Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದಲ್ಲಿರುವ ಬಡಾವಣೆಗಳಲ್ಲಿ ಉದ್ಯಾನವನಕ್ಕೆಂದು ಮೀಸಲಿಟ್ಟ ಜಾಗಗಳಲ್ಲಿ ಇನ್ನೂ ಗಿಡಗಳನ್ನು ಹಚ್ಚಿಲ್ಲ, ಅವುಗಳನ್ನು ಗುರುತಿಸಿ, ಗಿಡಗಳನ್ನು ನೆಡುವ ಕೆಲಸ ನಿರಂತರವಾಗಿ ನಡೆಯಬೇಕು ಎಂದು ಪುರಸಭೆಯ ಸದಸ್ಯೆ ಸಂಗಮ್ಮ ದೇವರಳ್ಳಿ ಕರೆ ನೀಡಿದರು.ಶುಕ್ರವಾರ ಪಟ್ಟಣದ ಮಾರುತಿ ನಗರದಲ್ಲಿರುವ ವರದಾನೇಶ್ವರಿ ಬಡಾವಣೆಯಲ್ಲಿ ಅರಣ್ಯ ಇಲಾಖೆ, ಪುರಸಭೆ, ಹಸಿರು ತೋರಣ ಗೆಳೆಯರ ಬಳಗ, ವರದಾನೇಶ್ವರಿ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಹಸಿರು ತೋರಣ ಗೆಳೆಯರ ಬಳಗ ಕಳೆದ ಹತ್ತು ವರ್ಷಗಳಿಂದ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಗಿಡಗಳನ್ನು ನೆಡಲು ಸತತ ಶ್ರಮಿಸುತ್ತಿದೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಬಳಗದ ಸದಸ್ಯರು ಮಾಡುತ್ತಿರುವ ಕೆಲಸ ಮಾದರಿಯಾಗಿದೆ ಎಂದರು.ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಮಾತನಾಡಿ, ಪಟ್ಟಣದಲ್ಲಿರುವ ಉದ್ಯಾನವನಗಳಲ್ಲಿ ಅರಣ್ಯ ಇಲಾಖೆಯ ಗಿಡಗಳನ್ನು ನೆಡುವ ಕೆಲಸಕ್ಕೆ ಎಲ್ಲ ರೀತಿಯ ನೆರವು ನೀಡುವುದಾಗಿ ಹೇಳಿದರು.ಸಾಮಾಜಿಕ ವಲಯ ಅರಣ್ಯಾಧಿಕಾರಿ ಗಿರೀಶ ಆಲಕುಡೆ ಮಾತನಾಡಿ, ಈ ವರ್ಷ ಸಾಮಾಜಿಕ ಅರಣ್ಯ ವಿಭಾಗದಿಂದ…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲ್ಲೂಕಿನ ಟಕ್ಕಳಕಿ ಎಲ್.ಟಿ. 02 ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಜಯಶ್ರೀ ಕೆ. ಹೂಗಾರ ಅವರಿಗೆ ಅಮ್ಮ ಪೌಂಡೇಶನ ವತಿಯಿಂದ ಕೊಡಮಾಡುವ ಬಸವಚೇತನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ರವಿವಾರ ನಡೆಯುವ ರಾಜ್ಯ ಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಈ ಪ್ರಶಸ್ತಿಯನ್ನು ಪಡೆಯಲ್ಲಿದ್ದಾರೆ. ಹಲವು ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಇವರಿಗೆ ಗಣ್ಯ ವ್ಯಕ್ತಿಗಳ, ಚಿಂತಕರ ಹಾಗೂ ಸಾಹಿತಿಗಳ ಸಮ್ಮುಖದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಇಂಡಿ: ಮಾದಕ ವಸ್ತುಗಳ ಸೇವನೆ ದುಶ್ಚಟ, ನರಕಕ್ಕೆ ದಾರಿ ತೋರಿಸುತ್ತದೆ. ಅದಲ್ಲದೇ ಯುವಕರು ದೇಶ ಆಸ್ತಿ, ಸಂಪತ್ತು ಸದ್ದಿಲ್ಲದೆ ಹಾಳಾಗುತ್ತೀರುವುದು ಅತ್ಯಂತ ಕಳವಳಕಾರಿ ಎಂದು ಬಿ ಎಚ್ ಇ ಓ ವೈ ಎಂ ಪೂಜಾರಿ ಹೇಳಿದರು.ತಾಲೂಕಿನ ಲಚ್ಯಾಣ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿರುವ ಮಾದಕ ದ್ರವ್ಯ ಹಾವಳಿ ನಿಯಂತ್ರಣ ಅರಿವು ಕಾರ್ಯಕ್ರಮ ಸಸಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ರೌಢಾವಸ್ಥೆಯಲ್ಲಿ ಯುವಕರು ದುಶ್ಚಟಗಳಿಗೆ ದಾಸರಾಗಿ ಸದ್ದಿಲ್ಲದೆ ಹಾಳಾಗುತ್ತಿರುವದು ಅತ್ಯಂತ ನೋವಿನ ಸಂಗತಿ. ಇದು ಗ್ರಾಮ, ರಾಜ್ಯ, ದೇಶಕ್ಕೆ ಗಂಡಾಂತರ ಸಮಸ್ಯೆ ಎಂದು ಹೇಳಿದರು.ಶಿಕ್ಷಣದ ಜೊತೆಗೆ ಸಂಸ್ಕಾರ ಕೊಡುವ ಮೂಲಕ ಬದುಕು ರೂಪಿಸುವುದು ಅನಿವಾರ್ಯವಾಗಿದೆ. ಪದವಿ ಪೂರ್ವ ಪಿಯುಸಿ ತನಕ ಮಕ್ಕಳ ಮನಸ್ಸು ಗೊಂದಲದ ಗೂಡಾಗಿರುತ್ತದೆ. ಹಾಗಾಗಿ ಈ ಬಗ್ಗೆ ಕುಟುಂಬ, ಸಮಾಜ ಹಾಗೂ ಶಿಕ್ಷಕರು ಜಾಗೃತಿವಹಿಸಬೇಕೆಂದು ಹೇಳಿದರು.ಎಂಎಫ್ ದರ್ಗಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಾತನಾಡುತ್ತಾ, ಬಾಲ್ಯ ವಿವಾಹಗಳು ತಡೆಗಟ್ಟಲು ಸಮುದಾಯದಲ್ಲಿ ಮೂಢನಂಬಿಕೆ ತಪ್ಪು ಕಲ್ಪನೆ…
ಉಚಿತವಾಗಿರುವ ಅತ್ಯಾಧುನಿಕ ಸೌಕರ್ಯಗಳ ಸದುಪಯೋಗಪಡಿಸಿಕೊಳ್ಳಲು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆಯರು ಹಾಗೂ ಹದಿಹರೆಯದವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ಮುಂದಾಗುವ ಅನಾರೋಗ್ಯವನ್ನು ತಡೆಗಟ್ಟಬಹುದು. ಆರೋಗ್ಯ ಸದೃಢವಾಗಿದ್ದರೆ ಮಾತ್ರ ಭವ್ಯ ರಾಷ್ಟ್ರದ ನಿರ್ಮಾಣದ ಕನಸು ಪೂರ್ಣಗೊಳ್ಳುತ್ತದೆ ಎಂದು ಆರ್ಟ ಆಫ್ ಗಿವಿಂಗ್ ಫೌಂಡೇಶನ್ ರಾಷ್ಟ್ರೀಯ ರಾಯಭಾರಿ ಶಿಫಾ ಜಮಾದಾರ ಹೇಳಿದರು.ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆರ್ಟ ಆಫ್ ಗಿವಿಂಗ್ ಫೌಂಡೇಶನ್ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಅರಿವು ಮತ್ತು ನೆರೆಹೊರೆಯವರ ಉತ್ತಮ ಬಾಂಧವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಇಂದು ಯುವ ಜನತೆ ದುಶ್ಚಟಗಳಿಗೆ ದಾಸರಾಗಿದ್ದಾರೆ. ಮಾದಕ ವಸ್ತುಗಳ ಸೇವನೆ ಹೆಚ್ಚಾಗಿ ಕಂಡು ಬರುತ್ತಿದೆ. ಇದನ್ನು ತಡೆಗಟ್ಟಲು ಯುವಜನತೆಗೆ ಅರಿವು ಮೂಡಿಸಬೇಕಾಗಿದೆ ಎಂದು ಶಿಫಾ ನುಡಿದರು.ಅಧ್ಯಕ್ಷತೆ ವಹಿಸಿದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಮಾತನಾಡಿ, ಇಂದಿನ ವಾತಾವರಣದಲ್ಲಿ ಒತ್ತಡ, ಆತಂಕ ಮತ್ತು ಕಿನ್ನತೆ ಹೆಚ್ಚಾಗಿ ಕಂಡು ಬರುತ್ತಿದೆ. ಅದ್ಯಾಗೂ ಮಾನಸಿಕ ಆರೋಗ್ಯವನ್ನು…
*ಉದಯರಶ್ಮಿ ದಿನಪತ್ರಿಕೆ* ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ಕಾಲೇಜ್ ಆಫ್ ಕಾಮರ್ಸ್(ಸ್ವಾಯತ್ತ)ನ ಮ್ಯಾನೆಜಮೆಂಟ್ ಆಫ್ ರಿಸರ್ಚ್ ಸೆಂಟರ್ ನಲ್ಲಿ ಗುರುವಾರ ಪೂಲ್ ಕ್ಯಾಂಪಸ್ ಡ್ರೈವ್- 2025 ನಡೆಯಿತು. ಈ ಪೂಲ್ ಕ್ಯಾಂಪಸ್ ಡ್ರೈವ್-2025 ನ್ನು ಬಿ.ಎಲ್. ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ. ವಿ. ಎಸ್. ಬಗಲಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಿಕ್ಷಣ ಮತ್ತು ಉದ್ಯೋಗಕ್ಕೆ ಅವಿನಾಭಾವ ಸಂಬಂಧವಿದೆ. ಉತ್ತಮ ಶಿಕ್ಷಣ, ತರಬೇತಿ ಪಡೆಯುವುದರಿಂದ ಉದ್ಯಮದಲ್ಲಿ ಯಶಸ್ಸು ಸಾಧಿಸಬಹುದು. ಇದರಲ್ಲಿ ಪರಸ್ಪರ ಸಹಯೋಗದಿಂದ ಉನ್ನತ ಸಾಧನೆ ಮಾಡಬಹುದು. ವಿದ್ಯಾರ್ಥಿಗಳು ಇಂಥ ಪೂಲ್ ಕ್ಯಾಂಪಸ್ ಡ್ರೈವ್ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಈ ಪೂಲ್ ಕ್ಯಾಂಪಸ್ ಡ್ರೈವ್-2025ನಲ್ಲಿ ಒಟ್ಟು 10 ಹೆಸರಾಂತ ಕಂಪನಿಗಳು ಪಾಲ್ಗೋಂಡಿದ್ದವು. ಐಟಿ, ಹಣಕಾಸು, ಮಾರ್ಕೆಟಿಂಗ್, ರಿಟೇಲ್, ಕನ್ಸಲ್ಟಿಂಗ್ ಮತ್ತು ಉತ್ಪಾದನೆ ಕ್ಷೇತ್ರಗಳಿಗೆ ಸೇರಿದದ ಫೋನ್ಪೇ, ಆರ್.ಎನ್.ಎಸ್ ಮೋಟಾರ್ಸ್, ಜಿಯೋ, ಯತಿ ಕಾರ್ಪ್, ಸಂತೋಷ್ ಆಟೋ, ಪೇಟಿಎಂ ಮುಂತಾದ ಕಂಪನಿಗಳು…
ಜುಲೈ 07 ರಿಂದ ಕೆಲಸ ನಿರ್ವಹಿಸದೇ ಅಸಹಕಾರ ಚಳುವಳಿ ನಡೆಸಲು ನಿರ್ಧಾರ | ಜಿಲ್ಲಾಧ್ಯಕ್ಷ ಪೃಥ್ವಿರಾಜ ಪಾಟೀಲ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ಮಹಾತ್ಮ ಗಾಂದಿ ನರೇಗಾ ಯೋಜನೆಯಡಿ ವಿವಿಧ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕಳೆದ 06 ತಿಂಗಳಿಂದ ವೇತನ ಪಾವತಿಸದೇ ಇರುವುದರಿಂದ ಶೀಘ್ರವೇ ವೇತನ ಪಾವತಿಯಾಗುವಂತೆ ಕ್ರಮ ಕೈಗೊಳ್ಳುವಂತೆ ವಿನಂತಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹಾಗೂ ಉಪ ಕಾರ್ಯದರ್ಶಿ ಡಾ. ವಿಜಯಕುಮಾರ ಆಜೂರ ಅವರಿಗೆ ನರೇಗಾ ಸಿಬ್ಬಂದಿ ಮನವಿ ಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪೃಥ್ವಿರಾಜ ಪಾಟೀಲ ಮಾತನಾಡಿ, “ಕಳೆದ ಜನೇವರಿ-2025 ರಿಂದ ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯವ್ಯಾಪ್ತಿ ಕೆಲಸ ಮಾಡುವ ನರೇಗಾ ಸಿಬ್ಬಂದಿಗಳಿಗೆ ವೇತನ ಪಾವತಿಯಾಗಿರುವದಿಲ್ಲ, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಾವು ಜಿಲ್ಲಾ ಪಂಚಾಯತ್ ಮತ್ತು ತಾಲೂಕ ಪಂಚಾಯತ್ ಮಟ್ಟದಲ್ಲಿ ವಿವಿಧ ಸ್ಥರಗಳಲ್ಲಿ ಕಳೆದ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಶ್ರೀ ಗುರುಚಂದ್ರಶೇಖರ ಸಂಸ್ಥಾನ ಹಿರೇಮಠ ತದ್ದೇವಾಡಿಯಲ್ಲಿ ನಡೆಯುವ ಗುರುಪೂರ್ಣಿಮೆ ನಿಮಿತ್ಯ ಪ್ರತಿ ವರ್ಷ ಐದು ಗ್ರಾಮಗಳಿಂದ ಜ್ಯೋತಿ ತಂದು ಪ್ರಾರಂಭೋತ್ಸವ ಮಾಡುತ್ತ ಬಂದಿದ್ದು, ಈ ವರ್ಷ ಬಳ್ಳೋಳ್ಳಿ ಗ್ರಾಮ ದೇವರು ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಜ್ಯೋತಿ ತದ್ದೆವಾಡಿಗೆ ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ರೇಣುಕ ದೇವರು ಮಹಾಸ್ವಾಮಿಗಳ ಮತ್ತು ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಇವರ ಸಹಯೋಗದಲ್ಲಿ ಚಾಲನೆ ನೀಡಲಾಯಿತು.ತದ್ದೇವಾಡಿ ಗ್ರಾಮದ ವೇದ ಮೂರ್ತಿ ಮಹಾಂತೇಶ್ ಹಿರೇಮಠ ಇವರು ಮಾತನಾಡಿ ಮಠದಲ್ಲಿ ಜೂನ್ ೨೬ ರಿಂದ ಜೂಲೈ ೧೦ರ ವರೆಗೆ ಪುರಾಣ ಪ್ರವಚನ, ಕೃಷಿ ಚಿಂತನ, ವೀರ ಯೋಧರಿಗೆ ಸನ್ಮಾನ ಸಮಾರಂಭ, ರಕ್ತದಾನ ಶಿಬಿರ, ಅಕಾಡೆಮಿ ವತಿಯಿಂದ ಜಾನಪದ ವೈಭವ ಸಮ್ಮೇಳನ, ಕಲಾ ಸಮ್ಮೇಳನ, ನೂರಾರು ಕಲಾವಿದರಿಗೆ ಪ್ರೋತ್ಸಾಹ ಹಾಗೂ ಸನ್ಮಾನ, ಪ್ರಶಸ್ತಿ ಪ್ರಮಾಣ ಪತ್ರಿಕೆ ವಿತರಣೆ, ಸುಪ್ರಸಿದ್ದ ಡೊಳ್ಳಿನ ಪದಗಳು, ನಾಟಕ, ಜಾನಪದ ತಂಡಗಳಿಂದ ಕಲಾ ಪ್ರದರ್ಶನ ಮುಂತಾದ ಕಾರ್ಯಕ್ರಮ ಈ ವರ್ಷವೂ ಕೂಡಾ ಹಮ್ಮಿಕೊಳ್ಳಗುವದು ಎಂದು…
ಉದಯರಶ್ಮಿ ದಿನಪತ್ರಿಕೆ ಇಂಡಿ: ಪ್ಲಾಸ್ಟಿಕ್ ತ್ಯಾಜ್ಯವು ಜಾಗತಿಕ ಸಮಸ್ಯೆಯಾಗಿದೆ. ಜಗತ್ತಿನ ಅತಿ ಎತ್ತರದ ಗಿರಿ ಶಿಖರಗಳಿಂದ ಹಿಡಿದು ಆಳ ಸಮುದ್ರದ ಒಡಲೊಳಗೆ ಸೇರಿಕೊಳ್ಳುತ್ತಿರುವ ಇದು ಜನ, ಜಾನುವಾರು ಹಾಗೂ ಸಸ್ಯ ಸಂಕುಲಕ್ಕೆ ಮಾರಕವಾಗಿದ್ದು, ಇದರ ನಿಯಂತ್ರಣ ಇಂದಿನ ಅಗತ್ಯವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಗುರುವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ‘ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನ’ದ ನಿಮಿತ್ತ ಹಮ್ಮಿಕೊಂಡ ‘ಪ್ಲಾಸ್ಟಿಕ್ ಚೀಲ ಬಿಡಿ-ಬಟ್ಟೆ ಚೀಲ ಹಿಡಿ’ ಚರ್ಚಾಗೋಷ್ಠಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ಪ್ಲಾಸ್ಟಿಕ್ ವಸ್ತುಗಳು ಮಣ್ಣಿನಲ್ಲಿ ಕೊಳೆಯುವುದಿಲ್ಲ. ಅವನ್ನು ಸುಟ್ಟರೆ ‘ಡಯಾಕ್ಸಿನ್’ ಎಂಬ ವಿಷಪೂರಿತ ಅಂಶ ಬಿಡುಗಡೆಯಾಗಿ, ಅದು ಗಾಳಿಯಲ್ಲಿ ಬೆರೆತು ಉಸಿರಾಟಕ್ಕೆ ತೊಂದರೆಯಾಗುತ್ತದೆ. ಪ್ಲಾಸ್ಟಿಕ್ ಚೀಲಗಳ ಬಳಕೆ ಕಡಿಮೆ ಮಾಡಿ, ಬಟ್ಟೆ ಚೀಲ ಬಳಸುವ ರೂಢಿ ದೈನಂದಿನ ಜೀವನದ ಭಾಗವಾಗಬೇಕಿದೆ ಎಂದು ಹೇಳಿದರು.ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ನಮ್ಮ ದೈನಂದಿನ ಜೀವನದಲ್ಲಿ ತರಕಾರಿ, ದಿನಸಿ ವಸ್ತುಗಳನ್ನು ತರಲು ಪ್ಲಾಸ್ಟಿಕ್ ಚೀಲದ ಬದಲಾಗಿ ಬಟ್ಟೆ ಚೀಲಗಳನ್ನು…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಹುನ್ನೂರ ಗ್ರಾಮದ ಸರ್ಕಾರಿ ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ 2002-03ನೇ ಸಾಲಿನ ಎಸ್ ಎಸ್ ಎಲ್ ಸಿ ಹಳೆ ವಿದ್ಯಾರ್ಥಿಗಳಿಂದ ನೂತನ ಕೊಡುಗೆಯಾಗಿ ನಾಮಫಲಕ ನೀಡಿದರು.ಈ ವೇಳೆ ಹಳೆ ವಿದ್ಯಾರ್ಥಿ ಶಂಕರಗೌಡ ಚಿಕ್ಕನಗೌಡ ಮಾತನಾಡಿ – ನಮ್ಮದು ಬಹಳ ದಿನದ ಕನಸು ನಾವು ಕಲಿತ ಶಾಲೆಗೆ ಏನಾದರೂ ನೀಡಬೇಕೆಂದು – ಅದಕ್ಕೆ ನಾವು ಸ್ನೇಹ, ಪ್ರೀತಿಯ ಸೂಚಕವಾಗಿ ನಾಮಫಲಕ ನೀಡಿದ್ದೇವೆ ನಾಮಫಲಕಕ್ಕೆ ಅವಕಾಶ ಮಾಡಿಕೊಟ್ಟ ಶಾಲೆ ಗುರುಗಳಿಗೆ ಧನ್ಯವಾದ ತಿಳಿಸುತ್ತೇವೆ ಎಂದರು. ಶಿಕ್ಷಕ ಸಂತೋಷ ತಳಕೇರಿ ಮಾತನಾಡಿ, ಬಹಳ ವರ್ಷ ಕಳೆದು ಹೋಗಿರುವ ಶಾಲೆ 1964 ರಲ್ಲಿ ಉದ್ಘಾಟನೆ ಆಗಿದೆ ಸುಮಾರು 60 ವರ್ಷಗಳ ನಂತರ ಪ್ರೌಢ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ನಾಮಫಲಕ ನೀಡಿದ್ದು ಹೆಮ್ಮೆಯ ಸಂಗತಿ, ಕಲಿತಿರುವ ವಿದ್ಯಾರ್ಥಿಗಳು ಇವಾಗ ಉನ್ನತ ಹುದ್ದೆಯಲ್ಲಿದ್ದಾರೆ.ಈಗಿನ ವಿದ್ಯಾರ್ಥಿಗಳು ಕೂಡಾ ಶಾಲೆಯಲ್ಲಿ ಪ್ರಮುಖ ವಿದ್ಯೆ ಸಂಸ್ಕಾರ ಜೀವನ ಮಾರ್ಗಕ್ಕೆ ಬೇಕಾಗುವ ಎಲ್ಲವನ್ನು ಕಲಿಯಬೇಕು ಹಾಗೂ ಉನ್ನತ ಸ್ಥಾನದಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸಾ ವಿಭಾಗದ ವತಿಯಿಂದ ಜುಲೈ 7ರಿಂದ-ಜುಲೈ 17ರ ವರೆಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಲಿದೆ.ಈ ಉಚಿತ ಶಿಬಿರದಲ್ಲಿ ಕೀಲುಗಳಲ್ಲಿ ನೋವು, ಹಿಡಿತ, ಸಂಧಿವಾತ ಹಾಗೂ ಊತ(ರೊಮಟಾಯ್ಡ ಅರ್ಥರೈಟಿಸ್ ರೋಗ) ರೋಗದ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನಡೆಡಲಾಗುವುದು.ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದು ಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ:7975160825 ಮತ್ತು 9513397413 ಸಂಪರ್ಕಿಸುವಂತೆಕಾಲೇಜಿನ ಪ್ರಾಚಾರ್ಯ ಡಾ. ಅಶೋಕ.ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
