Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಯೂರಿಯಾ ರಸಗೊಬ್ಬರ ಮಾರಾಟ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ ರಸಗೊಬ್ಬರ ಮಾರಾಟಗಾರರಿಗೆ ಸೂಚಿಸಿದರು.ವಿಜಯಪುರ ಹಸಿರು ಸೇನೆ ಜಿಲ್ಲಾಧ್ಯಕ್ಷರು ನೇತೃತ್ವದ ತಂಡ ಪಟ್ಟಣದ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿ. ಇಂಡಿ ಅವರು ರಸಗೋಬ್ಬರ ಮಳಿಗೆಗೆ ಭೇಟಿ ನೀಡಿದ ಸಂದರ್ಭದಲ್ಲಿ. ಸರ್ಕಾರ ಯೂರಿಯಾ ಗೊಬ್ಬರವನ್ನು ಸಬ್ಸಿಡಿ ರೂಪದಲ್ಲಿ ರೈತರಿಗೆ ರೂ.೨೬೬ ದರ ನಿಗದಿಪಡಿಸಿ ಆದೇಶ ಹೊರಡಿಸಿದೆ. ಆದರೆ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದವರು ಪ್ರತಿ ಯೂರಿಯಾ ಪ್ಯಾಕೇಟ್ ಬೆಲೆಗಿಂತ ರೂ.೨೦ ರಿಂದ ರಷ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ರೈತರು ದೂರು ನೀಡಿದ್ದರು.ರಸಗೊಬ್ಬರ ಮಾರಾಟದಲ್ಲಿ ನಿಯಮ ಉಲ್ಲಂಘಿಸಬಾರದು. ರೈತರಿಗೆ ಗೊಬ್ಬರದ ರಸೀದಿ ನೀಡಬೇಕು. ದರಪಟ್ಟಿ ಹಾಕಬೇಕು. ಲಿಂಕ್ ಗೊಬ್ಬರ ಖರೀದಿಸುವಂತೆ ಒತ್ತಾಯಿಸಬಾರದು. ಈ ನಿಯಮಗಳನ್ನು ಉಲ್ಲಂಘಿಸಿದರೆ ಸಂಬಂಧಿಸಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು…

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಜಗದಾಳ ಗ್ರಾಮದ ಕಾಂಗ್ರೆಸ್ ಮುಖಂಡರಾದ ಪಂಡಿತ ಭೋಸಲೆಯವರು ತಮ್ಮ ಜನ್ಮದಿನಾಚರಣೆ ನಿಮಿತ್ತ ಚಿಮ್ಮಡ, ಜಗದಾಳ, ಆಸಂಗಿ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿನೀಡಿ ಗಾಲಿಖುರ್ಚಿ ಹಾಗೂ ಬಡ ಬಾನಂತಿಯರಿಗೆ ಆರೋಗ್ಯ ಕಿಟ್ ವಿತರಿಸಿದರು.ಜನ್ಮದಿನಾಚರಣೆಯ ನಿಮಿತ್ತ ಮಂಗಳವಾರ ಮುಂಜಾನೆ ಸ್ಥಳಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ. ನಂತರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಗತ್ಯವಿದ್ದ ಗಾಲಿಖುರ್ಚಿಯನ್ನು ವೈದ್ಯಾಧಿಕಾರಿ ಡಾ. ಅಶೋಕ ಪಡಸಾಲಿ, ಡಾ. ಕೆ,ಎಸ್, ತಳ್ಳಿಯವರಿಗೆ ಹಸ್ತಾಂತರಿಸಿದರು. ನಂತರ ಗ್ರಾಮದ ಬಡ ಬಾನಂತಿಯರಿಗೆ ಆರೋಗ್ಯ ಕಿಟ್ ವಿತರಿಸುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು.ಗ್ರಾಮದ ಕಾಂಗ್ರೆಸ್ ಮುಖಂಡರಾದ ಮಹಾಲಿಂಗ ಮಾಯನ್ನವರ, ಸಲೀಮ ಸರಕಾವಸ, ಇಮಾಮ ಯಾದವಾಡರವರು ಪಂಡಿತ ಭೋಸಲೆಯವರನ್ನು ಸತ್ಕರಿಸುವ ಮೂಲಕ ಶುಭಾಶಯ ಕೋರಿದರು ಕೆಪಿಸಿಸಿ ಸದಸ್ಯ ಬಸವರಾಜ ಕೊಕಟನೂರ, ಅಡಿವೆಪ್ಪ ಪಾಟೀಲ, ಎಪಿಎಂಸಿ ಸದಸ್ಯ ಚಂದ್ರಶೇಖರ ಕುರಿ, ಜಗದಾಳ ಗ್ರಾ.ಪಂ. ಮಾಜಿ ಅಧ್ಯಕ್ಷ ಸುರೇಶ ಅಸ್ಕಿ, ರವಿಂದ್ರ ಗೊಬ್ಬಾಣಿ, ಸದಾಶಿವ ದಡ್ಡಿಮನಿ, ಕೆ.ಎಂ.ಎಫ್ ಅಧ್ಯಕ್ಷ ಶ್ರೀಶೈಲ ಪಾಟೀಲ,…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಆಟವಾಡಲು ಹೋಗಿ ಬಾವಿಯಲ್ಲಿ ಬಾಲಕಿ ಬಿದ್ದಿದ್ದ ಬಾಲಕಿಯ ಶವ ಮಂಗಳವಾರ ಪತ್ತೆಯಾಗಿದೆ. ಇಂಡಿ ಪಟ್ಟಣದ ಬಳಿಯ ಧನಸಿಂಗ್ ( ಮೋನಪ್ಪ ನಗರ) ತಾಂಡಾದಲ್ಲಿ ಈ ಘಟನೆ ಸಂಭವಿಸಿದೆ. ತಾಯಿಯೊಂದಿಗೆ ಕುರಿ ಮೇಯಿಸುವಾಗ ಆಟವಾಡುತ್ತಾ ಬಾವಿಯಲ್ಲಿ 8 ವರ್ಷದ ಅರ್ಚನಾ ರಾಠೋಡ ಬಾವಿಯಲ್ಲಿ ನಿನ್ನೆ ಸಾಯಂಕಾಲ ಬಾವಿಯಲ್ಲಿ ಬಿದ್ದಿದ್ದಳು. ಇನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯಿಂದ ಶವವನ್ನು ಹೊರಕ್ಕೆ ತೆಗೆದಿದ್ದಾರೆ.‌ ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಸಂದರ್ಭದಲ್ಲಿ ಸ್ಥಳದಲ್ಲಿಪುರಸಭೆ ಅಧ್ಯಕ್ಷ ಲಿಂಬಾಜಿ‌ ರಾಠೋಡ,ಕರ್ನಾಟಕ ಯುವರಕ್ಷಣಾ ವೇದಿಕೆ ತಾಲೂಕ ಅಧ್ಯಕ್ಷ ವಿಜಯ ಸುಭಾಷ ರಾಠೋಡ, ಸುನೀಲ‌ ರಾಠೋಡ ,ಕಾರ್ಯದರ್ಶಿ ಆನಂದ ಚವ್ಹಾಣ, ಬಂಜಾರಾ ಕ್ರಾಸ ಮಾಜಿ ಅಧ್ಯಕ್ಷ‌ ಸಂಜು‌ ಲಕ್ಷ್ಮಣ ರಾಠೋಡ, ಸೇರಿದಂತೆ ಅನೇಕರು ಇದ್ದರು.

Read More

ಕತಕನಹಳ್ಳಿಯ ಮಾತೋಶ್ರೀ ಶಂಕ್ರೆಮ್ಮತಾಯಿ ಪ್ರಾಥಮಿಕ ಶಾಲೆಯ ಸಾಧನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಿದಲ್ಲಿ ಉತ್ತಮವಾದ ಫಲಿತಾಂಶವನ್ನು ಪಡೆಯುವುದಕ್ಕೆ ಸಾಧ್ಯ ಎನ್ನುವುದನ್ನು ಕತಕನಹಳ್ಳಿಯ ಮಾತೋಶ್ರೀ ಶಂಕ್ರೆಮ್ಮಾತಾಯಿ ಪ್ರಾಥಮಿಕ ಶಾಲೆಯು ಸಾಬೀತು ಮಾಡಿ ತೋರಿದೆ. ಕತಕನಹಳ್ಳಿಯ ಶ್ರೀ ಶಿವಯ್ಯ ಅಜ್ಜನವರ ಹಾರೈಕೆಯಂತೆ ಪ್ರಾರಂಭವಾಗಿರುವ ಈ ಶಾಲೆಯು ತನ್ನ ಗುಣಮಟ್ಟದ ಶಿಕ್ಷಣದ ಮೂಲಕ ಇಂದು ೨೦೨೪-೨೫ನೇ ಸಾಲಿನ ವಿವಿಧ ವಸತಿ ಶಾಲೆಗಳ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗುವಂತೆ ಮಾಡಿದ್ದಾರೆ. ಮುರಾರ್ಜಿ ವಸತಿ ಶಾಲೆಗೆ ಇಬ್ಬರು ವಿದ್ಯಾರ್ಥಿಗಳು ಹಾಗೂ ಆದರ್ಶ ವಿದ್ಯಾಲಯಕ್ಕೆ ೧೯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ೨೧ ವಿದ್ಯಾರ್ಥಿಗಳು ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾಗಿದ್ದಾರೆ.ಅಂಕಿತಾ ನಾಯ್ಕೋಡಿ ಹಾಗೂ ಸೃಷ್ಟಿ ಪಾಟೀಲ ಆದರ್ಶ ಶಾಲೆಗೆ ಗೌತಮಿ ಬಬಲೇಶ್ವರ, ಸನ್ನಿಧಿ ಶಿರಮಗೋಂಡ, ಪ್ರದೀಪ ಹಂಡಿ, ಶ್ರವೀಲ ಬಡಿಗೇರ, ಅಬ್ದುಲಸಲಾಂ ವಾಲಿಕಾರ, ಚೈತ್ರಾ ಬಬಲೇಶ್ವರ, ಸನ್ನಿಧಿ ಸೋಲಾಪೂರ, ಸಮೀರ ಚವ್ಹಾಣ, ಭಾಗ್ಯಶ್ರೀ ಬಿರಾದಾರ, ಕಲ್ಪನಾ ರಾಠೋಡ, ವಿರಾಟ ಲಮಾಣಿ, ಆರ್ಯನ ರಾಠೋಡ, ಪ್ರೀತಂ ಪುಂಡಲಿಕ ರಾಠೋಡ,…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ ನಡೆಸಿದರು.ಮಂಗಳವಾರ ನಗರದ ರೈಲ್ವೇ ಸ್ಟೇಷನ್ ರಸ್ತೆಯ ಮಾರ್ಗದಲ್ಲಿರುವ ಶಿವಾಜಿ ವೃತದಿಂದ ಬೈಕ್ ರ್ಯಾಲಿ ಪ್ರಾರಂಭಿಸಿ, ಮಹಾವೀರ ವೃತ್, ಡಾ. ಬಿ ಆರ್ ಅಂಬೇಡ್ಕರ್ ವೃತ್, ಬಸವೇಶ್ವರ ವೃತ್ ಮೂಲಕ ವಿಜಯಪುರ ರಸ್ತೆಯ ಮಾರ್ಗದಲ್ಲಿರುವ ಸಂತ ಸೇವಾಲಾಲ ವೃತ್ ದವರೆಗೆ ಹಾಗೂ ನಗರದ ಪ್ರಮುಖ ರಸ್ತೆಯಲ್ಲಿ ಬೈಕ್ ರ್ಯಾಲಿ ನಡೆಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿದ ಅವರು, ರಾಜ್ಯದಾದ್ಯಂತ ಬಿಜೆಪಿ ಪಕ್ಷ ಯುವ ಮೂರ್ಚಾ ವತಿಯಿಂದ ತಿರಂಗಾ ಯಾತ್ರೆ ನಡೆಯುತ್ತಿದ್ದು, ಅದರಂತೆ ಇಂಡಿ ತಾಲ್ಲೂಕಿನ ಬಿಜೆಪಿ ಮಂಡಳವತಿಯಿಂದ ಇಂದು ನೂರಾರು ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಮೊಳಗಿಸಿ ಬೈಕ್ ರ್ಯಾಲಿ ನಡೆಸಲಾಯಿತು.ದೇಶದ ಸ್ವಾತಂತ್ರ್ಯಕ್ಕಾಗಿ ವೀರ ಸಾವರಕರ ಸೇರಿದಂತೆ ಅನೇಕ ಮಹನೀಯರು ತಮ್ಮ ಜೀವನವನ್ನೇ…

Read More

ವಿಜಯಪುರ ಜಿಪಂ ಸಿಇಓ ರಿಷಿ ಆನಂದ ಪ್ರಕಟಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅಗಸ್ಟ್ ೧೫ ರಂದು ಜಿಲ್ಲೆಯ ಅಮೃತ ಸರೋವರದಲ್ಲಿ ತಿರಂಗಾ ರಾರಾಜಿಸಲಿದ್ದು, ಜನವರಿ ೨೬ ರಂದು ಗಣರಾಜ್ಯೋತ್ಸವ ದಿನಾಚರಣೆ ಹಾಗೂ ಸ್ವಾತಂತ್ರ‍್ಯೋತ್ಸವ ದಿನಾಚರಣೆ, ಜೂನ್ ೫ರಂದು ಬರುವ ವಿಶ್ವ ಪರಿಸರ ದಿನ, ಜೂನ್ ೨೧ರ ಅಂತರಾಷ್ಟ್ರೀಯ ಯೋಗ ದಿನಾಚರಣೆಗಳಂದು ಅಮೃತ ಸರೋವರದ ದಡದಲ್ಲಿ ಅರ್ಥಪೂರ್ಣವಾಗಿ ಜಲ ಸಂರಕ್ಷಣಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಗಣರಾಜ್ಯೋತ್ಸವ ದಿನ ಹಾಗೂ ಸ್ವಾತಂತ್ರ‍್ಯೋತ್ಸವ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸಲಾಗುತ್ತಿದೆ. ಅದರಂತೆ ಈ ವರ್ಷ ಸಹ ಜಿಲ್ಲೆಯ ಎಲ್ಲಾ ಅಮೃತ ಸರೋವರಗಳಲ್ಲಿ ಸಡಗರದಿಂದ ಸ್ವಾತಂತ್ರ‍್ಯ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ತಿಳಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೀಡಿರುವ ಅವರು, ಈ ಬಾರಿ ಒಂದು ಸರೋವರ-ಒಂದು ಸಂಕಲ್ಪ-ಜಲ ಸಂರಕ್ಷಣೆಗೆ ಎಂಬ ಧ್ಯೇಯ ವ್ಯಾಕ್ಯದಡಿ ಸ್ವಾತಂತ್ರ‍್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಇದರ ಅಂಗವಾಗಿ ವಿಶೇಷವಾಗಿ ಈ ವರ್ಷ…

Read More

ಪಿಯುಸಿ ಮೊದಲ ವರ್ಷದ ವಿಜ್ಞಾನ ವಿಷಯ ಪ್ರವೇಶ ಆರಂಭ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಖಾಲಿ ಉಳಿದಿರುವ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ನೇರ ಪ್ರವೇಶಕ್ಕಾಗಿ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಆಗಸ್ಟ್ ೨೦ ಕೊನೆಯ ದಿನವಾಗಿದೆ.ಜಿಲ್ಲೆಯ ಆಸಕ್ತ ವಿದ್ಯಾರ್ಥಿಗಳು ವಿದ್ಯಾಲಯಕ್ಕೆ ಆಗಮಿಸಿ,೧೦ನೇ ತರಗತಿಯ ಅಂಕಪಟ್ಟಿ,ಆಧಾರ್ ಕಾರ್ಡ್ ಮತ್ತು ಪೋಟೋ ಸಹಿತ ಬೆಳಿಗ್ಗೆ ೧೦ ರಿಂದ ಸಂಜೆ ೦೫ರವರೆಗೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಅಪ್ರಾಪ್ತನಿಗೆ ದ್ವಿಚಕ್ರ ವಾಹನ ಓಡಿಸಲು ಕೊಟ್ಟಿದ್ದಕ್ಕೆ ಅಫಜಲಪುರ ಠಾಣೆ ಪೊಲೀಸ್‌ರು ಪ್ರಕರಣ ದಾಖಲು ಮಾಡಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ಈ ಪ್ರಕರಣದ ತೀರ್ಪು ನೀಡಿರುವ ನ್ಯಾಯಾಧೀಶರು ವಾಹನದ ಮಾಲೀಕನಿಗೆ ೨೬ ಸಾವಿರ ದಂಡ ವಿಧಿಸಿದ ಘಟನೆ ಅಫಜಲಪುರದಲ್ಲಿ ನಡೆದಿದೆ.ವಾಹನ ಮಾಲೀಕರ ಗುರುಲಿಂಗಪ್ಪ ಮಲ್ಲಪ್ಪ ಜಂಬಗಿ(೪೫) ಎನ್ನುವವರು ೧೮ ವರ್ಷದೊಳಗಿನ ಅಪ್ರಾಪ್ತನಿಗೆ ದ್ವಿಚಕ್ರ ವಾಹನ ಓಡಿಸಲು ನೀಡಿದ್ದರು. ಈ ಕುರಿತು ಪ್ರಕರಣ ದಾಖಲಾಗಿತ್ತು.ಅಫಜಲಪುರ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ವಾಹನ ಮಾಲೀಕನಿಗೆ ೨೬ ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

Read More

ಗುತ್ತೇದಾರ ನೇತೃತ್ವದಲ್ಲಿ ನೂರಾರು ಜನ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಮಾಲೀಕಯ್ಯ ಗುತ್ತೇದಾರ ನೇತೃತ್ವದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಜಮೀಲ್ ಗೌಂಡಿ ಹಾಗೂ ನೂರಾರು ಕಾರ್ಯಕರ್ತರು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪೂರದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು.ಪಕ್ಷ ಸೇರ್ಪಡೆಯ ಬಳಿಕ ಜಮೀಲ್ ಗೌಂಡಿ ಮಾತನಾಡಿ ಜೆಡಿಎಸ್ ಪಕ್ಷ ಜಾತ್ಯಾತೀತ ತತ್ವದ ಮೇಲೆ ನಂಬಿಕೆ ಇಟ್ಟ ಪಕ್ಷವೆಂದು ಭಾವಿಸಿ ನಾವು ಸಾಕಷ್ಟು ಪಕ್ಷಕ್ಕಾಗಿ ದುಡಿದಿದ್ದೇವೆ. ಪಕ್ಷವನ್ನು ತಾಲೂಕಿನಲ್ಲಿ ಬಲಪಡಿಸಲು ಶ್ರಮಿಸಿದ್ದೇವೆ. ಆದರೆ ಪಕ್ಷದ ವರೀಷ್ಠರು ಇಂದು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸಿದ್ದರಿಂದ ಬೇಸರಗೊಂಡು ಜಾತ್ಯಾತೀತ ತತ್ವದ ಮೇಲೆ ನಿಂತಿರುವ ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ನೇತೃತ್ವದಲ್ಲಿ ನೂರಾರು ಬೆಂಬಲಿಗರೊಂದಿಗೆ ಸೇರ್ಪಡೆಗೊಂಡಿದ್ದೇವೆ. ಬರುವ ದಿನಗಳಲ್ಲಿ ತಾಲೂಕಿನಾದ್ಯಂತ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ದುಡಿಯಲಿದ್ದೇವೆ ಎಂದರು.ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಮಾತನಾಡಿ ಕಾಂಗ್ರೆಸ್ ಪಕ್ಷ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆ ವಿಭಾಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ ಇತ್ತೀಚೆಗೆ ನಡೆಯಿತು.ಈ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ ಜೊತೆಗೆ ಎಲುಬು ಮತ್ತು ಕೀಲು ಚಿಕಿತ್ಸೆ, ನೇತ್ರ ತಪಾಸಣೆ, ಚಿಕ್ಕ ಮಕ್ಕಳ ಆರೋಗ್ಯ ತಪಾಸಣೆ, ಚರ್ಮರೋಗ ಚಿಕಿತ್ಸೆ ಹಾಗೂ ಸ್ತ್ರೀರೋಗ ಮತ್ತು ಪ್ರಸುತಿ ಚಿಕಿತ್ಸೆ ವಿಭಾಗದ ನುರಿತ ತಜ್ಞ ವ್ಯದ್ಯರು ಆರೋಗ್ಯ ತಪಾಸಣೆ ನಡೆಸಿದರು. ಈ ಶಿಬಿರದಲ್ಲಿ ಸುಮಾರು 130 ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.ಈ ಶಿಬಿರದಲ್ಲಿ 40 ಜನ ಪೊಲೀಸ ಸಿಬ್ಬಂದಿ ಸ್ವಯಂ ಪ್ರೇರಿತವಾಗಿ ರಕ್ತದ ಗುಂಪು ತಪಾಸಣೆ ಮಾಡಿಸಿಕೊಂಡು ರಕ್ತದಾನ ಮಾಡಿದರು.ಈ ಸಂದರ್ಭದಲ್ಲಿ ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ, ಡಿಆರ್ ವಿಭಾಗದ ಡಿವೈಎಸ್ಪಿ ಎಂ.…

Read More