Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ೨೦೨೫-೨೬ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತ ಬೀದಿನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿ ನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯಿಂದ ೦೩ ಬೀದಿ ನಾಟಕ ಹಾಗೂ ೦೩ ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ ತಂಡದಲ್ಲಿ ೦೮ ಜನ ಕಲಾವಿದರಿರಬೇಕು. ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ್ ಜಾತಿ, ಪರಿಶಿಷ್ಟ್ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ ೦೩ಜನ ಕಲಾವಿದರಿರಬೇಕು. ಇದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ್ ಜಾತಿ, ಪರಿಶಿಷ್ಟ್ ವರ್ಗಕ್ಕೆ ಸೇರಿದ ಕಲಾವಿದರಿರಬೇಕು.ಕಲಾ ತಂಡಕ್ಕೆ ಆಯ್ಕೆ ಮಾಡಲು, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೃಷಿ ಇಲಾಖೆಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜುಲೈ ೧೬ ರಂದು ವಿಜಯಪುರ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಅಂದು ಬೆಳಿಗ್ಗೆ ೧೧ ಗಂಟೆಗೆ ನಡೆಯುವ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕ್ಷಕರು (ಮೊ:೯೩೬೪೦೬೨೫೨೮), ಉಪಾಧೀಕ್ಷಕರು (ಮೊ:೯೩೬೪೦೬೨೫೫೭), ಇನ್ಸ್ಪೆಕ್ಟರ್-೧(ಮೊ:೯೩೬೪೦೬೨೬೪೦), ಇನ್ಸ್ಪೆಕ್ಟರ್-೨ (ಮೊ:೯೩೬೪೦೬೨೬೩೯) ಭಾಗವಹಿಸಿ ಸಾರ್ವಜನಿಕರ ದೂರುಗಳನ್ನು ಆಲಿಸಿ, ಸ್ಥಳದಲ್ಲಿ ಕಂಡುಕೊಳ್ಳಬಹುದಾದ ಪ್ರಕರಣಗಳನ್ನು ಸ್ಥಳೀಯ ಅಧಿಕಾರಿಗಳ ಸಹಕಾರದಿಂದ ಇತ್ಯರ್ಥಪಡಿಸಲು ಪ್ರಯತ್ನಿಸಲಿದ್ದಾರೆ.ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ, ಲಂಚದ ಬೇಡಿಕೆ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಸೇರಿದಂತೆ ದೂರುಗಳಿಗಾಗಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ೦೮೩೫೨-೨೫೫೩೩೩/೨೫೭೭೮೬/೨೯೫೦೭೪ ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಪೊಲೀಸ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೊಹರಂ ಹಬ್ಬ ಇಸ್ಲಾಂ ಉದರದಲ್ಲಿ ಹುಟ್ಟಿದರೂ ಹಿಂದೂಗಳ ಕರಕಮಲದಲ್ಲಿ ಜೋಪಾನವಾಗಿ ಜೀವಂತವಾಗಿದೆ. ಇಂದು ದೇಶದಲ್ಲಿ ಹಿಂದೂ-ಮುಸ್ಲಿಂ ಅನೋನ್ಯವಾಗಿರಬೇಕಾದರೆ ಈ ಪವಿತ್ರ ಮೊಹರಂ ಹಬ್ಬವೇ ಕಾರಣವಾಗಿದೆ. ತ್ಯಾಗ – ಬಲಿದಾನದ ಜೊತೆಗೆ ಪ್ರೀತಿ ಮತ್ತು ಸ್ನೇಹದ ಕುರುಹಾಗಿ ಮೊಹರಂ ಗಟ್ಟಿಯಾಗಿ ನಿಂತಿದೆ ಎಂದು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಎಸ್ ಪಾಟೀಲ (ಪಡಗಾನೂರ) ಅಭಿಪ್ರಾಯಪಟ್ಟರು.ಕನ್ನಡ ಜಾನಪದ ಪರಿಷತ್ ಕೂಡಗಿ ವಲಯ ಘಟಕದ ವತಿಯಿಂದ ಕೊಲ್ಹಾರ ತಾಲೂಕಿನ ಕವಲಗಿ ಗ್ರಾಮದ ಚಾವಡಿಯಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಏರ್ಪಡಿಸಿದ ” ರಿವಾಯತ ಸಂಭ್ರಮ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ಭಾರತದ ಹಬ್ಬ- ಉತ್ಸವಗಳು ನಮ್ಮ ಮೂಲ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿವೆ.ಜನಪದ ಕಲಾವಿದರು ಸಾಂಸ್ಕೃತಿಕ ರಾಯಭಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬೆಳೆಸುವ ನಿಟ್ಟಿನಲ್ಲಿ ಸಮಾಜ ಸಹಕಾರ ನೀಡಬೇಕೆಂದು ಮನವಿ ಮಾಡಿದರು.ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಸದಸ್ಯ ಕಲಾವಿದ ಮೌಲಸಾಹೇಬ ಜಹಾಗಿರದಾರ ಮಾತನಾಡಿ, ಮೊಹರಂ ಉತ್ಸವದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಳೆದ ೬ತಿಂಗಳಲ್ಲಿ ನಮ್ಮ ಜಿಲ್ಲೆ ಸೇರಿ ರಾಜ್ಯವ್ಯಾಪ್ತಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ವೇತನ ಪಾವತಿಯಾಗಿರುವದಿಲ್ಲ. ವೇತನ ಪಾವತಿಗಾಗಿ ವಿನಂತಿಸಿ ಹಲವಾರು ಬಾರಿ ಮೌಖಿಕವಾಗಿ, ಲಿಖಿತವಾಗಿ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾವದೇ ರೀತಿಯ ಉಪಯೋಗವಾಗಿರುವದಿಲ್ಲ. ಆ ನಿಟ್ಟಿನಲ್ಲಿ ಶೀಘ್ರವಾಗಿ ವೇತನಕ್ಕಾಗಿ ಜು.೦೭ರಿಂದ ಕೆಲಸ ನಿರ್ವಹಿಸದೇ ಅಸಹಕಾರ ಚಳುವಳಿ ಆರಂಭಿಸಲು ರಾಜ್ಯ ಸಮಿತಿ ನಿರ್ಧರಿಸಿದೆ ಎಂದು ಸಿಂದಗಿ ಮತ್ತು ಆಲಮೇಲ ನರೇಗಾ ಸಂಘದ ತಾಲೂಕಾಧ್ಯಕ್ಷ ಭೀಮರಾಯ ಚೌಧರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇದೇ ಸಂದರ್ಭದಲ್ಲಿ ಶಿವಶರಣ ವಂದಗನೂರ, ಪುಂಡಲೀಕ ಬಿಸೆ, ಬಸವರಾಜ ಹುಣಸಗಿ, ಸಂದೀಪ ಪಶುಪತಿಮಠ, ಸಾಗರ ಶೆಟ್ಟಿ, ರವಿ ರಾಠೋಡ, ಪೂಜಾ, ಆರಿಫ್ ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮನರೇಗಾ ಸಿಬ್ಬಂದಿಗಳು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ವಿದ್ಯಾಚೇತನ ಪ್ರಕಾಶನದಿಂದ ಕೊಡಮಾಡುವ ರಾಜ್ಯ ಮಟ್ಟದ ಬಾಲ ಸಾಹಿತ್ಯ ಪುರಸ್ಕಾರ ಪ್ರಶಸ್ತಿಗೆ ವಿವಿಧ ಮಕ್ಕಳ ಸಾಹಿತ್ಯ ಕೃತಿಗಳು ಆಯ್ಕೆಯಾಗಿವೆ.ಬೆಂಗಳೂರಿನ ವಸು ವತ್ಸಲಾ ಅವರ ಅಂತರಿಕ್ಷದಲ್ಲಿ ವಿಹಾ ಕಥಾಸಂಕಲನ, ತುಮಕೂರಿನ ನಾಗಭೂಷಣ ಅವರ ಮಿನುಗುವ ಮನುಷ್ಯ ಕಾದಂಬರಿ, ಬೀಳಗಿಯ ಸೋಮಲಿಂಗ ಬೇಡರ ಅವರ ಬಾರೆಚುಕ್ಕಿ ಬೆಳ್ಳಿಚುಕ್ಕಿ ಕವನ ಸಂಕಲನ ಮತ್ತು ೧೮ ವರ್ಷದೊಳಗಿನ ಮಕ್ಕಳು ಬರೆದ ಕೃತಿಗಳಿಗಿರುವ ಚಿಗುರು ಪ್ರಶಸ್ತಿಗೆ ಆಲಮೇಲದ ನವ್ಯ ಕತ್ತಿ ಅವರ ಮಾಯಾ ಗುಹೆ ಕಥಾ ಸಂಕಲನ ಮತ್ತು ಸಿದ್ದಾಪುರದ ಎಚ್.ವಿದ್ಯಾಶ್ರೀ ಅವರ ನಕ್ಷತ್ರ ಪಟಲ ಕವನ ಸಂಕಲನ ಆಯ್ಕೆಯಾಗಿರುತ್ತವೆ.ಜು.೧೩ರಂದು ಸಿಂದಗಿಯ ಸಾರಂಗಮಠದಲ್ಲಿ ಜರಗುವ ಸಮಾರಂಭದಲ್ಲಿ ನಗದು ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ವಿದ್ಯಾಚೇತನ ಪ್ರಕಾಶನದ ಪ್ರಕಾಶಕ, ಮಕ್ಕಳ ಹಿರಿಯ ಸಾಹಿತಿ ಹ.ಮ.ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ನಾಗೂರ ಬಡಾವಣೆಯಲ್ಲಿರುವ ವಿದ್ಯಾನಿಕೇತನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಪ್ರೇರಣಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳ ಸಹಯೋಗದಲ್ಲಿ ಮಕ್ಕಳಲ್ಲಿ ಮತದಾನದ ಜಾಗೃತಿ ಮತ್ತು ಮಹತ್ವವನ್ನು ತಿಳಿಸಲು ಶಾಲೆಯಲ್ಲಿ ಚಿಣ್ಣರಿಗಾಗಿ ಹಮ್ಮಿಕೊಂಡ ಮತದಾನದ ಅಣುಕು ಪ್ರದರ್ಶನದಲ್ಲಿ ಸಂಸ್ಥೆ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಮತ ಚಲಾಯಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಆಗಮಿಸಿ ಸಂಭ್ರಮದಿಂದ ಮತ ಚಲಾಯಿಸಿದರು. ಮಕ್ಕಳೊಂದಿಗೆ ಶಿಕ್ಷಕರು ಒಟ್ಟುಗೂಡಿ ಮತ ಚಲಾಯಿಸಿದ್ದು ವಿಶೇಷವಾಗಿತ್ತು. ಚುನಾವಣೆಯ ಮತಗಟ್ಟೆಯ ಮುಖ್ಯ ಅಧಿಕಾರಿಯಾಗಿ ಸುಪ್ರೀತ ಬಿರಾದಾರ, ಮತಗಟ್ಟೆಯ ಅಧಿಕಾರಿಗಳಾಗಿ ಶಿವನ್ಯ ಬಿರಾದಾರ, ಸನ್ನಿಧಿ ಖೇಡಗಿ, ಸಮರ್ಥ ಕುರುಡೆ ಮತ್ತು ಭದ್ರತಾ ಅಧಿಕಾರಿಗಳಾಗಿ ಸೌರಭ ಪತ್ತಾರ, ರೋಷನ ನಾಯಕ, ಆಹಿಲ್ ಸೌದಾಗರ, ರೋಹಿತ ನಾಯಕ ಭಾಗವಹಿಸಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದರು. ಮಕ್ಕಳ ಮತದಾನ ಸಂಭ್ರಮದಲ್ಲಿ ಮಕ್ಕಳೇ ಕರ್ತವ್ಯ ನಿಭಾಯಿಸಿದ್ದು ಇಲ್ಲಿ ವಿಶೇಷವಾಗಿತ್ತು. ಮತದಾನದ ಬಗ್ಗೆ ವಿಶೇಷ ಜಾಗೃತಿಯನ್ನು ವಿವಿಧ ಹಂತಗಳಲ್ಲಿ ಶಿಕ್ಷಕರು ಮಕ್ಕಳಿಗೆ ತಿಳಿಸಿಕೊಟ್ಟರು.ಈ ವೇಳೆ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ, ಸಂಸ್ಥೆ ನಿರ್ದೇಶಕ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಜಯಪುರ ಜಿಲ್ಲೆ ಅತಿ ವೇಗವಾಗಿ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಸಾರ್ವಜನಿಕರು ಪ್ರತಿನಿತ್ಯ ಕೆಲಸ ಕಾರ್ಯಗಳಿಗೆ ಬೆಂಗಳೂರು ಮಹಾನಗರಕ್ಕೆ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಈಗ ಸದ್ಯ ಗೋಲಗುಂಬಜ್ ಎಕ್ಸ್ಪ್ರೇಸ್ ರೈಲ್ವೆ ಸೇವೆ ವಿಜಯಪುರದಿಂದ ಸಾಯಂಕಾಲ ೦೪:೩೦ಗಂಟೆಗೆ ಹೊರಟು ಬೆಂಗಳೂರು ಮಹಾನಗರಕ್ಕೆ ಮರು ದಿನ ಬೆಳಿಗ್ಗೆ ೮:೩೦ಗಂಟೆಗೆ ತುಲುಪುತ್ತದೆ. ಇದರಿಂದ ಪ್ರಾಯಾಣಿಕರಿಗೆ ಅನಾನುಕೂಲವಾಗುತ್ತಿದೆ. ಇದರಿಂದ ಸಾರ್ವಜನಿಕರು ಖಾಸಗಿ ಹಾಗೂ ಸಾರಿಗೆ ಬಸ್ ಅವಲಂಭಿಸಿದ್ದಾರೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ರಾಷ್ಟ್ರದ ತುಂಬಾ ವಂದೇ ಭಾರತ ಎಂಬ ಆಧುನಿಕ ರೈಲ್ವೆ ಸೇವೆ ಪ್ರಾರಂಭದಡಿ ದೇಶದ ಜನರ ತ್ವರಿತ ಪ್ರಯಾಣದ ಕನಸು ನನಸು ಮಾಡಿರುವುದು ಸಂತಸದ ವಿಷಯ. ಹಾಗಾಗಿ ವಿಜಯಪುರ-ಬೆಂಗಳೂರು-ವಿಜಯಪುರ ಮಾರ್ಗ ಮಧ್ಯ ರಾತ್ರಿ ೭ಗಂಟೆಗೆ ಸೂಪರ ಫಾಸ್ಟ್ ರೈಲು ಸೇವೆ ಆರಂಭಿಸಿದರೆ ಸಮಸ್ತ ವಿಜಯಪುರ ಜಿಲ್ಲೆಯ ಜನತೆಗೆ ಅನುಕೂಲವಾವ ಜೊತೆಗೆ ರೈಲ್ವೆ ಇಲಾಖೆಗೂ ಆದಾಯ ಹೆಚ್ಚುತ್ತದೆ. ಆದ್ದರಿಂದ ಈ ಮಾರ್ಗ ಮದ್ಯದಲ್ಲಿ ವಂದೇ ಭಾರತ ರೈಲು ಸೇವೆ ಆರಂಭಿಸುವ ಪರಿಶೀಲನೆ ಮಾಡಿ…

Read More

ಮೊಹರಂ ಹಬ್ಬದ ನಿಮಿತ್ತ ಈ ವಿಶೇಷ ಲೇಖನ ಲೇಖನ- ಮಲಿಕ್ ಎಲ್.ಜಮಾದಾರಉಪನ್ಯಾಸಕರು, ಲೇಖಕರು ವಿಜಯಪುರ ಉದಯರಶ್ಮಿ ದಿನಪತ್ರಿಕೆ ಭಾರತೀಯ ಸಂಸ್ಕೃತಿಯು ಜಗಮೆಚ್ಚುವಂಥದ್ದು ಅಂತಹ ಪವಿತ್ರ ದೇಶ ನಮ್ಮದು,ವಿವಿಧತೆಯಲ್ಲಿ ಏಕತೆಯ, ಭಾವೈಕ್ಯತೆಯ, ಸಾಂಸ್ಕೃತಿಕ, ಸಾಂಪ್ರದಾಯಿಕ ಹಿನ್ನೆಲೆಯ ನೆಲೆಬೀಡಾಗಿದ್ದು ಅದು ವಿಶೇಷವಾಗಿ ಹಲವು ಧರ್ಮಗಳ ವಿವಿಧ ವಿಶೇಷ ಆಚರಣೆಗಳಾಧಾರಿತವಾದ ಹಬ್ಬ ಹರಿದಿನಗಳು ನಾವು ಕಾಣುತಿದ್ದೇವೆ. ಇಸ್ಲಾಮಿಕ್ ನ ಹೊಸ ವರ್ಷವೆಂದು ಕರೆಯಲ್ಪಡುವ ‘ಮೊಹರಂ’ ಎಂಬ ಪವಿತ್ರ ತಿಂಗಳು ಅದು ಅಮವಾಸ್ಯೆ ದೃಶ್ಯದೊಂದಿಗೆ ಇಸ್ಲಾಮಿಕ್‌ನ ಪ್ರಸ್ತುತದಲ್ಲಿ ಹಿಜರಿ ಸನ್ 1447 ನೇ ಮೊಹರಂ ಇಸ್ಲಾಮಿಕ್ ಕ್ಯಾಲೆಂಡರ್ ಈ ತಿಂಗಳಿನಿಂದ ಪ್ರಾರಂಭ.ಪ್ರಾರಂಭದ ಹತ್ತು ದಿನಗಳ ಕಾಲ ಆಚರಿಸುವ ಈ ಹಬ್ಬವು ಶೋಕವನ್ನು ಒಳಗೊಂಡಿರುವಂಥದ್ದು.- ಮೊಹರಂ ಐತಿಹಾಸಿಕ ಹಿನ್ನೆಲೆ:ಮೊಹರಂ ಎಂಬ ಹಬ್ಬವು ಸುನ್ನಿ ಮತ್ತು ಶಿಯಾ ಮುಸ್ಲಿಂ ಪಂಗಡಗಳು ವಿಭಿನ್ನವಾಗಿ ಆಚರಿಸುತ್ತಾರೆ.ಪ್ರವಾದಿ ಮೊಹಮ್ಮದ (ಸ.ಅ)ಅವರ ಮೊಮ್ಮಗ ಹುಸೇನ್(ಸ.ಅ) ಇಬ್ನ ಅಲಿಯವರ ಕೊಲೆಯ ಅವರ ಸಾವಿನ ರೋಚಕತೆ ಒಳಗೊಂಡಿರುವ ಇತಿಹಾಸ ಇದಾಗಿದೆ.ಮೊಹರಂ ಎಂಬುದು ಒಂದು ಇಸ್ಲಾಮಿಕ್ ಧರ್ಮದ ಪವಿತ್ರ ತಿಂಗಳಲ್ಲಿ…

Read More

ಲೇಖನ- ವಿವೇಕಾನಂದ. ಎಚ್. ಕೆ.ಬೆಂಗಳೂರುಮೊ: 9663750451..(Watsapp) ಉದಯರಶ್ಮಿ ದಿನಪತ್ರಿಕೆ ದೇವನಹಳ್ಳಿ ಭೂ ಸ್ವಾಧೀನ ವಿರುದ್ಧದ ರೈತ ಹೋರಾಟ ಸ್ವಲ್ಪಮಟ್ಟಿಗೆ ಯಶಸ್ವಿಯಾಗುತ್ತಿರುವ ಸಂದರ್ಭದಲ್ಲಿ ನೆನಪಾಗುತ್ತಿರುವ ರೈತರ ಆ ದಿನಗಳು..ತುಂಬಾ ಹಿಂದೆ ಏನು ಅಲ್ಲ, ಕೇವಲ 25/30 ವರ್ಷಗಳ ಹಿಂದೆ ಜಾಗತೀಕರಣದ ಪರಿಣಾಮವಾಗಿ ಮುಕ್ತ ಮಾರುಕಟ್ಟೆಗೆ ಭಾರತ ಸಹಿ ಹಾಕಿದ ನಂತರ ಅಭಿವೃದ್ಧಿ ಎಂಬ ಮಾನದಂಡವೇ ಬದಲಾಯಿತು. ಆಗಿನ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರ ಬಾಬು ನಾಯ್ಡು, ಕರ್ನಾಟಕದ ಮುಖ್ಯಮಂತ್ರಿ ಎಸ್ ಎಂ ಕೃಷ್ಣ, ಸ್ವಲ್ಪಮಟ್ಟಿಗೆ ರಾಜಾಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಅದೇ ಹಾದಿಯಲ್ಲಿ ಆಗ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ಬಂಡವಾಳ ಹೂಡಿಕೆದಾರರಿಗೆ ರತ್ನಗಂಬಳಿ ಹಾಸಿ ಸ್ವಾಗತ ಕೋರಿದರು.ಬಹುತೇಕ ಅವರು ಕೇಳಿದ ಎಲ್ಲಾ ಸೌಕರ್ಯಗಳನ್ನು ಸರ್ಕಾರವೇ ಅವರಿಗೆ ಶರಣಾದಂತೆ ಒದಗಿಸಿದರು. ಮುಖ್ಯವಾಗಿ ಯಥೇಚ್ಛವಾಗಿ ಭೂಮಿಯನ್ನು ಧಾರೆಯೆರೆದು ಕೊಡಲಾಯಿತು. ಜೊತೆಗೆ ವಿಶೇಷ ಕೈಗಾರಿಕಾ ಅಭಿವೃದ್ಧಿ ಪ್ರದೇಶಗಳನ್ನು ಸ್ಥಾಪಿಸಲಾಯಿತು. ಅದಕ್ಕಾಗಿ ಕೃಷಿ, ಅರಣ್ಯ, ಖಾಸಗಿ ಮುಂತಾದ ಅನೇಕ ಉಪಯುಕ್ತ ಜಮೀನುಗಳನ್ನು ಹಿಂದೆ ಮುಂದೆ…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಬದುಕಿನಲ್ಲಿ ಎಷ್ಟೋ ಬಾರಿ ಸೋಲುಗಳು ನಮ್ಮನ್ನು ಇನ್ನಿಲ್ಲದಂತೆ ಎಚ್ಚರಿಸಿ ಸರಿಯಾದ ದಾರಿಯಲ್ಲಿ ನಡೆಯಲು ಅನುವು ಮಾಡಿ ಕೊಡುತ್ತವೆ. ಸೋಲುಗಳಿಂದ ನಿರಾಶೆಗೊಂಡು ಕಂಗೆಡುವುದಕ್ಕಿಂತ ಮತ್ತೆ ಮತ್ತೆ ಪ್ರಯತ್ನಿಸಿ ಯಶಸ್ಸಿನ ಹಾದಿಯಲ್ಲಿ ಸಾಗಿದವರು ಇತಿಹಾಸವನ್ನು ನಿರ್ಮಿಸಿದ್ದಾರೆ.ಮತ್ತೆ ಕೆಲವರು ಇತಿಹಾಸವನ್ನು ನಿರ್ಮಿಸದೆ ಹೋದರೂ ಸೋಲನ್ನು ಛಲದಿಂದ ಮೆಟ್ಟಿ ತಮ್ಮ ಬದುಕಿನಲ್ಲಿ ಹೊಸ ತಿರುವುಗಳನ್ನು ಕಂಡುಕೊಂಡಿದ್ದಾರೆ.ಮಂದ ಬುದ್ಧಿ, ಮಾನಸಿಕವಾಗಿ ಅಷ್ಟೇನೂ ಚುರುಕುತನವನ್ನು ಹೊಂದಿಲ್ಲ ಎಂದು ಎಲ್ಲರಿಂದಲೂ ಕರೆಸಿಕೊಂಡ ಥಾಮಸ್ ಅಲ್ವಾ ಎಡಿಸನ ಅವರನ್ನು ಅವರು ಓದುತ್ತಿದ್ದ ಶಾಲೆಯಿಂದ ಹೊರ ಹಾಕಿದ್ದರು. ಆದರೆ ಆತ ಮುಂದೆ ಜಗತ್ತಿನ ಅತಿ ದೊಡ್ಡ ಸಂಶೋಧಕನಾಗಿ ಜಾಗತಿಕ ಇತಿಹಾಸದಲ್ಲಿ ಗುರುತಿಸಿಕೊಂಡರು.’ಉಳಿವಿಗಾಗಿ ಹೋರಾಟ’ ಎಂಬ ಸಿದ್ಧಾಂತದ ಮೂಲಕ ವಿಶ್ವ ಸಂಕುಲದ ಜೀವ ಸಿದ್ಧಾಂತವನ್ನು ಜಗತ್ತಿಗೆ ತಿಳಿಸಿದ ಚಾರ್ಲ್ಸ್ ಡಾರ್ವಿನ್ ತನ್ನ ತಂದೆಯ ಒತ್ತಾಸೆಯಂತೆ ವೈದ್ಯಕೀಯ ಓದಲು ಸಾಧ್ಯವಾಗಲಿಲ್ಲ. ತನ್ನ ಮಗ ಇಲ್ಲದ ವಿಚಿತ್ರ ಕಲ್ಪನೆಗಳಲ್ಲಿ ಮುಳುಗಿ ಹೋಗುತ್ತಾನೆ ಬೇರೆಯವರ ಕುರಿತು ಆತನಿಗೆ ಯಾವುದೇ…

Read More