Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಶಿಕ್ಷಣ ಇಲಾಖೆ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿರಬೇಕು. ನೊಂದವರು, ಅಶಕ್ತರಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭರವಸೆಯ ಬೆಳಕಾಗಬೇಕೆ ಹೊರತು ಭಯ ಹುಟ್ಟಿಸಬಾರದು. ಸಾರ್ವಜನಿಕರೊಂದಿಗಿನ ವರ್ತನೆಯನ್ನು ಬದಲಿಸಿಕೊಳ್ಳಬೇಕು. ಶಿಕ್ಷಣ ಇಲಾಖೆಗೆ ಬರುವ ಪ್ರತಿಯೊಬ್ಬರನ್ನು ಗೌರವಯುತವಾಗಿ ಕಾಣಬೇಕು ಎಂದು ವಿಕಾಸ ಹೊಸಮನಿ ಹೇಳಿದರು.ಸೋಮವಾರ ಪಟ್ಟಣದ ಬಿಇಓ ಕಾರ್ಯಾಲಯದಲ್ಲಿ ವಿಕಾಸ ಹೊಸಮನಿರವರು ತಮ್ಮ ಕುಂದು ಕೊರತೆ ಹೇಳಲು ಬಿಇಓ ಆಫೀಸ್‌ಗೆ ಬಂದಾಗ ನಿಮ್ಮ ಕೆಲಸ ನಾನು ಮಾಡುವುದಿಲ್ಲ. ನನ್ನ ಆಫೀಸ್‌ನಿಂದ ನೀನು ಹೊರಗೆ ನಡೆ ಎಂದು ಹೇಳುತ್ತಿರುವುದು ಸರಿಯಿಲ್ಲ. ನಿಮ್ಮ ವರ್ತನೆ ಬದಲಿಸಿ ಕೊಳ್ಳಿ. ನಿಮ್ಮ ವರ್ತನೆಯಿಂದ ಸಾರ್ವಜನಿಕರ ವಲಯದಲ್ಲಿ ಮುಜಗರಕ್ಕೆ ಎಡೆಮಾಡಿದೆ. ನಾನು ಮೇಲಾಧಿಕಾರಿಗಳು ಬರುವವರೆಗೆ ಆಫೀಸ್ ಮುಂದೆ ಪ್ರತಿಭಟನೆ ಮಾಡುತ್ತೇನೆ ಎಂದರು.ಈ ಸಂದರ್ಭದಲ್ಲಿ ಶಿವಪುತ್ರ ಬಗಲಿ, ಆನಂದ ಪವಾರ, ಸುನೀಲ ಕಾಲೇಭಾಗ, ವಿನೊದ ಕಾಳೆ, ಆಕಾಶ ವಠಾರ, ಅರುಣ ಕೇದರ, ಅನೀಲ ಕಾಲೇಭಾಗ, ರಾವೂಲ ಮನಗೂಳಿ, ಕಿರಣ ಗುಂದಗಿ, ಅಕಲೇಶ ಹೊಸಮನಿ, ಉಮೇಶ ಹೊಸಮನಿ, ಸೋಮನಾಥ ಹಳ್ಳಿ ಸೇರಿದಂತೆ ಅನೇಕರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಡಾ ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಜೆ.ಇಂಡಿ ಅವರು ಸಮಾಜ ಕಲ್ಯಾಣ ಇಲಾಖೆಗೆ ಬರುವ ಫಲಾನುಭವಿಗಳಿಗೆ ಮಾಹಿತಿಗಳನ್ನು ಸರಿಯಾಗಿ ನೀಡದೆ ಅಧಿಕಾರದ ದರ್ಪ ಮೆರೆಯುತ್ತಿದ್ದು, ಕೂಡಲೇ ಇವರನ್ನು ಅಮಾನತ್ತುಗೊಳಿಸಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಶರಣು ಎಸ್. ಜಮಖಂಡಿ ಮಾತನಾಡಿ, ದೇವರ ಹಿಪ್ಪರಗಿಯ ರಮೇಶ ತಂ.ಮಡಿವಾಳಪ್ಪ ಮಲ್ಲಾರಿ ಅವರಿಗೆ ಅಂಬೇಡ್ಕರ ಅಭಿವೃದ್ಧಿ ನಿಮಗದಿಂದ ಕೊಳವೆ ಬಾವಿ ಮಂಜೂರಾಗಿದ್ದರು, ಬಿ.ಜೆ.ಇಂಡಿ ಇವರಿಗೆ ಹಲವಾರು ಬಾರಿ ಬೇಟಿಯಾಗಿ ಕೇಳಲು ಹೊದರೆ, ಉಢಾಫೆ ಉತ್ತರ ನೀಡುತ್ತಿದ್ದಾರಲ್ಲದೆ, ನೀವು ಏನು ಬೇಕಾದರು ಮಾಡಿಕೊಳ್ಳಿ ಎಂದು ಗದರಿಸುತ್ತಿದ್ದಾರೆ ಎಂದರು.ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಅಧ್ಯಕ್ಷ ಸುಖದೇವ ಎಸ್. ಕಟ್ಟಿಮನಿ ಮಾತನಾಡಿ, ಬಿ. ಜೆ.ಇಂಡಿ ಅವರು ನಮ್ಮ ಸಮಿತಿಯವರನ್ನು ಬೆದರಿಸಿ ಜಾತಿನಿಂದನೆ ಮಾಡಿರುತ್ತಾರೆ. ಇವರ ಮೇಲೆ ಕ್ರಮ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸಾಹಿತಿ ಪ್ರೊ. ಸಿದ್ದಪ್ಪ ಸಾವಳಸಂಗ ಇವರು ಸಾಹಿತ್ಯ-ಭಾಷೆ, ನೆಲ-ಜಲ, ಸಂಸ್ಕೃತಿ ಮೊದಲಾದ ಕ್ಷೇತ್ರದಲ್ಲಿ ಮಾಡಿರುವ ಗಣನೀಯ ಸೇವೆ-ಸಾಧನೆ, ಜ್ಞಾನ ಮತ್ತು ಪ್ರೀತಿಯನ್ನು ಗುರುತಿಸಿ, ಕವಿತ್ತ ಕರ್ಮಮಣಿ ಫೌಂಡೇಶನ್(ರಿ) ನಾಗರಮುನ್ನೋಳ್ಳಿ ತಾಲ್ಲೂಕು ಚಿಕ್ಕೋಡಿ ಬೆಳಗಾವಿ ಜಿಲ್ಲೆ ಇವರ ವತಿಯಿಂದ ಕೊಡಮಾಡುವ 2025ನೇ ಸಾಲಿನ ಅಂತರಾಷ್ಟ್ರೀಯ ಮಟ್ಟದ “ಕವಿ ಕುಲಪತಿ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 27 ಜುಲೈ 2025ರಂದು ನಡೆಯುವ “ಅಂತರಾಷ್ಟ್ರೀಯ ಮಟ್ಟದ ಕವಿಗೋಷ್ಠಿ ಹಾಗೂ ಸಾಧಕರಿಗೆ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ” ದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಮೊಹರಂ ಅಂಗವಾಗಿ ಅಲಾಯಿ ದೇವರ ಪಂಜಾ ಹಾಗೂ ಡೋಲಿ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ನಡೆಯಿತು.ಕಲಕೇರಿ ಗ್ರಾಮದಲ್ಲಿ ರವಿವಾರ ಸಾಂಪ್ರದಾಯಿಕ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಮೊಹರಂನ್ನು ಅತ್ಯಂತ ಸಂಭ್ರಮ ಸಡಗರದೊಂದಿಗೆ ಆಚರಿಸಿ ಕೊನೆಯ ದಿನ ಸಂಪ್ರದಾಯದಂತೆ ಅಲಾಯಿ ದೇವರ ಮೆರವಣಿಗೆಯನ್ನು ಸಾವಿರಾರು ಭಕ್ತರ ಜಯಘೋಷದ ಮಧ್ಯೆ ಮೆರವಣಿಗೆ ನಡೆಸಲಾಯಿತು. ಹಲಿಗೆಮೇಳ, ವಾಧ್ಯಮೇಳದೊಂದಿಗೆ ಯುವ ಸಮೂಹದ ಅಲಾಯಿ ಕುಣಿತದೊಂದಿಗೆ ಗ್ರಾಮದ ಅಗಸಿ ಮಾರ್ಗವಾಗಿ ಮೆರವಣಿಗೆ ಸಾಗಿತು, ದಾರಿಯುದ್ದಕ್ಕೂ ನೆರೆದ ಜನಸ್ತೋಮ ಅಲಾಯಿ ದೇವರಿಗೆ ಉತ್ತತ್ತಿಯನ್ನು ಹಾರಿಸಿ ಧನ್ಯತಾಭಾವವನ್ನು ಮೆರೆದರು.ಜಿಲ್ಲಾಧಿಕಾರಿಗಳು ಕಲಕೇರಿಯಲ್ಲಿ ಮೊಹರಂ ಹಬ್ಬ ನಿಷೇದಿಸಿದ ಹಿನ್ನೆಲೆಯಲ್ಲಿ, ಕಲಕೇರಿ ಗ್ರಾಮಸ್ಥರು ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಆಚರಿಸಲು ಅನುಮತಿಯನ್ನು ನಿಡುವಂತೆ ಕೊರಿದ್ದರ ಪ್ರಯುಕ್ತ ಮಾನ್ಯ ಕಲಬುರಗಿ ಉಚ್ಚನ್ಯಾಯಾಲಯವು ನೀಡಿದ ಆದೇಶದಂತೆ ಗ್ರಾಮದಲ್ಲಿ ಪೋಲಿಸ್ ಬಿಗಿ ಬಂದೋಬಸ್ತ ನಡುವೆ ರವಿವಾರ ಸಂಜೆ ಮೊಹರಂ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸಲಾಯಿತು.ಕಲಕೇರಿ ಪಿಎಸ್‌ಐ ಸುರೇಶ ಮಂಟೂರ ನೇತ್ರತ್ವದಲ್ಲಿ ಸೂಕ್ತ ಬಿಗಿ ಬಂದೋಬಸ್ತ…

Read More

ವಿಜಯಪುರದ ಜೆ.ಎಸ್‌.ಎಸ್ ಆಸ್ಪತ್ರೆಯಲ್ಲಿ ಬೇಸಿಕ್ ಲೈಫ್ ಸಪೋರ್ಟ್ ಬಿ.ಎಲ್.ಎಸ್ ತರಬೇತಿ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಾಸಕರು ಹಾಗೂ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳರವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೇಶಾಲಿಟಿ (ಜೆ.ಎಸ್‌.ಎಸ್) ಆಸ್ಪತ್ರೆಯಲ್ಲಿ ಈಚೆಗೆ ಯು.ಎಸ್.ವಿ ಪ್ರೈವೇಟ್ ಲಿಮಿಟೆಡ್‌ನ ಕ್ರೆಸ್ಟ್ ತಂಡದಿಂದ ಬೇಸಿಕ್ ಲೈಫ್ ಸಪೋರ್ಟ್ (ಬಿ.ಎಲ್.ಎಸ್) ತರಬೇತಿ ಕಾರ್ಯಕ್ರಮ ಜರುಗಿತು.ಇತ್ತೀಚೆಗೆ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಿಪತ್ತು ಸಂದರ್ಭಗಳಲ್ಲಿ ಪ್ರಥಮ ಸಹಾಯ ಮತ್ತು ಸಿ.ಪಿ.ಆರ್ ಕೌಶಲ್ಯದ ಮಹತ್ವದ ಅರಿವನ್ನು ಮೂಡಿಸಲು ಹಾಗೂ ಆಸ್ಪತ್ರೆಯ ಸಿಬ್ಬಂದಿಯನ್ನು ಸಜ್ಜುಗೊಳಿಸಲು ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ, ತುರ್ತು ಸ್ಥಿತಿಗಳನ್ನು ಧೈರ್ಯದಿಂದ ಎದುರಿಸಲು ಅಗತ್ಯವಿರುವ ತಂತ್ರಜ್ಞಾನದ ಜೊತೆಗೆ ತ್ವರಿತ ಕಾರ್ಯ ಪ್ರವೃತ್ತಿಯ ಕೌಶಲ್ಯಗಳನ್ನು ಹಾಗೂ ಹೃದಯಾಘಾತದ ಸಂದರ್ಭದಲ್ಲಿ ತಕ್ಷಣ ಏನು ಮಾಡಬೇಕು, ಹೇಗೆ ರಕ್ಷೀಸಬೇಕು ಎಂಬ ಅರಿವು ಮತ್ತು ನೈಪುಣ್ಯತೆ ತಿಳಿಸಲಾಯಿತು.ತರಬೇತಿ ನೀಡಿದ ಕೇರಳದ ಡಾ.ಹರಿ ಶಂಕರ, ತರಬೇತಿಯು ಆರೋಗ್ಯ ಸೇವೆಯಲ್ಲಿ ನವೀನ ಹಾಗೂ ಮಾನವೀಯ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತಿದೆ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ ೩ ದಿನಗಳ ಅಧ್ಯಯನ ಶಿಬಿರವನ್ನು ಆಗಸ್ಟ್ ೩ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.೨೦ ರಿಂದ ೪೦ ವರ್ಷ ವಯೋಮಾನದ ಈಗಾಗಲೇ ಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಪತ್ರಿಕೋದ್ಯಮ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ೨೫-೦೭-೨೦೨೫ ಆಗಿದೆ. ಆಸಕ್ತರು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ಸೈಟ್ https://sahithyaacademy.karnataka.gov.inಮೂಲಕ ವಿವರ ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ ಕರಿಯಪ್ಪ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಅವಕಾಶ ಕಲ್ಪಿಸಿದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ೨೦೨೨-೨೩ ಹಾಗೂ ೨೦೨೩-೨೪ ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ತಿಳಿಸಿದ್ದಾರೆ.ಒಟ್ಟು ೨೪ ಅಭ್ಯರ್ಥಿಗಳಿಗೆ ಇಂಟರ್ನ್ಷಿಪ್ ಅವಕಾಶ ಒದಗಿಸಲಾಗುವುದು. ಅದರ ವಿವರ ಹೀಗಿದೆ:• ಮಹಿಳಾ ಆಯವ್ಯಯದಡಿ ೧೦ ಮಹಿಳೆಯರು,• ಪರಿಶಿಷ್ಟ ಜಾತಿ ಉಪಯೋಜನೆಯಡಿ ೧೦ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು• ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ೪ ಪರಿಶಿಷ್ಟ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ಅರ್ಜುನಗಿ (ನಿಡೋಣಿ) ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ೧೧೦ ಕೆ.ವಿ, ಬಬಲೇಶ್ವರ-ತಿಕೋಟಾ ಮಾರ್ಗಕ್ಕೆ ಟ್ಯಾಪ್ ಸೇರಿದಂತೆ ೧೧೦/೧೧ಕೆ.ವಿ ಬೇ ಗಳ ನಿರ್ವಹಣಾ ಕಾರ್ಯ ಕೈಗೊಳ್ಳುವುದರಿಂದ ೧೧೦/೧೧ ಕೆ.ವಿ ಬಬಲೇಶ್ವರ ತಿಕೋಟಾ ಸ್ವೀಕರಣಾ ಕೇಂದ್ರದಿಂದ ಹೊರಹೋಗುವ ಎಲ್ಲಾ ೧೧ ಕೆ.ವಿ ವಿದ್ಯುತ್ ಮಾರ್ಗಗಳಿಗೆ ವಿದ್ಯುತ್ ಪೂರೈಕೆಯಲ್ಲಿ ಜುಲೈ ೯ರಂದು ಬೆಳಿಗ್ಗೆ ೯ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಮಟ್ಟದಷ್ಟೇ ಅಲ್ಲದೆ, ಭಾರತ ಮತ್ತು ಕರ್ನಾಟಕ ಸರ್ಕಾರಗಳಿಂದ ನೀಡಲಾಗುವ ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಉದ್ಯೋಗ ಮತ್ತು ವೃತ್ತಿ ಸಮಾಲೋಚನಾ ಕೋಶ, (ಐಕ್ಯೂಎಸಿ) ಹಾಗೂ ಅಂತರಾಷ್ಟಿçಯ ಕೋಶದ ವತಿಯಿಂದ ಆಯೋಜಿಸಿದ್ದ ‘ವಿದೇಶದಲ್ಲಿ ಉನ್ನತ ವ್ಯಾಸಂಗ ಹಾಗೂ ಉದ್ಯೋಗ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುವುದು ವಿಶೇಷವಾಗಿ ಮಹಿಳೆಯರಿಗೆ ಉನ್ನತ ಮಟ್ಟದ ಸಾಧನೆ ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯಲು ಉತ್ತಮ ಅವಕಾಶವನ್ನು ಒದಗಿಸುತ್ತದೆ ಎಂದರು.ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿದ್ಯಾಲೋಕ ಅಂತರಾಷ್ಟ್ರೀಯ ಶಿಕ್ಷಣ ಮತ್ತು ವಲಸೆ ಸಲಹಾಗಾರರಾದ ಕೃಷ್ಣಾ ಸಾಗರ, ಹರ್ಷಾ ಹಾಗೂ ಸೈಹಿದಾ ಮಲಿಹಾನಾಜ್ ಮಾತನಾಡಿ, ವಿದೇಶಿ ವಿಶ್ವವಿದ್ಯಾಲಯಗಳ ವಿವರ, ವಿವಿಧ ಕೋರ್ಸ್ಗಳು, ಶಿಷ್ಯವೇತನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆಯಲ್ಲಿ ಜುಲೈ 10 ರಂದು ಉಚಿತ ಅರೋಗ್ಯ ತಪಾಸಣೆ(Free BMD Test Camp) ಆಯೋಜಿಸಲಾಗಿದೆ.ಈ ಉಚಿತ ಶಿಬಿರದಲ್ಲಿ ಕೀಲುಗಳಲ್ಲಿ ನೋವು, ಕೈ-ಕಾಲು ನೋವು, ಬೆನ್ನು ನೋವು, ಮೂಳೆಗಳಲ್ಲಿ ಕ್ಯಾಲ್ಸಿಯಂ ಕೊರತೆ (ಆಸ್ಟಿಯೊಫೋರೊಸಿಸ್) ಈ ಲಕ್ಷಣಗಳು ಇರುವವರಿಗೆ ಮೂಳೆಗಳ ಸಾಂಧ್ರತೆ ಮಾಪನ ಯಂತ್ರದಿಂದ (BMD ) ಉಚಿತ ತಪಾಸಣೆ ಮಾಡಲಾಗುವುದು.35 ರಿಂದ 65 ವರ್ಷದೊಳಗಿನ ಸಾರ್ವಜನಿಕರು ಶಿಬಿರದ ಲಾಭ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7975160825 ಮತ್ತು 9513397413 ನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Read More