Subscribe to Updates
Get the latest creative news from FooBar about art, design and business.
Author: editor.udayarashmi@gmail.com
ನವದೆಹಲಿಯಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ಹಾಗೂ ಸಿಂದಗಿ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಕೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶೇಡಬಾಳ-ವಾಡಿ ರೈಲ್ವೆ ಯೋಜನೆ ಬಗ್ಗೆ ಸ್ವಾತಂತ್ರ್ಯ ಪೂರ್ವದಲ್ಲಿ ಸಮೀಕ್ಷೆ ಕಾರ್ಯ ನಡೆದಿದ್ದು, ವಿಜಯಪುರ ಜಿಲ್ಲೆಯಲ್ಲಿಯೇ ಸಿಂದಗಿ ವಾಣಿಜ್ಯ ಮತ್ತು ವ್ಯವಹಾರಿಕವಾಗಿ ಅತೀ ವೇಗವಾಗಿ ಬೆಳೆಯುತ್ತಿರುವ ಹಾಗೂ ಎಲ್ಲಾ ಕ್ಷೇತ್ರದಲ್ಲಿಯೂ ವಿಶಿಷ್ಟ ಸಾಧನೆ ಗೈಯುತ್ತಿರುವ ಪಟ್ಟಣವಾಗಿದೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಇಲ್ಲಿನ ಜನರು ವ್ಯವಹಾರ ವಹಿವಾಟಿಗಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಿಗೆ ತೆರಳಬೇಕಾದ ಅನಿವಾರ್ಯವಿದೆ. ಆದರೆ ಸಿಂದಗಿ ಪಟ್ಟಣಕ್ಕೆ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಇಲ್ಲಿನ ಜನರಿಗೆ ಇತರ ರಾಜ್ಯ, ಜಿಲ್ಲೆಗಳ ಜೊತೆಗೆ ವ್ಯವಹರಿಸಲು ತೊಂದರೆ ಉಂಟಾಗುತ್ತಿದೆ. ಇಂಡಿ, ಮುದ್ದೇಬಿಹಾಳ, ಬ.ಬಾಗೇವಾಡಿ ಸೇರಿದಂತೆ ಹೋಬಳಿಗಳಿಗೂ ಸಹ ರೈಲು ಸಂಪರ್ಕ ಕಲ್ಪಿಸಲಾಗಿದೆ. ಆದರೆ ಜಿಲ್ಲೆಯ ಪ್ರಮುಖ…
ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರತಿಕೋಟಾ ಉದಯರಶ್ಮಿ ದಿನಪತ್ರಿಕೆ ಅಣ್ಣ-ತಂಗಿಯರ ಈ ಬಂಧ, ಜನುಮ ಜನುಮಗಳ ಅನುಬಂಧ, ಜೀವಕ್ಕೆ ಕೊರಳು ದೇಹಕ್ಕೆ ನೆರಳು ಅನಿಸುತ್ತಿದೆ, ಈ ರಕ್ಷಾ ಬಂಧನ… ಎಂಬ ಹಾಡು ಅಣ್ಣ-ತಂಗಿಯರ ನಡುವೆ ಭಾವಬಂಧವನ್ನು ಬೆಸೆಯುತ್ತದೆ. ಭವ್ಯ ಪರಂಪರೆ, ಇತಿಹಾಸ, ಸಂಪ್ರದಾಯ ಹಾಗೂ ಸಂಸ್ಕೃತಿ-ಆಚರಣೆಗಳಿಗೆ ವಿಶಿಷ್ಟತೆಯನ್ನು ಹೊಂದಿದ ನಾಡು ನಮ್ಮದು. ನಮ್ಮ ದೇಶದಲ್ಲಿ ಪ್ರತಿಯೊಂದು ಆಚರಣೆಗೂ, ಹಬ್ಬಕ್ಕೂ ಅದರದೇ ಆದ ವಿಶೇಷವಿದೆ. ಪ್ರತಿಯೊಂದು ಹಬ್ಬವು ಒಂದಿಲ್ಲ ಒಂದು ರೀತಿಯ ಸಂದೇಶದ ಸಾರವನ್ನು ಹೇಳುತ್ತದೆ. ಎಲ್ಲಾ ಹಬ್ಬಗಳಂತೆ ರಕ್ಷಾ ಬಂಧನವು ಸಹ ವಿಶೇಷ ಹಬ್ಬವಾಗಿದ್ದು, ಅದು ಸಹೋದರ-ಸಹೋದರಿಯರ ಸಂಬಂಧಗಳನ್ನು ಗಟ್ಟಿಗೊಳಿಸುವ ಭಾವಾನುಬಂಧವಾಗಿದೆ.ಶ್ರಾವಣ ಮಾಸದಲ್ಲಿ ಆಚರಿಸಲ್ಪಡುವ ಈ ರಕ್ಷಾ ಬಂಧನವು ಅಣ್ಣ-ತಂಗಿಯರ ಅನುಬಂಧದ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ಅರ್ಥಗರ್ಭಿತವಾದ ಹಬ್ಬವಾಗಿದೆ. ರಕ್ಷಾ ಬಂಧನವೆಂದರೆ ಕೇವಲ ಕೇಸರಿ ದಾರ ಕಟ್ಟಿ ಉಡುಗೊರೆ ನೀಡುವದಷ್ಟೇ ಅಲ್ಲ, ಇದು ಭಾವಬಂಧ ಬೆಸೆಯುವ ಭ್ರಾತೃತ್ವದ ಬಾಂಧವ್ಯ, ಮಮತೆ ಮತ್ತು ಸುರಕ್ಷೆಯ ಸಂಕೇತವಾಗಿದೆ. ಸಹೋದರಿಯರು ತಮ್ಮ ಸಹೋದರರ ಕೈಗೆ ರಾಖಿ ಕಟ್ಟುವ ಮೂಲಕ…
ಸಂಗ್ರಹ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರಪುಣೆ ಉದಯರಶ್ಮಿ ದಿನಪತ್ರಿಕೆ ಶರಣಮಾಸದ 15 ನೆಯ ದಿವಸದ ಉಪನ್ಯಾಸ ಮಾಲಿಕೆಯಲ್ಲಿ ಶರಣ ಕೆ. ಬಿ. ಮಹದೇವಪ್ಪ ಅವರು ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆ ಎನ್ನುವ ವಿಷಯದ ಬಗೆಗೆ ಅತ್ಯಂತ ಪ್ರಬುದ್ಧವಾಗಿ ನಮ್ಮೊಡನೆ ಹಂಚಿಕೊಂಡರು.ಕನ್ನಡ ಸಾಹಿತ್ಯ ಪ್ರಕಾರಗಳಾದ ಚಂಪೂ ಕಾವ್ಯ, ವಚನ ಸಾಹಿತ್ಯ, ಷಟ್ಪದಿಗಳ ಜೊತೆಗೆ ಜೈನ ಯುಗ, ಲಿಂಗಾಯತ ಯುಗ,ಶೈವ ಯುಗ,ಆಧುನಿಕ ಯುಗದಲ್ಲಿ ಕನ್ನಡದಲ್ಲಿ ಆಗಿ ಹೋದ ವಿಶಿಷ್ಟ ಬದಲಾವಣೆ ಗಳ ಬಗೆಗೆ ಬೆಳಕು ಚೆಲ್ಲಿದರು.ಇದರಲ್ಲಿ ವಚನ ಯುಗ ಮಹತ್ವವಾದದ್ದು, ವಚನ ಸಾಹಿತ್ಯದಲ್ಲಿ ವಚನಕಾರರು ಹೇಗೆ ವಸ್ತು ರಚನೆ ಆಯ್ಕೆ, ಬರವಣಿಗೆಯ ವಿಧಾನ,ಆಲೋಚನೆ, ಭಾವನೆ, ಚಿಂತನೆಗಳನ್ನು ಬರವಣಿಗೆಯಲ್ಲಿ ವ್ಯಕ್ತಪಡಿಸಿದರು. ಕನ್ನಡ ಭಾಷೆ ದುಡಿಸಿಕೊಂಡರು, ಅದರ ಔನ್ನತ್ಯ, ತೀವ್ರತೆ, ಭಾಷಾ ಜ್ಞಾನ ವನ್ನು ಹೇಳುತ್ತಾ, ವಚನ ಪರಂಪರೆಯ ಧೋರಣೆಯ ಮಹತ್ವವನ್ನು ಹಂಚಿಕೊಂಡರು.ಆಗಿನ 346 ವಚನಕಾರರು ಮತ್ತು 42 ವಚನಕಾರ್ತಿಯರು ತಮ್ಮವಚನಗಳ ಮೂಲಕ ಜನರನ್ನು ತಲುಪಿದ್ದು, ಇದು ಜನಸಾಮಾನ್ಯರ ಭಾಷೆ ಕಾಯಕಯೋಗಿಗಳ ಭಾಷೆ,ಎಲ್ಲ ಅಪ…
ಬಂದಾಳ ಶಾಲಾ ಮಕ್ಕಳಿಗೆ ಸ್ಕೂಲ ಬ್ಯಾಗ್ ವಿತರಣೆ | ಎಸ್ ಡಿ ಎಂ ಸಿ ಅಧ್ಯಕ್ಷ ನಿಂಗನಗೌಡ ಬಿರಾದಾರ ಕರೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದೇಶದ ಬಡ ಹಿಂದುಳಿದ ಅನ್ಯಾಯಕ್ಕೊಳಗಾದವರಿಗೆ ಯಾವುದೇ ಧರ್ಮ ಜಾತಿ ತಾರತಮ್ಯವಿಲ್ಲದೆ ಸಹಾಯ ಮಾಡುವ ಸಮಾಜ ಸೇವೆಯ ಮೂಲಕ ಗ್ರಾಮದ ಬಡ ಹಾಗೂ ನಿರ್ಗತಿಕ ಮಕ್ಕಳಿಗೆ ಅಖಿಲ ಭಾರತ ಮಾನವೀಯತೆ ವೇದಿಕೆಯ ಸಂದೇಶ ಎಲ್ಲರಿಗೂ ಸಾರೋಣ ಎಂದು ಎಸ್ ಡಿ ಎಂ ಸಿ ಅಧ್ಯಕ್ಷ ನಿಂಗನಗೌಡ ಎಸ್ ಬಿರಾದಾರ ಹೇಳಿದರು.ತಾಲೂಕಿನ ಬಂದಾಳ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಗುರುವಾರ ಪಟ್ಟಣದ ಅಖಿಲ ಭಾರತ ಮೌನವೀಯತೆ ಸಂದೇಶ ವೇದಿಕೆ ಸದಸ್ಯರು ಬಡ ನಿರ್ಗತಿಕ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣ ಸಮಾರಂಭದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸಮಾಜದ ಸೇವೆಯ ಮೂಲಕ ಸಮಾಜದ ಕೆಳವರ್ಗದ ಜನರ ಮಕ್ಕಳಿಗೆ ಸಹಾಯ ಸಹಕಾರ ಮಾಡುವ ಸಂಸ್ಥೆಯ ಪದಾಧಿಕಾರಿಗಳಿಗೆ ಅನಂತ ಅಭಿನಂದನೆಗಳು ತಿಳಿಸಿದರು.ಅಖಿಲ ಭಾರತ ಮಾನವೀಯತೆ ಸಂದೇಶ…
ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಗೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಸೂಚನೆ ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ” ನಡೆದಿದೆ ಎಂದು ಗಂಭೀರ ಆರೋಪ ಮಾಡಿ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ, ಸಹಿ ಮಾಡಿದ ಅಫಿಡವಿಟ್ ನೊಂದಿಗೆ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಗುರುವಾರ ಕಾಂಗ್ರೆಸ್ ನಾಯಕನಿಗೆ ಸೂಚಿಸಿದ್ದಾರೆ.ಗುರುವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮತಗಳ್ಳತನದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ ನಂತರ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿರುವ ರಾಜ್ಯ ಚುನಾವಣಾ ಅಧಿಕಾರಿ, ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ, “ನೀವು ಅನರ್ಹ ಮತದಾರರ ಸೇರ್ಪಡೆ ಮತ್ತು ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವ ಬಗ್ಗೆ ಉಲ್ಲೇಖಿಸಿದ್ದೀರಿ… ಆ ಕುರಿತ ದಾಖಲೆಗಳನ್ನು ಚುನಾವಣಾ ಆಯೋಗದೊಂದಿಗೆ ಹಂಚಿಕೊಳ್ಳಿ” ಎಂದು ಹೇಳಿದ್ದಾರೆ.”1960 ರ ಮತದಾರರ ನೋಂದಣಿ ನಿಯಮಗಳ ನಿಯಮ 20(3)(b) ಅಡಿಯಲ್ಲಿ ಲಗತ್ತಿಸಲಾದ ಸಾಕ್ಷ್ಯಾಧಾರಿತ ಪ್ರಮಾಣಪತ್ರಕ್ಕೆ ಸಹಿ ಹಾಕಿದ ದಾಖಲೆಗಳನ್ನು ಸಲ್ಲಿಸಿ. ಇದರಿಂದ ಅಗತ್ಯ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ತಹಶೀಲ್ದಾರ್ ಎಸ್.ಎಸ್. ನಾಯಕಲಮಠ ನೇತೃತ್ವದಲ್ಲಿ ಗುರುವಾರ ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ಪೂರ್ವಭಾವಿ ಸಭೆ ಜರುಗಿತು.ಈ ಸಂದರ್ಭದಲ್ಲಿ ತಾಲೂಕ ಆಡಳಿತದಿಂದ ಶಿಷ್ಟಾಚಾರದ ಪ್ರಕಾರವಾಗಿ ಅತ್ಯಂತ ಅಚ್ಚುಕಟ್ಟಾಗಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸುವ ಕುರಿತು ಸುದಿರ್ಘವಾಗಿ ಚರ್ಚಿಸಲಾಯಿತು.ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜ ಕಟ್ಟುವುದು ಎಂ.ಪಿ.ಎಸ್ ಶಾಲೆಗೆ, ನಿರೂಪಣೆ ಕೆ.ಜಿ.ಎಸ್ ಶಾಲೆಗೆ ವಹಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಲು ಎಪಿಜೆ ಅಬ್ದುಲ್ ಕಲಾಂ ಆಂಗ್ಲ ಮಾದ್ಯಮ ಶಾಲೆ, ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಸಂಗಮೇಶ್ವರ ಶಾಲೆ, ಎಂ.ಪಿ.ಎಸ್ ಶಾಲೆ ಹಾಗೂ ಇಕ್ರಾ ಹಿರಿಯ ಪ್ರಾಥಮಿಕ ಶಾಲೆಗಳಿಗೆ ವಹಿಸುವುದರ ಜೊತೆಗೆ ತಾಲೂಕ ಮಟ್ಟದ ವಿವಿಧ ಇಲಾಖೆಗಳಿಗೆ ಇನ್ನಿತರ ಜವಾಬ್ದಾರಿಗಳನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಪ.ಪಂ ಅಧ್ಯಕ್ಷರಾದ ಸಿ.ಎಸ್ ಗಿಡ್ಡಪ್ಪಗೋಳ, ತಾ ಪಂ ಇಓ ಸುನಿಲ್ ಮದ್ದಿನ್, ಪ.ಪಂ ಮುಖ್ಯಾದಿಕಾರಿ ವಿರೇಶ ಹಟ್ಟಿ, ಪಿಎಸ್ಐ ಆರ್.ಹೆಚ್ ಹಳ್ಳಿ, ವೖದ್ಯಾಧಿಕಾರಿ ಡಾ.ಲಕ್ಷ್ಮೀ ತೆಲ್ಲೂರ, ಪಟ್ಟಣದ ಹಿರಿಯರಾದ ಉಸ್ಮಾನಪಟೇಲ್ ಖಾನ್, ಪ.ಪಂ ಸದಸ್ಯರಾದ ಮಹಾಂತೇಶ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಹೆಣ್ಣು ಮಕ್ಕಳು ಉಳಿಸುವ ಹಣದಿಂದ ಮದುವೆಗೆ, ಮಕ್ಕಳ ಶಿಕ್ಷಣಕ್ಕೆ ಅಥವಾ ಮನೆಯನ್ನ ಮುನ್ನಡೆಸಲು ತುಂಬಾ ಸಹಕಾರಿ ಆಗುತ್ತದೆ ಉಳಿತಾಯದ ಬಗ್ಗೆ ಅರಿವು ಹೊಂದಿದರೆ, ಅವರು ಅವರ ಜೀವನದಲ್ಲಿ ಆರ್ಥಿಕವಾಗಿ ಸ್ವಾವಲಂಬಿ ಆಗಬಹುದು ಎಂದು ಚಿತ್ರನಟಿ ಶೃತಿ ಹೇಳಿದರು.ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದ ಹತ್ತಿರ ನೂತನ ಸುಶೀಲವರ್ದಿನಿ ಮಹಿಳಾ ಕೋ- ಆಪರೇಟಿವ್ ಸೊಸೈಟಿ ಉದ್ಘಾಟಸಿ ಮಾತನಾಡಿದ ಅವರು, ಇಂದಿನ ಈ ಸೊಸೈಟಿಯು ಮಹಿಳೆಯರ ಸಬಲೀಕರಣ ಮತ್ತು ಅಭ್ಯುದಯಕ್ಕೆ ಕಾರಣವಾಗುತ್ತದೆ ಈ ಕನಸು ನಮ್ಮ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರದಾಗಿತ್ತು ಎಲ್ಲ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು. ಪ್ರತಿಯೊಬ್ಬ ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗಳನ್ನ ತಗೆದು ಹಣವನ್ನ ಉಳಿಸಬೇಕು. ಹಾಗೆ ಉಳಿಸಿದ ಹಣ ನಿಮ್ಮ ಇಡೀ ಕುಟುಂಬವನ್ನೇ ಸಲಹುತ್ತದೆ ಎಂದು ಹೇಳಿದರು.ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ ಸಮಾಜಕ್ಕೆ ಕೊಡುಗೆ ನೀಡಿದ ಮಹನಿಯರನ್ನು ಗೌರವಿಸುವುದು, ಸನ್ಮಾನಿಸುವುದು ಸಮಾಜದ ಕರ್ತವ್ಯ ಎಂದು ತಿಳಿಸಿದರು.ಜ್ಯೋತಿ ಬೆಳಗಿಸಿ ವಿಧಾನ ಪರಿಷತ್ ಸದಸ್ಯ ಎಚ್.ಆರ್. ನಿರಾಣಿ ಮಾತನಾಡಿ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಆಲಮಟ್ಟಿಯ ರಾಕ್ ಉದ್ಯಾನದಲ್ಲಿ ಒಂದು, ಪಾರ್ಕಿಂಗ್ ಲಾಟ್ ಬಳಿ ಒಂದು ಸೇರಿ ಒಟ್ಟಾರೇ ಎರಡು ಶ್ರೀಗಂಧ ಗಿಡಗಳನ್ನು ಕತ್ತರಿಸಿ ಕಳ್ಳತನ ಮಾಡಿದ ಘಟನೆ ಬುಧವಾರ ರಾತ್ರಿ ಜರುಗಿದೆ.ಎರಡು ಮರಗಳನ್ನು ಕತ್ತರಿಸಿ, ಅವುಗಳನ್ನು ಒಯ್ಯಲು ಸಾಧ್ಯವಾಗದೇ ಅಲ್ಲಿಯೇ ಎಸೆದು ಕಳ್ಳರು ಪಾರಾಗಿದ್ದಾರೆ.ಎರಡು ಗಿಡಗಳು ಅಂದಾಜು ೧೦ ವರ್ಷ ವಯಸ್ಸಿನದ್ದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.ಉಪ ವಲಯ ಅರಣ್ಯಾಧಿಕಾರಿ ಸತೀಶ ಗಲಗಲಿ, ಘಟನೆಯ ಕುರಿತು ಆಲಮಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಆಲಮಟ್ಟಿ ಜಲಾಶಯ ಭದ್ರತೆಗೆಂದು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ನಿಯೋಜಿಸಲಾಗಿದೆ. ಜತೆಗೆ ಪೆuಟಿಜeಜಿiಟಿeಜಲೀಸ್ ಇಲಾಖೆ ಕೂಡ ಶ್ರಮ ವಹಿಸುತ್ತಿದೆ. ಇಷ್ಟೊಂದು ಭದ್ರತೆ ನಡುವೆಯೂ ಆಗಾಗ ಶ್ರೀಗಂಧದ ಮರಗಳು ಕಳ್ಳತನವಾಗುತ್ತಿರುವುದು ಮಾತ್ರ ಭದ್ರತೆಯ ಲೋಪ ಎತ್ತಿ ತೋರಿಸುತ್ತಿದೆ.ಆಲಮಟ್ಟಿಯ ನಾನಾ ಅಧಿಕಾರಿ ಕಚೇರಿ ಹಾಗೂ ಆಕರ್ಷಕ ಉದ್ಯಾನಗಳಲ್ಲಿ ಶ್ರೀಗಂಧದ ಮರಗಳನ್ನು ಬೆಳೆಸಲಾಗಿದೆ. ಕೆಲ ಮರಗಳು ಬೃಹದಾಕಾರವಾಗಿ ಬೆಳೆದಿದ್ದು, ಲಕ್ಷಾಂತರ ರೂ.ಗಳ ಮೌಲ್ಯ ಹೊಂದಿವೆ. ಇದು ಮರಗಳ್ಳರ ಪಾಲಿಗೆ ವರವಾಗಿದ್ದು, ಆಗಾಗ ಇಲ್ಲಿನ…
ತಿಕೋಟಾ & ಬಬಲೇಶ್ವರ ತಾಲೂಕುಗಳಲ್ಲಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಪಂ ಸಿಇಓ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಗುರುವಾರ ತಿಕೋಟಾ & ಬಬಲೇಶ್ವರ ತಾಲೂಕಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.ತಿಕೋಟಾ ಪಟ್ಟಣದ ಕೆ.ಜಿ.ಎಸ್ ಶಾಲೆಗೆ ಭೇಟಿ ನೀಡಿ, ಶಾಲೆಯ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿದ ಅವರು, ಶಿಥಿಲಾವಸ್ಥೆಗೊಂಡಿರುವ ಶಾಲಾ ಕೊಠಡಿಗಳಲ್ಲಿ ಮಕ್ಕಳಿಗೆ ಪಾಠ ಭೋಧನೆ ಮಾಡದೇ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಪಾಠ ಭೋಧನೆ ಮಾಡಲು ಉಸ್ತುವಾರಿ ಸಚಿವರ ನಿರ್ದೇಶನದಂತೆ ಕ್ರಮ ವಹಿಸಬೇಕು. ಶಾಲೆಯಲ್ಲಿನ ಕಂಪ್ಯೂಟರಗಳನ್ನು ವಿದ್ಯಾರ್ಥಿಗಳು ಜ್ಞಾನ ಅಭಿವೃದ್ಧಿಗೆ ಉಪಯೋಗಿಸುವಂತೆ ಪ್ರೇರಣೆ ನೀಡಬೇಕು ಎಂದು ಅವರು ಹೇಳಿದರು.ಮಳೆ ಬಂದ ಸಂದರ್ಭದಲ್ಲಿ ಯಾವುದೇ ಶಾಲಾ ಆವರಣದಲ್ಲಿ ಮಳೆ ನೀರು ನೀಲದಂತೆ ಅಗತ್ಯ ಮುಂಜಾಗೃತೆ ವಹಿಸಬೇಕು. ದುರಸ್ತಿಗೊಳಿಸುವುದು ಅವಶ್ಯಕವಿದ್ದಲ್ಲಿ ಕ್ರಿಯಾಯೋಜನೆ ತಯಾರಿಸಿ, ಇಲಾಖೆಯ ಮೇಲಾಧಿಕಾರಿಗಳಿಗೆ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.ನಂತರ ಕೋಟ್ಯಾಳ ಗ್ರಾ.ಪಂ. ವ್ಯಾಪ್ತಿಯ ಹರನಾಳ…
ಸಾತಿಹಾಳ ಗ್ರಾಮದ ಡೋಣಿ ನದಿಯ ಸೇತುವೆ ಮೇಲಿನ ಸಂಪರ್ಕ ನಿಷೇಧಿಸಿದ ಗ್ರಾಮಸ್ಥರು ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬಸವನಬಾಗೇವಾಡಿ-ಮುದ್ದೇಬಿಹಾಳ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಸಾತಿಹಾಳ ಗ್ರಾಮದ ಹತ್ತಿರದಲ್ಲಿರುವ ಡೋಣಿ ನದಿಯ ಸೇತುವೆ ಗುರುವಾರ ಪ್ರವಾಹಕ್ಕೆ ಒಳಗಾಗಿ ಮುಳುಗಿದ್ದು ಸುಮಾರು ೪ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.ತಾಲ್ಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಡೋಣಿ ನದಿ ಗುರುವಾರ ತುಂಬಿ ಹರಿಯುತ್ತಿದ್ದು, ಸಾತಿಹಾಳ ಸೇತುವೆ ನೀರಿನಿಂದ ಆವೃತ್ತವಾಗಿ ಮುಳುಗಿತು. ಬೆಳಿಗ್ಗೆ ಸಾರಿಗೆ ಬಸ್ ಸೇರಿದಂತೆ ಭಾರಿ ವಾಹನಗಳು ಮಾತ್ರ ಪ್ರವಾಹದ ನೀರಿನಲ್ಲಿಯೇ ಸಂಚರಿಸಿದವು. ಆದರೆ ಮಧ್ಯಾನ ೧೨.೩೦ ಗಂಟೆಯ ನಂತರ ಪ್ರವಾಹದ ಮಟ್ಟ ಹೆಚ್ಚಾಗಿ ಯಾವುದೇ ವಾಹನಗಳಿಗೆ ಆಸ್ಪದವಿಲ್ಲದಂತಾಯಿತು. ಇದರಿಂದ ಸಂಚಾರ ಸ್ತಬ್ಧಗೊಂಡು ಅಸ್ತವ್ಯಸ್ತವಾಯಿತು. ಸಾಯಂಕಾಲ ೪ ಗಂಟೆಯವರೆಗೆ ಪ್ರವಾಹದ ಮಟ್ಟ ಹೆಚ್ಚಾಗಿಯೇ ಇದ್ದು ಎರಡು ಕಡೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು.ಸೇತುವೆ ಮೇಲೆ ಪ್ರವಾಹ ಹೆಚ್ಚಾಗುತ್ತಿದ್ದಂತೆಯೇ ಮಾರ್ಕಬ್ಬಿನಹಳ್ಳಿ ಕ್ರಾಸ್ ಹತ್ತಿರ ದೇವರಹಿಪ್ಪರಗಿ ತಹಶೀಲ್ದಾರ ಪ್ರಕಾಶ ಸಿಂದಗಿ ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಕಂದಾಯ…
