Author: editor.udayarashmi@gmail.com

ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಪಿ.ರಾಜೀವ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಚಿತ್ರದುರ್ಗದಲ್ಲಿ ನಡೆಯಲಿರುವ ಮೇ.೯ ರಂದು ನಡೆಯಲಿರುವ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ವಿಜಯಪುರ ಜಿಲ್ಲೆಯಿಂದ ೧೮ ರಿಂದ ೨೦ ಸಾವಿರ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಮಾಜಿ ಶಾಸಕ ಪಿ. ರಾಜೀವ್ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವ ವಿಷಯಕ್ಕೆ ಹೋರಾಟ ಮಾಡಿದರೂ ಅಧಿಕಾರ ದೊರಕಿದಾಗ ಆ ಹೋರಾಟದ ಆಶಯಗಳನ್ನು ಈಡೇರಿಸುವ ಮೂಲಕ ಧೀಮಂತವಾಗಿ ಆಡಳಿತ ನಡೆಸಿದ ಮಹಾನ್ ನೇತಾರ ಬಿ.ಎಸ್. ಯಡಿಯೂರಪ್ಪ, ಅವರು ನಾಡು ಕಂಡ ಶ್ರೇಷ್ಠ ಹೋರಾಟಗಾರ, ಹೀಗಾಗಿ ಅವರನ್ನು ಹೃದಯಸ್ಪರ್ಶಿಯಾಗಿ ಅಭಿನಂದಿಸುವ ದೃಷ್ಟಿಯಿಂದ ಅಭಿಮಾನಿಗಳೆಲ್ಲರೂ ಸೇರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮನೋತ್ಸವ ಹೆಸರಿನಲ್ಲಿ ಚಿತ್ರದುರ್ಗದಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ, ವಿಜಯಪುರ ಜಿಲ್ಲೆಯಿಂದಲೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಂಡು ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕು, ಈ ಹಿನ್ನೆಲೆಯಲ್ಲಿ ಎಲ್ಲ ಮತಕ್ಷೇತ್ರಗಳ ಪ್ರಮುಖರ ಸಭೆ ನಡೆಸಲಾಗಿದ್ದು, ವಿಜಯಪುರ ಜಿಲ್ಲೆಯಿಂದ ೨೦ ಸಾವಿರ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ರಾಜೀವ ತಿಳಿಸಿದರು.ಭಾಗ್ಯ ಲಕ್ಷ್ಮಿ, ಮಕ್ಕಳಿಗೆ…

Read More

ಲೇಖನ.- ಡಾ ಶಶಿಕಾಂತ ಪಟ್ಟಣರಾಮದುರ್ಗ – ಪುಣೆ ಉದಯರಶ್ಮಿ ದಿನಪತ್ರಿಕೆ 12ನೇ ಶತಮಾನದ ಮಹಾನ್ ಸಮಾಜ ಸುಧಾರಕ ಬಸವಣ್ಣನವರು ಸಾರಿದ ಬಸವ ತತ್ವವು ಮಾನವೀಯತೆ, ಸಮಾನತೆ ಮತ್ತು ಕಾಯಕ ನಿಷ್ಠೆಯ ಮೇಲೆ ನಿಂತಿದೆ. ಇದು ಕೇವಲ ಒಂದು ಧರ್ಮಕ್ಕೆ ಸೀಮಿತವಾಗದೆ, ಇಡೀ ಮನುಕುಲಕ್ಕೆ ಅನ್ವಯಿಸುವ ಜೀವನ ಮಾರ್ಗವಾಗಿದೆ. ಇಂತಹ ಅಪೂರ್ವವಾದ ಸಮಾನತೆಯ ಆಂದೋಲನವನ್ನು ಮುಂದಿನ ಜನಾಂಗಕ್ಕೆ ಒಯ್ದ ಕೆಲವೇ ಕೆಲವು ಶಿವಯೋಗ ಸಾಧಕರಲ್ಲಿ ಸಜ್ಜಲ ಗುಡ್ಡದ ಶರಣಮ್ಮ.ಸಜ್ಜಲಗುಡ್ಡದ ಶರಣಮ್ಮನವರು (ಕ್ರಿ.ಶ. 1878- 1981) ಉತ್ತರ ಕರ್ನಾಟಕದ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಸಜ್ಜಲಗುಡ್ಡದಲ್ಲಿ ನೆಲೆಸಿದ್ದ ಒಬ್ಬ ಶ್ರೇಷ್ಠ ಶಿವಶರಣೆ ಮತ್ತು ಮಹಿಳಾ ಸಂತರು. ಇವರನ್ನು ಭಕ್ತರು ಶ್ರದ್ಧಾಭಕ್ತಿಯಿಂದ “ಸಜ್ಜಲಶ್ರೀ ಶರಣಮ್ಮ ತಾಯಿ” ಎಂದು ಕರೆಯುತ್ತಾರೆ.ಜೀವನದ ಹಿನ್ನೆಲೆ ಜನ್ಮ: ಇವರು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಮುದೇನೂರು ಗ್ರಾಮದಲ್ಲಿ ಲಿಂಗಣ್ಣ ಮತ್ತು ಲಿಂಗಮ್ಮ ಹಾಲುಮತದ ದಂಪತಿಗಳ ಮಗಳಾಗಿ ಜನಿಸಿದರು.ಮೂಲ ಹೆಸರು: ಇವರ ಬಾಲ್ಯದ ಹೆಸರು ಯಮುನಮ್ಮ.ವೈರಾಗ್ಯ: ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡ ಇವರು, ಬಡತನ…

Read More

ಲೇಖನ.- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಮನದ ಮನ್ಮಥನಿಗೆಇಬ್ಬರೂ ಕೂಡಿ ಕಳೆದ ಆ ಕ್ಷಣಗಳು ನನ್ನ ಪಾಲಿನ ಅಮೂಲ್ಯ ಆಸ್ತಿ. ಸವಿ ನೆನಪುಗಳ ಸುಳಿಯಲ್ಲಿ ಸಿಲುಕಿ ಮನಸ್ಸು ಇಂದು ಅಕ್ಷರಗಳ ರೂಪದಲ್ಲಿ ನಿನಗೆ ಸನಿಹವಾಗಲು ಬಯಸುತ್ತಿದೆ. ಈ ಪತ್ರದ ಪ್ರತಿಯೊಂದು ಸಾಲು ನನ್ನ ಹೃದಯ ಬಡಿತವ ಮಿಡಿತವ ಹೇಳುತಿವೆ. ಇದು ನಿನಗಾಗಿ ಮಿಡಿಯುವ ಎದೆಯ ಪಿಸುಮಾತುತುಂಟಾಟದಲ್ಲಿ ನಿನ್ನ ತುಂಟ ನಗುವಿನ ಅಲೆಗಳು ನನ್ನ ಹೃದಯದ ವೀಣೆಯನ್ನು ಮೇಲಿಂದ ಮೇಲೆ ಮೀಟದೇ ಇರುತ್ತಿರಲಿಲ್ಲ. ನೀನಾಡುತ್ತಿದ್ದ ಕವಿ ಮಾತುಗಳು ಹೃದಯದ ದಡಕ್ಕೆ ಅಲೆಗಳಂತೆ ಅಪ್ಪಳಿಸುವುದನ್ನು ನನ್ನಿಂದ ಮರೆಯಲು ಸಾಧ್ಯವಾಗುತ್ತಿಲ್ಲ. ಈರ್ವರೂ ಹುಡುಗಾಟದಿಂದ ಒಬ್ಬರಿಗೊಬ್ಬರು ಕಾಲೆಳೆಯುತ್ತ ಕಳೆದ ಸಂತೋಷ ವಿವರಿಸಲು ಪದಗಳೇ ಸಿಗುತ್ತಿಲ್ಲ. ಹಗಲಿನ ಪ್ರತಿ ಕ್ಷಣದಲ್ಲೂ ನೀನೇ ಆವರಿಸಿರುವೆ. ರಾತ್ರಿ ಹಾಸಿಗೆಗೆ ಹೋಗಿ ಕಣ್ಮುಚ್ಚುವುದೇ ತಡ ನಿನ್ನ ಕುಡಿ ನೋಟದ ನೋಟ ಮತ್ತೆ ಮತ್ತೆ ಕಣ್ತೆರಸುತ್ತದೆ. ಕಣ್ರೆಪ್ಪೆಗಳನ್ನು ಅಂಟಿಸದAತೆ ಕಾಡುತ್ತದೆ. ಆ ನಿನ್ನ ಕಾಂತಿ ತುಂಬಿದ ಕಂಗಳಲ್ಲಿ ನನ್ನ ಪ್ರಪಂಚವನ್ನು ಕಂಡುಕೊಂಡಿರುವೆ.…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಅರಣ್ಯ ಇಲಾಖೆಯ ಕಾರ್ಮಿಕರಿಗೆ ಭವಿಷ್ಯ ನಿಧಿ, ವೈದ್ಯಕೀಯ ವಿಮೆ ಸೇರಿದಂತೆ ನಾನಾ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಮಹೇಶ ಪಾಟೀಲ ಭರವಸೆ ನೀಡಿದರು.ಆಲಮಟ್ಟಿಯ ಡ್ಯಾಂ ನರ್ಸರಿಯಲ್ಲಿ ಶುಕ್ರವಾರ ನಡೆದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.”ನೂರಾರು ಅರಣ್ಯ ದಿನಗೂಲಿ ಕಾರ್ಮಿಕರು ತಮ್ಮ ಜೀವನದ ಬಹುಪಾಲು ಆಲಮಟ್ಟಿಯಲ್ಲಿಯೇ ಕಳೆದಿದ್ದಾರೆ. ಕಾರ್ಖಾನೆ, ಗಣಿ, ವಿದ್ಯುತ್ ಕ್ಷೇತ್ರಗಳಲ್ಲಿ ಕಾರ್ಮಿಕರಿಗೆ ಹೆಚ್ಚಿನ ಅಪಾಯವಿರುತ್ತದೆ. ಆದರೆ ನೀವು ನಿಸರ್ಗದೊಂದಿಗೆ ಕೆಲಸ ಮಾಡುತ್ತಿದ್ದು, ಅಪಾಯ ಕಡಿಮೆ, ಶ್ರಮ ಹೆಚ್ಚು” ಎಂದರು.ಕಾರ್ಮಿಕ ಮುಖಂಡ ಹಾಗೂ ಅರಣ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷ ವಿರೂಪಾಕ್ಷಿ ಮಾದರ ಮಾತನಾಡಿ, “೧೯೯೫ಕ್ಕಿಂತ ಮುಂಚೆ ಆಲಮಟ್ಟಿಯಲ್ಲಿ ಗಿಡಗಳು, ಹಸಿರು ಅಪರೂಪವಾಗಿತ್ತು. ಈಗ ಸುಮಾರು ೧೫೦ಕ್ಕೂ ಹೆಚ್ಚು ವಿವಿಧ ಜಾತಿಯ ಸಾವಿರಾರು ಗಿಡಗಳನ್ನು ಆಲಮಟ್ಟಿಯಲ್ಲಿ ಕಾಣುತ್ತೇವೆ. ವಿಜಯಪುರ ಜಿಲ್ಲೆಯಾದ್ಯಂತ ಹಸಿರೀಕರಣವಾಗಿದೆ. ಇದಕ್ಕೆಲ್ಲಾ ಕಾರಣ ಕಾರ್ಮಿಕರ ಅವಿರತ ಶ್ರಮ” ಎಂದರು.ಸರ್ಕಾರ ನಿಗದಿಪಡಿಸಿದ ದಿನಕ್ಕೆ ೬೨೬ ರೂ. ವೇತನ ನೀಡಬೇಕು, ವಾರಕ್ಕೊಮ್ಮೆ ವೇತನ ಸಹಿತ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ; ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹಾಗೂ ಅರಿವು ಹೊಂದುವುದು ಇಂದು ಅಗತ್ಯವಾಗಿದೆ ಎಂದು ಹಿರಿಯ ನ್ಯಾಯಾಧೀಶ ನಾಗೇಶ ಮೋಗೆರ್ ಹೇಳಿದರು.ತಾಲ್ಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಸಿಂದಗಿ ತಾಲ್ಲೂಕು ವಕೀಲರ ಸಂಘದಡಿ ಗುರುವಾರ ಜರುಗಿದ ಕಾನೂನು ಅರಿವು, ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಬೇಕು. ಅಪರಾಧ ಚಟುವಟಿಕೆಗಳಿಂದ ದೂರವಿರಬೇಕು. ಇಂದು ವರದಕ್ಷಿಣೆ ನೀಡುವುದು ಹಾಗೂ ತೆಗೆದುಕೊಳ್ಳುವುದು ಎರಡು ಅಪರಾಧಗಳೆನ್ನಿಸಿವೆ. ಆದ್ದರಿಂದ ಗ್ರಾಮವನ್ನು ವರದಕ್ಷಿಣೆಮುಕ್ತವಾಗಿಸಲು ತಾವೆಲ್ಲರೂ ಮುಂದಾಗಬೇಕು ಎಂದು ಸಲಹೆ ನೀಡಿದರುನ್ಯಾಯಾಧೀಶೆ ಪಂಕಜಾ ಕೊಣ್ಣೂರ ಮಾತನಾಡಿ, ಚಿಕ್ಕ ಮಕ್ಕಳಿಗೆ ವಾಹನ ಚಾಲನೆ ಮಾಡಲು ಕೊಡಬೇಡಿ. ಒಂದು ವೇಳೆ ನೀಡಿದರೆ ಅದಕ್ಕೆ ನ್ಯಾಯಾಲಯದಿಂದ ದಂಡ ವಿಧಿಸಲಾಗುತ್ತದೆ. ಮತ್ತು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ ಎಂದು ಕಾನೂನಾತ್ಮಕ ವಿಚಾರಗಳನ್ನು ತಿಳಿಸಿದರು.ಸಿಂದಗಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ ಹಾಗೂ ಸರ್ಕಾರಿ ವಕೀಲ ಬಿ.ಜಿ.ನೆಲ್ಲಗಿ ಮಾತನಾಡಿ, ವರದಕ್ಷಿಣೆ ಮತ್ತು ಭೂಮಿಯ ಸಂರಕ್ಷಣೆ ಬಗ್ಗೆ ವಿಚಾರಗಳನ್ನು ತಿಳಿಹೇಳಿದರು.ವಕೀಲ ಶ್ರೀಶೈಲ ಮುಳಜಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಇಲಾಖೆಯಲ್ಲಿ ಸೇವಾತತ್ಪರತೆಯ ಮೂಲಕ ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿಯಾಗಿದೆ ಎಂದು ಜಿಲ್ಲಾ ಅಂಚೆ ಅಧಿಕ್ಷಕ ಮಹಾಂತೇಶ ತೊಗರಿ ಹೇಳಿದರು.ಪಟ್ಟಣದ ಅಂಚೆ ಕಚೇರಿಯಲ್ಲಿ ಗುರುವಾರ ಸೇವಾನಿವೃತ್ತರಾದ ಡಾಕ್‌ಸೇವಕ ವೆಂಕಟೇಶ ಕುಲಕರ್ಣಿ ಅವರ ಬೀಳ್ಕೊಡುವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಪಟ್ಟಣದಲ್ಲಿ ತಮ್ಮ ಸತತ ೩೫ ವರ್ಷಗಳ ಕಾಲ ನಿಷ್ಕಳಂಕ ಸೇವೆಯ ಮೂಲಕ ಮನೆಮಾತಾಗಿರುವ ವೆಂಕಟೇಶ ಕುಲಕರ್ಣಿ ಅವರ ನಿವೃತ್ತಿ ಜೀವನ ಸುಖಮಯವಾಗಿರಲಿ ಎಂದರು.ಸನ್ಮಾನಿತರ ಪರ ಸುಪ್ರೀಯಾ ಕುಲಕರ್ಣಿ ಮಾತನಾಡಿ, ತಂದೆಯ ಸೇವೆಯ ಸಾರ್ಥಕತೆಗೆ ಇಲಾಖೆ ಪರವಾಗಿ ಸಂದ ಗೌರವಕ್ಕೆ ಅಭಿನಂದನೆ ಸಲ್ಲಿಸಿದರು.ಅಂಚೆ ನಿರೀಕ್ಷಕ ಕರಣ ಎಂ.ಜಿ. ಶಾರದಾ ಹೆಡಜೋಳ, ಮನೋಹರ ಪೋಳ, ಅಮರೇಶ ಕಲಶೆಟ್ಟಿ, ಬಸಯ್ಯ ಸ್ಥಾವರಮಠ, ಭಾಗ್ಯ ಪುರವಂತರಮಠ, ಕೀರ್ತಿ ಪಾಟೀಲ, ಸುವರ್ಣ ಕಲಾಲ್, ಸುನಂದಾ ಬಿರಾದಾರ, ಪ್ರವೀಣ ಕುಲಕರ್ಣಿ, ಬಿ.ಟಿ.ಮಾದರ, ರಾಮನಗೌಡ ಬಿರಾದಾರ ಇದ್ದರು.

Read More

ಸಿಂದಗಿಯಲ್ಲಿ ಡಾ.ಚನ್ನಪ್ಪ ಕಟ್ಟಿ ಅಭಿನಂದನ ಸಮಾರಂಭ | ನೆಲೆ ಅಭಿನಂದನಾ ಗ್ರಂಥ ಬಿಡುಗಡೆ | ವಿಚಾರ ಸಂಕಿರಣ | ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಆಂಗ್ಲ ಪ್ರಾಧ್ಯಾಪಕರರಾಗಿ ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಅವರ ಕೊಡುಗೆ ಅನನ್ಯ. ಕಥೆ, ಕಾವ್ಯ, ಸಂಶೋಧನೆ, ಜೀವನ ಚರಿತ್ರೆ ಮತ್ತು ಅನುವಾದದ ಮೂಲಕ ಸಾಹಿತ್ಯದ ಕೃಷಿಯನ್ನು ಮಾಡಿ ಅಮೋಘ ಸಾಧನೆ ಮಾಡಿದ್ದಾರೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಹೇಳಿದರು.ನಗರದ ವಿಜಯಪುರ ರಸ್ತೆಯಲ್ಲಿರುವ ಮಾಂಗಲ್ಯ ಭವನದಲ್ಲಿ ಸಿಂದಗಿಯ ಡಾ.ಚನ್ನಪ್ಪ ಕಟ್ಟಿ ಅಭಿನಂದನ ಸಮಿತಿ ಹಮ್ಮಿಕೊಂಡ ಅಭಿನಂದನ ಸಮಾರಂಭ ನೆಲೆ ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನ ವಹಿಸಿ ಅವರು ಮಾತನಾಡಿದರು.ಡಾ.ಚನ್ನಪ್ಪ ಕಟ್ಟಿ ಅವರ ಅವಿರತ ಪರಿಶ್ರಮದಿಂದಲೇ ಇಂದು ಅವರಿಗೆ ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಒದಗಿ ಬಂದಿದ್ದು ಸಿಂದಗಿ ನೆಲೆಗೆ ಹೆಮ್ಮೆಯ ಗರಿ. ಒಟ್ಟಿನಲ್ಲಿ ಡಾ.ಚನ್ನಪ್ಪ ಕಟ್ಟಿ ಅವರ ಬದುಕು, ಬರಹ ಮತ್ತು…

Read More

ಆತಂಕಕೊಳಗಾದ ವಿದ್ಯಾರ್ಥಿನಿಯನ್ನು ಸಮಾಧಾನಪಡಿಸಿದ ಶಿಕ್ಷಕರು ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಇಂಗ್ಲೀಷ್ ವಿಷಯದಲ್ಲಿ ಕೇವಲ 06 ಅಂಕ ಪಡೆದು ಅನುತ್ತೀರ್ಣಳಾಗಿದ್ದ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಮಾಣಿಕೇಶ್ವರಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೇಯಾ ಮಾದೇವ ಚೌಧರಿ ಉತ್ತರ ಪತ್ರಿಕೆಯ ಫೋಟೊ ಪ್ರತಿ ಪಡೆದಾಗ 64 ಅಂಕ ಪಡೆದಿರುವುದು ಬೆಳಕಿಗೆ ಬಂದಿದೆ.ಫಲಿತಾಂಶದ ನಂತರ ಅನುತ್ತಿರ್ಣಗೊಂಡ ಶ್ರೇಯಾ ಅಳುತ್ತಾ, ಊಟ, ನಿದ್ದೆ ಬಿಟ್ಟು ಚಿಂತೆಗೆ ಒಳಗಾಗಿದ್ದಳು. ಸಂಸ್ಥೆಯ ಅಧ್ಯಕ್ಷ ಚಿದಾನಂದ ಅವಟಿ ಹಾಗೂ ಸಹ ಶಿಕ್ಷಕರು ವಿಧ್ಯಾರ್ಥಿನಿ ಮನೆಗೆ ಭೇಟಿ ನೀಡಿ ದೈರ್ಯ ತುಂಬಿ ಉಳಿದ ಎಲ್ಲ ವಿಷಯಗಳ ಅಂಕಗಳನ್ನು ಫಲಿತಾಂಶದಲ್ಲಿ ವೀಕ್ಷಿಸಿದರು. ಪ್ರತಿಭಾನ್ವಿತ ವಿಧ್ಯಾರ್ಥಿನಿಯಾದ ಇವಳ ಉಳಿದೆಲ್ಲ ವಿಷಯಗಳ ಅಂಕಗಳು ಹೆಚ್ಚಿಗೆ ಬಂದಿರುವದನ್ನು ಗಮನಿಸಿದ ಅವಟಿಯವರು ಇಂಗ್ಲೀಷ್ ವಿಷಯದಲ್ಲಿ ಅನುತ್ತಿರ್ಣಗೊಳ್ಳಲು ಸಾಧ್ಯವೇ ಇಲ್ಲ ಎಂಬ ನಂಬಿಕೆಯಿಂದ ಉತ್ತರ ಪತ್ರಿಕೆಯ ಫೊಟೊ ಪ್ರತಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಗೆ(ಕೆಎಸ್‌ಇಎಬಿ) ಅರ್ಜಿ ಸಲ್ಲಿಸಿದರು.ಉತ್ತರ ಪತ್ರಿಕೆ ವಿದ್ಯಾರ್ಥಿಯ ಕೈಸೇರಿದಾಗ…

Read More

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಅವರು ಶುಕ್ರವಾರ ಬಬಲೇಶ್ವರ ತಾಲೂಕಿನ ತಿಗಣಿ ಬಿದರಿಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ‌ ಅಭಿವೃದ್ಧಿ ಇಲಾಖೆ ವತಿಯಿಂದ ಕಾಖಂಡಕಿ- ಮಮದಾಪುರ, ಬಬಲೇಶ್ವರ- ಯಕ್ಕುಂಡಿ, ಕಾಖಂಡಕಿ- ತೊನಶ್ಯಾಳ ಹಾಗೂ ತಿಗಣಿ ಬಿದರಿ ಹಳ್ಳಗಳಿಗೆ ಅಡ್ಡಲಾಗಿ ಸರಣಿ ಚೆಕ್ ಡ್ಯಾಂ ಮತ್ತು ರಿಚಾರ್ಜ್ ಶಾಫ್ಟ್ ಗಳ ನಿರ್ಮಾಣ ಮಾಡುವ ಮೂಲಕ ಅಂತರ್ಜಲ‌ ಅಭಿವೃದ್ಧಿ ಪಡಿಸುವ ಅಂದಾಜು ರೂ. 984 ಲಕ್ಷ ಮೌಲ್ಯದ ಕಾಮಗಾರಿಗೆ ಭೂಮಿ‌ ಪೂಜೆ ನೆರವೇರಿಸಿ ಅವರು ಮಾತನಾಡಿದರು.ನೀರು ಬಳಕೆದಾರರ ಸಂಘ ರಚಿಸುವ ಮೂಲಕ ನೀರು ಬಳಕೆಯಲ್ಲಿ ಶಿಸ್ತು ತರಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಕಾಲುವೆಯ ಕೊನೆಯ ಭಾಗದವರೆಗೂ ನೀರು ತಲುಪಲು ಅನುಕೂಲವಾಗಲಿದೆ. ಇದರ ಜೊತೆಗೆ ಈಗ ಕೈಗೆತ್ತಿಕೊಳ್ಳಲಾಗಿರುವ…

Read More