Author: editor.udayarashmi@gmail.com

ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯ ಹಳ್ಳಗಳಿಗೆ ನೀರು ತುಂಬಿಸುವ ಯೋಜನೆ ಸಣ್ಣ ನೀರಾವರಿ ಕ್ಷೇತ್ರದಲ್ಲಿ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು ಹೇಳಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ಬರಟಗಿ ಗ್ರಾಮದಲ್ಲಿ ತೊರವಿ, ಭೂತನಾಳ, ಇಟ್ಟಂಗಿಹಾಳ, ವಿಠ್ಠಲವಾಡಿ, ಯತ್ನಾಳ, ಅರಕೇರಿ, ಸಿದ್ದಾಪೂರ, ಅರಕೇರಿ, ಜಾಲಗೇರಿ ಹಳ್ಳಗಳಿಗೆ ಅಡ್ಡಲಾಗಿ ಚೆಕ್ ಡ್ಯಾಂ ಮತ್ತು ರಿಚಾರ್ಜ್ ಶಾಫ್ಟ್ ಗಳನ್ನು ನಿರ್ಮಾಣ ಮಾಡುವ ಮೂಲಕ ಅಂತರ್ಜಲ ಅಭಿವೃದ್ಧಿ ಪಡಿಸುವ ಅಂದಾಜು ರೂ. 734.63 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ಹಾಗೂ 2025-26ನೇ ವರ್ಷದ ಬರಟಗಿ ತಾಂಡಾ-3(ಜಾಧವ ನಗರ)ದಲ್ಲಿ ರೂ.50 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಶಾಸಕರಾಗಿದ್ದಾಗ ಕೆರೆಗೆ ನೀರು ತುಂಬಿಸುವ ಯೋಜನೆ ರೂಪಿಸಿ ನೀರಾವರಿ ಸಚಿವರಾಗಿ ಆ ಯೋಜನೆಯನ್ನು ಸಮರ್ಪಕವಾಗಿ‌ ಜಾರಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯ: ಐ.ಸಿ.ಎಸ್.ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಮೊದಲ ಮೂರು ರ‌್ಯಾಂಕ್ ಗಳಿಸುವ ಮೂಲಕ ಕೀರ್ತಿ ತಂದಿದ್ದಾರೆ.ಗುರುವಾರ ಫಲಿತಾಂಶ ಪ್ರಕಟವಾಗಿದ್ದು, ಶಾಲೆಯು ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ.ಶಾಲೆಯ ವಿದ್ಯಾರ್ಥಿಗಳಾದ ಗೌರಿ ಪಾಟೀಲ ಮತ್ತು ಸೂಫಿಯಾನ್ ಕಂದಗಲ ತಲಾ ಶೇ. 93.20 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಆದೇ ರೀತಿ ‌ಪ್ರೇಕ್ಷಾ ಪಾಟೀಲ ಶೇ. 90.60 ಅಂಕ ಗಳಿಸಿ ದ್ವಿತೀಯ ಮತ್ತು ಮಲ್ಲಿಕಾರ್ಜುನ ಬಿರಾದಾರ ಶೇ. 89.80 ಅಂಕ ಗಳಿಸಿ ಜಿಲ್ಲೆಗೆ ತೃತೀಯ ಸ್ಥಾನ ಗಳಿಸಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಬಿ‌.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ವಿಧಾನ ಪರಿಷತ ಶಾಸಕ ಮತ್ತು ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ, ಶಾಲೆಯ ಕೋ- ಆರ್ಡಿನೇಟರ್ ಜಯಾ ಗಲಗಲಿ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.

Read More

ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣೆಗೆ ಸಂಕಷ್ಟ | ನೀರಿನ ಮಟ್ಟ ಗಣನೀಯ ಕುಸಿತ ವರದಿ: ಸಿದ್ರಾಮ್ ಎಮ್ ಇಟ್ಟಿಜಮಖಂಡಿ: ಉತ್ತರ ಕರ್ನಾಟಕದ ಜೀವನಾಡಿ ಎಂದೇ ಕರೆಯಲ್ಪಡುವ ಕೃಷ್ಣಾ ನದಿ ಈ ಬಾರಿ ಬೇಸಿಗೆ ಆರಂಭದಲ್ಲೇ ಬರಿದಾಗುತ್ತಿರುವುದು ಆತಂಕಕಾರಿಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಹಾಯ್ದು ಹೋಗುವ ಈ ಪ್ರಮುಖ ನದಿ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಸೇರಿದಂತೆ ಸುಮಾರು 111 ಗ್ರಾಮಗಳಿಗೆ ಜೀವನಾಡಿಯಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ಈಗ ನೀರಿನ ಕೊರತೆಯಿಂದ ಜನಜೀವನ ಹಾಗೂ ಕೃಷಿ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮಹಾರಾಷ್ಟ್ರದಲ್ಲಿ ಉಗಮಗೊಂಡು ಬಾಗಲಕೋಟೆ ಭಾಗದಲ್ಲಿ ಸಂಗಮವಾಗುವ ಕೃಷ್ಣಾ ನದಿ, ಈ ಭಾಗದ ಕೃಷಿ ಚಟುವಟಿಕೆಗಳಿಗೆ ಪ್ರಮುಖ ಆಧಾರವಾಗಿದೆ. ಹಿಪ್ಪರಗಿ ಗ್ರಾಮದಲ್ಲಿ ನದಿಗೆ ಅಡ್ಡವಾಗಿ ನಿರ್ಮಿಸಲಾದ ಹಿಪ್ಪರಗಿ ಬ್ಯಾರೇಜ್‌ನಲ್ಲಿ ಈ ಬಾರಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ.ಜಮಖಂಡಿ ತಾಲೂಕಿನ ಕೃಷ್ಣೆ ನದಿ ತೀರದ ಸುತ್ತಮುತ್ತ ಗ್ರಾಮಗಳಾದ ಶಿರುಗುಪ್ಪಿ, ಮೈಗೂರು, ಆಲಬಾಳ, ಮುತ್ತೂರು, ಕಂಕನವಾಡಿ, ಕಡಕೋಳ ಶೂರಪಾಲಿ, ಜಂಬಗಿ,ಸನಾಳ , ಕುಂಬಾರಹಳ್ಳ, ಆಲಗೂರು, ಚಿಕ್ಕಪಡಸಲಗಿ, ಹಿರೇಪಡಸಲಗಿ, ಟಕ್ಕೋಡ,…

Read More

ಸಂಭ್ರಮದ ಶರಣಬಸವೇಶ್ವರ–ಸಿದ್ಧಲಿಂಗೇಶ್ವರರ ರಥೋತ್ಸವ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಐತಿಹಾಸಿಕ ಕಮರಿಮಠದಲ್ಲಿ ಶರಣಬಸವೇಶ್ವರ ಹಾಗೂ ಸಿದ್ಧಲಿಂಗೇಶ್ವರ ಮಹಾರಾಜರ ವೈಭವಮಯ ರಥೋತ್ಸವ ಶುಕ್ರವಾರ ಸಂಜೆ ಅಪಾರ ಭಕ್ತರ ಸಮ್ಮುಖದಲ್ಲಿ ಭಕ್ತಿಭಾವದಿಂದ ಹಾಗೂ ಸಂಭ್ರಮ ಸಡಗರದ ನಡುವೆ ನೆರವೇರಿತು.ಹಳಿಂಗಳಿಯ ಪೂಜ್ಯ ಶಿವಾನಂದ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯ ಮತ್ತು ನೇತೃತ್ವದಲ್ಲಿ ನಡೆದ ಈ ಮಹೋತ್ಸವ ಗ್ರಾಮದಲ್ಲಿ ಧಾರ್ಮಿಕ ವಾತಾವರಣವನ್ನು ನಿರ್ಮಿಸಿತು.ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿದ ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ “ಶರಣಬಸವೇಶ್ವರ ಮಹಾರಾಜರಿಗೇ ಜಯ”, “ಸಿದ್ಧಲಿಂಗೇಶ್ವರ ಮಹಾರಾಜರಿಗೇ ಜಯ” ಎಂಬ ಘೋಷಣೆಗಳನ್ನು ಕೂಗಿ ಭಕ್ತಿ ಪರವಶತೆಯನ್ನು ವ್ಯಕ್ತಪಡಿಸಿದರು. ವಿಶೇಷವಾಗಿ ಹೂವುಗಳು, ತೆಂಗಿನಕಾಯಿ, ಬಾಳೆಹಣ್ಣು, ಬಣ್ಣಬಣ್ಣದ ವಿದ್ಯುತ್ ದೀಪಗಳು ಹಾಗೂ ಸಾಂಪ್ರದಾಯಿಕ ಅಲಂಕಾರಗಳಿಂದ ಸಿಂಗರಿಸಲಾದ ರಥ ಭಕ್ತರ ಗಮನ ಸೆಳೆಯಿತು. ರಥದ ಸುತ್ತಲೂ ಅಲಂಕೃತ ದೀಪಾಲಂಕಾರ ಕಂಗೊಳಿಸುತ್ತಿದ್ದು, ಗ್ರಾಮೋತ್ಸವದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿತು.ರಥೋತ್ಸವದ ಸಂದರ್ಭದಲ್ಲಿ ಭಕ್ತರು ಬೆಂಡು, ಬೆತ್ತಾಸು, ಕಾರಿಖ್ ಸೇರಿದಂತೆ ವಿವಿಧ ಪೂಜಾ ಸಾಮಗ್ರಿಗಳನ್ನು ರಥಕ್ಕೆ ಅರ್ಪಿಸಿ ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದರು. ಚೀನಿಕೋಲು,…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಇದೇನಿದು! ಮಕ್ಕಳಿಗೆ ಪಾಲಕರು ಹೆದರಬೇಕೇ ಎಂದು ಸೋಜಿಗ ಪಡದಿರಿ. ಸಾಮಾನ್ಯವಾಗಿ ಮಕ್ಕಳು ತಮ್ಮ ಪಾಲಕರಿಗೆ ಹೆದರಬೇಕು ಎಂಬುದು ಲೋಕಾರೂಢಿ, ಆದರೆ ಪಾಲಕರೇ ಮಕ್ಕಳಿಗೆ ಹೆದರಬೇಕು ಎಂಬುದು ಆಧುನಿಕ ಪರಿಭಾಷೆ.ಖಂಡಿತವಾಗಿಯೂ ಪಾಲಕರು ತಮ್ಮ ಮಕ್ಕಳಿಗೆ ಹೆದರಬೇಕು. ಯಾವ ಕಾರಣಕ್ಕಾಗಿ ಎಂಬುದನ್ನು ಹೇಳಿದರೆ ನೀವು ಕೂಡ ಈ ಮಾತುಗಳನ್ನು ಒಪ್ಪಿಕೊಳ್ಳುತ್ತೀರಿ.ಕೆಲವೇ ವರ್ಷಗಳ ಹಿಂದೆ ನಮ್ಮ ತಂದೆ, ಚಿಕ್ಕಪ್ಪ, ದೊಡ್ಡಪ್ಪ ಮಾವ ಹೀಗೆ ದ್ವಿಚಕ್ರ ವಾಹನಗಳನ್ನು ಹೊಂದಿರುವವರು ತಲೆಗೆ ಹೆಲ್ಮೆಟ್ ಧರಿಸಿ ಸಂಚಾರಿ ನಿಯಮಗಳನ್ನು ಪಾಲಿಸುತ್ತಾ ವಾಹನಗಳನ್ನು ಚಲಾಯಿಸುತ್ತಿದ್ದರು ಎಂಬುದು ನಮಗೆ ನೆನಪಿದೆ. ಅಷ್ಟೇನೂ ವಾಹನ ದಟ್ಟಣೆ ಇಲ್ಲದ ಕಾಲದಲ್ಲಿಯೂ ಕೂಡ ಅವರು ಎಲ್ಲ ನಿಯಮಗಳನ್ನು ಪಾಲಿಸುತ್ತಿದ್ದರು. ಆದರೆ ಇಂದಿನ ವಿಪರೀತ ಸಂಚಾರ ದಟ್ಟಣೆಯ ಸಮಯದಲ್ಲಿಯೂ ಕೂಡ ನಾವು ಸಂಚಾರಿ ನಿಯಮಗಳನ್ನು ಅತ್ಯಂತ ಸುಲಭವಾಗಿ ಉಲ್ಲಂಘಿಸಿ ಮುನ್ನಡೆಯುತ್ತೇವೆ. ಸಂಚಾರ ನಿಯಮಗಳನ್ನು ಪಾಲಿಸುವ ಟ್ರಾಫಿಕ್ ಪೊಲೀಸರು ಖಳನಾಯಕರು ಎಂಬಂತೆ ವರ್ತಿಸುತ್ತೇವೆ. ನಮ್ಮದೇ ಅನುಕೂಲಕ್ಕಾಗಿ ಮಾಡಿರುವ ಸಂಚಾರಿ…

Read More

ವಿಜಯಪುರದಲ್ಲಿ ಕೃಷಿ ಇಲಾಖೆ ಜಂಟಿ‌ ನಿರ್ದೇಶಕ ಶಿವನಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಒಕ್ಕಲುತನದ ಬಗ್ಗೆ ಹಸಿವು ಬೇಕು. ಹಸಿವು ಇದ್ದಾಗ ಒಕ್ಕಲುತನದಲ್ಲಿ‌ ಪ್ರಗತಿ ಸಾಧ್ಯ ಎಂದು ಕೃಷಿ‌‌ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಕೃಷಿಕ ಸಮಾಜದ‌ ಸಹಯೋಗದಲ್ಲಿ ​ಗುರುವಾರ ​ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಪ್ರತಿ ಎಕರೆಗೆ 100 ಟನ್ ಕಬ್ಬು ಬೆಳೆಯುವುದು ಹೇಗೆ? ಎಂಬ ವಿಚಾರ ಸಂಕಿರಣವನ್ನು ಉದ್ದೇಶಿಸಿ ಅವರು ಮಾತನಾಡಿದರು.ಮಣ್ಣು ರೈತನ ಕಣ್ಣು ಹಾಗಾಗಿ ರೈತರು ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಬೇಕು ಎಂದ ಅವರು, ಮಣ್ಣಿನ ಪೋಷಕಾಂಶಗಳ ಹೇರಳವಾಗಿರುವಂತೆ ನೋಡಿಕೊಳ್ಳಬೇಕು ಎಂದರು.ಕಬ್ಬಿನ ಹೆಚ್ಚಿನ ಇಳುವರಿಗಾಗಿನಮ್ಮದು ಕಬ್ಬು ಬೆಳೆಯಲು ನಮ್ಮಲ್ಲಿನ ಮಣ್ಣು ಬಹು ಸೂಕ್ತವಾಗಿದೆ. ಮಣ್ಣಿನ ಸತ್ವ ನೋಡಿಕೊಂಡು ಕಬ್ಬಿನ ಸಾಲಿನಿಂದ ಸಾಲಿಗೆ ಇರುವ ಅಗಲ ಖಚಿತಗೊಳಿಸಿಕೊಳ್ಳಬೇಕು ಎಂದರು.ಕಬ್ಬಿಗೆ ಅವಶ್ಯಕತೆ ಇರುವಷ್ಟು ನೀರು ನೀಡಬೇಕು. ಕಬ್ಬಿನ‌ ಇಳುವರಿಯಲ್ಲಿ ನೀರಿನ ಪಾತ್ರ ಬಹು ಮುಖ್ಯವಾಗಿದೆ. ಹನಿ ನೀರಾವರಿ…

Read More

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉದಯರಶ್ಮಿ ದಿನಪತ್ರಿಕೆ ಸಂಪಾದಕ ಇಂದುಶೇಖರ ಮಣೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೂಢನಂಬಿಕೆಯಿಂದ ವೈಚಾರಿಕತೆಯೆಡೆಗೆ ಹಾಗೂ ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದು ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉದಯರಶ್ಮಿ ದಿನಪತ್ರಿಕೆ ಸಂಪಾದಕ ಇಂದುಶೇಖರ ಮಣೂರ ಹೇಳಿದರು.ನಗರದಲ್ಲಿ ಗುರುವಾರ ಸಂಜೆ ಆಶ್ರಮ ರಸ್ತೆಯ ರಾಮಕೃಷ್ಣ ನಗರದಲ್ಲಿ ಗಜಾನನ ಮಿತ್ರ ಮಂಡಳಿ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಅನುಭವ ಮಂಟಪ ಸ್ಥಾಪಿಸಿ ವಿಶ್ವದಲ್ಲೇ ಮೊಟ್ಟಮೊದಲು ಪ್ರಜಾಪ್ರಭುತ್ವದ ಚಿಂತನೆಗಳನ್ನು ನೀಡಿದವರು ಬಸವಣ್ಣನವರು. ವರ್ಗ ಬೇಧ ಮತ್ತು ವರ್ಣ ಶ್ರೇಷ್ಠತೆಯನ್ನು ತೆಗೆದುಹಾಕಿದ ಏಕೈಕ ಧರ್ಮ ಬಸವ ಧರ್ಮವಾಗಿದ್ದು. ನಾವೆಲ್ಲ ಸಂಕುಚಿತ ಭಾವ ತೊರೆದು ಬಸವ ಧರ್ಮ ಪಾಲಿಸಬೇಕು ಎಂದು ಇಂದುಶೇಖರ ಮಣೂರ ಕರೆ ನೀಡಿದರು.ಬಸವನ ಬಾಗೇವಾಡಿಯ ಕಾಂಗ್ರೆಸ್ ಪಕ್ಷದ ಮುಖಂಡ ಜಟ್ಟಿಂಗರಾಯ ಮಾಲಗಾರ ಮಾತನಾಡಿ,…

Read More

ಇಂದು (ಮೇ.೦೧ ಶುಕ್ರವಾರ) “ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ” ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಮಾರ್ಟಿನ್ ಲೂಥರ್ ಕಿಂಗ್ ಅವರು, “ಮಾನವೀಯತೆಯನ್ನು ಹೆಚ್ಚಿಸುವ ಎಲ್ಲ ಕೆಲಸ-ಕಾರ್ಯಗಳು ಘನತೆ ಮತ್ತು ಪ್ರಾಮುಖ್ಯತೆಯನ್ನು ಹೊಂದಿವೆ ಮತ್ತು ಅದನ್ನು ನಾವು ಶ್ರೇಷ್ಠವೆಂದೇ ಪರಿಗಣಿಸಬೇಕು” ಎಂದು ಹೇಳಿದ್ದಾರೆ.ಕೆಲಸದಲ್ಲಿ ಸಣ್ಣದು ದೊಡ್ಡದು ಎಂಬುದಿಲ್ಲ. ಪ್ರತಿಯೊಂದು ಕೆಲಸವನ್ನು ಪ್ರೀತಿಸಿ, ಗೌರವಿಸಿ. ಕಾರಣ ನಮ್ಮ ಜೀವನ ಆರಂಭವಾಗುವುದು ಕೆಳಗಿನಿಂದಲೇ ಪ್ರಾರಂಭವಾಗುತ್ತದೆಯೇ ಹೊರತು, ಮೇಲಿನಿಂದಲ್ಲ. ಆದ್ದರಿಂದ ಎಲ್ಲ ಕೆಲಸವು ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿರುತ್ತದೆ ಎಂಬುದನ್ನು ನಾವೆಲ್ಲರೂ ಮನಗಾಣಬೇಕು. ಕಾರ್ಮಿಕ ವರ್ಗ ಪ್ರತಿಯೊಂದು ದೇಶದ ಅಭಿವೃದ್ಧಿಗೆ ಬೇರುಗಳಿದ್ದಂತೆ. ಅದಕ್ಕಂತಲೇ ಕಾರ್ಮಿಕರನ್ನು ಮತ್ತು ಕಾರ್ಮಿಕ ವರ್ಗವನ್ನು ದೇಶದ ಪ್ರಬಲ ಶಕ್ತಿ ಎಂದು ಪರಿಗಣಿಸಲಾಗುತ್ತದೆ. ವಿಶ್ವದಾದ್ಯಂತ ಶ್ರಮಿಕ ವರ್ಗದ ಮಹತ್ವ, ಅಗತ್ಯತೆ ಮತ್ತು ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರದ ಕುರಿತು ಇಡೀ ಸಮಾಜಕ್ಕೆ ತಿಳಿಸಲು ಮತ್ತು ಅವರಿಗೂ ಸಾಮಾಜಿಕ ಗೌರವ ಸಲ್ಲಿಸುವ ಉದ್ದೇಶದಿಂದ ಪ್ರತಿ ವರ್ಷ ಮೇ…

Read More

ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದೊಂದಿಗೆ ಶೈಕ್ಷಣಿಕ ಒಪ್ಪಂದ ಮಾಡಿಕೊಂಡಿದೆ ಎಂದು ಪ್ರಾಂಶುಪಾಲರಾದ ಡಾ. ಎಂ ಅರುಣ್ ಕುಮಾರ್ ಹೇಳಿದರು.ಪಟ್ಟಣದ ಕಾಲೇಜು ವನಸಿರಿಯ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ವನಸಿರಿ ನಾಡಿನ ಜನಪದ ಕಲರವ ಮತ್ತು ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಎಂ ಅರುಣ್ ಕುಮಾರ್, ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ ಮಾಡಿಕೊಂಡಿರುವುದು ತುಂಬಾ ಸಂತೋಷವಾಗುತ್ತದೆ. ಇದು ಉನ್ನತ ಶಿಕ್ಷಣದ ಗುಣಮಟ್ಟ, ನಾವೀನ್ಯತೆ ಮತ್ತು ಅಂತರರಾಷ್ಟ್ರೀಯ ಸಹಕಾರವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಜೊತೆಗೆ ಜಾಗತೀಕರಣದ ಯುಗದಲ್ಲಿ ಜ್ಞಾನ ಹಂಚಿಕೆ, ಹೊಸ ತಂತ್ರಜ್ಞಾನಗಳ ಅಳವಡಿಕೆ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಹೇಳಿದರು.ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಇತಿಹಾಸ ಅಧ್ಯಯನ ಮತ್ತು ಸಂಶೋಧನ ವಿಭಾಗದ ಮುಖ್ಯಸ್ಥ ಡಾ. ರಾಮೇಗೌಡ ಮಾತನಾಡಿ,ಗ್ರಾಮೀಣ ಭಾಗದ ಸೊಗಡು ಎಷ್ಟೇ ಹಣ ಕೊಟ್ಟರು ಬೇರೆಡೆ ಎಲ್ಲೂ ಸಿಗುವುದಿಲ್ಲ. ನಮ್ಮ ಪೂರ್ವಿಕರು ಬೆಳೆದ ಬೆಳೆಯನ್ನು…

Read More