Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಎಲ್ಲಾ ಕಾಲುವೆಗಳಿಗೆ ಮುಂಗಾರು ಹಂಗಾಮಿಗೆ ಜುಲೈ 8 ರಿಂದ 120 ದಿನಗಳ ಕಾಲ ನೀರು ಹರಿಸಲು ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಜರುಗಿದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿದೆ.ಸದ್ಯ ಎರಡೂ ಜಲಾಶಯಗಳಲ್ಲಿಯೂ ಸಾಕಷ್ಟು ನೀರಿನ ಸಂಗ್ರಹವಿದ್ದು, ಒಳಹರಿವು ಕೂಡಾ ಹೆಚ್ಚಿದೆ. ಅದಕ್ಕಾಗಿ ಮುಂಗಾರು ಹಂಗಾಮಿಗೆ ನಿರಂತರ ನೀರು ಹರಿಸಲಾಗುತ್ತದೆ. ಒಳಹರಿವು ಸ್ಥಗಿತಗೊಂಡ ನಂತರ ಕಾಲುವೆಗೆ 14 ದಿನ ಚಾಲು, 10 ದಿನ ಬಂದ್ ಅವಧಿಯ ವಾರಾಬಂಧಿ ಅಳವಡಿಸಲಾಗುತ್ತದೆ.ಕಾಲುವೆಗಳ ಸ್ವಚ್ಛತೆ ಕಾರ್ಯ , ಪಂಪಸೆಟ್ ದುರಸ್ತಿ ಮತ್ತೀತರ ನಿರ್ವಹಣೆಯ ಕಾರ್ಯ ಕೈಗೊಂಡು, ಜುಲೈ 8 ರೊಳಗೆ ಕಾಲುವೆಗೆ ನೀರು ಹರಿಸಲು ಕಾಲುವೆಗಳನ್ನು ಸಿದ್ಧಗೊಳಿಸಿಕೊಳ್ಳಬೇಕು, ರೈತರಲ್ಲಿ ನೀರಿನ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಭೆಯಲ್ಲಿ ನಿರ್ಣಯಿಸಲಾಗಿದೆ.ಸಭೆಯಲ್ಲಿ ಸಚಿವ ಶರಣಬಸಪ್ಪ ದರ್ಶನಾಪುರ, ಶಾಸಕರಾದ ಜೆ.ಟಿ.ಪಾಟೀಲ, ಅಜಯ ಧರ್ಮಸಿಂಗ್, ರಾಜಾವೇಣುಗೋಪಾಲ ನಾಯಕ, ಮಾನಪ್ಪ ವಜ್ಜಲ, ವಿಠ್ಠಲ ಕಟಕದೋಂಡ, ಕರಿಯಮ್ಮ ನಾಯಕ, ರಾಜುಗೌಡ…

Read More

ಹೈಕೋರ್ಟ್‌ನ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ | ಸಿಬಿಐನಿಂದ ಸಮಗ್ರ ತನಿಖೆ ಕೋರಿ ರಿಟ್​ ಅರ್ಜಿ ಸಲ್ಲಿಸಿದ್ದ ಶಾಸಕರಾದ ಬಸನಗೌಡ ಪಾಟೀಲ್​ ಯತ್ನಾಳ್​, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್​ ಬಂಗಾರಪ್ಪ ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಹೈಕೋರ್ಟ್‌ ಮಂಗಳವಾರ ಮಹತ್ವದ ಆದೇಶ ನೀಡಿದೆ.ಹೈಕೋರ್ಟ್‌ನ ಈ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಸೀಮಿತವಾಗಿ ತನಿಖೆ ನಡೆಸುತ್ತಿತ್ತು. ಹೀಗಾಗಿ ಸಿಬಿಐನಿಂದ ಸಮಗ್ರ ತನಿಖೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್​ ಯತ್ನಾಳ್​, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್​ ಬಂಗಾರಪ್ಪ ಅವರು ರಿಟ್​ ಅರ್ಜಿ ಸಲ್ಲಿಸಿದ್ದರು.ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಹೈಕೋರ್ಟ್, ವಿಶೇಷ ತನಿಖಾ ತಂಡದ(SIT) ತನಿಖೆಯನ್ನು ರದ್ದುಗೊಳಿಸಿ, ಪ್ರಕರಣದ ಸಮಗ್ರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾವರ್ಧಕ ಸಂಘದ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಡಾ. ಸಂಜೀವ ಜೋಶಿ, ವೈದ್ಯರು ಹೇಗೆ ರೋಗಿಗಳ ಶುಶ್ರೂಷೆ ಮಾಡಿ ರೋಗವನ್ನು ಗುಣಪಡಿಸುವರೋ ಅದೇ ರೀತಿ ಸಮಾಜಕ್ಕೆ ಚಿಕಿತ್ಸೆ ನೀಡಿ ಸಾಮಾಜಿಕ ಸ್ವಾಸ್ಥವನ್ನು ಕಾಪಾಡಿದವರು ಬಸವಣ್ಣ, ಸ್ವಾಮಿ ವಿವೇಕಾನಂದ, ರಾಮಕೃಷ್ಣ ಪರಮಹಂಸ ಕನಕದಾಸರು ಪುರಂದರದಾಸರು ಸಾಮಾಜಿಕ ಚಿಕಿತ್ಸಕರನ್ನು ನಾವು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.ವೈದ್ಯ ಲೋಕದ ವೈಜ್ಞಾನಿಕ ಚಿಂತನ ಮಂಥನ ನಡೆಸುವ ಈ ಸುದಿನದಂದು ಸಾರ್ವಜನಿಕರಲ್ಲಿ ವೈದ್ಯರ ಪಾತ್ರ ಮತ್ತು ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಹಾಗೂ ರೋಗಿಗಳಲ್ಲಿ ಆತ್ಮಸ್ಥೈರ್ಯ ತುಂಬಿ ಸoಯಮ , ಪ್ರೀತಿ , ಕರುಣೆ ಮಾನವೀಯತೆ ಮೆರೆಯುವ ಪವಿತ್ರ ಕ್ಷೇತ್ರವೆಂದರೆ ವೈದ್ಯಕೀಯ ಕ್ಷೇತ್ರ, ವೈದ್ಯರಿಗೆ ದೇವರು ನೀಡಿದ ಪವಿತ್ರ ಕರ್ತವ್ಯವೆಂದು ಭಾವಿಸಿ ಸಮಾಜದ ಋಣ ತೀರಿಸಬೇಕಾಗಿದೆ ಎಂದು ತಿಳಿಸಿದರು.ವೇದಿಕೆಯ ಮೇಲೆ ಪ್ರಧಾನ ಗುರುಮಾತೆ ಶ್ರೀಮತಿ ರೂಪಾ…

Read More

ವಿಜಯಪುರದಲ್ಲಿ ಪ್ರೊ.ಸಿದ್ದಣ್ಣ ಲಂಗೋಟಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕದಲ್ಲಿ ಹುಟ್ಟಿಕೊಂಡ ಬಂಡಾಯ ಸಾಹಿತ್ಯಕ್ಕೆ ಮುನ್ನುಡಿ ಬರೆದು ಮುನ್ನಡೆಸಿದವರು. ಕುಮಾರ ಕಕ್ಕಯ್ಯ ಪೋಳರು ಅವರು ಬಿ.ಆರ್. ಅಂಬೇಡ್ಕರರಂತೆ ಶೋಷಣೆಗೆ ಒಳಗಾಗಿ ನೋವು ಮತ್ತು ಅವಮಾನ ಉಂಡು ಯಾತನೆ ಪಟ್ಟರು. ಡೋಹರ ಸಮುದಾಯಕ್ಕೆ ಸೇರಿದ ಅವರು ತಹಶೀಲ್ದಾರರಾಗಿ ಸ್ವಯಂ ನಿವೃತ್ತಿ ಹೊಂದಿ ಸಮಾಜ ಸೇವೆಗೆ ತೊಡಗಿಸಿದರು. ಅವರ ಹೆಸರು ಬಿ.ಎಸ್. ಪೋಳ ಕುಮಾರ ಕಕ್ಕಯ್ಯ ವಚನಾಂಕಿತದಿಂದ ಸಾವಿರಾರು ವಚನಗಳನ್ನು ರಚಿಸಿ ಆಧುನಿಕ ವಚನಕಾರರಾದರು. ದೀನ ದಲಿತರು ಮಹಿಳೆಯರ ನೋವುಗಳಿಗೆ ಧ್ವನಿಯಾಗಿ ಬಂಡಾಯ ಸಾಹಿತ್ಯ ಬರೆದರು. ಎಂದು ಪ್ರೊ. ಸಿದ್ದಣ್ಣ ಲಂಗೋಟಿ ಅವರು ಹೇಳಿದರು.ಅವರು ಶರಣ ಸಾಹಿತ್ಯ ಪರಿಷತ್ತು, ಎ.ಎಸ್. ಹಿಪ್ಪರಗಿ ಪ್ರತಿಷ್ಠಾನ, ಜಿಲ್ಲಾ ವಿರಶೈವ ಲಿಂಗಯತ ಮಹಾಸಭಾ ಮತ್ತು ಕುಮಾರ ಕಕ್ಕಯ್ಯ ಪೋಳ ಪ್ರತಿಷ್ಠಾನಗಳ ಸಂಯುಕ್ತಾಶಯದಲ್ಲಿ ಡನೆದ ಕುಮಾರ ಕಕ್ಕಯ್ಯ ಪೋಳ ಲಿಂ. ಸಿದ್ದಣ್ಣ ಕೋಳೂರು ಮಲಕಾಜಪ್ಪ ವಡವಡಗಿ ಅವರ ದತ್ತಿ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಶರಣ ಸಾಹಿತ್ಯಕ್ಕೆ ಕುಮಾರ ಕಕ್ಕಯ್ಯ ಪೋಳರು ಅಪಾರ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಸರಕಾರಿ ಆದರ್ಶ ವಿದ್ಯಾಲಯ ಇಂಡಿಯಲ್ಲಿ 2025-26 ನೇ ಸಾಲಿನಲ್ಲಿ 7, 8 ಮತ್ತು 9ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಮಾನ್ಯ ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಕರ್ನಾಟಕ ಬೆಂಗಳೂರು ರವರ ಸುತ್ತೋಲೆಯ ಮೇರೆಗೆ ತರಗತಿವಾರು ಮತ್ತು ರೋಸ್ಟರ್‌ ಆಧಾರದ ಮೇಲೆ ಸಂಸ್ಥೆಯಲ್ಲಿ ಖಾಲಿ ಇರುವ 7ನೇ ತರಗತಿಯಲ್ಲಿ 17 ಸೀಟುಗಳು, 8ನೇ ತರಗತಿಯಲ್ಲಿ 12 ಸೀಟುಗಳು, 9ನೇ ತರಗತಿಯಲ್ಲಿ 10 ಸೀಟುಗಳು ಖಾಲಿ ಇದ್ದು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ದಿನಾಂಕ: 03-07-2025 ರಿಂದ 10-07-2025 ರವರೆಗೆ ಸರಕಾರಿ ಆದರ್ಶ ವಿದ್ಯಾಲಯ ಇಂಡಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಮರಳಿ ಶಾಲೆಗೆ ಸಲ್ಲಿಸುವದು.ಪರೀಕ್ಷಾ ದಿನಾಂಕ : 25-07-2025 ರಂದು ಸರಕಾರಿ ಆದರ್ಶ ವಿದ್ಯಾಲಯ ಇಂಡಿಯಲ್ಲಿ ಜರುಗುವದು ಎಂದು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತಾ ಹುನ್ನೂರ ಮತ್ತು ಮುಖ್ಯೋಪಾಧ್ಯಾಯ ಎಸ್.ಜಿ.ಬನಸೋಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ ಮಹಿಳಾ ತರಬೇತಿ ಯೋಜನೆಯಡಿ ಫೀಲ್ಡ್ ಟೆಕ್ನಶಿಯನ್ * ಕಂಪ್ಯೂಟಿಂಗ್ ಪೆರಿಫೆರಲ್ಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.೨೦೨೪-೨೫ನೇ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿ ನೊಂದಣಿಯಾದ ಇಂಡಿ ತಾಲೂಕಿನ ಎಸ್.ಕೆ.ಕಂಪ್ಯೂಟರ್ ಇನ್ಸ್ಟಿಟ್ಯೂಟ್ ಇಂಡಿ ಸಂಸ್ಥೆ ಮೂಲಕ ಜಿಲ್ಲೆಯಲ್ಲಿ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳು ಎಸ್.ಕೆ. ಕಂಪ್ಯೂಟರ್ ಇನ್ಸಟಿಟ್ಯೂಟ್ ಎ.ಬಿ.ಪಾಟೀಲ ಕಾಂಪ್ಲೆಕ್ಸ್, ಸಿಂದಗಿ ರಸ್ತೆ, ಇಂಡಿ ಸಂಸ್ಥೆಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿ ಇತ್ತೀಚಿನ ಭಾವಚಿತ್ರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ : ೧೦-೦೬-೨೦೨೫ರೊಳಗಾಗಿ ದ್ವಿಪ್ರತಿಯಲ್ಲಿ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೮೨೯೬೨೮೭೩೬೩, ೯೯೭೨೭೮೫೭೭೧ ಸಂಖ್ಯೆಗೆ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನ ಪಡೆಯಲು ಪ್ರಸಕ್ತ ೨೦೨೫-೨೬ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆಅರ್ಜಿಯನ್ನು https://swdservice.karnataka.gov.in/PrizeMoneyClientAPP/ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ-ತಾಲೂಕಾ ಮಟ್ಟದ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಉಪನಿರ್ದೇಶಕ ಪುಂಡಲೀಕ ಮಾನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಜು.೦೨ ರ ಬೆಳಿಗ್ಗೆ ೧೦ಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಆಯೋಜಿಸಲಾಗಿದೆ.ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಲಿದ್ದಾರೆ.ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಗೌರವ ಉಪಸ್ಥಿತರಿರಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ್ ಎನ್, ವಿಧಾನ ಪರಿಷತಿನ ಶಾಸಕರಾದ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ…

Read More

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಟ್ರಸ್ಟ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ ಘೋಷ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗೆ ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸುವ ಮೂಲಕ ಅಗತ್ಯ ಕ್ರಮ ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಟ್ರಸ್ಟ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ ಘೋಷ್ ಅವರು ಹೇಳಿದರು.ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವರ ಶೈಕ್ಷಣಿಕ ಗುಣಮಟ್ಟ ಸುಧಾರಿಸಿ, ಉತ್ತಮ ಫಲಿತಾಂಶಕ್ಕಾಗಿ ಸೂಕ್ಷ್ಮ ಯೋಜನೆಗಳನ್ನು ರೂಪಿಸಿ, ಆ ಯೋಜನೆಯ ಅನುಗುಣವಾಗಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಸೂಚಿಸಿದರು.ಅನುದಾನಿತ ಶಾಲೆಗಳಲ್ಲಿ ಅಗತ್ಯಕ್ಕೆ ಅನುಸಾರವಾಗಿ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮಗಳನ್ನು ಕೈಗೊಳ್ಳವಂತೆ ಸಂಸ್ಥೆಗಳಿಗೆ ಸೂಚಿಸಬೇಕು ಹಾಗೂ ಫಲಿತಾಂಶ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಮುದಾಯ ಭವನ, ರಸ್ತೆ ಅಭಿವೃದ್ಧಿ, ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ ನೆರವೇರಿಸಿದರು.ವಿಜಯಪುರ ತೊರವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವರಸಪುರದ ವಿಜಯ ಕಾಲೊನಿಯ ಶ್ರೀ ಹನುಮಾನ ದೇವಸ್ಥಾನದ ಹತ್ತಿರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಮಂಜೂರಿಸಲಾದ ರೂ.5 ಲಕ್ಷ ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ, ನಗರದ ಅಟಲ್ ಬಿಹಾರಿ ವಾಜಪೇಯಿ ರಸ್ತೆಯಲ್ಲಿ ನಿರ್ಮಾಣ ಮಾಡಲಾದ ಕೊಳಗೇರಿ ಮನೆಗಳ ಹತ್ತಿರ, ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮಂಜೂರಿಸಲಾದ ರೂ.56.35 ಲಕ್ಷ ಅನುದಾನದಲ್ಲಿ ಪ್ರಧಾನಮಂತ್ರಿ ಅವಾಸ ಯೋಜನೆಯಡಿ ನಿರ್ಮಿಸಲಾದ ಜಿ+1 ಮಾದರಿ ಮನೆಗಳಿಗೆ ಕೀರು ನೀರು ಸರಬರಾಜು, ಸಿಸಿ ರಸ್ತೆ ಹಾಗೂ ಆರ್.ಸಿ.ಸಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.ನಗರದ ವಾರ್ಡ್ ನಂ.24ರ ಕಮಾನಖಾನ್ ಬಜಾರ್ (ಗೌಡರ ಓಣಿ)ದಲ್ಲಿ ಬರುವ ಶ್ರೀ ಬಸವಣ್ಣ ದೇವರ ಪುರಾತನ ದೇವಸ್ಥಾನದ ಹತ್ತಿರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಮತ್ತು ಮುಜರಾಯಿ ಇಲಾಖೆಯಿಂದ ಮಂಜೂರಿಸಿದ…

Read More