Subscribe to Updates
Get the latest creative news from FooBar about art, design and business.
Author: editor.udayarashmi@gmail.com
ತಿಕೋಟಾ ತಾಲ್ಲೂಕಿನೆಲ್ಲೆಡೆ ಸುರಿದ ಭಾರಿ ಮಳೆ | ತುಂಬಿ ಹರಿದ ಹಳ್ಳ ಕೊಳ್ಳ | ದೇವಸ್ಥಾನ ಜಲಾವೃತ | ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲ್ಲೂಕಿನೆಲ್ಲೆಡೆ ಮಂಗಳವಾರ ರಾತ್ರಿ ಸುರಿದ ಮಳೆದ ಹಳ್ಳಕೊಳ್ಳಗಳು, ಬಾಂದಾರಗಳು ತುಂಬಿ ಹರಿಯುತ್ತಿದ್ದು ಹಲವೆಡೆ ಅಪಾಯಮಟ್ಟ ಮೀರಿ ಸೇತುವೆ ಮೇಲೆ ನೀರು ಹರಿಯುತ್ತಿದೆ.ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ಹಳ್ಳ ಬರಪೂರ ತುಂಬಿ ಹರಿಯುತ್ತಿದ್ದು, ದೇವಸ್ಥಾನ ಸಂಪೂರ್ಣ ನೀರಿನಲ್ಲಿ ಮುಳುಗಿದೆ. ಗರ್ಭಗುಡಿಯಲ್ಲಿ ಆರೇಳು ಅಡಿ ನೀರು ನಿಂತಿದ್ದು ಪೂಜಾ ಕೈಂಕರ್ಯ ಸ್ಥಗಿತಗೊಂಡಿದೆ. ಸೇತುವೆ ಮೇಲೆ ಅಪಾಯ ಮಟ್ಟ ಮೀರಿ ನೀರು ಹರಿಯುತ್ತಿದ್ದು, ನೀರಿನ ಜೊತೆ ಚೆಲ್ಲಾಟ ಆಡುತ್ತಾ ಬೈಕ್ ಮೇಲೆ ಯುವಕರು ಸೇತುವೆ ದಾಟುವಾಗ ಬೈಕ್ ನೀರಿನಲ್ಲಿ ಕೊಚ್ಚಿ ಹೋಗಿದೆ. ಬೈಕ್ ಸವಾರ ಜಸ್ಟ ಮಿಸ್ ಆಗಿ ದಡ ಸೇರಿದ್ದಾನೆ. ತಾಜಪುರ ರಸ್ತೆ ಸೇತುವೆ ಮೇಲೆ ನೀರು ಇರುವದರಿಂದ ಶಾಲಾ ಮಕ್ಕಳಿಗೆ ತೊಂದರೆಯಾಯಿತು. ಸ್ಥಳಿಯರು ಮಕ್ಕಳಿಗೆ ಸಹಾಯ ಮಾಡಿ ಸೇತುವೆ ದಾಟಿಸಿದರು.ಅಧಿಕಾರಿ ಭೇಟಿ: ಕೆಜಿಎಸ್ ಶಾಲೆಗೆ ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಡಿ.ಮೋಸಲಗಿ,…
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕು ಆಡಳಿತದ ವತಿಯಿಂದ ಆ.೧೫ರಂದು ಆಯೋಜಿಸುವ ೭೯ನೇ ಸ್ವಾತಂತ್ಯೋತ್ಸವದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಹಿನ್ನೆಲೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಚಡಚಣ ತಹಶೀಲ್ದಾರ ಸಂಜಯ ಇಂಗಳೆ ಅವರು ಕರೆ ನೀಡಿದರು.ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಸ್ವಾತಂತ್ರೋತ್ಸವದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ವಾತಂತ್ರೋತ್ಸವದ ದಿನಾಚರಣೆ ಪ್ರಯುಕ್ತ ಆ.೧೫ರಂದು ಬೆಳಿಗ್ಗೆ ೮:೩೦ ಕ್ಕೆ ಪಟ್ಟಣದ ಶ್ರೀ ಸಂಗಮೇಶ್ವರ ಶಾಲಾ ಕಾಲೇಜ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಪಟ್ಟಣದ ಪ್ರಮುಖ ಬೀದಿ ಹಾಗೂ ವೃತ್ತಗಳ ಸ್ವಚ್ಛತೆ ಕುರಿತು ಪ.ಪಂ.ಮುಖ್ಯಾಧಿಕಾರಿಗಳು ನಿಗಾ ವಹಿಸಬೇಕು. ಸ್ವಾತಂತ್ರೋತ್ಸವದ ದಿನಾಚರಣೆ ಸಮಾರಂಭದಲ್ಲಿ ಯಾವುದೇ ಗೊಂದಲಗಳಾದಂತೆ ಅಚ್ಚುಕಟ್ಟಾಗಿ ನಿರ್ವಹಿಸಲು ವಿವಿಧ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.ಪ.ಪಂ.ಮುಖ್ಯಾಧೀಕಾರಿ ಬಾಬಾಸಾಹೇಬ ತಾವಸೆ, ತಾ.ಪಂ.ಅಧಿಕಾರಿ ಸಂಜಯ ಖಡಗೇಕರ, ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ವಿಜಯಕುಮಾರ ಹವಾಲ್ದಾರ, ಪ.ಪಂ.ಸದಸ್ಯ ಶ್ರೀಕಾಂತ ಗಂಟಗಲಿ, ಚೇತನ ನೀರಾಳೆ ಸೇರಿದಂತೆ ಪ.ಪಂ.ಸದಸ್ಯರು, ಶಿರಸ್ತೆದಾರ ರವಿ ಹಡಪದ, ಕಂದಾಯ ನೀರಿಕ್ಷಕ ವಿಠ್ಠಲ ಕೋಳಿ, ಆಹಾರ…
ರೂ.೫ಕೋಟಿ ವೆಚ್ಚದ ಮೌಲಾನ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಅಶೋಕ ಮನಗೂಳಿ ಮಾಹಿತಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜ್ಯ ಸರಕಾರ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡುವುದರ ಜೊತಗೆ ಪ್ರಾಥಮಿಕ, ಪ್ರೌಢ ಶಾಲೆ-ಕಾಲೇಜುಗಳ ಮೂಲಭೂತ ಸೌಕರ್ಯಕ್ಕಾಗಿ ವಿಶೇಷ ಅನುದಾನ ನೀಡುತ್ತಿದೆ. ಹಿಕ್ಕನಗುತ್ತಿ ಗ್ರಾಮದಲ್ಲಿ ಅಲ್ಪ ಸಂಖ್ಯಾತರಿಗಾಗಿಯೇ ರೂ.೧೬ಕೋಟಿ ಅಲ್ಪ ಸಂಖ್ಯಾತರ ಮೂರಾರ್ಜಿ ವಸತಿ ಶಾಲೆ ಮತ್ತು ರೂ.೮ಕೋಟಿಯ ವಸತಿ ಗೃಹಗಳಿಗಾಗಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಜಯಪುರ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ರೂ.೫ಕೋಟಿ ವೆಚ್ಚದ ಮೌಲಾನ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮತಕ್ಷೇತ್ರಕ್ಕೆ ೨ ಮೌಲಾನ ಆಜಾದ್ ಶಾಲೆಯನ್ನು ನೀಡುವ ಜೊತೆಗೆ ಸಿಂದಗಿ ನಗರದ ೩೨ಕೋಣೆಯ ರೂ.೫ಕೋಟಿ ವೆಚ್ಚದ ಅನುದಾನವನ್ನು ರಾಜ್ಯ…
ರೈತರಿಗೆ ಸಮರ್ಪಕ ರಸಗೊಬ್ಬರ ಪೂರೈಸಲು ಆಗ್ರಹಿಸಿ ಕರವೇ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರಕಾರದಲ್ಲಿ ಸಾಕಷ್ಟು ಗೊಬ್ಬರವಿದ್ದರೂ ಅದರ ಅಭಾವವನ್ನು ಸೃಷ್ಟಿ ಮಾಡಿ ರಸಗೊಬ್ಬರಕ್ಕಾಗಿ ರಾಜ್ಯದಲ್ಲಿ ರೈತರು ಪರದಾಡುವಂತೆ ರಾಜ್ಯ ಸರಕಾರ ಮಾಡಿದೆ ಎಂದು ಕರವೇ ಮುಖಂಡ ಸಿದ್ದು ಬುಳ್ಳಾ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ರೈತರಿಗಾಗಿ ಸಮರ್ಪಕವಾಗಿ ರಸಗೊಬ್ಬರ ಪೂರೈಸುವಂತೆ ಪ್ರತಿಭಟಿಸಿ, ತಾಲೂಕು ದಂಡಾಧಿಕಾರಿ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ರಸಗೊಬ್ಬರ ಅಭಾವವನ್ನು ಸೃಷ್ಟಿ ಮಾಡಿ ಅದರ ಬೆಲೆಯನ್ನು ಹೆಚ್ಚಿಗೆ ಮಾಡಿ ದ್ವಿಗುಣಗೊಳಿಸಿ ಸರಕಾರ ದುಪ್ಪಟ್ಟು ಬೆಲೆಯನ್ನು ರೈತರ ಮೇಲೆ ಹಾಕುವ ಹುನ್ನಾರ ತಾಲೂಕು ಮತ್ತು ಇಡೀ ರಾಜ್ಯದಲ್ಲಿ ಅಧಿಕಾರಿಗಳು ಮತ್ತು ವರ್ತಕರು ಮಾಡುತ್ತಿದ್ದಾರೆ. ಇದು ಮೊದಲು ನಿಲ್ಲಬೇಕು. ಕೃಷಿ ಅಧಿಕಾರಿಗಳು ಎಲ್ಲ ಗೋದಾಮುಗಳನ್ನು ಪರಿಶೀಲನೆ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಕರವೇ ಗೋದಾಮುಗಳಿಗೆ ಮುತ್ತಿಗೆ ಹಾಕಿಲಾಗುವುದು ಎಂದು ಎಚ್ಚರಿಕೆ ನೀಡಿದರು.ಈ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಯೋಗದೊಡನೆ ಸ್ವಾತಂತ್ರೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸೋಣ ಎಂದು ತಹಶೀಲ್ದಾರ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಜರುಗಿದ ಸ್ವಾತಂತ್ರೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಾತಂತ್ರೋತ್ಸವದ ಸಂಭ್ರಮದ ಆಚರಣೆಗೆ ಎಲ್ಲ ಇಲಾಖೆ, ಸಂಘ ಸಂಸ್ಥೆಗಳ ಸಹಕಾರ ಅಗತ್ಯ ಆದ್ದರಿಂದ ಸರ್ಕಾರದ ನಿರ್ದೇಶನ ಜೊತೆಗೆ ನಿಮ್ಮ ಸಲಹೆಗಳನ್ನು ಅನುಸರಿಸಿ ಆಚರಣೆ ಮಾಡೋಣ ಎಂದರು.ಸಭೆಯಲ್ಲಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ, ಡಾ:ಆರ್.ಆರ್.ನಾಯಿಕ್, ಪ್ರಕಾಶ ಗುಡಿಮನಿ, ಕಾಶೀನಾಥ ತಳಕೇರಿ, ಸಿದ್ದು ಮೇಲಿಮನಿ, ಪ್ರಕಾಶ ಮಲ್ಲಾರಿ, ರಾಜು ಸಿಂದಗೇರಿ, ಅಜೀಜ್ ಯಲಗಾರ ಮಾತನಾಡಿದರು.ಸಭೆಯಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನ, ಶಾಲಾ ಮಕ್ಕಳಿಗೆ ಉಪಹಾರದ ವ್ಯವಸ್ಥೆ, ಕಾರ್ಯಕ್ರಮಪೂರ್ಣ ಶಾಸಕರ ಉಪಸ್ಥಿತಿ, ಸರ್ಕಾರದ ನಡಾವಳಿ ಅನುಸಾರ ವೇದಿಕೆಯಲ್ಲಿ ಗಣ್ಯರ ಹಾಜರಾತಿ ಕುರಿತು ಚರ್ಚೆಗಳಾದವು.ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಸಿಂದಗಿ ಬಿಇಓ ಎಂ.ಬಿ.ಯಡ್ರಾಮಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ, ಪಿಎಸ್ಐ ಸಚೀನ್ ಆಲಮೇಲಕರ, ಉಪತಹಶೀಲ್ದಾರ ಸುರೇಶ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಚರಂಡಿ ಕಾಮಗಾರಿ ಹಿನ್ನೆಲೆಯಲ್ಲಿ ಮಳೆ ನೀರು ಮನೆ ಬಾಗಿಲಿನವರೆಗೆ ಬಂದು ಭಯಗೊಳಿಸಿದ ಘಟನೆ ಬುಧವಾರ ದೇವೂರ ತಾಂಡಾ-೨ರಲ್ಲಿ ಜರುಗಿತು.ತಾಲ್ಲೂಕಿನ ದೇವೂರ ತಾಂಡಾ-೨ರಲ್ಲಿ ಬುಧವಾರ ಬೆಳಿಗ್ಗೆ ಸುರಿದ ಮಳೆ ಭಾರಿ ಅವಾಂತರಕ್ಕೆ ಕಾರಣವಾಯಿತು. ತಾಂಡಾದಲ್ಲಿ ಜರುಗುತ್ತಿರುವ ಚರಂಡಿ ಕಾಮಗಾರಿ ಕಾರಣದಿಂದ ಮಳೆಯ ನೀರು ಮನೆಯ ಬಾಗಿಲಿನವರೆಗೆ ನುಗ್ಗಿ ಬರಲು ಆರಂಭಿಸಿದ್ದು, ಗ್ರಾಮಸ್ಥರನ್ನು ಭಯಗೊಳಿಸಿತು. ನಂತರ ಮಳೆಯ ವೇಗ ಕಡಿಮೆಯಾಗುತ್ತಿದ್ದಂತೆಯೇ ನೀರಿನ ಹರಿಯುವಿಕೆಯು ಸಹ ಕಡಿಮೆಯಾಗಿ ನಿಟ್ಟುಸಿರು ಬಿಡುವಂತಾಯಿತು. ಅದಾಗ್ಯೂ ಮಳೆ ನೀರು ಮನೆಗಳಿಗೆ ನುಗ್ಗಿದೆ, ದಿನಬಳಕೆ ವಸ್ತುಗಳು ಹಾನಿಗೊಳಗಾಗಿವೆ ಎಂಬ ವದಂತಿ ತಾಲ್ಲೂಕು ಆಡಳಿತಕ್ಕೆ ತಲುಪಿದ ಕಾರಣ ತಹಶೀಲ್ದಾರ ಹಾಗೂ ಇಓ ಖುದ್ದಾಗಿ ತಾಂಡಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಅಧಿಕಾರಿಗಳು ಭೇಟಿ ನೀಡುತ್ತಿದ್ದಂತೆಯೇ, ಮಳೆ ನೀರು ತಾಂಡಾದಲ್ಲಿ ಮನೆ ಬಾಗಿಲಿನವರೆಗೆ ಬಂದು ಹೋಗಿದ್ದು ನಿಜ. ಆದರೆ ಮನೆಯೊಳಗೆ ನುಗ್ಗಿಲ್ಲ ಹಾಗೂ ಯಾವುದೇ ದಿನಬಳಕೆಯ ವಸ್ತುಗಳು ಹಾಳಾಗಿಲ್ಲ ಎಂದು ನಿವಾಸಿಗಳು ತಿಳಿಸಿದರು.ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಮಣೂರ ಗ್ರಾಮ ಪಂಚಾಯಿತಿ ಅಧ್ಯಕ್ಷ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎಂ.ಎ., ಬಿ.ಲಿಬ್ಎಸ್.ಸಿ, ಎಂ.ಲಿಬ್ಎಸ್.ಸಿ, ಎಂಎಸ್ಡಬ್ಲುö್ಯ, ಎಂ.ಕಾಂ, ಎಂ.ಎಸ್.ಸಿ, ಎಂಸಿಎ, ಎಂಬಿಎ ಸೇರಿದಂತೆ ವಿವಿಧ ಸ್ನಾತಕೋತ್ತರ, ಪಿಜಿ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಆಸಕ್ತ ವಿದ್ಯಾರ್ಥಿನಿಯರು ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ ೨೫ ಕೊನೆಯ ದಿನವಾಗಿದೆ.ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್www.kswu.ac.in ಅಥವಾ ಯುಯುಸಿಎಂಎಸ್ ಮೂಲಕ ಆನ್ಲೈನ್ನಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ಮುದ್ರಿತ ಪ್ರತಿಯನ್ನು ವಿಶ್ವವಿದ್ಯಾನಿಲಯದ ಆಯಾ ವಿಭಾಗಗಳ ಮುಖ್ಯಸ್ಥರ ಕಚೇರಿಗೆ ತಲುಪಿಸಬೇಕು ಎಂದು ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಹಿಳಾ ವಿಶ್ವವಿದ್ಯಾಲಯದಲ್ಲಿ ಸದ್ಯ ಈ ಕೆಳಗಿನ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದ್ದು ಆಸಕ್ತ ವಿದ್ಯಾರ್ಥಿನಿಯರು ಪ್ರವೇಶ ಪಡೆದುಕೊಳ್ಳಬಹುದು:ಲಭ್ಯವಿರುವ ಕೋರ್ಸ್ಗಳು: ಕಲಾ ನಿಕಾಯ: ಎಂ.ಎ- ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಪ್ರದರ್ಶಕ ಕಲೆಗಳ ವಿಭಾಗ (ಎಂ.ಮ್ಯೂಜಿಕ್-ಹಿಂದೂಸ್ತಾನಿ ಮ್ಯೂಜಿಕ್), ಸಮಾಜ ವಿಜ್ಞಾನ ನಿಕಾಯ: ಎಂ.ಎ.: ಸಮಾಜಶಾಸ್ತ್ರ, ರಾಜ್ಯಶಾಸ್ತ್ರ, ಅರ್ಥಶಾಸ್ತç, ಇತಿಹಾಸ, ಮಹಿಳಾ ಅಧ್ಯಯನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ. ಗ್ರ್ರಂಥಾಲಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ನಗರದ ಹೊರವಲಯದ ಬುರಣಾಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಟರ್ಮಿನಲ್ ಕಟ್ಟಡ, ಎಟಿಸಿ ಕಟ್ಟಡ, ಏಪ್ರೋನ್, ಐಸೋಲೇಶನ್ ಬೇ, ರನ್ವೇ ಮಾರ್ಗ ಹಾಗೂ ಇತರೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಅವರು ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಬಾಕಿ ಇರುವ ಅಡೆ-ತಡೆಗಳನ್ನು ನಿವಾರಿಸಿಕೊಂಡು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.ಈ ಸಂದರ್ಭದಲ್ಲಿ ಅಧಿಕಾರಿಗಳು ಮಾಹಿತಿ ನೀಡಿ, ವಿಮಾನ ನಿಲ್ದಾಣದ ಕಾರ್ಯಾಚರಣೆಗಾಗಿ ಬಾಕಿ ಇರುವ ಪರಿಸರ ನಿರಾಕ್ಷೇಪಣಾ ಪತ್ರ ಹಾಗೂ ಅಗ್ನಿಶಾಮಕ ವ್ಯವಸ್ಥೆ ಪ್ರಕ್ರಿಯೆ ಅನುಮತಿ ಬಾಕಿ ಇದ್ದು, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರವೇ ಡಿಜಿಸಿಎ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿವೀಕ್ಷಣೆ ಮಾಡಲಿದೆ ಎಂದು ಅವರು ಮಾಹಿತಿ ನೀಡಿದರು.ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಸಿ.ಎಸ್.ಪೊಲೀಸ್ಪಾಟೀಲ, ಜಲಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದ ಬಳಿಯ ಲೋಣ ಕ್ರಾಸ್ದಿಂದ ಬರಗೂಡಿ ಹೋಗುವ ಮಾರ್ಗ ಒತ್ತುವರಿ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಲಚ್ಯಾಣ ಗ್ರಾಮದ ರೈತರು ಇಂಡಿ ಪಟ್ಟಣದಲ್ಲಿನ ಮಿನಿ ವಿಧಾನ ಸೌಧದಲ್ಲಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತçದ ಅವರಿಗೆ ಮಂಗಳವಾರದಂದು ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ದಲಿತ ಮುಖಂಡ ಕಲ್ಲಪ್ಪ ದೊಡಮನಿ ಮಾತನಾಡಿ, ಲಚ್ಯಾಣ ಗ್ರಾಮದಲ್ಲಿ ದಲಿತ ಸಮಾಜದ ಹಲವು ಜನರು ಜಮೀನಿಗೆ ದಾರಿ ಇಲ್ಲದೆ ಪರದಾಡುತ್ತಿದ್ದಾರೆ. ಈ ಹಿಂದೆ ಇದ್ದ ಹಳೆಯ ಕಾಲದ ಬರಗೂಡಿ ರಸ್ತೆ ಹಲವು ವರ್ಷಗಳಿಂದ ಸಂಪೂರ್ಣ ಬಂದ್ ಆಗಿದೆ. ಇದರಿಂದ ಬಡ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ ವಿವರಿಸಿದರು.ಇನ್ನೋರ್ವ ದಲಿತ ಮುಖಂಡ ಪಂಡಿತ ಹತ್ತಳ್ಳಿ ಮಾತನಾಡಿ, ಮಳೆಗಾಲದ ಈ ಸಂದರ್ಭದಲ್ಲಿ ಮುಂಗಾರು ಬೇಸಾಯ ಮಾಡಲೆಂದು ಜಮೀನಿಗೆ ಸಾಗಲು ಮಾರ್ಗವೇ ಇಲ್ಲ. ಲೋಣ ಕ್ರಾಸ್ನಿಂದ ೧ ಕಿ.ಮೀ. ದಾರಿ ಬಂದ್ ಆಗಿದೆ. ಈ ಕುರಿತು ಕಳೆದ ೫ ವರ್ಷಗಳ ಹಿಂದೆ ತಹಶೀಲ್ದಾರರಿಗೆ ಈ ಹಿಂದಿನ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ…
ಉದಯರಶ್ಮಿ ದಿನಪತ್ರಿಕೆ ಇಂಡಿ: ‘ವಿದ್ಯಾರ್ಥಿಗಳು ಓದುವ-ಬರೆಯುವ-ಜ್ಞಾನ ಬೆಳೆಸಿಕೊಳ್ಳುವ ಜೊತೆಗೆ ಬದುಕಿಗೆ ಅಗತ್ಯವಾದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು’ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಪಟ್ಟಣದ ಅಂಜುಮನ್ ಪ್ರೌಢಶಾಲೆಯಲ್ಲಿ ಬುಧವಾರದಂದು ಸಮಾಜ ಸೇವಕ ಹಸನ ಮುಜಾವರ ಇವರ ವತಿಯಿಂದ ‘ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್, ಪೆನ್ನು ವಿತರಣೆ’ ಕಾರ್ಯಕ್ರಮದ ಉಪನ್ಯಾಸಕರಾಗಿ ಅವರು ಮಾತನಾಡಿದರು.’ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದುವ ಜೊತೆಗೆ ಗುರುಭಕ್ತಿ, ಶ್ರದ್ಧೆ, ಆಸಕ್ತಿ, ಸ್ವಯಂ ಶಿಸ್ತನ್ನು ಮೈಗೂಡಿಸಿಕೊಂಡು ಸಾಧನೆಯ ಮಾರ್ಗದಲ್ಲಿ ಸಾಗಬೇಕು. ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು’ಎಂದು ಹೇಳಿದರು.ಅಂಜುಮನ್ ಇಸ್ಲಾಂ ಕಮೀಟಿ ನಿರ್ದೇಶಕ ಹಾಗೂ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಜಾವೇದ್ ಮೊಮಿನ್ ಮಾತನಾಡಿ, ಮಕ್ಕಳಿಗೆ ಉಚಿತ ನೋಟ್ ಬುಕ್,ಪೆನ್ನುಗಳನ್ನು ವಿತರಿಸುವುದು ಸಮಾಜಮುಖಿ ಕಾರ್ಯವಾಗಿದೆ. ಹಸನ್ ಮುಜಾವರ ಅವರ ಈ ಸಮಾಜ ಸೇವೆ ನಿಜಕ್ಕೂ ಮಾದರಿಯಾಗಿದೆ. ಇಂದಿನ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಿದರೆ ಅವರು ಸುಂದರ ಬದುಕನ್ನು ಕಟ್ಟಿಕೊಳ್ಳಬಲ್ಲರು ಎಂದು ಹೇಳಿದರು.ಧರ್ಮ ಗುರು ಮುಫ್ತಿ ಅಬ್ದುಲ್ ರೆಹಮಾನ್ ಅರಬ ಸಾನಿಧ್ಯ…
