Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರ ಹಿಪ್ಪರಗಿ: ರಾಮತೇರ ಎಂದೇ ಪ್ರಸಿದ್ಧವಾದ ರಾಮತೀರ್ಥ ಜಾತ್ರೆ ಸಹಸ್ರಾರು ಭಕ್ತವೃಂದದ ನಡುವೆ ಭಕ್ತಿ ಭಾವದೊಂದಿಗೆ ಸಡಗರ, ಸಂಭ್ರಮದಿಂದ ಜರುಗಿತು.ಪಟ್ಟಣದ ಹತ್ತಿರದಲ್ಲಿರುವ ಐತಿಹಾಸಿಕ ಹಿನ್ನೆಲೆಯ ರಾಮಲಿಂಗೇಶ್ವರ ದೇವಸ್ಥಾನ ಹಾಗೂ ತೀರ್ಥಕುಂಡವಿರುವ ರಾಮತೀರ್ಥ ಕ್ಷೇತ್ರದಲ್ಲಿ ಸಾಂಪ್ರದಾಯಿಕವಾಗಿ ಶ್ರಾವಣ ಮಾಸದ ಮೂರನೇ ಸೋಮವಾರ ಜರುಗಿದ ಜಾತ್ರೆಯ ಅಂಗವಾಗಿ ದೇವರಹಿಪ್ಪರಗಿಯ ಕಲ್ಮೇಶ್ವರ ಹಾಗೂ ಕರಿಸಿದ್ಧೇಶ್ವರರ ಪಲ್ಲಕ್ಕಿಗಳು ಸೇರಿದಂತೆ ಸುತ್ತಮುತ್ತಲಿನ ಒಟ್ಟು ೦೯ ಗ್ರಾಮಗಳ ೨೧ ಕ್ಕೂ ಹೆಚ್ಚಿನ ದೇವರುಗಳ ಪಲ್ಲಕ್ಕಿಗಳು ಡೊಳ್ಳು, ಹಲಿಗೆ, ಕಹಳೆ ಸೇರಿ ವಿವಿಧ ವಾಧ್ಯವೃಂದ ಸಹಿತ ಸಹಸ್ರಾರು ಭಕ್ತರೊಂದಿಗೆ ಆಗಮಿಸಿದವು. ನಂತರ ಕ್ಷೇತ್ರದ ತೀರ್ಥಕುಂಡದಲ್ಲಿ ಗಂಗಾಸ್ನಾನ ಹಾಗೂ ಎಲ್ಲ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ನಂತರ ನೆರೆದ ಭಕ್ತರಿಗೆ ದರ್ಶನ ನೀಡಿದವು. ನಂತರ ಪ್ರಮುಖ ಪೂಜಾರಿಗಳಿಂದ ಭವಿಷ್ಯದ ಕುರಿತಾದ ಹೇಳಿಕೆಗಳು ಹೇಳಲ್ಪಟ್ಟವು.ಜಾತ್ರೆಯಲ್ಲಿ ಪಡಗಾನೂರಿನ ಕೆಂಚರಾಯ, ಲಗಮವ್ವ, ಶಿವಣಗಿಯ ಮಡ್ಡಿಸಿದ್ಧ, ಅಮೋಘಸಿದ್ಧ, ನಿವಾಳಖೇಡದ ಲಕ್ಷ್ಮಿ, ಕಗ್ಗೋಡದ ತಿಪ್ಪರಾಯ, ಇಂಗಳಗಿಯ ಅಮೋಘಸಿದ್ಧ ಹಾಗೂ ಮುಳಸಾವಳಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ದೇವರ ಪಲ್ಲಕ್ಕಿಗಳು ಸೇರಿದ್ದವು.ಈ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಂಘದ ಸದಸ್ಯರು ಕಾನೂನು ಹಾಗೂ ನಿಯಮಗಳನ್ನು ಅರಿತು ವ್ಯವಹಾರದಲ್ಲಿ ಭಾಗವಹಿಸುವಂತಾಗಲಿ ಎಂದು ನಿವೃತ್ತ ಡಿವೈಎಸ್‌ಪಿ ಬಸನಗೌಡ ಹುಲಸಗುಂದ ಹೇಳಿದರು.ಪಟ್ಟಣದಲ್ಲಿ ಭಾನುವಾರ ಜರುಗಿದ ಕೃಪಾ ವಿವಿಧೋದ್ದೇಶಗಳ ಸಂಘದ ೧೨ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಪಾಲ್ಗೊಂಡು, ಸನ್ಮಾನ ಸ್ವೀಕರಿಸಿ ಮಾತನಾಡಿದರು.ಸಹಕಾರ ಸಂಘಗಳಲ್ಲಿ ಇತ್ತೀಚೆಗೆ ಗಮನಾರ್ಹ ಬದಲಾವಣೆಗಳಾಗುತ್ತಿವೆ. ಇದನ್ನು ಸಂಘದ ಸದಸ್ಯರು ಅರಿಯಬೇಕಾಗಿದೆ ಎಂದರು.ಸಂಘದ ಅಧ್ಯಕ್ಷ ಬಾಬುಗೌಡ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ಬೆಳವಣಿಗೆಯಲ್ಲಿ ಸರ್ವಸದಸ್ಯರು ಹಾಗೂ ಸಿಬ್ಬಂದಿ ಗಮನಾರ್ಹ ಪಾತ್ರ ವಹಿಸಿದ್ದಾರೆ ಎಂದರು.ಸಂಸ್ಥಾಪಕ ಹಾಗೂ ನಿರ್ದೇಶಕ ಸೋಮನಗೌಡ ಪಾಟೀಲ ಮಾತನಾಡಿ, ಸಂಘ ಮುಂದಿನ ದಿನಗಳಲ್ಲಿ ಉತ್ತರೋತ್ತರವಾಗಿ ಬೆಳೆದು ಎಲ್ಲರಿಗೂ ನೆರಳು ನೀಡುವ ಹೆಮ್ಮರವಾಗಲಿ ಎಂದರು.ಇದೇ ಸಂದರ್ಭಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಡಿ.ಕೆ.ಪಾಟೀಲ, ಗೋಪಾಲ ನಾಯಕ, ಬಿ.ಎಮ್.ಪಾಟೀಲ, ಸುರೇಶ ದೇಸಾಯಿ ಹಾಗೂ ಸಹಕಾರಿ ಭಾರತಿಗೆ ಆಯ್ಕೆಯಾದ ವಿನೋದಗೌಡ ಪಾಟೀಲ, ಕೆ.ಎಸ್.ಕೋರಿ, ಯಲ್ಲಾಲಿಂಗಪ್ರಭು ವಡ್ಡೋಡಗಿ ಹಾಗೂ ರಾಜೀವ ಗುತ್ತೇದಾರರನ್ನು ಸನ್ಮಾನಿಸಲಾಯಿತು.ಸಂಘದ ಉಪಾಧ್ಯಕ್ಷ ಶಿವರಾಯ ಚವ್ಹಾಣ, ನಿರ್ದೇಶಕರುಗಳಾದ ಆರ್.ಎಸ್.ಮಠ, ಕಾಶೀನಾಥ ಸಾಲಕ್ಕಿ,…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ಸೋಮವಾರ ಬೆಳ್ಳಂ-ಬೆಳಿಗ್ಗೆ ಇಂಡಿ ನಗರದ ವಿವಿಧ ಇಲಾಖೆಗಳ ಮೇಲೆ ದಾಳಿ ನಡೆಸಿ ಕಡತಗಳನ್ನು ಪರಿಶೀಲಿಸಿ, ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.ನಗರದ ಮಿನಿ ವಿಧಾನಸೌಧದಲ್ಲಿರುವ ತಹಸೀಲ್ದಾರ ಇಲಾಖೆ, ಉಪ ನೋಂದಣಿ ಕಾರ್ಯಾಲಯ, ಎಡಿಎಲ್‌ಆರ್ ಕಚೇರಿಗಳ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಕಡತಗಳನ್ನು ಪರಿಶೀಲಿಸಿ, ಬಹು ದಿನಗಳಿಂದ ಬಾಕಿ ಉಳಿದುಕೊಂಡ ಪ್ರಕರಣಗಳ ಮಾಹಿತಿ ಕಲೆ ಹಾಕಿದರು.ನಂತರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಲ್ಲಿ ಕಡತಗಳನ್ನು ಪರಿಶೀಲಿಸಿರು, ನಂತರ ಇಂಡಿ ಪುರಸಭೆ ಕಾರ್ಯಾಲಯಕ್ಕೆ ಬೇಟಿ ನೀಡಿ ಕಡತಗಳನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ನಂತರ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಲೋಕಾಯುಕ್ತ ಅಧಿಕಾರಿಗಳು ಅವರ ಸಮಸ್ಯೆಗಳ ಬಗ್ಗೆ ಸ್ಥಳದಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸಮಸ್ಯೆಗಳ ಪರಿಹಾರಕ್ಕೆ ಸೂಚಿಸಿದರು.ಈ ದಾಳಿಯಲ್ಲಿ ಕರ್ನಾಟಕ ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಎ ವಿ ಪಾಟೀಲ, ಇನ್ಸಪೆಕ್ಟರ್ ಶಿವರಾಜ್ ಪಾಟೀಲ್, ಆನಂದ ಪಡಶೆಟ್ಟಿ ಹಾಗೂ ಶರಣಬಸು, ರವಿ ಪುರುಶೊತ್ತಮ, ಶಿವರಾಜ್…

Read More

ಚಕ್ಕಡಿಯಲ್ಲಿ ಮೆರವಣಿಗೆ | ಭಾರ ಎತ್ತುವ ಸ್ಪರ್ಧೆಗಳಿಗೆ ಚಾಲನೆ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಹಲವಾರು ಪ್ರತಿಭೆಗಳು, ಪ್ರತಿಭೆಗೆ ತಕ್ಕ ಪ್ರೋತ್ಸಾಹ, ಸಾಂಸ್ಕೃತಿಕವಾಗಿ, ಸಾಂಪ್ರದಾಯಿಕತ್ವವನ್ನು ಉಳಿಸಿ, ಪೋಷಿಸುತ್ತಿರುವ ಬೇನಾಳ ಗ್ರಾಮದ ಸಾಮರಸ್ಯ, ಜ್ಯಾತ್ಯಾತೀತ ಗ್ರಾಮ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.ಸಮೀಪದ ಬೇನಾಳ ಆರ್ಎಸ್ ಗ್ರಾಮದಲ್ಲಿ ಸೋಮವಾರ, ರಾಮಣ್ಣ ಮುತ್ಯಾ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಗ್ರಾಮೀಣ ಭಾರ ಎತ್ತುವ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಸರ್ಕಾರದ ವಿಶೇಷ ಅನುದಾನ ತಂದು ಬೇನಾಳ ಪುನರ್ವಸತಿ ಕೇಂದ್ರಕ್ಕೆ ಇನ್ನಷ್ಟು ಮೂಲಭೂತ ಸೌಕರ್ಯ ಕಲ್ಪಿಸುವೆ ಎಂದರು.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಗ್ರಾಮದ ವತಿಯಿಂದ ವಿಶೇಷ ಸನ್ಮಾನ ಸ್ವೀಕರಿಸಿ ಮಾತನಾಡಿ, ಅತಿ ಚಿಕ್ಕ ವಯಸ್ಸಿನಲ್ಲಿಯೇ ರಾಜ್ಯಾಧ್ಯಕ್ಷನಾಗಿದ್ದು, ಜವಾಬ್ದಾರಿ ಹೆಚ್ಚಿದ್ದು, ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವೆ, ಅಭಿಮಾನದ ಸನ್ಮಾನಕ್ಕೆ ನಾನು ಸದಾ ಚಿರರುಣಿ ಎಂದರು.ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಸಾಹಿತಿ ಅಶೋಕ ಹಂಚಲಿ, ಕರ್ನಾಟಕ ಅಕಾಡೆಮಿ ಸದಸ್ಯ ಮಹಾದೇವ ಬಸರಕೋಡ ಮಾತನಾಡಿದರು.ಜೆಡಿಎಸ್ ಪಕ್ಷದ ಸೋಮನಗೌಡ ಪಾಟೀಲ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣವು ಸಾಂಸ್ಕೃತಿಕ ಮತ್ತು ವ್ಯವಹಾರಿಕವಾಗಿ ಬೆಳವಣಿಗೆಯನ್ನು ಹೊಂದಿದೆ. ಇದುವರೆಗೆ ಪಟ್ಟಣ ಎಂದು ಕರೆಸಿಕೊಂಡ ಸಿಂದಗಿ ಪುರಸಭೆ ನಗರ ಸಭೆಯಾಗಿ ಮಾರ್ಪಾಡಾಗುತ್ತದೆ ಎಂಬ ಸಂತಸದಲ್ಲಿದ್ದ ಜನತೆಗೆ ನಿರಾಶೆ ಮೂಡಿದೆ. ರಾಜ್ಯ ಸರ್ಕಾರ ತಾರತಮ್ಯ ನೀತಿ ಅನುಸರಿಸದೇ ನಗರಾಭಿವೃದ್ಧಿ ಸಚಿವರು ಕೊಟ್ಟ ಮಾತಿನಂತೆ ಸಿಂದಗಿಯನ್ನು ನಗರಸಭೆಯನ್ನಾಗಿ ಸಚಿವ ಸಂಪುಟದಲ್ಲಿ ಅನುಮೋದನೆಯಾಗಬೇಕು ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಕಳೆದ ಮೇ ತಿಂಗಳಲ್ಲಿ ಸಿಂದಗಿ ನಗರಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಆಗಮಿಸಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯದಲ್ಲಿರುವ ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೇರಿಸುವ ಸಮಯ ಬಂದರೆ ಸಿಂದಗಿ ನಗರಕ್ಕೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು ಎಂದು ಹೇಳಿಕೆ ನೀಡಿದ್ದರು. ಆದರೆ ಅವರ ನೀಡಿದ ಭರವಸೆ ಹುಸಿಯಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹೀಗಾಗಿ ಸಿಂದಗಿ ನಗರ ಸಭೆಯಾಗುವ ಕನಸು ನನಸಾಗಿಯೇ ಉಳಿಯುತ್ತದೆ ಎಂಬ…

Read More

ವಿಜಯಪುರದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಗ್ರಾಮೀಣ ಜನರ ಜೀವನ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಿ, ಪರಿಹಾರ ಒದಗಿಸಲು ಹಾಗೂ ಮೂಲಸೌಲಭ್ಯಗಳನ್ನು ಆದ್ಯತೆ ಮೇಲೆ ಕಲ್ಪಿಸಲು ಕ್ರಮಕೈಗೊಳ್ಳಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಾಮಾಜಿಕ ಕಳಕಳಿಯೊಂದಿಗೆ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಸ್ವಚ್ಚತೆಗೆ ಪ್ರಥಮಾದ್ಯತೆ ನೀಡಬೇಕು, ನೈರ್ಮಲ್ಯೀಕರಣ ಮಹತ್ವ ತಿಳಿಸುವ ನಿಟ್ಟಿನಲ್ಲಿ ಜನರಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಡುವ ಮೂಲಕ ಬಳಕೆ ಕುರಿತು ಜಾಗೃತಿ ಮೂಡಿಸಬೇಕು. ಜನರ ಆರೋಗ್ಯ ಹಾಗೂ ಗ್ರಾಮ ನೈರ್ಮಲ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಸಂಬಂಧಿಸಿದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನಿರ್ದೇಶಕರ ಅವರ ಜೂನ್ ೨ರ ಪತ್ರದ ಮೇರೆಗೆ ಮುಕ್ತ ಮಾರುಕಟ್ಟೆಯ ಸಗಟುದಾರರಿಗೆ ೩ ಸಾವಿರ ಮ್ಯಾರ್ಟಿಕ್ ಟನ, ರಿಟೇಲರಗಳಿಗೆ ೧೦ ಮೆರ್ಟಿಕ್ ಟನ ಹಾಗೂ ಉತ್ಪಾದಕರಿಗೆ ಅವರ ಉತ್ಪಾದನಾ ಸಾಮರ್ಥದ ಶೇ ೭೦ರಷ್ಟು ಗೋಧಿ ದಾಸ್ತಾನು ಮಿತಿಯನ್ನು ದಿನಾಂಕ ೩೧-೦೩-೨೦೨೬ರವರೆಗೆ ನಿಗದಿ ಪಡಿಸಲಾಗಿದೆ. ಅದರಂತೆ ಜಿಲ್ಲೆಯ ಗೋಧಿ ಸಗಟು ವ್ಯಾಪಾರಸ್ಥರು, ರಿಟೇಲರ್ಸ್ ಹಾಗೂ ಗೋಧಿ ಉತ್ಪಾದನೆ ಮಾಡುವವರು ತಮ್ಮಲಿರುವ ಗೋಧಿ ದಾಸ್ತಾನಿನ ಮಾಹಿತಿಯನ್ನು ತುರ್ತಾಗಿ ಕೇಂದ್ರ ಸರ್ಕಾರದ ವೆಬ್‌ಸೈಟ್https://evegoils.nic.in/wsp/login ನಲ್ಲಿ ನೋಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ. ಯಾವುದೇ ವ್ಯಾಪಾರಸ್ಥರು ಗೋಧಿ ದಾಸ್ತಾನಿನ ಮಾಹಿತಿ ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳದಿದ್ದರೇ ಅಂತಹವರ ವಿರುದ್ದ ಶಿಸ್ತಿನ ಕ್ರಮಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಹಾಯಕ ಉಪ ಸಂರಕ್ಷಣಾಧಿಕಾರಿ ಅನಂತಕುಮಾರ.ಎಸ್.ಪಾಕಿ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿನಿಯರು ಹೆಚ್ಚು ಹೆಚ್ಚು ಸಸಿಗಳನ್ನು ನೆಡುವುದರ ಮೂಲಕ ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಸಹಾಯಕ ಉಪ ಸಂರಕ್ಷಣಾಧಿಕಾರಿ ಅನಂತಕುಮಾರ.ಎಸ್.ಪಾಕಿಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಥಿ ಮಂಡಳಿ ಬೆಂಗಳೂರು (ಕೆಎಸ್‌ಬಿಡಿಬಿ), ಜಿಲ್ಲಾ ಪಂಚಾಯತ, ಸಾಮಾಜಿಕ ಅರಣ್ಯ ವಿಭಾಗ, ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವಿಜಯಪುರ ಇವರ ಸಂಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಜೈವಿಕ ಇಂಧನ ದಿನಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಪ್ರತಿ ವಿದ್ಯಾರ್ಥಿನಿಯೂ ಕನಿಷ್ಠ ಒಂದು ಗಿಡವನ್ನು ನೆಡುವ ಸಂಕಲ್ಪ ಕೈಗೊಂಡರೆ, ಭವಿಷ್ಯದ ಪೀಳಿಗೆಗಾಗಿ ಹಸಿರು, ಶುದ್ಧ ಮತ್ತು ಆರೋಗ್ಯಕರ ವಾತಾವರಣವನ್ನು ನಿರ್ಮಿಸಬಹುದು ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ.ಬಿ.ಕೋರಿಶೆಟ್ಟಿ ಮಾತನಾಡಿ, ಜೈವಿಕ ಇಂಧನವು ನವೀಕರಿಸಬಹುದಾದ ಶಕ್ತಿಯ ಮೂಲವಾಗಿದ್ದು, ಇದು ಪರಿಸರ ಸಂರಕ್ಷಣೆಗೂ, ಶಾಶ್ವತ ಅಭಿವೃದ್ಧಿಗೂ ಮಹತ್ವದ ಪಾತ್ರ ವಹಿಸುತ್ತದೆ. ಭಾರತ ದೇಶವು ಇಂಧನಗಳ ಅವಲಂಬನೆಯನ್ನು ಹಂತ ಹಂತವಾಗಿ ಕಡಿಮೆ…

Read More

ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ – ಪುಣೆ ಉದಯರಶ್ಮಿ ದಿನಪತ್ರಿಕೆ 18 ನೆಯ ಶರಣ ಮಾಸದ ಮಾಲಿಕೆಯಲ್ಲಿ ಶರಣ ಶಶಿಧರ ಕರವೀರಶೆಟ್ಟರ ಅವರು ಸಕೀಲಗಳ ಬಗೆಗೆ ಅತ್ಯಂತ ವಿದ್ವತ್ ಪೂರ್ಣವಾದ ಮತ್ತು ಆಳವಾದ ಜ್ಞಾನ ಭಂಡಾರ ವನ್ನು ನಮ್ಮೊಂದಿಗೆ ಹಂಚಿಕೊಂಡರು.ಸಕೀಲಗಳು ಎಂದರೆ ತಾತ್ವಿಕ ರಹಸ್ಯಗಳು, ಅತ್ಯಂತ ಆಳವಾದ ತತ್ವಜ್ಞಾನದ ಅರಿವು ಮೂಡಿಸುವ, ಅಂಗವೇ ಲಿಂಗ ವಾಗುವ ಪರಿ. ಪರಸ್ಪರ ಒಂದರೊಳೊoದಿಗೆ ಸಮರಸವಾದ ಸಂಬಂಧವಿರುವ, ಬಿಟ್ಟು ಬೇರಾಗಿಸದಂತೆ, ಪೂರ್ಣವಾಗಿ ಒಂದೇ ಆಗುವಂತೆ ಮಾಡುವುದನ್ನು ತಿಳಿಸುವುದೇ ಲಿಂಗ ಸಕೀಲಗಳು. ಅವಿರಳ ಜ್ಞಾನಿ ಚೆನ್ನಬಸವಣ್ಣನವರ ಮಿಶ್ರಾರ್ಪಣ ಗ್ರಂಥವು ಇದಕ್ಕೆ ಮೂಲ ಆಗರವಾಗಿದೆ.ಲಿಂಗದೊಳಗೆ ಅಂಗ ಕರಗಿ ಪೂರ್ವಾಶ್ರಮ ಭಾವ ಇಂಗಿ ಪರಸ್ಪರ ಸಾಮರಸ್ಯ ಹೊಂದಿ ಪರಿಪೂರ್ಣವಾಗಿ ಪರಿಶುದ್ಧವಾಗಿ ಲಿಂಗದಿಂದ ಹೊರಹೊಮ್ಮುವ ಪ್ರಕ್ರಿಯೆ.ಸಕೀಲಗಳಲ್ಲಿ ಮೂರು ವಿಧ, ಆರು ವಿಧ, ಎಂಟು ವಿಧ, 36 ವಿಧ,96 ವಿಧ,108 ವಿಧ ಮತ್ತು 216 ವಿಧಗಳನ್ನು ಅತ್ಯಂತ ಸರಳ ರೀತಿಯಲ್ಲಿ ಎಲ್ಲರಿಗೂ ಅರ್ಥವಾಗುವಂತೆ ವಿವರಿಸಿದರು.ಲಿಂಗತತ್ವಗಳಾದ ಇಷ್ಟಲಿಂಗ, ಪ್ರಾಣಲಿಂಗ, ಭಾವಲಿಂಗವನ್ನು…

Read More

ಲೇಖನ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಡಾ. ಶರಣಮ್ಮ ಗೊರೆಬಾಳ ಅವರು ನಮ್ಮ ವೇದಿಕೆಯ ಆಜೀವ ಸದಸ್ಯರು ಮತ್ತು ದತ್ತಿ ದಾಸೋಹಿಗಳು. ಯಾವತ್ತೂ ನಗುಮೊಗದ, ಎಲ್ಲರನ್ನೂ ಪ್ರೀತಿಸುವ,ಹೊಂದಿಕೊಳ್ಳುವ ಗುಣದ,ಖುಷಿಯಾಗಿರುವ, ನಿರ್ಮಲ ಮನಸ್ಸಿನ ಸಾತ್ವಿಕ ಚಿಂತನೆಯ ಮಹಿಳೆ ಎಂದರೆ ತಪ್ಪಾಗಲಾರದು.ಧಾರವಾಡ ವಿದ್ಯಾರಣ್ಯ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಶರಣಮ್ಮ ಗೊರೆಬಾಳ ಇವರು ಮೂಲತಃ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಾವರಗೇರಿಯವರು, ಹುಟ್ಟಿದ್ದು ತಾಯಿಯ ತವರೂರಾದ ಈಗಿನ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಎತ್ತಿನ ಹಳ್ಳಿಯಲ್ಲಿ, ಅವರ ತಂದೆ ಕಲ್ಮೇಶ್ವರ ಕೆಂಗಾಪುರ ಗ್ರಾಮ ಸೇವಕರಾಗಿ ಸೇವೆ ಸಲ್ಲಿಸಿದ್ದು ರಾಯಚೂರು ಜಿಲ್ಲೆ. ಹೀಗಾಗಿಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಕುಷ್ಟಗಿ ತಾಲೂಕಿನ ದೋಟಿಹಾಳದಲ್ಲಿ ಮುಗಿಸಿದರು. ಮುಂದೆ ಪಿಯುಸಿ ಧಾರವಾಡದ ವಿದ್ಯಾರಣ್ಯ ಪದವಿ ಪೂರ್ವ ಮಹಾ ಮಹಾವಿದ್ಯಾಲಯ, ಬಿ.ಎ ಪದವಿಯನ್ನು ಕಿಟಲ್ ಕಲಾ ಮಹಾವಿದ್ಯಾಲಯದಲ್ಲಿ ಮುಗಿಸಿದರು. ಬಿ.ಎ ಓದುತ್ತಿರುವಾಗಲೇ 1988ರಲ್ಲಿ ಶ್ರೀ ಎ. ಎಲ್. ಗೊರೆಬಾಳ ಅವರ ಜೊತೆ ಮದುವೆ ಆಯಿತು, ನಂತರ…

Read More