Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಹಿಂದೂ ಭಾವೈಕ್ಯತೆ ಹಾಗೂ ಸೌಹಾರ್ದತೆಗೆ ಹೆಸರಾಗಿರುವ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿಯುತವಾಗಿ ಆಚರಿಸಬೇಕೆಂದು ಪಿಎಸ್‌ಐ ಆರೀಫ್ ಮುಷಾಪುರಿ ತಿಳಿಸಿದರು.ಸಿಂದಗಿ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡ ಮೋಹರಂ ಹಬ್ಬದ ನಿಮಿತ್ತ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮೊಹರಂ ಹಬ್ಬವು ೧೦ ದಿನಗಳವರೆಗೆ ನಡೆಯುತ್ತಿದ್ದು. ನಾವೇಲ್ಲರೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕು. ಬಗ್ಗೆ ಸೂಕ್ತ ನಿಗಾವಹಿಸಲಾಗುವುದು. ಹಾಗೂ ತಪ್ಪು ಕಂಡುಬಂದರೆ ಅಂತವರ ಮೇಲೆ ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾರು ಕೂಡ ಅಹಿತಕರ ಘಟನೆಗೆ ಆಸ್ಪದ ನೀಡಬಾರದು. ಸಿಂದಗಿಯಲ್ಲಿ ೮ ಪಂಜಾ ಮತ್ತು ೪ಡೋಲಿಗಳಿರುವ ಕಾರಣ ಆ ಪ್ರದೇಶದಲ್ಲಿ ಆಯಾ ಸಮಿತಿಯವರು ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸಬೇಕು. ಮತ್ತು ನಿಮ್ಮ ಪಂಜಾ ಡೋಲಿ ಕುಡಿಸುವ ಜಾಗದಲ್ಲಿ ಸ್ವಯಂ ಸೇವಕರನ್ನು ನೇಮಿಸಿಕೊಳ್ಳಬೇಕು.ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟಗಳನ್ನ ಹರಿಬಿಟ್ಟು ಸಮಾಜದ ಸ್ವಾಸ್ತ್ಯ ಕದಡುವ ಪ್ರಯತ್ನ ಮಾಡುತ್ತಾರೆ. ಅಂತಹ ಸಮಾಜ ಘಾತುಕರನ್ನು ಸಾಮಾಜಿಕ ಜಾಲತಾಣಗಳ ಮೇಲೆ ಸೂಕ್ತ ನಿಗಾವಹಿಸಲಾಗುವುದು ಹಾಗೂ ತಪ್ಪು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಾಲೆಗಳು ಸಾಮಾನ್ಯವಾಗಿ ಬಣ್ಣಗಳ ದಿನವನ್ನು ಕಿರಿಯ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶ್ರೇಣಿಗಳ ವಿದ್ಯಾರ್ಥಿಗಳಿಗೆ ಒಂದು ಮನರಂಜನೆ ಮತ್ತು ಶೈಕ್ಷಣಿಕ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದೆ ಎಂದು ಕ್ರಿತಯೇಟಿವ್ ಕಿಡ್ಸ್ ಹೋಮ್‌ನ ಮುಖ್ಯಗುರುಮಾತೆ ಡಾ.ಜ್ಯೋತಿ ಪೂಜಾರ ಹೇಳಿದರು.ಸಿಂದಗಿ ಪಟ್ಟಣದ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ಕ್ರಿಯೇಟಿವ್ ಕಿಡ್ಸ್ ಹೋಮ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡ ಬಣ್ಣಗಳ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಬಾಲ್ಯದ ಶಿಕ್ಷಣದಲ್ಲಿ ಬಣ್ಣಗಳ ದಿನವನ್ನು ಆಚರಿಸುವುದರಿಂದ ಮಕ್ಕಳಿಗೆ ಹಲವಾರು ಬೆಳವಣಿಗೆಯ ಪ್ರಯೋಜನಗಳಿವೆ. ಇದು ಬಣ್ಣ ಗುರುತಿಸುವಿಕೆ, ಅರಿವಿನ ಕೌಶಲ್ಯಗಳು, ಸೃಜನಶೀಲತೆ ಮತ್ತು ಸಂವೇದನಾ ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ಜೊತೆಗೆ ಸಾಮಾಜಿಕ ಸಂವಹನ ಮತ್ತು ಭಾಷಾ ಕೌಶಲ್ಯಗಳನ್ನು ಬೆಳೆಸುತ್ತದೆ. ಬಣ್ಣಗಳ ದಿನದೊಂದಿಗೆ ಸಂಬಂಧಿಸಿದ ಮೋಜಿನ ಮತ್ತು ಆಕರ್ಷಕ ಚಟುವಟಿಕೆಗಳು ಚಿಕ್ಕ ಮಕ್ಕಳಿಗೆ ಕಲಿಕೆಯನ್ನು ಆನಂದದಾಯಕ ಮತ್ತು ಸ್ಮರಣೀಯವಾಗಿಸುತ್ತದೆ ಎಂದು ತಿಳಿಸಿದರು.ವಿದ್ಯಾರ್ಥಿಗಳು ಬಣ್ಣ ಬಣ್ಣದ ಬಟ್ಟೆ ಹಾಕಿಕೊಂಡು, ಅದೇ ಬಣ್ಣದ ಮಾದರಿಗಳನ್ನು ತಂದು ಅದರ ಬಗ್ಗೆ ವಿವರಿಸಿ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದ ಶಿವಾನುಭವ ಮಂಟಪದಲ್ಲಿ ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಮಾವೂರಿನ ಬಾಲಲೀಲಾ ಸಂಗಮೇಶ್ವರ ನಾಟ್ಯ ಸಂಘವು ಹಿರಿಯ ಕಲಾವಿದ ಶಿವಲಿಂಗಯ್ಯ ಹಿರೇಮಠ ಅವರ ಮಗನ ಶಿಕ್ಷಣದ ಸಹಾಯರ್ಥವಾಗಿ ಭಾನುವಾರ ಸಂಜೆ ಪ್ರದರ್ಶನಗೊಂಡ ಬಂಜೆ ತೊಟ್ಟಿಲು ನಾಟಕ ಪ್ರೇಕ್ಷಕರನ್ನು ಮನಸೂರೆಗೊಂಡಿತ್ತು.ನಾಟಕದಲ್ಲಿ ಕಲಾವಿದರಾದ ಅನಿತ ಹುಬ್ಬಳ್ಳಿ, ಶಶಿಕುಮಾರ ಜೀವಾಪುರ, ಮಂಜು ಹುಬ್ಬಳ್ಳಿ, ಶಿವಲಿಂಗಸ್ವಾಮಿ ಮಾವೂರು, ಚನ್ನವೀರಯ್ಯ, ಈರಣ್ಣ ಮೈಂದರಗಿ, ಸಾವಿತ್ರಮ್ಮ ದಾವಣಗೇರಿ, ಮಹಾದೇವಿ ದಾವಣಗೇರಿ, ಪ್ರೇಮಾಬಾಯಿ ತಾಳಿಕೋಟಿ, ಮಂಜುಳಾ ಹಾವೇರಿ ಮನೋಜ್ಞವಾಗಿ ಅಭಿನಯಿಸಿದರು.ನಾಟಕಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದ ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ರಂಗಭೂಮಿಯ ನಾಟಕಗಳನ್ನು ನೋಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಮಾಜಿಕ ಪ್ರeಯನ್ನು ಬೆಳೆಸಲು ನಾಟಕಗಳು ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು. ಆಧುನಿಕತೆಗೆ ಕಲೆಗಳು ಸೊರಗುತ್ತಿವೆ ಎಂಬ ಮನೋಭಾವ ಬೇಡ. ಕಲೆಗೆ ಸದಾ ಬೆಲೆ ಇರುತ್ತದೆ ಎಂದರು.ಹಿರಿಯ ಕಲಾವಿದ ಶಿವಲಿಂಗಯ್ಯ ಹಿರೇಮಠ ಅವರ ಮಗನ ಶಿಕ್ಷಣ…

Read More

ಪ.ಜಾತಿ/ವರ್ಗಗಳ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ವಿಜಯಪುರ ಜಿ.ಪಂ. ಸಿಇಓ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೌರ್ಜನ್ಯ ಪ್ರಕರಣಗಳಲ್ಲಿ ಸಕಾಲದಲ್ಲಿ ತ್ವರಿತ ಪರಿಹಾರ ಒದಗಿಸಿಕೊಡಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಪಂಚಾಯತಿಯ ಮುಖ್ಯಕಾರ್ಯ ನಿರ್ವಣಾಧಿಕಾರಿಗಳಾದ ರಿಷಿ ಆನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಈ ಸೂಚನೆ ನೀಡಿದರು.ಅರ್ಹ ಫಲಾನುಭವಿಗಳು ಪಹಣಿ ಪತ್ರ ಪಡೆಯಲು ಸಮಾಜ ಕಲ್ಯಾಣ ಇಲಾಖೆಯಿಂದ ಭೂ ಒಡೆತನ ಯೋಜನೆಯಡಿಯ ಫಲಾನುಭವಿಗಳ ಪಟ್ಟಿಯನ್ನು ಸಿದ್ದಪಡಿಸಿ, ತಹಶೀಲ್ದಾರರಿಗೆ ಸಲ್ಲಿಸಿ, ಪಹಣಿಪತ್ರ ಸಿದ್ದಪಡಿಸಲು ಸಹಕರಿಸಬೇಕು ಎಂದು ಅವರು ಹೇಳಿದರು.ಡಾ. ಬಿ.ಆರ್.ಅಂಬೇಡ್ಕರ ವೃತ್ತ ನಿರ್ಮಾಣಕ್ಕೆ ಸ್ಥಳಾವಕಾಶ ಕುರಿತು ಸದಸ್ಯರಾದ ಯಮನಪ್ಪ ಸಿದರಡ್ಡಿ ಅವರು ಮಾಡಿದ ಮನವಿ ಆಲಿಸಿದ ಅವರು, ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಿದರು.ಪ್ರತಿ ಸಭೆಗೂ ಮುನ್ನ…

Read More

ಕಲಿಸಿದ ಶಿಕ್ಷಕರನ್ನು ಗೌರವಿಸಿದ ರ‍್ಯಾಂಕ್ ವಿದ್ಯಾರ್ಥಿ ಪ್ರಜ್ವಲ್ | ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ಸಾಧನೆಯ ಹಿಂದೆ ಶಿಕ್ಷಕರ ಶ್ರಮ ಇರುತ್ತದೆ ಎನ್ನುವುದನ್ನು ಅರಿತುಕೊಂಡು ಅವರನ್ನು ಅಭಿಮಾನ ಗೌರವದಿಂದ ಸತ್ಕರಿಸುವ ಜನಗಳು ಬಹಳ ವಿರಳ. ಆದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನನ್ನ ಮಗ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದ್ದಾನೆ ಎಂದರೆ ಅದರ ಹಿಂದಿರುವ ಪ್ರೇರಕ ಶಕ್ತಿ ಕಲಿಸಿದ ಗುರುಗಳು. ಅವರನ್ನು ಸತ್ಕರಿಸುವುದು ನಮ್ಮ ಆಧ್ಯ ಕರ್ತವ್ಯ ಎಂದು ಶಾಲೆಗೆ ಬಂದು ಶಿಕ್ಷಕರಿಗೆ ಸನ್ಮಾಸಿನಿಸಿದ್ದು ನಿಜಕ್ಕೂ ಹೃದಯ ಸ್ಪರ್ಷಿಯಾಗಿದೆ. ಈ ಸಂಸ್ಕಾರವನ್ನು ಭಾರತೀಯ ಪರಂಪರೆ ನಮಗೆ ಬಳುವಳಿಯಾಗಿ ನೀಡಿದೆ ಎಂದು ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ ಹೇಳಿದರು.ಆದರ್ಶನಗರದ ಎಕ್ಸಲಂಟ್ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ, ೨೦೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ, ಪ್ರಜ್ವಲ್ ಪತ್ತಾರ ನ ಪಾಲಕರು ಆಯೋಜನೆ ಮಾಡಿದ್ದ…

Read More

ರೂ.10 ಕೋಟಿ ಕಾಮಗಾರಿಗೆ ಭೂಮಿಪೂಜೆ | ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಕಳೆದ ಏಳು ವರ್ಷಗಳಲ್ಲಿ ಗುಣಮಟ್ಟದ ರಸ್ತೆಗಳು, ಚರಂಡಿ ನಿರ್ಮಾಣ, ಕಸ ವಿಲೇವಾರಿ ಹೀಗೆ ಪ್ರತಿಯೊಂದರಲ್ಲಿಯೂ ಆಗಿರುವ ಅಭಿವೃದ್ಧಿ ಕಾರ್ಯಗಳಿಂದ ನಗರದ ಸೌಂದರ್ಯಕರಣದ ಜೊತೆಗೆ ಆಸ್ತಿಗಳ ಮೌಲ್ಯ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಏಕತಾ ನಗರದ ಶ್ರೀ ಸಿದ್ದಿ ವಿನಾಯಕ ದೇವಸ್ಥಾನ ಹತ್ತಿರ ಭಾನುವಾರ ನಗರ ಮತಕ್ಷೇತ್ರದ ವ್ಯಾಪ್ತಿಯ ತೊರವಿ ಗ್ರಾಮ ಪಂಚಾಯಿತಿಯಲ್ಲಿ ಬರುವ ನವರಸಪುರದ ವಿವಿಧ ಕಾಲೊನಿಗಳಲ್ಲಿ ಆರ್.ಡಿ.ಪಿ.ಆರ್ ಇಲಾಖೆಯಿಂದ ಮಂಜೂರಿಸಿದ ರೂ.10 ಕೋಟಿ ಅನುದಾನದಲ್ಲಿ ಆಂತರಿಕ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ನಗರದಲ್ಲಿ ಅಮಾಯಕರ ಆಸ್ತಿಗಳನ್ನು ಕಬಳಿಸುವ ಲಪುಟರಿದ್ದಾರೆ. ತಮ್ಮ ಉತಾರೆಗಳನ್ನು ಆಗಾಗ ಪರಿಶೀಲಿಸಿ, ಆನಲೈನ್ ದಲ್ಲೂ ನೋಡಲು ಅವಕಾಶವಿದೆ. ಅಲ್ಲದೆ, ಸಾರ್ವಜನಿಕರ ಉಪಯೋಗಕ್ಕೆ ಮೀಸಲಿಟ್ಟ ಜಾಗೆಗಳನ್ನು ಸಹ ಪುಡಾರಿಗಳು ಕಬಳಿಸಲು ಯತ್ನಿಸುತ್ತಿದ್ದು, ತಮ್ಮ ಗಮನಕ್ಕೆ ಬಂದ ತಕ್ಷಣ…

Read More

ತಿಕೋಟಾ ನೂತನ ಕಲಾ ಮಹಾವಿದ್ಯಾಲಯದಲ್ಲಿ ಸೇವಾ ವಯೋನಿವೃತ್ತಿ ಸಮಾರಂಭ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಮನುಷ್ಯನಾದವನು ತನ್ನ ಕೆಲಸ ಕಾರ್ಯದಲ್ಲಿ ಸಹಕಾರ, ಸಹಬಾಳ್ವೆ, ಸಮನ್ವಯತೆ ಹಾಗೂ ಎಲ್ಲರ ಜೊತೆ ಉತ್ತಮ ಸಂಬಂಧ ಉಳಿಸಿಕೊಂಡು ಹೋಗುವುದು ಬಹಳ ಮುಖ್ಯವಾಗಿದೆ ಎಂದು ಬಿ. ಎಲ್. ಡಿ. ಇ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ. ವಿಲಾಸ ಬಗಲಿ ಅವರು ಹೇಳಿದರು.ಬಿ ಎಲ್ ಡಿ ಇ ಸಂಸ್ಥೆಯ ತಿಕೋಟಾ ನೂತನ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಆರ್. ಬಿ. ಸಿರಸಂಗಿ ಹಾಗೂ ಕಚೇರಿಯ ಸಹಾಯಕಿ ಮಲ್ಲಮ್ಮ ವಿಭೂತಿಯವರ ವಯೋನಿವೃತ್ತಿ ಬಿಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಿಕ್ಷಕರಿಗೆ ಬೋಧನಾ ವೃತ್ತಿಯಲ್ಲಿ ಅಳವಡಿಸಿಕೊಂಡ ಅತ್ಯುತ್ತಮ ಕಲಿಕಾ ವಿಧಾನವೇ ಅವರನ್ನು ಜನಪ್ರಿಯಗೊಳಿಸುತ್ತದೆ. ಅಂತವರ ಸಾಲಿನಲ್ಲಿ ಶಿರಸಂಗಿಯವರು ಒಬ್ಬರಾಗಿದ್ದಾರೆ. ಉತ್ತಮ ಶಿಕ್ಷಕರ ಶ್ರೇಷ್ಠ ಗುಣಗಳನ್ನು ವಿದ್ಯಾರ್ಥಿಗಳು ಅನುಕರಣೆ ಮಾಡುತ್ತಾರೆ. ಹೀಗಾಗಿ ಶಿಕ್ಷಕರಲ್ಲಿ ಪ್ರಾಮಾಣಿಕತೆ, ಆದರ್ಶ, ನಿಷ್ಠೆ, ಹಾಗೂ ದಕ್ಷತೆ ಬಹಳ ಮಹತ್ವದ್ದಾಗಿವೆ. ಒಬ್ಬ ಸಾಮಾನ್ಯ ಶಿಕ್ಷಕ ಜಗತ್ತಿನಲ್ಲಿ ಏನೆಲ್ಲಾ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಜೀವನದಲ್ಲಿ ಯಶಸ್ವಿ ವ್ಯಕ್ತಿಯಾಗಲು ಪುಸ್ತಕ ಜ್ಞಾನವಷ್ಟೇ ಸಾಲದು, ಮಸ್ತಕ ಜ್ಞಾನವೂ ಬೇಕು. ತರಗತಿಯಲ್ಲಿ ಪಡೆದ ಜ್ಞಾನದೊಂದಿಗೆ ಲೋಕ ಜ್ಞಾನವೂ ಬೇಕು. ವಿಷಯ ಜ್ಞಾನದೊಂದಿಗೆ ವ್ಯವಹಾರ ಜ್ಞಾನವಿದ್ದರೆ ಮಾತ್ರ ಯಶಸ್ಸು ಗಳಿಸಬಹುದು ಎಂದು ಅಧ್ಯಾತ್ಮಿಕ ಚಿಂತಕರು ಹಾಗೂ ವಿಶ್ರಾಂತ ಮುಖ್ಯ ಅಭಿಯಂತರರು ಆದ ಶಂಕರ ದೇವನೂರ ಹೇಳಿದರು.ಹೋರ್ತಿ ಗ್ರಾಮದ ಸರ್ವೋದಯ ಪದವಿ ಪೂರ್ವ ಮಹಾವಿದ್ಯಾಲಯ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ 2025 ಉದ್ಘಾಟಿಸಿ ಮಾತನಾಡಿ, ಅವರು ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಶಿಕ್ಷಕರ ವೃತ್ತಿ ಶ್ರೇಷ್ಠ ವೃತ್ತಿ. ಶಿಕ್ಷಕರು ಶರಣರ ವಚನಗಳ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಸಂಸ್ಕಾರ ಬೆಳೆಸಬೇಕು ಈ ನಿಟ್ಟಿನಲ್ಲಿ ಹೋರ್ತಿ ಸರ್ವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಶಿಕ್ಷಕರು ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆ ಸಂಸ್ಕಾರ ನೀಡುವ ಮಾಹಾನ ಕಾಯ೯ ಮಾಡುತ್ತಿದೆ. ಇಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ತಂದೆ ತಾಯಿ ಸಮಾಜದ ಹಾಗೂ ದೇಶದ ಋಣ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯ ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳಾದ ಶಕುಂತಲಾ ಶಾರದಳ್ಳಿ ಮತ್ತು ವಿಕ್ರಾಂತ ಶಾರದಳ್ಳಿ ಬೆಳ್ಳಿ ಮತ್ತು ಕಂಚಿನ ಪದಕ ಗಳಿಸಿ ಸಾಧನೆಗೈದಿದ್ದಾರೆ.ಕೊಪ್ಪಳ ಜಿಲ್ಲೆಯ ಹನುಮಸಾಗರದ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ನಡೆದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ಕ್ರೀಡಾಕೂಟದಲ್ಲಿ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗಳಿಸಿ ಶಾಲೆಯ ಹಾಗೂ ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ತರಬೇತಿದಾರ ಶಿವಕುಮಾರ ಶಾರದಳ್ಳಿ ತಿಳಿಸಿದರು.ಇದೇ ಸಂದರ್ಭದಲ್ಲಿ ಟೂರ್ನಿಯ ಆಯೋಜಕರು ಐಪಿಎಸ್ ಎಫ್ ತಾಂತ್ರಿಕ ನಿರ್ದೇಶಕ ಅಬ್ದುಲ್ ರಜಾಕ್ , ಐಪಿಎಸ್ ಎಫ್ ಉಪಾಧ್ಯಕ್ಷ ವಿಜಯ ಹಂಚನಾಳ ಸೇರಿ ಟೂರ್ನಿಯಲ್ಲಿ ಉಪಸ್ಥಿತರಿದ್ದ ಮುಖಂಡರ ಸಮ್ಮುಖದಲ್ಲಿ ವಿಜೇತ ಕ್ರೀಡಾ ಪಟುಗಳಿಗೆ ಮೆಡಲ್ ಹಾಗೂ ಪ್ರಮಾಣ ಪತ್ರ ವಿತರಿಸಿ ಶುಭಹಾರೈಸಿದರು.ಟೂರ್ನಿಯಲ್ಲಿ ಪದಕ ವಿಜೇತರಾಗಿರುವ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿಯ ಸರ್ಕಾರಿ ಆದರ್ಶ ವಿದ್ಯಾಲಯದ 2025 -26 ನೇ ಸಾಲಿನ 7,8, 9ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.ತರಗತಿವಾರು ಮತ್ತು ಮೀಸಲಾತಿವಾರು ಅರ್ಜಿಯನ್ನು ದಿನಾಂಕ 03.07.2025 ರಿಂದ ಶಾಲೆಯಲ್ಲಿ ವಿತರಿಸಲಾಗುವುದು. ಆಸಕ್ತ ವಿದ್ಯಾರ್ಥಿಗಳು, ಪಾಲಕರು, ಖುದ್ದಾಗಿ ಶಾಲೆಗೆ ಭೇಟಿ ನೀಡಿ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಜು10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಮೊ: 9945614301 ಗೆ ಸಂಪರ್ಕಿಸಬಹುದು.

Read More