Author: editor.udayarashmi@gmail.com

ಬಾಬಾನಗರದ ಬಳಿ ಹೊಸ ಕೆರೆ ನಿರ್ಮಿಸಲು 550 ಕೋಟಿ ರೂ. ಅನುದಾನ ಒದಗಿಸಲು ಡಿಸಿಎಂ ಗೆ ಮನವಿ ಸಲ್ಲಿಸಿದ ಸಚಿವ ಎಂ.ಬಿ.ಪಾಟೀಲ ಸ್ಪಷ್ಟನೆ ಬೆಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಭಾರಿ ಕೈಗಾರಿಕೆ ಸಚಿವ ಎಂಬಿ ಪಾಟೀಲ ಸ್ಪಷ್ಟಪಡಿಸಿದರು.ಗುರುವಾರ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ನಮ್ಮಲ್ಲಿ ಯಾವುದೇ ಅಸಮಾಧಾನ, ಭಿನ್ನಮತ ಇಲ್ಲ ಎಂದು ಸ್ಪಷ್ಪಪಡಿಸಿದರು.ರಣದೀಪ್ ಸುರ್ಜೇವಾಲ ಅವರು ಪಕ್ಷದ ಶಾಸಕರೊಂದಿಗೆ ಚರ್ಚಿಸಿದ್ದು, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ವಿಜಯಪುರದಲ್ಲಿ ನಿಗದಿಪಡಿಸಿರುವ ಮುಂದಿನ ಸಚಿವ ಸಂಪುಟ ಸಭೆ ಸಿದ್ಧತೆ ಕುರಿತು ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮತ್ತು ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ನೀರಾವರಿ ಮತ್ತು ಕುಡಿಯುವ ನೀರು ಪೂರೈಸುವ…

Read More

ಕಾಳಿದಾಸ ಪ್ರೌಢ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿ.ಪಂ. ಸಿಇಓ ರಿಷಿ ಆನಂದ ಶಿಕ್ಷಕರಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಶುಕ್ರವಾರ ನಗರದ ಕಾಳಿದಾಸ ಪ್ರೌಢ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಶಾಲೆಯ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತ ವಿಷಯಗಳ ಕುರಿತು ಬೋಧನೆ ಮಾಡಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರತಿ ವಿಷಯಗಳಲ್ಲಿ ಶಿಕ್ಷಕರ ಬೋಧನಾ ಶೈಲಿ, ಬಿಸಿಯೂಟದ ವ್ಯವಸ್ಥೆ ಕುರಿತು ಮಾಹಿತಿ ಪಡೆದುಕೊಂಡರು.ವಿದ್ಯಾರ್ಥಿಗಳಿಗೆ ಕಿವಿ ಮಾತುಗಳನ್ನು ಹೇಳಿ ಹಾಜರಾತಿ ಪರಿಶೀಲಿಸಿದ ಅವರು, ಶಿಕ್ಷಕ ಸಿಬ್ಬಂದಿ ಸಮಯಪಾಲನೆಗೆ ಒತ್ತು ನೀಡಬೇಕು. ಸಮರ್ಪಕ ಹಾಜರಾತಿ ನಿರ್ವಹಣೆ ಮಾಡಬೇಕು. ವಿದ್ಯಾಥಿಗಳು ಶಾಲೆಯಿಂದ ಹೊರಗುಳಿಯದಂತೆ ನಿಗಾವಹಿಸಬೇಕು. ಮಕ್ಕಳು ಗೈರಾಗದಂತೆ ನೋಡಿಕೊಳ್ಳಲು ಅವರ ಪೋಷಕರಿಗೆ ತಿಳಿ ಹೇಳಬೇಕು. ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಳಕ್ಕೆ ಈಗಿನಿಂದಲೇ ಯೋಜನಾಬದ್ಧ ಕಾರ್ಯಸೂಚಿ ಹಾಕಿಕೊಂಡು ನಿರ್ವಹಿಸಿ, ಈ ಕುರಿತು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಲ್ಲ ವಿಷಯಗಳ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ವತಿಯಿಂದ ಯುಪಿಎಸ್‌ಸಿ ಹಾಗೂ ಕೆಎಎಸ್ ಗೆಜೆಟೆಡ್ ಪ್ರೊಬೇಷನರ್, ಕೆಪಿಎಸ್‌ಸಿ ಗ್ರೂಪ್ -ಸಿ, ಆರ್‌ಆರ್‌ಬಿ ಹಾಗೂ ಎಸ್‌ಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯ ಪೋರ್ಟ್ಲ https://dom.karnataka.gov.inವೆಬ್‌ಸೈಟ್ ಮೂಲಕ ಆಗಸ್ಟ್ ೦೨ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: ೮೨೭೭೭೯೯೯೯೦ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ೨೦೨೫-೨೬ನೇ ಸಾಲಿನ ಜುಲೈ ಆವೃತ್ತಿಯ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ವಿವಿಧ ಕೋರ್ಸಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಬಿ.ಎ, ಬಿ.ಕಾಂ. ಬಿ.ಬಿ.ಎ.,ಬಿಸಿಎ, ಬಿಎಸ್ಸಿ (ಐಟಿ),ಬಿಎಸ್ಸಿ (೧೪ ಕಾಂಬಿನೇಷನ್ಸ್),ಬಿಎಸ್ ಡಬ್ಲ್ಯೂ, ಬಿಎಲ್‌ಐಎಸ್‌ಸಿ, ಎಂಎ, ಎಂಕಾಂ, ಎಂಬಿಎ, ಎಂಎಲ್‌ಐಎಸ್ಸಿ, ಎಂಎಸ್ಸಿ (೧೭ ವಿಷಯಗಳಲ್ಲಿ), ಎಂಸಿಎ,ಎಂಎಸ್ ಡಬ್ಲ್ಯೂ, ಪಿಜಿ ಸರ್ಟಿಫಿಕೇಟ್ ಪ್ರೊಗ್ರಾಮ್ಸ್, ಡಿಪ್ಲೋಮಾ ಪ್ರೊಗ್ರಾಮ್ಸ್ ಮತ್ತು ಸರ್ಟಿಫಿಕೇಟ್ ಪ್ರೊಗ್ರಾಮ್ಸ್ ಕೋರ್ಸ್ ಗಳಿಗೆ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, www.ksoumysuru.ac.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ:೯೪೮೩೬೨೮೨೬೭, ೯೪೮೩೯೨೦೦೬೫, ೭೮೯೨೫೫೦೦೫೩ ಮತ್ತು ೯೧೧೦೨೫೬೭೩೮ ಸಂಪರ್ಕಿಸಬಹುದು ಎಂದು ವಿಜಯಪುರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದಾಳಿಂಬೆ, ಲಿಂಬೆ, ಹಾಗೂ ದ್ರಾಕ್ಷಿ ಬೆಳೆಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದೆ.ಲಿಂಬೆ ಹಾಗೂ ದಾಳಿಂಬೆ ಬೆಳೆಯ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ:೧೫-೦೭-೨೦೨೫ರವರೆಗೆ ವಿಸ್ತರಿಸಲಾಗಿದೆ ಹಾಗೂ ದ್ರಾಕ್ಷಿ ಬೆಳೆ ವಿಮಾ ಯೋಜನೆಯಡಿ ನೋಂದಾಯಿಸಿಕೊಳ್ಳುವ ಅವಧಿಯನ್ನು ದಿನಾಂಕ:೧೬-೦೮-೨೦೨೫ರವರೆಗೆ ವಿಸ್ತರಿಸಲಾಗಿದೆ.ಬೆಳೆಸಾಲ ಪಡೆದ ರೈತರು ಹಾಗೂ ಬೆಳೆ ಸಾಲ ಪಡೆಯದೆ ಇರುವ ರೈತರು ತಮ್ಮ ಆಧಾರ್ ಕಾರ್ಡ್ ಝರಾಕ್ಸ್, ಪಹಣಿ ಪತ್ರಿಕೆ ಹಾಗೂ ಬ್ಯಾಂಕ್ ಪಾಸ್‌ಬುಕ್ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕ್‌ಗಳಲ್ಲಿ ಅಥವಾ ಗ್ರಾಮ ಒನ್ ಕೇಂದ್ರ, ಸಿಎಸ್‌ಸಿ ಸೆಂಟರ್‌ಗಳಲ್ಲಿ ವಿಮಾ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದಾಗಿದೆ. ರೈತರು ದ್ರಾಕ್ಷಿ ಬೆಳೆಗೆ ಪ್ರತಿ ಹೆಕ್ಟೆರ್‌ಗೆ ಪಾವತಿಸಬೇಕಾದ ವಿಮಾ ಕಂತಿನ ಮೊತ್ತ ೧೪,೦೦೦ ರೂ, ದಾಳಿಂಬೆ ಬೆಳೆಗೆ ಪಾವತಿಸಬೇಕಾದ ವಿಮಾ ಕಂತಿನ ಮೊತ್ತ ಪ್ರತಿ ಹೆಕ್ಟೆರಿಗೆ ೬,೩೫೦ ರೂ. ಹಾಗೂ ಲಿಂಬೆ ಬೆಳೆ ವಿಮೆ ನೋಂದಾಯಿಸಿಕೊಳ್ಳಲು ವಿಮಾ ಕಂತಿನ ಮೊತ್ತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರದ ಕೃಷಿ ಮಹಾವಿದ್ಯಾಲಯದಲ್ಲಿ ಸಸ್ಯ ಕ್ರಿಯಾಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ಒಂದು ಹುದ್ದೆಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಜುಲೈ ೧೭ರಂದು ಬೆಳಗ್ಗೆ ೧೧ಗಂಟೆಗೆ ಕೃಷಿ ಮಹಾವಿದ್ಯಾಲಯದ ಸಂದರ್ಶನ ಕೊಠಡಿಯಲ್ಲಿ ಸಂದರ್ಶನ ನಡೆಯಲಿದೆ.ಶೈಕ್ಷಣಿಕ ಅರ್ಹತೆಯುಳ್ಳ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ಸಂದರ್ಭದಲ್ಲಿ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಅಗತ್ಯ ಮೂಲ ದಾಖಲೆಗಳನ್ನು ಹಾಗೂ ಆ ದಾಖಲೆಗಳ ಎರಡು ಝರಾಕ್ಸ್ ಪ್ರತಿಗಳನ್ನು ಭಾವಚಿತ್ರದೊಂದಿಗೆ ಅರ್ಜಿ ನಮೂನೆಗೆ ಲಗತ್ತಿಸಿ, ಸಂದರ್ಶನ ಸಂದರ್ಭ ತರುವಂತೆಯೂ,ಯಾವುದೇ ಸಂದರ್ಭದಲ್ಲಿ ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೯೫೪೧೧ ಮೊ:೯೮೮೦೬೪೦೨೮೭ ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ಕೃಷಿ ಮಹಾವಿದ್ಯಾಲಯದ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಸ್.ಎಸ್.ಎಲ್.ಸಿ ಪರೀಕ್ಷೆ-೩ರ ಪರೀಕ್ಷೆಗಳು ಜುಲೈ ೦೫ ರಿಂದ ಜುಲೈ ೧೧ರವರೆಗೆ ಜಿಲ್ಲೆಯ ಒಟ್ಟು ೪೧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಮುಂಜಾಗ್ರತೆಯಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-೨೦೨೩ರ ಕಲಂ ೧೬೩ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ತರುವುದನ್ನು ಹಾಗೂ ಬಳುಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಸೆಟ್ ಮಾತ್ರ ಬಳಸಬಹುದಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ಮೀಟರ್ ಪ್ರದೇಶವನ್ನು ಪರೀಕ್ಷಾ ದಿನದಂದು ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರಗಳು, ಇಂಟರನೆಟ್, ಸೈಬರ್ ಕೆಫೆಗಳು ಮತ್ತು ಕೋಚಿಂಗ್ ಕೇಂದ್ರಗಳು ಸದರಿ ಪರೀಕ್ಷಾ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಕೃಷ್ಣಾ ನದಿಯ ಉಗಮ ಸ್ಥಾನ ಮಹಾರಾಷ್ಟ್ರ ರಾಜ್ಯದ ಸಾತಾರ ಜಿಲ್ಲೆಯ ಮಹಾಬಳೇಶ್ವರ ಕೃಷ್ಣಾ ನದಿ ಪಂಚ ಗಂಗಾ ಉಗಮ ಸ್ಥಾನದಲ್ಲಿ ದಿ.10 ಗುರುವಾರ ಕಡ್ಲಿಗಾರ ಹುಣ್ಣಿಮೆ [ಗುರು ಪೂರ್ಣಿಮಾ) ದಿವಸದಂದು ಬೆಳಗ್ಗೆ 10-30 ಘಂಟೆಗೆ ಗಂಗಾ ಪೂಜೆ ನೆರವೇರಿಸಲಾಗುವುದು ಎಂದು ಮಾಜಿ ಸಚಿವರಾದ ಎಸ್.ಕೆ. ಬೆಳ್ಳುಬ್ಬಿ ಹಾಗೂ ಬಿಜೆಪಿ ಬಸವನಬಾಗೇವಾಡಿ ಮಂಡಳ ಅಧ್ಯಕ್ಷರಾದ ಸಿದ್ರಾಮ ಕಾಖಂಡಕಿಯವರು ಜಂಟಿ ಪತ್ರಿಕಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ಪಟ್ಟಣದಲ್ಲಿ ಶುಕ್ರವಾರ ರಂದು ವಿಶ್ವಭಾರತಿ ಶಿಕ್ಷಣ ಸಂಸ್ಥೆಯಲ್ಲಿ ನಡೆದಂತ ಭಾರತೀಯ ಜನತಾ ಪಾರ್ಟಿ ಸಭೆಯ ನಂತರ ಮಾತನಾಡಿ, ಗಂಗಾ ಪೂಜೆ ಪೂಜೆಗೆ ಬರಬೇಕೆನ್ನುವ ಅಪೇಕ್ಷಿತರು ದಿ.9 ರಂದು ಬೆಳಗ್ಗೆ 10-30 ಘಂಟೆಗೆ ವಿಜಯಪುರದ ಅಥಣಿ ರಸ್ತೆಯಲ್ಲಿರುವ ಪ್ರವಾಸಿ ಮಂದಿರದ ಹತ್ತಿರ ಬರಬೇಕೆಂದರು. ಮುಖಂಡರಾದ ಬಸವರಾಜ ಗಬಸಾವಳಗಿ 9980206539, ಮುತ್ತು ಕಾಜಗಾರ 9663201774, ಹೇಮಾ ಬಿ ದಳವಾಯಿ 9986844318, ಬಸವರಾಜ ಬಿಜಾಪುರ 9686910917 ಇವರನ್ನು ಸಂಪರ್ಕಿಸಲು ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ವಯಸ್ಸು ದೇಹಕ್ಕೆ ಮಾತ್ರವಾಗುತ್ತದೆ, ಅದು ಮನಸ್ಸಿಗೆ ಅಲ್ಲ. ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕರು ಹಾಗೂ ಸೈನಿಕರು ಈ ದೇಶದ ಸಂಪತ್ತು ಎಂದು ಬಸವನ ಬಾಗೇವಾಡಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಎಸ್. ಅವಟಿ ಹೇಳಿದರು.ತಾಲೂಕಿನ ಹಣಮಾಪೂರದ ಗ್ರಾಮೀಣ ವಿದ್ಯಾವರ್ಧಕ ಸಂಘದ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ವಯೋಸಹಜ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕರ ಬೀಳ್ಕೊಡುಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಸರ್ಕಾರದ ನಿಯಮದಂತೆ 60ವರ್ಷ ಆದ ನಂತರ ಎಲ್ಲರೂ ವೃತ್ತಿಯಿಂದ ನಿವೃತ್ತಿ ಆಗಲೇಬೇಕು. ನಿವೃತ್ತಿ ನಂತರ ಕುಟುಂಬ ಹಾಗೂ ಬಂಧುಗಳೊಂದಿಗೆ ವಿಶ್ರಾಂತಿಯಿಂದ ಬದುಕ ಬೇಕಾಗುತ್ತದೆ. ಹಣಮಾಪೂರ ಗ್ರಾಮದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಮೂರು ದಶಕಗಳ ಕಾಲ ಮಕ್ಕಳಿಗೆ ಒಳ್ಳೆಯ ಕ್ರೀಡಾ ತರಬೇತಿ ನೀಡಿ ಅವರನ್ನು ರಾಜ್ಯ ಮಟ್ಟದಲ್ಲಿ ಗ್ರಾಮದ ಹೆಸರನ್ನು ಹಾಗೂ ಮಕ್ಕಳನ್ನು ಗುರುತಿಸಲು ಕಾರ್ಣಿಕರ್ತ ದೈಹಿಕ ಶಿಕ್ಷಕರಾದ ಎಸ್.ಎಂ. ಬರಗಿ ಹಾಗೂ ಕೆ.ಜಿ. ಹಳ್ಳೂರರವರ ಸೇವೆ ಅಪಾರವಾದದ್ದು ಅದಕ್ಕೆ ಇಲಾಖೆ ಅವರನ್ನು ಅಭಿನಂದಿಸುತ್ತದೆ.…

Read More

ಮಹಿಳಾ ವಿವಿಯಲ್ಲಿ ‘ಪತ್ರಿಕಾ ದಿನಾಚರಣೆ’ & ದಿನಪತ್ರಿಕೆ ಪುಟವಿನ್ಯಾಸ ತಂತ್ರಗಳು’ ಕುರಿತು ಕಾರ್ಯಾಗಾರ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಂತ್ರಜ್ಞಾನ ಯುಗದಲ್ಲಿ ಅವಕಾಶಗಳು ಸಾಕಷ್ಟು ಇದ್ದು, ಸವಾಲುಗಳನ್ನು ಧೈರ್ಯದಿಂದ ಎದುರಿಸಿದಾಗ ಬದುಕಿನಲ್ಲಿ ಯಶಸ್ಸು ಖಚಿತ ಎಂದು ಹಿರಿಯ ಪತ್ರಕರ್ತ ಜಿ.ಎಸ್.ಕಮತರ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರತಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮಲ್ಲಪ್ಪ ರಾಮಪ್ಪ ಮಾನಕರ ದತ್ತಿನಿಧಿ ಉಪನ್ಯಾಸದ ಅಡಿಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ಪತ್ರಿಕಾ ದಿನಾಚರಣೆ ಹಾಗೂ ದಿನಪತ್ರಿಕೆ ಪುಟವಿನ್ಯಾಸ ತಂತ್ರಗಳು’ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಪುಟ ವಿನ್ಯಾಸ ಎನ್ನುವುದು ಎಲ್ಲಾ ಪತ್ರಿಕೆಗಳಿಗೂ ಅನ್ವಯವಾಗುತ್ತದೆ. ಬದುಕು ತಂತ್ರಗಾರಿಕೆಯಿಂದ ಕೂಡಿದಾಗ, ಅದರ ಜೊತೆಗೆ ಕಲಿಯುವುದು ಅನಿವಾರ್ಯವಾಗುತ್ತದೆ. ಕಲಿತ ವಿದ್ಯೆ ಎಂದಿಗೂ ವ್ಯರ್ಥವಾಗುವುದಿಲ್ಲ. ಉತ್ತಮ ಪತ್ರಕರ್ತನಾಗಲು ಭಾಷಾ ನೈಪುಣ್ಯತೆ, ಶಬ್ದಗಳ ಸರಿಯಾದ ಬಳಕೆ, ಬಹುಭಾಷಾ ಜ್ಞಾನ ಅಗತ್ಯ. ಇಂದು ಪತ್ರಿಕೋದ್ಯಮವು ಹಲವಾರು ನಿರೀಕ್ಷೆಗಳನ್ನು ಹೊಂದಿದೆ. ಹೆಚ್ಚು ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಅವಶ್ಯಕತೆ ಇದೆ ಎಂದರು.ಇದೇ…

Read More