Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬೋರಗಿ ಗ್ರಾಮಕ್ಕೆ ಫ್ರೌಡಶಾಲೆ ಮಂಜೂರು ಮಾಡುವ ಮೂಲಕ ಬೋರಗಿ ಗ್ರಾಮದ ಜನರ ಬಹುದಿನಗಳ ಬಹುದೊಡ್ಡ ಬೇಡಿಕೆ ಈಡೇರಿಸುವ ಮೂಲಕ ಬೋರಗಿ ಗ್ರಾಮಕ್ಕೆ ಶಾಸಕ ಅಶೋಕ ಮನಗೂಳಿ ಅವರ ಕಾರ್ಯ ಸ್ತುತ್ಯಾರ್ಹವಾಗಿದೆ ಎಂದು ಬರಹಗಾರ ಸಾಹಿತಿ ಮೌಲಾಲಿ ಆಲಗೂರ ಹೇಳಿದರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೋರಗಿ ಮತ್ತು ಪುರದಾಳ ಗ್ರಾಮಗಳಲ್ಲಿ ಫ್ರೌಡಶಾಲೆ ವಿದ್ಯಾರ್ಥಿಗಳ ಸಂಖ್ಯೆ ಅಧಿಕವಾಗಿದೆ. ಗ್ರಾಮದಲ್ಲಿ ಫ್ರೌಡಶಾಲೆ ಇಲ್ಲದೇ ವಿಧ್ಯಾರ್ಥಿಗಳು ಸಿಂದಗಿ ಪಟ್ಟಣಕ್ಕೆ ಹೋಗಿ ಬರುವುದರಲ್ಲಿ ತಮ್ಮ ಸಮಯ ಬಸ್‌ನಲ್ಲಿಯೇ ವ್ಯರ್ಥವಾಗುತ್ತಿತ್ತು. ಇದರಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬಹಳ ತೊಂದರೆ ಉಂಟಾಗಿ ಅಭ್ಯಾಸ ಕುಂಠಿತಗೊಳ್ಳುತ್ತಿತ್ತು. ಆದ್ದರಿಂದ ಬೋರಗಿ ಹಾಗೂ ಪುರದಾಳ ಗ್ರಾಮದ ಯುವ ಸಮೂಹ ಮತ್ತು ವಿಧ್ಯಾರ್ಥಿಗಳು ಶಾಸಕರಿಗೆ ಬೋರಗಿ ಗ್ರಾಮದಲ್ಲಿ ಒಂದು ಸುಸಜ್ಜಿತ ಸರ್ಕಾರಿ ಫ್ರೌಡಶಾಲೆ ನಿರ್ಮಿಸುವಂತೆ ಮನವಿ ಸಲ್ಲಿಸಿದರು.ಇದಕ್ಕೆ ಪ್ರತಿ ಸ್ಪಂದಿಸಿದ ಶಾಸಕರು ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ರೂ.೨ಕೋಟಿ ೧೦ಲಕ್ಷ ಅನುದಾನ ನೀಡಿ ಫ್ರೌಡಶಾಲೆ ನಿರ್ಮಾಣದ ಜೊತೆಗೆ ನೂತನ ಇಂಗ್ಲಿಷ್ ಮಾಧ್ಯಮ ಶಾಲೆ ಸಹ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ವಿಶೇಷ ಸರ್ವಸಾಧಾರಣ ಸಭೆಯನ್ನು ಜು.೧೦ರಂದು ಬೆಳಿಗ್ಗೆ ೧೦:೩೦ಗಂಟೆಗೆ ಮಿನಿವಿಧಾನ ಸೌಧದ ಆವರಣದಲ್ಲಿರುವ ನೌಕರ ಸಂಘ ಭವನದಲ್ಲಿ ಸಭೆ ಕರೆಯಲಾಗಿದೆ. ಕಾರಣ ಸಿಂದಗಿ ತಾಲೂಕಿನ ಸಮಸ್ತ ಸರಕಾರಿ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರು ಸರ್ವ ಸಾಧಾರಣ ಸಭೆಯಲ್ಲಿ ಭಾಗವಹಿಸಬೇಕು ಎಂದು ಅಧ್ಯಕ್ಷ ವ್ಹಿ.ಬಿ.ಕುರಡೆ ಪ್ರಕಟಣೆಯ ಮೂಲಕ ತಿಳಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಕೇಂದ್ರ ಸರಕಾರವು ೨೫-೩-೨೦೨೫ರಂದು ಲೋಕಸಭೆಯಲ್ಲಿ ನಿರ್ಣಯಿಸಿದಂತೆ ಪಿಂಚಣಿದಾರ ಪಿಂಚಣಿಯನ್ನು ಪರಿಷ್ಕರಿಸಲು ಸಾಧ್ಯವಿಲ್ಲ ಎಂದು ನಿರ್ಣಯಿಸಿದ ಪ್ರಯುಕ್ತ, ೦೧/೦೪/೨೦೨೬ರ ಮೊದಲು ನಿವೃತ್ತರಾದ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರಿಗೆ ವೇತನ/ತುಟ್ಟಿ ಬತ್ತೆಯ (ಡಿಎ) ಬಗ್ಗೆ ಪರಿಷ್ಕಸಲು ಸಾಧ್ಯವಿಲ್ಲ ಎಂದು ಹೇಳಿದರ ವಿರುದ್ಧ ಪ್ರತಿಭಟಿಸಲು ತಹಶೀಲ್ದಾರ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಬೇಕಾಗಿದೆ. ಹಾಗೂ ಇತ್ತಿಚೇಗೆ ನಿವೃತ್ತಿ ಹೊಂದಿದ ಪಿಂಚಣಿದಾರರು ಸಂಘದ ಸದ್ಯಸತ್ವ ನೋಂದಣಿ ಮಾಡಿಸದೇ ಇದ್ದವರು ತಮ್ಮ ಪೆನ್‌ಷನ್ ಮಂಜೂರಿ ಪತ್ರ (ಪಿಪಿಒ) ಆದೇಶದೊಂದಿಗೆ ಆಗಮಿಸಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಕ್ಕಳ ತಮ್ಮ ಆಸಕ್ತಿದಾಯಕವಾದ ನೃತ್ಯ, ಸಂಗೀತ, ಆಶು ಭಾಷಣ, ಏಕಪಾತ್ರಾಭಿನಯದಲ್ಲಿ ಮಕ್ಕಳು ಭಾಗವಹಿಸುವ ಸೂಕ್ತ ವೇದಿಕೆ ಇದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ವಿಠ್ಠಲ ಕೊಳೂರ ಹೇಳಿದರು.ಸಿಂದಗಿ ಪಟ್ಟಣದ ಹೊರವಲಯದ ಭೀಮಾ ಯುನಿವರ್ಸಲ್ ಸೆಂಟ್ರಲ್ ಶಾಲೆಯಲ್ಲಿ ಹಮ್ಮಿಕೊಂಡ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಗುವಿನ ಪ್ರತಿಭೆಯನ್ನು ಹೊರಹಾಕಲು ಶಾಲೆಯಲ್ಲಿ ಮಕ್ಕಳಿಗೆ ಭೌದ್ಧಿಕ, ಮಾನಸಿಕ, ತಾಳ್ಮೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಲು ನಾವು ಪ್ರತಿ ವರ್ಷ ಪ್ರತಿಭಾ ಕಾರಂಜಿಯನ್ನು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಬೇಕು ಎಂದರು.ಈ ವೇಳೆ ಪ್ರಾಚಾರ್ಯೆ ಶಾಹಿನ್ ಶೇಖ ಮಾತನಾಡಿ, ಇಂತಹ ವೇದಿಕೆಗಳಿಂದ ಮಕ್ಕಳಲ್ಲಿ ಸೃಜನಶೀಲತೆಯ ಗುಣ ಬೆಳೆಯುತ್ತದೆೆ ಎಂದರು. ಕಾರ್ಯಕ್ರಮದಲ್ಲಿ ನಿರ್ದೇಶಕ ಭೀಮಾಶಂಕರ ತಾರಾಪೂರ, ಭೀಮಾಶಂಕರ ಮಾವೂರ, ಶಾಂತು ಕುಂಬಾರ, ಚನ್ನು ಪಡಶೆಟ್ಟಿ ಸೇರಿದಂತೆ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ, ತಾಲೂಕ ಪಂಚಾಯತ ಸಹಯೋಗದಲ್ಲಿ ನಡೆದ ವಿಶೇಷ ಚೇತನರಿಗೆ ಶೇ. 5ರಡಿಯಲ್ಲಿ ಯಂತ್ರ ಚಾಲಿತ ತ್ರಿಚಕ್ರ ವಾಹನ ಹಾಗೂ ಹೊಲಿಗೆ, ಬಡಗಿತನ, ಧೋಬಿ ವೃತ್ತಿಯ ಉಪಕರಣಗಳನ್ನು ವಿತರಣೆ ಸಮಾರಂಭ ಜರುಗಬೇಕಾದ ಕಾರ್ಯಕ್ರಮ ಸುಮಾರು 3 ಗಂಟೆಗಳ ಕಾಲ ವಿಳಂಬವಾದ ಹಿನ್ನಲೆಯಲ್ಲಿ ಶಾಸಕರಿಗೆ, ತಾ.ಪಂ.ಅಧಿಕಾರಿಗಳ ವಿರುದ್ಧ ವಿಶೇಷ ಚೇತನರು, ಫಲಾನುಭವಿಗಳು, ಸಾರ್ವಜನಿಕರು ಬೇಸರ ವ್ಯಕ್ತ ಪಡಿಸಿದ ಘಟನೆ ನಡೆಯಿತು.ನಗರದ ತಾಲೂಕ ಪಂಚಾಯತ ಕಾರ್ಯಾಲಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಚೇತನರು, ವಿವಿಧ ಫಲಾನುಭವಿಗಳು ಬೆ. 9 ಗಂಟೆಗೆ ಆಗಮಿಸಿದರು. ಆದರೆ ಕಾರ್ಯಕ್ರಮ 3 ಗಂಟೆಗಳ ಕಾಲ ತಡವಾಗಿರುವ ಕಾರಣ ಚಿಕ್ಕ ಮಕ್ಕಳನ್ನು ತಂದಿರುವ ಮಹಿಳಾ ಫಲಾನುಭವಿಗಳು ಹಾಗೂ ವಿಶೇಷ ಚೇತನರ ಜೊತೆಗೆ ಆಗಮಿಸಿದ ಸಂಬಂಧಿಗಳು, ಸಾರ್ವಜನಿಕರು ಬಂದಿದ್ದು ಎಲ್ಲರೂ ತಾಲೂಕ ಪಂಚಾಯತ ಅಧಿಕಾರಿ ಮತ್ತು ಶಾಸಕರ ವಿರುದ್ಧ ಬೇಸರ ವ್ಯಕ್ತ ಪಡಿಸಿದರು.3 ಗಂಟೆಗಳ ಕಾಲ ತಡವಾಗಿ ಬಂದ ಶಾಸಕ ಜಗದೀಶ ಗುಡಗುಂಟಿ ಕಾರ್ಯಕ್ರಮ ಉದ್ದೇಶಿಸಿ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದಲ್ಲಿ ಮೊಹರಂ ಹಬ್ಬದ ನಿಮಿತ್ಯ ಪ್ರಸಿದ್ಧ ಆಟವಿ ಖತಾಲ ಹಬ್ಬವನ್ನು ಭಕ್ತರು ಶಾಂತಿ ಸೌಹಾರ್ಧತೆಯಿಂದ ಆಚರಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಹೇಳಿದರು.ಅವರು ಪಟ್ಟಣದ ಹುಸೇನ ಬಾದಷಹಾ ದರ್ಗಾದಲ್ಲಿ ಆಟವಿ ಖತಲ ನಿಮಿತ್ಯ ನಡೆದ ಬೃಹತ್ ಸಭೆಯಲ್ಲಿ ಮಾತನಾಡಿದರು.ತಾಲೂಕಿನಲ್ಲಿ ಪ್ರತಿಯೊಂದು ಹಬ್ಬ ಹರಿದಿನಗಳಲ್ಲಿ ಜನತೆ ಶಾಂತಿ ಹಾಗೂ ಸೌಹಾರ್ಧತೆ ಕಾಪಾಡಿಕೊಂಡು ಬಂದಿದ್ದಾರೆ. ಮೊಹರಂ ಹಬ್ಬವೂ ಕೂಡ ತ್ಯಾಗದ ಪ್ರತೀಕವಾಗಿರುವದರಿಂದ ಸರ್ವ ದರ್ಮಿಯರು ಭಾವೈಕ್ಯತೆಯಿಂದ ಆಚರಿಸುತ್ತಿದ್ದಾರೆ ಎಂದರು.ಜಾವೇದ ಮೋಮಿನ, ಪ್ರಶಾಂತ ಕಾಳೆ, ಷಹನಷಹಾ ಜಹಾಗೀರದಾರ, ಜಟ್ಟೆಪ್ಪ ರವಳಿ, ಪ್ರಕಾಶ ಐರೋಡಗಿ, ತುಕಾರಾಮ ವಾಲಿಕಾರ, ದೇವಸ್ಥಾನ ಸಮಿತಿಯ ಮಕಾನದಾರ ಅರ್ಚಕ ಬಂದುಗಳು ಕುಟುಂಬದವರು ಪಾಲ್ಗೊಂಡಿದ್ದರು.ಇದಕ್ಕೂ ಮುಂಚೆ ಬೆಳಗ್ಗೆ ೪ ಗಂಟೆಗೆ ಭಕ್ತರು ನೈವೆಧ್ಯ ಕ್ಕಾಗಿ ದೇವಸ್ಥಾನಕ್ಕೆ ಬರಲು ಪ್ರಾರಂಭಿಸಿದರು. ಜಿಲ್ಲೆಯ ಬೇರೆ ಜಿಲ್ಲೆ ಸುಮಾರು ೫೦ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ದರ್ಶನ ಪಡೆದರು, ಬಿಜೆಪಿ ಕಾಸುಗೌಡ ಬಿರಾದಾರ, ದಾದಾಗೌಡರ ಮನೆತನದ ಪ್ರಭುಗೌಡ ಪಾಟೀಲ ಸೇರಿದಂತೆ ಅನೇಕ ಗಣ್ಯರು…

Read More

ಮಹಿಳಾ ವಿವಿಯ ನೂತನ ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾಸ್ಕರಾಚಾರ್ಯರ ವಿಧಾನದ ಮೂಲಕ ಗಣಿತದ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದಾಗಿದೆ ಎಂದು ಮಹಿಳಾ ವಿವಿಯ ನೂತನ ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಣಿತ ಅಧ್ಯಯನ ವಿಭಾಗ ಹಾಗೂ ಭಾಸ್ಕರಾಚಾರ್ಯ ಅಧ್ಯಯನ ಪೀಠದ ಅಡಿಯಲ್ಲಿ ವಿಶ್ವವಿದ್ಯಾನಿಲಯದ ಪ್ರಸಾರಾಂಗದ ವತಿಯಿಂದ ಶುಕ್ರವಾರ ಆಯೋಜಿಸಿದ್ದ “ಗ್ರಂಥಗಳ- ಲೋಕಾರ್ಪಣೆ” ಸಮಾರಂಭದಲ್ಲಿ ಅವರು ಮಾತನಾಡಿದರು.ಸಾಮಾನ್ಯ ಪ್ರಕಟಿತ ಪಠ್ಯಪುಸ್ತಕಗಳ ಕಠಿಣ ಶೈಲಿಯಿಂದ ಹೊರಬಂದು, ವಿದ್ಯಾರ್ಥಿಗಳನ್ನು ಅರ್ಥಗರ್ಭಿತ, ಜ್ಯಾಮಿತೀಯ ಹಾಗೂ ಕಾವ್ಯಾತ್ಮಕ ರೀತಿಯಲ್ಲಿ ಚಿಂತಿಸಲು ಪ್ರೋತ್ಸಾಹಿಸುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಕಲನಶಾಸ್ತ್ರ, ಬೀಜಗಣಿತ ಮತ್ತು ಸಂಖ್ಯಾ ಸಿದ್ಧಾಂತದ ಪರಿಕಲ್ಪನೆಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದರು.ಇದೇ ಸಂದರ್ಭದಲ್ಲಿ ಹಿಂದೈ ಗಣಿತ ಐತಿಹಾಸಿಕ-ಒಂದು ಮೂಲ ಗ್ರಂಥ ಭಾಗ- II , ಭಾರತದಲ್ಲಿ ಶ್ರೇಣಿ ಗಣಿತ, ಭಾರತೀಯ ಗಣಿತ ಶಾಸ್ತçದ ಚಾರಿತ್ರೆ ಭಾಗ-೧, ಬ್ರಹ್ಮಗುಪ್ತಮ್-೧ ಗ್ರಂಥಗಳನ್ನು ಬಿಡುಗಡೆಗೊಳಿಸಲಾಯಿತು.ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಸಚಿವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೊಹರಂ ಹಬ್ಬದ ಅಂಗವಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಮತ್ತು ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಾದ್ಯಂತ ದಿನಾಂಕ:೦೬-೦೭-೨೦೨೫ರ ಬೆಳಿಗ್ಗೆ ೬ ಗಂಟೆಯಿಂದ ದಿನಾಂಕ:೦೭-೦೭-೨೦೨೫ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನಮಂತ್ರಿ ಆವಾಸ (ನಗರ) ಯೋಜನೆ ೨-.೦ ಅಡಿ ವಸತಿ ಸೌಲಭ್ಯಕ್ಕಾಗಿ https://PMAY-HFA(Urban).gov.inಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆನ್‌ಲೈನ್ ಮೂಲಕ ದಿನಾಂಕ : ೧೫-೦೭-೨೦೨೫ರೊಳಗಾಗಿ ಅರ್ಜಿ ಸಲ್ಲಿಸಿ ಅರ್ಜಿಯ ಪ್ರತಿಯನ್ನು ಮಹಾನಗರ ಪಾಲಿಕೆ ಕಚೇರಿಗೆ ಸಲ್ಲಿಸಬೇಕು. ಈ ಕುರಿಂತೆ ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಅಧಿಕಾರಿ-ಸಿಬ್ಬಂದಿಗಳನ್ನು ಸಂಪರ್ಕಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸದುಪಯೋಗಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು & ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘದ ಸಂಯುಕ್ತಶ್ರಾಯದಲ್ಲಿ ಮಧ್ಯಸ್ಥಿಕೆ ಅಭಿಯಾನದ ಕುರಿತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಾದ್ಯಂತ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಮಧ್ಯಸ್ಥಿಕೆಯ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಇತ್ಯರ್ಥಕ್ಕೆ ಜುಲೈ೦೧ರಿಂದ ಬರುವ ಅಕ್ಟೋಬರ್ ೦೭ರವರೆಗೆ ಮಧ್ಯಸ್ಥಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಕಕ್ಷಿದಾರರು ಸದರಿ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.ಮಧ್ಯಸ್ಥಿಕೆ ಅಭಿಯಾನದ ಕುರಿತಾಗಿ ಹೆಚ್ಚಿನ ಮಾಹಿತಿ ಅವಶ್ಯವಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕಾ ಕಾನೂನು ಸೇವೆಗಳ ಸಮಿತಿ, ಇಂಡಿ, ಸಿಂದಗಿ, ಬಸವನಬಾಗೇವಾಡಿ, ಮುದ್ದೇಬಿಹಾಳ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ೨೦೨೫-೨೬ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತ ಬೀದಿನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿ ನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯಿಂದ ೦೩ ಬೀದಿ ನಾಟಕ ಹಾಗೂ ೦೩ ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ ತಂಡದಲ್ಲಿ ೦೮ ಜನ ಕಲಾವಿದರಿರಬೇಕು. ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ್ ಜಾತಿ, ಪರಿಶಿಷ್ಟ್ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ ೦೩ಜನ ಕಲಾವಿದರಿರಬೇಕು. ಇದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ್ ಜಾತಿ, ಪರಿಶಿಷ್ಟ್ ವರ್ಗಕ್ಕೆ ಸೇರಿದ ಕಲಾವಿದರಿರಬೇಕು.ಕಲಾ ತಂಡಕ್ಕೆ ಆಯ್ಕೆ ಮಾಡಲು, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೃಷಿ ಇಲಾಖೆಯ…

Read More