Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನ- ವಿವೇಕಾನಂದ. ಎಚ್. ಕೆ.ಮೊ: 9663750451..Watsapp)9844013068 ಉದಯರಶ್ಮಿ ದಿನಪತ್ರಿಕೆ ಧರ್ಮಸ್ಥಳದ ಪರ ವಿರೋಧದವಾದ ವಿವಾದಗಳು, ಚರ್ಚೆಗಳು, ಮಾತುಗಳು ದಿಕ್ಕು ತಪ್ಪುತ್ತಿದೆ. ಭಾಷೆ ಮತ್ತು ಭಾವನೆಗಳು ತೀರಾ ಕೆಳಹಂತಕ್ಕೆ ಇಳಿದಿವೆ ಮತ್ತು ಕ್ರೌರ್ಯವನ್ನು ಸೃಷ್ಟಿಸುತ್ತಿವೆ ಹಾಗು ಹೊರಹಾಕುತ್ತಿದೆ.ನಮ್ಮದೇ ಜನಗಳು, ನಾವೆಲ್ಲ ಭಾರತೀಯರು, ಬಹುತೇಕ ಕನ್ನಡಿಗರು, ಹೆಚ್ಚು ಕಡಿಮೆ ಸಹಪಾಠಿಗಳು, ಸಹವರ್ತಿಗಳು, ಸಮಕಾಲೀನರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ, ಎಲ್ಲರಿಗೂ ಬಹುತೇಕ ವಿದ್ಯಾಭ್ಯಾಸ ಇದೆ. ಸಾಮಾನ್ಯ ತಿಳುವಳಿಕೆಯೂ ಇದೆ. ಪರವಾಗಿ ವಾದ ಮಾಡುವವರಿಗೆ ಧರ್ಮ, ಭಕ್ತಿ, ಸಂಪ್ರದಾಯ ಹೆಚ್ಚು ಕಡಿಮೆ ಮೂಲವಾದರೆ, ವಿರೋಧವಾಗಿ ಮಾತನಾಡುತ್ತಿರುವವರಿಗೆ ಬಹುತೇಕ ಬುದ್ಧ, ಗಾಂಧಿ, ಅಂಬೇಡ್ಕರ್, ಬಸವಣ್ಣ, ವಿವೇಕಾನಂದ ಮುಂತಾದವರ ಚಿಂತನೆಗಳೇ ಮೂಲಾಧಾರ. ಇಷ್ಟರ ನಡುವೆಯೂ ಈ ಜನಗಳ ವರ್ತನೆ ಎಷ್ಟು ಕೆಳಮಟ್ಟಕ್ಕೆ ಇಳಿದಿದೆ ಎಂದರೆ ಕುಡುಕನೊಬ್ಬ ತೀರಾ ನಿಯಂತ್ರಣ ಮೀರಿ ಕುಡಿದಾಗ ಆಡುವ ಮಾತುಗಳಂತೆ, ಹುಚ್ಚನೊಬ್ಬನ ಹೊಲಸು ಮಾತುಗಳಂತೆ, ಮಾನಸಿಕ ರೋಗಿಯೊಬ್ಬನ ಸ್ಥಿಮಿತ ಕಳೆದುಕೊಂಡ ಭಾಷೆಯಂತೆ, ಕೆಟ್ಟ ಕೊಳಕ ಭಾಷೆಯನ್ನು ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಳಸುತ್ತಿದ್ದಾರೆ.ತನ್ನ ಸಹವರ್ತಿಗಳ ಬಗ್ಗೆ…
ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಶರಣಮಾಸದ 16 ನೆಯ ದಿವಸದ ಉಪನ್ಯಾಸ ಮಾಲಿಕೆಯಲ್ಲಿ ಪ್ರೊ. ಪೊಲೀಸ್ ಪಾಟೀಲ ಅವರು ಜಾನಪದ ಸಾಹಿತ್ಯದಲ್ಲಿ ಶರಣರ ನೆನಹು ಎನ್ನುವ ವಿಷಯದ ಬಗೆಗೆ ಅತ್ಯಂತ ಸಮರ್ಪಕವಾಗಿ ನಮ್ಮೊಡನೆ ಹಂಚಿಕೊಂಡರು.ಜಾನಪದಿಗರ ತ್ರಿಪದಿಗಳಲ್ಲಿ, ಹಾಡುಗಳಲ್ಲಿ,ತೊಂಬತ್ತರಷ್ಟು ಪಾಲು ಬಸವಣ್ಣನವರನ್ನು ನೆನೆಯುವುದನ್ನು ನಾವು ಕಾಣುತ್ತೇವೆ. ಹಂತಿ ಹೊಡೆಯುವಾಗ, ರಾಶಿ ಮಾಡುವಾಗ ಬೀಸುವಾಗ, ಕುಟ್ಟುವಾಗ ಹಾಡುವ ಪದಗಳಸ್ವಾರಸ್ಯ, ಅದರ ತಿರುಳು, ಮಹತ್ವವನ್ನು ಹೇಳುತ್ತಾ ಹಂತಿಯ ಅನಸ್ವರ ತೆಗೆದರೆ ಹತ್ತಿ ಆಗುತ್ತದೆ. ಹತ್ತಿ ಎಂದರೆ ಗಿರಿಯನ್ನು ಹತ್ತುವುದು, ಪ್ರಪಂಚವೆಂಬ ಕಣದಲ್ಲಿ ತನ್ನ ತಾನು ಅರಿಯುವುದು, ಪ್ರಪಂಚ, ಪಾರಮಾರ್ಥ ಮತ್ತು ಪರಾರ್ಥ ಎಂಬ ಮೂರು ಹುರಿಯನ್ನು ಹೊಸೆದು ಬದುಕನ್ನು ಹೇಗೆ ಕಟ್ಟಿಕೊಳ್ಳಬೇಕು ಎನ್ನುವುದನ್ನು ಜಾನಪದಿಗರು ಹೇಳುವುದನ್ನು ಅತ್ಯಂತ ಸರಳ ರೀತಿಯಲ್ಲಿ ಹೇಳಿದರುಜಾನಪದಿಗರು ಎರಡು ನೆಲೆಯಲ್ಲಿ ಬಸವಣ್ಣನವರನ್ನು ಕಂಡುಕೊಂಡರು. ಹೆಗಲಿಗೆ ಹೆಗಲು ಕೊಟ್ಟು, ಕೃಷಿಗೆ ಆಧಾರಿತವಾದ ಎತ್ತು ಬಸವಣ್ಣ ಮತ್ತು ಅವರ ಬದುಕನ್ನು ಎತ್ತಿ ಕೊಟ್ಟ, ಆನುಭಾವಿಕ ನೆಲೆಯಲ್ಲಿ ಉದ್ದರಿಸಿದ,…
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಜನತಾ ಪ್ರಾಥಮಿಕ ಗ್ರಾಹಕರ ಸಹಕಾರಿ ಸಂಘಕ್ಕೆ ೨೦೨೫-೨೬ ನೇ ಸಾಲಿನಿಂದ ಮುಂದಿನ ಐದು ವರ್ಷಗಳ ಅವಧಿಗೆ ನೂತನ ಪದಾದಿಕಾರಿಗಳನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.ಡಾ.ಎಂ ಎಲ್ ವಡ್ಡರ್ ಅಧ್ಯಕ್ಷರಾಗಿ, ಜಿ ಎಂ ಗುಮಶೆಟ್ಟಿ ಉಪಾಧ್ಯಕ್ಷರಾಗಿ ಹಾಗೂ ಸದಸ್ಯರಾಗಿ ಎಸ್ ಎಂ ಕಡಕೋಳ, ಡಿ ಎಸ್ ಕಡಕೋಳ, ಎಸ್ ಎಸ್ ಪಾಟೀಲ, ಎಸ್ ಸಿ ದೇಸಾಯಿ, ಬಿ ಎಸ್ ಅಡಕಿ, ಜಿ ಎಸ್ ಚಿಕ್ಕಮಠ,ಬಿ ಎಂ ಬೇನಾಳ, ಎಸ್ ಸಿ ಚಳ್ಳಗಿ, ಎಂ ಎಂ ವಲ್ಲಿಬಾಯಿ ಸದಸ್ಯರಾಗಿ ಹಾಗೂ ಎಸ್ ಎಸ್ ದೇಸಾಯಿ,ಜಿ ಐ ಝಳಕಿ ಮಹಿಳಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದರು, ಚುನಾವಣಾಧಿಕಾರಿಯಾಗಿ ಡಿ ಬಿ ಅಡಕಿ ಕಾರ್ಯನಿರ್ವಹಿಸಿದರು ಎಂದು ಕಾರ್ಯದರ್ಶಿ ಎಂ ಎಂ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಉದಯರಶ್ಮಿ ದಿನಪತ್ರಿಕೆ*ಬಸವನಬಾಗೇವಾಡಿ: ಎಲ್ಲ ಸಂಪನ್ಮೂಲಗಳಿಂದ ಕೂಡಿದ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅನೇಕ ಕೋಶಗಳನ್ನು ರಚಿಸಿ ಪ್ರತಿಯೊಂದು ಕೋಶದ ಅಡಿಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕೆಲಸ ಮಾಡುವ ಪದ್ಧತಿ ನಮ್ಮ ಮಹಾವಿದ್ಯಾಲಯದಲ್ಲಿದೆ ಎಂದು ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕ ಪ್ರೊ. ಸಿ. ಪಿ ಧಡೇಕರ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹೊಸದಾಗಿ ಪ್ರವೇಶ ಪಡೆದ ಬಿಎ ಮತ್ತು ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂಥ ನಿಟ್ಟಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ದೀಕ್ಷಾರಂಭ (ಒರಿಯೆಂಟೇಶನ್ ಪ್ರೋಗ್ರಾಮ್) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಮಹಾವಿದ್ಯಾಲಯದಲ್ಲಿ ಐಕ್ಯೂ ಎಸಿ, ರಿಸರ್ಚ್, ಕಲ್ಚರಲ್, ಟೈಮ್ ಟೇಬಲ್, ಎಸ್ಸಿಎಸ್ಟಿ ಸ್ಕಾಲರ್ಷಿಪ್, ಅಲುಮಿನಿ ಕಮಿಟಿ, ಇಂಟರ್ನಲ್ ಎಕ್ಸಾಮಿನೇಷನ್, ಪೇರೆಂಟ್ಸ್ ಅಂಡ್ ಟೀಚರ್ ಕಮಿಟಿ, ಲೈಬ್ರರಿ, ಸ್ಪೋರ್ಟ್ಸ್, ವಿಮೆನ್ ಎಂಪವರ್ ಮೆಂಟ್ ಪ್ರಿವೆನ್ಷನ್ ಆಫ್ ಸೆಕ್ಸವಲ್ ಕಮಿಟಿ, ಪ್ರೆಸ್ ಅಂಡ್ ಪಬ್ಲಿಸಿಟಿ ಕಮಿಟಿ, ಲ್ಯಾಂಗ್ವೇಜ್ ಫೋರಂ, ಎನ್ಎಸ್ಎಸ್, ಯೂತ್ ರೆಡ್ ಕ್ರಾಸ್ ಅಂಡ್…
ಉದಯರಶ್ಮಿ ದಿನಪತ್ರಿಕೆ ಬಸವವನಬಾಗೇವಾಡಿ: ತಾಲೂಕಿನ ಉಕ್ಕಲಿ ಗ್ರಾಮದ ಸರ್ಕಾರಿ ಉರ್ದು ಬಾಲಕರ ಪ್ರಾಥಮಿಕ ಶಾಲೆಯನ್ನು ಸರ್ಕಾರ ಉನ್ನತೀಕರಿಸಿ ಪ್ರೌಢಶಾಲೆ ಹಂತಕ್ಕೆ ಮೇಲ್ದರ್ಜೆಗೆ ಏರಿಸಿ ಆದೇಶ ಹೊರಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರೌಢ ಶಾಲಾ ವಿಭಾಗದ ಅಧೀನ ಕಾರ್ಯದರ್ಶಿ ಎಸ್. ಪ್ರಕಾಶ ಆದೇಶ ಹೊರಡಿಸಿದ್ದಾರೆ. ಬಸವನಬಾಗೇವಾಡಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಇವರ ಪರಿಶ್ರಮದ ಫಲವಾಗಿ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೆ ಏರಿಕೆಯಾಗಿದೆ.ಸಚಿವ ಶಿವಾನಂದ ಪಾಟೀಲ ಅವರು ತಮ್ಮೂರಿನ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಾಳಜಿ ತೋರಿದ್ದಕ್ಕೆ ಉಕ್ಕಲಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ, ಸಚಿವರನ್ನು ಅಭಿನಂದಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮೊದಲು ಮೂರು ದಿನಗಳ ನಡೆಯುತ್ತಿದ್ದ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ಐತಿಹಾಸಿಕ ಜಾತ್ರಾಮಹೋತ್ಸವವು ಕಳೆದ ಮೂರು ವರ್ಷಗಳಿಂದ ಐದು ದಿನಗಳ ಕಾಲ ನಡೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಎಲ್ಲರ ಸಹಕಾರದಿಂದ ಐತಿಹಾಸಿಕ ಜಾತ್ರೆಗೆ ಮೆರಗು ಬರುತ್ತಿರುವುದು ಹರ್ಷದಾಯಕ ಸಂಗತಿ. ಈ ವರ್ಷದ ಜಾತ್ರಾಮಹೋತ್ಸವವು ಆ. ೧೧ ರಿಂದ ೧೫ ರವರೆಗೆ ಐದು ದಿನಗಳ ಕಾಲ ನಡೆಯಲಿದೆ. ಈ ವರ್ಷದ ಜಾತ್ರಾಮಹೋತ್ಸವದ ಯಶಸ್ವಿಗೆ ವಿವಿಧ ಇಲಾಖೆಯ ಸಹಕಾರ ಸೇರಿದಂತೆ ಎಲ್ಲ ಜನರ ಸಹಕಾರ ಅಗತ್ಯ ಎಂದು ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.ಪಟ್ಟಣದ ಬಸವೇಶ್ವರ ದೇವಾಲಯದ ಅಂತರಾಷ್ಟ್ರೀಯ ಆವರಣದಲ್ಲಿರುವ ನಂದೀಶ್ವರ ರಂಗಮಂದಿರದ ಮುಂಭಾಗ ಗುರುವಾರ ಸಂಜೆ ಮೂಲನಂದೀಶ್ವರ(ಬಸವೇಶ್ವರ) ಜಾತ್ರಾಮಹೋತ್ಸವದಂಗವಾಗಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಲವು ವರ್ಷಗಳಿಂದ ನಡೆಯುತ್ತಿರುವ ಬಸವೇಶ್ವರ ಜಾತ್ರೆಯಲ್ಲಿ ಕಳೆದ ಎರಡು ವರ್ಷದ ಹಿಂದೆ ಪಲ್ಲಕ್ಕಿ ಉತ್ಸವದ ಸಂದರ್ಭದಲ್ಲಿ ಕಳ್ಳರು ಜನರ ಕೊರಳಲ್ಲಿದ್ದ ಬಂಗಾರದ ಚೈನ್ ಹೊಡೆದಿದ್ದು ಬಿಟ್ಟರೆ ಯಾವುದೇ ಅಹಿತಕರ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಗಳ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.೮೦ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ಮಕ್ಕಳ ಪ್ರತಿಭಾ ಪುರಸ್ಕಾರ ಆ.೯ ರಂದು ಮಧ್ಯಾನ್ಹ ೩ ಗಂಟೆಗೆ ಬಾಗಲಕೋಟದ ಕಲಾಭವನದಲ್ಲಿ ಹಮ್ಮಿಕೊಂಡಿದೆ. ಬಸವನಬಾಗೇವಾಡಿ ತಾಲೂಕಿನಿಂದ ಆಯ್ಕೆಯಾದ ಮಕ್ಕಳು ತಮ್ಮ ಪಾಲಕರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸಿ ಸಂಘದ ಪ್ರತಿಭಾ ಪುರಸ್ಕಾರ ಸ್ವೀಕರಿಸಬೇಕೆಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನಲ್ಲಿ ಆಯ್ಕೆಯಾದ ಬೆಳೆ ಸಮೀಕ್ಷೆಗಾರರು ಬೆಳೆ ಸಮೀಕ್ಷೆ ಮಾಡುವಾಗ ಬರುವ ನ್ಯೂನತೆಗಳನ್ನು ಸರಿಪಡಿಸಿಕೊಂಡು ನಿಖರವಾದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಬೇಕೆಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್.ಯರಝರಿ ಹೇಳಿದರು.ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಕೃಷಿ ಇಲಾಖೆಯಿಂದ ೨೦೨೫-೨೬ ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗಾಗಿ ಆಯ್ಕೆಯಾದ ಖಾಸಗಿ ನಿವಾಸಿಗಳಿಗೆ (ಬೆಳೆ ಸಮೀಕ್ಷೆಗಾರರು) ಹಮ್ಮಿಕೊಂಡಿದ್ದ ಒಂದು ದಿನದ ಬೆಳೆ ಸಮೀಕ್ಷೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮೀಕ್ಷೆಗಾರರು ರೇಷ್ಮೆ ಬೆಳೆಗಳನ್ನು ಸೇರಿದಂತೆ ತಾಲೂಕಿನ ಯಾವುದೇ ರೈತರ ಜಮೀನುಗಳು ಕೈ ತಪ್ಪದಂತೆ ಸಮೀಕ್ಷೆ ಮಾಡಬೇಕು. ಬೆಳೆ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶಗಳನ್ನು ಸರ್ಕಾರದ ವಿವಿಧ ಯೋಜನೆಗಳಲ್ಲಿ ಕನಿಷ್ಠ ಬೆಂಬಲ, ಸಬ್ಸಿಡಿ ಪಾವತಿ, ಬೆಳೆ ಪ್ರದೇಶದ ಅಂದಾಜು ಕೃಷಿ ಮತ್ತು ತೋಟಗಾರಿಕ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಮುಂತಾದ ಸೌಲಭ್ಯ ಒದಗಿಸಲು ಬಳಕೆಯಾಗುತ್ತದೆ. ಬೆಳೆ ಸಮೀಕ್ಷೆಗಾರರು ಪ್ರಾಮಾಣಿಕವಾಗಿ, ನಿಖರವಾಗಿ ಮಾಡಬೇಕೆಂದು ಸೂಚಿಸಿದರು.ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ಎಲ್ಲ ಖಾಸಗಿ ನಿವಾಸಿಗಳು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ದಿ.ರವೀಂದ್ರ ಹಂದಿಗನೂರ ಅವರು ಸೆ.೧೩, ೨೦೧೩ರಂದು ಹೃದಯಾಘಾತದಿಂದ ಸಾವನ್ನಪ್ಪಿದರು. ಕಳೆದ ೧೨ವರ್ಷಗಳಿಂದ ಸ್ವಗ್ರಾಮದಲ್ಲಿ ಅನಾಥವಾಗಿ ಬಿದ್ದಿರುವ ಸಮಾಧಿಯನ್ನು ಕನ್ನಡ ಮತ್ತು ಸಂಸ್ಕ್ರುತಿ ಇಲಾಖೆ ತನ್ನ ಅಧಿನಕ್ಕೆ ತೆಗೆದುಕೊಂಡು ಗಜಲ್ ಸಂಗೀತ ಶಾಲೆ ಸ್ಥಾಪಿಸಲು ಹಾಗೂ ಪಟ್ಟಣದಲ್ಲಿ ಒಂದು ಅತ್ಯುತ್ತಮ ಭವನ ನಿರ್ಮಾಣ ಮಾಡಲು ಸ್ಥಳೀಯ ಜನಪ್ರತಿನಿಧಿಗಳು ಗಮನ ಹರಿಸಿದರರೇ ಮಾತ್ರ ಗಾನ ವಿದ್ವಾಂಸಕ ದಿ.ಪಂಡಿತ ರವೀಂದ್ರ ಹಂದಿಗನೂರ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ. ಈ ಒಂದು ಸತ್ಕಾರ್ಯದ ಕುರಿತು ಶಾಸಕರು ಗಂಭೀರವಾಗಿ ಚಿಂತಿಸಲಿ ಎಂಬುವುದೇ ಗಜಲ್ ಗಾರುಡಿಗ ದಿ.ಪಂಡಿತ ರವೀಂದ್ರ ಹಂದಿಗನೂರ ಅವರ ಅಭಿಮಾನಿಗಳ ಹಾಗೂ ಸಂಗೀತ ಆಸಕ್ತರ ಮಹಾದಾಸೆಯಾಗಿದೆ ಎಂದು ಬರಹಗಾರ ಮೌಲಾಲಿ ಕೆ. ಆಲಗೂರ ಹೇಳಿದ್ದಾರೆ.ಕನ್ನಡ ಗಜಲ್ನಲ್ಲಿ ಸಾವಿರಾರು ಹಾಡುಗಳನ್ನು ಹಾಡಿರುವ ಪಂಡಿತ್ ರವೀಂದ್ರ ಹಂದಿಗನೂರ ಅವರ ಸಂಗೀತ ಸಾಧನೆ ಹಿರಿದಾಗಿದೆ. ಉರ್ದು ಭಾಷೆಯಲ್ಲಿರುವ ಗಜಲ್ ಗಾಯನವನ್ನು ಮೊದಲ ಬಾರಿಗೆ ಕನ್ನಡದಲ್ಲಿ ಹಾಡಿ ಶ್ರೇಷ್ಠ ಸಂಗೀತ ಸಾಧಕ ಎನಿಸಿಕೊಂಡು ಜಿಲ್ಲೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಿಮ್ಮ ಕಾರ್ಯ ಚಟುವಟಿಕೆಯಿಂದ ಮುಂಬರುವ ದಿನಮಾನಗಳಲ್ಲಿ ಮಹಿಳಾ ವಿವಿ ಎತ್ತರೋತ್ತರವಾಗಿ ಬೆಳೆಯಲಿ. ನಿಮ್ಮ ಕಲಾವಧಿಯಲ್ಲಿ ವಿವಿಯು ಸರ್ವಾಂಗೀಣ ಅಭಿವೃದ್ಧಿಯಾಗಲಿ ಎಂದು ಯಂಕಂಚಿ ಕುಂಟೋಜಿ ಹಿರೇಮಠದ ಪೀಠಾಧಿಪತಿ ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.ಇತ್ತೀಚಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಗೆ ೬ನೆಯ ನೂತನ ಕುಲಪತಿಯಾಗಿ ನೇಮಕಗೊಂಡ ಪ್ರೊ.ವಿಜಯಾ ಕೋರಿಶೆಟ್ಟಿ ಅವರಿಗೆ ಸನ್ಮಾನಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ನಮ್ಮ ಜಿಲ್ಲೆಯ ಹೆಣ್ಣು ಮಗಳಿಗೆ ಈ ಅವಕಾಶ ದೊರತದ್ದು ಸಂತಸ ತಂದಿದೆ ಎಂದರು.ಈ ವೇಳೆ ಸನ್ಮಾನವನ್ನು ಸ್ವೀಕರಿಸಿದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಮಾತನಾಡಿ, ಹರ ಗುರು ಚರಮೂರ್ತಿಗಳ ಆಶೀವಾದದಿಂದ ವಿಶ್ವವಿದ್ಯಾಲಯವು ಸಮಗ್ರ ಅಭಿವೃದ್ಧಿ ಹೊಂದಲಿ ಎನ್ನುವುದೇ ನನ್ನ ಮಹದಾಸೆಯಾಗಿದೆ. ಸದಾ ಕಾಲ ತಮ್ಮ ಆಶೀರ್ವಾದ, ಮಾರ್ಗದರ್ಶನ ನಮ್ಮ ಮೇಲಿರಲಿ ಎಂದರು.ಈ ವೇಳೆ ತನಸಹಳ್ಳಿ ಶ್ರೀಮಠದ ಚರಂತೇಶ್ವರ ಶಿವಾಚಾರ್ಯರು, ಮಹಿಳಾ ವಿವಿಯ ಡಾ.ರಾಜಕುಮಾರ ಮಾಲಿಪಾಟೀಲ, ವಿಜಯಕುಮಾರ ಸೇರಿದಂತೆ ಇತರರು ಇದ್ದರು.
