Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಸಹೋದರರ ಸಹೋದರಿಯರ ನಡುವೆ ಪ್ರೀತಿ, ವಿಶ್ವಾಸ, ಹಾಗೂ ರಕ್ಷಣೆ ನೀಡುವ ಸಂಕೇತವಾದ ರಕ್ಷಾ ಬಂಧನ ಹಬ್ಬ ಆಚರಿಸಿ ಶಾಲಾ ವಿಧ್ಯಾರ್ಥಿನಿಯರು ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಹಬ್ಬ ಆಚರಿಸಿದರು.ತಾಲ್ಲೂಕಿನ ಕನಮಡಿ ಗ್ರಾಮದ ಮಾಣಿಕೇಶ್ವರಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಸಹೋದರರ ದೀರ್ಘಾಯುಷ್ಯ, ಪ್ರಗತಿ ಮತ್ತು ಉತ್ತಮ ಆರೋಗ್ಯವನ್ನು ಬಯಸಿ ರಾಖಿ ಕಟ್ಟಿ‌ ಶುಭ ಹಾರೈಸಿದರು.ಈ ಶುಭ ದಿನದಂದು ಪ್ರತಿ ಮನೆಯಲ್ಲೂ ರಕ್ಷಾ ಬಂಧನ‌ ಹಬ್ಬ ಆಚರಿಸಿ ಸಿಹಿ ತಿನ್ನಿಸಿ ಸಹೋದರತ್ವ ಭಾವ ಗಟ್ಟಿಗೊಳಿಸಿದರು. ಆರತಿ ಬೆಳಗಿ ಹಣೆಗೆ ತಿಲಕ ಇಟ್ಟು ನಂತರ ಉಡುಗೋರೆ ನೀಡಿ ಸಂಭ್ರಮಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಣಿಯಾದ ಫಲಾನುಭವಿಗಳಿಗೆ ಮೇಸನ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಯ ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ ಕಾರ್ಡ್ ಮತ್ತು ಫಲಾನುಭವಿಯ ಭಾವಚಿತ್ರ, ಸದರಿ ದಾಖಲೆಗಳನ್ನು ಆ೨೫ರೊಳಗಾಗಿ ಷರತ್ತುಗಳ ಅನ್ವಯ ಸಿಂದಗಿ ವೃತ್ತ ಕಾರ್ಮಿಕ ನಿರೀಕ್ಷಕರ ಕಛೇರಿ, ಗಣಿಹಾರ ಬಿಲ್ಡಿಂಗ್, ಅಂಬೇಡ್ಕರ್ ಸರ್ಕಲ್ ಹಿಂದುಗಡೆ, ಚಾಂದಕವಟೆ ರಸ್ತೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹತ್ತಿರ ಸಿಂದಗಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಕಟ್ಟಡ ಕಾರ್ಮಿಕರಿಗೆ ತಿಳಿಸಲಾಗಿದೆ. ಸದರಿ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಜೇಷ್ಠತಾ ಆಧಾರದ ಮೇರೆಗೆ ವಿತರಿಸಲಾಗುವುದು. ಕಡ್ಡಾಯವಾಗಿ ಕಟ್ಟಡ ಕಾರ್ಮಿಕರು ನೋಂದಾಯಿಸಿ ಒಂದು ವರ್ಷ ಪೂರ್ಣಗೊಂಡಿರಬೇಕು. ಕಾರ್ಮಿಕ ಗುರುತಿನ ಚೀಟಿ ಚಾಲ್ತಿಯಲ್ಲಿರಬೇಕು. ಕಾರ್ಮಿಕ ಗುರುತಿನ ಚೀಟಿಯಲ್ಲಿ ನಮೂದಿಸಿದ ವೃತ್ತಿಯ ಕಿಟ್‌ಗಳನ್ನು ಮಾತ್ರ ವಿತರಿಸಲಾಗುವುದು. ಹಿಂದಿನ ಅವಧಿಯಲ್ಲಿ ಮೇಸನ್ ಕಿಟ್ ತೆಗೆದುಕೊಂಡವರಿಗೆ ಅವಕಾಶ ಇರುವುದಿಲ್ಲ ಎಂದು ಸಿಂದಗಿ ಕಾರ್ಮಿಕ ನಿರೀಕ್ಷಕರು ಪತ್ರಿಕಾ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಣಿಯಾದ ಫಲಾನುಭವಿಗಳಿಗೆ ಮೇಸನ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಯ ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ ಕಾರ್ಡ್ ಮತ್ತು ಫಲಾನುಭವಿಯ ಭಾವಚಿತ್ರ, ಸದರಿ ದಾಖಲೆಗಳನ್ನು ಆ೨೫ರೊಳಗಾಗಿ ಷರತ್ತುಗಳ ಅನ್ವಯ ಸಿಂದಗಿ ವೃತ್ತ ಕಾರ್ಮಿಕ ನಿರೀಕ್ಷಕರ ಕಛೇರಿ, ಗಣಿಹಾರ ಬಿಲ್ಡಿಂಗ್, ಅಂಬೇಡ್ಕರ್ ಸರ್ಕಲ್ ಹಿಂದುಗಡೆ, ಚಾಂದಕವಟೆ ರಸ್ತೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹತ್ತಿರ ಸಿಂದಗಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಕಟ್ಟಡ ಕಾರ್ಮಿಕರಿಗೆ ತಿಳಿಸಲಾಗಿದೆ. ಸದರಿ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಜೇಷ್ಠತಾ ಆಧಾರದ ಮೇರೆಗೆ ವಿತರಿಸಲಾಗುವುದು. ಕಡ್ಡಾಯವಾಗಿ ಕಟ್ಟಡ ಕಾರ್ಮಿಕರು ನೋಂದಾಯಿಸಿ ಒಂದು ವರ್ಷ ಪೂರ್ಣಗೊಂಡಿರಬೇಕು. ಕಾರ್ಮಿಕ ಗುರುತಿನ ಚೀಟಿ ಚಾಲ್ತಿಯಲ್ಲಿರಬೇಕು. ಕಾರ್ಮಿಕ ಗುರುತಿನ ಚೀಟಿಯಲ್ಲಿ ನಮೂದಿಸಿದ ವೃತ್ತಿಯ ಕಿಟ್‌ಗಳನ್ನು ಮಾತ್ರ ವಿತರಿಸಲಾಗುವುದು. ಹಿಂದಿನ ಅವಧಿಯಲ್ಲಿ ಮೇಸನ್ ಕಿಟ್ ತೆಗೆದುಕೊಂಡವರಿಗೆ ಅವಕಾಶ ಇರುವುದಿಲ್ಲ ಎಂದು ಸಿಂದಗಿ ಕಾರ್ಮಿಕ ನಿರೀಕ್ಷಕರು ಪತ್ರಿಕಾ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ‌ಕೆಲವು ಪದಾರ್ಥಗಳನ್ನು ಒಲೆಯ ಮೇಲೆ ಬೇಯಿಸಿ ಮಾಡಿದರೆ ಹಿತಕರ ಇನ್ನೂ ಕೆಲವು ಬೇಯಿಸದೇ ಮಾಡಿದರೆ ಹಿತಕರ. ಅವುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜೀವಸತ್ವ ಪಡೆಯಬಹುದು ಎಂದು ಹಿರಿಯ ವಿಜ್ಞಾನಿ ಕೆವಿಕೆ ಮುಖ್ಯಸ್ಥ ಡಾ.ಶಿವಶಂಕರ ಮೂರ್ತಿ ಹೇಳಿದರು.ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡದ ಆಶ್ರಯದಲ್ಲಿ ಆಯೋಜಿಸಲಾದ ಕೃಷಿ ಮೇಳದ ಭಾಗವಾಗಿ, ಒಲೆರಹಿತ ಅಡುಗೆ, ಕಸೂತಿ ಮತ್ತು ರಂಗೋಲಿ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಮಾತನಾಡಿದರು.ಇಂತಹ ವೇದಿಕೆಗಳು ಸೃಜನಶೀಲತೆ ಮತ್ತು ಅವಿಷ್ಕಾರವನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.ತೀರ್ಪುಗಾರರಾಗಿ ವಿಜಯಪುರ, ಡಾ. ಅರುಣ್ ಕುಮಾರ್ ಸತ್‌ರಡ್ಡಿ, ಪ್ರಾಥಮಿಕ ಶಾಲೆ, ಇಂಡಿ ಶ್ರೀಮತಿ ಭಗವಂತ ಗೌಡ, ಚಿತ್ರಕಲಾ ಶಿಕ್ಷಕರು, ಕಿತ್ತೂರಾಣ ಚೆನ್ನಮ್ಮ ವಸತಿ ಶಾಲೆ, ಅಂಜುಟಗಿಯ ಶಿವಾನಂದ ಜೇವೂರ್ ತೀರ್ಪು ನಿರ್ಣಯಿಸಿದರು.ಗೃಹ ವಿಜ್ಞಾನಿ ಡಾ. ವೀಣಾ ಚಂದಾವರಿ, ಡಾ. ಪ್ರೇಮ್‌ಚಂದ್, ಡಾ. ಬಾಲಾಜಿ ನಾಯಕ್, ಮಜೀದ ಜಿ. ಮತ್ತು ಶ್ರೀಮತಿ ಮಂಜುಳಾ ಹೊಸಮನಿ ಒಳಗೊಂಡ ಕಾರ್ಯಕ್ರಮ ಸಂಘಟಿಸಿದರು. ಅಡುಗೆ ಸ್ಪರ್ಧೆ ವಿಜೇತರು ಒಲೆರಹಿತ…

Read More

ವಿಜಯಪುರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಿ | ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ ಹಾನಿ ಕುರಿತಂತೆ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಯಿಂದಾದ ಹಾನಿ ಹಾಗೂ ಅದರ ಪರಿಣಾಮಗಳ ಕುರಿತು ಮಾಹಿತಿ ಪಡೆದುಕೊಂಡ ಸಚಿವರು, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹಾಳಾಗಿರುವ ರಸ್ತೆಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸಬೇಕು. ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆ ನಡೆಸಬೇಕು. ಜಿಪಿಎಸ್ ಫೋಟೋ ಬಳಸಿ ಯಾವುದೇ ರೈತರಿಂದ ದೂರು ಬರದಂತೆ ನೋಡಿಕೊಂಡು ಎಚ್ಚರಿಕೆ ವಹಿಸಬೇಕು. ಯಾವುದೇ ರೈತರಿಂದ ದೂರುಗಳು ಬಂದಲ್ಲಿ ಸಂಬಂಧಿಸಿದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾಯಕತತ್ವದ ಮಹತ್ವ ಸಾರಿದ ನುಲಿಯ ಚಂದಯ್ಯನವರ ಜಯಂತ್ಯೋತ್ಸವದ ನಿಮಿತ್ತ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ನುಲಿಯ ಚಂದಯ್ಯನವರ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಪುಷ್ಪ ನಮನ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಯಕ ಶರಣರ ತತ್ವಾದರ್ಶಗಳು ಸಾರ್ವಕಾಲಕ್ಕೂ ಪ್ರಸ್ತುತವಾಗಿವೆ. ಶರಣರ ಕಾಯಕ ಕಲ್ಪನೆಯ ತತ್ವಾದರ್ಶಗಳನ್ನು ಅವರ ಜೀವನ ಸಂದೇಶ ಬಹುಮೂಲ್ಯ ವಿಷಯಗಳನ್ನು ಜನಸಾಮಾನ್ಯರು ತಮ್ಮ ಜೀವನಗಳಲ್ಲಿ ಅಳವಡಿಕೊಂಡು ಶರಣರು ತೋರಿದ ಮಾರ್ಗದಲ್ಲಿ ಸಾಗಬೇಕು ಎಂದು ಹೇಳಿದರು.ಮೆರವಣಿಗೆಯ ಬಸವೇಶ್ವರ ವೃತ್ತದ ಮಾರ್ಗವಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಸಮಾವೇಶಗೊಂಡಿತು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ,ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಸಮಾಜಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಮಹೇಶ ಪೋತದಾರ, ಕೆಕೆಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ ಸೇರಿದಂತೆ ಹಲವು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನಗರ ಪಾಲಿಕೆ ೨೨ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರರನ್ನು ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ದಿನಾಂಕ:೧೧-೦೮-೨೦೨೫ ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ದಿನಾಂಕ:೧೧-೦೮-೨೦೨೫ರ ಬೆಳಿಗ್ಗೆ ೬ ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶಿಸಿದ್ದಾರೆ.ಈ ಸಮಯದಲ್ಲಿ ನಿಷೇಧಿತ ಪ್ರದೇಶದಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡಿ ಓಡಾಡುವುದನ್ನು ನಿಷೇಧಿಸಿದೆ..ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ ೨೦೦ ಮೀಟರ್ ಪ್ರದೇಶದಲ್ಲಿ ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು, ಕ್ಷಾರಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳನ್ನು ಈ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: 12ನೇ ಶತಮಾನದ ಕಾಲದಲ್ಲಿ ಭಾಷೆಯಲ್ಲಿ ಸಾಕಷ್ಟ್ಟು ಬದಲಾವಣೆ ಗಳಾಗಿವೆ. ನಮ್ಮಲ್ಲಿರುವ ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು. ಕಾಯಕ ನಿಷ್ಠೆಯಲ್ಲಿ ನುಲಿಯ ಚಂದಯ್ಯ ರಂತಹ ಶರಣರ ತತ್ವ ಸಿದ್ದಾಂತಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ ತಾಲ್ಲೂಕು ಅಧ್ಯಕ್ಷ ರೇವಣ್ಣ ಹತ್ತಳ್ಳಿ ಹೇಳಿದರು.ತಾಲ್ಲೂಕಿನ ಲಚ್ಯಾಣ ಗ್ರಾಮ ಪಂಚಾಯತ್ ವ್ಯಾಪಿಯ ಬಜಂತ್ರಿ ವಸ್ತಿಯಲ್ಲಿ ಕಾಯಕಯೋಗಿ ಶ್ರೀ ನೂಲಿ ಚಂದಯ್ಯನವರ 918 ನೇ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚಾಣೆ ಮಾಡಿ ಮಾತನಾಡಿದರು.ಕಾಯಕದಲ್ಲಿ ಕೈಲಾಸ ಕಂಡ ಮಹಾನ್ ಶರಣರು ನುಲಿಯ ಚಂದಯ್ಯ ಅವರು. ಲಿಂಗ ನಿಷ್ಠೆಗಿಂತ ಕಾಯಕ ನಿಷ್ಠೆ ಮೇಲು ಎಂದು ಅವರು ಸಾರಿದ್ದಾರೆ. ತನು ಮನ ಧನದಿಂದ ವಚನ ಸಾಹಿತ್ಯಕ್ಕೆ ಶ್ರಮಿಸಿದ್ದಾರೆ ಎಂದರು.ಈ ಸಂದರ್ಭದಲ್ಲಿ ಕೊರಮ ಸಮಾಜದ ತಾಲ್ಲೂಕ ಉಪಾಧ್ಯಕ್ಷ ಸಿದ್ದಲಿಂಗ ರಾ ಬಜಂತ್ರಿ ಅವರ ನೇತೃತ್ವದಲ್ಲಿ ಹಾಗೂ ಸಮಾಜದ ಮುಖಂಡರು ಕಾಯಕಯೋಗಿ ಶ್ರೀ ನೂಲಿ ಚಂದಯ್ಯನವರ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಜನರ ಸರ್ಕಾರ ಎಂಬ ಮಾತು ಸುಳ್ಳಾಗಿದೆ. ಅಧಿಕಾರಿಗಳು ಮನಸ್ಸು ಮಾಡಿದರೆ ಮಾತ್ರ ಕೆಲಸಗಳಾಗುತ್ತದೆ. ಏನೇ ಅಭಿವೃದ್ಧಿ ಕೆಲಸಗಳಾಗಲಿ ವೈಯಕ್ತಿಕ ಕೆಲಸಗಳಾಗಬೇಕಾದರೆ ಅಧಿಕಾರಿಗಳು ಮನಸ್ಸು ಮಾಡಬೇಕು. ಗ್ರಾಮಗಳ ಅಭಿವೃದ್ಧಿಗೆ ಪಿಡಿಒಗಳು ಮನಸ್ಸು ಮಾಡಬೇಕು ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ಮಹತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನೂತನವಾಗಿ ನಿರ್ಮಿಸಿದ ಗ್ರಾಮ ಪಂಚಾಯ್ತಿ ಕಟ್ಟಡ ರಾಜೀವ ಗಾಂಧಿ ಸೇವಾ ಕೇಂದ್ರವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ಅಧಿಕಾರಿ ಸಾರ್ವಜನಿಕರ ಸೇವೆಗಾಗಿ ಬಂದಿದ್ದೇವೆ ಎಂಬುದನ್ನು ಮರೆಯಬಾರದು. ಸಾರ್ವಜನಿಕರು ಕಟ್ಟುವ ಟ್ಯಾಕ್ಸನಿಂದ ನಾವೆಲ್ಲ ಸಂಬಳ ಪಡೆಯುತ್ತೇವೆ. ಆದ್ದರಿಂದ ಸಾರ್ವಜನಿಕರ ಸೇವೆ ಮಾಡಬೇಕು ಎಂದು ತಿಳಿಹೇಳಿದರು.ವಿಪ ಸದಸ್ಯ ಹಣಮಂತ ನಿರಾಣಿ ಮಾತನಾಡಿ, ಉತ್ತಮ ಶಿಕ್ಷಣದ ವ್ಯವಸ್ಥೆ, ಸ್ವಚ್ಛ ಗ್ರಾಮ, ರೈತರಿಗೆ ಹಣಕಾಸು ಒದಗಿಸುವ ಸಂಸ್ಥೆಗಳು ಉತ್ತಮವಾಗಿ ಕಾರ್ಯ ನಿರ್ವ ಹಿಸಿದರೆ ಗ್ರಾಮದ ಅಭಿವೃದ್ಧಿಯಾಗುತ್ತದೆ. ಗ್ರಾಮ ಸ್ವರಾಜ್ಯದ ಕನಸು ಕಂಡಿದ್ದ ಮಹತ್ಮಾಗಾಂಧಿ ಅವರ ಕನಸು ನನಸು ಮಾಡಲು ಗ್ರಾಪಂ ಆಡಳಿತ ಶ್ರಮಿಸಬೇಕು.…

Read More

ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿಜಮಖಂಡಿ: ತಾಲೂಕಿನ ಜಂಬಿಗಿ ಕೆ.ಡಿ ಹಾಗೂ ತುಂಗಳ ರಸ್ತೆ ಮಾರ್ಗದ ಮಧ್ಯೆದ ಜಂಬಗಿ ಕೆ.ಡಿ ಗ್ರಾಮದ ಗಿರಮಲ್ಲ ಬಿರಾದಾರ ತೋಟದ ವಸ್ತಿ ಕಾಡುಪ್ರಾಣಿಯೊಂದು ಇವರ ನಾಯಿ ಮರಿ ಮತ್ತು ಆಡು ತಿಂದು ಅವರ ಹೊಲದಲ್ಲಿ ಹೆಜ್ಜೆ ಗುರುತು ಪತ್ತೆಯಾದ ಹಿನ್ನಲೆಯಲ್ಲಿ ಸುತ್ತಲಿನ ಗ್ರಾಮಗಳಲ್ಲಿ ಹಾಗೂ ತೋಟದ ವಸ್ತಿ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.ಚಿರತೆ ಆಕಾರದ ಪ್ರಾಣಿಯನ್ನು ನೋಡಿದ್ದೇನೆ ಎಂದು ರೈತರಾದ ಗಿರಮಲ್ಲ ಬಿರಾದಾರ ಹೇಳುತ್ತಾರೆ. ಹಾಗೂ ಗ್ರಾಮಸ್ಥರು ಹೆಜ್ಜೆ ಗುರುತು ಹಾಗೂ ನಾಯಿಮರಿಯನ್ನು ತಿಂದು ಬಿಟ್ಟಿದ್ದನ್ನು ನೋಡಿ ಸಾವಳಗಿ ಪೊಲೀಸ್ ಠಾಣೆ ಹಾಗೂ ಅರಣ್ಯ ಅಧಿಕಾರಿಗಳಿಗೆ ಗಮನಕ್ಕೆ ತಂದಿರುತ್ತಾರೆ.ಇದಕ್ಕೆ ತಕ್ಷಣ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾವಳಗಿ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಜೊತೆಗೆ ಚರ್ಚಿಸಿ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಸಾವಳಗಿ ಉಪವಲಯ ಅರಣ್ಯ ಅಧಿಕಾರಿ ಮಹೇಶ್ ಗುಡಿಮನಿ, ಸಿಬ್ಬಂದಿಗಳಾದ ಮಲ್ಲಿಕಾರ್ಜುನ ಹಾರಗೊಂಡ, ಪ್ರಕಾಶ್ ಕರಾವಳಿ, ಈರಣ್ಣ ಪೋದ್ದಾರ,…

Read More