Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರಿಗೆ ಭಾರತೀಯ ವೈದ್ಯಕೀಯ ಸಂಘ(Indian Medical Association) ರಾಷ್ಟ್ರೀಯ ಅತ್ಯುತ್ತಮ ವೈದ್ಯಕೀಯ ಶಿಕ್ಷಕ(National Best Medical Teacher Award) ನೀಡಿ ಗೌರವಿಸಿದೆ.ಡಿ. 26 ರಂದು ಗುಜರಾತಿನ ಅಹ್ಮದಾಬಾದಿನಲ್ಲಿ ನಡೆದ ಸಂಘದ 100ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಓಡಿಶಾ ಆರೋಗ್ಯ ಸಚಿವ ಡಾ. ಮುಕೇಶ ಮಹಾಲಿಂಗ ಪ್ರಶಸ್ತಿ ಪ್ರದಾನ ಮಾಡಿದರು.ಡಾ. ಅರುಣ ಚಂ. ಇನಾಮದಾರ ಅವರು ದೇಶದ ಪ್ರತಿಷ್ಠಿತ 10 ವೈದ್ಯರಲ್ಲಿ ಒಬ್ಬರಾಗಿದ್ದು, ಅವರು ಕಳೆದ 30 ವರ್ಷಗಳಲ್ಲಿ ವೈದ್ಯಕೀಯ ಶಿಕ್ಷಕರಾಗಿ ಸಲ್ಲಿಸಿರುವ ಸೇವೆ, ವಿದ್ಯಾರ್ಥಿಗಳನ್ನು ಅದರಲ್ಲೂ ಚರ್ಮರೋಗ ವಿಭಾಗದ ವೈದ್ಯಕೀಯ ಭವಿಷ್ಯದ ವೈದ್ಯರನ್ನಾಗಿ ಮಾಡಲು ಪಟ್ಟಿರುವ ಶ್ರಮವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.ಡಾ. ಅರುಣ ಚಂ. ಇನಾಮದಾರ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಜ್ಞಾನವಿಕಾಸ ಕೇಂದ್ರದಲ್ಲಿ ಸುಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಹೊಲಿಗೆ ತರಬೇತಿಯಲ್ಲಿ ತರಬೇತಿ ಪಡೆದವರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಸೋಮನಗೌಡ(ಅಪ್ಪುಗೌಡ) ಪಾಟೀಲ ಮಾತನಾಡಿ, ಸುಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ತಾಲೂಕು ಘಟಕವು ಉಚಿತವಾಗಿ ಮಹಿಳೆಯರಿಗೆ ಮೂರು ತಿಂಗಳ ತರಬೇತಿ ಹಮ್ಮಿಕೊಂಡಿರುವುದು ಶ್ಲಾಘನೀಯ. ಇಲ್ಲಿ ತರಬೇತಿ ಪಡೆದುಕೊಂಡಿರುವ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಪೂರಕವಾಗಿದೆ. ಇಂತಹ ತರಬೇತಿಗಳು ಆರ್ಥಿಕ ಸಬಲೀಕರಣ ಹೊಂದಲು ಅನುಕೂಲವಾಗುತ್ತವೆ ಎಂದರು.ಧರ್ಮಸ್ಥಳ ಸಂಸ್ಥೆಯ ಮನಗೂಳಿ ವಲಯದ ಮೇಲ್ವಿಚಾರಕಿ ಶೋಭಾ ಮಾತನಾಡಿ, ನಮ್ಮ ಸಂಸ್ಥೆಯ ಜ್ಞಾನ ವಿಕಾಸ ಕಾರ್ಯಕ್ರಮದಡಿ ಸ್ವ-ಉದ್ಯೋಗ ಪ್ರೇರಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಹಿರಿದು. ಇಲ್ಲಿ ತರಬೇತಿ ಪಡೆದ ಮಹಿಳೆಯರು ತಮ್ಮ ಕಲಿಕಾ ಮಟ್ಟ ನಿತ್ಯ ನಿರಂತರವಾಗಿಸಿ ಹೊಲಿಗೆ ತರಬೇತಿಯನ್ನು ಉದ್ಯೋಗ ಮಾಡಿಕೊಳ್ಳಬೇಕು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮುಂಭಾಗ ಜ್ಞಾನಸಂತ ಸಿದ್ದೇಶ್ವರ ಸ್ವಾಮೀಜಿಯವರ ಮೂರನೇ ವರ್ಷದ ಗುರು ಸ್ಮರಣೆಯಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಸಿದ್ದೇಶ್ವರರ ಭಾವಚಿತ್ರಕ್ಕೆ ಪುಷ್ಪಾಚರಣೆ ನೆರವೇರಿಸುವ ಮೂಲಕ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು.ಅಯ್ಯಪ್ಪ ಸ್ವಾಮಿ ಸನ್ನಿದಿಯಿಂದ ಆರಂಭವಾದ ಸಿದ್ದೇಶ್ವರ ಭಾವಚಿತ್ರದ ಮೆರವಣಿಗೆಯುದ್ದಕ್ಕೂ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಭಜನೆ ಮಾಡುತ್ತಾ ಜನರಿಗೆ ಬಾಳೆಹಣ್ಣು,ಶಿರಾ ಪ್ರಸಾದ ವಿತರಿಸಿದ್ದು ವಿಶೇಷ.ದೇವಸ್ಥಾನದ ಆರಂಭಗೊಂಡ ಮೆರವಣಿಗೆ ಪಲ್ಲೆಕಟ್ಟೆ, ಪತ್ತಾರ ಗಲ್ಲಿ, ಅಗಸಿ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ಆಗಮಿಸಿ ಕೆಲ ಹೊತ್ತು ಸಿದ್ದೇಶ್ವರ ಸ್ವಾಮೀಜಿ ಕುರಿತು ಮಾಲಾಧಾರಿಗಳು ಭಕ್ತಿ ಗೀತೆ ಹಾಡಿದರು. ನಂತರ ಅಗಸಿ ಮಾರ್ಗವಾಗಿ ಗ್ರಾಮದೇವತೆ ದೇವಸ್ಥಾನ ಮಾರ್ಗ, ಬಸವಜನ್ಮ ಸ್ಮಾರಕ ಮಾರ್ಗವಾಗಿ ವಿಜಯಪುರ ರಸ್ತೆ ಮೂಲಕ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮೆರವಣಿಗೆ ತಲುಪಿತು. ಮೆರವಣಿಗೆಯಲ್ಲಿ ಅಯ್ಯಪ್ಪ ಮಾಲಾಧಾರಿಗಳಾದ ಶಿವು ಗುರುಸ್ವಾಮಿ,ಮಲ್ಲು ಗುರುಸ್ವಾಮಿ, ಸಿದ್ದು ಗುರುಸ್ವಾಮಿ, ಭೀಮು ಗುರುಸ್ವಾಮಿ, ಮಾಂತು ಗುರುಸ್ವಾಮಿ, ನಾಗು ಗುರುಸ್ವಾಮಿ, ಸಂಜು ಗುರುಸ್ವಾಮಿ, ಅರವಿಂದ ಗುರುಸ್ವಾಮಿ ಬಸವನಬಾಗೇವಾಡಿಯ ಎಲ್ಲ ಅಯ್ಯಪ್ಪ ಮಾಲಾಧಾರಿಗಳು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಹಿರೇಮಠ ಗಲ್ಲಿಯಲ್ಲಿ ಹಮ್ಮಿಕೊಂಡಿದ್ದ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಯವರ ಮೂರನೇ ವರ್ಷದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಅಲ್ಲಿನ ನಿವಾಸಿಗಳು ಸಿದ್ದೇಶ್ವರ ಭಾವಚಿತ್ರದ ಮುಂದೆ ಮೊಂಬತ್ತಿ ಬೆಳಗಿ ಶ್ರದ್ಧಾ-ಭಕ್ತಿಯಿಂದ ಗುರು ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರು ತಮ್ಮ ಜ್ಞಾನದ ಬಲದಿಂದ ರಾಷ್ಟ್ರ ಸಂತರಾಗಿದ್ದಾರೆ. ಇವರು ಸದುವಿನಯರಾಗಿದ್ದರು. ಎಲ್ಲರನ್ನು ಪ್ರೀತಿಯಿಂದ ಕಾಣುತ್ತಿದ್ದರು. ಇವರು ತಮ್ಮ ಆಧ್ಯಾತ್ಮಿಕ ಜ್ಞಾನದಿಂದ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಇವರು ತಮ್ಮ ಪ್ರವಚನದ ಮೂಲಕ ಜೀವನದ ಮೌಲ್ಯ, ನಿಸರ್ಗದ ಪ್ರೇಮ ಸೇರಿದಂತೆ ಸನ್ಮಾರ್ಗಕ್ಕೆ ಬೇಕಾದ ಮೌಲ್ಯಗಳನ್ನು ಜನರ ಮನಮುಟ್ಟುವಂತೆ ಹೇಳುತ್ತಿದ್ದರು.ಇವರ ಪ್ರವಚನ ಕೇಳಲು ಸಹಸ್ರ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು. ಇಂತಹ ಸಂತರು ಜನಿಸಿದ ಸಂದರ್ಭದಲ್ಲಿ ನಾವು ಸಹ ಜನಿಸಿದ್ದು ನಮ್ಮ ಭಾಗ್ಯವಾಗಿದೆ. ಇವರು ಹೇಳಿದ ಆಧ್ಯಾತ್ಮಿಕ ಅಂಶಗಳನ್ನು, ಸನ್ಮಾರ್ಗದ ಅಂಶಗಳನ್ನು ಅರಿತು ಜೀವನ ಸಾಗಿಸಬೇಕು. ಅವರನ್ನು ನಾವು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯದ ಕನ್ನಡ ದೀಕ್ಷಾಬದ್ಧ ಸಂಘಟನೆಯಾದ ಕದಂಬ ಸೈನ್ಯ ಸಂಘಟನೆಯು ಪ್ರತಿವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಜ.07ರಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತಾಯಿ ಭುವನೇಶ್ವರಿಯ ಪುಣ್ಯಕ್ಷೇತ್ರವಾದ ಭುವನಗಿರಿ ದೇವಸ್ಥಾನದ ಸಭಾಂಗಣದಲ್ಲಿಹಮ್ಮಿಕೊಂಡಿದೆ.ಈ ಸಂದರ್ಭದಲ್ಲಿ ಪ್ರತಿವರ್ಷ ಕೊಡ ಮಾಡುವ ಕದಂಬರತ್ನ 2025 -26 ನೇ ಸಾಲಿನ ಪ್ರಶಸ್ತಿಯನ್ನು ವಿಜಯಪುರದ ಮಹಾನಗರ ಪಾಲಿಕೆಯ ಮಹಾಪೌರ ಮಡಿವಾಳಪ್ಪ ಎಸ್ ಕರಡಿ, ಹಿರಿಯ ಪತ್ರಕರ್ತಮೊಹಮ್ಮದ್ ಇರ್ಫಾನ್ ಶೇಖ್, ಗುತ್ತಿಗೆದಾರ ಚೆನ್ನಪ್ಪ ರುದ್ರಪ್ಪ ರೂಡಗಿ ಹಾಗೂ ಕು. ಸುಕನ್ಯ ಈರಯ್ಯ ಹಿರೇಮಠ ಇವರಿಗೆ ಕದಂಬರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಎಲ್ಲಾ ಪ್ರಶಸ್ತಿ ಪುರಸ್ಕೃತ ಗಣ್ಯ ಮಾನ್ಯರಿಗೆ ಜ. 7 ರಂದು ಭುವನಗಿರಿ ಮಾತೆ ಭುವನೇಶ್ವರಿ ದೇವಾಲಯದ ಸಭಾಂಗಣದಲ್ಲಿ ನಡೆಯುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಿ ಗೌರವಿಸಲಾಗುವುದು ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ವಿನಾಯಕ ಸೊಂಡುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರದಲ್ಲಿ ಜ.೧೦ ರಿಂದ ೧೭ ರವರೆಗೆ ಜಾತ್ರೆ | ಜಿಲ್ಲಾಧಿಕಾರಿ ಡಾ.ಆನಂದ ಕೆ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿ ವರ್ಷದಂತೆ ವಿಜಯಪುರ ತಾಲೂಕಿನ ತೊರವಿಯಲ್ಲಿ ನಡೆಯುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆ ಜ.೧೦ರಿಂದ ೧೭ರವರೆಗೆ ನಡೆಯಲಿದ್ದು, ಜಾತ್ರೆಯನ್ನು ಅತ್ಯಂತ ಅಚ್ವುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಸಿದ್ದೇಶ್ವರ ಜಾನುವಾರು ಜಾತ್ರೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಾನುವಾರು ಗಡಿ ಭಾಗವಾಗಿರುವುದರಿಂದ ಜಾತ್ರೆಯಲ್ಲಿ ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಜಾನುವಾರುಗಳು ಆಗಮಿಸಲಿರುವುದರಿಂದ ಸೂಕ್ತ ಲಸಿಕಾಕರಣ, ಜಾತ್ರೆಯಲ್ಲಿ ಭಾಗವಹಿಸಿದ ರೈತರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಜಾತ್ರೆ ಸ್ಥಳದಲ್ಲಿ ಸ್ವಚ್ಚತೆ, ಒಂದು ವಾರಗಳ ಕಾಲಕ್ಕೂ ಹೆಚ್ಚಿನ ದಿನ ಜಾತ್ರೆ ನಡೆಯುವುದರಿಂದ ಸಮರ್ಪಕ ವಿದ್ಯುತ್ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಯಾವುದೇ ಸಮಸ್ಯೆಬಾರದಂತೆ ನೋಡಿಕೊಂಡು ಸುವ್ಯವಸ್ಥಿತವಾಗಿ ಜಾತ್ರೆ…
ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾರ್ವಜನಿಕ ಕ್ಷೇತ್ರದಲ್ಲಿ ಬದ್ಧತೆ, ಕಾಳಜಿಯಿಂದ ಕೆಲಸ ಮಾಡಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ವಿಜಯಪುರದ ಲೋಣಿಯಲ್ಲಿ ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಜ್ಞಾನ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.ಶಿಕ್ಷಣ, ಕುಡಿಯುವ ನೀರು, ಆಸ್ಪತ್ರೆಯಂತಹ ವಿಷಯದಲ್ಲಿ ರಾಜಕಾರಣ ಮಾಡದಿದ್ದರೆ ಸುಸಜ್ಜಿತ ಸಮಾಜ ಸಾಧ್ಯ. ಹಿಂದಿನವರು ನಿಸ್ವಾರ್ಥ ಮನೋಭಾವದಿಂದ ಸಂಸ್ಥೆಗಳನ್ನು ಕಟ್ಟಿದ್ದಾರೆ ಎಂದು ಸಚಿವರು ಪ್ರಶಂಸಿಸಿದರು.ಶಿಕ್ಷಣಕ್ಕೆ ನಮ್ಮ ಜೀವನದಲ್ಲಿ ಎಲ್ಲಿಲ್ಲದ ಮಹತ್ವವಿದೆ.ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆನ್ನುವ ಕನಸು ಬಡವ, ಶ್ರೀಮಂತ ಭೇದವಿಲ್ಲದೆ ಎಲ್ಲರಲ್ಲೂ ಇರುತ್ತದೆ. ವಿದ್ಯೆ ಇದ್ದಲ್ಲಿ ಕೀರ್ತಿ ಮತ್ತು ಸಂಪತ್ತು ಇರುತ್ತದೆ. ರಾಜ್ಯದ ಭವಿಷ್ಯ, ಮಕ್ಕಳ ಭವಿಷ್ಯ, ದೇಶದ ಭವಿಷ್ಯಕ್ಕಾಗಿ ಶಿಕ್ಷಣ ಕಟ್ಟಿದ ಮಹನೀಯರ ಕಾರ್ಯ ಶ್ಲಾಘನೀಯ ಎಂದು ಲಕ್ಷ್ಮೀ ಹೆಬ್ಬಾಳಕರ್…
ವಿಜಯಪುರದಲ್ಲಿ ಸಿರಿಧಾನ್ಯ ನಡಿಗೆ (ವಾಕಥಾನ್) ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಆನಂದ ಕೆ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಇವರ ಸಹಯೋಗದಲ್ಲಿ ಶನಿವಾರ ನಗರದ ಜ್ಞಾನಯೋಗಾಶ್ರಮದಲ್ಲಿ ಆಯೋಜಿಸಲಾದ ಸಿರಿಧಾನ್ಯ ನಡಿಗೆ (ವಾಕಥಾನ್) ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಆನಂದ ಕೆ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಿರಿಧಾನ್ಯಗಳ ಬಳಕೆ ಅತ್ಯಗತ್ಯವಾಗಿದೆ. ಸಿರಿಧಾನ್ಯ ಆಹಾರ ಬಳಕೆಮಾಡಬೇಕು.ಮಧುಮೇಹ, ರಕ್ತದೊತ್ತಡದಂತಹ ರೋಗಗಳಿಗೆ ಒಳಗಾಗುವುದನ್ನು ಕಾಣುತ್ತಿದ್ದೇವೆ. ಇಂತಹ ರೋಗಗಳಿಂದ ದೂರ ಉಳಿಯಲು ಸಿರಿಧಾನ್ಯಗಳು ಅತ್ಯಂತ ಸಹಕಾರಿ ಆಗಿವೆ ಎಂದು ಹೇಳಿದರು.ನಮ್ಮ ಹಿರಿಯರ ಆಹಾರ ಪದ್ಧತಿಯಲ್ಲಿ ಪ್ರಮುಖ ಸ್ಥಾನ ಪಡೆದಿದ್ದ ಸಿರಿಧಾನ್ಯಗಳನ್ನು ಪುನಃ ದಿನನಿತ್ಯದ ಆಹಾರದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದರು.ಆರೋಗ್ಯಕರ ಆಹಾರ ಪದ್ಧತಿ ಹಾಗೂ ಸಿರಿಧಾನ್ಯಗಳ ಬಳಕೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ನಡಿಗೆಯನ್ನು ಆಯೋಜಿಸಲಾಗಿದೆ. ಸಿರಿಧಾನ್ಯಗಳು ಹೆಚ್ಚು ಪೋಷಕಾಂಶಗಳನ್ನು ಹೊಂದಿದ್ದು, ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಗಳಾಗಿವೆ.…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕ್ರೀಡಾ ಚಟುವಟಿಕೆಗಳು ಅಂದರೆ ಕೇವಲ ಕ್ರೀಡೆ ಅಲ್ಲ ಅದು ಆರೋಗ್ಯದ ಹಬ್ಬ, ಕ್ರೀಡೆ ದೇಹವನ್ನು ಸದೃಢವನ್ನಾಗಿ ಮಾಡುತ್ತದೆ ಎಂದುಶ್ರೀ ಪ್ರಭುಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಧರ್ಮಲಿಂಗಯ್ಯ ಗುಡಗುಂಟಿ ಹೇಳಿದರು.ತಾಲೂಕಿನ ಸಿದ್ದಾಪುರ ಗ್ರಾಮದ ಪುಷ್ಪಾತಾಯಿ ಕನ್ನಡ ಮಾಧ್ಯಮ ಶಾಲೆ ಹಾಗೂ ವಿಜ್ಞಾನ ಮತ್ತು ವಾಣಿಜ್ಯ ಪಿಯು ಕಾಲೇಜಿನಲ್ಲಿ ನಡೆದ ಪ್ರಭು ಅವಾರ್ಡ್ಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇವಲ ಓದಿನಲ್ಲಿ ತಲ್ಲಿನರಾಗದೆ , ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ದೈಹಿಕವಾಗಿ, ಶಾರೀರಿಕವಾಗಿ ಸದೃಢರಾಗಬೇಕು. ಸ್ಪರ್ಧೆಯಲ್ಲಿ ಗೆಲುವು ಸೋಲು ಎರಡೂ ಸಹಜ. ಆದರೆ ಭಾಗವಹಿಸುವ ಧೈರ್ಯವೇ ದೊಡ್ಡದು. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ, ಅನುಭವ ಮತ್ತು ಶಿಸ್ತಿನ ಗುಣ ಬೆಳೆಸಿಕೊಳ್ಳಲು ಸಾಧ್ಯ, ಎಂದು ಅವರು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.ಓಲೆಮಠದ ಮಹಾಸ್ವಾಮಿ ಶ್ರೀ ಆನಂದ ದೇವರು ಮಾತನಾಡಿ, ನಾವು ಮಾತ್ರ ಮುಂದೆ ಸಾಗುವುದು ಸಾಕಾಗದು, ನಮ್ಮ ಜೊತೆಯಲ್ಲಿ ಇತರರನ್ನು ಸಹ ಕೈಹಿಡಿದು ಕೊಂಡೊಯ್ಯುವ ಮನೋಭಾವ ಅಗತ್ಯ. ಪ್ರತಿಯೊಬ್ಬರ ಜೀವನದಲ್ಲೂ…
ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ರೈತರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಮೂಲಕ ತಿಕೋಟಾ ತಾಲೂಕಿನ ಕೆರೆ ಮತ್ತು ಬಾಂದಾರಗಳಿಗೆ ನೀರು ಬಿಡುಗಡೆ ಮಾಡಲಾಗಿದ್ದು, ರೈತರು ಪೋಲಾಗದಂತೆ ಮತ್ತು ಕುಡಿಯಲು ಮಾತ್ರ ನೀರನ್ನು ಬಳಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ರೈತರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ತಿಕೋಟಾ ತಾಲೂಕಿನಲ್ಲಿ ಪ್ರಸಕ್ತ ವರ್ಷದಲ್ಲಿ ಜನ- ಜಾನುವಾರುಗಳಿಗೆ ಕುಡಿಯಲು ನೀರು ಪೂರೈಸುವ ಸಲುವಾಗಿ ಕೆರೆಗಳಿಗೆ ನೀರು ತುಂಬಿಸಲು 14.11.2025ರಂದು ನಡೆದ ನೀರಾವರಿ ಸಲಹಾ ಸಮತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಭಾಗಕ್ಕೆ ಹಂಚಿಕೆಯಾದ 0.75 ಟಿಎಂಸಿ ನೀರನ್ನು ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ ಕೂಡಲೇ ಬಿಡುಗಡೆ ಮಾಡುವಂತೆ 24.12.2025 ರಂದು ಬೆಳಗಾವಿ…
