Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಅಖಿಲ ಭಾರತ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಏರ್ಪಡಿಸಿದ ಶಿವಾನುಭವಗೋಷ್ಠಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶ್ವಕ್ಕೆ ರಾಮಾಯಣ ಮಹಾಕಾವ್ಯದ ಮೂಲಕ ಭಾರತೀಯ ಸಾಂಸ್ಕೃತಿಕ, ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ತಿಳಿಸಿಕೊಟ್ಟ ಮಹಾಕವಿ ಮಹರ್ಷಿ ವಾಲ್ಮೀಕಿಯವರಾಗಿದ್ದಾರೆ ಎಂದು ಹಿರಿಯ ನ್ಯಾಯವಾದಿ ಕೆ.ಎಫ್. ಅಂಕಲಗಿ ಹೇಳಿದರು.ನಗರದ ವೀರಶೈವ ಲಿಂಗಾಯತ ಸಭಾಭವನದಲ್ಲಿ ಅಖಿಲ ಭಾರತ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಏರ್ಪಡಿಸಿದ ಶಿವಾನುಭಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ರಚಿಸಿದ ಮಹಾಕಾವ್ಯ ರಾಮಾಯಣದಲ್ಲಿ ಸರ್ವಕಾಲಿಕ ಮೌಲ್ಯಗಳು, ಜನಪರ ನಿಲವುಗಳು, ಪೂರ್ಣಪ್ರಜ್ಞೆ ವಾಸ್ತವತೆಯ ಪ್ರತಿರೂಪ ಮೌಲ್ಯಗಳ ವಿವಿಧ ಸಂಸ್ಕೃತಿಗಳ ಸಮನ್ವಯತೆ ತಿಳುವಳಿಕೆಯ ವಿಶ್ವಕೋಶವಿದೆ. ರಾಮಾಯಣದ ತತ್ವ ಆದರ್ಶಗಳನ್ನು ಅದರಂತೆ ಮೂಲ ಅಂಶಗಳು ಬೆಳಕಿಗೆ ಬರಬೇಕಾಗಿದೆ. ಮೂಲಕಾವ್ಯದ ಪಾತ್ರಗಳ ಮೂಲಕ ಜವಾಬ್ದಾರಿ ಮತ್ತು ಕರ್ತವ್ಯದ ಮಹತ್ವವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ಆಗಬೇಕಾಗಿದೆ ಎಂದರು.ಮಹಾಸಭೆಯ ಕೋಶಾಧ್ಯಕ್ಷ ಮ.ಗು. ಯಾದವಾಡ ಮಾತನಾಡಿ, ಇತಿಹಾಸವನ್ನು ತಿಳಿದುಕೊಂಡು ಸಮಾಜದ ಜನರನ್ನು ಜಾಗೃತಿ ಮಾಡಬೇಕು. ರಾಷ್ಟ್ರೀಯ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು ಎಂದರು.ಜಿಲ್ಲಾಧ್ಯಕ್ಷ ವಿ.ಸಿ. ನಾಗಠಾಣ…
ಸಿದ್ಧಸಿರಿ ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಸಿದ್ಧಸಿರಿ ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್ನ ಕೇಂದ್ರ ಕಚೇರಿ ಆವರಣದಲ್ಲಿ ಶ್ರೀ ಸಿದ್ದರಾಮೇಶ್ವರ ಹಾಗೂ ಶ್ರೀ ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನೂತನ ನಾಮಫಲಕವನ್ನು ಸೊಸಾಯಿಟಿ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಬುಧವಾರ ಅನಾವರಣಗೊಳಿಸಿದರು.ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶೇಷವಾದ ಪ್ರಗತಿಯನ್ನು ಸಾಧಿಸಿ, ಸಿದ್ಧಸಿರಿ ಸೌಹಾರ್ದ್ ಸಹಕಾರಿ ಸಂಘವು ಕೇಂದ್ರ ಸರ್ಕಾರದಿಂದ ಅನುಮತಿ ಪಡೆದುಕೊಂಡು, ಸಿದ್ಧಸಿರಿ ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್ ಆಗಿ ಪರಿವರ್ತನೆಗೊಂಡಿದೆ.ಈ ಸಂದರ್ಭದಲ್ಲಿ ಸೊಸಾಯಿಟಿ ಉಪಾಧ್ಯಕ್ಷ ಬಸಯ್ಯ ಹಿರೇಮಠ, ನಿರ್ದೇಶಕರಾದ ಸಂಗನಬಸಪ್ಪ ಸಜ್ಜನ, ಶಿವಾನಂದ ಅಣೆಪ್ಪನವರ, ಪ್ರಭುಗೌಡ ದೇಸಾಯಿ, ರಮೇಶ ಬಿರಾದಾರ, ವಿಜಯಕುಮಾರ ಚವ್ಹಾಣ, ಅಶೋಕಗೌಡ ತೊರವಿ, ಸೋಮಶೇಖರ ಬಂಡಿ, ಬಸನಗೌಡ ಪಾಟೀಲ ನಾಗರಾಳಹುಲಿ, ಸಿದ್ದೇಶ್ವರ ಸಂಸ್ಥೆ ಗೌರವ ಕಾರ್ಯದರ್ಶಿ ಸದಾನಂದ ದೇಸಾಯಿ, ನಿರ್ದೇಶಕರಾದ ಎಸ್.ಎಚ್.ನಾಡಗೌಡ, ಬಸವರಾಜ ಗಣಿ,…
ನಿವರಗಿ ಗ್ರಾಮದಲ್ಲಿ ಜಿಲ್ಲೆಯಲ್ಲಿಯೇ ಹೆಚ್ಚಿನ ಪಟಾಕಿಗಳ ಸದ್ದು ಉದಯರಶ್ಮಿ ದಿನಪತ್ರಿಕೆ ರೇವತಗಾಂವ: ಚಡಚಣ ತಾಲೂಕಿನ ನಿವರಗಿ ಗ್ರಾಮದಲ್ಲಿ ದೀಪಾವಳಿ ಪಾಡ್ಯದ ನಿಮಿತ್ತ ಬುಧವಾರದಂದು ಶ್ರೀ ಸಂಗಮೇಶ್ವರ ಹಾಗೂ ಶ್ರೀ ಮಹಾಲಕ್ಷ್ಮಿ ದೇವರುಗಳ ಪಲ್ಲಕ್ಕಿಗಳ ಭೇಟಿ ಕಾರ್ಯಕ್ರಮವು ಬಹು ಅದ್ಧೂರಿಯಾಗಿ ನೆರವೇರಿತು.ಗ್ರಾಮದಲ್ಲಿ ನಸುಕಿನ ಜಾವ ೫ ಗಂಟೆಗೆ ಶ್ರೀ ಸಂಗಮೇಶ್ವರ ಹಾಗೂ ಮಹಾಲಕ್ಷ್ಮಿದೇವಿಗೆ ಪೂಜೆ, ಮಹಾಮಂಗಳಾರತಿ, ರುದ್ರಾಭಿಷೇಕ, ಉಡಿ ತುಂಬುವ, ಸಬೀನ್ ತಿರುಗುವ ಹಾಗೂ ನೈವೇದ್ಯ ಕಾರ್ಯಕ್ರಮ ನಡೆಯಿತು. ನಂತರ ಡೋಳ್ಳಿನ ಪದಗಳು ಜರುಗಿದವು.ಸಾಯಂಕಾಲ ೫ ಗಂಟೆಗೆ ಆಕರ್ಷಕ ಗೊಂಬೆ ಕುಣಿತಗಳೊಂದಿಗೆ, ವಿವಿಧ ವಾದ್ಯ ವೈಭವಗಳೊಂದಿಗೆ ಶ್ರೀ ಮಹಾಲಕ್ಷ್ಮಿ ದೇವರ ಪಲ್ಲಕ್ಕಿ ಉತ್ಸವವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗ್ರಾಮದ ದೊಡ್ಡ ಹಳ್ಳದ ವಿಶಾಲವಾದ ಮೈದಾನ ತಲುಪಿತು. ಈ ವೇಳೆ ಭೀಮಾ ನದಿಯ ದಂಡದ ಮೇಲೆ ನೆಲೆ ನಿಂತಿರುವ ಶ್ರೀ ಸಂಗಮೇಶ್ವರ ದೇವರ ಪಲ್ಲಕ್ಕಿ ಉತ್ಸವವು ಕೂಡಾ ಹಳ್ಳದ ವಿಶಾಲವಾದ ತಲುಪಿತು. ಸಾಯಂಕಾಲ ೬ ಗಂಟೆಯ ಸುಮಾರಿಗೆ ಅಣ್ಣ ತಂಗಿಯ ಭೇಟಿ ಕಾರ್ಯಕ್ರಮವು…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಅವಕಾಶಗಳ ಕೊರತೆಯಿಂದ ಇಂದು ಹಲವಾರು ಕಲಾವಿದರು ಎಲೆ ಮರೆಯ ಕಾಯಿಯಂತೆ ಬದುಕುತಿದ್ದು ಅವರಿಗೆ ಸ್ಥಳೀಯರೆ ಅವಕಾಶ ನೀಡಿ ಪ್ರೊತ್ಸಾಹಿಸಿದಲ್ಲಿ ಅವರ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಹೇಳಿದರು.ಗ್ರಾಮದ ದಸರಾ ದೀಪಾವಳಿ ಹಾಗೂ ಶ್ರೀ ರಘುನಾಥ ಪ್ರೀಯ ಸಾಧು ಮಹಾರಾಜರ ಜಾತ್ರಾ ಮಹೋತ್ಸವದ ನಿಮಿತ್ಯ ಹಾಗೂ ಯಂಗ್ ಸ್ಟಾರ್ ಕಮೀಟಿ ಆಶ್ರಯದಲ್ಲಿ ಹಮ್ಮಿ ಕೊಳ್ಳಲಾಗಿದ್ದ “ಸಂಗೀತ ಸಂಭ್ರಮ-೨೦೨೫” ರಸಮಂಜರಿ ಕಾರ್ಯಕ್ರಮದ ಉದ್ಘಾಟಣೆ ನೆರವೇರಿಸಿ ಮಾತನಾಡಿದ ಅವರು, ಅವಕಾಶಗಳ ಸದುಪಯೋಗ ಮಾಡಿಕೊಂಡ ಹಲವಾರು ಸ್ಥಳೀಯ ಪ್ರತಿಭೆಗಳು ಇಂದು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದು ಈ ದಿಸೆಯಲ್ಲಿ ಕಲಾವಿದರಿಗೆ ಪ್ರೋತ್ಸಾಹ ನೀಡುವಲ್ಲಿ ಪಕ್ಷಬೇಧ, ಜಾತಿಬೇಧ ಮಾಡದೆ ವರ್ಷಕ್ಕೆ ಹತ್ತಾರು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾವಿದರಿಗೆ ಪ್ರೋತ್ಸಾಹಿಸುವ ಚಿಮ್ಮಡ ಗ್ರಾಮಸ್ಥರ ಕಾರ್ಯ ಶ್ಲಾಘನೀಯವೆಂದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಂಕರ ಬಟಕುರ್ಕಿ, ಪಂಡಿತ ಭೋಸಲೆ ಮಾತನಾಡಿದರು.ಸ್ಥಳೀಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು, ಓಂಕಾರ ಮಹಾರಾಜರು ಸಾನಿಧ್ಯ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಶಿವಪ್ಪಾ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಇಂದು ಮುಕ್ತಾಯಗೊಂಡ ಹುಲಜಯಂತಿ ಜಾತ್ರೆಗೆ ಇಂಡಿ ಘಟಕದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ೨೨ ಲಕ್ಷ ರೂ ಆದಾಯವಾಗಿದೆ ಎಂದು ಘಟಕ ವ್ಯವಸ್ಥಾಪಕ ರೇವಣಸಿದ್ದ ಖೈನೂರ ತಿಳಿಸಿದ್ದಾರೆ.ಇಂದು ಹುಲಜಂತಿ ಜಾತ್ರೆ ನಿಮಿತ್ಯ ಹೋದ ಬಸ್ಸಿನ ಕೊನೆಗೆ ಬಂದ ಬಸ್ಸಿಗೆ ಪೂಜೆ ಸಲ್ಲಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇಂಡಿಯಿಂದ ಹುಲಜಯಂತಿಗೆ ೪೫ ಬಸ್ಸುಗಳು ೨೪೧ ಟ್ರೀಪ್ ಗಳು ಸೇರಿ ಒಟ್ಟು ೨೨ ಲಕ್ಷ ಆದಾಯ ಬಂದಿದ್ದು ಇದು ವಿಜಯಪುರ ಜಿಲ್ಲೆಯಲ್ಲಿ ಡಿಪೋಗಳಲ್ಲಿ ಹುಲಜಂತಿ ಜಾತ್ರೆಗೆ ಇಂಡಿ ಡಿಪೋ ಪ್ರಥಮ ಸ್ಥಾನದಲ್ಲಿದೆ ಎಂದು ತಿಳಿಸಿದ್ದಾರೆ.ಇಂಡಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಿಂದ ಅಂದಾಜು ೪೦ ಸಾವಿರಕ್ಕೂ ಅಧಿಕ ಪ್ರಾಯಾಣಿಕರು ಪ್ರಯಾಣ ಮಾಡಿರುವದಾಗಿ ತಿಳಿಸಿದ್ದಾರೆ.ಆನಂದ ಬಡಿಗೇರ, ಎಂ.ಆರ್.ಪಾರ್ಥನಳ್ಳಿ, ಎನ್.ಎಸ್.ಹೊಟಗೊಂಡ, ಎಲ್,ಆರ್.ರಾಠೋಡ, ಜಿ.ಎಂ.ಸೋನಾವನೆ,ಟಿ.ಕೆ.ರಾಠೋಡ, ವಾಯ್.ಬಿ.ಬಿಸೆ, ಗಂಗಾಧರ ಸಾಲೇಗಾಂವ , ರಾವುತಪ್ಪ ಹೊನಕಟ್ಟಿ, ಜಿ.ಕೆ.ಸರಸಂಬಿ ಮತ್ತಿತರಿದ್ದರು.
ಎಚ್.ಜಿ.ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎ ಆರ್ ಹೆಗ್ಗಣದೊಡ್ಡಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬ್ರಿಟಿಷರ ವಿರುದ್ಧ ರೋಚಕ ಹಾಗೂ ಐತಿಹಾಸಿಕ ಜಯ ಸಾಧಿಸಿದ ವೀರರಾಣಿ ಚೆನ್ನಮ್ಮಳ ಕ್ರಾಂತಿಕಾರಿ ಹೋರಾಟವು ೧೮೫೭ ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ಪ್ರೇರಣೆಯಾಯಿತು ಎಂದು ಎಚ್.ಜಿ.ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎ ಆರ್ ಹೆಗ್ಗಣದೊಡ್ಡಿ ಅಭಿಪ್ರಾಯಪಟ್ಟರು. ಪಟ್ಟಣದ ತಹಶೀಲದಾರ ಕಚೇರಿಯಲ್ಲಿ ತಾಲೂಕಾಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಣಿ ಚೆನ್ನಮ್ಮಾಜಿಯ ೧೪೭ನೇ ಜಯಂತೋತ್ಸವ ಹಾಗೂ ೧೦೧ ನೇಯ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು. ಭಾರತವನ್ನು ಬ್ರಿಟಿಷರ ಸಂಕೋಲೆಯಿಂದ ಬಿಡಿಸಲು ಅಸಂಖ್ಯಾತ ಸ್ವಾತಂತ್ರವೀರರ ತ್ಯಾಗ ಬಲಿದಾನಗಳು ಕಾರಣವಾಗಿವೆ. ಈ ಸಂಗ್ರಾಮದಲ್ಲಿ ತೆರೆಮರೆಯ ಹಿಂದೆ ತಮ್ಮ ರಕ್ತ ಚೆಲ್ಲಿ ಮೌನ ಹೋರಾಟ ಮಾಡಿ ಮರೆಯಾದವರೆಷ್ಟೋ! ಅಂಥವರ ಬಲಿದಾನದ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಯಪಡಿಸುವ ಅಗತ್ಯವಿದೆ ಎಂದ ಅವರು, ರಾಣಿ ಚೆನ್ನಮ್ಮ ವಿಜಯೋತ್ಸವ ಕೇವಲ ಕಿತ್ತೂರಿನ ವಿಜಯೋತ್ಸವವಾಗಿರದೆ ಸಮಸ್ತ ಕನ್ನಡ ನಾಡಿನ ವಿಜಯೋತ್ಸವವಾಗಿತ್ತು ಎಂದರು. ತಹಶೀಲದಾರ ಕರೆಪ್ಪ ಬೆಳ್ಳಿ ಹಾಗೂ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗ್ರಾಮೀಣ ಭಾಗದ ಜನರಿಗೆ ನಿತ್ಯ ಸಂಚರಿಸಲು ಗ್ರಾಮೀಣ ರಸ್ತೆಗಳ ಸುಧಾರಣೆ ಅವಶ್ಯಕವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದ ಜಿಲ್ಲಾ ಪಂಚಾಯತ ವಿಜಯಪುರ ಪಂ.ರಾ.ಇಂ. ಉಪ ವಿಭಾಗ ಸಿಂದಗಿ ಸನ್ ೨೦೨೩-೨೪ ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆ ಅಡಿಯಲ್ಲಿ ಖಾನಾಪುರ ಗ್ರಾಮದಿಂದ ಮಾರಿಹಳ್ಳ ಹೋಗುವ ರಸ್ತೆಗೆ ೧೦ ಲಕ್ಷದ ವೆಚ್ಚದ ರಸ್ತೆಗೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಶಾಸಕ ಅಶೋಕ ಮನಗೂಳಿ ನಂತರ ಮಾತನಾಡಿದ ಅವರು, ಗ್ರಾಮೀಣ ರಸ್ತೆ ಸುಧಾರಣೆಗೆ ತಾಲೂಕಿನಲ್ಲಿ ಅನೇಕ ರಸ್ತೆಗಳು ಹದಗೆಟ್ಟಿರುವ ಬಗ್ಗೆ ಗಮನಕ್ಕಿದ್ದು ವಿವಿಧ ಯೋಜನೆಗಳಡಿ ಅನುದಾನ ತರುವ ಮೂಲಕ ಹಂತ-ಹಂತವಾಗಿ ರಸ್ತೆ ಸುಧಾರಣೆಗೆ ಆದ್ಯತೆ ನೀಡುವುದಾಗಿ ಹೇಳಿದರಲ್ಲದೇ ಸರಕಾರದಿಂದ ಅನುದಾನ ತಂದು ಗ್ರಾಮೀಣ ಅಭಿವೃದ್ಧಿಗೆ ಶ್ರಮಿಸುವದಾಗಿ ಹೇಳಿದರು.ಇದೇ ಸಂದರ್ಭದಲ್ಲಿ ಶ್ರೀ ಮೌನಯೋಗಿ ಕಲ್ಯಾಣದಯ್ಯ ಸ್ವಾಮಿಗಳು, ಕಾಂಗ್ರೆಸ್ ಮುಖಂಡರಾದ ವಿಜುಗೌಡ ನಿಂಗನಗೌಡ ಬಿರಾದಾರ, ರವಿರಾಜ್ ದೇವರಮನಿ, ಬಸನಗೌಡ ಉಳ್ಳೆಸೂರ, ರುದ್ರಣ್ಣಸಾಹುಕಾರ ಮಾನಶೆಟ್ಟಿ, ಮಹೇಶ್ ಮನಗೂಳಿ,…
ವಿಜಯಪುರದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರು ತೋರಿದ ಧೈರ್ಯ, ಶೌರ್ಯ ಹಾಗೂ ಸಾಹಸ ನಮ್ಮೆಲ್ಲರಿಗೂ ಪ್ರೇರಣೆಯ ಜೊತೆಗೆ ಸ್ಫೂರ್ತಿದಾಯಕವಾಗಿದೆ ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಗುರುವಾರ ನಡೆದ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ರಾಣಿ ಚನ್ನಮ್ಮ ಅವರ ಸಾಹಸಮಯ ಯಶೋಗಾಥೆಯನ್ನು ಮುಂದಿನ ಜನಾಂಗಕ್ಕೆ ತಿಳಿಸಿಕೊಡುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಭಾಷಣ, ಕ್ವಿಜ್, ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು. ಅವರ ಆದರ್ಶಮಯ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿದೆ ಎಂದು ಹೇಳಿದರು.ಪ್ರಕಾಶ ಎನ್. ನರಗುಂದ ಅವರು ವಿಶೇಷ ಉಪನ್ಯಾಸ ನೀಡಿದರು.ಬಿ.ಎಂ. ಪಾಟೀಲ ಅವರು ಮಾತನಾಡಿದರು.ಗೀತಾ ಕುಲಕರ್ಣಿ ಅವರು ಸುಗಮ ಸಂಗೀತ ನಡೆಸಿಕೊಟ್ಟರು.ಈ ಸಂದರ್ಭದಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸುವರ್ಣ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಇಲಾಖೆ ಇವರ ಸಹಯೋಗದೊಂದಿಗೆ ಅಕ್ಟೋಬರ್ ೨೭ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆಯನ್ನು ನಗರದ ಗಗನ ಮಹಲ್ ಆವರಣದಲ್ಲಿ ಆಯೋಜಿಸಲಾಗಿದೆ.ಈ ಚಿತ್ರಕಲಾ ಸ್ಪರ್ಧೆಯು ಅಕ್ಟೋಬರ್ ೨೭ರ ಬೆಳಿಗ್ಗೆ ೯.೩೦ ರಿಂದ ೧೧ರವರೆಗೆ ನಡೆಯಲಿದ್ದು, ೬ ರಿಂದ ೮ನೇ ತರಗತಿ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ಮಾಲಿನ್ಯ ನಿಲ್ಲಿಸಿ ವಿಷಯ ಕುರಿತು ಹಾಗೂ ೯ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಚ್ಛ ಸುಂದರ ನನ್ನ ಕನಸಿನ ಪರಿಸರದ ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ.ಪೋಸ್ಟರ್ ಬಿಡುಗಡೆ : ಗುರುವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಚಿತ್ರಕಲಾ ಸ್ಫರ್ಧೆಯ ಪೋಸ್ಟರ್ಗಳನ್ನು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬಿಡುಗಡೆಗೊಳಿಸಿದರು.ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಕ್ಟೋಬರ್ ೩೦ರಂದು ಬಾಗಲಕೋಟೆಯಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು.…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರಿಗೆ ನವೆಂಬರ್ ೧ರಂದು ಸನ್ಮಾನ ಮಾಡಲು ಉದ್ದೇಶಿಸಲಾಗಿದೆ.ಕಲೆ, ಸಾಹಿತ್ಯ, ರಂಗಭೂಮಿ, ಸುಗಮ ಸಂಗೀತ, ಜನಪದ, ಸಂಗೀತ, ಶಿಲ್ಪಕಲೆ, ನೃತ್ಯ, ಚಿತ್ರಕಲೆ, ಸಮಾಜ ಸೇವೆ, ಕೃಷಿ, ವೈದ್ಯಕೀಯ, ಪತ್ರಿಕೋದ್ಯಮ, ಸಂಕೀರ್ಣ, ಇತರೆ ಕ್ಷೇತ್ರಗಳಲ್ಲಿ ತಮ್ಮ ಸಾಧನೆಯ ವಿವರಗಳನ್ನು ಒಳಗೊಂಡಂತೆ ತಮ್ಮ ಸ್ವ-ಪರಿಚಯ ಮತ್ತು ದಾಖಲೆಗಳೊಂದಿಗೆ ದಿನಾಂಕ : ೨೭-೧೦-೨೦೨೫ ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಶನ್ ರಸ್ತೆ ವಿಜಯಪುರ ಕಚೇರಿಗೆ ಸಲ್ಲಿಸಬಹುದಾಗಿದೆ.ಈ ಕುರಿಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: ೦೮೩೫೨-೨೫೧೨೬೧ ಸಂಖ್ಯೆಗೆ ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
