Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2025-26 ನೇ ಶೈಕ್ಷಣಿಕ ಸಾಲಿಗೆ ಆದರ್ಶ ವಿದ್ಯಾಲಯ ಕಗ್ಗೊಡ ಶಾಲೆಯಲ್ಲಿ 7, 8 ಮತ್ತು 9 ನೇ ತರಗತಿಗೆ ಖಾಲಿ ಇರುವ ಸೀಟುಗಳಿಗೆ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲಾಗುವದು.ದಿನಾಂಕ: 03-07-2025 ರಿಂದ 10-07-2025 ರವರೆಗೆ ಕಗ್ಗೊಡ ಶಾಲೆಯಲ್ಲಿ ಅರ್ಜಿ ಪಡೆದು ಸೂಕ್ತ ಮಾಹಿತಿಗಳೊಂದಿಗೆ ಅರ್ಜಿ ಸಲ್ಲಿಸುವದು. ದಿನಾಂಕ: 25-07-2025 ರಂದು ಪ್ರವೇಶ ಪರೀಕ್ಷೆ ನಡೆಸಲಾಗುವದು.ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ತಾಲೂಕಿನ ಪಾಲಕರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಎಸ್. ಬಳೋಲಮಟ್ಟಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಶಾಲೆಯ ನೋಡಲ್ ಸುರೇಶ ಕುಶಾಲಕರ (9902716236) ತಾಲೂಕ ನೋಡಲ್ ಪ್ರಭು ಬಿರಾದಾರ(9880832448)ಇವರನ್ನು ಸಂಪರ್ಕಿಸಲು ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಕೋಶದ ವತಿಯಿಂದ ವಿಜಯಪುರ ಜಿಲ್ಲೆಯ ೫ ಗ್ರಾಮಗಳನ್ನು ದತ್ತು ಪಡೆಯಲು ಜಿಲ್ಲಾ ಪಂಚಾಯತ್ ಮಂಜೂರಾತಿ ನೀಡಿದೆ.ಈ ಗ್ರಾಮಗಳನ್ನು ಗುರುತಿಸಿ, ದತ್ತು ಪಡೆದ ಹಳ್ಳಿಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಣೆ, ಕೃಷಿ, ಯೋಗ, ಆರೋಗ್ಯ, ಕಲೆ, ಸಾಹಿತ್ಯ, ಕ್ರೀಡೆ ಮತ್ತು ಇನ್ನಿತರ ಚಟುವಟಿಕೆಗಳನ್ನು ಜಾರಿಗೆ ತರಲು ಜಿಲ್ಲಾ ಪಂಚಾಯತ್ ಸೂಚಿಸಿದೆ.ಮಹಿಳಾ ವಿವಿಯ ಎನ್‌ಎಸ್‌ಎಸ್ ಘಟಕ ಬಬಲೇಶ್ವರ ತಾಲೂಕಿನ ಕಣ್ಮುಚ್ಚಿನಾಳ, ಧನ್ಯಾಳ, ತಿಕೋಟಾ ತಾಲೂಕಿನ ಲೋಹಗಾವ್, ತೊರವಿ ಮತ್ತು ವಿಜಯಪುರ ತಾಲೂಕಿನ ಹಿಟ್ನಳ್ಳಿ ಗ್ರಾಮಗಳನ್ನು ದತ್ತು ಪಡೆಯಲಿದ್ದು ನಿರಂತರ ಕಾರ್ಯಕ್ರಮಗಳನ್ನು ಸಂಘಟಿಸಲಿದೆ ಎಂದು ಮಹಿಳಾ ವಿವಿಯ ಎನ್‌ಎಸ್‌ಎಸ್ ಕೋಶದ ಸಂಯೋಜಕರಾದ ಅಶೋಕಕುಮಾರ ಸುರಪುರ ಮತ್ತು ವಿಜಯಪುರ ಜಿಲ್ಲಾ ಮಹಿಳಾ ಮಹಾವಿದ್ಯಾಲುಯಗಳ ಎನ್‌ಎಸ್‌ಎಸ್ ನೋಡಲ್ ಅಧಿಕಾರಿ ಪ್ರೊ. ವಿಷ್ಣು ಶಿಂದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಿಎಲ್‌ಡಿಇ ಸಂಸ್ಥೆಯ ಚಾರ್ಟರ್ಡ್ ಅಕೌಂಟೆಂಟ್ ಮತ್ತು ಉಪ ಹಣಕಾಸು ಅಧಿಕಾರಿ ವೈ.ಎಸ್. ಜನವಾಡ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಚಾರ್ಟರ್ಡ್ ಅಕೌಂಟೆಂಟ್ ಮತ್ತು ಉಪ ಹಣಕಾಸು ಅಧಿಕಾರಿ ವೈ.ಎಸ್. ಜನವಾಡ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ಅಧ್ಯಯನ ವಿಭಾಗದಿಂದ ಆಯೋಜಿಸಿದ್ದ ‘ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದು ಪ್ರತಿಯೊಬ್ಬ ತೆರಿಗೆದಾರರಿಗೂ ಹಂತ-ಹಂತದ ಒಳನೋಟಗಳು’ ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.ಆದಾಯ ತೆರಿಗೆ ನಿಯಮಗಳು ಕಾಲಕಾಲಕ್ಕೆ ಬದಲಾಗುತ್ತಿವೆ. ಇ-ಫೈಲಿಂಗ್ ಮಾಡುವ ವೇಳೆ ನಿಖರವಾದ ಮಾಹಿತಿ ಹಾಗೂ ದಾಖಲೆಗಳನ್ನು ನೀಡುವುದು ಅತ್ಯಂತ ಅಗತ್ಯ. ಯಾವುದೇ ತಪ್ಪುಗಳಿಲ್ಲದಂತೆ ಅರ್ಜಿಯನ್ನು ಪರಿಶೀಲಿಸಿ ಸಲ್ಲಿಸಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಹಂಗಾಮಿ ಕುಲಪತಿಯಾಗಿದ್ದ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಮಾತನಾಡಿ, ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಇಂತಹ ಪ್ರಯೋಗಾತ್ಮಕ ಕಾರ್ಯಕ್ರಮಗಳು ಅವಶ್ಯಕ. ವಿಶ್ವವಿದ್ಯಾನಿಲಯವು ಈ ನಿಟ್ಟಿನಲ್ಲಿ ಸದಾ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಎಲ್.ಡಿ.ಇ. ಸಂಸ್ಥೆಯ ಎ. ಎಸ್.‌ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ, ಎಂ. ಬಿ. ಎ ವಿಭಾಗ ವತಿಯಿಂದ ಜುಲೈ 3 ರಂದು ಗುರುವಾರ ಸ್ನಾತಕ ಮತ್ತು ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗ ಮೇಳ(ಕ್ಯಾಂಪಸ್‌ ಸಂದರ್ಶನ)‌ವನ್ನು ಆಯೋಜಿಸಲಾಗಿದೆ.ಗುರುವಾರ ಬೆಳಗ್ಗೆ 10 ಗಂಟೆಗೆ ಬಿ.ಎಲ್.ಡಿ.ಇ. ಹೊಸ ಆವರಣದ ಎಂ.ಬಿ.ಎ. ಆಡಿಟೋರಿಯಂನಲ್ಲಿ ಈ ಉದ್ಯೋಗ ಮೇಳ ನಡೆಯಲಿದ್ದು, ಅದರಲ್ಲಿ ಪೇ-ಟಿಎಂ, ಆರ್. ಎನ್. ಎಸ್.‌ ಮೋಟರ್ಸ್‌, ಫೋನ್-ಪೇ, ಕನಿಷ್ಕ ಆಭರಣ, ಐಎಫ್.ಬಿ. ಮುತ್ತೂಟ್ ಫೈನಾನ್ಸ್‌, ನಿಪ್ಪೊನ್‌ ಪೇಂಟ್ಸ್‌, ಯಟಿಕಾರ್ಪ್‌, ಜಿಯೋ, ಮುಂತಾದ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ.ಆಸಕ್ತರು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕೆಂದು‌ ವಿಭಾಗದ ನಿರ್ದೇಶಕ ಡಾ. ಚಿದಾನಂದ ಜಿ. ಬ್ಯಾಹಟ್ಟಿ ಮತ್ತು ಉದ್ಯೋಗ ನಿಯೋಜನೆ ಅಧಿಕಾರಿ ಡಾ. ಮಹಾಂತೇಶ ಪಿ. ಕನಮಡಿ ತಿಳಿಸಿದ್ದಾರೆ.ಭಾಗವಹಿಸುವವರು ಕೆಳಗೆ ನಮೂದಿಸಿದ ಲಿಂಕ್ ನ್ನು ಉಪಯೋಗಿಸಿಕೊಂಡು ಹೆಸರನ್ನು ನೊಂದಾಯಿಸಿಕೊಳ್ಳಬೇಕು ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.Link: https://forms.gle/4i5yBLTqKDConT769

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ(ಇಗ್ನೋ )ದಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ಪದವಿ, ಸ್ನಾತಕೋತ್ತರ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶ ಆರಂಭವಾಗಿದ್ದು ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.ಪ್ರವೇಶಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ನಗರದ ರಾಮಮಂದಿರ ರಸ್ತೆಯ ಬಿ.ಎಲ್. ಡಿ.ಇ.ಸಂಸ್ಥೆಯ ಜೆ.ಎಸ್.ಎಸ್.ಶಿಕ್ಷಣ ಮಹಾವಿದ್ಯಾಲಯ ಆವರಣದಲ್ಲಿರುವ ಇಗ್ನೋ ಅಧ್ಯಯನ ಕೇಂದ್ರ 1307 ರಲ್ಲಿ ಸಂಪರ್ಕಿಸಬಹುದಾಗಿದೆ.ಅಲ್ಲದೆ ಆನಲೈನ್ ಮೂಲಕ www.ignouadmission.samarth.edu.in ಕ್ಕೆ ಲಾಗಿನ್ ಆಗಿ ನೊಂದಣಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ನಂ. 9980691291 ಗೆ ಸಂಪರ್ಕಿಸಬಹುದು ಎಂದು ಇಗ್ನೋ ಕೇಂದ್ರದ ಸಂಯೋಜಕ ಡಾ. ಮಂಜುನಾಥ ಕೋರಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Read More

ವಿಜಯಪುರದ ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ವೈದ್ಯರ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ಜು.1ರಂದು ವೈದ್ಯರ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವೈದ್ಯರಾದ ಡಾ.ಸುಧೀರ್ ರೇಶ್ಮಿ ಅವರು ಮಕ್ಕಳಿಗೆ ಆರೋಗ್ಯದ ಮಹತ್ವವನ್ನು ವಿವರಿಸಿದರಲ್ಲದೇ, ವಿಶೇಷ ಚೇತನತೆ ಹೊಂದಿದ ಮಕ್ಕಳಿಗೆ ಆರೋಗ್ಯದ ಬಗ್ಗೆ ಸದಾ ಜಾಗೃತರಾಗಿರಬೇಕು ಎಂದು ಸಲಹೆ ನೀಡಿದರು.”ಆರೋಗ್ಯವೇ ಜೀವನದ ಮೂಲಧಾರೆಯಾಗಿದೆ. ವಿಶೇಷ ಮಕ್ಕಳಿಗೆ ಆರೈಕೆ ಮತ್ತು ಪೋಷಣೆಯಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಸರಿಯಾದ ಆಹಾರ, ಸಮಯಪಾಲನೆಯು ಅವರಿಗೆ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗುತ್ತದೆ” ಎಂದು ಡಾ.ರೇಶ್ಮಿ ಹೇಳಿದರು.ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಅಧ್ಯಾಪಕರು, ಸಿಬ್ಬಂದಿಗಳು ಡಾ. ಸುಧೀರ್ ರೇಶ್ಮಿ ಅವರಿಗೆ ಪುಷ್ಪಗುಚ್ಛ ನೀಡಿ ಗೌರವಿಸಿದರು. ಬಳಿಕ ಮಕ್ಕಳಿಗೆ ಸಿಹಿ ಹಂಚಿ ದಿನಾಚರಣೆಯನ್ನು ಹರ್ಷೋತ್ಸಾಹದಿಂದ ಆಚರಿಸಲಾಯಿತು.ಕಾರ್ಯಕ್ರಮದ ಕೊನೆಯಲ್ಲಿ ಶಾಲಾ ಆಡಳಿತ ಮಂಡಳಿ ವೈದ್ಯರಿಗೆ ಧನ್ಯವಾದಗಳನ್ನು ತಿಳಿಸಿ, ಅಂತಹ ಸಾರ್ಥಕ ಕಾರ್ಯಕ್ರಮಗಳು ಮುಂದುವರೆಯಲಿ ಎಂಬ ಆಶಯ…

Read More

ಲೇಖನ- ವೀಣಾ ಹೇಮಂತಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ವಯಸ್ಸಾದ ತಂದೆ ತಾಯಿ ಆ ಮನೆಯಲ್ಲಿ ಇಬ್ಬರೇ. ಮುಂಜಾನೆ ನಿತ್ಯ ಕರ್ಮಗಳನ್ನು ಪೂರೈಸಿ ವಾಕಿಂಗ್ ಹೋಗುವ ಅವರಿಬ್ಬರೂ ಮನೆಗೆ ಬಂದು ಜೊತೆಯಾಗಿಯೇ ಅಡುಗೆ ಮಾಡಿ ತಿಂಡಿಯ ಬದಲು ಊಟ ಮಾಡಿ ಬಿಡುತ್ತಾರೆ. ಆತ ಆಫೀಸಿಗೆ ಹೊರಟರೆ ಆಕೆ ಕಾಲು ಚಾಚಿಕೊಂಡು ಕುಳಿತು ಪೇಪರ್ ಓದುತ್ತಾಳೆ.ಸ್ವಲ್ಪ ಹೊತ್ತಿನ ನಂತರ ಮನೆ ಕೆಲಸದಾಕೆ ಬಂದು ಇಡೀ ಮನೆಯ ಕಸಗುಡಿಸಿ ನೆಲ ಒರೆಸಿ, ಪಾತ್ರೆ ತೊಳೆದು ಹೋಗುವವರೆಗೂ ಆಕೆಯ ಹಿಂದೆ ಮುಂದೆ ಓಡಾಡಿ ಆಕೆಗೆ ಬೇಕಾದುದನ್ನು ಒದಗಿಸುವುದು ಮನೆಯ ಯಜಮಾನಿಯ ಕೆಲಸ. ಮಧ್ಯಾಹ್ನ ಆಕೆ ಬೇಕಾದರೆ ಒಂದಷ್ಟು ಊಟ ಮಾಡುತ್ತಾರೆ, ಇಲ್ಲವಾದರೆ ಒಂದು ಕಪ್ಪು ಚಹಾ ಮಾಡಿಕೊಂಡು ಕುಡಿದು ಒಂದು ಸಣ್ಣ ನಿದ್ದೆಯನ್ನು ತೆಗೆದು ಏಳುತ್ತಾಳೆ. ಸಂಜೆ ಗಂಡ ಮನೆಗೆ ಬರುವ ವೇಳೆಗೆ ಕಸ ಗುಡಿಸುವ ಆಕೆ ತಲೆ ಬಾಚಿಕೊಂಡು ಕೈ ಕಾಲು ಮುಖ ತೊಳೆದು ದೇವರಿಗೆ ದೀಪ ಮುಡಿಸಿ ಕಾಫಿ ಡಿಕಾಕ್ಷನ್ ಹಾಕಿಡುತ್ತಾರೆ. ಪತಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಾನು ಸನ್ಮಾನ ಮಾಡಿಸಿಕೊಳ್ಳುವುದು ದೊಡ್ಡದಲ್ಲ. ಇತರರನ್ನು ಗೌರವಿಸುವುದು, ಮೇಲಕ್ಕೆ ಎತ್ತಬೇಕು ಎಂದು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ, ಪಿ.ಎಚ್‌ಡಿ ಪಡೆದವರಿಗೆ ಸನ್ಮಾನ ಮಾಡಬೇಕೆಂದು ಕಾರ್ಯಕ್ರಮ ಮಾಡಿದ ಶಾಂತಗಂಗಾಧರ ಮಹಾಸ್ವಾಮಿಗಳ ಗುಣ ದೊಡ್ಡದು ಎಂದು ವಿಜಯಪುರದ ಜ್ಞಾನ ಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮಿಗಳು ಹೇಳಿದರು.ಸಿಂದಗಿ ಪಟ್ಟಣದ ಗುರುದೇವ ಆಶ್ರಮದಲ್ಲಿ ಶಾಂತಗಂಗಾಧರ ಮಹಾಸ್ವಾಮಿಗಳ ೭೮ನೇ ಜನ್ಮ ದಿನೋತ್ಸವದ ನಿಮಿತ್ತವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಸ್ವಾಮಿಗಳು ನೂರಾರು ಸಸಿಗಳನ್ನು ಹಚ್ಚಿದ್ದಾರೆ. ಅವರು ಹಚ್ಚಿದ ಸಸಿಗಳು ಇಂದು ಜ್ಞಾನದ ಹಣ್ಣನ್ನು ನೀಡುತ್ತಿವೆ. ಸಿದ್ದೇಶ್ವರ ಸ್ವಾಮಿಗಳು, ಶಾಂತಗಂಗಾಧರ ಮಹಾಸ್ವಾಮಿಗಳು ಅವರ ಶಿಷ್ಯರು. ನಾವೆಲ್ಲ ಸಂಭ್ರಮ ಪಡಬೇಕು. ಶಾಂತಗಂಗಾಧರ ಮಹಾಸ್ವಾಮಿಗಳು ಡಾಕ್ಟರೇಟ್ ಬಯಸಿದವರಲ್ಲ. ಅವರ ಸಾಧನೆಗೆ ಹುಡುಕಿಕೊಂಡು ಬಂದಿದೆ. ಸಾಕಷ್ಟು ಏಳುಬೀಳುಗಳನ್ನು ಎದುರಿಸಿದವರು. ಅದೆಲ್ಲವನ್ನು ಮೆಟ್ಟಿ ನಿಂತು ಸಮಾಜೋಧಾರ್ಮಿಕ ಕೆಲಸಗಳ ಜೊತೆಗೆ ಸಾಹಿತ್ಯದ ಕೃಷಿಯನ್ನು ಮಾಡಿದವರು ಎಂದರು.ಮೋಳೆ ಗ್ರಾಮದ ಸಂಚಾರಿ ಶರಣ ಡಿ.ಎಸ್.ಚಾಳೇಖರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಂತಗಂಗಾಧರ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಸಿಂದಗಿ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಮಾಡುತ್ತಿರುವ ತ್ಯಾಜ್ಯ ವಿಲೇವಾರಿಯನ್ನು ಬೇರೆಡೆ ಸ್ಥಳಾಂತರಿಸುವಂತೆ ಆಗ್ರಹಿಸಿ ರೈತರು ಹಾಗೂ ಜಮೀನುಗಳ ಮಾಲೀಕರು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಸೋಮವಾರ ಆಗಮಿಸಿದ ರೈತರು ಹಾಗೂ ಜಮೀನುಗಳ ಮಾಲೀಕರು ಪಟ್ಟಣ ಪಂಚಾಯಿತಿ ವಿಲೇವಾರಿ ಮಾಡುತ್ತಿರುವ ತ್ಯಾಜ್ಯದಿಂದ ತಮಗಾಗುತ್ತಿರುವ ತೊಂದರೆ ಕುರಿತು ತಹಶೀಲ್ದಾರರ ಗಮನ ಸೆಳೆದರು.ಈ ಸಂದರ್ಭದಲ್ಲಿ ರೈತಪ್ರತಿನಿಧಿ ಅರವಿಂದ ನಾಯ್ಕೋಡಿ ಮಾತನಾಡಿ, ಪಟ್ಟಣ ಪಂಚಾಯಿತಿ ವಿಲೇವಾರಿ ಮಾಡುತ್ತಿರುವ ಪ್ಲಾಸ್ಟಿಕ್ ಕಾಗದಗಳು ಜಮೀನುಗಳಲ್ಲಿ ಹಾರಾಡಿ ಬೆಳೆಗಳಿಗೆ ಸುತ್ತಿಕೊಳ್ಳುತ್ತಿವೆ. ಇದರಿಂದ ಬೆಳೆಗಳ ಬೆಳವಣಿಗೆಯ ಮೇಲೆ ಪರಿಣಾಮವಾಗುತ್ತಿದೆ. ಅಲ್ಲದೆ ಹಸಿ ಕಸ ಮತ್ತು ಸತ್ತ ಪ್ರಾಣಿಗಳನ್ನು ಅಲ್ಲಿಯೇ ಎಸೆದಿರುವುದರಿಂದ ಇಡೀ ವಾತಾವರಣ ಗಬ್ಬು ವಾಸನೆಯಿಂದ ಕೂಡಿದೆ. ಇದರಿಂದ ಜಮೀನುಗಳ ಮನೆಗಳಲ್ಲಿ ವಾಸಿಸುವ ಕುಟುಂಬಗಳಿಗೆ ಅಸಹನೀಯವೆನಿಸಿದೆ.ತ್ಯಾಜ್ಯ ವಿಲೇವಾರಿ ಮಾಡುವ ಸಿಬ್ಬಂದಿ ಕೆಲವು ಬಾರಿ ತ್ಯಾಜ್ಯಕ್ಕೆ ಬೆಂಕಿ ಹಚ್ಚುವುದರಿಂದ ಕಬ್ಬು ಬೆಳೆಗೆ ಬೆಂಕಿ ತಗಲುವ ಸಾಧ್ಯತೆಯಿದೆ. ತ್ಯಾಜ್ಯದ ಬೆಂಕಿಯಿಂದ ಇಡೀ ಪ್ರದೇಶ ಹೊಗೆಮಯವಾಗುತ್ತಿದೆ. ಅಲ್ಲದೇ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಮಹಾರಾಷ್ಟçದ ವಿವಿಧ ಜಲಾಶಯಗಳಿಂದ ನೀರನ್ನು ಭೀಮಾ ನದಿಗೆ ಹರಿಬಿಟ್ಟ ಪರಿಣಾಮದಿಂದಾಗಿ ಆಲಮೇಲ ತಾಲೂಕಿನ ದೇವಣಗಾಂವ ಸಮೀಪದ ಸೊನ್ನ ಬ್ಯಾರೇಜ್‌ಗೆ ಸಧ್ಯ ೪೭೬೯೦ ಕ್ಯೂಸೇಕ್ ನೀರು ಹರಿದು ಬರುತ್ತಿದೆ ಎಂದು ಕೆಎನ್‌ಎನ್‌ಎಲ್ ಎಇಇ ಸಂತೋಷಕುಮಾರ ಸಜ್ಜನ್ ಮಾಹಿತಿ ನೀಡಿದ್ದಾರೆ.ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸೊನ್ನ ಬ್ಯಾರೇಜ್‌ನ ಒಟ್ಟು ಸಂಗ್ರಹ ಸಾಮರ್ಥ್ಯ ೩.೧೬೬ ಟಿಎಂಸಿ ಇದ್ದು ಮಹಾರಾಷ್ಟçದ ಜಲಾಶಯಗಳಿಂದ ಒಟ್ಟು ೪೭೬೯೦ ಕ್ಯೂಸೇಕ್ಸ್ ನೀರು ಹರಿದು ಬಂದಿದ್ದರಿಂದ ಬ್ಯಾರೆಜ್‌ನ ೨೪ ಗೇಟ್‌ಗಳ ಮೂಲಕ ೪೦ ಸಾವಿರ ಕ್ಯೂಸೇಕ್ಸ್ ನೀರನ್ನು ನದಿಗೆ ಹರಿದು ಬಿಡಲಾಗುತ್ತಿದೆ. ಹೀಗಾಗಿ ಸೊನ್ನ ಬ್ಯಾರೇಜ್ ಕೆಳಗಡೆಯಲ್ಲಿ ನದಿಗೆ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುತ್ತಲಿದೆ.ಆದ್ದರಿಂದ ತಾಲೂಕಿನ ನದಿ ತೀರದ ದೇವಣಗಾಂವ, ಶಂಬೇವಾಡ, ಕಡ್ಲೇವಾಡ, ಕುಮಸಗಿ , ಚಿಕ್ಕಹವಳಗಿ, ಬಗಲೂರ ಗ್ರಾಮಗಳ ಜನರು ರೈತರು ಜಾಗೃತ ವಾಗಿ ಇರಬೇಕು ಸದ್ಯ ಭೀಮಾ ನದಿಯಲ್ಲಿಗ ಪ್ರವಾಹ ಪರಿಸ್ಥಿತಿ ಇಲ್ಲ. ಆದಾಗ್ಯೂ ಕೂಡ ಸಾರ್ವಜನಿಕರು ನದಿ ಪಾತ್ರಕ್ಕೆ ಹೋಗುವುದು ಸರಿಯಲ್ಲ ಎಂದು ಸಲಹೆ ನೀಡಿದ್ದಾರೆ.

Read More