Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕನ್ನಡಪರ ಸೇರಿದಂತೆ ಪಟ್ಟಣದ ಎಲ್ಲ ಪ್ರಗತಿಪರ ಸಂಘಟನೆಗಳ ಸಹಕಾರದಿಂದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸೋಣ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ ಶನಿವಾರ ಜರುಗಿದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ರಕ್ಷಣಾ ವೇದಿಕೆ, ಜಯಕರ್ನಾಟಕ, ಶರಣ ಸಾಹಿತ್ಯ, ಚುಟುಕು ಸಾಹಿತ್ಯ ಪರಿಷತ್ಗಳು, ದಲಿತಪರ ಸಂಘಟನೆಗಳ ಸಲಹೆ ಸೂಚನೆಗಳನ್ನು ಪಾಲಿಸುವ ಮೂಲಕ ಕನ್ನಡ ನಾಡು, ನುಡಿಗೆ ಸೇವೆ ಸಲ್ಲಿಸಿದ ಪ್ರಮುಖರು ಹಾಗೂ ವಿವಿಧ ರಂಗಗಳ ಸಾಧಕರು ಸೇರಿದಂತೆ ನಿವೃತ್ತ ಯೋಧರನ್ನು ಸನ್ಮಾನಿಸುವುದರ ಮೂಲಕ ಅವಿಸ್ಮರಣೀಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಶಿಷ್ಟವಾಗಿ ಆಚರಿಸೋಣ ಎಂದರು.ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದು ಮೇಲಿನಮನಿ, ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಮಾತನಾಡಿದರು.ಶಿರಸ್ತೇದಾರ ಸುರೇಶ ಮ್ಯಾಗೇರಿ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ, ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಎಚ್.ವಾಲೀಕಾರ, ಕಾರ್ಯದರ್ಶಿ ಜಿ.ಪಿ.ಬಿರಾದಾರ, ಬಸವಶರಣ ಸೇವಾ ಸಮೀತಿ…
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಚುನಾವಣೆಗಳು ಸಮೀಪಿಸುತ್ತಿದ್ದು ಈ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಮಹಿಳಾ ಕಾರ್ಯಕರ್ತೆಯರು ಶ್ರಮಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಕರೆ ನೀಡಿದರು.ವಿಜಯಪುರದ ಸ್ಟಾರ್ ಸಭಾಂಗಣದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಮೀಜಾ ನದಾಫ್ ಅವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ, ಈ ಎಲ್ಲ ಜನಪರ ಕಾರ್ಯಗಳನ್ನು ಮಹಿಳಾ ಕಾರ್ಯಕರ್ತೆಯರು ಜನರ ಮನೆ ಮನೆಗೆ ತಿಳಿಸುವ ಕಾರ್ಯ ಮಾಡಬೇಕು, ಆ ಮೂಲಕ ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಚುನಾವಣೆಗಳಲ್ಲಿ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅಯ್ಕೆಯಗುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು.ಮಹಿಳಾ ಕಾರ್ಯಕರ್ತೆಯರು ತಮ್ಮ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು, ಅರೊಗ್ಯದ ಬಗ್ಗೆ ಕಾಳಜಿ ವಹಿಸಿದಾಗ ಮಾತ್ರ ಹೆಚ್ಚು ಹೆಚ್ಚು…
ಕನೇರಿ ಶ್ರೀಗಳ ಪುರ ಪ್ರವೇಶ ನಿರ್ಬಂಧ ಆದೇಶ | ಸಚಿವ ಎಂಬಿಪಿ ವಿರುದ್ಧ ಗುಡುಗಿದ ಮಾಜಿ ಶಾಸಕ ನಡಹಳ್ಳಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನೇರಿ ಶ್ರೀಗಳ ಜಿಲ್ಲಾ ಪ್ರವೇಶದ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲರೇ ಕಾರಣ, ಈ ಹಿಂದೆಯೂ ರಂಭಾಪೂರಿ, ಶ್ರೀಶೈಲ ಜಗದ್ಗುರುಗಳ ಬಗ್ಗೆ ಅತ್ಯಂತ ಅಗೌರವಯುತವಾಗಿ ಅವರು ನಡೆದುಕೊಂಡಿದ್ದರು ಎಂದು ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ವಿರುದ್ಧ ಗುಡುಗಿದರು.ನಾಲ್ಕು ದಿನಗಳಲ್ಲಿ ಶ್ರೀಗಳ ನಿಷೇಧ ಆದೇಶ ವಾಪಾಸ್ಸು ಪಡೆಯದೇ ಹೋದರೆ ಬಬಲೇಶ್ವರ ಮತಕ್ಷೇತ್ರದಿಂದಲೇ ಹೋರಾಟ ಆರಂಭಿಸುವೆ ಎಂದು ನಡಹಳ್ಳಿ ಗುಡುಗಿದರು.ವಿಜಯಪುರದಲ್ಲಿ ಕನೇರಿ ಸ್ವಾಮೀಜಿಗಳ ಪ್ರವೇಶ ನಿರ್ಬಂಧವನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಹಿಂದೂ ಜಾಗೃತ ವೇದಿಕೆ ನೇತೃತ್ವದಲ್ಲಿ ಡಾ.ಬಿ.ಆರ್. ಅಂಬೇಡ್ಕರ ವೃತ್ತದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ವೇಳೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲರು ರಂಭಾಪುರಿ, ಶ್ರೀಶೈಲ ಮೊದಲಾದ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಬರಡೋಲ ಗ್ರಾಮದಲ್ಲಿ ಶನಿವಾರ ಉಪವಿಭಾಗಾಧಿಕಾರಿ ಇಂಡಿ ಇವರ ಆದೇಶದನ್ವಯ ಮಲ್ಲಿಕಾರ್ಜುನ ದೇವಾಲಯದ ಆವರಣದಲ್ಲಿ ಸರಕಾರದ ಜನಕಲ್ಯಾಣ ಯೋಜನೆಗಳು ಗ್ರಾಮ ಮಟ್ಟದಲ್ಲಿ ಫಲಾನುಭವಿಗಳಿಗೆ ತಲುಪುವಲ್ಲಿ ಸಹಾಯಕವಾದ ಪಿಂಚಣಿ ಅದಾಲತ್ ಕಾರ್ಯಕ್ರಮ ಜರುಗಿತು.ಚಡಚಣ ಉಪ ತಹಶೀಲದಾರ ಕೆ.ವಾಯ್.ಹೊಸಮನಿ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರದಿಂದ ಬಡ ಹಾಗೂ ವಿಧವೆಯರು,ವಯೊವೃದ್ಧ ಮಹಿಳೆ ಅಥವಾ ಪುರುಷರು, ಸುಕನ್ಯೆಯರು, ವಿಕಲಚೇತನರಿಗೆ ಹೀಗೆ ಹಲವಾರು ಯೋಜನೆಗಳ ಸರಕಾರದ ಜನಕಲ್ಯಾಣ ಯೋಜನೆಗಳಲ್ಲಿ ಒಂದಾದ (ಮಾಶಾಸನ)ಪಿಂಚಣಿ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತವೆ ಎಂದು ಹೇಳಿದರು.ಬರಡೋಲ ಗ್ರಾಮದಿಂದ ವಿವಿಧ ಯೋಜನೆಗಳಲ್ಲಿ ೧೨ ಜನರು ನಮ್ಮ ಚಡಚಣ ತಹಶೀಲ್ದಾರ ಕಾರ್ಯಾಲಯಕ್ಕೆ ದಾಖಲೆ ಸಮೇತ ಅರ್ಜಿ ಸಲ್ಲಿಸಿದ್ದರು ಅದನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಅನುಮೋದನೆ ಯನ್ನು ಕೊಟ್ಟಿದ್ದಾರೆ ಅದರ ಫಲವಾಗಿ ಇಂದು ಪಿಂಚಣಿ ಅದಾಲತ್ನಲ್ಲಿ ವಿವಿಧ ಯೋಜನೆಗಳಲ್ಲಿ ೧೨ ಫಲಾನುಭವಿಗಳನ್ನು ಆಯ್ಕೆಮಾಡಿ ಪಿಂಚಣಿ ಆದೇಶ ಪತ್ರವನ್ನು ನೀಡಲಾಗುತ್ತಿದೆ ಎಂದು ಉಪ ತಹಶೀಲದಾರ ಕೆ.ವಾಯ್.ಹೊಸಮನಿ ಹೇಳಿದರು.ಈ ಸಂದರ್ಭದಲ್ಲಿ ಬರಡೋಲ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರೌಡಿ ಶೀಟರ್ ಪೊಲೀಸರ ಗುಂಡಿಗೆ ಬಲಿಯಾಗಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ.ಯುನಸ್ ಇಕ್ಲಾಸ್ ಪಟೇಲ್ (35) ಗುಂಡಿಗೆ ಬಲಿಯಾದ ರೌಡಿ ಶೀಟರ್. ನಟೋರಿಯಸ್ ಹಂತಕನಾಗಿದ್ದ ಯುನಸ್ ಪಟೇಲ್ನಿನ್ನೆ ಓರ್ವನಿಗೆ ಚಾಕೂ ತೋರಿಸಿ 25 ಸಾವಿರ ಹಣ ದರೋಡೆ ಮಾಡಿದ್ದನು. ಯುನಸ್ನಂತರ ಆತನ ಸ್ಕೂಟಿ ಸಹ ದರೋಡೆ ಮಾಡಿ ಪರಾರಿಯಾಗಿದ್ದ. ಈ ಕುರಿತು ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಯುನಸ್ ಆತನ ಸ್ವಗ್ರಾಮ ಆಲಮೇಲ ತಾಲೂಕಿನ ದೇವಣಗಾಂವ್ ಗ್ರಾಮದತ್ತ ತೆರಳುತ್ತಿರುವ ಮಾಹಿತಿ ಅರಿತ ಪೊಲೀಸರು ಸಿಂದಗಿ ತಾಲೂಕಿನ ರಾಂಪುರ್ ಬಳಿ ಆರೋಪಿ ಯೂನಿಸ್ ನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರ ಮೇಲೆ ಚಾಕೂನಿಂದ ಹಲ್ಲೆ ಮಾಡಲು ಯುನಸ್ ಯತ್ನಿಸಿದ್ದಾನೆ. ಇಬ್ಬರು ಪೊಲೀಸ್ ಕಾನ್ಸಸ್ಟೇಬಲ್ ಹಾಗೂ ಇನ್ಸಪೆಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆಯತಪ್ಪಿ ಬಿದ್ದ ಇನ್ಸಪೆಕ್ಟರ್ ಪ್ರದೀಪ್ ತಳಕೇರಿ, ಈ ವೇಳೆ ಎಚ್ಚರಿಕೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಸ್ವಉದ್ಯೋಗದ ವಿಪುಲ ಅವಕಾಶಗಳಿದ್ದು, ಅದಕ್ಕೆ ಪೂರಕವಾಗಿ ಮಹಿಳೆಯರು ಅಗತ್ಯ ಕೌಶಲ್ಯಗಳನ್ನು ಪಡೆಯುವುದು ಅತ್ಯವಶ್ಯಕವಾಗಿದೆ ಎಂದು ರೂಸಾ ಘಟಕದ ಹಿರಿಯ ನೋಡ್ಲ್ ಅಧಿಕಾರಿ ಪ್ರೊ. ಗಂಗಾಧರ ಸೋನಾರ ಹೇಳಿದರು.ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆಹಾರ ಸಂಸ್ಕರಣೆ ಮತ್ತು ಪೋಷಣೆ ವಿಭಾಗದಲ್ಲಿ ಪ್ರಧಾನಮಂತ್ರಿ ಉಚ್ಛ ಶಿಕ್ಷಾ ಅಭಿಯಾನದ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಗುರುವಾರ ಹಮ್ಮಿಕೊಂಡಿದ್ದ “ಆಹಾರ ಸಂಸ್ಕರಣೆ ಹಾಗೂ ಮೌಲ್ಯವರ್ಧನೆ ಮೂಲಕ ಮಹಿಳಾ ಉದ್ಯಮಿಗಳ ಸಬಲೀಕರಣ” ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಭಾರತದಲ್ಲಿ ಭೌಗೋಳಿಕ ಪ್ರದೇಶಗಳಿಗೆ ಅನುಗುಣವಾಗಿ ವಿವಿಧ ಬೆಳೆಗಳು ಬೆಳೆಯುತ್ತವೆ. ಅವುಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ಮೂಲಕ ಉತ್ತಮ ಆದಾಯವನ್ನು ಗಳಿಸಬಹುದಾಗಿದ್ದು, ಮಹಿಳೆಯರು ಸ್ವಾವಲಂಬಿ ಜೀವನಕ್ಕಾಗಿ ಆಹಾರ ಸಂಸ್ಕರಣಾ ಕ್ಷೇತ್ರವನ್ನು ಆಯ್ದುಕೊಳ್ಳಬಹುದಾಗಿದೆ ಎಂದರು.ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಾ. ಬಸವರಾಜ ಮೇಟಿ ಮಾತನಾಡಿ, ಆಹಾರೋದ್ಯಮವನ್ನು ಪ್ರಾರಂಭಿಸಲು ಅಗತ್ಯವಿರುವ ವೃತ್ತಿ ಕೌಶಲ್ಯಗಳ ಕುರಿತು ಮಾಹಿತಿ ನೀಡಿದರು. ಜೊತೆಗೆ ಸೀತಾಫಲ ಮತ್ತು ಪೇರು ಹಣ್ಣಿನ ಮೌಲ್ಯವರ್ಧನೆ ಕುರಿತು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಶಾಲೆ ಬಿಟ್ಟಿದ್ದ ಕಾರಣ ತನ್ನ ತಾಯಿ ಬೈದಳು ಎಂದು ೧೩ ವರ್ಷದ ಬಾಲಕಿ ನೇಣಿಗೆ ಶರಣಾದ ಘಟನೆ ಪಟ್ಟಣದ ಸಂಗಮೇಶ್ವರ ನಗರದಲ್ಲಿ ನಡೆದಿದೆ.ನಿಖಿತಾ ಚಲವಾದಿ(೧೩) ನೇಣಿಗೆ ಶರಣಾದ ದುರ್ದೈವಿ. ಪಟ್ಟಣದ ಎಂಜಿಎಂಕೆ ಶಾಲೆಯಲ್ಲಿ ೬ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಎರಡು ದಿನಗಳಿಂದ ಶಾಲೆ ಬಿಟ್ಟಿದ್ದಳು, ಶಾಲೆ ಬಿಡದಂತೆ ತಾಯಿ ಬೈದು ಬುದ್ದಿಮಾತು ಹೇಳಿದ್ದಕ್ಕಾಗಿ, ಮನನೊಂದು ತನ್ನ ಮಹಡಿ ಮನೆಯಲ್ಲಿ ಆರ್.ಸಿ.ಸಿ ಗೆ ಇರುವ ಕಬ್ಬಿಣದ ಹುಕ್ಕಿಗೆ ಸೀರೆಯಿಂದ ನೇಣಿಗೆ ಶರಣಾಗಿದ್ದಾಳೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜಿಲ್ಲಾ ಪಂಚಾಯತ್ ಜಿಲ್ಲಾ ಸಂಪನ್ಮೂಲ ತರಬೇತಿ ಕೇಂದ್ರ (ಡಿಪಿಆರ್ಸಿ) ವಿಜಯಪುರದಲ್ಲಿ ಮೀನುಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಗ್ರಾಮ ಪಂಚಾಯಿತಿಗೆ ಒಳಪಡುವ ಕೆರೆಗಳಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್ಆರ್ಎಲ್ಎಂ) ಯೋಜನೆ ಅಡಿ ರಚಿಸಲಾದ ಒಕ್ಕೂಟಗಳ ಸ್ವಸಹಾಯ ಸಂಘದ ಮಹಿಳೆಯರಿಗೆ ಸಮಗ್ರ ಮೀನು ಸಾಕಾಣಿಕೆ ವಿಷಯದ ಕುರಿತು ೨ ದಿನಗಳ ಕಾಲ ತರಬೇತಿ ಕಾರ್ಯಗಾರಕ್ಕೆ ಚಾಲನೆ ನೀಡಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಮಾತನಾಡಿದರು.“ಗ್ರಾಮೀಣ ಪ್ರದೇಶದ ಸ್ವಸಹಾಯ ಸಂಘದ ಮಹಿಳೆಯರ ಸಬಲೀಕರಣಕ್ಕಾಗಿ ವಿವಿಧ ಆದಾಯ ಉತ್ಪನ್ನ ಚಟುವಟಿಕೆಗಳನ್ನು ಎನ್ಆರ್ಎಲ್ಎಂ ಯೋಜನೆ ಅಡಿ ಕೈಗೊಳ್ಳಲಾಗುತ್ತಿದ್ದು ಮತ್ಸ್ಯ ಸಂಜೀವಿನಿ ಯೋಜನೆ ಅಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕೆರೆಗಳಲ್ಲಿ ಸ್ವಸಹಾಯ ಸಂಘದ ಮಹಿಳೆಯರು ಮೀನು ಸಾಕಾಣಿಕೆ ಮಾಡಲು ಆಸಕ್ತಿ ಮಹಿಳೆಯರಿಗೆ ತರಬೇತಿ ಆಯೋಜಿಸಲಾಗಿದ್ದು ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಲು ಹಾಗೂ ಮೀನು ಸಾಕಾಣಿಕೆ ಮಾಡಿ ಹೆಚ್ಚಿನ ಆದಾಯವನ್ನು ಪಡೆದುಕೊಳ್ಳಲು ತಿಳಿಸಿದರು.ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಎಮ್.ಎಚ್. ಬಾಂಗಿ ಮಾತನಾಡಿ “ “ಮೀನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚೆಗೆ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ರೈತ ಮಹಿಳೆಯರೊಂದಿಗೆ ರಾಷ್ಟ್ರೀಯ ರೈತ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ರೈತಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿ-ಸಿಬ್ಬಂದಿಗಳು, ರೈತ ಮಹಿಳೆಯರಿಂದ ಹಣ್ಣಿನ ಸಸಿ ನೆಡಲಾಯಿತು.ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ವಿಜಯಲಕ್ಷ್ಮಿ ಎಸ್.ಚವ್ಹಾಣ ಹಾಗೂ ಶ್ರೀಮತಿ ಪಾರ್ವತಿ ಪಾಟೀಲ ಅವರು ಮಾತನಾಡಿ, ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಮತ್ತು ಮಹಿಳೆಯರ ಸಾಧನೆಗಳ ಬಗ್ಗೆ ಮಾತನಾಡಿ, ೨೦೧೬ರಲ್ಲಿ ಭಾರತ ಸರ್ಕಾರವು ಅಕ್ಟೋಬರ್ ೧೫ನ್ನು ರಾಷ್ಟ್ರೀಯ ಮಹಿಳಾ ಕಿಸಾನ್ ದಿವಸ್ ಎಂದು ಆಚರಿಸಲು ನಿರ್ಧರಿಸಿತು ಎಂದು ಹೇಳಿದರು.ಕೃಷಿ ಅಧಿಕಾರಿಗಳಾದ ಶ್ರೀಮತಿ ಲಕ್ಷ್ಮಿ ಕಾಮಗೊಂಡ, ಶ್ರೀಮತಿ ಫಾತಿಮಾಬನು ಸುತಾರ ಹಾಗೂ ಶ್ರೀಮತಿ ಗೀತಾ ಭಜಂತ್ರಿ ಉಪಸ್ಥಿತರಿದ್ದರು.
ಉದ್ಘಾಟನೆ ದಿನಪತ್ರಿಕೆ ವಿಜಯಪುರ: ಇತ್ತೀಚೆಗೆ ಸುರಿದ ಮಳೆಯಿಂದ (ಅತಿವೃಷ್ಟಿಯಿಂದ) ಬಬಲೇಶ್ವರ ತಾಲೂಕಿನಲ್ಲಿ ಹಾನಿಗೊಳಗಾದ ಕೃಷಿ-ತೋಟಗಾರಿಕೆ ಬೆಳೆಗಳಿಗೆ ಕೈಗೊಂಡ ಜಂಟಿ ಸಮೀಕ್ಷೆಯ ಅಂತಿಮ ಪಟ್ಟಿಯನ್ನು ಗ್ರಾಮ ಪಂಚಾಯತ್ ಹಾಗೂ ಚಾವಡಿಗಳಲ್ಲಿ ಪ್ರಕಟಿಸಲಾಗಿದ್ದು, ಪ್ರಕಟಿತ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಅ.೨೩ರೊಳಗೆ ಲಿಖಿತ ರೂಪದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಗ್ರಾಮ ಆಡಳಿತ ಅಧಿಕಾರಿ-ರೈತ ಸಂಪರ್ಕ ಕೇಂದ್ರಕ್ಕೆ ಸಲ್ಲಿಸುವಂತೆ ಬಬಲೇಶ್ವರ ತಹಶೀಲ್ದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
