವೆ. ಆದರೆ ರಾಕೆಟ್ನಂತೆ ಬೇಡವಾದ ವಿಷಯಗಳನ್ನು ಕೆಳಕ್ಕೆ ತಳ್ಳುವುದೇ ಇಲ್ಲ. ಬೇಡವಾದ ಸಂಗತಿಗಳನ್ನು ತಲೆಯಲ್ಲಿ ಇಟ್ಟುಕೊಂಡು ಓಡಾಡುತ್ತೇವೆ. ವಿಮಾನದಲ್ಲಿ ಹಾರಬೇಕೆಂದರೆ ಇಂತಿಷ್ಟೇ ಸಾಮಾನುಗಳನ್ನು ತೆಗೆದುಕೊಂಡು ಹೋಗಬೇಕೆಂಬ ನಿಯಮವಿದೆ. ಹಾಗೆಯೇ ಬದುಕಿನಲ್ಲಿ ಮೇಲೇರಲು ಹಗುರವಾಗಬೇಕು ಅಲ್ಲವೇ? ತಡೆಯುವ ಸಂಗತಿಹಗುರವಾಗಿರುವುದನ್ನು ತಡೆಯುವ ಸಂಗತಿಗಳಲ್ಲಿ ಬಹುಮುಖ್ಯವಾದವು ನಮ್ಮ ಆಲೋಚನೆಗಳೇ ಎಂದರೆ ನಂಬಲೇಬೇಕು. ನಾವು ಇಂದು ಏನಾಗಿದ್ದೇವೆಯೋ ಅದಕ್ಕೆಲ್ಲ ಕಾರಣ ನಮ್ಮ ಆಲೋಚನೆಗಳು. ಆಲೋಚನೆಯು ಎಲ್ಲಿಂದಲೋ ಬಂದಂತೆ ತೋರುತ್ತದೆ. ನಮ್ಮ ಮನಸ್ಸಿನಲ್ಲಿ ಮೂಡುವ ವಿಚಿತ್ರ ಗೊಂದಲಮಯ ಆಲೋಚನೆ ಅಥವಾ ತೊಂದರೆ ಕೊಡುವ ಚಿತ್ರ ಅದು ಹಿಂಸಾತ್ಮಕ ಅಥವಾ ಲೈಂಗಿಕವಾಗಿರಬಹುದು. ಅನುಚಿತ ಅಥವಾ ಮುಜುಗರ ತರುವಂತಹದ್ದು ಏನಾದರೂ ಆಗಿರಬಹುದು. ವಿಷಯ ಏನೇ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘ ಜಿಲ್ಲಾ ಘಟಕ ವಿಜಯಪುರ ವತಿಯಿಂದ ೨೦೨೫ನೆಯ ಸಾಲಿನಲ್ಲಿ ಕೊಡಮಾಡುವ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಸಿಂದಗಿ ತಾಲೂಕು ವರದಿಗಾರ ಮಲ್ಲಿಕಾರ್ಜುನ ಅಲ್ಲಾಪೂರ ಆಯ್ಕೆಯಾಗಿದ್ದಾರೆ ಎಂದು ಕಾನಿಪ ತಾಲೂಕಾಧ್ಯಕ್ಷ ಆನಂದ ಶಾಬಾದಿ ಹೇಳಿದ್ದಾರೆ.ಜು.೧೯ರಂದು ವಿಜಯಪುರದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾಧ್ಯಕ್ಷ ಪ್ರಕಾಶ ಬೆಣ್ಣೂರ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದಾಬಾಗಳಲ್ಲಿ ಮತ್ತು ಹಳ್ಳಿಗಳಲ್ಲಿ ತಾಂಡಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಹಾಗೂ ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನಯ ಜಿಲ್ಲಾಧ್ಯಕ್ಷ ಕೃಷ್ಣಾ ಭೋಸಲೆ ಮಾತನಾಡಿ, ಸಿಂದಗಿ ರಸ್ತೆ, ಇಂಡಿ ರಸ್ತೆ, ಅಥಣಿ ರಸ್ತೆ, ಬೆಂಗಳೂರು ರಸ್ತೆ ಹಾಗೂ ಕೋಲಾರ ರಸ್ತೆ ಅಕ್ಕ ಪಕ್ಕದಲ್ಲಿ ಇರುವ ದಾಬಾಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದಲೇ ರಸ್ತೆ ಅಪಘಾತ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಲೇ ಇದೆ. ಇದರಿಂದ ಕುಡಿದ ಅಮಲಿನಲ್ಲಿ ಗಲಭೆಗಳು ತುಂಬಾನೆ ನಡೆಯುತ್ತಾ ಇರುತ್ತವೆ. ಸಾಮಾನ್ಯ ಜನರಿಗೆ ತುಂಬಾ ತೊಂದರೆ ಆಗುತ್ತಿದೆ. ಹಾಗೂ ವಿಜಯಪುರ ತಾಲ್ಲೂಕಿನಲ್ಲಿ ಸುತ್ತಲಿನ ಗ್ರಾಮದಲ್ಲಿ ಸರ್ಕಾರಿ ಶಾಲೆಗಳ ಪಕ್ಕ ಹಾಗೂ ದೇವಾಲಯಗಳ ಹತ್ತಿರ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾರುತಿದ್ದಾರೆ. ಸಣ್ಣ ವಯಸ್ಸಿನ ಮಕ್ಕಳ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಇದರಲ್ಲಿ ಅಬಕಾರಿ ಇಲಾಖೆಯವರೂ ಶಾಮೀಲಾಗಿದ್ದಾರೆ. ಇದನ್ನು ಗಂಭೀರ ಪರಿಗಣಿಸಿ ಕೂಡಲೇ ಇದರ ಕಡಿವಾಣಕ್ಕೆ…
